Homeಮುಖಪುಟಪೆರಿಯಾರ್ ಅಭಿಮಾನಿಗಳಿಗೆ ಪಕ್ಷದಲ್ಲಿ ಸ್ಥಾನವಿಲ್ಲ - ಎನ್‌ಟಿಕೆ ಮುಖ್ಯಸ್ಥ ಸೀಮಾನ್

ಪೆರಿಯಾರ್ ಅಭಿಮಾನಿಗಳಿಗೆ ಪಕ್ಷದಲ್ಲಿ ಸ್ಥಾನವಿಲ್ಲ – ಎನ್‌ಟಿಕೆ ಮುಖ್ಯಸ್ಥ ಸೀಮಾನ್

- Advertisement -
- Advertisement -

ನಾಮ್‌ ತಮಿಳರ್ ಕಚ್ಚಿ (ಎನ್‌ಟಿಕೆ) ಮುಖ್ಯಸ್ಥ ಸೀಮಾನ್ ಅವರು ಮತ್ತೆ ದ್ರಾವಿಡ ಚಳವಳಿ ಪಿತಾಮಹ ಪೆರಿಯಾರ್ ಇ.ವಿ. ರಾಮಸಾಮಿ ಅವರನ್ನು ಗುರಿಯಾಗಿಸಿಕೊಂಡಿದ್ದು, ಪೆರಿಯಾರ್ ಅಭಿಮಾನಿಗಳಿಗೆ ತಮ್ಮ ಪಕ್ಷದಲ್ಲಿ ಸ್ಥಾನವಿಲ್ಲ ಎಂದು ಸೋಮವಾರ ಹೇಳಿದ್ದಾರೆ.

ಪೆರಿಯಾರ್ ಅವರನ್ನು ಟೀಕಿಸುವುದನ್ನು ಮುಂದುವರಿಸುವುದಾಗಿ ಹೇಳಿರುವ ಸೀಮನ್, “ನಮಗೆ ಪೆರಿಯಾರ್ ಅಗತ್ಯವಿಲ್ಲ. ನನ್ನ ಅನುಯಾಯಿಗಳಿಗೆ ಪೆರಿಯಾರ್ ಅಗತ್ಯವಿದ್ದರೆ, ಅವರು (ಪಕ್ಷ)ದಿಂದ ಹೊರಬರಬಹುದು” ಎಂದು ಸೀಮನ್ ತಿರುಚಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರಿಗೆ ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಪೆರಿಯಾರ್ ಅವರನ್ನು ಟೀಕಿಸುವಲ್ಲಿ ಸೀಮಾನ್ ಉತ್ತುಂಗಕ್ಕೆ ಹೋಗಿದ್ದಾರೆ ಎಂಬ ಬಿಜೆಪಿ ರಾಜ್ಯಾಧ್ಯಕ್ಷ ಕೆ. ಅಣ್ಣಾಮಲೈ ಅವರ ಹೇಳಿಕೆಗೆ ಪ್ರತಿಕ್ರಿಯಿಸಿದ ಸೀಮಾನ್, “ಆರಂಭಿಕ ಹಂತದಲ್ಲೇ, ನಾನು ಪೆರಿಯಾರ್ ಅವರನ್ನು ಟೀಕಿಸುವಲ್ಲಿ ಉತ್ತುಂಗದಲ್ಲಿದ್ದೇನೆ” ಎಂದು ಸೀಮನ್ ಹೇಳಿದ್ದಾರೆ. ಪೆರಿಯಾರ್ ಅಭಿಮಾನಿಗಳಿಗೆ

ಈರೋಡ್ (ಪೂರ್ವ) ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಫಲಿತಾಂಶದ ಕುರಿತು ಮಾತನಾಡಿದ ಸೀಮಾನ್, ಡಿಎಂಕೆಯ ಹಣ ಬಲ ಮತ್ತು ಚುನಾವಣಾ ಅಕ್ರಮದ ಮೂಲಕ ಗೆಲುವು ಸಾಧಿಸಿದೆ ಎಂದು ಆರೋಪಿಸಿದ್ದಾರೆ. ಉಪಚುನಾವಣೆಯಲ್ಲಿ ಎನ್‌ಟಿಕೆ ಅಭ್ಯರ್ಥಿಯ ಸೋಲು ತಮ್ಮ ಪಕ್ಷದ ಉತ್ಸಾಹವನ್ನು ಕುಗ್ಗಿಸಿಲ್ಲ ಎಂದು ಅವರು ಹೇಳಿದ್ದಾರೆ.

“ನಾನು ಒಬ್ಬ ಯೋಧ. ನನ್ನ ಪಕ್ಷ ಏಕಾಂಗಿ ಹೋರಾಟ ನಡೆಸಿತು. ನಮ್ಮ ಅಭ್ಯರ್ಥಿ ಸುಮಾರು 25,000 ಮತಗಳನ್ನು ಪಡೆದಿದ್ದಾರೆ. ಈ ಸಂಖ್ಯೆಯ ಬದಲಾವಣೆಯನ್ನು ಬಯಸುವ ಜನರು ಇನ್ನೂ ಇದ್ದಾರೆ ಎಂಬುದನ್ನು ಸೂಚಿಸುತ್ತದೆ. ಈ ಎಲ್ಲಾ ಮತದಾರರು ಹಣ ಬಲ ಸೇರಿದಂತೆ ಯಾವುದೇ ಇತರ ಆಮಿಷಗಳಿಗೆ ಪ್ರಭಾವಿತರಾಗಿಲ್ಲ ಹೇಳಿದ್ದಾರೆ” ಎಂದು ಸೀಮಾನ್ ಹೇಳಿದ್ದಾರೆ.

“ನಮ್ಮ ಮತಗಳು ಬಿಜೆಪಿ ಬೆಂಬಲಿಗರದ್ದಲ್ಲ. ಅವು ಪ್ರಾಮಾಣಿಕ ಆಡಳಿತಕ್ಕೆ ಸಿಕ್ಕ ಮತಗಳಾಗಿದ್ದವು. ಪಡೆದ ಮತಗಳ ಬಗ್ಗೆ ನಮಗೆ ಹೆಮ್ಮೆ ಇದೆ ಮತ್ತು ಅವು 2026 ರಲ್ಲಿ ನಮಗೆ ಹೆಚ್ಚಿನ ಭರವಸೆಯನ್ನು ನೀಡುತ್ತವೆ” ಎಂದು ಸೀಮಾನ್ ಪ್ರತಿಪಾದಿಸಿದ್ದಾರೆ.

ಇದನ್ನೂಓದಿ:  ಟಿವಿ ಕಾರ್ಯಕ್ರಮದಲ್ಲಿ ಮಣಿಪುರ ರಾಜಕೀಯದ ಬಗ್ಗೆ ಮಾತನಾಡಿದ್ದ ಹಿರಿಯ ಪತ್ರಕರ್ತನ ಅಪಹರಣ

ಟಿವಿ ಕಾರ್ಯಕ್ರಮದಲ್ಲಿ ಮಣಿಪುರ ರಾಜಕೀಯದ ಬಗ್ಗೆ ಮಾತನಾಡಿದ್ದ ಹಿರಿಯ ಪತ್ರಕರ್ತನ ಅಪಹರಣ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...