Homeಅಂತರಾಷ್ಟ್ರೀಯಕೊರೊನಾ ಲಸಿಕೆಯ ಕ್ಲಿನಿಕಲ್ ಪ್ರಯೋಗದ ಪುನರಾರಂಭ: ಅನುಮತಿ ನೀಡಿದ ಡ್ರಗ್ಸ್ ಕಂಟ್ರೋಲರ್ ಜನರಲ್ ಆಫ್ ಇಂಡಿಯಾ

ಕೊರೊನಾ ಲಸಿಕೆಯ ಕ್ಲಿನಿಕಲ್ ಪ್ರಯೋಗದ ಪುನರಾರಂಭ: ಅನುಮತಿ ನೀಡಿದ ಡ್ರಗ್ಸ್ ಕಂಟ್ರೋಲರ್ ಜನರಲ್ ಆಫ್ ಇಂಡಿಯಾ

ಭಾರತ ಮತ್ತು ಯುಕೆ ಯಲ್ಲಿ DSMBಯ ಶಿಫಾರಸುಗಳನ್ನು ಪರಿಶೀಲಿಸಿದ ನಂತರ, ಹೊಸ ಔಷಧಗಳು ಮತ್ತು ಕ್ಲಿನಿಕಲ್ ಪ್ರಯೋಗಗಳ ನಿಯಮಗಳು, 2019ರ ನಿಯಮ 30 ರ ಅಡಿಯಲ್ಲಿ ಹೊರಡಿಸಲಾದ ಸೆಪ್ಟೆಂಬರ್ 11 ರ ಆದೇಶವನ್ನು ಹಿಂತೆಗೆದುಕೊಳ್ಳಲಾಗಿದೆ

- Advertisement -
- Advertisement -

ಆಕ್ಸ್‌ಫರ್ಡ್ ಕೊರೊನಾ ಲಸಿಕೆ ಕ್ಲಿನಿಕಲ್ ಪ್ರಯೋಗವನ್ನು ಪುನರಾರಂಭಿಸಲು ಅನುಮತಿ ನೀಡಿ, ಸೆರಮ್ ಇನ್‌ಸ್ಟಿಟ್ಯೂಟ್ ಆಫ್ ಇಂಡಿಯಾಕ್ಕೆ ಈ ಹಿಂದೆ ನೀಡಿದ್ದ ತಡೆಯ ಆದೇಶವನ್ನು ಡ್ರಗ್ಸ್ ಕಂಟ್ರೋಲರ್ ಜನರಲ್ ಆಫ್ ಇಂಡಿಯಾ (DCGI) ಡಾ. ವಿ.ಜಿ.ಸೋಮಾನಿ ಮಂಗಳವಾರ ಹಿಂಪಡೆಡಿದ್ದಾರೆ.

ಆದರೆ ಈ ಅನುಮತಿಗೂ DCGI ಹಲವು ಷರತ್ತುಗಳನ್ನು ವಿಧಿಸಿದ್ದು, ಸ್ಕ್ರೀನಿಂಗ್ ಸಮಯದಲ್ಲಿ ಸ್ವಯಂಸೇವಕರ ಹೆಚ್ಚಿನ ಕಾಳಜಿ ವಹಿಸುವುದು, ಸ್ವಯಂಸೇವಕರೊಂದಿಗೆ ಒಪ್ಪಿಗೆ ಪ್ರಮಾಣ ಪತ್ರದಲ್ಲಿ ಪ್ರಯೋಗದ ಕುರಿತು ಹೆಚ್ಚಿನ ಮಾಹಿತಿ ನೀಡುವುದು, ಪ್ರತಿಕೂಲ ಘಟನೆಗಳಿಗೆ ನಿಕಟ ಮೇಲ್ವಿಚಾರಣೆ, ಸ್ವಯಂ ಸೇವಕರ ಫಾಲೋಅಪ್ ತನಿಖಾ ವರದಿಯನ್ನು ಸಂಪೂರ್ಣವಾಗಿ ಪರಿಶೀಲಿಸಿ ಬಳಿಕ ಮುಂದಿನ ಕ್ರಮ ಅನುಸರಿಸಬೇಕು ಎಂಬಿತ್ಯಾದಿ ಅಂಶಗಳು ಸೇರಿದಂತೆ ಹಲವು ಷರತ್ತುಗಳನ್ನು ಸೆರಮ್ ಇನ್ಸ್ಟಿಟ್ಯೂಟ್ ಆಫ್ ಇಂಡಿಯಾಗೆ(SII) ವಿಧಿಸಲಾಗಿದೆ.

ಪ್ರತಿಕೂಲ ಘಟನೆಗಳ ನಿರ್ವಹಣೆಗೆ ಪ್ರೋಟೋಕಾಲ್‌ಗೆ ಅನುಗುಣವಾಗಿ ಬಳಸುವ ಔಷಧಿಗಳ ಬಗ್ಗೆ DCGI ಕಚೇರಿಗೆ ವಿವರಗಳನ್ನು ಸಲ್ಲಿಸಲು SIIಗೆ ಸೂಚಿಸಲಾಗಿದೆ ಎಂದು ನ್ಯಾಷನಲ್ ಹೆರಾಲ್ಡ್ ವರದಿ ಮಾಡಿದೆ.

ಸೆಪ್ಟೆಂಬರ್ 11 ರಂದು, ಸೆರೆಮ್ ಇನ್ಸ್ ಟಿಟ್ಯೂಟ್ ಆಫ್ ಇಂಡಿಯಾ ತನ್ನ ಆಕ್ಸ್ ಫರ್ಡ್ ಲಸಿಕೆಯ 2 ಮತ್ತು ಮೂರನೇ ಹಂತದ ಪ್ರಯೋಗಕ್ಕೆ ಸ್ವಯಂ ಸೇವಕರ ನೇಮಕಾತಿಗೆ ಮುಂದಾಗಿತ್ತು. ಆದರೆ ಆಸ್ಟ್ರಾ ಜೆನಿಕಾ ಘಟನೆ ಬಳಿಕ ಲಸಿಕೆ ಪ್ರಯೋಗ ಸಂಬಂಧ ಹೊಸ ನೇಮಕಾತಿ (ಸ್ವಯಂ ಸೇವಕರು) ಮಾಡಿಕೊಳ್ಳದಂತೆ ಸೆರೆಮ್ ಇನ್ಸ್ ಟಿಟ್ಯೂಟ್ ಆಫ್ ಇಂಡಿಯಾಗೆ ಡಿಸಿಜಿಐ ಸೂಚನೆ ನೀಡಿತ್ತು.

ಇದನ್ನೂ ಓದಿ: ಕಂಗನಾಗೆ ಬೆಂಬಲ ನೀಡಲು ಮುಂಬೈಗೆ ಆಗಮಿಸಿತೆ ಕರ್ಣಿಸೇನಾ!: ಸತ್ಯಾಸತ್ಯತೆ ಏನು..?

ಶನಿವಾರ, ಪ್ರಯೋಗಗಳು ಸುರಕ್ಷಿತವೆಂದು ಔಷಧಿ ಆರೋಗ್ಯ ನಿಯಂತ್ರಣ ಪ್ರಾಧಿಕಾರದ (MHRA) ದೃಢಪಡಿಸಿದ ನಂತರ, ಅಸ್ಟ್ರಾಜೆನೆಕಾ ಮತ್ತು ಆಕ್ಸ್‌ಫರ್ಡ್ ವಿಶ್ವವಿದ್ಯಾಲಯವು, ‘ತಮ್ಮ ಕೊರೊನಾ ವೈರಸ್ ಲಸಿಕೆಗಾಗಿ ಕ್ಲಿನಿಕಲ್ ಪ್ರಯೋಗಗಳು ಯುಕೆಯಲ್ಲಿ ಪುನರಾರಂಭಗೊಂಡಿವೆ’ ಎಂದು ಹೇಳಿದೆ.

ಕೊರೊನಾಗಾಗಿ ಲಸಿಕೆ ಅಭ್ಯರ್ಥಿಯನ್ನು ತಯಾರಿಸಲು ಅಸ್ಟ್ರಾಜೆನೆಕಾ ಜೊತೆ ಪಾಲುದಾರಿಕೆ ಹೊಂದಿರುವ SII, ಯುಕೆ ಮತ್ತು ಭಾರತ ಮತ್ತು ಡೇಟಾ ಮತ್ತು ಸುರಕ್ಷತಾ ಮಾನಿಟರಿಂಗ್ ಬೋರ್ಡ್ (DSMB), ಮತ್ತು ಭಾರತದ DSMB ಶಿಫಾರಸುಗಳನ್ನು ಮಂಗಳವಾರ ಸಲ್ಲಿಸಿ, ಕ್ಲಿನಿಕಲ್ ಪ್ರಯೋಗದಲ್ಲಿ ದಾಖಲಾತಿಯನ್ನು ಮರುಪ್ರಾರಂಭಿಸಲು ಅನುಮತಿ ಕೋರಿತ್ತು.

ಮಂಗಳವಾರ DCGI ಹೊರಡಿಸಿದ ಆದೇಶದ ಪ್ರಕಾರ, ಯುಕೆ ಯ DSMB, ಕೆಲವು ಷರತ್ತುಗಳಿಗೆ ಒಳಪಟ್ಟು ತನಿಖಾಧಿಕಾರಿಗಳು ತಮ್ಮ ಕ್ಲಿನಿಕಲ್ ಪ್ರಯೋಗಗಳಲ್ಲಿ ಎಲ್ಲಾ ರೋಗನಿರೋಧಕವನ್ನು ಪುನಃ ಪ್ರಾರಂಭಿಸುವಂತೆ ಶಿಫಾರಸು ಮಾಡಿದ್ದಾರೆ ಎಂದು ಹೇಳಿದೆ.

ಭಾರತದ DSMB, ಕೆಲವು ಷರತ್ತುಗಳಿಗೆ ಒಳಪಟ್ಟು ಪ್ರೋಟೋಕಾಲ್ ಪ್ರಕಾರ ಅಧ್ಯಯನವನ್ನು ಮುಂದುವರಿಸಲು ಮತ್ತು ಉಳಿದ ಭಾಗವಹಿಸುವವರನ್ನು ಕ್ಲಿನಿಕಲ್ ಪ್ರಯೋಗದಲ್ಲಿ ದಾಖಲಿಸಲು ಶಿಫಾರಸು ಮಾಡಿದೆ.

ಇದನ್ನೂ ಓದಿ: ಸುಶಾಂತ್ ಸಿಂಗ್ ಪ್ರಕರಣ: ಕೇಂದ್ರಕ್ಕೆ ಬಾಂಬೆ ಹೈಕೋರ್ಟ್ ನೋಟಿಸ್

ಪುಣೆ ಮೂಲದ ಸಂಸ್ಥೆಯು ಮೊದಲ ವ್ಯಾಕ್ಸಿನೇಷನ್ ನಂತರದ ಏಳು ದಿನಗಳ ಸುರಕ್ಷತೆಯ ಅನುಸರಣೆಯ ಸಾರಾಂಶವನ್ನು ಸಲ್ಲಿಸಿದೆ. ವರದಿಯ ದಿನಾಂಕದವರೆಗೆ ಯಾವುದೇ ಘಟಕಗಳಿಂದ ಯಾವುದೇ ಗಂಭೀರ ಪ್ರತಿಕೂಲ ಘಟನೆಗಳು ಸಂಭವಿಸಿಲ್ಲ ಎಂದು ವರದಿಯಲ್ಲಿ ಹೇಳಲಾಗಿದೆ.

ಮೇಲಿನದನ್ನು ಗಮನದಲ್ಲಿಟ್ಟುಕೊಂಡು, ಕೇಂದ್ರ ಪರವಾನಗಿ ಪ್ರಾಧಿಕಾರದ ಡ್ರಗ್ಸ್ ಕಂಟ್ರೋಲರ್ ಜನರಲ್ ಆಫ್ ಇಂಡಿಯಾ (DCGI) ಡಾ. ವಿ.ಜಿ.ಸೋಮಾನಿ, “ಭಾರತ ಮತ್ತು ಯುಕೆ ಯಲ್ಲಿ DSMBಯ ಶಿಫಾರಸುಗಳನ್ನು ಪರಿಶೀಲಿಸಿದ ನಂತರ, ಹೊಸ ಔಷಧಗಳು ಮತ್ತು ಕ್ಲಿನಿಕಲ್ ಪ್ರಯೋಗಗಳ ನಿಯಮಗಳು, 2019ರ ನಿಯಮ 30 ರ ಅಡಿಯಲ್ಲಿ ಹೊರಡಿಸಲಾದ ಸೆಪ್ಟೆಂಬರ್ 11 ರ ಆದೇಶವನ್ನು ಹಿಂತೆಗೆದುಕೊಳ್ಳಲಾಗಿದೆ” ಎಂದು ಹೇಳಿದ್ದಾರೆ.

“ಈಗಾಗಲೇ ಅನುಮೋದಿತ ಪ್ರೋಟೋಕಾಲ್ ಮತ್ತು ಹೊಸ ಔಷಧಗಳು ಮತ್ತು ಕ್ಲಿನಿಕಲ್ ಟ್ರಯಲ್ ರೂಲ್ಸ್, 2019 ರ ಅಡಿಯಲ್ಲಿ ತಿಳಿಸಲಾದ ಷರತ್ತುಗಳಿಗೆ ಅನುಗುಣವಾಗಿ ಭಾರತದ DSMB ಶಿಫಾರಸು ಮಾಡಿದಂತೆ, ನೀವು ಕ್ಲಿನಿಕಲ್ ಪ್ರಯೋಗವನ್ನು ಪುನಃ ಪ್ರಾರಂಭಿಸಬಹುದು” ಎಂದು ಆದೇಶದಲ್ಲಿ ತಿಳಿಸಲಾಗಿದೆ.


ಇದನ್ನೂ ಓದಿ: ಕೊರೊನಾ ಲಸಿಕೆ ಪ್ರಯೋಗ ನಿಲ್ಲಿಸಿದ ಅಸ್ಟ್ರಾಜೆನೆಕಾ ಕಂಪನಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...