Homeದಲಿತ್ ಫೈಲ್ಸ್ದಲಿತ ಮಕ್ಕಳ ಮೇಲೆ ಮುಂದುವರಿದ ದೌರ್ಜನ್ಯ: ಪ್ರಕರಣ 1, 2, 3, 4

ದಲಿತ ಮಕ್ಕಳ ಮೇಲೆ ಮುಂದುವರಿದ ದೌರ್ಜನ್ಯ: ಪ್ರಕರಣ 1, 2, 3, 4

- Advertisement -
- Advertisement -

ದಲಿತ ಮಕ್ಕಳ ಮೇಲೆ ದೌರ್ಜನ್ಯಗಳು ಹೆಚ್ಚಾಗುತ್ತಿದ್ದು, ಇತ್ತೀಚಿನ ದಿನಗಳಲ್ಲಿ ನಾಲ್ಕು ಪ್ರಮುಖ ಘಟನೆಗಳು ವರದಿಯಾಗಿವೆ. ಉತ್ತರಪ್ರದೇಶ, ರಾಜಸ್ಥಾನ, ಮಧ್ಯಪ್ರದೇಶ ರಾಜ್ಯಗಳಲ್ಲಿ ವರದಿಯಾಗಿರುವ ನಾಲ್ಕು ಪ್ರಕರಣಗಳ ವಿವರ ಇಲ್ಲಿದೆ.

ಪ್ರಕರಣ-1| ಯುಪಿ: ದಲಿತ ಬಾಲಕಿಯ ಮೇಲೆ ಬಿಸಿಯೂಟ ಎರಚಿದ ಶಿಕ್ಷಕ

ಪ್ರಕರಣ-2| ರಾಜಸ್ಥಾನ: ದಲಿತ ಬಾಲಕನ ಶವ ಗಣಿಗಾರಿಕೆಯ ಹೊಂಡದಲ್ಲಿ ಪತ್ತೆ

ಪ್ರಕರಣ-3| ಮಧ್ಯಪ್ರದೇಶ: ದಲಿತ ಬಾಲಕನನ್ನು ಥಳಿಸಿದ ಜೈನ ಪಂಡಿತ

ಪ್ರಕರಣ-4| ಮಧ್ಯಪ್ರದೇಶ: ಅತ್ಯಾಚಾರಕ್ಕೆ ಒಳಗಾದ ದಲಿತ ಬಾಲಕಿಗೆ ಕಿರುಕುಳ; ಮೂವರು ಪೊಲೀಸ್ ಅಧಿಕಾರಿಗಳ ಅಮಾನತು

*****

ಪ್ರಕರಣ- 1

ಯುಪಿ: ದಲಿತ ಬಾಲಕಿಯ ಮೇಲೆ ಬಿಸಿಯೂಟ ಎರಚಿದ ಶಿಕ್ಷಕ

ಲಖನೌ: ಬಾರಾಬಂಕಿಯ ಟಿಕೈಟ್‌ನಗರದ ಇಚೋಲಿ ಗ್ರಾಮದಲ್ಲಿ 2ನೇ ತರಗತಿಯ ದಲಿತ ವಿದ್ಯಾರ್ಥಿನಿಯ ಮೇಲೆ ಬಿಸಿಯೂಟವನ್ನು ಶಾಲೆಯ ಪ್ರಾಂಶುಪಾಲ ಎಸೆದಿರುವ ಘಟನೆ ನಡೆದಿದೆ.

ಮಗುವಿನ ಮಣಿಕಟ್ಟು ಮತ್ತು ಕೈಗೆ ತೀವ್ರ ಸುಟ್ಟ ಗಾಯಗಳಾಗಿವೆ ಎಂಬ ಆರೋಪದ ಬಗ್ಗೆ ತನಿಖೆಗೆ ಆದೇಶಿಸಲಾಗಿದೆ.

ಬಾರಾಬಂಕಿಯ ಜಿಲ್ಲಾ ಮ್ಯಾಜಿಸ್ಟ್ರೇಟ್ ಆದರ್ಶ್ ಸಿಂಗ್ ಅವರು ತನಿಖೆಗೆ ಆದೇಶಿಸಿದ್ದಾರೆ. ವಿಕಲಚೇತನ ಬಾಲಕಿ ಈ ವಿಷಯವನ್ನು ಅಧಿಕಾರಿಗಳಿಗೆ ತಿಳಿಸಿದ್ದು, ನಂತರ ಜಿಲ್ಲಾಧಿಕಾರಿಯವರು ಬಾರಾಬಂಕಿಯ ಮೂಲ ಶಿಕ್ಷಾ ಅಧಿಕಾರಿ (ಬಿಎಸ್‌ಎ) ಸಂತೋಷ್ ಪಾಂಡೆ ಅವರಿಗೆ ಸೂಚನೆ ನೀಡಿ ತನಿಖೆ ನಡೆಸುವಂತೆ ಆದೇಶಿಸಿದ್ದಾರೆ.

ಬಾರಾಬಂಕಿಯ ಹೆಚ್ಚುವರಿ ಎಸ್ಪಿ ಪೂರ್ಣೇಂದು ಸಿಂಗ್ ಪ್ರತಿಕ್ರಿಯಿಸಿದ್ದು, ಬಿಎಸ್ಎ ಸಿದ್ಧಪಡಿಸಿದ ವರದಿ ಮತ್ತು ಜಿಲ್ಲಾ ಮ್ಯಾಜಿಸ್ಟ್ರೇಟ್‌ ನಿರ್ದೇಶನದ ಮೇರೆಗೆ ಪೊಲೀಸರು ಕಾರ್ಯನಿರ್ವಹಿಸುತ್ತಾರೆ ಎಂದಿದ್ದಾರೆ.

ಆಗಸ್ಟ್ 29 ರಂದು ಈ ಘಟನೆ ನಡೆದಿದೆ ಎಂದು ತನಿಖೆ ನಡೆಸುತ್ತಿರುವ ಬಿಎಸ್‌ಎ ಸಂತೋಷ್ ಪಾಂಡೆ ತಿಳಿಸಿದ್ದಾರೆ.

“ನಾವು ಊಟದ ಸಮಯದಲ್ಲಿದ್ದ 800 ವಿದ್ಯಾರ್ಥಿಗಳ ಹೇಳಿಕೆಗಳನ್ನು ತೆಗೆದುಕೊಂಡಿದ್ದೇವೆ. ಅದರ ವಿವರವಾದ ವರದಿಯನ್ನು ಮ್ಯಾಜಿಸ್ಟ್ರೇಟ್‌ಗೆ ಹಸ್ತಾಂತರಿಸಲಾಗುವುದು” ಎಂದು ಪಾಂಡೆ ಹೇಳಿದರು.

ಸೆಪ್ಟೆಂಬರ್ 3 ರಂದು ಮಹಿಳೆಯೊಬ್ಬರು ದೂರು ನೀಡಿದ್ದು, “ಮಧ್ಯಾಹ್ನದ ಊಟವನ್ನು ಬಡಿಸುವಾಗ ಸರ್ಕಾರಿ ಶಾಲೆಯ ಪ್ರಾಂಶುಪಾಲರು ನನ್ನ ಮಗಳ ಕೈಗಳನ್ನು ಸುಟ್ಟುಹಾಕಿದ್ದಾರೆ” ಎಂದು ಆರೋಪಿಸಿದ್ದಾರೆ.

***

ಪ್ರಕರಣ- 2

ರಾಜಸ್ಥಾನ: ದಲಿತ ಬಾಲಕನ ಶವ ಗಣಿಗಾರಿಕೆಯ ಹೊಂಡದಲ್ಲಿ ಪತ್ತೆ

17 ವರ್ಷದ ದಲಿತ ಬಾಲಕ ನಾಪತ್ತೆಯಾದ ಒಂದು ದಿನದ ನಂತರ ಶವವಾಗಿ ಸಿಕ್ಕಿದ್ದಾನೆ. ರಾಜಸ್ಥಾನದ ಅಜ್ಮೀರ್ ಜಿಲ್ಲೆಯಲ್ಲಿ ಮಳೆ ನೀರಿನಿಂದ ತುಂಬಿದ ಗಣಿಗಾರಿಕೆಯ ಹೊಂಡದಲ್ಲಿ ಆತನ ಶವ ಸೆಪ್ಟೆಂಬರ್ 9ರಂದು ಪತ್ತೆಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಶವವಾಗಿ ಪತ್ತೆಯಾಗಿರುವ ಬಾಲಕನ ಸಹಪಾಠಿಯ ತಂದೆ ಶಾಲಾ ಅಧಿಕಾರಿಗಳಿಗೆ ದೂರು ನೀಡಿದ್ದರು ಎಂದು ತಿಳಿದುಬಂದಿದೆ. ತನ್ನ ಮಗಳಿಗೆ ಈ ಹುಡುಗ ಕಿರುಕುಳ ನೀಡಿದ್ದಾನೆ ಎಂದು ಆರೋಪಿಸಿ ಶಾಲೆಗೆ ದೂರು ನೀಡಿದ ಬಳಿಕ ಈ ಘಟನೆಯಾಗಿದೆ.

ಶುಕ್ರವಾರ ಶವ ಪತ್ತೆಯಾದ ನಂತರ, ಕುಟುಂಬ ಸದಸ್ಯರು ಆತನ ಶವವನ್ನು ಶಾಲೆಯ ಹೊರಗೆ ಇಟ್ಟು ಪ್ರತಿಭಟನೆ ನಡೆಸಿದ್ದಾರೆ. ಈ ಬಾಲಕನಿಗೆ ಶಾಲಾ ಸಿಬ್ಬಂದಿ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಿದ್ದು ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ ಎಂದು ಸರ್ಕಲ್ ಆಫೀಸರ್, ಬೀವರ್ ಸುಮಿತ್ ಮೆಹ್ರೇದಾ ತಿಳಿಸಿದ್ದಾರೆ.

ಪೊಲೀಸರು ಪರಿಸ್ಥಿತಿಯನ್ನು ಹತೋಟಿಗೆ ತಂದಿದ್ದಾರೆ. ಮರಣೋತ್ತರ ಪರೀಕ್ಷೆ ಬಳಿಕ ಬಾಲಕನ ಶವವನ್ನು ಕುಟುಂಬ ಸದಸ್ಯರಿಗೆ ಹಸ್ತಾಂತರಿಸಲಾಗಿದೆ. ಈ ಬಗ್ಗೆ ತನಿಖೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

***

ಪ್ರಕರಣ- 3

ಮಧ್ಯಪ್ರದೇಶ: ದಲಿತ ಬಾಲಕನನ್ನು ಥಳಿಸಿದ ಜೈನ ಪಂಡಿತ

ಮಧ್ಯಪ್ರದೇಶದ ಸಾಗರ್‌ನಲ್ಲಿ ಜೈನ ದೇವಾಲಯದ ಪಂಡಿತರೊಬ್ಬರು 11 ವರ್ಷದ ದಲಿತ ಬಾಲಕನನ್ನು ಥಳಿಸಿರುವ ಘಟನೆ ನಡೆದಿದೆ.

ಟ್ವಿಟ್ಟರ್ ಬಳಕೆದಾರರು ಈ ಘಟನೆಯ ವೀಡಿಯೊವನ್ನು ಹಂಚಿಕೊಂಡಿದ್ದಾರೆ. ದಲಿತ ಬಾಲಕ ಸಾಗರದ ಜೈನ ದೇವಾಲಯದ ಹೊರಗೆ ನಿಂತಿದ್ದಾಗ ಕಳ್ಳತನದ ಆರೋಪ ಹೊರಿಸಲಾಗಿದೆ. ಪಂಡಿತ್ ರಾಜೇಶ್ ಜೈನ್ ಬಾಲಕನನ್ನು ಥಳಿಸಿ, ನಂತರ ಕಟ್ಟಿಹಾಕಿದ್ದಾರೆ. ಪೂಜೆಯ ತಟ್ಟೆಯಲ್ಲಿದ್ದ ಬಾದಾಮಿಯನ್ನು ತೆಗೆದು ಜೇಬಿನಲ್ಲಿ ಇಟ್ಟುಕೊಂಡಿದ್ದಾಗಿ ರಾಜೇಶ್ ಜೈನ್‌ ಆರೋಪಿಸಿದ್ದಾರೆ.

ನಗರದ ಮೋತಿ ನಗರ ಪೊಲೀಸ್ ಠಾಣೆಯಲ್ಲಿ ಎಸ್‌ಸಿ-ಎಸ್‌ಟಿ ದೌರ್ಜನ್ಯ ತಡೆ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ ಎಂದು ಮಾಧ್ಯಮಗಳು ವರದಿ ಮಾಡಿವೆ.

***

ಪ್ರಕರಣ- 4

ಮಧ್ಯಪ್ರದೇಶ: ಅತ್ಯಾಚಾರಕ್ಕೆ ಒಳಗಾದ ದಲಿತ ಬಾಲಕಿಗೆ ಕಿರುಕುಳ; ಮೂವರು ಪೊಲೀಸ್ ಅಧಿಕಾರಿಗಳ ಅಮಾನತು

ಮಧ್ಯಪ್ರದೇಶದ ಛತ್ತರ್‌ಪುರ ನಗರದಲ್ಲಿ 13 ವರ್ಷದ ದಲಿತ ಬಾಲಕಿಯನ್ನು ಇಡೀ ರಾತ್ರಿ ಪೊಲೀಸ್ ಠಾಣೆಯಲ್ಲಿ ಇರಿಸಿಕೊಂಡು ಥಳಿಸಿದ ಘಟನೆ ನಡೆದಿದೆ. ಆಗಸ್ಟ್ 30 ರಂದು ನಡೆದ ಘಟನೆಗೆ ಸಂಬಂಧಿಸಿದಂತೆ ಮೂವರು ಪೊಲೀಸ್ ಅಧಿಕಾರಿಗಳನ್ನು ಬುಧವಾರ ಅಮಾನತುಗೊಳಿಸಲಾಗಿದೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಬಾಲಕಿಯ ಮೇಲೆ ಅತ್ಯಾಚಾರವೆಸಗಿದ ಆರೋಪಿ ಬಾಬು ಖಾನ್ ಎಂಬಾತನನ್ನು ಭಾರತೀಯ ದಂಡ ಸಂಹಿತೆ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ (ದೌರ್ಜನ್ಯ ತಡೆ) ಕಾಯ್ದೆ ಹಾಗೂ ಪೋಕ್ಸೋ ಕಾಯ್ದೆಯ ಸಂಬಂಧಿತ ಸೆಕ್ಷನ್‌ಗಳ ಅಡಿಯಲ್ಲಿ ಸೆಪ್ಟೆಂಬರ್ 3 ರಂದು ಬಂಧಿಸಲಾಯಿತು ಎಂದು ಪೊಲೀಸರು ತಿಳಿಸಿದ್ದಾರೆ.

Dalit Teen Went To File Rape Case, Allegedly Detained Overnight, Beaten

ಅತ್ಯಾಚಾರ ಸಂತ್ರಸ್ತೆಯನ್ನು ಪೊಲೀಸ್ ಠಾಣೆಯಲ್ಲಿ ಇರಿಸಿದ್ದಕ್ಕಾಗಿ ನಗರ ಕೊತ್ವಾಲಿ ಪೊಲೀಸ್ ಠಾಣೆಯ ಗೃಹ ಅಧಿಕಾರಿ (ಎಸ್‌ಎಚ್‌ಒ) ಅನೂಪ್ ಯಾದವ್, ಸಬ್ ಇನ್‌ಸ್ಪೆಕ್ಟರ್ ಮೋಹಿನಿ ಶರ್ಮಾ ಮತ್ತು ಸಹಾಯಕ ಸಬ್ ಇನ್‌ಸ್ಪೆಕ್ಟರ್ ಗುರುದತ್ ಶೇಷಾ ಅವರನ್ನು ಅಮಾನತುಗೊಳಿಸಲಾಗಿದೆ ಎಂದು ಛತ್ತರ್‌ಪುರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಚಿನ್ ಶರ್ಮಾ ಗುರುವಾರ ಸುದ್ದಿಗಾರರಿಗೆ ತಿಳಿಸಿದ್ದಾರೆ.

ಬಾಲಕಿಯ ಮೇಲಿನ ಅತ್ಯಾಚಾರಕ್ಕೆ ಸಂಬಂಧಿಸಿದಂತೆ ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿಯಿಂದ (ಸಿಡಬ್ಲ್ಯುಸಿ) ದೂರು ಬಂದಿದ್ದು, ನಂತರ ಪ್ರಕರಣ ದಾಖಲಿಸಲಾಗಿದೆ ಎಂದು ಜಂಟಿ ಜಿಲ್ಲಾಧಿಕಾರಿ ಪ್ರತಾಪ್ ಸಿಂಗ್ ಚೌಹಾಣ್ ಮಾಹಿತಿ ನೀಡಿದ್ದಾರೆ.

ಬಾಲಕಿಯ ತಾಯಿಯ ಪ್ರಕಾರ, ಮಗಳು ಆಗಸ್ಟ್ 27 ರಂದು ಆಟವಾಡಲು ಮನೆಯಿಂದ ಹೊರಗೆ ಹೋಗಿದ್ದಳು. ಆದರೆ ಹಿಂತಿರುಗಲಿಲ್ಲ. ಆದ್ದರಿಂದ ಬಾಲಕಿಯ ತಂದೆ ಮರುದಿನ ಕೊತ್ವಾಲಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.

ಆಗಸ್ಟ್ 30 ರಂದು ಹಿಂತಿರುಗಿದ ಬಾಲಕಿ ತನ್ನ ಪೋಷಕರಿಗೆ ವಿಷಯ ತಿಳಿಸಿದ್ದಾಳೆ. ಬಾಬು ಖಾನ್ ಎಂಬಾತ ಬಲವಂತವಾಗಿ ಬಾಲಕಿಯನ್ನು ಎಳೆದೊಯ್ದು, ಅಲ್ಲಿಯೇ ಬಂಧಿಸಿ ಮೂರು ದಿನಗಳ ಕಾಲ ಅತ್ಯಾಚಾರವೆಸಗಿರುವ ಸಂಗತಿ ಹೊರಬಿದ್ದಿದೆ.

“ನಾವು ದೂರು ದಾಖಲಿಸಲು ಪೊಲೀಸ್ ಠಾಣೆಗೆ ಹೋಗಿದ್ದೆವು. ಇಬ್ಬರು ಪೊಲೀಸರು ನನ್ನ ಮಗಳ ಹೇಳಿಕೆಯನ್ನು ಬದಲಾಯಿಸುವಂತೆ ಒತ್ತಡ ಹೇರಿದರು.ಜೊತೆಗೆ ನನ್ನ ಮಗಳನ್ನು ಥಳಿಸಿದರು. ಮತ್ತೊಬ್ಬ ಪೊಲೀಸ್ ಅಧಿಕಾರಿ ನನ್ನನ್ನು ಹೊರಗೆ ಕರೆದೊಯ್ದರು. ಒಳಗೆ ನನ್ನ ಮಗಳಿಗೆ ಒದ್ದು ಬೆಲ್ಟ್‌ಗಳಿಂದ ಹೊಡೆದರು” ಎಂದು ಸಂತ್ರಸ್ತ ಹೆಣ್ಣುಮಗಳ ತಾಯಿ ಆರೋಪಿಸಿದ್ದಾರೆ.

ಆಗಸ್ಟ್ 31ರಂದು ಮತ್ತೆ ಪೊಲೀಸ್ ಠಾಣೆಗೆ ತೆರಳಿ ಕೇಸು ದಾಖಲಿಸುವಂತೆ ಇನ್ಸ್‌ಪೆಕ್ಟರ್ ಯಾದವ್ ಅವರಲ್ಲಿ ಕೇಳಿದಾಗಲೂ ಯಾವುದೇ ಸ್ಪಂದನೆ ದೊರಯಲಿಲ್ಲ ಎಂದು ಅವರು ದೂರಿದ್ದಾರೆ.

ಅಂತಿಮವಾಗಿ, ಸೆಪ್ಟೆಂಬರ್ 1 ರ ಸಂಜೆ ಪೊಲೀಸರು ಆರೋಪಿಯ ವಿರುದ್ಧ ಅತ್ಯಾಚಾರದ ಪ್ರಕರಣವನ್ನು ದಾಖಲಿಸಿದ್ದಾರೆ. ಆದರೆ ಅಪಹರಣದ ಆರೋಪವನ್ನು ಸೇರಿಸಿಲ್ಲ ಎನ್ನಲಾಗಿದೆ.

ಎಫ್‌ಐಆರ್‌ನಲ್ಲಿ ಬಾಲಕಿಯ ವಯಸ್ಸನ್ನು 17 ವರ್ಷ ಎಂದು ನಮೂದಿಸಲಾಗಿದ್ದು, ಅಪಹರಣದ ಆರೋಪವನ್ನು ಸೇರಿಸಿಲ್ಲ.

ಸಿಡಬ್ಲ್ಯೂಸಿ ಸದಸ್ಯ ಅಫ್ಸರ್ ಜಹಾನ್ ಮಾತನಾಡಿ, “ಪೊಲೀಸರು ಅಪರಾಧಿಯನ್ನು ರಕ್ಷಿಸಲು ಮತ್ತು ಸಂತ್ರಸ್ತ ಬಾಲಕಿಯ ಹೇಳಿಕೆಯನ್ನು ಬದಲಿಸಲು ಪ್ರಯತ್ನಿಸುತ್ತಿದ್ದಾರೆ” ಎಂದು ದೂರಿದ್ದಾರೆ.

ಮತ್ತೊಬ್ಬ ಸಿಡಬ್ಲ್ಯೂಸಿ ಸದಸ್ಯ ಸೌರಭ್ ಭಟ್ನಾಗರ್, “13ರ ಬದಲಿಗೆ 17 ವರ್ಷ ಎಂದು ಪೊಲೀಸರು ನಮೂದಿಸಿರುವ ಕುರಿತು ಮಕ್ಕಳ ಕಲ್ಯಾಣ ಸಮಿತಿಯು ಪೊಲೀಸರಿಂದ ಸ್ಪಷ್ಟನೆ ಕೇಳಿದೆ” ಎಂದು ಪ್ರತಿಕ್ರಿಯೆ ನೀಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...