Homeಮುಖಪುಟಪೆರಿಯಾರ್ ಅಭಿಮಾನಿಗಳಿಗೆ ಪಕ್ಷದಲ್ಲಿ ಸ್ಥಾನವಿಲ್ಲ - ಎನ್‌ಟಿಕೆ ಮುಖ್ಯಸ್ಥ ಸೀಮಾನ್

ಪೆರಿಯಾರ್ ಅಭಿಮಾನಿಗಳಿಗೆ ಪಕ್ಷದಲ್ಲಿ ಸ್ಥಾನವಿಲ್ಲ – ಎನ್‌ಟಿಕೆ ಮುಖ್ಯಸ್ಥ ಸೀಮಾನ್

- Advertisement -
- Advertisement -

ನಾಮ್‌ ತಮಿಳರ್ ಕಚ್ಚಿ (ಎನ್‌ಟಿಕೆ) ಮುಖ್ಯಸ್ಥ ಸೀಮಾನ್ ಅವರು ಮತ್ತೆ ದ್ರಾವಿಡ ಚಳವಳಿ ಪಿತಾಮಹ ಪೆರಿಯಾರ್ ಇ.ವಿ. ರಾಮಸಾಮಿ ಅವರನ್ನು ಗುರಿಯಾಗಿಸಿಕೊಂಡಿದ್ದು, ಪೆರಿಯಾರ್ ಅಭಿಮಾನಿಗಳಿಗೆ ತಮ್ಮ ಪಕ್ಷದಲ್ಲಿ ಸ್ಥಾನವಿಲ್ಲ ಎಂದು ಸೋಮವಾರ ಹೇಳಿದ್ದಾರೆ.

ಪೆರಿಯಾರ್ ಅವರನ್ನು ಟೀಕಿಸುವುದನ್ನು ಮುಂದುವರಿಸುವುದಾಗಿ ಹೇಳಿರುವ ಸೀಮನ್, “ನಮಗೆ ಪೆರಿಯಾರ್ ಅಗತ್ಯವಿಲ್ಲ. ನನ್ನ ಅನುಯಾಯಿಗಳಿಗೆ ಪೆರಿಯಾರ್ ಅಗತ್ಯವಿದ್ದರೆ, ಅವರು (ಪಕ್ಷ)ದಿಂದ ಹೊರಬರಬಹುದು” ಎಂದು ಸೀಮನ್ ತಿರುಚಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರಿಗೆ ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಪೆರಿಯಾರ್ ಅವರನ್ನು ಟೀಕಿಸುವಲ್ಲಿ ಸೀಮಾನ್ ಉತ್ತುಂಗಕ್ಕೆ ಹೋಗಿದ್ದಾರೆ ಎಂಬ ಬಿಜೆಪಿ ರಾಜ್ಯಾಧ್ಯಕ್ಷ ಕೆ. ಅಣ್ಣಾಮಲೈ ಅವರ ಹೇಳಿಕೆಗೆ ಪ್ರತಿಕ್ರಿಯಿಸಿದ ಸೀಮಾನ್, “ಆರಂಭಿಕ ಹಂತದಲ್ಲೇ, ನಾನು ಪೆರಿಯಾರ್ ಅವರನ್ನು ಟೀಕಿಸುವಲ್ಲಿ ಉತ್ತುಂಗದಲ್ಲಿದ್ದೇನೆ” ಎಂದು ಸೀಮನ್ ಹೇಳಿದ್ದಾರೆ. ಪೆರಿಯಾರ್ ಅಭಿಮಾನಿಗಳಿಗೆ

ಈರೋಡ್ (ಪೂರ್ವ) ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಫಲಿತಾಂಶದ ಕುರಿತು ಮಾತನಾಡಿದ ಸೀಮಾನ್, ಡಿಎಂಕೆಯ ಹಣ ಬಲ ಮತ್ತು ಚುನಾವಣಾ ಅಕ್ರಮದ ಮೂಲಕ ಗೆಲುವು ಸಾಧಿಸಿದೆ ಎಂದು ಆರೋಪಿಸಿದ್ದಾರೆ. ಉಪಚುನಾವಣೆಯಲ್ಲಿ ಎನ್‌ಟಿಕೆ ಅಭ್ಯರ್ಥಿಯ ಸೋಲು ತಮ್ಮ ಪಕ್ಷದ ಉತ್ಸಾಹವನ್ನು ಕುಗ್ಗಿಸಿಲ್ಲ ಎಂದು ಅವರು ಹೇಳಿದ್ದಾರೆ.

“ನಾನು ಒಬ್ಬ ಯೋಧ. ನನ್ನ ಪಕ್ಷ ಏಕಾಂಗಿ ಹೋರಾಟ ನಡೆಸಿತು. ನಮ್ಮ ಅಭ್ಯರ್ಥಿ ಸುಮಾರು 25,000 ಮತಗಳನ್ನು ಪಡೆದಿದ್ದಾರೆ. ಈ ಸಂಖ್ಯೆಯ ಬದಲಾವಣೆಯನ್ನು ಬಯಸುವ ಜನರು ಇನ್ನೂ ಇದ್ದಾರೆ ಎಂಬುದನ್ನು ಸೂಚಿಸುತ್ತದೆ. ಈ ಎಲ್ಲಾ ಮತದಾರರು ಹಣ ಬಲ ಸೇರಿದಂತೆ ಯಾವುದೇ ಇತರ ಆಮಿಷಗಳಿಗೆ ಪ್ರಭಾವಿತರಾಗಿಲ್ಲ ಹೇಳಿದ್ದಾರೆ” ಎಂದು ಸೀಮಾನ್ ಹೇಳಿದ್ದಾರೆ.

“ನಮ್ಮ ಮತಗಳು ಬಿಜೆಪಿ ಬೆಂಬಲಿಗರದ್ದಲ್ಲ. ಅವು ಪ್ರಾಮಾಣಿಕ ಆಡಳಿತಕ್ಕೆ ಸಿಕ್ಕ ಮತಗಳಾಗಿದ್ದವು. ಪಡೆದ ಮತಗಳ ಬಗ್ಗೆ ನಮಗೆ ಹೆಮ್ಮೆ ಇದೆ ಮತ್ತು ಅವು 2026 ರಲ್ಲಿ ನಮಗೆ ಹೆಚ್ಚಿನ ಭರವಸೆಯನ್ನು ನೀಡುತ್ತವೆ” ಎಂದು ಸೀಮಾನ್ ಪ್ರತಿಪಾದಿಸಿದ್ದಾರೆ.

ಇದನ್ನೂಓದಿ:  ಟಿವಿ ಕಾರ್ಯಕ್ರಮದಲ್ಲಿ ಮಣಿಪುರ ರಾಜಕೀಯದ ಬಗ್ಗೆ ಮಾತನಾಡಿದ್ದ ಹಿರಿಯ ಪತ್ರಕರ್ತನ ಅಪಹರಣ

ಟಿವಿ ಕಾರ್ಯಕ್ರಮದಲ್ಲಿ ಮಣಿಪುರ ರಾಜಕೀಯದ ಬಗ್ಗೆ ಮಾತನಾಡಿದ್ದ ಹಿರಿಯ ಪತ್ರಕರ್ತನ ಅಪಹರಣ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...