Homeಕರ್ನಾಟಕದೇವೇಗೌಡ ಕುಟುಂಬದವರು ಅಧಿಕಾರ ಸ್ಥಾನದಿಂದ ಹಿಂದೆ ಸರಿದರೆ ಮಾತ್ರ ಜೆಡಿಎಸ್‌ ಉಳಿವು ಸಾಧ್ಯ: ವೈ.ಎಸ್‌.ವಿ ದತ್ತ

ದೇವೇಗೌಡ ಕುಟುಂಬದವರು ಅಧಿಕಾರ ಸ್ಥಾನದಿಂದ ಹಿಂದೆ ಸರಿದರೆ ಮಾತ್ರ ಜೆಡಿಎಸ್‌ ಉಳಿವು ಸಾಧ್ಯ: ವೈ.ಎಸ್‌.ವಿ ದತ್ತ

- Advertisement -
- Advertisement -

ರಾಜ್ಯದಲ್ಲಿ ಜೆಡಿಎಸ್‌ ಗಟ್ಟಿಯಾಗಿದೆ ಎಂದರೆ ನಮಗೆ ನಾವೇ ಸುಳ್ಳು ಹೇಳಿಕೊಂಡಂತೆ. ಜೆಡಿಎಸ್‌ ಪಕ್ಷ ಕುಸಿಯುತ್ತಿದೆ. ಜನರಿಗೆ ಪ್ರಾದೇಶಿಕ ಪಕ್ಷದ ಮಹತ್ವದ ಮನವರಿಕೆಯಾಗಿಲ್ಲ ಜೆಡಿಎಸ್‌ನ ವೈ.ಎಸ್‌.ವಿ ದತ್ತ ಅಭಿಪ್ರಾಯಪಟ್ಟಿದ್ದಾರೆ.

ಚಿಕ್ಕಮಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ದೇವೇಗೌಡರು ತಮ್ಮ 86ನೇ ವಯಸ್ಸಿನಲ್ಲಿಯೂ ಕಷ್ಟಪಟ್ಟು ಪಕ್ಷ ಕಟ್ಟಿದ್ದಾರೆ. ಆದರೆ ಇತ್ತೀಚೆಗೆ ಜೆಡಿಎಸ್‌ ಕುಸಿಯುತ್ತಿದೆ, ಸಡಿಲವಗುತ್ತಿದೆ. ಇದಕ್ಕೆ ಕಾರಣ ಇದು ಕುಟುಂಬದ ಪಕ್ಷ ಎಂದು ಎದುರಾಳಿಗೆ ಆಡಿಕೊಳ್ಳಲು ನಾವೇ ಒಂದಷ್ಟು ಅಸ್ತ್ರ-ಶಸ್ತ್ರಗಳನ್ನು ಕೊಟ್ಟಿದ್ದೇವೆ. ಇದನ್ನು ಕುಮಾರಸ್ವಾಮಿ ಮತ್ತು ದೇವೆಗೌಡರಿಗೂ ಹೇಳಿದ್ದೇನೆ. ಇದರಲ್ಲಿ ನನಗ್ಯಾವ ಮುಜುಗರವೂ ಇಲ್ಲ. ನಾವು ಅಧಿಕಾರಕ್ಕೆ ರಾಜಕೀಯ ಮಾಡಿದವರಲ್ಲ. ತತ್ವ ಸಿದ್ದಾಂತಕ್ಕಾಗಿ ರಾಜಕಾರಣ ಮಾಡಿದ್ದೇವೆ.

ನಮ್ಮ ಪಕ್ಷವನ್ನು ಕಟ್ಟಬೇಕಾದರೆ ಮುಂದೆ ಒಂದು ತೀರ್ಮಾನ ಮಾಡಬೇಕಾಗಿದೆ. ಪ್ರದಾಶಿಕ ಪಕ್ಷ ಅಧಿಕಾರಕ್ಕೆ ಬರುವುದಾದರೆ, ದೇವೇಗೌಡರು ಮತದಾರರಿಗೆ ಮನವರಿಕೆ ಮಾಡಿಕೊಡಬೇಕು. ನಮ್ಮ ಕುಟುಬಂದ ಯಾವೊಬ್ಬ ಸದಸ್ಯನು ಅಧಿಕಾರದ ಸ್ಥಾನಕ್ಕೆ ಬದರುವುದಿಲ್ಲ, ನಾವು  ದೂರ ಇದ್ದು ನಮ್ಮ ಪಕ್ಷಕ್ಕಾಗಿ ಪ್ರಾಮಾಣಿಕವಾಗಿ ದುಡಿದ, ತತ್ವಬದ್ಧವಾಗಿರುವವರನ್ನು ಅಧಿಕಾರದ ಸ್ಥಾನದಲ್ಲಿ ಕೂರಿಸುತ್ತೇವೆ ಎಂದು ಘೋಷಿಸಬೇಕು. ಆಗ ಮಾತ್ರ ಜೆಡಿಎಸ್‌ನ ಚೈತನ್ಯ ಸಾಧ್ಯ ಎಂದು ದತ್ತ ಹೇಳಿದ್ದಾರೆ.

ಪ್ರಾದೇಶಿಕ ಪಕ್ಷ ತುಂಬಾ ಅನಿವಾರ್ಯ. ತಮಿಳುನಾಡಿನಲ್ಲಿ ಸ್ಟಾಲಿನ್‌ ಇಲ್ಲದೇ, ಆಂದ್ರದಲ್ಲಿ ಜಗನ್‌-ಚಂದ್ರಬಾಬು ನಾಯ್ಡು ಇಲ್ಲದೆ ನಡೆಯೋಲ್ಲ. ತೆಲಂಗಾಣದಲ್ಲಿ ಕೆ.ಸಿ.ಆರ್‌ ಇಲ್ಲದೇ ಏನೂ ಕೆಲಸ ನಡೆಯುವುದಿಲ್ಲ.. ಆದರೆ ನಮ್ಮ ಕರ್ನಾಟಕದಲ್ಲಿ ಮಾತ್ರ ರಾಷ್ಟ್ರೀಯ ಪಕ್ಷಗಳದ್ದೇ ಕಾರುಬಾರು ಎಂದು ಅರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ರಾಷ್ಟ್ರದ್ಯಂತ ಬಿಜೆಪಿ ಕುಸಿಯುತ್ತಿದೆ. ಪ್ರಾದೇಶಿಕ ಪಕ್ಷಗಳನ್ನು ಊರುಗೋಲಾಗಿ ಇಟ್ಟುಕೊಂಡು ಕಾಂಗ್ರೆಸ್‌ ನಡೆಯುತ್ತಿದೆ. ಆದರೆ ರಾಜ್ಯದಲ್ಲಿ ಮಾತ್ರ ಅದಕ್ಕೆ ತದ್ವಿರುದ್ದವಾಗಿದೆ ಎಂದರು. ಪಕ್ಷಕ್ಕೆ ಚೈತನ್ಯ ತುಂಬಬೇಕಾಗಿದೆ.

ರಾಷ್ಟ್ರೀಯ ಪಕ್ಷಗಳಿಂದ ಸತತ ಅನ್ಯಾಯವಾಗುತ್ತಿದೆ:

ಕಾವೇರಿ ಸಮಸ್ಯೆ, ಮಹಾದಾಯಿ ಯೋಜನೆ, ಬೆಳಗಾವಿ ವಿವಾದ ಈ ರೀತಿಯ ಹಲವಾರು ಸಮಸ್ಯೆಗಳು ಕರ್ನಾಟಕ ರಾಜ್ಯವನ್ನು ಕಾಡುತ್ತಿದ್ದರೂ ಪ್ರಾದೇಶಿಕ ಪಕ್ಷಗಳ ಬಗ್ಗೆ ಕರ್ನಾಟಕದ ಜನರಿಗೆ ಅರಿವಾಗಿಲ್ಲ, ರಾಷ್ಟ್ರೀಯ ಪಕ್ಷಗಳಿಂದ ಸತತವಾಗಿ ಅನ್ಯಾಯವಾಗುತ್ತಿದೆ ಎಂದು ಜೆಡಿಎಸ್‌ನ ವೈ.ಎಸ್‌.ವಿ ದತ್ತ ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಒಬ್ಬರಿಗೆ ಒಂದು ಹುದ್ದೆ ಎಂಬಂತೆ ,ಕುಟುಂಬಕ್ಕೆ ಒಂದೇ ಹುದ್ದೆ ಎಂದರೆ ತುಸು ಸರಿಹೋಗಬಹುದು.

LEAVE A REPLY

Please enter your comment!
Please enter your name here

- Advertisment -

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...