Homeಕರ್ನಾಟಕಡೇರಿ ಫಾರಂ, ಗೋಶಾಲೆಗಳಿಗೆ ಅನುಮತಿ ಕಡ್ಡಾಯ: ಮಾಲಿನ್ಯ ನಿಯಂತ್ರಣದ ಹೆಸರಿನಲ್ಲಿ ರೈತರ ಬದುಕಿಗೆ ಕೊಳ್ಳಿ!

ಡೇರಿ ಫಾರಂ, ಗೋಶಾಲೆಗಳಿಗೆ ಅನುಮತಿ ಕಡ್ಡಾಯ: ಮಾಲಿನ್ಯ ನಿಯಂತ್ರಣದ ಹೆಸರಿನಲ್ಲಿ ರೈತರ ಬದುಕಿಗೆ ಕೊಳ್ಳಿ!

ಬೃಹತ್ ಮಟ್ಟದಲ್ಲಿ ಪರಿಸರ ನಾಶ ಮಾಡುವ ಕಾರ್ಪೊರೇಟ್ ಕಂಪನಿಗಳಿಗೆ ಅನುಮತಿ ನೀಡುವ ಕೆಎಸ್‌ಪಿಸಿಬಿ ರೈತರ ಶೋಷಣೆಗೆ ಮುಂದಾಗಿರುವುದು ಖಂಡನೀಯ.

- Advertisement -
- Advertisement -

ಇನ್ನು ಮುಂದೆ ಹೆಚ್ಚಿನ ಸಂಖ್ಯೆಯಲ್ಲಿ ಹಸು ಮತ್ತು ದನಗಳನ್ನು ಸಾಕುವವರು ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯಿಂದ (ಕೆಎಸ್‌ಪಿಸಿಬಿ) ಅನುಮತಿ ಪತ್ರ ಪಡೆಯುವುದು ಕಡ್ಡಾಯ ಎಂದು ಅದು ಮಾರ್ಗಸೂಚಿ ಸಿದ್ಧಪಡಿಸಿರುವುದಾಗಿ ಪತ್ರಿಕೆಗಳು ವರದಿ ಮಾಡಿವೆ. ಅದರಂತೆ ಡೇರಿ ಫಾರಂಗಳು ಮತ್ತು ಗೋಶಾಲೆಗಳು ಸೆಗಣಿ, ಗಂಜಲ ಸಹಿತ ಘನತ್ಯಾಜ್ಯ ನಿರ್ವಹಣೆಗೆ ಜಲ ಕಾಯ್ದೆ 1974 ಮತ್ತು ವಾಯುಸಂರಕ್ಷಣೆ ಮಾಲಿನ್ಯ ನಿಯಂತ್ರಣ ಕಾಯ್ದೆ 1981ರ ಅನ್ವಯ ಡೇರಿ ಮತ್ತು ಗೋಶಾಲೆಗಳು ನಗರ, ಪಟ್ಟಣ, ಹಳ್ಳಿಗಳ ಸರಹದ್ದಿನಿಂದ ೨೦೦ ಮೀಟರ್ ದೂರದಲ್ಲಿರಬೇಕು, ಜಲಮೂಲಗಳಿಂದ ದೂರದಲ್ಲಿರಬೇಕು, ರಾಜ್ಯ ಮತ್ತು ರಾಷ್ಟ್ರ ಹೆದ್ದಾರಿಗಳಿಂದ ದೂರದಲ್ಲಿರಬೇಕೆಂಬ ಕಠಿಣ ಮಾರ್ಗಸೂಚಿಗಳನ್ನು ಪಾಲಿಸಬೇಕೆಂದು ಹೇಳಲಾಗಿದೆ.

ಈ ಹೊಸ ಮಾರ್ಗಸೂಚಿಗಳು ಈಗಾಗಲೇ ಕೃಷಿಯಲ್ಲಿ ಸಂಕಷ್ಟ ಅನುಭವಿಸುತ್ತಿರುವ ರೈತರ ಮೇಲೆ ಮತ್ತಷ್ಟು ಹೊರೆಯಾಗಲಿವೆ. ಈ ಕುರಿತು ಮೈಸೂರು ವಿಶ್ವವಿದ್ಯಾಲಯ ಮಾನಸ ಗಂಗೋತ್ರಿಯಲ್ಲಿ ಸಾವಯವ ರಸಾಯನ ಶಾಸ್ತ್ರದಲ್ಲಿ ಡಾಕ್ಟರೇಟ್ ಪದವಿ ಪಡೆದಿರುವ ಡಾ.ಮಹೇಂದ್ರ ಕೆ.ಆರ್ ಅವರ ಅನಿಸಿಕೆ ಇಲ್ಲಿದೆ.

ರಾಜ್ಯದಲ್ಲಿ ಡೈರಿ ಉದ್ಯಮವು ಸ್ವಾವಲಂಬನೆಯ ಕಲ್ಪವೃಕ್ಷವಾಗಿ ಬೆಳೆದಿದೆ.. ಬಹುತೇಕ ಡೈರಿಗಳು ಮಹಿಳಾ ಸ್ವ ಸಹಾಯ ಸಹಕಾರ ಸಂಘಗಳಿಂದ ನಡೆಯುತ್ತಿವೆ. ಜಾನುವಾರು ಸಾಕಣೆ ಮಹಿಳೆಯರಿಗೆ ಆರ್ಥಿಕವಾಗಿ, ಸಾಮಾಜಿಕವಾಗಿ ಸದೃಡಗೊಳಿಸಿ ಎಲ್ಲರನ್ನು ಒಳಗೊಳ್ಳುವಂತೆ ಮಾಡಿದೆ.. ಸಾಮಾಜಿಕ ಸಹಬಾಳ್ವೆ ರೂಪಿಸುವಲ್ಲಿ ಡೈರಿ ಉದ್ಯಮದ ಮಾತ್ರ ಮಹತ್ವದ್ದು. ಜೊತೆಗೆ ಬರ, ನೆರೆ ಜೊತೆಗೆ ಸಮರ್ಪಕ ಬೆಲೆ ಸಿಗದೇ ಬಹಿಪಾಲು ನಷ್ಟವನ್ನೇ ಅನುಭವಿಸುವ ರೈತರಿಗೆ ದೈನಂದಿನ ಖರ್ಚು ಮತ್ತು ಮಕ್ಕಳ ವಿದ್ಯಾಭಾಸಕ್ಕೆ ಬಲ ತುಂಬುತ್ತಿರುವುದು ಕೂಡ ಇದೆ ಡೈರಿ ಉದ್ಯಮ.. ಭೂರಹಿತರು ಕೂಲಿ ಕಾರ್ಮಿಕರು ಕೂಡ ಜಾನುವಾರು ಸಾಕಣೆಯಿಂದ ತಮ್ಮ ಬದುಕು ಹಸನಾಗಿಸಿಕೊಂಡಿದ್ದಾರೆ..

ಆದರೆ ಮಾಲಿನ್ಯ ನಿಯಂತ್ರಣದ ಹೆಸರಿನಲ್ಲಿ ಅವೈಜ್ಞಾನಿಕ ಕಾನೂನು ಹೇರಿ ಸರ್ಕಾರ ಈ ಸ್ವಾವಲಂಬಿ ಜನರ ಬದುಕಿಗೆ ಗುಬ್ಬಿ ಮೇಲೆ ಬ್ರಹ್ಮಾಸ್ತ್ರ ಹೂಡಲು ಹೊರಟಿದೆ. ವ್ಯವಸಾಯದ ಜೊತೆಗೆ ಹಸು ಎಮ್ಮೆ ಕೋಳಿ ಕುರಿ ಮೇಕೆ ಇನ್ನಿತರ ಜಾನುವಾರು ಸಾಕಿ ಸ್ವಾವಲಂಬಿ ಬದುಕು ರೂಪಿಸಿಕೊಂಡಿದ್ದ ರೈತರ ಜೀವನಕ್ಕೆ ಅಂಕುಶ ಹಾಕಿ ಜನ ಸಾಮಾನ್ಯರಿಗೆ ಕಿರುಕುಳ ನೀಡಲು ಹೊರಟಿದೆ..

ಗೋಶಾಲೆ ಮತ್ತು ಡೈರಿಪಾರಂ ನಿಯಂತ್ರಿಸಲು ಸಾಧುವಲ್ಲದ ಅವೈಜ್ಞಾನಿಕ ಕಾನೂನು ರೂಪಿಸಿದೆ. ಆ ಕಾನೂನಿನ ಅನ್ವಯ ದನ ಜಾನುವಾರುಗಳನ್ನು ಸಾಕಾಣಿಕೆ ಮಾಡಬೇಕೆನ್ನುವ ಮಂದಿ ಸರ್ಕಾರದ ಕಠಿಣ ನಿಬಂಧನೆಗಳನ್ನ ಪೂರೈಸಲೇಬೇಕು. ಇದೆಲ್ಲ ಪೂರೈಸಲು ಹೊರಟರೆ ಜನರು ಡೈರಿ ಕಸುಬಿನಿಂದ ವಿಮುಖರಾಗುವ ಸಾಧ್ಯತೆಯೇ ಹೆಚ್ಚು.

ಇನ್ನು ಜಾನುವಾರುಗಳಿಂದ ಉಂಟಾಗುವ ಎಲ್ಲ ರೀತಿಯ ಘನ ದ್ರವ ತ್ಯಾಜ್ಯಗಳು ಸಾವಯವ ಸಂಯುಕ್ತಗಳಿಂದ ಪರಿಸರಕ್ಕೆ ಮಾರಕವೆನಿಸುವ ಹಾನಿಯಾಗುವುದಿಲ್ಲ. ಇವೆಲ್ಲ ವಿಘಟನೆ ಆಗುವ ಸಂಯುಕ್ತಗಳು. ಇನ್ನು ರಾಸುಗಳ ಗೊಬ್ಬರ ಮತ್ತು ಗಂಜಲವನ್ನ ಸಾವಯವ ವ್ಯವಸಾಯಕ್ಕೆ ಗೊಬ್ಬರದ ಮೂಲವನ್ನಾಗಿ ಬಳಸಬಹುದು ಮತ್ತು ಇವು ಪರಿಸರಕ್ಕೆ ಪೂರಕವಾದದ್ದು. ಇನ್ನು ಇಂತಹ ಗೊಬ್ಬರಗಳಿಂದ ಬೆಳೆದ ಬೆಳೆ, ಇನ್ನಿತರ ಮೂಲದಲ್ಲಿ ಬೆಳೆದ ಬೆಳೆಗಿಂತ ಹೆಚ್ಚಿನ ಗುಣಮಟ್ಟ ಹೊಂದಿರುತ್ತವೆ. ಇಷ್ಟೆಲ್ಲ ಅನುಕೂಲತೆ ಇದ್ದರು ಇದನ್ನ ನಿಯಂತ್ರಣ ಮಾಡಲು ಸರ್ಕಾರವೇ ಮುಂದಾಗಿರೋದು ಸಂಪೂರ್ಣ ಜನವಿರೋಧಿ ನಡವಳಿಕೆ.

ಜಾನುವಾರುಗಳಿಂದ ಉತ್ಪಾದನೆ ಆಗುವ ಹಾಲು, ಹಾಲಿನ ಪದಾರ್ಥಗಳು ಗಂಭೀರವೆನಿಸುವ ಯಾವುದೇ ಹಾನಿಕಾರಕ ರಾಸಾಯನಿಕ ಹೊಂದಿಲ್ಲ. ನಗರ ಪ್ರದೇಶಗಳಲ್ಲಿ ರಾಸಾಯನಿಕ ಔಷಧ ಆಟೋಮೊಬೈಲ್ ಮತ್ತು ಇ ತ್ಯಾಜ್ಯಗಳಿಂದ ಉಂಟಾಗುವ ವಿಷಪೂರಿತ ರಾಸಾಯನಿಕಗಳಾದ ಮರ್ಕ್ಯೂರಿ, ಅರ್ಸೆನಿಕ್, ಸಲ್ಪರ್ ನಂತಹ ವಿಷಪೂರಿತ ವಸ್ತುಗಳ ಬಿಡುಗಡೆ ಮತ್ತು ಹೊರಸೂಸುವಿಕೆಯನ್ನ ಪರಿಮಿತಿ ಪರಿಶೀಲಿಸದ, ಪರಿಶೀಲನೆ ನಾಟಕವಾಡಿ, ಪರಿಸರಕ್ಕೆ ಎಂತಹುದೇ ಅಪಾಯಕಾರಿ ರಾಸಾಯನಿಕ ಹೊರಸೂಸಿ ಜನರ ಜೀವಕ್ಕೆ ಎರವಾದರು ಕಾರ್ಪೊರೇಟ್ ಕುಳಗಳಿಂದ ಅಮೇದ್ಯ ತಿಂದು ಆ ಕಂಪನಿಗಳಿಗೆ ನಿರಪೇಕ್ಷ ಪ್ರಮಾಣ ಪತ್ರ ನೀಡಿ ಜೀವ ವೈವಿದ್ಯತೆಗೆ ಧಕ್ಕೆ ಉಂಟಾಗಿ ಮಾನವನು ಸಹ ಅಸ್ತಮಾ, ಶ್ವಾಸಕೋಶಕ್ಕೆ ಸಂಬಂದಿಸಿದ ಗಂಭೀರ ಸ್ವರೂಪದ ಕಾಯಿಲೆಗೆ ತುತ್ತಾಗುವ ಅವಕಾಶ ಇದ್ದರು ಕಣ್ಮುಚ್ಚಿ ಕುಳಿತಿರುವ ಮಾಲಿನ್ಯ ನಿಯಂತ್ರಣ ಮಂಡಳಿ, ರೈತರ ವಿಚಾರದಲ್ಲಿ ಮಾತ್ರ ರಾಕ್ಷಸೀಯ ಪ್ರವೃತ್ತಿ ಮೆರೆದಿದೆ..

ಇದಕ್ಕೆ ಅನುಗುಣವಾಗಿ ಕಳೆದ ಬಾರಿ ಪಾಲ್ಗೊಳ್ಳಲು ಉದ್ದೇಶಿಸಿದ್ದ RCEP ಒಪ್ಪಂದದ ಕುರಿತಾಗಿ ಏಷ್ಯದ ಇನ್ನಿತರ ದೇಶಗಳಾದ ಜಪಾನ್, ಮಲೇಷ್ಯಾ, ಥಾಯ್ಲೆಂಡ್ ಸಿಂಗಾಪುರ ಚೀನಾ, ಮಾರಿಷಸ್, ಕೊರಿಯಾ ಇನ್ನಿತರ ರಾಷ್ಟ್ರಗಳು ಭಾರತದ ಭಾಗವಹಿಸುವಿಕೆ ಬಗ್ಗೆ ಇನ್ನು ಮುಕ್ತ ಮನಸ್ಸು ಹೊಂದಿರುವದಾಗಿ ಹೇಳಿವೆ. ಇದಕ್ಕೆ ಪೂರಕವೆಂಬಂತೆ ಸಿಂಗಾಪುರ ಸಚಿವರು ಭಾರತದ ಭಾಗವಹಿಸುವಿಕೆ ಸ್ವಾಗತ ಮಾಡುವುದಾಗಿ ಹೇಳಿದ್ದಾರೆ.
ಈ ಒಪ್ಪಂದಕ್ಕೆ ಸಹಿ ಹಾಕುವ ಭಾಗವಾಗಿ ಸರ್ಕಾರ ರೈತರಿಗೆ ಅಂಕುಶ ಹಾಕಲು ಹೊರಟಿದೆಯೆ ಅನ್ನುವ ಅನುಮಾನ ಬಾರದೆ ಇರದು.

ಕೈಯಲ್ಲಿ ಶರಣು ಕಂಕುಳಲ್ಲಿ ದೊಣ್ಣೆ ಎನ್ನುವಂತೆ ಗೋಹತ್ಯೆ ನಿಷೇಧ ,ಗೋರಕ್ಷಣೆ ಬಗ್ಗೆ ಪುಂಖಾನುಪುಂಖವಾಗಿ ಬೊಗಳೆ ಬಿಡುವ, ಅದರಿಂದಲೇ ಅಧಿಕಾರದ ಸುಖ ಅನುಭವಿಸುತ್ತಿರುವ ಮಾರ್ಜಾಲ ವೇಷದ ಬಂಡವಾಳಶಾಹಿ ಪ್ಯಾಸಿಸ್ಟ್ ಸರ್ಕಾರ ಜನಸಾಮಾನ್ಯರ ಮೇಲೆ ಗಧಾ ಪ್ರಹಾರ ನಡೆಸಲು ಹೊರಟಿದೆ..

ಪ್ರಜಾಪ್ರಭುತ್ವ ಬೊಕ್ಕ ಬೋರಲು ಬಿದ್ದು ಫ್ಯಾಸಿಸಂ ಮೆರೆಯುತ್ತಿರುವ ಕಾಲದಲ್ಲಿ, ಜನವಿರೋಧಿ ರಾಕ್ಷಸೀಯ ಪ್ರವೃತ್ತಿ ಹೊಂದಿರುವ ಪ್ಯಾಸಿಸ್ಟ್ ಆಡಳಿತ ಕೋನೆಗಾಣಿಸಲು ಬೃಹತ್ ಜನಾಂದೋಲನ ರೂಪುಗೊಂಡು ಇಂತಹ ನೀತಿಗಳನ್ನು ವಿರೋಧಿಸಬೇಕಾದದ್ದು ಸದ್ಯದ ತುರ್ತು ಅಗತ್ಯಗಳಲ್ಲೊಂದು.

  • ಡಾ. ಮಹೇಂದ್ರ ಕೆ.ಆರ್

(ತುಮಕೂರು ಜಿಲ್ಲೆಯ ಸಿರ ತಾಲೂಕಿನ ಗ್ರಾಮೀಣ ಪ್ರದೇಶದವರು, ಮೈಸೂರು ವಿಶ್ವವಿದ್ಯಾಲಯ ಮಾನಸ ಗಂಗೋತ್ರಿಯಲ್ಲಿ ಸಾವಯವ ರಸಾಯನ ಶಾಸ್ತ್ರದಲ್ಲಿ ಡಾಕ್ಟರೇಟ್ ಪದವಿ ಪಡೆದಿದ್ದಾರೆ.. ವನ್ಯಜೀವಿ ಪರಿಸರ, ಕಾಡುಮೇಡಿನ ಅಲೆದಾಟ, ಹೊಸತನದ ಹುಡುಕಾಟ, ಕೃಷಿ ಮತ್ತು ಕೃಷಿಗೆ ಸಂಬಂಧಿಸಿದ ಉಪಕಸುಬುಗಳು,ಕತೆ ಕಾದಂಬರಿ, ಮೂಲವಿಜ್ಞಾನದ ಕುರಿತಂತೆ ಇವರಿಗೆ ಹೆಚ್ಚಿನ ಆಸಕ್ತಿ.)


ಇದನ್ನೂ ಓದಿ: Explainer: ಕೃಷಿ ಮಸೂದೆಗಳಿಂದ ರೈತರಿಗೆ ಲಾಭವಾಗಲಿದೆಯೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಒಟ್ನಲ್ಲಿ ಸರ್ಕಾರ ರೈತರ ತಿಪ್ಪೆಗೂ ಕಂದಾಯ ಕಟ್ಟಿಸಿಕೊಳ್ಳುವ ಹಾಗಿದೆ. ಒಂದು, ಊರು ನಗರ, ಹೆದ್ದಾರಿ, ರೈಲ್ವೆ ಇದಕ್ಕೆಲ್ಲ ತಮ್ಮ ಜಮೀನು ಕೊಟ್ಟಿದ್ದೇ ರೈತರು. ಅವರು ಹಣವನ್ನು ಪಡೆದಿರಬಹದು ಕೆಲವು ಸಲ ದಾನವಾಗಿಯೂ ಕೊಟ್ಟಿರಬಹುದು.ಸರ್ಕಾರದ ಕೆಲಸಗಳಿಗೆ ಜಮೀನು ಕೊಡಲು ಇಷ್ಟವಿಲ್ಲದವರೂ ಸರ್ಕಾರದ ವಿರುದ್ಧ ಹೋರಾಟ ಮಾಡಲಾಗದೆ ಬಿಟ್ಟು ಕೊಟ್ಟಿರಬಹುದು. ಹೀಗೆ ದೇಶದ ಅಭಿವೃದ್ಧಿಯಲ್ಲಿ ಹೆಚ್ಚಿನ ಪಾಲು ರೈತರಿಂದಲೇ ಆಗಿರುವಾಗ ಕಾನೂನುಗಳು ರೈತರಿಗೆ ಪೂರಕವಾಗಿರಬೇಕೇ ಹೊರತು ಮಾರಕವಾಗಬಾರದು. ಒಬ್ಬ ಡಾಕ್ಟರ್, ಇಂಜಿನಿಯರ್, ಶಿಕ್ಷಕರು ಹೀಗೆ ಸರ್ಕಾರಿ ಅಧಿಕಾರಿಗಳು ಹಾಗೂ ರಾಜಕಾರಣಿಗಳು ಇವರಿಗೆ ಪ್ರಿಯವಾದ ಕಂಪನಿಗಳು ಅವರು ತಮ್ಮ ತಮ್ಮ ದೇ ಒಂದೇ ಕೆಲಸ ಕೆಲಸ ಮಾಡಿಕೊಂಡು ಸಮೃದ್ದವಾಗಿರುತ್ತಾರೆ. ಆದರೆ ರೈತನಿಗೆ ಅವನು ಒಂದೇ ಕೆಲಸ ಅಂತಿಲ್ಲ ವ್ಯವಸಾಯದ ಜೊತೆಗೆ ಹಸು ಕೋಳಿ ಕುರಿ ಸಾಕಾಣಿಕೆ ಅದರ ಜೊತೆ ಕೂಲಿಕೆಲಸ ಎಲ್ಲಾ ಮಾಡಿದರೂ ಒಂದರಲ್ಲಿ ಆದಾಯ ಬಂದರೆ ಇನ್ನೊಂದರಲ್ಲಿ ನಷ್ಟ ಅನ್ನುವ ಸ್ಥಿತಿ. ಅದರಲ್ಲೂ ಸರ್ಕಾರ ಕೊಡುವ ಸವಲತ್ತುಗಳನ್ನು ಪಡೆಯಬೇಕೆಂದರೆ ತಮ್ಮ ಕೆಲಸ ಕಾರ್ಯಗಳನ್ನು ಬಿಟ್ಟು ಕಛೇರಿಗಳಿಗೆ ಅಲೆಯಬೇಕು. ಇನ್ನೂ ಸರ್ಕಾರ ಇಂತಹ ಕಾನೂನುಗಳನ್ನು ತಂದರೆ ರೈತ ಬೆಳೆ ಬೆಳೀಬೇಕೋ ಇಲ್ಲ ತನ್ನ ಕಸುಬಿಗೆ ಸರ್ಕಾರದ ಅನುಮತಿಯ ಮುದ್ರೆ ಪಡೆಯಲು ಅಧಿಕಾರಿಗಳ ಬಳಿ ಅಲೆಯಬೇಕೋ?. ಲಾಸೋ ಲಾಭವೋ ಪ್ರಾಮಾಣಿಕವಾಗಿ ದುಡಿಮೆಗೆ ಹೊಂದಿಕೊಂಡಿರುವ ರೈತನಿಗೆ ದುಡೀಲಿಕ್ಕಾದರೂ ಬಿಡಬೇಕು. ಸವಲತ್ತು ಹಾಗೂ ಕಾನೂನುಗಳ ಹೆಸರಿನಿಂದ ಅವನ ದುಡಿಮೆಗೆ ಕಲ್ಲು ಹಾಕಬಾರದು.

LEAVE A REPLY

Please enter your comment!
Please enter your name here

- Advertisment -

ಬಿಜೆಪಿ ತೊರೆದು ಪ್ರಾದೇಶಿಕ ಪಕ್ಷದತ್ತ ಅಣ್ಣಾಮಲೈ : ದ್ರಾವಿಡ ಮಣ್ಣಿನಲ್ಲಿ ವಿಫಲವಾದ ಹಿಂದುತ್ವ ರಾಜಕೀಯ

ಮಾಜಿ ಐಪಿಎಸ್‌ ಅಧಿಕಾರಿ ಹಾಗೂ ಬಿಜೆಪಿ ತಮಿಳುನಾಡು ರಾಜ್ಯ ಘಟಕದ ಮಾಜಿ ಅಧ್ಯಕ್ಷ ಕೆ. ಅಣ್ಣಾಮಲೈ ಬಿಜೆಪಿ ತೊರೆದಿದ್ದು, ಹೊಸ ಪ್ರಾದೇಶಿಕ ಪಕ್ಷ ಕಟ್ಟಲು ಮುಂದಾಗಿದ್ದಾರೆ ಎಂದು ವರದಿಯಾಗಿದೆ. ಮಂಗಳವಾರ...

45 ಲೀಟರ್ ಟ್ಯಾಂಕಿಗೆ 52 ಲೀಟರ್ ಬಿಲ್ ಕೊಟ್ಟ ಚತುರ ಕಳ್ಳರು: ಕಾನ್ಪುರದಲ್ಲಿ ಪೆಟ್ರೋಲ್ ಬಂಕ್ ವಂಚನೆ ಪತ್ತೆ

ಉತ್ತರ ಪ್ರದೇಶದ ಕಾನ್ಪುರದಲ್ಲಿ ಹೊಸ ಕಾರು ಖರೀದಿಸಿದ ಮಾಲೀಕರೊಬ್ಬರು ಸ್ಥಳೀಯ ಪೆಟ್ರೋಲ್ ಬಂಕ್‌ಗೆ ಹೋದಾಗ ಅವರಿಗೆ ಒಂದು ಶಾಕಿಂಗ್ ಅನುಭವವಾಗಿದೆ. ಅವರ ಕಾರಿನ ಗರಿಷ್ಠ ಇಂಧನ ಟ್ಯಾಂಕ್ ಸಾಮರ್ಥ್ಯ ಕೇವಲ 45 ಲೀಟರ್...

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...