Homeದಲಿತ್ ಫೈಲ್ಸ್ದಲಿತ ಮಕ್ಕಳ ಮೇಲೆ ಮುಂದುವರಿದ ದೌರ್ಜನ್ಯ: ಪ್ರಕರಣ 1, 2, 3, 4

ದಲಿತ ಮಕ್ಕಳ ಮೇಲೆ ಮುಂದುವರಿದ ದೌರ್ಜನ್ಯ: ಪ್ರಕರಣ 1, 2, 3, 4

- Advertisement -
- Advertisement -

ದಲಿತ ಮಕ್ಕಳ ಮೇಲೆ ದೌರ್ಜನ್ಯಗಳು ಹೆಚ್ಚಾಗುತ್ತಿದ್ದು, ಇತ್ತೀಚಿನ ದಿನಗಳಲ್ಲಿ ನಾಲ್ಕು ಪ್ರಮುಖ ಘಟನೆಗಳು ವರದಿಯಾಗಿವೆ. ಉತ್ತರಪ್ರದೇಶ, ರಾಜಸ್ಥಾನ, ಮಧ್ಯಪ್ರದೇಶ ರಾಜ್ಯಗಳಲ್ಲಿ ವರದಿಯಾಗಿರುವ ನಾಲ್ಕು ಪ್ರಕರಣಗಳ ವಿವರ ಇಲ್ಲಿದೆ.

ಪ್ರಕರಣ-1| ಯುಪಿ: ದಲಿತ ಬಾಲಕಿಯ ಮೇಲೆ ಬಿಸಿಯೂಟ ಎರಚಿದ ಶಿಕ್ಷಕ

ಪ್ರಕರಣ-2| ರಾಜಸ್ಥಾನ: ದಲಿತ ಬಾಲಕನ ಶವ ಗಣಿಗಾರಿಕೆಯ ಹೊಂಡದಲ್ಲಿ ಪತ್ತೆ

ಪ್ರಕರಣ-3| ಮಧ್ಯಪ್ರದೇಶ: ದಲಿತ ಬಾಲಕನನ್ನು ಥಳಿಸಿದ ಜೈನ ಪಂಡಿತ

ಪ್ರಕರಣ-4| ಮಧ್ಯಪ್ರದೇಶ: ಅತ್ಯಾಚಾರಕ್ಕೆ ಒಳಗಾದ ದಲಿತ ಬಾಲಕಿಗೆ ಕಿರುಕುಳ; ಮೂವರು ಪೊಲೀಸ್ ಅಧಿಕಾರಿಗಳ ಅಮಾನತು

*****

ಪ್ರಕರಣ- 1

ಯುಪಿ: ದಲಿತ ಬಾಲಕಿಯ ಮೇಲೆ ಬಿಸಿಯೂಟ ಎರಚಿದ ಶಿಕ್ಷಕ

ಲಖನೌ: ಬಾರಾಬಂಕಿಯ ಟಿಕೈಟ್‌ನಗರದ ಇಚೋಲಿ ಗ್ರಾಮದಲ್ಲಿ 2ನೇ ತರಗತಿಯ ದಲಿತ ವಿದ್ಯಾರ್ಥಿನಿಯ ಮೇಲೆ ಬಿಸಿಯೂಟವನ್ನು ಶಾಲೆಯ ಪ್ರಾಂಶುಪಾಲ ಎಸೆದಿರುವ ಘಟನೆ ನಡೆದಿದೆ.

ಮಗುವಿನ ಮಣಿಕಟ್ಟು ಮತ್ತು ಕೈಗೆ ತೀವ್ರ ಸುಟ್ಟ ಗಾಯಗಳಾಗಿವೆ ಎಂಬ ಆರೋಪದ ಬಗ್ಗೆ ತನಿಖೆಗೆ ಆದೇಶಿಸಲಾಗಿದೆ.

ಬಾರಾಬಂಕಿಯ ಜಿಲ್ಲಾ ಮ್ಯಾಜಿಸ್ಟ್ರೇಟ್ ಆದರ್ಶ್ ಸಿಂಗ್ ಅವರು ತನಿಖೆಗೆ ಆದೇಶಿಸಿದ್ದಾರೆ. ವಿಕಲಚೇತನ ಬಾಲಕಿ ಈ ವಿಷಯವನ್ನು ಅಧಿಕಾರಿಗಳಿಗೆ ತಿಳಿಸಿದ್ದು, ನಂತರ ಜಿಲ್ಲಾಧಿಕಾರಿಯವರು ಬಾರಾಬಂಕಿಯ ಮೂಲ ಶಿಕ್ಷಾ ಅಧಿಕಾರಿ (ಬಿಎಸ್‌ಎ) ಸಂತೋಷ್ ಪಾಂಡೆ ಅವರಿಗೆ ಸೂಚನೆ ನೀಡಿ ತನಿಖೆ ನಡೆಸುವಂತೆ ಆದೇಶಿಸಿದ್ದಾರೆ.

ಬಾರಾಬಂಕಿಯ ಹೆಚ್ಚುವರಿ ಎಸ್ಪಿ ಪೂರ್ಣೇಂದು ಸಿಂಗ್ ಪ್ರತಿಕ್ರಿಯಿಸಿದ್ದು, ಬಿಎಸ್ಎ ಸಿದ್ಧಪಡಿಸಿದ ವರದಿ ಮತ್ತು ಜಿಲ್ಲಾ ಮ್ಯಾಜಿಸ್ಟ್ರೇಟ್‌ ನಿರ್ದೇಶನದ ಮೇರೆಗೆ ಪೊಲೀಸರು ಕಾರ್ಯನಿರ್ವಹಿಸುತ್ತಾರೆ ಎಂದಿದ್ದಾರೆ.

ಆಗಸ್ಟ್ 29 ರಂದು ಈ ಘಟನೆ ನಡೆದಿದೆ ಎಂದು ತನಿಖೆ ನಡೆಸುತ್ತಿರುವ ಬಿಎಸ್‌ಎ ಸಂತೋಷ್ ಪಾಂಡೆ ತಿಳಿಸಿದ್ದಾರೆ.

“ನಾವು ಊಟದ ಸಮಯದಲ್ಲಿದ್ದ 800 ವಿದ್ಯಾರ್ಥಿಗಳ ಹೇಳಿಕೆಗಳನ್ನು ತೆಗೆದುಕೊಂಡಿದ್ದೇವೆ. ಅದರ ವಿವರವಾದ ವರದಿಯನ್ನು ಮ್ಯಾಜಿಸ್ಟ್ರೇಟ್‌ಗೆ ಹಸ್ತಾಂತರಿಸಲಾಗುವುದು” ಎಂದು ಪಾಂಡೆ ಹೇಳಿದರು.

ಸೆಪ್ಟೆಂಬರ್ 3 ರಂದು ಮಹಿಳೆಯೊಬ್ಬರು ದೂರು ನೀಡಿದ್ದು, “ಮಧ್ಯಾಹ್ನದ ಊಟವನ್ನು ಬಡಿಸುವಾಗ ಸರ್ಕಾರಿ ಶಾಲೆಯ ಪ್ರಾಂಶುಪಾಲರು ನನ್ನ ಮಗಳ ಕೈಗಳನ್ನು ಸುಟ್ಟುಹಾಕಿದ್ದಾರೆ” ಎಂದು ಆರೋಪಿಸಿದ್ದಾರೆ.

***

ಪ್ರಕರಣ- 2

ರಾಜಸ್ಥಾನ: ದಲಿತ ಬಾಲಕನ ಶವ ಗಣಿಗಾರಿಕೆಯ ಹೊಂಡದಲ್ಲಿ ಪತ್ತೆ

17 ವರ್ಷದ ದಲಿತ ಬಾಲಕ ನಾಪತ್ತೆಯಾದ ಒಂದು ದಿನದ ನಂತರ ಶವವಾಗಿ ಸಿಕ್ಕಿದ್ದಾನೆ. ರಾಜಸ್ಥಾನದ ಅಜ್ಮೀರ್ ಜಿಲ್ಲೆಯಲ್ಲಿ ಮಳೆ ನೀರಿನಿಂದ ತುಂಬಿದ ಗಣಿಗಾರಿಕೆಯ ಹೊಂಡದಲ್ಲಿ ಆತನ ಶವ ಸೆಪ್ಟೆಂಬರ್ 9ರಂದು ಪತ್ತೆಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಶವವಾಗಿ ಪತ್ತೆಯಾಗಿರುವ ಬಾಲಕನ ಸಹಪಾಠಿಯ ತಂದೆ ಶಾಲಾ ಅಧಿಕಾರಿಗಳಿಗೆ ದೂರು ನೀಡಿದ್ದರು ಎಂದು ತಿಳಿದುಬಂದಿದೆ. ತನ್ನ ಮಗಳಿಗೆ ಈ ಹುಡುಗ ಕಿರುಕುಳ ನೀಡಿದ್ದಾನೆ ಎಂದು ಆರೋಪಿಸಿ ಶಾಲೆಗೆ ದೂರು ನೀಡಿದ ಬಳಿಕ ಈ ಘಟನೆಯಾಗಿದೆ.

ಶುಕ್ರವಾರ ಶವ ಪತ್ತೆಯಾದ ನಂತರ, ಕುಟುಂಬ ಸದಸ್ಯರು ಆತನ ಶವವನ್ನು ಶಾಲೆಯ ಹೊರಗೆ ಇಟ್ಟು ಪ್ರತಿಭಟನೆ ನಡೆಸಿದ್ದಾರೆ. ಈ ಬಾಲಕನಿಗೆ ಶಾಲಾ ಸಿಬ್ಬಂದಿ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಿದ್ದು ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ ಎಂದು ಸರ್ಕಲ್ ಆಫೀಸರ್, ಬೀವರ್ ಸುಮಿತ್ ಮೆಹ್ರೇದಾ ತಿಳಿಸಿದ್ದಾರೆ.

ಪೊಲೀಸರು ಪರಿಸ್ಥಿತಿಯನ್ನು ಹತೋಟಿಗೆ ತಂದಿದ್ದಾರೆ. ಮರಣೋತ್ತರ ಪರೀಕ್ಷೆ ಬಳಿಕ ಬಾಲಕನ ಶವವನ್ನು ಕುಟುಂಬ ಸದಸ್ಯರಿಗೆ ಹಸ್ತಾಂತರಿಸಲಾಗಿದೆ. ಈ ಬಗ್ಗೆ ತನಿಖೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

***

ಪ್ರಕರಣ- 3

ಮಧ್ಯಪ್ರದೇಶ: ದಲಿತ ಬಾಲಕನನ್ನು ಥಳಿಸಿದ ಜೈನ ಪಂಡಿತ

ಮಧ್ಯಪ್ರದೇಶದ ಸಾಗರ್‌ನಲ್ಲಿ ಜೈನ ದೇವಾಲಯದ ಪಂಡಿತರೊಬ್ಬರು 11 ವರ್ಷದ ದಲಿತ ಬಾಲಕನನ್ನು ಥಳಿಸಿರುವ ಘಟನೆ ನಡೆದಿದೆ.

ಟ್ವಿಟ್ಟರ್ ಬಳಕೆದಾರರು ಈ ಘಟನೆಯ ವೀಡಿಯೊವನ್ನು ಹಂಚಿಕೊಂಡಿದ್ದಾರೆ. ದಲಿತ ಬಾಲಕ ಸಾಗರದ ಜೈನ ದೇವಾಲಯದ ಹೊರಗೆ ನಿಂತಿದ್ದಾಗ ಕಳ್ಳತನದ ಆರೋಪ ಹೊರಿಸಲಾಗಿದೆ. ಪಂಡಿತ್ ರಾಜೇಶ್ ಜೈನ್ ಬಾಲಕನನ್ನು ಥಳಿಸಿ, ನಂತರ ಕಟ್ಟಿಹಾಕಿದ್ದಾರೆ. ಪೂಜೆಯ ತಟ್ಟೆಯಲ್ಲಿದ್ದ ಬಾದಾಮಿಯನ್ನು ತೆಗೆದು ಜೇಬಿನಲ್ಲಿ ಇಟ್ಟುಕೊಂಡಿದ್ದಾಗಿ ರಾಜೇಶ್ ಜೈನ್‌ ಆರೋಪಿಸಿದ್ದಾರೆ.

ನಗರದ ಮೋತಿ ನಗರ ಪೊಲೀಸ್ ಠಾಣೆಯಲ್ಲಿ ಎಸ್‌ಸಿ-ಎಸ್‌ಟಿ ದೌರ್ಜನ್ಯ ತಡೆ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ ಎಂದು ಮಾಧ್ಯಮಗಳು ವರದಿ ಮಾಡಿವೆ.

***

ಪ್ರಕರಣ- 4

ಮಧ್ಯಪ್ರದೇಶ: ಅತ್ಯಾಚಾರಕ್ಕೆ ಒಳಗಾದ ದಲಿತ ಬಾಲಕಿಗೆ ಕಿರುಕುಳ; ಮೂವರು ಪೊಲೀಸ್ ಅಧಿಕಾರಿಗಳ ಅಮಾನತು

ಮಧ್ಯಪ್ರದೇಶದ ಛತ್ತರ್‌ಪುರ ನಗರದಲ್ಲಿ 13 ವರ್ಷದ ದಲಿತ ಬಾಲಕಿಯನ್ನು ಇಡೀ ರಾತ್ರಿ ಪೊಲೀಸ್ ಠಾಣೆಯಲ್ಲಿ ಇರಿಸಿಕೊಂಡು ಥಳಿಸಿದ ಘಟನೆ ನಡೆದಿದೆ. ಆಗಸ್ಟ್ 30 ರಂದು ನಡೆದ ಘಟನೆಗೆ ಸಂಬಂಧಿಸಿದಂತೆ ಮೂವರು ಪೊಲೀಸ್ ಅಧಿಕಾರಿಗಳನ್ನು ಬುಧವಾರ ಅಮಾನತುಗೊಳಿಸಲಾಗಿದೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಬಾಲಕಿಯ ಮೇಲೆ ಅತ್ಯಾಚಾರವೆಸಗಿದ ಆರೋಪಿ ಬಾಬು ಖಾನ್ ಎಂಬಾತನನ್ನು ಭಾರತೀಯ ದಂಡ ಸಂಹಿತೆ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ (ದೌರ್ಜನ್ಯ ತಡೆ) ಕಾಯ್ದೆ ಹಾಗೂ ಪೋಕ್ಸೋ ಕಾಯ್ದೆಯ ಸಂಬಂಧಿತ ಸೆಕ್ಷನ್‌ಗಳ ಅಡಿಯಲ್ಲಿ ಸೆಪ್ಟೆಂಬರ್ 3 ರಂದು ಬಂಧಿಸಲಾಯಿತು ಎಂದು ಪೊಲೀಸರು ತಿಳಿಸಿದ್ದಾರೆ.

Dalit Teen Went To File Rape Case, Allegedly Detained Overnight, Beaten

ಅತ್ಯಾಚಾರ ಸಂತ್ರಸ್ತೆಯನ್ನು ಪೊಲೀಸ್ ಠಾಣೆಯಲ್ಲಿ ಇರಿಸಿದ್ದಕ್ಕಾಗಿ ನಗರ ಕೊತ್ವಾಲಿ ಪೊಲೀಸ್ ಠಾಣೆಯ ಗೃಹ ಅಧಿಕಾರಿ (ಎಸ್‌ಎಚ್‌ಒ) ಅನೂಪ್ ಯಾದವ್, ಸಬ್ ಇನ್‌ಸ್ಪೆಕ್ಟರ್ ಮೋಹಿನಿ ಶರ್ಮಾ ಮತ್ತು ಸಹಾಯಕ ಸಬ್ ಇನ್‌ಸ್ಪೆಕ್ಟರ್ ಗುರುದತ್ ಶೇಷಾ ಅವರನ್ನು ಅಮಾನತುಗೊಳಿಸಲಾಗಿದೆ ಎಂದು ಛತ್ತರ್‌ಪುರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಚಿನ್ ಶರ್ಮಾ ಗುರುವಾರ ಸುದ್ದಿಗಾರರಿಗೆ ತಿಳಿಸಿದ್ದಾರೆ.

ಬಾಲಕಿಯ ಮೇಲಿನ ಅತ್ಯಾಚಾರಕ್ಕೆ ಸಂಬಂಧಿಸಿದಂತೆ ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿಯಿಂದ (ಸಿಡಬ್ಲ್ಯುಸಿ) ದೂರು ಬಂದಿದ್ದು, ನಂತರ ಪ್ರಕರಣ ದಾಖಲಿಸಲಾಗಿದೆ ಎಂದು ಜಂಟಿ ಜಿಲ್ಲಾಧಿಕಾರಿ ಪ್ರತಾಪ್ ಸಿಂಗ್ ಚೌಹಾಣ್ ಮಾಹಿತಿ ನೀಡಿದ್ದಾರೆ.

ಬಾಲಕಿಯ ತಾಯಿಯ ಪ್ರಕಾರ, ಮಗಳು ಆಗಸ್ಟ್ 27 ರಂದು ಆಟವಾಡಲು ಮನೆಯಿಂದ ಹೊರಗೆ ಹೋಗಿದ್ದಳು. ಆದರೆ ಹಿಂತಿರುಗಲಿಲ್ಲ. ಆದ್ದರಿಂದ ಬಾಲಕಿಯ ತಂದೆ ಮರುದಿನ ಕೊತ್ವಾಲಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.

ಆಗಸ್ಟ್ 30 ರಂದು ಹಿಂತಿರುಗಿದ ಬಾಲಕಿ ತನ್ನ ಪೋಷಕರಿಗೆ ವಿಷಯ ತಿಳಿಸಿದ್ದಾಳೆ. ಬಾಬು ಖಾನ್ ಎಂಬಾತ ಬಲವಂತವಾಗಿ ಬಾಲಕಿಯನ್ನು ಎಳೆದೊಯ್ದು, ಅಲ್ಲಿಯೇ ಬಂಧಿಸಿ ಮೂರು ದಿನಗಳ ಕಾಲ ಅತ್ಯಾಚಾರವೆಸಗಿರುವ ಸಂಗತಿ ಹೊರಬಿದ್ದಿದೆ.

“ನಾವು ದೂರು ದಾಖಲಿಸಲು ಪೊಲೀಸ್ ಠಾಣೆಗೆ ಹೋಗಿದ್ದೆವು. ಇಬ್ಬರು ಪೊಲೀಸರು ನನ್ನ ಮಗಳ ಹೇಳಿಕೆಯನ್ನು ಬದಲಾಯಿಸುವಂತೆ ಒತ್ತಡ ಹೇರಿದರು.ಜೊತೆಗೆ ನನ್ನ ಮಗಳನ್ನು ಥಳಿಸಿದರು. ಮತ್ತೊಬ್ಬ ಪೊಲೀಸ್ ಅಧಿಕಾರಿ ನನ್ನನ್ನು ಹೊರಗೆ ಕರೆದೊಯ್ದರು. ಒಳಗೆ ನನ್ನ ಮಗಳಿಗೆ ಒದ್ದು ಬೆಲ್ಟ್‌ಗಳಿಂದ ಹೊಡೆದರು” ಎಂದು ಸಂತ್ರಸ್ತ ಹೆಣ್ಣುಮಗಳ ತಾಯಿ ಆರೋಪಿಸಿದ್ದಾರೆ.

ಆಗಸ್ಟ್ 31ರಂದು ಮತ್ತೆ ಪೊಲೀಸ್ ಠಾಣೆಗೆ ತೆರಳಿ ಕೇಸು ದಾಖಲಿಸುವಂತೆ ಇನ್ಸ್‌ಪೆಕ್ಟರ್ ಯಾದವ್ ಅವರಲ್ಲಿ ಕೇಳಿದಾಗಲೂ ಯಾವುದೇ ಸ್ಪಂದನೆ ದೊರಯಲಿಲ್ಲ ಎಂದು ಅವರು ದೂರಿದ್ದಾರೆ.

ಅಂತಿಮವಾಗಿ, ಸೆಪ್ಟೆಂಬರ್ 1 ರ ಸಂಜೆ ಪೊಲೀಸರು ಆರೋಪಿಯ ವಿರುದ್ಧ ಅತ್ಯಾಚಾರದ ಪ್ರಕರಣವನ್ನು ದಾಖಲಿಸಿದ್ದಾರೆ. ಆದರೆ ಅಪಹರಣದ ಆರೋಪವನ್ನು ಸೇರಿಸಿಲ್ಲ ಎನ್ನಲಾಗಿದೆ.

ಎಫ್‌ಐಆರ್‌ನಲ್ಲಿ ಬಾಲಕಿಯ ವಯಸ್ಸನ್ನು 17 ವರ್ಷ ಎಂದು ನಮೂದಿಸಲಾಗಿದ್ದು, ಅಪಹರಣದ ಆರೋಪವನ್ನು ಸೇರಿಸಿಲ್ಲ.

ಸಿಡಬ್ಲ್ಯೂಸಿ ಸದಸ್ಯ ಅಫ್ಸರ್ ಜಹಾನ್ ಮಾತನಾಡಿ, “ಪೊಲೀಸರು ಅಪರಾಧಿಯನ್ನು ರಕ್ಷಿಸಲು ಮತ್ತು ಸಂತ್ರಸ್ತ ಬಾಲಕಿಯ ಹೇಳಿಕೆಯನ್ನು ಬದಲಿಸಲು ಪ್ರಯತ್ನಿಸುತ್ತಿದ್ದಾರೆ” ಎಂದು ದೂರಿದ್ದಾರೆ.

ಮತ್ತೊಬ್ಬ ಸಿಡಬ್ಲ್ಯೂಸಿ ಸದಸ್ಯ ಸೌರಭ್ ಭಟ್ನಾಗರ್, “13ರ ಬದಲಿಗೆ 17 ವರ್ಷ ಎಂದು ಪೊಲೀಸರು ನಮೂದಿಸಿರುವ ಕುರಿತು ಮಕ್ಕಳ ಕಲ್ಯಾಣ ಸಮಿತಿಯು ಪೊಲೀಸರಿಂದ ಸ್ಪಷ್ಟನೆ ಕೇಳಿದೆ” ಎಂದು ಪ್ರತಿಕ್ರಿಯೆ ನೀಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...