Homeಕರೋನಾ ತಲ್ಲಣಕೊರೊನಾ ಲಸಿಕೆಯ 2 ಮತ್ತು 3ನೇ ಹಂತದ ಮಾನವ ಪ್ರಯೋಗಕ್ಕೆ ಅನುಮತಿ: SII

ಕೊರೊನಾ ಲಸಿಕೆಯ 2 ಮತ್ತು 3ನೇ ಹಂತದ ಮಾನವ ಪ್ರಯೋಗಕ್ಕೆ ಅನುಮತಿ: SII

ಕೊರೊನಾ ಕುರಿತು ವಿಷಯ ತಜ್ಞರ ಸಮಿತಿ (ಎಸ್‌ಇಸಿ) ಯ ಶಿಫಾರಸುಗಳ ಆಧಾರದ ಮೇಲೆ ಸಮಗ್ರ ಮೌಲ್ಯಮಾಪನದ ನಂತರ ಎಸ್‌ಐಐಗೆ ಡಾ.ವಿ.ಜಿ.ಸೋಮಾನಿ ಭಾನುವಾರ ತಡರಾತ್ರಿ ಅನುಮೋದನೆ ನೀಡಿದ್ದಾರೆ.

- Advertisement -
- Advertisement -

ಡ್ರಗ್ಸ್ ಕಂಟ್ರೋಲರ್ ಜನರಲ್ ಆಫ್ ಇಂಡಿಯಾ (ಡಿಸಿಜಿಐ) ವತಿಯಿಂದ ಪುಣೆ ಮೂಲದ ಸೆರಮ್ ಇನ್‌ಸ್ಟಿಟ್ಯೂಟ್ ಆಫ್ ಇಂಡಿಯಾ (ಎಸ್‌ಐಐ) ಗೆ, ಆಕ್ಸ್‌ಫರ್ಡ್ ವಿಶ್ವವಿದ್ಯಾಲಯದ ಅಭ್ಯರ್ಥಿಗಳು ಅಭಿವೃದ್ಧಿಪಡಿಸಿದ ಕೊರೊನಾ ಲಸಿಕೆಯ 2 ಮತ್ತು 3ನೇ ಹಂತದ ಮಾನವ ಕ್ಲಿನಿಕಲ್ ಪ್ರಯೋಗಗಳನ್ನು ನಡೆಸಲು ಹಸಿರು ನಿಶಾನೆ ನೀಡಿದೆ ಎಂದು ಪಿಟಿಐ ವರದಿ ಮಾಡಿದೆ.

ಕೊರೊನಾ ಕುರಿತು ವಿಷಯ ತಜ್ಞರ ಸಮಿತಿ (ಎಸ್‌ಇಸಿ) ಯ ಶಿಫಾರಸುಗಳ ಆಧಾರದ ಮೇಲೆ ಸಮಗ್ರ ಮೌಲ್ಯಮಾಪನದ ನಂತರ ಎಸ್‌ಐಐಗೆ ಡಾ.ವಿ.ಜಿ.ಸೋಮಾನಿ ಭಾನುವಾರ ತಡರಾತ್ರಿ ಅನುಮೋದನೆ ನೀಡಿದ್ದಾರೆ.

3 ನೇ ಹಂತದ ಕ್ಲಿನಿಕಲ್ ಪ್ರಯೋಗಗಳಿಗೆ ಮುಂದುವರಿಯುವ ಮೊದಲು ದತ್ತಾಂಶ ಸುರಕ್ಷತಾ ಮೇಲ್ವಿಚಾರಣಾ ಮಂಡಳಿಯು (ಡಿಎಸ್‌ಎಂಬಿ) ಮೌಲ್ಯಮಾಪನ ಮಾಡಿದ ಸುರಕ್ಷತಾ ದತ್ತಾಂಶವನ್ನು ಸಿಡಿಎಸ್‌ಕೊಗೆ ಸಲ್ಲಿಸಬೇಕು ಎಂದು ಹಿರಿಯ ಅಧಿಕಾರಿಯೊಬ್ಬರು ಹೇಳಿದ್ದಾರೆ.

ಅಧ್ಯಯನದ ವಿನ್ಯಾಸದ ಪ್ರಕಾರ, ಪ್ರತಿಯೊಂದು ಘಟಕಕ್ಕೂ ನಾಲ್ಕು ವಾರಗಳ ಅಂತರದಲ್ಲಿ ಎರಡು ಡೋಸ್‌ಗಳನ್ನು ನೀಡಲಾಗುವುದು. (ಮೊದಲ ದಿನದಂದು ಡೋಸ್ ನೀಡಿದ ನಂತರ 29 ನೇ ದಿನದಂದು ಎರಡನೇ ಡೋಸ್) ನಂತರ ಸುರಕ್ಷತೆ ಮತ್ತು ಇಮ್ಯುನೊಜೆನೆಸಿಟಿಯನ್ನು ಪೂರ್ವನಿರ್ಧರಿತ ಮಧ್ಯಂತರದಲ್ಲಿ ನಿರ್ಣಯಿಸಲಾಗುತ್ತದೆ ಎಂದು ಅಧಿಕಾರಿ ಹೇಳಿದರು.

ವಿಶ್ವದ ಅತಿದೊಡ್ಡ ಲಸಿಕೆ ತಯಾರಕ ಎಸ್‌ಐಐ, ಬ್ರಿಟಿಷ್-ಸ್ವೀಡಿಷ್ ಕಂಪನಿ ಅಸ್ಟ್ರಾಜೆನೆಕಾ ಸಹಯೋಗದೊಂದಿಗೆ ಆಕ್ಸ್‌ಫರ್ಡ್ ವಿಶ್ವವಿದ್ಯಾಲಯದ ಜೆನ್ನರ್ ಸಂಸ್ಥೆ ಅಭಿವೃದ್ಧಿಪಡಿಸಿದ ಸಂಭಾವ್ಯ ಲಸಿಕೆಯನ್ನು ತಯಾರಿಸುವ ಒಪ್ಪಂದಕ್ಕೆ ಸಹಿ ಹಾಕಿದೆ.

ಆಕ್ಸ್‌ಫರ್ಡ್ ಲಸಿಕೆ ಲಂಡನ್ ನಲ್ಲಿ 2 ಮತ್ತು 3 ನೇ ಹಂತದ ಕ್ಲಿನಿಕಲ್ ಪ್ರಯೋಗಗಳು, ಬ್ರೆಜಿಲ್‌ನಲ್ಲಿ 3 ನೇ ಹಂತ ಮತ್ತು ದಕ್ಷಿಣ ಆಫ್ರಿಕಾದಲ್ಲಿ 1 ಮತ್ತು 2 ನೇ ಹಂತದಲ್ಲಿ ಪ್ರಯೋಗಗಳು ನಡೆಯುತ್ತಿದೆ.

ಕೆಲವು ಹೆಚ್ಚುವರಿ ಮಾಹಿತಿಗಳನ್ನು ಪಡೆಯುವುದರ ಜೊತೆಗೆ ಕ್ಲಿನಿಕಲ್ ಪ್ರಯೋಗಗಳಿಗೆ ತನ್ನ ಪ್ರೋಟೋಕಾಲ್ ಅನ್ನು ಪರಿಷ್ಕರಿಸಲು ಜುಲೈ 28 ರಂದು ಎಸ್‌ಇಸಿ ಕೇಳಿದ ನಂತರ ಸೆರಮ್ ಸಂಸ್ಥೆ ಬುಧವಾರ ಪರಿಷ್ಕೃತ ಪ್ರಸ್ತಾವನೆಯನ್ನು ಸಲ್ಲಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಅಧ್ಯಯನಕ್ಕಾಗಿ ಪ್ರಸ್ತಾಪಿಸಲಾದ ಕ್ಲಿನಿಕಲ್ ಟ್ರಯಲ್ ಸೈಟ್‌ಗಳನ್ನು ಭಾರತದಾದ್ಯಂತ ವಿತರಿಸಬೇಕೆಂದು ಸಮಿತಿ ಶಿಫಾರಸು ಮಾಡಿತ್ತು.

ಸೆಂಟ್ರಲ್ ಡ್ರಗ್ಸ್ ಸ್ಟ್ಯಾಂಡರ್ಡ್ ಕಂಟ್ರೋಲ್ ಆರ್ಗನೈಸೇಶನ್ (ಸಿಡಿಎಸ್ಕೊ)ನ ತಜ್ಞರ ಸಮಿತಿ, ತ್ವರಿತ ನಿಯಂತ್ರಕ ಪ್ರತಿಕ್ರಿಯೆಯಾಗಿ, ಭಾರತದ ಆರೋಗ್ಯವಂತ ವಯಸ್ಕರಲ್ಲಿ ‘ಕೋವಿಶೀಲ್ಡ್’ ಎಂಬ ಸಂಭಾವ್ಯ ಲಸಿಕೆಯ 2 ಮತ್ತು 3ನೇ ಹಂತದ ಕ್ಲಿನಿಕಲ್ ಪ್ರಯೋಗಗಳಿಗೆ ಅನುಮತಿ ನೀಡುವಂತೆ ಶಿಫಾರಸು ಮಾಡಿತ್ತು.

ದೆಹಲಿಯ ಆಲ್ ಇಂಡಿಯಾ ಇನ್ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್ (ಏಮ್ಸ್), ಪುಣೆಯ ಬಿಜೆ ವೈದ್ಯಕೀಯ ಕಾಲೇಜು, ರಾಜೇಂದ್ರ ಸ್ಮಾರಕ ಸಂಶೋಧನಾ ಸಂಸ್ಥೆ ಸೇರಿದಂತೆ ಆಯ್ದ 17 ತಾಣಗಳಲ್ಲಿ 18 ವರ್ಷಕ್ಕಿಂತ ಮೇಲ್ಪಟ್ಟ 1,600 ಜನರು ಪ್ರಯೋಗಗಳಲ್ಲಿ ಭಾಗವಹಿಸಲಿದ್ದಾರೆ ಎಂದು ಸೆರಮ್ ಸಂಸ್ಥೆ ತನ್ನ ಪರಿಷ್ಕೃತ ಪ್ರಸ್ತಾವನೆಯಲ್ಲಿ ತಿಳಿಸಿದೆ.


ಇದನ್ನೂ ಓದಿ: ಚಂದ್ರಯಾನ-2ರ ರೋವರ್ ಚಂದ್ರನ ಮೇಲಿದೆ: ಚೆನ್ನೈ ಮೂಲದ ಟೆಕ್ಕಿ ಹೇಳಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...

‘ಅಮೃತಕಾಲ’ದ ಸ್ವಪ್ನದಿಂದ ‘ಬಿಕ್ಕಟ್ಟಿನ ಕಾಲ’ಕ್ಕೆ: ಕಳಚಿಕೊಳ್ಳುತ್ತಿರುವ ಮೋದಿಯವರ ‘ಆತ್ಮನಿರ್ಭರ’ ಮುಖವಾಡ 

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗೂ ಮುನ್ನ ದೇಶವು ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯಿಂದ ಬಳಲುತ್ತಿದ್ದಾಗ, ಬಿಜೆಪಿ ನಾಯಕರು ಮತ್ತು ಕೇಂದ್ರ ಸರ್ಕಾರದ ಮಂತ್ರಿಗಳು ಮೋದಿಯವರ ‘ದಯೆ’ಯಿಂದ ಭಾರತಕ್ಕೆ ಯಾವುದೇ...

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...