ಬಿಜೆಪಿಯ ಮಾಜಿ ಸಚಿವ ಚಿನ್ಮಯಾನಂದ್ ಮೇಲೆ ಅತ್ಯಾಚಾರ ಆರೋಪದ ಕಾರಣಕ್ಕಾಗಿ ಜೈಲಿನಲ್ಲಿರುವ ಕಾನೂನು ವಿದ್ಯಾರ್ಥಿಯನ್ನು ಬೆಂಬಲಿಸಿ ಮೆರವಣಿಗೆ ನಡೆಸಲು ಕಾಂಗ್ರೆಸ್ ಮುಖಂಡರಿಗೆ ಇಂದು ಅನುಮತಿ ನಿರಾಕರಿಸಲಾಗಿದೆ. ಕಾಂಗ್ರೆಸ್ ನಾಯಕರು ವಿದ್ಯಾರ್ಥಿನಿಗೆ ಬೆಂಬಲ ಸೂಚಿಸಿ ಒಗ್ಗಟ್ಟಿನಿಂದ ಶಹಜಹಾನ್ಪುರದಿಂದ ಲಕ್ನೋಗೆ ಮೆರವಣಿಗೆ ನಡೆಸಲು ಉದ್ದೇಶಿಸಿದ್ದರು.
ಪ್ರತಿಭಟನಾ ಮೆರೆವಣಿಗೆ ನಡೆಸಲು ಮುಂದಾದ ಕಾಂಗ್ರೆಸ್ ಪಕ್ಷದ ಮುಖಂಡ ಜಿತಿನ್ ಪ್ರಸಾದ್ ಅವರನ್ನು ಗೃಹಬಂಧನದಲ್ಲಿರಿಸಲಾಗಿದ್ದು, ಇತರ ಮೂವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಚಿನ್ಮಯಾನಂದ್ ಅವರ ಸಹಾಯಕರು ಸಲ್ಲಿಸಿದ ಸುಲಿಗೆ ಪ್ರಕರಣದಲ್ಲಿ 23 ವರ್ಷದ ವಿದ್ಯಾರ್ಥಿಯನ್ನು ಪೊಲೀಸರು ಕಳೆದ ವಾರ ಬಂಧಿಸಿದ್ದರು. ಆಕೆಯು ಚಪ್ಪಲಿ ಕೂಡ ಹಾಕಿಕೊಳ್ಳಲು ಬಿಡದೆ ಪೊಲೀಸರು ಆಕೆಯನ್ನು ತಮ್ಮ ಮನೆಯಿಂದ ಎಳೆದುಕೊಂಡು ಹೋಗಿದ್ದಾರೆ ಎಂದು ಆಕೆಯ ಕುಟುಂಬ ಆರೋಪಿಸಿದೆ. ಸಂತ್ರಸ್ತ ವಿದ್ಯಾರ್ಥಿನಿಯು ಕಳೆದ ನಾಲ್ಕು ದಿನಗಳಿಂದ ಜೈಲಿನಲ್ಲಿದ್ದಾಳೆ.
ಕಳೆದ ತಿಂಗಳು ತನ್ನ ಮೇಲಿನ ಅತ್ಯಾಚಾರದ ದೂರು ದಾಖಲಿಸಲು ಪೊಲೀಸರು ನಿರಾಕರಿಸಿದ್ದರು, ನಂತರ ದೆಹಲಿಯಲ್ಲಿ ಪ್ರಕರಣ ದಾಖಲಿಸಿದೆ. “ಅಧಿಕಾರವನ್ನು ದುರುಪಯೋಗಪಡಿಸಿಕೊಂಡು ನನ್ನ ಮೇಲೆ ದೌರ್ಜನ್ಯ ನಡೆಸಲಾಗಿದೆ” ಎಂದು ಸಂತ್ರಸ್ತೆಯು ಚಿನ್ಮಯಾನಂದ್ ವಿರುದ್ಧ ಆರೋಪ ಹೊರಿಸಿದ್ದರು. ಮತ್ತೊಂದೆಡೆ, ಆಕೆಯ ಮೇಲೆ ರೂ. ಚಿನ್ಮಯಾನಂದರಿಂದ 5 ಕೋಟಿ ರೂ ಸುಲಿಗೆ ಮಾಡಿದ ಆರೋಪವನ್ನು ಹೊರಿಸಲಾಯಿತು.
ಸದ್ಯಕ್ಕೆ ಚಿನ್ಮಯಾನಂದ್ ಆಸ್ಪತ್ರೆಯಲ್ಲಿದ್ದರೆ ಸಂತ್ರಸ್ತೆ ಜೈಲಿನಲ್ಲಿರಬೇಕಾಗಿದೆ. ಹಾಗಾಗಿ ಇದನ್ನು ವಿರೋಧಿಸಿ ಕಾಂಗ್ರೆಸ್ ಪಕ್ಷ ಪ್ರತಿಭಟನಾ ಮೆರವಣಿಗೆ ನಡೆಸಲು ಉದ್ದೇಶಿಸಿತ್ತು.
“ಉತ್ತರಪ್ರದೇಶದಲ್ಲಿ ಅಪರಾಧಿಗಳಿಗೆ ಸರ್ಕಾರದ ಸಂಪೂರ್ಣ ರಕ್ಷಣೆ ಇದೆ. ಜೊತೆಗೆ ಅತ್ಯಾಚಾರಕ್ಕೊಳಗಾದ ಬಾಲಕಿಯನ್ನು ಬೆದರಿಸಲಾಗುತ್ತಿದೆ.
ಶಹಜಹಾನಪುರದ ಮಗಳಿಗೆ ನ್ಯಾಯಕ್ಕಾಗಿ ದನಿಯೆತ್ತಿದವರನ್ನು ಯುಪಿಯ ಬಿಜೆಪಿ ಸರ್ಕಾರ ನಿಗ್ರಹಿಸುತ್ತಿದೆ. ಪಾದಯಾತ್ರೆಯನ್ನು ನಿಲ್ಲಿಸಲಾಗುತ್ತಿದೆ. ನಮ್ಮ ಕಾರ್ಯಕರ್ತರನ್ನು, ಮುಖಂಡರನ್ನು ಬಂಧಿಸಲಾಗುತ್ತಿದೆ. ನೀವು ಏಕೆ ಹೆದರುತ್ತೀರಿ?” ಎಂದು ಕಾಂಗ್ರೆಸ್ ಮುಖಂಡೆ ಪ್ರಿಯಾಂಕ ಗಾಂಧಿ ಟ್ವೀಟ್ ಮಾಡಿದ್ದಾರೆ.
उप्र में अपराधियों को सरकार का सरंक्षण है कि वो बलात्कार से पीड़ित लड़की को डरा-धमका सकें।
लेकिन, उप्र भाजपा सरकार शाहजहांपुर की बेटी के लिए न्याय माँगने की आवाज को दबाना चाहती है। पदयात्रा रोकी जा रही है। हमारे कार्यकर्ताओं नेताओं को गिरफ़्तार किया जा रहा है। डर किस बात का है?
— Priyanka Gandhi Vadra (@priyankagandhi) September 30, 2019
ಬಿಜೆಪಿ ದರ್ಬಾರಿನಲ್ಲಿ ದೂರು ಸಲ್ಲಿಸಿದವರಿದೆ ಜೈಲೇ ಗತಿ.