Homeಕರ್ನಾಟಕಬೆಂಗಳೂರು: ರಂಗ ಶಂಕರದಲ್ಲಿ ಪ್ಯಾಲೇಸ್ತೀನ್ ಪರ ಕಾರ್ಯಕ್ರಮಕ್ಕೆ ಅನುಮತಿ ನಿರಾಕರಣೆ

ಬೆಂಗಳೂರು: ರಂಗ ಶಂಕರದಲ್ಲಿ ಪ್ಯಾಲೇಸ್ತೀನ್ ಪರ ಕಾರ್ಯಕ್ರಮಕ್ಕೆ ಅನುಮತಿ ನಿರಾಕರಣೆ

- Advertisement -
- Advertisement -

ಇಸ್ರೇಲ್ ದಾಳಿಯಿಂದ ಪ್ಯಾಲೇಸ್ತೀನ್‌ನಲ್ಲಿ ಉಂಟಾಗಿರುವ ಮಾನವೀಯ ಬಿಕ್ಕಟ್ಟಿನ ಕುರಿತು ಬೆಂಗಳೂರಿನ ರಂಗಶಂಕರದಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮಕ್ಕೆ ಪೊಲೀಸರು ಅನುಮತಿ ನಿರಾಕರಿಸಿದ್ದಾರೆ ಎಂಬ ಮಾಹಿತಿ ದೊರೆತಿದೆ.

ಇಂದು (ನ.29) ಸಂಜೆ 5:30ಕ್ಕೆ ಕಾವ್ಯಗೋಷ್ಠಿ, ಕಿರು ನಾಟಕ ಸೇರಿದಂತೆ ಪ್ಯಾಲೇಸ್ತೀನ್‌ನಲ್ಲಿ ನಡೆಯುತ್ತಿರುವ ಮಾರಣಹೋಮ ಖಂಡಿಸಿ ಕಾರ್ಯಕ್ರಮಗಳನ್ನು ಆಯೋಜಿಸಲಾಗಿತ್ತು. ಕಲಾವಿದರಾದ ಎಂ.ಡಿ ಪಲ್ಲವಿ, ಶ್ವೇತಾಂಶು ಬೋರ, ರಮಣೀಕ್ ಸಿಂಗ್ ಇದರ ನೇತೃತ್ವ ವಹಿಸಿದ್ದರು.

ಕಾರ್ಯಕ್ರಮ ರದ್ದಾಗಿರುವ ಕುರಿತು ಫೇಸ್‌ಬುಕ್‌ನಲ್ಲಿ ಪೋಸ್ಟರ್‌ ಹಂಚಿಕೊಂಡಿರುವ ಗಾಯಕಿ ಎಂ.ಡಿ ಪಲ್ಲವಿ, “ಕಾರ್ಯಕ್ರಮ ರದ್ದಾಗಿದೆ. ಪೊಲೀಸರು ಅನುಮತಿ ನಿರಾಕರಿಸಿದ್ದಾರೆ” ಎಂದು ತಿಳಿಸಿದ್ದಾರೆ.

“ಖ್ಯಾತ ರಂಗಭೂಮಿ ಕಲಾವಿದರಾದ ಪಲ್ಲವಿ ಎಂ.ಡಿ ಮತ್ತು ಶ್ವೇತಾಂಶು ಬೋರಾ ಜೊತೆ ನಾವು ಕವಿತೆಗಳನ್ನು ಓದಲು ನಿರ್ಧರಿಸಿದ್ದೆವು. ಈ ಕಾರ್ಯಕ್ರಮವನ್ನು ರದ್ದುಗೊಳಿಸುವಂತೆ ರಂಗಶಂಕರದಂತಹ ಸಂಸ್ಥೆಯನ್ನು ಬೆದರಿಸುವ ಮೂಲಕ ಕರ್ನಾಟಕದ ಕಾಂಗ್ರೆಸ್ ಸರ್ಕಾರವು ಪ್ರಜಾಪ್ರಭುತ್ವದ ಮೇಲಿನ ತನ್ನ ಬದ್ಧತೆ ಕೊರತೆಯನ್ನು ಮತ್ತೊಮ್ಮೆ ತೋರಿಸಿದೆ” ಎಂದು ಕಲಾವಿದ ರಮಣೀಕ್ ಸಿಂಗ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

“ಪ್ಯಾಲೇಸ್ತೀನ್ ಜೊತೆ ಒಗ್ಗಟ್ಟು ಪ್ರದರ್ಶಿಸಿ ಒಂದು ಸಣ್ಣ ನಾಟಕ ಮಾಡಲು ಮತ್ತು ಕವನ ವಾಚಿಸಲು ನಾವು ನಿರ್ಧಿಸಿದ್ದೆವು. ನಮ್ಮದು ಒಳಾಂಗಣ ಕಾರ್ಯಕ್ರಮವಾಗಿದೆ. ಇದಕ್ಕೆ ಪೊಲೀಸರ ಅನುಮತಿ ಪಡೆಯುವ ಅಗತ್ಯ ಇಲ್ಲ. ಆದರೂ, ಪೊಲೀಸರು ನಮ್ಮ ಕಾರ್ಯಕ್ರಮದ ಸಂಪೂರ್ಣ ಮಾಹಿತಿ, ಕಲಾವಿದರ ವಿವರಗಳು ಮತ್ತು ಆಧಾರ್ ಕಾರ್ಡ್ ಪ್ರತಿಗಳನ್ನು ಕೇಳಿದ್ದರು. ನಾವು ಆಧಾರ್ ಕಾರ್ಡ್ ಪ್ರತಿಗಳನ್ನು ಹೊರತುಪಡಿಸಿ ಉಳಿದೆಲ್ಲವನ್ನೂ ಒದಗಿಸಿದ್ದೇವೆ. ಆದರೆ, ಅವರು ರಂಗಶಂಕರದ ಮೇಲೆ ಒತ್ತಡ ಹೇರಿದ್ದಾರೆ. ಪರಿಣಾಮ ಕೊನೆ ಗಳಿಗೆಯಲ್ಲಿ ಕಾರ್ಯಕ್ರಮ ರದ್ದುಗೊಳಿಸಲಾಗಿದೆ” ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

“ಪೊಲೀಸರು ಒತ್ತಡ ಹೇರಿದ ಕಾರಣ ಕಾರ್ಯಕ್ರಮ ರದ್ದಾಗಿದೆ. ಆದರೆ, ಒಂದಂತು ತಿಳಿದುಕೊಳ್ಳಿ, ಇದು ಒಳಾಂಗಣ ಕಾರ್ಯಕ್ರಮ ಪೊಲೀಸರ ಅನುಮತಿ ಅಗತ್ಯವಿಲ್ಲ. ಬೆಂಗಳೂರು ಪೊಲೀಸರು ಮತ್ತು ಕರ್ನಾಟಕ ಸರ್ಕಾರಕ್ಕೆ ನಾಚಿಕೆಯಾಗಬೇಕು. ದಯವಿಟ್ಟು ಇದನ್ನು ವ್ಯಾಪಕವಾಗಿ ಪ್ರಚಾರ ಮಾಡಿ. ಪ್ರೇಕ್ಷಕರನ್ನು ಸೇರಿಸಲು ನಮಗೆ ಸಹಾಯ ಮಾಡಿ. ನಾವು ಪ್ಯಾಲೇಸ್ತೀನ್ ಬಗ್ಗೆ ಕವನ ಓದುತ್ತೇವೆ. ಕಿರು ನಾಟಕ ಪ್ರದರ್ಶನ ಮಾಡುತ್ತೇವೆ” ಎಂದು ರಮಣೀಕ್ ಸಿಂಗ್ ಫೇಸ್‌ಬುಕ್‌ನಲ್ಲಿ ಬರೆದುಕೊಂಡಿದ್ದಾರೆ.

 

ನಾನು ಗೌರಿ ಜೊತೆ ದೂರವಾಣಿ ಮೂಲಕ ಮಾತನಾಡಿರುವ ಎಂ.ಡಿ ಪಲ್ಲವಿ, “ರಂಗಶಂಕರದವರು ಕಾರ್ಯಕ್ರಮ ರದ್ದುಗೊಳಿಸುವಂತೆ ಹೇಳಿದ್ದಾರೆ. ಪೊಲೀಸರು ಇಂತಹ ಕಾರ್ಯಕ್ರಮಗಳಿಗೆ ಅನುಮತಿ ಇಲ್ಲ ಎಂದು ಅವರಿಗೆ ತಿಳಿಸಿದ್ದಾರಂತೆ. ನಮನ್ನು ನೇರವಾಗಿ ಪೊಲೀಸರು ಸಂಪರ್ಕಿಸಿಲ್ಲ ಎಂದಿದ್ದಾರೆ. ಮುಂದಿನ ನಿರ್ಧಾರದ ಕುರಿತು ಅವರು ಮಾಹಿತಿ ನೀಡಿಲ್ಲ.

ರಂಗಶಂಕರದ ಕಡೆಯಿಂದ ಮಾಹಿತಿ ಪಡೆಯಲು ನಾನು ಗೌರಿ ಪ್ರಯತ್ನಿಸಿದರೂ, ಸಂಬಂಧಪಟ್ಟವರು ಕರೆ ಸ್ವೀಕರಿಸಿಲ್ಲ.

ಇದನ್ನೂ ಓದಿ : ಗೋವಾ ಚಲನಚಿತ್ರೋತ್ಸವದಲ್ಲಿ ‘ದಿ ಕೇರಳ ಸ್ಟೋರಿ’ ಪ್ರದರ್ಶನ: ಪ್ರತಿಭಟಿಸಿದ ಇಬ್ಬರು ವಶಕ್ಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜನರ ಆತಂಕಗಳಿಗೆ ಧ್ವನಿಯಾಗಲು CJP ಸಿದ್ಧತೆ: ಮಹಾರಾಷ್ಟ್ರದಲ್ಲಿ ಅಭಿಜೀತ್ ದೀಪ್ಕೆ ನೇತೃತ್ವದಲ್ಲಿ ಉನ್ನತ ಮಟ್ಟದ ಸಭೆ

ಕಾಕ್ರೋಚ್ ಜನತಾ ಪಾರ್ಟಿ (CJP) ಸದ್ಯಕ್ಕೆ ಒತ್ತಡದ ಗುಂಪಾಗಿ ಕೆಲಸ ಮಾಡಲಿದ್ದು, ಪ್ರಸಕ್ತ ಭಾರತಕ್ಕೆ ಬೇಕಾಗಿರುವುದು ಕೂಡ ಅದೇ ಆಗಿದೆ ಎಂದು ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ ಬುಧವಾರ ಸ್ಪಷ್ಟಪಡಿಸಿದ್ದಾರೆ. ಮಹಾರಾಷ್ಟ್ರದ ಛತ್ರಪತಿ ಸಂಭಾಜಿನಗರದಲ್ಲಿ...

ರಾಯಚೂರು: ದಲಿತ ಮುಖಂಡ ಭೂಮಾನಂದ ಬರ್ಬರ ಹತ್ಯೆ; ಆಲ್ ಇಂಡಿಯಾ ಬಿಎಸ್‌ಪಿ ಹಾಗೂ ಜನಪರ ಸಂಘಟನೆಗಳ ತೀವ್ರ ಆಕ್ರೋಶ 

ರಾಯಚೂರು ಜಿಲ್ಲೆಯಲ್ಲಿ ದಲಿತ ಯುವ ನಾಯಕನೊಬ್ಬನ ಭೀಕರ ಕೊಲೆ ಪ್ರಕರಣ ವರದಿಯಾಗಿದ್ದು, ಇಡೀ ಜಿಲ್ಲೆಯಲ್ಲಿ ತೀವ್ರ ಆತಂಕ, ಕಾವು ಮತ್ತು ಆಕ್ರೋಶದ ವಾತಾವರಣ ನಿರ್ಮಾಣವಾಗಿದೆ. ದೇವದುರ್ಗ ತಾಲೂಕಿನ ಹದ್ದಿನಾಳ ಗ್ರಾಮದ ನಿವಾಸಿ, ಮಾದಿಗ...

ತಮಿಳುನಾಡು: ಹಿಂದೂ ‘ಮೇಲ್ಜಾತಿ’ ವ್ಯಕ್ತಿಯ ಜಮೀನಿನಲ್ಲಿ ಕುದುರೆ ಮೇಯಿಸುತ್ತಿದ್ದ ಎಂಬ ಕಾರಣಕ್ಕೆ 26 ವರ್ಷದ ದಲಿತ ವ್ಯಕ್ತಿಯ ಬರ್ಬರ ಹತ್ಯೆ 

ತಮಿಳುನಾಡಿನ ದಿಂಡಿಗಲ್ ಜಿಲ್ಲೆಯಲ್ಲಿ ಜಾತಿ ಗರ್ವದ ಬಲಿಪೀಠಕ್ಕೆ 26 ವರ್ಷದ ದಲಿತ ಯುವಕನೊಬ್ಬ ಬಲಿಯಾಗಿರುವ ಕ್ರೂರ ಘಟನೆ ವರದಿಯಾಗಿದೆ. ‘ಮೇಲ್ಜಾತಿ’ ಪ್ರಬಲ ಸಮುದಾಯಕ್ಕೆ ಸೇರಿದ ವ್ಯಕ್ತಿಯೊಬ್ಬನ ಜಮೀನಿನಲ್ಲಿ ಕುದುರೆ ಮೇಯುತ್ತಿತ್ತು ಎಂಬ ಕ್ಷುಲ್ಲಕ...

ಹಸು ಕೇವಲ ಉಪಯುಕ್ತ ಪ್ರಾಣಿ, ದೇವತೆಯಲ್ಲ ಎಂದಿದ್ದ ಸಾವರ್ಕರ್, ಕೋರ್ಟ್‌ನಲ್ಲಿ ಸಾವರ್ಕರ್ ಮೊಮ್ಮಗನ ಮಹತ್ವದ ಹೇಳಿಕೆ

ವಿನಾಯಕ ದಾಮೋದರ ಸಾವರ್ಕರ್ ಅವರು ಗೋಪೂಜೆಯನ್ನು ಸ್ಪಷ್ಟವಾಗಿ ವಿರೋಧಿಸಿದ್ದರು ಮತ್ತು ಹಸುವನ್ನು ಕೇವಲ ಒಂದು ಉಪಯುಕ್ತ ಪ್ರಾಣಿಯನ್ನಾಗಿಷ್ಟೇ ಪರಿಗಣಿಸುತ್ತಿದ್ದರು" ಎಂದು ಅವರ ಮೊಮ್ಮಗ ಸತ್ಯಕಿ ಸಾವರ್ಕರ್ ಪುಣೆಯ ವಿಶೇಷ ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ಹೇಳಿಕೆ...

ಯಾದಗಿರಿ: ಫಾರ್ಮಾ ಘಟಕದಲ್ಲಿ ವಿಷಾನಿಲ ಸೋರಿಕೆ, ಮೂವರು ಕಾರ್ಮಿಕರ ದಾರುಣ ಸಾವು, FIR ದಾಖಲು

ಜಿಲ್ಲೆಯ ಸೈದಾಪುರ ಪೊಲೀಸ್ ಠಾಣೆ ವ್ಯಾಪ್ತಿಯ ಕಡೇಚೂರು–ಬಾಡಿಯಾಳ ಕೈಗಾರಿಕಾ ಪ್ರದೇಶದಲ್ಲಿರುವ 'ಸಿಲ್ ಲ್ಯಾಬೊರೇಟರೀಸ್ ಪ್ರೈವೇಟ್ ಲಿಮಿಟೆಡ್' (Sil Laboratories Pvt Ltd) ಔಷಧಿ ತಯಾರಿಕಾ ಘಟಕದಲ್ಲಿ ಬುಧವಾರ ಮುಂಜಾನೆ ಸಂಭವಿಸಿದ ಭೀಕರ ರಾಸಾಯನಿಕ...

‘ಮದ್ರಸಾಗಳು ಭಯೋತ್ಪಾದನೆಯನ್ನು ಉತ್ಪಾದಿಸುತ್ತವೆ’: ಯುಪಿ ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ದ್ವೇಷ ಭಾಷಣಕ್ಕೆ ವ್ಯಾಪಕ ಆಕ್ರೋಶ

‘ಮದ್ರಸಾಗಳು ಭಯೋತ್ಪಾದನೆಯನ್ನು ಉತ್ಪಾದಿಸುತ್ತವೆ’ ಎಂಬ ಉತ್ತರ ಪ್ರದೇಶದ ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ಅವರ ಹೇಳಿಕೆಯು ತೀವ್ರ ಸ್ವರೂಪದ ವಿವಾದಕ್ಕೆ ಕಾರಣವಾಗಿದೆ. ಧಾರ್ಮಿಕ ಅಲ್ಪಸಂಖ್ಯಾತರ ಶಿಕ್ಷಣ ಸಂಸ್ಥೆಗಳನ್ನು ಗುರಿಯಾಗಿಸಿಕೊಂಡು ನೀಡಿರುವ ಈ ಹೇಳಿಕೆಯು...

ತಪ್ಪಾಗಿ ಸುದ್ದಿ ಪ್ರಕಟ : ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರಲ್ಲಿ ಕ್ಷಮೆಯಾಚಿಸಿದ PTI

ತಮ್ಮ ಹೇಳಿಕೆಯನ್ನು ತಪ್ಪಾಗಿ ಪ್ರಸಾರ ಮಾಡಿದ್ದ ಪ್ರೆಸ್ ಟ್ರಸ್ಟ್ ಆಫ್ ಇಂಡಿಯಾ (PTI) ಅಧಿಕೃತವಾಗಿ ಕ್ಷಮೆಯಾಚಿಸಿದರೂ, ಅದರಿಂದ ಈಗಾಗಲೇ ಉಂಟಾಗಿರುವ ಹಾನಿ ಸರಿಪಡಿಸಲು ಸಾಧ್ಯವಿಲ್ಲ ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ. ಆ....

‘ನುಡಿಯು ಸಿರಿಯಲ್ಲ ಬದುಕು’ ಕರಾವಳಿಯಲ್ಲಿ ಮತ್ತೆ ಪ್ರತಿರೋಧದ ಧ್ವನಿ: ನವೆಂಬರ್ 28-29ಕ್ಕೆ ‘ಜನನುಡಿ-2026’

"ನವೆಂಬರ್ ಕೊನೆಯ ಶನಿವಾರ ಮತ್ತು ಭಾನುವಾರ ಮಂಗಳೂರಿನಲ್ಲಿ ಕೇವಲ ವಿಚಾರ ಸಂಕಿರಣ ಮಾತ್ರವಲ್ಲ, ಹರಟೆ, ಚರ್ಚೆ, ಸೌಹಾರ್ದತೆಯ ಮೀನೂಟ ಹಾಗೂ ಪ್ರೀತಿಯೊಂದಿಗೆ ಸಂವಿಧಾನಿಕ ಮೌಲ್ಯಗಳನ್ನು ಎತ್ತಿಹಿಡಿಯುವ ಹೊಸ ಬೆಳಕನ್ನು ಕಂಡುಕೊಳ್ಳಲಿದ್ದೇವೆ," ಎಂದು 'ಅಭಿಮತ...

‘ಟ್ರಂಪ್’ ಗಾಗಿ ಭಾರತದ ಹಿತವನ್ನು ಬಲಿ ಕೊಟ್ಟ ಕೇಂದ್ರ: E20 ಎಥೆನಾಲ್ ನೀತಿ ಹಿಂಪಡೆಯಲು ಕೇಜ್ರಿವಾಲ್ ಪಟ್ಟು

ವಾಹನಗಳ ಎಂಜಿನ್‌ಗೆ ಹಾನಿಯುಂಟುಮಾಡುತ್ತಿದೆ ಎಂದು ಆರೋಪಿಸಲಾದ ಇ20 (E20) ಎಥೆನಾಲ್ ಮಿಶ್ರಿತ ಪೆಟ್ರೋಲ್ ನೀತಿಯನ್ನು ಹಿಂಪಡೆಯುವಂತೆ ಆಗ್ರಹಿಸಿ, ದೇಶಾದ್ಯಂತ ಸಂಗ್ರಹಿಸಲಾಗಿದ್ದ 2.30 ಲಕ್ಷಕ್ಕೂ ಅಧಿಕ ಸಾರ್ವಜನಿಕ ಸಹಿಗಳ ಮನವಿ ಪತ್ರದೊಂದಿಗೆ ಪ್ರಧಾನಿ ನರೇಂದ್ರ...

ಗಾಝಾ | ಇಸ್ರೇಲ್ ನರಮೇಧಕ್ಕೆ ಬಲಿಯಾದ ಎರಡು ಕುಟುಂಬಗಳ 112 ಸದಸ್ಯರ ಸಾಮೂಹಿಕ ಅಂತ್ಯಸಂಸ್ಕಾರ: ಸಾವಿರಾರು ಜನರಿಂದ ಕಣ್ಣೀರ ವಿದಾಯ

ಇಸ್ರೇಲ್ ಬಾಂಬ್ ದಾಳಿಯಿಂದ ಧ್ವಂಸಗೊಂಡಿದ್ದ ಮನೆಗಳ ಅವಶೇಷಗಳ ಅಡಿಯಲ್ಲಿ ಇತ್ತೀಚೆಗೆ ಪತ್ತೆಯಾದ ಗಾಝಾದ ಹಸಾಯ್ನ ಮತ್ತು ಅಬು ಶರಿಯಾ ಕುಟುಂಬಗಳ 112 ಸದಸ್ಯರ ಮೃತದೇಹಗಳ ಅಂತ್ಯ ಸಂಸ್ಕಾರ ಮಂಗಳವಾರ (ಆ.4) ನಡೆಯಿತು. ಸಾವಿರಾರು...