Homeಕರ್ನಾಟಕದೇವೇಗೌಡ ಕುಟುಂಬದವರು ಅಧಿಕಾರ ಸ್ಥಾನದಿಂದ ಹಿಂದೆ ಸರಿದರೆ ಮಾತ್ರ ಜೆಡಿಎಸ್‌ ಉಳಿವು ಸಾಧ್ಯ: ವೈ.ಎಸ್‌.ವಿ ದತ್ತ

ದೇವೇಗೌಡ ಕುಟುಂಬದವರು ಅಧಿಕಾರ ಸ್ಥಾನದಿಂದ ಹಿಂದೆ ಸರಿದರೆ ಮಾತ್ರ ಜೆಡಿಎಸ್‌ ಉಳಿವು ಸಾಧ್ಯ: ವೈ.ಎಸ್‌.ವಿ ದತ್ತ

- Advertisement -
- Advertisement -

ರಾಜ್ಯದಲ್ಲಿ ಜೆಡಿಎಸ್‌ ಗಟ್ಟಿಯಾಗಿದೆ ಎಂದರೆ ನಮಗೆ ನಾವೇ ಸುಳ್ಳು ಹೇಳಿಕೊಂಡಂತೆ. ಜೆಡಿಎಸ್‌ ಪಕ್ಷ ಕುಸಿಯುತ್ತಿದೆ. ಜನರಿಗೆ ಪ್ರಾದೇಶಿಕ ಪಕ್ಷದ ಮಹತ್ವದ ಮನವರಿಕೆಯಾಗಿಲ್ಲ ಜೆಡಿಎಸ್‌ನ ವೈ.ಎಸ್‌.ವಿ ದತ್ತ ಅಭಿಪ್ರಾಯಪಟ್ಟಿದ್ದಾರೆ.

ಚಿಕ್ಕಮಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ದೇವೇಗೌಡರು ತಮ್ಮ 86ನೇ ವಯಸ್ಸಿನಲ್ಲಿಯೂ ಕಷ್ಟಪಟ್ಟು ಪಕ್ಷ ಕಟ್ಟಿದ್ದಾರೆ. ಆದರೆ ಇತ್ತೀಚೆಗೆ ಜೆಡಿಎಸ್‌ ಕುಸಿಯುತ್ತಿದೆ, ಸಡಿಲವಗುತ್ತಿದೆ. ಇದಕ್ಕೆ ಕಾರಣ ಇದು ಕುಟುಂಬದ ಪಕ್ಷ ಎಂದು ಎದುರಾಳಿಗೆ ಆಡಿಕೊಳ್ಳಲು ನಾವೇ ಒಂದಷ್ಟು ಅಸ್ತ್ರ-ಶಸ್ತ್ರಗಳನ್ನು ಕೊಟ್ಟಿದ್ದೇವೆ. ಇದನ್ನು ಕುಮಾರಸ್ವಾಮಿ ಮತ್ತು ದೇವೆಗೌಡರಿಗೂ ಹೇಳಿದ್ದೇನೆ. ಇದರಲ್ಲಿ ನನಗ್ಯಾವ ಮುಜುಗರವೂ ಇಲ್ಲ. ನಾವು ಅಧಿಕಾರಕ್ಕೆ ರಾಜಕೀಯ ಮಾಡಿದವರಲ್ಲ. ತತ್ವ ಸಿದ್ದಾಂತಕ್ಕಾಗಿ ರಾಜಕಾರಣ ಮಾಡಿದ್ದೇವೆ.

ನಮ್ಮ ಪಕ್ಷವನ್ನು ಕಟ್ಟಬೇಕಾದರೆ ಮುಂದೆ ಒಂದು ತೀರ್ಮಾನ ಮಾಡಬೇಕಾಗಿದೆ. ಪ್ರದಾಶಿಕ ಪಕ್ಷ ಅಧಿಕಾರಕ್ಕೆ ಬರುವುದಾದರೆ, ದೇವೇಗೌಡರು ಮತದಾರರಿಗೆ ಮನವರಿಕೆ ಮಾಡಿಕೊಡಬೇಕು. ನಮ್ಮ ಕುಟುಬಂದ ಯಾವೊಬ್ಬ ಸದಸ್ಯನು ಅಧಿಕಾರದ ಸ್ಥಾನಕ್ಕೆ ಬದರುವುದಿಲ್ಲ, ನಾವು  ದೂರ ಇದ್ದು ನಮ್ಮ ಪಕ್ಷಕ್ಕಾಗಿ ಪ್ರಾಮಾಣಿಕವಾಗಿ ದುಡಿದ, ತತ್ವಬದ್ಧವಾಗಿರುವವರನ್ನು ಅಧಿಕಾರದ ಸ್ಥಾನದಲ್ಲಿ ಕೂರಿಸುತ್ತೇವೆ ಎಂದು ಘೋಷಿಸಬೇಕು. ಆಗ ಮಾತ್ರ ಜೆಡಿಎಸ್‌ನ ಚೈತನ್ಯ ಸಾಧ್ಯ ಎಂದು ದತ್ತ ಹೇಳಿದ್ದಾರೆ.

ಪ್ರಾದೇಶಿಕ ಪಕ್ಷ ತುಂಬಾ ಅನಿವಾರ್ಯ. ತಮಿಳುನಾಡಿನಲ್ಲಿ ಸ್ಟಾಲಿನ್‌ ಇಲ್ಲದೇ, ಆಂದ್ರದಲ್ಲಿ ಜಗನ್‌-ಚಂದ್ರಬಾಬು ನಾಯ್ಡು ಇಲ್ಲದೆ ನಡೆಯೋಲ್ಲ. ತೆಲಂಗಾಣದಲ್ಲಿ ಕೆ.ಸಿ.ಆರ್‌ ಇಲ್ಲದೇ ಏನೂ ಕೆಲಸ ನಡೆಯುವುದಿಲ್ಲ.. ಆದರೆ ನಮ್ಮ ಕರ್ನಾಟಕದಲ್ಲಿ ಮಾತ್ರ ರಾಷ್ಟ್ರೀಯ ಪಕ್ಷಗಳದ್ದೇ ಕಾರುಬಾರು ಎಂದು ಅರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ರಾಷ್ಟ್ರದ್ಯಂತ ಬಿಜೆಪಿ ಕುಸಿಯುತ್ತಿದೆ. ಪ್ರಾದೇಶಿಕ ಪಕ್ಷಗಳನ್ನು ಊರುಗೋಲಾಗಿ ಇಟ್ಟುಕೊಂಡು ಕಾಂಗ್ರೆಸ್‌ ನಡೆಯುತ್ತಿದೆ. ಆದರೆ ರಾಜ್ಯದಲ್ಲಿ ಮಾತ್ರ ಅದಕ್ಕೆ ತದ್ವಿರುದ್ದವಾಗಿದೆ ಎಂದರು. ಪಕ್ಷಕ್ಕೆ ಚೈತನ್ಯ ತುಂಬಬೇಕಾಗಿದೆ.

ರಾಷ್ಟ್ರೀಯ ಪಕ್ಷಗಳಿಂದ ಸತತ ಅನ್ಯಾಯವಾಗುತ್ತಿದೆ:

ಕಾವೇರಿ ಸಮಸ್ಯೆ, ಮಹಾದಾಯಿ ಯೋಜನೆ, ಬೆಳಗಾವಿ ವಿವಾದ ಈ ರೀತಿಯ ಹಲವಾರು ಸಮಸ್ಯೆಗಳು ಕರ್ನಾಟಕ ರಾಜ್ಯವನ್ನು ಕಾಡುತ್ತಿದ್ದರೂ ಪ್ರಾದೇಶಿಕ ಪಕ್ಷಗಳ ಬಗ್ಗೆ ಕರ್ನಾಟಕದ ಜನರಿಗೆ ಅರಿವಾಗಿಲ್ಲ, ರಾಷ್ಟ್ರೀಯ ಪಕ್ಷಗಳಿಂದ ಸತತವಾಗಿ ಅನ್ಯಾಯವಾಗುತ್ತಿದೆ ಎಂದು ಜೆಡಿಎಸ್‌ನ ವೈ.ಎಸ್‌.ವಿ ದತ್ತ ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಒಬ್ಬರಿಗೆ ಒಂದು ಹುದ್ದೆ ಎಂಬಂತೆ ,ಕುಟುಂಬಕ್ಕೆ ಒಂದೇ ಹುದ್ದೆ ಎಂದರೆ ತುಸು ಸರಿಹೋಗಬಹುದು.

LEAVE A REPLY

Please enter your comment!
Please enter your name here

- Advertisment -

ಎಸ್‌ಐಆರ್‌ಗೂ ಸರ್ಕಾರಿ ಸೌಲಭ್ಯಕ್ಕೂ ಲಿಂಕ್; ಅರ್ಜಿ ವಿಚಾರಣೆಗೆ ಸುಪ್ರೀಂ ನಕಾರ : ನಿಜವಾದ ಆತಂಕ

ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳದ ಹೊಸ ಸರ್ಕಾರ ನೀಡಿರುವ ಆದೇಶಗಳ ವಿರುದ್ಧ ಸಲ್ಲಿಕೆಯಾಗಿದ್ದ ಅರ್ಜಿಯೊಂದರ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ 23 ಜೂನ್ 2026ರಂದು ನಿರಾಕರಿಸಿದೆ. ವಿಧಾನಸಭೆ ಚುನಾವಣೆಗೆ ಮುನ್ನ ನಡೆದ ವಿಶೇಷ...

ಒಂಬತ್ತನೇ ತರಗತಿ ಪಠ್ಯಪುಸ್ತಕದಲ್ಲಿ ತುರ್ತು ಪರಿಸ್ಥಿತಿ ಅಧ್ಯಾಯ ಸೇರಿಸಿದ ಎನ್‌ಸಿಇಆರ್‌ಟಿ

ಭಾರತದಲ್ಲಿ ತುರ್ತು ಪರಿಸ್ಥಿತಿ ಘೋಷಿಸಲ್ಪಟ್ಟ ಸುಮಾರು ಐದು ದಶಕಗಳ ನಂತರ, ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) ಈ ವಿಷಯವನ್ನು 9 ನೇ ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿ ಮೊದಲ...

‘ಆರ್‌ಎಸ್‌ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದೆ’: ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ

ಬೆಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘ (RSS) ಹಾಗೂ ಆಡಳಿತಾರೂಢ ಬಿಜೆಪಿ ವಿರುದ್ಧ ಕರ್ನಾಟಕದ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಮತ್ತೊಮ್ಮೆ ತೀವ್ರ ಸ್ವರೂಪದ ಸೈದ್ಧಾಂತಿಕ ದಾಳಿ ನಡೆಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಸರಣಿ ಪ್ರಶ್ನೆಗಳನ್ನು...

ಹೊಸ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ಜಾರಿಯ ಜೊತೆಯಲ್ಲೆ ಸುಪ್ರೀಂ ಕೋರ್ಟ್‌ಗೆ ಹೋಗಲು ಕರ್ನಾಟಕ ಸಜ್ಜು

ಕೇಂದ್ರ ಸರ್ಕಾರದ ಹೊಸ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ‘ವಿಕಸಿತ ಭಾರತ-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ)’ (VB-G RAM G) ಕಾಯ್ದೆಯ ಹಲವು ನಿಯಮಗಳಿಗೆ ತೀವ್ರ ವಿರೋಧ ವ್ಯಕ್ತಪಡಿಸಿದ್ದರೂ...

ಉತ್ತರ ಪ್ರದೇಶ: ಮದುವೆ ರಿಸೆಪ್ಷನ್‌ನಲ್ಲಿ ಗೋಮಾಂಸ ಬಡಿಸಿದ ಆರೋಪ; ವರನ ತಂದೆ ಸೇರಿ ಏಳು ಮಂದಿ ಬಂಧನ, ಮಂಟಪ ಸೀಲ್

ಶಾಮ್ಲಿ (ಉತ್ತರ ಪ್ರದೇಶ): ಉತ್ತರ ಪ್ರದೇಶದ ಶಾಮ್ಲಿ ಜಿಲ್ಲೆಯ ಕೈರಾನಾ ಪಟ್ಟಣದಲ್ಲಿ ನಡೆದ ಮದುವೆ ಆರತಕ್ಷತೆ (ವಲೀಮಾ) ಸಮಾರಂಭವೊಂದು ಈಗ ಭಾರೀ ವಿವಾದಕ್ಕೆ ಕಾರಣವಾಗಿದೆ. ಸಮಾರಂಭದಲ್ಲಿ ಅತಿಥಿಗಳಿಗೆ ಗೋಮಾಂಸವನ್ನು ಬೇಯಿಸಿ ಬಡಿಸಲಾಗಿದೆ ಎಂಬ...

ರಾಮ ಮಂದಿರ ದೇಣಿಗೆ ವಿವಾದ: ಎಫ್‌ಐಆರ್ ದಾಖಲಿಸಿ ತ್ವರಿತ ನ್ಯಾಯಾಲಯದ ವಿಚಾರಣೆಗೆ ವಿಶ್ವ ಹಿಂದೂ ಪರಿಷತ್ ಆಗ್ರಹ

ರಾಮ ದೇಣಿಗೆ ವಿವಾದ ದುರುಪಯೋಗ ಕುರಿತು ಎಸ್‌ಐಟಿ ತನ್ನ ಪ್ರಾಥಮಿಕ ವರದಿಯನ್ನು ಸಲ್ಲಿಸಿದ ಕೂಡಲೇ, ಬಲಪಂಥೀಯ ಹಿಂದುತ್ವ ಸಂಘಟನೆ ವಿಶ್ವ ಹಿಂದೂ ಪರಿಷತ್ (ವಿಎಚ್‌ಪಿ) ಪ್ರಕರಣದಲ್ಲಿ ಎಫ್‌ಐಆರ್ ದಾಖಲಿಸಬೇಕೆಂದು ಒತ್ತಾಯಿಸಿದೆ. ವಿಎಚ್‌ಪಿ ಅಂತರರಾಷ್ಟ್ರೀಯ...

ಪಾಸ್‌ಪೋರ್ಟ್ ಪೌರತ್ವದ ದಾಖಲೆಯಲ್ಲ: ವಿದೇಶಾಂಗ ಸಚಿವಾಲಯ

ಪಾಸ್‌ಪೋರ್ಟ್ ಒಂದು ಪ್ರಯಾಣದ ದಾಖಲೆಯಾಗಿದೆಯೇ ಹೊರತು, ಪೌರತ್ವದ ದಾಖಲೆಯಲ್ಲ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯದ (ಎಂಇಎ) ಅಧಿಕಾರಿಗಳು ಬುಧವಾರ (ಜೂನ್ 24) ತಿಳಿಸಿದ್ದಾರೆ. ಈ ಮೂಲಕ ಅವರು ಭಾರತೀಯ ಪೌರತ್ವವನ್ನು ಖಚಿತವಾಗಿ ಸಾಬೀತುಪಡಿಸುವ...

90 ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ, ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯ ಹಾಳಾಗಿದೆ ಆದರೆ ಪ್ರಧಾನ್ ತಮ್ಮ ಕುರ್ಚಿಗೆ ಅಂಟಿಕೊಂಡಿದ್ದಾರೆ: ಮಲ್ಲಿಕಾರ್ಜುನ ಖರ್ಗೆ

ನವದೆಹಲಿ: ದೇಶಾದ್ಯಂತ ಭಾರಿ ಸಂಚಲನ ಮೂಡಿಸಿರುವ 'ನೀಟ್' (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ವಿರುದ್ಧ ವಿರೋಧ ಪಕ್ಷಗಳು ತಮ್ಮ ಆಕ್ರೋಶವನ್ನು ಮತ್ತಷ್ಟು ತೀವ್ರಗೊಳಿಸಿವೆ. ಪರೀಕ್ಷಾ ಅಕ್ರಮಗಳನ್ನು ವಿರೋಧಿಸಿ...

2023ರಿಂದ 20 ಸಾವಿರಕ್ಕೂ ಹೆಚ್ಚು ಪ್ಯಾಲೆಸ್ತೀನ್ ಮಕ್ಕಳನ್ನು ಹತ್ಯೆಗೈದ ಇಸ್ರೇಲ್; ಉದ್ದೇಶಪೂರ್ವಕ ‘ನರಮೇಧ’ ಎಂದ ವರದಿ

ಪ್ಯಾಲೆಸ್ತೀನ್ ಮಕ್ಕಳನ್ನು ಉದ್ದೇಶಪೂರ್ವಕವಾಗಿ ಗುರಿಯಾಗಿಸಿಕೊಂಡು ಹತ್ಯೆ ಮಾಡುವ ಮೂಲಕ ಇಸ್ರೇಲ್‌ ಸೇನೆ ನರಮೇಧ ನಡೆಸಿದೆ ಎಂದು ವಿಶ್ವಸಂಸ್ಥೆಯ ಸ್ವತಂತ್ರ ಅಂತಾರಾಷ್ಟ್ರೀಯ ವಿಚಾರಣಾ ಆಯೋಗ ಮಂಗಳವಾರ (ಜೂ.23) ತಿಳಿಸಿದೆ. ಇಸ್ರೇಲ್ ಪಡೆಗಳು ಅಕ್ಟೋಬರ್ 2023ರಿಂದ ಈವರೆಗೆ...

ಮೀಸಲಾತಿ ರದ್ದುಗೊಳಿಸಲು ಬಿಜೆಪಿ ಮೂರನೇ ಎರಡರಷ್ಟು ಬಹುಮತ ಬಯಸುತ್ತಿದೆ: ಜೈರಾಮ್‌ ರಮೇಶ್‌

ಲೋಕಸಭೆಯಲ್ಲಿ ಬಿಜೆಪಿ ಮೂರನೇ ಎರಡರಷ್ಟು ಬಹುಮತಕ್ಕಾಗಿ ಶ್ರಮಿಸುತ್ತಿದೆ. ಏಕೆಂದರೆ, ಮೀಸಲಾತಿಯನ್ನು ಕೊನೆಗೊಳಿಸಲು ಸಂವಿಧಾನವನ್ನು ತಿದ್ದುಪಡಿ ಮಾಡುವುದು ಅದರ ನಿಜವಾದ ಮತ್ತು ಅಂತಿಮ ಗುರಿಯಾಗಿದೆ ಎಂದು ಕಾಂಗ್ರೆಸ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್...