Homeಅಂತರಾಷ್ಟ್ರೀಯಕೊರೊನಾ ಲಸಿಕೆಯ ಕ್ಲಿನಿಕಲ್ ಪ್ರಯೋಗದ ಪುನರಾರಂಭ: ಅನುಮತಿ ನೀಡಿದ ಡ್ರಗ್ಸ್ ಕಂಟ್ರೋಲರ್ ಜನರಲ್ ಆಫ್ ಇಂಡಿಯಾ

ಕೊರೊನಾ ಲಸಿಕೆಯ ಕ್ಲಿನಿಕಲ್ ಪ್ರಯೋಗದ ಪುನರಾರಂಭ: ಅನುಮತಿ ನೀಡಿದ ಡ್ರಗ್ಸ್ ಕಂಟ್ರೋಲರ್ ಜನರಲ್ ಆಫ್ ಇಂಡಿಯಾ

ಭಾರತ ಮತ್ತು ಯುಕೆ ಯಲ್ಲಿ DSMBಯ ಶಿಫಾರಸುಗಳನ್ನು ಪರಿಶೀಲಿಸಿದ ನಂತರ, ಹೊಸ ಔಷಧಗಳು ಮತ್ತು ಕ್ಲಿನಿಕಲ್ ಪ್ರಯೋಗಗಳ ನಿಯಮಗಳು, 2019ರ ನಿಯಮ 30 ರ ಅಡಿಯಲ್ಲಿ ಹೊರಡಿಸಲಾದ ಸೆಪ್ಟೆಂಬರ್ 11 ರ ಆದೇಶವನ್ನು ಹಿಂತೆಗೆದುಕೊಳ್ಳಲಾಗಿದೆ

- Advertisement -
- Advertisement -

ಆಕ್ಸ್‌ಫರ್ಡ್ ಕೊರೊನಾ ಲಸಿಕೆ ಕ್ಲಿನಿಕಲ್ ಪ್ರಯೋಗವನ್ನು ಪುನರಾರಂಭಿಸಲು ಅನುಮತಿ ನೀಡಿ, ಸೆರಮ್ ಇನ್‌ಸ್ಟಿಟ್ಯೂಟ್ ಆಫ್ ಇಂಡಿಯಾಕ್ಕೆ ಈ ಹಿಂದೆ ನೀಡಿದ್ದ ತಡೆಯ ಆದೇಶವನ್ನು ಡ್ರಗ್ಸ್ ಕಂಟ್ರೋಲರ್ ಜನರಲ್ ಆಫ್ ಇಂಡಿಯಾ (DCGI) ಡಾ. ವಿ.ಜಿ.ಸೋಮಾನಿ ಮಂಗಳವಾರ ಹಿಂಪಡೆಡಿದ್ದಾರೆ.

ಆದರೆ ಈ ಅನುಮತಿಗೂ DCGI ಹಲವು ಷರತ್ತುಗಳನ್ನು ವಿಧಿಸಿದ್ದು, ಸ್ಕ್ರೀನಿಂಗ್ ಸಮಯದಲ್ಲಿ ಸ್ವಯಂಸೇವಕರ ಹೆಚ್ಚಿನ ಕಾಳಜಿ ವಹಿಸುವುದು, ಸ್ವಯಂಸೇವಕರೊಂದಿಗೆ ಒಪ್ಪಿಗೆ ಪ್ರಮಾಣ ಪತ್ರದಲ್ಲಿ ಪ್ರಯೋಗದ ಕುರಿತು ಹೆಚ್ಚಿನ ಮಾಹಿತಿ ನೀಡುವುದು, ಪ್ರತಿಕೂಲ ಘಟನೆಗಳಿಗೆ ನಿಕಟ ಮೇಲ್ವಿಚಾರಣೆ, ಸ್ವಯಂ ಸೇವಕರ ಫಾಲೋಅಪ್ ತನಿಖಾ ವರದಿಯನ್ನು ಸಂಪೂರ್ಣವಾಗಿ ಪರಿಶೀಲಿಸಿ ಬಳಿಕ ಮುಂದಿನ ಕ್ರಮ ಅನುಸರಿಸಬೇಕು ಎಂಬಿತ್ಯಾದಿ ಅಂಶಗಳು ಸೇರಿದಂತೆ ಹಲವು ಷರತ್ತುಗಳನ್ನು ಸೆರಮ್ ಇನ್ಸ್ಟಿಟ್ಯೂಟ್ ಆಫ್ ಇಂಡಿಯಾಗೆ(SII) ವಿಧಿಸಲಾಗಿದೆ.

ಪ್ರತಿಕೂಲ ಘಟನೆಗಳ ನಿರ್ವಹಣೆಗೆ ಪ್ರೋಟೋಕಾಲ್‌ಗೆ ಅನುಗುಣವಾಗಿ ಬಳಸುವ ಔಷಧಿಗಳ ಬಗ್ಗೆ DCGI ಕಚೇರಿಗೆ ವಿವರಗಳನ್ನು ಸಲ್ಲಿಸಲು SIIಗೆ ಸೂಚಿಸಲಾಗಿದೆ ಎಂದು ನ್ಯಾಷನಲ್ ಹೆರಾಲ್ಡ್ ವರದಿ ಮಾಡಿದೆ.

ಸೆಪ್ಟೆಂಬರ್ 11 ರಂದು, ಸೆರೆಮ್ ಇನ್ಸ್ ಟಿಟ್ಯೂಟ್ ಆಫ್ ಇಂಡಿಯಾ ತನ್ನ ಆಕ್ಸ್ ಫರ್ಡ್ ಲಸಿಕೆಯ 2 ಮತ್ತು ಮೂರನೇ ಹಂತದ ಪ್ರಯೋಗಕ್ಕೆ ಸ್ವಯಂ ಸೇವಕರ ನೇಮಕಾತಿಗೆ ಮುಂದಾಗಿತ್ತು. ಆದರೆ ಆಸ್ಟ್ರಾ ಜೆನಿಕಾ ಘಟನೆ ಬಳಿಕ ಲಸಿಕೆ ಪ್ರಯೋಗ ಸಂಬಂಧ ಹೊಸ ನೇಮಕಾತಿ (ಸ್ವಯಂ ಸೇವಕರು) ಮಾಡಿಕೊಳ್ಳದಂತೆ ಸೆರೆಮ್ ಇನ್ಸ್ ಟಿಟ್ಯೂಟ್ ಆಫ್ ಇಂಡಿಯಾಗೆ ಡಿಸಿಜಿಐ ಸೂಚನೆ ನೀಡಿತ್ತು.

ಇದನ್ನೂ ಓದಿ: ಕಂಗನಾಗೆ ಬೆಂಬಲ ನೀಡಲು ಮುಂಬೈಗೆ ಆಗಮಿಸಿತೆ ಕರ್ಣಿಸೇನಾ!: ಸತ್ಯಾಸತ್ಯತೆ ಏನು..?

ಶನಿವಾರ, ಪ್ರಯೋಗಗಳು ಸುರಕ್ಷಿತವೆಂದು ಔಷಧಿ ಆರೋಗ್ಯ ನಿಯಂತ್ರಣ ಪ್ರಾಧಿಕಾರದ (MHRA) ದೃಢಪಡಿಸಿದ ನಂತರ, ಅಸ್ಟ್ರಾಜೆನೆಕಾ ಮತ್ತು ಆಕ್ಸ್‌ಫರ್ಡ್ ವಿಶ್ವವಿದ್ಯಾಲಯವು, ‘ತಮ್ಮ ಕೊರೊನಾ ವೈರಸ್ ಲಸಿಕೆಗಾಗಿ ಕ್ಲಿನಿಕಲ್ ಪ್ರಯೋಗಗಳು ಯುಕೆಯಲ್ಲಿ ಪುನರಾರಂಭಗೊಂಡಿವೆ’ ಎಂದು ಹೇಳಿದೆ.

ಕೊರೊನಾಗಾಗಿ ಲಸಿಕೆ ಅಭ್ಯರ್ಥಿಯನ್ನು ತಯಾರಿಸಲು ಅಸ್ಟ್ರಾಜೆನೆಕಾ ಜೊತೆ ಪಾಲುದಾರಿಕೆ ಹೊಂದಿರುವ SII, ಯುಕೆ ಮತ್ತು ಭಾರತ ಮತ್ತು ಡೇಟಾ ಮತ್ತು ಸುರಕ್ಷತಾ ಮಾನಿಟರಿಂಗ್ ಬೋರ್ಡ್ (DSMB), ಮತ್ತು ಭಾರತದ DSMB ಶಿಫಾರಸುಗಳನ್ನು ಮಂಗಳವಾರ ಸಲ್ಲಿಸಿ, ಕ್ಲಿನಿಕಲ್ ಪ್ರಯೋಗದಲ್ಲಿ ದಾಖಲಾತಿಯನ್ನು ಮರುಪ್ರಾರಂಭಿಸಲು ಅನುಮತಿ ಕೋರಿತ್ತು.

ಮಂಗಳವಾರ DCGI ಹೊರಡಿಸಿದ ಆದೇಶದ ಪ್ರಕಾರ, ಯುಕೆ ಯ DSMB, ಕೆಲವು ಷರತ್ತುಗಳಿಗೆ ಒಳಪಟ್ಟು ತನಿಖಾಧಿಕಾರಿಗಳು ತಮ್ಮ ಕ್ಲಿನಿಕಲ್ ಪ್ರಯೋಗಗಳಲ್ಲಿ ಎಲ್ಲಾ ರೋಗನಿರೋಧಕವನ್ನು ಪುನಃ ಪ್ರಾರಂಭಿಸುವಂತೆ ಶಿಫಾರಸು ಮಾಡಿದ್ದಾರೆ ಎಂದು ಹೇಳಿದೆ.

ಭಾರತದ DSMB, ಕೆಲವು ಷರತ್ತುಗಳಿಗೆ ಒಳಪಟ್ಟು ಪ್ರೋಟೋಕಾಲ್ ಪ್ರಕಾರ ಅಧ್ಯಯನವನ್ನು ಮುಂದುವರಿಸಲು ಮತ್ತು ಉಳಿದ ಭಾಗವಹಿಸುವವರನ್ನು ಕ್ಲಿನಿಕಲ್ ಪ್ರಯೋಗದಲ್ಲಿ ದಾಖಲಿಸಲು ಶಿಫಾರಸು ಮಾಡಿದೆ.

ಇದನ್ನೂ ಓದಿ: ಸುಶಾಂತ್ ಸಿಂಗ್ ಪ್ರಕರಣ: ಕೇಂದ್ರಕ್ಕೆ ಬಾಂಬೆ ಹೈಕೋರ್ಟ್ ನೋಟಿಸ್

ಪುಣೆ ಮೂಲದ ಸಂಸ್ಥೆಯು ಮೊದಲ ವ್ಯಾಕ್ಸಿನೇಷನ್ ನಂತರದ ಏಳು ದಿನಗಳ ಸುರಕ್ಷತೆಯ ಅನುಸರಣೆಯ ಸಾರಾಂಶವನ್ನು ಸಲ್ಲಿಸಿದೆ. ವರದಿಯ ದಿನಾಂಕದವರೆಗೆ ಯಾವುದೇ ಘಟಕಗಳಿಂದ ಯಾವುದೇ ಗಂಭೀರ ಪ್ರತಿಕೂಲ ಘಟನೆಗಳು ಸಂಭವಿಸಿಲ್ಲ ಎಂದು ವರದಿಯಲ್ಲಿ ಹೇಳಲಾಗಿದೆ.

ಮೇಲಿನದನ್ನು ಗಮನದಲ್ಲಿಟ್ಟುಕೊಂಡು, ಕೇಂದ್ರ ಪರವಾನಗಿ ಪ್ರಾಧಿಕಾರದ ಡ್ರಗ್ಸ್ ಕಂಟ್ರೋಲರ್ ಜನರಲ್ ಆಫ್ ಇಂಡಿಯಾ (DCGI) ಡಾ. ವಿ.ಜಿ.ಸೋಮಾನಿ, “ಭಾರತ ಮತ್ತು ಯುಕೆ ಯಲ್ಲಿ DSMBಯ ಶಿಫಾರಸುಗಳನ್ನು ಪರಿಶೀಲಿಸಿದ ನಂತರ, ಹೊಸ ಔಷಧಗಳು ಮತ್ತು ಕ್ಲಿನಿಕಲ್ ಪ್ರಯೋಗಗಳ ನಿಯಮಗಳು, 2019ರ ನಿಯಮ 30 ರ ಅಡಿಯಲ್ಲಿ ಹೊರಡಿಸಲಾದ ಸೆಪ್ಟೆಂಬರ್ 11 ರ ಆದೇಶವನ್ನು ಹಿಂತೆಗೆದುಕೊಳ್ಳಲಾಗಿದೆ” ಎಂದು ಹೇಳಿದ್ದಾರೆ.

“ಈಗಾಗಲೇ ಅನುಮೋದಿತ ಪ್ರೋಟೋಕಾಲ್ ಮತ್ತು ಹೊಸ ಔಷಧಗಳು ಮತ್ತು ಕ್ಲಿನಿಕಲ್ ಟ್ರಯಲ್ ರೂಲ್ಸ್, 2019 ರ ಅಡಿಯಲ್ಲಿ ತಿಳಿಸಲಾದ ಷರತ್ತುಗಳಿಗೆ ಅನುಗುಣವಾಗಿ ಭಾರತದ DSMB ಶಿಫಾರಸು ಮಾಡಿದಂತೆ, ನೀವು ಕ್ಲಿನಿಕಲ್ ಪ್ರಯೋಗವನ್ನು ಪುನಃ ಪ್ರಾರಂಭಿಸಬಹುದು” ಎಂದು ಆದೇಶದಲ್ಲಿ ತಿಳಿಸಲಾಗಿದೆ.


ಇದನ್ನೂ ಓದಿ: ಕೊರೊನಾ ಲಸಿಕೆ ಪ್ರಯೋಗ ನಿಲ್ಲಿಸಿದ ಅಸ್ಟ್ರಾಜೆನೆಕಾ ಕಂಪನಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಜೆಪಿ ತೊರೆದು ಪ್ರಾದೇಶಿಕ ಪಕ್ಷದತ್ತ ಅಣ್ಣಾಮಲೈ : ದ್ರಾವಿಡ ಮಣ್ಣಿನಲ್ಲಿ ವಿಫಲವಾದ ಹಿಂದುತ್ವ ರಾಜಕೀಯ

ಮಾಜಿ ಐಪಿಎಸ್‌ ಅಧಿಕಾರಿ ಹಾಗೂ ಬಿಜೆಪಿ ತಮಿಳುನಾಡು ರಾಜ್ಯ ಘಟಕದ ಮಾಜಿ ಅಧ್ಯಕ್ಷ ಕೆ. ಅಣ್ಣಾಮಲೈ ಬಿಜೆಪಿ ತೊರೆದಿದ್ದು, ಹೊಸ ಪ್ರಾದೇಶಿಕ ಪಕ್ಷ ಕಟ್ಟಲು ಮುಂದಾಗಿದ್ದಾರೆ ಎಂದು ವರದಿಯಾಗಿದೆ. ಮಂಗಳವಾರ...

45 ಲೀಟರ್ ಟ್ಯಾಂಕಿಗೆ 52 ಲೀಟರ್ ಬಿಲ್ ಕೊಟ್ಟ ಚತುರ ಕಳ್ಳರು: ಕಾನ್ಪುರದಲ್ಲಿ ಪೆಟ್ರೋಲ್ ಬಂಕ್ ವಂಚನೆ ಪತ್ತೆ

ಉತ್ತರ ಪ್ರದೇಶದ ಕಾನ್ಪುರದಲ್ಲಿ ಹೊಸ ಕಾರು ಖರೀದಿಸಿದ ಮಾಲೀಕರೊಬ್ಬರು ಸ್ಥಳೀಯ ಪೆಟ್ರೋಲ್ ಬಂಕ್‌ಗೆ ಹೋದಾಗ ಅವರಿಗೆ ಒಂದು ಶಾಕಿಂಗ್ ಅನುಭವವಾಗಿದೆ. ಅವರ ಕಾರಿನ ಗರಿಷ್ಠ ಇಂಧನ ಟ್ಯಾಂಕ್ ಸಾಮರ್ಥ್ಯ ಕೇವಲ 45 ಲೀಟರ್...

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...