Homeಅಂತರಾಷ್ಟ್ರೀಯಕೊರೊನಾ ಲಸಿಕೆಯ ಕ್ಲಿನಿಕಲ್ ಪ್ರಯೋಗದ ಪುನರಾರಂಭ: ಅನುಮತಿ ನೀಡಿದ ಡ್ರಗ್ಸ್ ಕಂಟ್ರೋಲರ್ ಜನರಲ್ ಆಫ್ ಇಂಡಿಯಾ

ಕೊರೊನಾ ಲಸಿಕೆಯ ಕ್ಲಿನಿಕಲ್ ಪ್ರಯೋಗದ ಪುನರಾರಂಭ: ಅನುಮತಿ ನೀಡಿದ ಡ್ರಗ್ಸ್ ಕಂಟ್ರೋಲರ್ ಜನರಲ್ ಆಫ್ ಇಂಡಿಯಾ

ಭಾರತ ಮತ್ತು ಯುಕೆ ಯಲ್ಲಿ DSMBಯ ಶಿಫಾರಸುಗಳನ್ನು ಪರಿಶೀಲಿಸಿದ ನಂತರ, ಹೊಸ ಔಷಧಗಳು ಮತ್ತು ಕ್ಲಿನಿಕಲ್ ಪ್ರಯೋಗಗಳ ನಿಯಮಗಳು, 2019ರ ನಿಯಮ 30 ರ ಅಡಿಯಲ್ಲಿ ಹೊರಡಿಸಲಾದ ಸೆಪ್ಟೆಂಬರ್ 11 ರ ಆದೇಶವನ್ನು ಹಿಂತೆಗೆದುಕೊಳ್ಳಲಾಗಿದೆ

- Advertisement -
- Advertisement -

ಆಕ್ಸ್‌ಫರ್ಡ್ ಕೊರೊನಾ ಲಸಿಕೆ ಕ್ಲಿನಿಕಲ್ ಪ್ರಯೋಗವನ್ನು ಪುನರಾರಂಭಿಸಲು ಅನುಮತಿ ನೀಡಿ, ಸೆರಮ್ ಇನ್‌ಸ್ಟಿಟ್ಯೂಟ್ ಆಫ್ ಇಂಡಿಯಾಕ್ಕೆ ಈ ಹಿಂದೆ ನೀಡಿದ್ದ ತಡೆಯ ಆದೇಶವನ್ನು ಡ್ರಗ್ಸ್ ಕಂಟ್ರೋಲರ್ ಜನರಲ್ ಆಫ್ ಇಂಡಿಯಾ (DCGI) ಡಾ. ವಿ.ಜಿ.ಸೋಮಾನಿ ಮಂಗಳವಾರ ಹಿಂಪಡೆಡಿದ್ದಾರೆ.

ಆದರೆ ಈ ಅನುಮತಿಗೂ DCGI ಹಲವು ಷರತ್ತುಗಳನ್ನು ವಿಧಿಸಿದ್ದು, ಸ್ಕ್ರೀನಿಂಗ್ ಸಮಯದಲ್ಲಿ ಸ್ವಯಂಸೇವಕರ ಹೆಚ್ಚಿನ ಕಾಳಜಿ ವಹಿಸುವುದು, ಸ್ವಯಂಸೇವಕರೊಂದಿಗೆ ಒಪ್ಪಿಗೆ ಪ್ರಮಾಣ ಪತ್ರದಲ್ಲಿ ಪ್ರಯೋಗದ ಕುರಿತು ಹೆಚ್ಚಿನ ಮಾಹಿತಿ ನೀಡುವುದು, ಪ್ರತಿಕೂಲ ಘಟನೆಗಳಿಗೆ ನಿಕಟ ಮೇಲ್ವಿಚಾರಣೆ, ಸ್ವಯಂ ಸೇವಕರ ಫಾಲೋಅಪ್ ತನಿಖಾ ವರದಿಯನ್ನು ಸಂಪೂರ್ಣವಾಗಿ ಪರಿಶೀಲಿಸಿ ಬಳಿಕ ಮುಂದಿನ ಕ್ರಮ ಅನುಸರಿಸಬೇಕು ಎಂಬಿತ್ಯಾದಿ ಅಂಶಗಳು ಸೇರಿದಂತೆ ಹಲವು ಷರತ್ತುಗಳನ್ನು ಸೆರಮ್ ಇನ್ಸ್ಟಿಟ್ಯೂಟ್ ಆಫ್ ಇಂಡಿಯಾಗೆ(SII) ವಿಧಿಸಲಾಗಿದೆ.

ಪ್ರತಿಕೂಲ ಘಟನೆಗಳ ನಿರ್ವಹಣೆಗೆ ಪ್ರೋಟೋಕಾಲ್‌ಗೆ ಅನುಗುಣವಾಗಿ ಬಳಸುವ ಔಷಧಿಗಳ ಬಗ್ಗೆ DCGI ಕಚೇರಿಗೆ ವಿವರಗಳನ್ನು ಸಲ್ಲಿಸಲು SIIಗೆ ಸೂಚಿಸಲಾಗಿದೆ ಎಂದು ನ್ಯಾಷನಲ್ ಹೆರಾಲ್ಡ್ ವರದಿ ಮಾಡಿದೆ.

ಸೆಪ್ಟೆಂಬರ್ 11 ರಂದು, ಸೆರೆಮ್ ಇನ್ಸ್ ಟಿಟ್ಯೂಟ್ ಆಫ್ ಇಂಡಿಯಾ ತನ್ನ ಆಕ್ಸ್ ಫರ್ಡ್ ಲಸಿಕೆಯ 2 ಮತ್ತು ಮೂರನೇ ಹಂತದ ಪ್ರಯೋಗಕ್ಕೆ ಸ್ವಯಂ ಸೇವಕರ ನೇಮಕಾತಿಗೆ ಮುಂದಾಗಿತ್ತು. ಆದರೆ ಆಸ್ಟ್ರಾ ಜೆನಿಕಾ ಘಟನೆ ಬಳಿಕ ಲಸಿಕೆ ಪ್ರಯೋಗ ಸಂಬಂಧ ಹೊಸ ನೇಮಕಾತಿ (ಸ್ವಯಂ ಸೇವಕರು) ಮಾಡಿಕೊಳ್ಳದಂತೆ ಸೆರೆಮ್ ಇನ್ಸ್ ಟಿಟ್ಯೂಟ್ ಆಫ್ ಇಂಡಿಯಾಗೆ ಡಿಸಿಜಿಐ ಸೂಚನೆ ನೀಡಿತ್ತು.

ಇದನ್ನೂ ಓದಿ: ಕಂಗನಾಗೆ ಬೆಂಬಲ ನೀಡಲು ಮುಂಬೈಗೆ ಆಗಮಿಸಿತೆ ಕರ್ಣಿಸೇನಾ!: ಸತ್ಯಾಸತ್ಯತೆ ಏನು..?

ಶನಿವಾರ, ಪ್ರಯೋಗಗಳು ಸುರಕ್ಷಿತವೆಂದು ಔಷಧಿ ಆರೋಗ್ಯ ನಿಯಂತ್ರಣ ಪ್ರಾಧಿಕಾರದ (MHRA) ದೃಢಪಡಿಸಿದ ನಂತರ, ಅಸ್ಟ್ರಾಜೆನೆಕಾ ಮತ್ತು ಆಕ್ಸ್‌ಫರ್ಡ್ ವಿಶ್ವವಿದ್ಯಾಲಯವು, ‘ತಮ್ಮ ಕೊರೊನಾ ವೈರಸ್ ಲಸಿಕೆಗಾಗಿ ಕ್ಲಿನಿಕಲ್ ಪ್ರಯೋಗಗಳು ಯುಕೆಯಲ್ಲಿ ಪುನರಾರಂಭಗೊಂಡಿವೆ’ ಎಂದು ಹೇಳಿದೆ.

ಕೊರೊನಾಗಾಗಿ ಲಸಿಕೆ ಅಭ್ಯರ್ಥಿಯನ್ನು ತಯಾರಿಸಲು ಅಸ್ಟ್ರಾಜೆನೆಕಾ ಜೊತೆ ಪಾಲುದಾರಿಕೆ ಹೊಂದಿರುವ SII, ಯುಕೆ ಮತ್ತು ಭಾರತ ಮತ್ತು ಡೇಟಾ ಮತ್ತು ಸುರಕ್ಷತಾ ಮಾನಿಟರಿಂಗ್ ಬೋರ್ಡ್ (DSMB), ಮತ್ತು ಭಾರತದ DSMB ಶಿಫಾರಸುಗಳನ್ನು ಮಂಗಳವಾರ ಸಲ್ಲಿಸಿ, ಕ್ಲಿನಿಕಲ್ ಪ್ರಯೋಗದಲ್ಲಿ ದಾಖಲಾತಿಯನ್ನು ಮರುಪ್ರಾರಂಭಿಸಲು ಅನುಮತಿ ಕೋರಿತ್ತು.

ಮಂಗಳವಾರ DCGI ಹೊರಡಿಸಿದ ಆದೇಶದ ಪ್ರಕಾರ, ಯುಕೆ ಯ DSMB, ಕೆಲವು ಷರತ್ತುಗಳಿಗೆ ಒಳಪಟ್ಟು ತನಿಖಾಧಿಕಾರಿಗಳು ತಮ್ಮ ಕ್ಲಿನಿಕಲ್ ಪ್ರಯೋಗಗಳಲ್ಲಿ ಎಲ್ಲಾ ರೋಗನಿರೋಧಕವನ್ನು ಪುನಃ ಪ್ರಾರಂಭಿಸುವಂತೆ ಶಿಫಾರಸು ಮಾಡಿದ್ದಾರೆ ಎಂದು ಹೇಳಿದೆ.

ಭಾರತದ DSMB, ಕೆಲವು ಷರತ್ತುಗಳಿಗೆ ಒಳಪಟ್ಟು ಪ್ರೋಟೋಕಾಲ್ ಪ್ರಕಾರ ಅಧ್ಯಯನವನ್ನು ಮುಂದುವರಿಸಲು ಮತ್ತು ಉಳಿದ ಭಾಗವಹಿಸುವವರನ್ನು ಕ್ಲಿನಿಕಲ್ ಪ್ರಯೋಗದಲ್ಲಿ ದಾಖಲಿಸಲು ಶಿಫಾರಸು ಮಾಡಿದೆ.

ಇದನ್ನೂ ಓದಿ: ಸುಶಾಂತ್ ಸಿಂಗ್ ಪ್ರಕರಣ: ಕೇಂದ್ರಕ್ಕೆ ಬಾಂಬೆ ಹೈಕೋರ್ಟ್ ನೋಟಿಸ್

ಪುಣೆ ಮೂಲದ ಸಂಸ್ಥೆಯು ಮೊದಲ ವ್ಯಾಕ್ಸಿನೇಷನ್ ನಂತರದ ಏಳು ದಿನಗಳ ಸುರಕ್ಷತೆಯ ಅನುಸರಣೆಯ ಸಾರಾಂಶವನ್ನು ಸಲ್ಲಿಸಿದೆ. ವರದಿಯ ದಿನಾಂಕದವರೆಗೆ ಯಾವುದೇ ಘಟಕಗಳಿಂದ ಯಾವುದೇ ಗಂಭೀರ ಪ್ರತಿಕೂಲ ಘಟನೆಗಳು ಸಂಭವಿಸಿಲ್ಲ ಎಂದು ವರದಿಯಲ್ಲಿ ಹೇಳಲಾಗಿದೆ.

ಮೇಲಿನದನ್ನು ಗಮನದಲ್ಲಿಟ್ಟುಕೊಂಡು, ಕೇಂದ್ರ ಪರವಾನಗಿ ಪ್ರಾಧಿಕಾರದ ಡ್ರಗ್ಸ್ ಕಂಟ್ರೋಲರ್ ಜನರಲ್ ಆಫ್ ಇಂಡಿಯಾ (DCGI) ಡಾ. ವಿ.ಜಿ.ಸೋಮಾನಿ, “ಭಾರತ ಮತ್ತು ಯುಕೆ ಯಲ್ಲಿ DSMBಯ ಶಿಫಾರಸುಗಳನ್ನು ಪರಿಶೀಲಿಸಿದ ನಂತರ, ಹೊಸ ಔಷಧಗಳು ಮತ್ತು ಕ್ಲಿನಿಕಲ್ ಪ್ರಯೋಗಗಳ ನಿಯಮಗಳು, 2019ರ ನಿಯಮ 30 ರ ಅಡಿಯಲ್ಲಿ ಹೊರಡಿಸಲಾದ ಸೆಪ್ಟೆಂಬರ್ 11 ರ ಆದೇಶವನ್ನು ಹಿಂತೆಗೆದುಕೊಳ್ಳಲಾಗಿದೆ” ಎಂದು ಹೇಳಿದ್ದಾರೆ.

“ಈಗಾಗಲೇ ಅನುಮೋದಿತ ಪ್ರೋಟೋಕಾಲ್ ಮತ್ತು ಹೊಸ ಔಷಧಗಳು ಮತ್ತು ಕ್ಲಿನಿಕಲ್ ಟ್ರಯಲ್ ರೂಲ್ಸ್, 2019 ರ ಅಡಿಯಲ್ಲಿ ತಿಳಿಸಲಾದ ಷರತ್ತುಗಳಿಗೆ ಅನುಗುಣವಾಗಿ ಭಾರತದ DSMB ಶಿಫಾರಸು ಮಾಡಿದಂತೆ, ನೀವು ಕ್ಲಿನಿಕಲ್ ಪ್ರಯೋಗವನ್ನು ಪುನಃ ಪ್ರಾರಂಭಿಸಬಹುದು” ಎಂದು ಆದೇಶದಲ್ಲಿ ತಿಳಿಸಲಾಗಿದೆ.


ಇದನ್ನೂ ಓದಿ: ಕೊರೊನಾ ಲಸಿಕೆ ಪ್ರಯೋಗ ನಿಲ್ಲಿಸಿದ ಅಸ್ಟ್ರಾಜೆನೆಕಾ ಕಂಪನಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...