Homeಅಂತರಾಷ್ಟ್ರೀಯಕೊರೊನಾ ಲಸಿಕೆಯ ಕ್ಲಿನಿಕಲ್ ಪ್ರಯೋಗದ ಪುನರಾರಂಭ: ಅನುಮತಿ ನೀಡಿದ ಡ್ರಗ್ಸ್ ಕಂಟ್ರೋಲರ್ ಜನರಲ್ ಆಫ್ ಇಂಡಿಯಾ

ಕೊರೊನಾ ಲಸಿಕೆಯ ಕ್ಲಿನಿಕಲ್ ಪ್ರಯೋಗದ ಪುನರಾರಂಭ: ಅನುಮತಿ ನೀಡಿದ ಡ್ರಗ್ಸ್ ಕಂಟ್ರೋಲರ್ ಜನರಲ್ ಆಫ್ ಇಂಡಿಯಾ

ಭಾರತ ಮತ್ತು ಯುಕೆ ಯಲ್ಲಿ DSMBಯ ಶಿಫಾರಸುಗಳನ್ನು ಪರಿಶೀಲಿಸಿದ ನಂತರ, ಹೊಸ ಔಷಧಗಳು ಮತ್ತು ಕ್ಲಿನಿಕಲ್ ಪ್ರಯೋಗಗಳ ನಿಯಮಗಳು, 2019ರ ನಿಯಮ 30 ರ ಅಡಿಯಲ್ಲಿ ಹೊರಡಿಸಲಾದ ಸೆಪ್ಟೆಂಬರ್ 11 ರ ಆದೇಶವನ್ನು ಹಿಂತೆಗೆದುಕೊಳ್ಳಲಾಗಿದೆ

- Advertisement -
- Advertisement -

ಆಕ್ಸ್‌ಫರ್ಡ್ ಕೊರೊನಾ ಲಸಿಕೆ ಕ್ಲಿನಿಕಲ್ ಪ್ರಯೋಗವನ್ನು ಪುನರಾರಂಭಿಸಲು ಅನುಮತಿ ನೀಡಿ, ಸೆರಮ್ ಇನ್‌ಸ್ಟಿಟ್ಯೂಟ್ ಆಫ್ ಇಂಡಿಯಾಕ್ಕೆ ಈ ಹಿಂದೆ ನೀಡಿದ್ದ ತಡೆಯ ಆದೇಶವನ್ನು ಡ್ರಗ್ಸ್ ಕಂಟ್ರೋಲರ್ ಜನರಲ್ ಆಫ್ ಇಂಡಿಯಾ (DCGI) ಡಾ. ವಿ.ಜಿ.ಸೋಮಾನಿ ಮಂಗಳವಾರ ಹಿಂಪಡೆಡಿದ್ದಾರೆ.

ಆದರೆ ಈ ಅನುಮತಿಗೂ DCGI ಹಲವು ಷರತ್ತುಗಳನ್ನು ವಿಧಿಸಿದ್ದು, ಸ್ಕ್ರೀನಿಂಗ್ ಸಮಯದಲ್ಲಿ ಸ್ವಯಂಸೇವಕರ ಹೆಚ್ಚಿನ ಕಾಳಜಿ ವಹಿಸುವುದು, ಸ್ವಯಂಸೇವಕರೊಂದಿಗೆ ಒಪ್ಪಿಗೆ ಪ್ರಮಾಣ ಪತ್ರದಲ್ಲಿ ಪ್ರಯೋಗದ ಕುರಿತು ಹೆಚ್ಚಿನ ಮಾಹಿತಿ ನೀಡುವುದು, ಪ್ರತಿಕೂಲ ಘಟನೆಗಳಿಗೆ ನಿಕಟ ಮೇಲ್ವಿಚಾರಣೆ, ಸ್ವಯಂ ಸೇವಕರ ಫಾಲೋಅಪ್ ತನಿಖಾ ವರದಿಯನ್ನು ಸಂಪೂರ್ಣವಾಗಿ ಪರಿಶೀಲಿಸಿ ಬಳಿಕ ಮುಂದಿನ ಕ್ರಮ ಅನುಸರಿಸಬೇಕು ಎಂಬಿತ್ಯಾದಿ ಅಂಶಗಳು ಸೇರಿದಂತೆ ಹಲವು ಷರತ್ತುಗಳನ್ನು ಸೆರಮ್ ಇನ್ಸ್ಟಿಟ್ಯೂಟ್ ಆಫ್ ಇಂಡಿಯಾಗೆ(SII) ವಿಧಿಸಲಾಗಿದೆ.

ಪ್ರತಿಕೂಲ ಘಟನೆಗಳ ನಿರ್ವಹಣೆಗೆ ಪ್ರೋಟೋಕಾಲ್‌ಗೆ ಅನುಗುಣವಾಗಿ ಬಳಸುವ ಔಷಧಿಗಳ ಬಗ್ಗೆ DCGI ಕಚೇರಿಗೆ ವಿವರಗಳನ್ನು ಸಲ್ಲಿಸಲು SIIಗೆ ಸೂಚಿಸಲಾಗಿದೆ ಎಂದು ನ್ಯಾಷನಲ್ ಹೆರಾಲ್ಡ್ ವರದಿ ಮಾಡಿದೆ.

ಸೆಪ್ಟೆಂಬರ್ 11 ರಂದು, ಸೆರೆಮ್ ಇನ್ಸ್ ಟಿಟ್ಯೂಟ್ ಆಫ್ ಇಂಡಿಯಾ ತನ್ನ ಆಕ್ಸ್ ಫರ್ಡ್ ಲಸಿಕೆಯ 2 ಮತ್ತು ಮೂರನೇ ಹಂತದ ಪ್ರಯೋಗಕ್ಕೆ ಸ್ವಯಂ ಸೇವಕರ ನೇಮಕಾತಿಗೆ ಮುಂದಾಗಿತ್ತು. ಆದರೆ ಆಸ್ಟ್ರಾ ಜೆನಿಕಾ ಘಟನೆ ಬಳಿಕ ಲಸಿಕೆ ಪ್ರಯೋಗ ಸಂಬಂಧ ಹೊಸ ನೇಮಕಾತಿ (ಸ್ವಯಂ ಸೇವಕರು) ಮಾಡಿಕೊಳ್ಳದಂತೆ ಸೆರೆಮ್ ಇನ್ಸ್ ಟಿಟ್ಯೂಟ್ ಆಫ್ ಇಂಡಿಯಾಗೆ ಡಿಸಿಜಿಐ ಸೂಚನೆ ನೀಡಿತ್ತು.

ಇದನ್ನೂ ಓದಿ: ಕಂಗನಾಗೆ ಬೆಂಬಲ ನೀಡಲು ಮುಂಬೈಗೆ ಆಗಮಿಸಿತೆ ಕರ್ಣಿಸೇನಾ!: ಸತ್ಯಾಸತ್ಯತೆ ಏನು..?

ಶನಿವಾರ, ಪ್ರಯೋಗಗಳು ಸುರಕ್ಷಿತವೆಂದು ಔಷಧಿ ಆರೋಗ್ಯ ನಿಯಂತ್ರಣ ಪ್ರಾಧಿಕಾರದ (MHRA) ದೃಢಪಡಿಸಿದ ನಂತರ, ಅಸ್ಟ್ರಾಜೆನೆಕಾ ಮತ್ತು ಆಕ್ಸ್‌ಫರ್ಡ್ ವಿಶ್ವವಿದ್ಯಾಲಯವು, ‘ತಮ್ಮ ಕೊರೊನಾ ವೈರಸ್ ಲಸಿಕೆಗಾಗಿ ಕ್ಲಿನಿಕಲ್ ಪ್ರಯೋಗಗಳು ಯುಕೆಯಲ್ಲಿ ಪುನರಾರಂಭಗೊಂಡಿವೆ’ ಎಂದು ಹೇಳಿದೆ.

ಕೊರೊನಾಗಾಗಿ ಲಸಿಕೆ ಅಭ್ಯರ್ಥಿಯನ್ನು ತಯಾರಿಸಲು ಅಸ್ಟ್ರಾಜೆನೆಕಾ ಜೊತೆ ಪಾಲುದಾರಿಕೆ ಹೊಂದಿರುವ SII, ಯುಕೆ ಮತ್ತು ಭಾರತ ಮತ್ತು ಡೇಟಾ ಮತ್ತು ಸುರಕ್ಷತಾ ಮಾನಿಟರಿಂಗ್ ಬೋರ್ಡ್ (DSMB), ಮತ್ತು ಭಾರತದ DSMB ಶಿಫಾರಸುಗಳನ್ನು ಮಂಗಳವಾರ ಸಲ್ಲಿಸಿ, ಕ್ಲಿನಿಕಲ್ ಪ್ರಯೋಗದಲ್ಲಿ ದಾಖಲಾತಿಯನ್ನು ಮರುಪ್ರಾರಂಭಿಸಲು ಅನುಮತಿ ಕೋರಿತ್ತು.

ಮಂಗಳವಾರ DCGI ಹೊರಡಿಸಿದ ಆದೇಶದ ಪ್ರಕಾರ, ಯುಕೆ ಯ DSMB, ಕೆಲವು ಷರತ್ತುಗಳಿಗೆ ಒಳಪಟ್ಟು ತನಿಖಾಧಿಕಾರಿಗಳು ತಮ್ಮ ಕ್ಲಿನಿಕಲ್ ಪ್ರಯೋಗಗಳಲ್ಲಿ ಎಲ್ಲಾ ರೋಗನಿರೋಧಕವನ್ನು ಪುನಃ ಪ್ರಾರಂಭಿಸುವಂತೆ ಶಿಫಾರಸು ಮಾಡಿದ್ದಾರೆ ಎಂದು ಹೇಳಿದೆ.

ಭಾರತದ DSMB, ಕೆಲವು ಷರತ್ತುಗಳಿಗೆ ಒಳಪಟ್ಟು ಪ್ರೋಟೋಕಾಲ್ ಪ್ರಕಾರ ಅಧ್ಯಯನವನ್ನು ಮುಂದುವರಿಸಲು ಮತ್ತು ಉಳಿದ ಭಾಗವಹಿಸುವವರನ್ನು ಕ್ಲಿನಿಕಲ್ ಪ್ರಯೋಗದಲ್ಲಿ ದಾಖಲಿಸಲು ಶಿಫಾರಸು ಮಾಡಿದೆ.

ಇದನ್ನೂ ಓದಿ: ಸುಶಾಂತ್ ಸಿಂಗ್ ಪ್ರಕರಣ: ಕೇಂದ್ರಕ್ಕೆ ಬಾಂಬೆ ಹೈಕೋರ್ಟ್ ನೋಟಿಸ್

ಪುಣೆ ಮೂಲದ ಸಂಸ್ಥೆಯು ಮೊದಲ ವ್ಯಾಕ್ಸಿನೇಷನ್ ನಂತರದ ಏಳು ದಿನಗಳ ಸುರಕ್ಷತೆಯ ಅನುಸರಣೆಯ ಸಾರಾಂಶವನ್ನು ಸಲ್ಲಿಸಿದೆ. ವರದಿಯ ದಿನಾಂಕದವರೆಗೆ ಯಾವುದೇ ಘಟಕಗಳಿಂದ ಯಾವುದೇ ಗಂಭೀರ ಪ್ರತಿಕೂಲ ಘಟನೆಗಳು ಸಂಭವಿಸಿಲ್ಲ ಎಂದು ವರದಿಯಲ್ಲಿ ಹೇಳಲಾಗಿದೆ.

ಮೇಲಿನದನ್ನು ಗಮನದಲ್ಲಿಟ್ಟುಕೊಂಡು, ಕೇಂದ್ರ ಪರವಾನಗಿ ಪ್ರಾಧಿಕಾರದ ಡ್ರಗ್ಸ್ ಕಂಟ್ರೋಲರ್ ಜನರಲ್ ಆಫ್ ಇಂಡಿಯಾ (DCGI) ಡಾ. ವಿ.ಜಿ.ಸೋಮಾನಿ, “ಭಾರತ ಮತ್ತು ಯುಕೆ ಯಲ್ಲಿ DSMBಯ ಶಿಫಾರಸುಗಳನ್ನು ಪರಿಶೀಲಿಸಿದ ನಂತರ, ಹೊಸ ಔಷಧಗಳು ಮತ್ತು ಕ್ಲಿನಿಕಲ್ ಪ್ರಯೋಗಗಳ ನಿಯಮಗಳು, 2019ರ ನಿಯಮ 30 ರ ಅಡಿಯಲ್ಲಿ ಹೊರಡಿಸಲಾದ ಸೆಪ್ಟೆಂಬರ್ 11 ರ ಆದೇಶವನ್ನು ಹಿಂತೆಗೆದುಕೊಳ್ಳಲಾಗಿದೆ” ಎಂದು ಹೇಳಿದ್ದಾರೆ.

“ಈಗಾಗಲೇ ಅನುಮೋದಿತ ಪ್ರೋಟೋಕಾಲ್ ಮತ್ತು ಹೊಸ ಔಷಧಗಳು ಮತ್ತು ಕ್ಲಿನಿಕಲ್ ಟ್ರಯಲ್ ರೂಲ್ಸ್, 2019 ರ ಅಡಿಯಲ್ಲಿ ತಿಳಿಸಲಾದ ಷರತ್ತುಗಳಿಗೆ ಅನುಗುಣವಾಗಿ ಭಾರತದ DSMB ಶಿಫಾರಸು ಮಾಡಿದಂತೆ, ನೀವು ಕ್ಲಿನಿಕಲ್ ಪ್ರಯೋಗವನ್ನು ಪುನಃ ಪ್ರಾರಂಭಿಸಬಹುದು” ಎಂದು ಆದೇಶದಲ್ಲಿ ತಿಳಿಸಲಾಗಿದೆ.


ಇದನ್ನೂ ಓದಿ: ಕೊರೊನಾ ಲಸಿಕೆ ಪ್ರಯೋಗ ನಿಲ್ಲಿಸಿದ ಅಸ್ಟ್ರಾಜೆನೆಕಾ ಕಂಪನಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...

ಬಂಗಾಳ ಎಸ್ಐಆರ್ ಪ್ರಕ್ರಿಯೆ: ಚುನಾವಣಾ ಆಯೋಗದ ಸಹಾಯಕ್ಕೆ ನ್ಯಾಯಾಂಗ ಅಧಿಕಾರಿಗಳನ್ನು ನೇಮಿಸಲು ಕಲ್ಕತ್ತಾ ಹೈಕೋರ್ಟ್‌ಗೆ ಸುಪ್ರೀಂ ಸೂಚನೆ

ನವದೆಹಲಿ: ಪಶ್ಚಿಮ ಬಂಗಾಳ ಸರ್ಕಾರ ಮತ್ತು ಚುನಾವಣಾ ಆಯೋಗದ ನಡುವೆ ಮತದಾರರ ಪಟ್ಟಿ ಶುದ್ಧೀಕರಣ ಅಭಿಯಾನಕ್ಕೆ ಸಂಬಂಧಿಸಿದಂತೆ ದುರದೃಷ್ಟಕರ ಆರೋಪದ ಆಟ ನಡೆಯುತ್ತಿದೆ ಎಂದು ಪ್ರತಿಕ್ರಿಯಿಸಿರುವ ಸುಪ್ರೀಂ ಕೋರ್ಟ್, ವಿಶೇಷ ತೀವ್ರ ಪರಿಷ್ಕರಣೆ...

ಬಾಲಿವುಡ್ ನಟ ರಣವೀರ್ ಸಿಂಗ್ ಗೆ ಬಿಷ್ಣೋಯಿ ಗ್ಯಾಂಗ್ ನಿಂದ ಜೀವಬೆದರಿಕೆ: ಅಮೆರಿಕಾ ನಂಬರ್ ನಿಂದ 10ಕೋಟಿ ರೂ. ಬೇಡಿಕೆ 

ಬಿಷ್ಣೋಯ್ ಗ್ಯಾಂಗ್ ಬಾಲಿವುಡ್ ನಟ ರಣವೀರ್ ಸಿಂಗ್ ಅವರಿಂದ 10 ಕೋಟಿ ರೂ.ಗೆ ಬೇಡಿಕೆ ಇಟ್ಟಿದೆ ಎನ್ನಲಾಗಿದೆ. ಅಮೆರಿಕದ ಸಂಖ್ಯೆಯಿಂದ ಬಂದ ವಾಯ್ಸ್ ನೋಟ್ ಮೂಲಕ ಬೆದರಿಕೆ ಹಾಕಲಾಗಿದೆ ಎಂದು ವರದಿಯಾಗಿದೆ. ಮುಂಬೈ ಪೊಲೀಸ್...

‘ರಾಜಿ ಮಾಡಿಕೊಂಡ ಪ್ರಧಾನಿ’: ಎಐ ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್‌ ಕಾರ್ಯಕರ್ತರಿಂದ ಶರ್ಟ್‌ ಬಿಚ್ಚಿ ಪ್ರತಿಭಟನೆ

ಎಐ ಇಂಪ್ಯಾಕ್ಟ್ ಶೃಂಗಸಭೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿಯವರನ್ನು ಗುರಿಯಾಗಿಸಿಕೊಂಡು ಮತ್ತು ಪ್ರಧಾನಿ "ರಾಜಿ ಮಾಡಿಕೊಂಡಿದ್ದಾರೆ" ಎಂದು ಆರೋಪಿಸಿ ಭಾರತೀಯ ಯುವ ಕಾಂಗ್ರೆಸ್ ಕಾರ್ಯಕರ್ತರು ಶುಕ್ರವಾರ ಭಾರತ್ ಮಂಟಪದಲ್ಲಿ ಶರ್ಟ್ ಧರಿಸದೆ ಪ್ರತಿಭಟನೆ...

ಬಾಗಲಕೋಟೆ: ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ, ಉದ್ವಿಗ್ನ ಪರಿಸ್ಥಿತಿ: ಫೆ.24ರವರೆಗೆ ನಿಷೇಧಾಜ್ಞೆ ಜಾರಿ

ಬಾಗಲಕೋಟೆಯಲ್ಲಿ ಗುರುವಾರ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯಂದು ನಡೆದ ಪ್ರತಿಮೆ ಮೆರವಣಿಗೆಯ ಸಂದರ್ಭದಲ್ಲಿ ಕಲ್ಲು ತೂರಾಟ ನಡೆದ ಘಟನೆ ವರದಿಯಾಗಿದೆ. ಹಳೆಯ ನಗರ ಪ್ರದೇಶದ ಪಂಕ ಮಸೀದಿ ಬಳಿ ಮೆರವಣಿಗೆ ಸಾಗುತ್ತಿದ್ದಾಗ ಈ...

ನಿಯಮಿತವಾಗಿ ಎಸ್‌ಸಿ/ಎಸ್‌ಟಿ ಕಾಯ್ದೆ ಕೋಶದ ಸಭೆ ನಡೆಸುತ್ತಿಲ್ಲ ಎಂದು ಆರೋಪಿಸಿದ ಮೇವಾನಿ; ಗುಜರಾತ್ ವಿಧಾನಸಭೆಯಲ್ಲಿ ಕಾಂಗ್ರೆಸ್- ಬಿಜೆಪಿ ನಡುವೆ ವಾಗ್ವಾದ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆಯಡಿಯಲ್ಲಿ ರಚಿಸಲಾದ ರಾಜ್ಯ ಮೇಲ್ವಿಚಾರಣಾ ಕೋಶದ (ಎಸ್‌ಎಂಸಿ) ನಿಯಮಿತ ಸಭೆಗಳನ್ನು ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಕರೆಯುತ್ತಿಲ್ಲ ಎಂದು ವಡ್ಗಾಮ್‌ನ ಕಾಂಗ್ರೆಸ್ ಶಾಸಕ ಜಿಗ್ನೇಶ್...

ನೆಲಮಂಗಲದಲ್ಲಿ ಹಾಸಿಗೆ ಹಿಡಿದ ಪತಿಯ ಎದುರೇ 60ವರ್ಷದ ಮಹಿಳೆಯ ಕೊಲೆ; ಐದು ಗಂಟೆಗಳಲ್ಲಿ ಆರೋಪಿ ಬಂಧನ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲದ ಪೇಟೆ ಬೀದಿಯಲ್ಲಿ ವೀಲ್‌ಚೇರ್‌ನಲ್ಲಿ ಕುಳಿತಿದ್ದ ಗಂಡನ ಮುಂದೆಯೇ ಮಹಿಳೆಯೊಬ್ಬಳ ಕೊಲೆಯಾದ ಐದು ಗಂಟೆಗಳಲ್ಲಿ ನೆಲಮಂಗಲ ಪಟ್ಟಣ ಪೊಲೀಸರು 45 ವರ್ಷದ ದಿನಸಿ ಅಂಗಡಿ ಮಾಲೀಕನನ್ನು ಬಂಧಿಸಿದ್ದಾರೆ. ಫೆಬ್ರವರಿ...

‘ದಿ ಕೇರಳ ಸ್ಟೋರಿ 2’ ಚಿತ್ರ ನಿರ್ಮಾಪಕರು, ಸಿಬಿಎಫ್‌ಸಿ ಮಂಡಳಿಗೆ ನೋಟಿಸ್ ಜಾರಿ ಮಾಡಿದ ಕೇರಳ ಹೈಕೋರ್ಟ್

ಕೊಚ್ಚಿ: 'ದಿ ಕೇರಳ ಸ್ಟೋರಿ 2 - ಗೋಸ್ ಬಿಯಾಂಡ್' ಚಿತ್ರದ ಪ್ರಮಾಣೀಕರಣವನ್ನು ರದ್ದುಗೊಳಿಸುವಂತೆ ಮತ್ತು ಅದರ ಶೀರ್ಷಿಕೆಯ ಮರುಪರಿಶೀಲನೆ ಸೇರಿದಂತೆ ಮಾರ್ಪಾಡುಗಳಿಗೆ ನಿರ್ದೇಶನ ನೀಡಬೇಕೆಂದು ಕೋರಿ ಕಣ್ಣೂರು ಮೂಲದವರು ಸಲ್ಲಿಸಿದ ಅರ್ಜಿಯ...

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...