Homeದಲಿತ್ ಫೈಲ್ಸ್ದಲಿತ ಮಕ್ಕಳ ಮೇಲೆ ಮುಂದುವರಿದ ದೌರ್ಜನ್ಯ: ಪ್ರಕರಣ 1, 2, 3, 4

ದಲಿತ ಮಕ್ಕಳ ಮೇಲೆ ಮುಂದುವರಿದ ದೌರ್ಜನ್ಯ: ಪ್ರಕರಣ 1, 2, 3, 4

- Advertisement -
- Advertisement -

ದಲಿತ ಮಕ್ಕಳ ಮೇಲೆ ದೌರ್ಜನ್ಯಗಳು ಹೆಚ್ಚಾಗುತ್ತಿದ್ದು, ಇತ್ತೀಚಿನ ದಿನಗಳಲ್ಲಿ ನಾಲ್ಕು ಪ್ರಮುಖ ಘಟನೆಗಳು ವರದಿಯಾಗಿವೆ. ಉತ್ತರಪ್ರದೇಶ, ರಾಜಸ್ಥಾನ, ಮಧ್ಯಪ್ರದೇಶ ರಾಜ್ಯಗಳಲ್ಲಿ ವರದಿಯಾಗಿರುವ ನಾಲ್ಕು ಪ್ರಕರಣಗಳ ವಿವರ ಇಲ್ಲಿದೆ.

ಪ್ರಕರಣ-1| ಯುಪಿ: ದಲಿತ ಬಾಲಕಿಯ ಮೇಲೆ ಬಿಸಿಯೂಟ ಎರಚಿದ ಶಿಕ್ಷಕ

ಪ್ರಕರಣ-2| ರಾಜಸ್ಥಾನ: ದಲಿತ ಬಾಲಕನ ಶವ ಗಣಿಗಾರಿಕೆಯ ಹೊಂಡದಲ್ಲಿ ಪತ್ತೆ

ಪ್ರಕರಣ-3| ಮಧ್ಯಪ್ರದೇಶ: ದಲಿತ ಬಾಲಕನನ್ನು ಥಳಿಸಿದ ಜೈನ ಪಂಡಿತ

ಪ್ರಕರಣ-4| ಮಧ್ಯಪ್ರದೇಶ: ಅತ್ಯಾಚಾರಕ್ಕೆ ಒಳಗಾದ ದಲಿತ ಬಾಲಕಿಗೆ ಕಿರುಕುಳ; ಮೂವರು ಪೊಲೀಸ್ ಅಧಿಕಾರಿಗಳ ಅಮಾನತು

*****

ಪ್ರಕರಣ- 1

ಯುಪಿ: ದಲಿತ ಬಾಲಕಿಯ ಮೇಲೆ ಬಿಸಿಯೂಟ ಎರಚಿದ ಶಿಕ್ಷಕ

ಲಖನೌ: ಬಾರಾಬಂಕಿಯ ಟಿಕೈಟ್‌ನಗರದ ಇಚೋಲಿ ಗ್ರಾಮದಲ್ಲಿ 2ನೇ ತರಗತಿಯ ದಲಿತ ವಿದ್ಯಾರ್ಥಿನಿಯ ಮೇಲೆ ಬಿಸಿಯೂಟವನ್ನು ಶಾಲೆಯ ಪ್ರಾಂಶುಪಾಲ ಎಸೆದಿರುವ ಘಟನೆ ನಡೆದಿದೆ.

ಮಗುವಿನ ಮಣಿಕಟ್ಟು ಮತ್ತು ಕೈಗೆ ತೀವ್ರ ಸುಟ್ಟ ಗಾಯಗಳಾಗಿವೆ ಎಂಬ ಆರೋಪದ ಬಗ್ಗೆ ತನಿಖೆಗೆ ಆದೇಶಿಸಲಾಗಿದೆ.

ಬಾರಾಬಂಕಿಯ ಜಿಲ್ಲಾ ಮ್ಯಾಜಿಸ್ಟ್ರೇಟ್ ಆದರ್ಶ್ ಸಿಂಗ್ ಅವರು ತನಿಖೆಗೆ ಆದೇಶಿಸಿದ್ದಾರೆ. ವಿಕಲಚೇತನ ಬಾಲಕಿ ಈ ವಿಷಯವನ್ನು ಅಧಿಕಾರಿಗಳಿಗೆ ತಿಳಿಸಿದ್ದು, ನಂತರ ಜಿಲ್ಲಾಧಿಕಾರಿಯವರು ಬಾರಾಬಂಕಿಯ ಮೂಲ ಶಿಕ್ಷಾ ಅಧಿಕಾರಿ (ಬಿಎಸ್‌ಎ) ಸಂತೋಷ್ ಪಾಂಡೆ ಅವರಿಗೆ ಸೂಚನೆ ನೀಡಿ ತನಿಖೆ ನಡೆಸುವಂತೆ ಆದೇಶಿಸಿದ್ದಾರೆ.

ಬಾರಾಬಂಕಿಯ ಹೆಚ್ಚುವರಿ ಎಸ್ಪಿ ಪೂರ್ಣೇಂದು ಸಿಂಗ್ ಪ್ರತಿಕ್ರಿಯಿಸಿದ್ದು, ಬಿಎಸ್ಎ ಸಿದ್ಧಪಡಿಸಿದ ವರದಿ ಮತ್ತು ಜಿಲ್ಲಾ ಮ್ಯಾಜಿಸ್ಟ್ರೇಟ್‌ ನಿರ್ದೇಶನದ ಮೇರೆಗೆ ಪೊಲೀಸರು ಕಾರ್ಯನಿರ್ವಹಿಸುತ್ತಾರೆ ಎಂದಿದ್ದಾರೆ.

ಆಗಸ್ಟ್ 29 ರಂದು ಈ ಘಟನೆ ನಡೆದಿದೆ ಎಂದು ತನಿಖೆ ನಡೆಸುತ್ತಿರುವ ಬಿಎಸ್‌ಎ ಸಂತೋಷ್ ಪಾಂಡೆ ತಿಳಿಸಿದ್ದಾರೆ.

“ನಾವು ಊಟದ ಸಮಯದಲ್ಲಿದ್ದ 800 ವಿದ್ಯಾರ್ಥಿಗಳ ಹೇಳಿಕೆಗಳನ್ನು ತೆಗೆದುಕೊಂಡಿದ್ದೇವೆ. ಅದರ ವಿವರವಾದ ವರದಿಯನ್ನು ಮ್ಯಾಜಿಸ್ಟ್ರೇಟ್‌ಗೆ ಹಸ್ತಾಂತರಿಸಲಾಗುವುದು” ಎಂದು ಪಾಂಡೆ ಹೇಳಿದರು.

ಸೆಪ್ಟೆಂಬರ್ 3 ರಂದು ಮಹಿಳೆಯೊಬ್ಬರು ದೂರು ನೀಡಿದ್ದು, “ಮಧ್ಯಾಹ್ನದ ಊಟವನ್ನು ಬಡಿಸುವಾಗ ಸರ್ಕಾರಿ ಶಾಲೆಯ ಪ್ರಾಂಶುಪಾಲರು ನನ್ನ ಮಗಳ ಕೈಗಳನ್ನು ಸುಟ್ಟುಹಾಕಿದ್ದಾರೆ” ಎಂದು ಆರೋಪಿಸಿದ್ದಾರೆ.

***

ಪ್ರಕರಣ- 2

ರಾಜಸ್ಥಾನ: ದಲಿತ ಬಾಲಕನ ಶವ ಗಣಿಗಾರಿಕೆಯ ಹೊಂಡದಲ್ಲಿ ಪತ್ತೆ

17 ವರ್ಷದ ದಲಿತ ಬಾಲಕ ನಾಪತ್ತೆಯಾದ ಒಂದು ದಿನದ ನಂತರ ಶವವಾಗಿ ಸಿಕ್ಕಿದ್ದಾನೆ. ರಾಜಸ್ಥಾನದ ಅಜ್ಮೀರ್ ಜಿಲ್ಲೆಯಲ್ಲಿ ಮಳೆ ನೀರಿನಿಂದ ತುಂಬಿದ ಗಣಿಗಾರಿಕೆಯ ಹೊಂಡದಲ್ಲಿ ಆತನ ಶವ ಸೆಪ್ಟೆಂಬರ್ 9ರಂದು ಪತ್ತೆಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಶವವಾಗಿ ಪತ್ತೆಯಾಗಿರುವ ಬಾಲಕನ ಸಹಪಾಠಿಯ ತಂದೆ ಶಾಲಾ ಅಧಿಕಾರಿಗಳಿಗೆ ದೂರು ನೀಡಿದ್ದರು ಎಂದು ತಿಳಿದುಬಂದಿದೆ. ತನ್ನ ಮಗಳಿಗೆ ಈ ಹುಡುಗ ಕಿರುಕುಳ ನೀಡಿದ್ದಾನೆ ಎಂದು ಆರೋಪಿಸಿ ಶಾಲೆಗೆ ದೂರು ನೀಡಿದ ಬಳಿಕ ಈ ಘಟನೆಯಾಗಿದೆ.

ಶುಕ್ರವಾರ ಶವ ಪತ್ತೆಯಾದ ನಂತರ, ಕುಟುಂಬ ಸದಸ್ಯರು ಆತನ ಶವವನ್ನು ಶಾಲೆಯ ಹೊರಗೆ ಇಟ್ಟು ಪ್ರತಿಭಟನೆ ನಡೆಸಿದ್ದಾರೆ. ಈ ಬಾಲಕನಿಗೆ ಶಾಲಾ ಸಿಬ್ಬಂದಿ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಿದ್ದು ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ ಎಂದು ಸರ್ಕಲ್ ಆಫೀಸರ್, ಬೀವರ್ ಸುಮಿತ್ ಮೆಹ್ರೇದಾ ತಿಳಿಸಿದ್ದಾರೆ.

ಪೊಲೀಸರು ಪರಿಸ್ಥಿತಿಯನ್ನು ಹತೋಟಿಗೆ ತಂದಿದ್ದಾರೆ. ಮರಣೋತ್ತರ ಪರೀಕ್ಷೆ ಬಳಿಕ ಬಾಲಕನ ಶವವನ್ನು ಕುಟುಂಬ ಸದಸ್ಯರಿಗೆ ಹಸ್ತಾಂತರಿಸಲಾಗಿದೆ. ಈ ಬಗ್ಗೆ ತನಿಖೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

***

ಪ್ರಕರಣ- 3

ಮಧ್ಯಪ್ರದೇಶ: ದಲಿತ ಬಾಲಕನನ್ನು ಥಳಿಸಿದ ಜೈನ ಪಂಡಿತ

ಮಧ್ಯಪ್ರದೇಶದ ಸಾಗರ್‌ನಲ್ಲಿ ಜೈನ ದೇವಾಲಯದ ಪಂಡಿತರೊಬ್ಬರು 11 ವರ್ಷದ ದಲಿತ ಬಾಲಕನನ್ನು ಥಳಿಸಿರುವ ಘಟನೆ ನಡೆದಿದೆ.

ಟ್ವಿಟ್ಟರ್ ಬಳಕೆದಾರರು ಈ ಘಟನೆಯ ವೀಡಿಯೊವನ್ನು ಹಂಚಿಕೊಂಡಿದ್ದಾರೆ. ದಲಿತ ಬಾಲಕ ಸಾಗರದ ಜೈನ ದೇವಾಲಯದ ಹೊರಗೆ ನಿಂತಿದ್ದಾಗ ಕಳ್ಳತನದ ಆರೋಪ ಹೊರಿಸಲಾಗಿದೆ. ಪಂಡಿತ್ ರಾಜೇಶ್ ಜೈನ್ ಬಾಲಕನನ್ನು ಥಳಿಸಿ, ನಂತರ ಕಟ್ಟಿಹಾಕಿದ್ದಾರೆ. ಪೂಜೆಯ ತಟ್ಟೆಯಲ್ಲಿದ್ದ ಬಾದಾಮಿಯನ್ನು ತೆಗೆದು ಜೇಬಿನಲ್ಲಿ ಇಟ್ಟುಕೊಂಡಿದ್ದಾಗಿ ರಾಜೇಶ್ ಜೈನ್‌ ಆರೋಪಿಸಿದ್ದಾರೆ.

ನಗರದ ಮೋತಿ ನಗರ ಪೊಲೀಸ್ ಠಾಣೆಯಲ್ಲಿ ಎಸ್‌ಸಿ-ಎಸ್‌ಟಿ ದೌರ್ಜನ್ಯ ತಡೆ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ ಎಂದು ಮಾಧ್ಯಮಗಳು ವರದಿ ಮಾಡಿವೆ.

***

ಪ್ರಕರಣ- 4

ಮಧ್ಯಪ್ರದೇಶ: ಅತ್ಯಾಚಾರಕ್ಕೆ ಒಳಗಾದ ದಲಿತ ಬಾಲಕಿಗೆ ಕಿರುಕುಳ; ಮೂವರು ಪೊಲೀಸ್ ಅಧಿಕಾರಿಗಳ ಅಮಾನತು

ಮಧ್ಯಪ್ರದೇಶದ ಛತ್ತರ್‌ಪುರ ನಗರದಲ್ಲಿ 13 ವರ್ಷದ ದಲಿತ ಬಾಲಕಿಯನ್ನು ಇಡೀ ರಾತ್ರಿ ಪೊಲೀಸ್ ಠಾಣೆಯಲ್ಲಿ ಇರಿಸಿಕೊಂಡು ಥಳಿಸಿದ ಘಟನೆ ನಡೆದಿದೆ. ಆಗಸ್ಟ್ 30 ರಂದು ನಡೆದ ಘಟನೆಗೆ ಸಂಬಂಧಿಸಿದಂತೆ ಮೂವರು ಪೊಲೀಸ್ ಅಧಿಕಾರಿಗಳನ್ನು ಬುಧವಾರ ಅಮಾನತುಗೊಳಿಸಲಾಗಿದೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಬಾಲಕಿಯ ಮೇಲೆ ಅತ್ಯಾಚಾರವೆಸಗಿದ ಆರೋಪಿ ಬಾಬು ಖಾನ್ ಎಂಬಾತನನ್ನು ಭಾರತೀಯ ದಂಡ ಸಂಹಿತೆ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ (ದೌರ್ಜನ್ಯ ತಡೆ) ಕಾಯ್ದೆ ಹಾಗೂ ಪೋಕ್ಸೋ ಕಾಯ್ದೆಯ ಸಂಬಂಧಿತ ಸೆಕ್ಷನ್‌ಗಳ ಅಡಿಯಲ್ಲಿ ಸೆಪ್ಟೆಂಬರ್ 3 ರಂದು ಬಂಧಿಸಲಾಯಿತು ಎಂದು ಪೊಲೀಸರು ತಿಳಿಸಿದ್ದಾರೆ.

Dalit Teen Went To File Rape Case, Allegedly Detained Overnight, Beaten

ಅತ್ಯಾಚಾರ ಸಂತ್ರಸ್ತೆಯನ್ನು ಪೊಲೀಸ್ ಠಾಣೆಯಲ್ಲಿ ಇರಿಸಿದ್ದಕ್ಕಾಗಿ ನಗರ ಕೊತ್ವಾಲಿ ಪೊಲೀಸ್ ಠಾಣೆಯ ಗೃಹ ಅಧಿಕಾರಿ (ಎಸ್‌ಎಚ್‌ಒ) ಅನೂಪ್ ಯಾದವ್, ಸಬ್ ಇನ್‌ಸ್ಪೆಕ್ಟರ್ ಮೋಹಿನಿ ಶರ್ಮಾ ಮತ್ತು ಸಹಾಯಕ ಸಬ್ ಇನ್‌ಸ್ಪೆಕ್ಟರ್ ಗುರುದತ್ ಶೇಷಾ ಅವರನ್ನು ಅಮಾನತುಗೊಳಿಸಲಾಗಿದೆ ಎಂದು ಛತ್ತರ್‌ಪುರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಚಿನ್ ಶರ್ಮಾ ಗುರುವಾರ ಸುದ್ದಿಗಾರರಿಗೆ ತಿಳಿಸಿದ್ದಾರೆ.

ಬಾಲಕಿಯ ಮೇಲಿನ ಅತ್ಯಾಚಾರಕ್ಕೆ ಸಂಬಂಧಿಸಿದಂತೆ ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿಯಿಂದ (ಸಿಡಬ್ಲ್ಯುಸಿ) ದೂರು ಬಂದಿದ್ದು, ನಂತರ ಪ್ರಕರಣ ದಾಖಲಿಸಲಾಗಿದೆ ಎಂದು ಜಂಟಿ ಜಿಲ್ಲಾಧಿಕಾರಿ ಪ್ರತಾಪ್ ಸಿಂಗ್ ಚೌಹಾಣ್ ಮಾಹಿತಿ ನೀಡಿದ್ದಾರೆ.

ಬಾಲಕಿಯ ತಾಯಿಯ ಪ್ರಕಾರ, ಮಗಳು ಆಗಸ್ಟ್ 27 ರಂದು ಆಟವಾಡಲು ಮನೆಯಿಂದ ಹೊರಗೆ ಹೋಗಿದ್ದಳು. ಆದರೆ ಹಿಂತಿರುಗಲಿಲ್ಲ. ಆದ್ದರಿಂದ ಬಾಲಕಿಯ ತಂದೆ ಮರುದಿನ ಕೊತ್ವಾಲಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.

ಆಗಸ್ಟ್ 30 ರಂದು ಹಿಂತಿರುಗಿದ ಬಾಲಕಿ ತನ್ನ ಪೋಷಕರಿಗೆ ವಿಷಯ ತಿಳಿಸಿದ್ದಾಳೆ. ಬಾಬು ಖಾನ್ ಎಂಬಾತ ಬಲವಂತವಾಗಿ ಬಾಲಕಿಯನ್ನು ಎಳೆದೊಯ್ದು, ಅಲ್ಲಿಯೇ ಬಂಧಿಸಿ ಮೂರು ದಿನಗಳ ಕಾಲ ಅತ್ಯಾಚಾರವೆಸಗಿರುವ ಸಂಗತಿ ಹೊರಬಿದ್ದಿದೆ.

“ನಾವು ದೂರು ದಾಖಲಿಸಲು ಪೊಲೀಸ್ ಠಾಣೆಗೆ ಹೋಗಿದ್ದೆವು. ಇಬ್ಬರು ಪೊಲೀಸರು ನನ್ನ ಮಗಳ ಹೇಳಿಕೆಯನ್ನು ಬದಲಾಯಿಸುವಂತೆ ಒತ್ತಡ ಹೇರಿದರು.ಜೊತೆಗೆ ನನ್ನ ಮಗಳನ್ನು ಥಳಿಸಿದರು. ಮತ್ತೊಬ್ಬ ಪೊಲೀಸ್ ಅಧಿಕಾರಿ ನನ್ನನ್ನು ಹೊರಗೆ ಕರೆದೊಯ್ದರು. ಒಳಗೆ ನನ್ನ ಮಗಳಿಗೆ ಒದ್ದು ಬೆಲ್ಟ್‌ಗಳಿಂದ ಹೊಡೆದರು” ಎಂದು ಸಂತ್ರಸ್ತ ಹೆಣ್ಣುಮಗಳ ತಾಯಿ ಆರೋಪಿಸಿದ್ದಾರೆ.

ಆಗಸ್ಟ್ 31ರಂದು ಮತ್ತೆ ಪೊಲೀಸ್ ಠಾಣೆಗೆ ತೆರಳಿ ಕೇಸು ದಾಖಲಿಸುವಂತೆ ಇನ್ಸ್‌ಪೆಕ್ಟರ್ ಯಾದವ್ ಅವರಲ್ಲಿ ಕೇಳಿದಾಗಲೂ ಯಾವುದೇ ಸ್ಪಂದನೆ ದೊರಯಲಿಲ್ಲ ಎಂದು ಅವರು ದೂರಿದ್ದಾರೆ.

ಅಂತಿಮವಾಗಿ, ಸೆಪ್ಟೆಂಬರ್ 1 ರ ಸಂಜೆ ಪೊಲೀಸರು ಆರೋಪಿಯ ವಿರುದ್ಧ ಅತ್ಯಾಚಾರದ ಪ್ರಕರಣವನ್ನು ದಾಖಲಿಸಿದ್ದಾರೆ. ಆದರೆ ಅಪಹರಣದ ಆರೋಪವನ್ನು ಸೇರಿಸಿಲ್ಲ ಎನ್ನಲಾಗಿದೆ.

ಎಫ್‌ಐಆರ್‌ನಲ್ಲಿ ಬಾಲಕಿಯ ವಯಸ್ಸನ್ನು 17 ವರ್ಷ ಎಂದು ನಮೂದಿಸಲಾಗಿದ್ದು, ಅಪಹರಣದ ಆರೋಪವನ್ನು ಸೇರಿಸಿಲ್ಲ.

ಸಿಡಬ್ಲ್ಯೂಸಿ ಸದಸ್ಯ ಅಫ್ಸರ್ ಜಹಾನ್ ಮಾತನಾಡಿ, “ಪೊಲೀಸರು ಅಪರಾಧಿಯನ್ನು ರಕ್ಷಿಸಲು ಮತ್ತು ಸಂತ್ರಸ್ತ ಬಾಲಕಿಯ ಹೇಳಿಕೆಯನ್ನು ಬದಲಿಸಲು ಪ್ರಯತ್ನಿಸುತ್ತಿದ್ದಾರೆ” ಎಂದು ದೂರಿದ್ದಾರೆ.

ಮತ್ತೊಬ್ಬ ಸಿಡಬ್ಲ್ಯೂಸಿ ಸದಸ್ಯ ಸೌರಭ್ ಭಟ್ನಾಗರ್, “13ರ ಬದಲಿಗೆ 17 ವರ್ಷ ಎಂದು ಪೊಲೀಸರು ನಮೂದಿಸಿರುವ ಕುರಿತು ಮಕ್ಕಳ ಕಲ್ಯಾಣ ಸಮಿತಿಯು ಪೊಲೀಸರಿಂದ ಸ್ಪಷ್ಟನೆ ಕೇಳಿದೆ” ಎಂದು ಪ್ರತಿಕ್ರಿಯೆ ನೀಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....