Homeಕರ್ನಾಟಕದೇವೇಗೌಡ ಕುಟುಂಬದವರು ಅಧಿಕಾರ ಸ್ಥಾನದಿಂದ ಹಿಂದೆ ಸರಿದರೆ ಮಾತ್ರ ಜೆಡಿಎಸ್‌ ಉಳಿವು ಸಾಧ್ಯ: ವೈ.ಎಸ್‌.ವಿ ದತ್ತ

ದೇವೇಗೌಡ ಕುಟುಂಬದವರು ಅಧಿಕಾರ ಸ್ಥಾನದಿಂದ ಹಿಂದೆ ಸರಿದರೆ ಮಾತ್ರ ಜೆಡಿಎಸ್‌ ಉಳಿವು ಸಾಧ್ಯ: ವೈ.ಎಸ್‌.ವಿ ದತ್ತ

- Advertisement -
- Advertisement -

ರಾಜ್ಯದಲ್ಲಿ ಜೆಡಿಎಸ್‌ ಗಟ್ಟಿಯಾಗಿದೆ ಎಂದರೆ ನಮಗೆ ನಾವೇ ಸುಳ್ಳು ಹೇಳಿಕೊಂಡಂತೆ. ಜೆಡಿಎಸ್‌ ಪಕ್ಷ ಕುಸಿಯುತ್ತಿದೆ. ಜನರಿಗೆ ಪ್ರಾದೇಶಿಕ ಪಕ್ಷದ ಮಹತ್ವದ ಮನವರಿಕೆಯಾಗಿಲ್ಲ ಜೆಡಿಎಸ್‌ನ ವೈ.ಎಸ್‌.ವಿ ದತ್ತ ಅಭಿಪ್ರಾಯಪಟ್ಟಿದ್ದಾರೆ.

ಚಿಕ್ಕಮಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ದೇವೇಗೌಡರು ತಮ್ಮ 86ನೇ ವಯಸ್ಸಿನಲ್ಲಿಯೂ ಕಷ್ಟಪಟ್ಟು ಪಕ್ಷ ಕಟ್ಟಿದ್ದಾರೆ. ಆದರೆ ಇತ್ತೀಚೆಗೆ ಜೆಡಿಎಸ್‌ ಕುಸಿಯುತ್ತಿದೆ, ಸಡಿಲವಗುತ್ತಿದೆ. ಇದಕ್ಕೆ ಕಾರಣ ಇದು ಕುಟುಂಬದ ಪಕ್ಷ ಎಂದು ಎದುರಾಳಿಗೆ ಆಡಿಕೊಳ್ಳಲು ನಾವೇ ಒಂದಷ್ಟು ಅಸ್ತ್ರ-ಶಸ್ತ್ರಗಳನ್ನು ಕೊಟ್ಟಿದ್ದೇವೆ. ಇದನ್ನು ಕುಮಾರಸ್ವಾಮಿ ಮತ್ತು ದೇವೆಗೌಡರಿಗೂ ಹೇಳಿದ್ದೇನೆ. ಇದರಲ್ಲಿ ನನಗ್ಯಾವ ಮುಜುಗರವೂ ಇಲ್ಲ. ನಾವು ಅಧಿಕಾರಕ್ಕೆ ರಾಜಕೀಯ ಮಾಡಿದವರಲ್ಲ. ತತ್ವ ಸಿದ್ದಾಂತಕ್ಕಾಗಿ ರಾಜಕಾರಣ ಮಾಡಿದ್ದೇವೆ.

ನಮ್ಮ ಪಕ್ಷವನ್ನು ಕಟ್ಟಬೇಕಾದರೆ ಮುಂದೆ ಒಂದು ತೀರ್ಮಾನ ಮಾಡಬೇಕಾಗಿದೆ. ಪ್ರದಾಶಿಕ ಪಕ್ಷ ಅಧಿಕಾರಕ್ಕೆ ಬರುವುದಾದರೆ, ದೇವೇಗೌಡರು ಮತದಾರರಿಗೆ ಮನವರಿಕೆ ಮಾಡಿಕೊಡಬೇಕು. ನಮ್ಮ ಕುಟುಬಂದ ಯಾವೊಬ್ಬ ಸದಸ್ಯನು ಅಧಿಕಾರದ ಸ್ಥಾನಕ್ಕೆ ಬದರುವುದಿಲ್ಲ, ನಾವು  ದೂರ ಇದ್ದು ನಮ್ಮ ಪಕ್ಷಕ್ಕಾಗಿ ಪ್ರಾಮಾಣಿಕವಾಗಿ ದುಡಿದ, ತತ್ವಬದ್ಧವಾಗಿರುವವರನ್ನು ಅಧಿಕಾರದ ಸ್ಥಾನದಲ್ಲಿ ಕೂರಿಸುತ್ತೇವೆ ಎಂದು ಘೋಷಿಸಬೇಕು. ಆಗ ಮಾತ್ರ ಜೆಡಿಎಸ್‌ನ ಚೈತನ್ಯ ಸಾಧ್ಯ ಎಂದು ದತ್ತ ಹೇಳಿದ್ದಾರೆ.

ಪ್ರಾದೇಶಿಕ ಪಕ್ಷ ತುಂಬಾ ಅನಿವಾರ್ಯ. ತಮಿಳುನಾಡಿನಲ್ಲಿ ಸ್ಟಾಲಿನ್‌ ಇಲ್ಲದೇ, ಆಂದ್ರದಲ್ಲಿ ಜಗನ್‌-ಚಂದ್ರಬಾಬು ನಾಯ್ಡು ಇಲ್ಲದೆ ನಡೆಯೋಲ್ಲ. ತೆಲಂಗಾಣದಲ್ಲಿ ಕೆ.ಸಿ.ಆರ್‌ ಇಲ್ಲದೇ ಏನೂ ಕೆಲಸ ನಡೆಯುವುದಿಲ್ಲ.. ಆದರೆ ನಮ್ಮ ಕರ್ನಾಟಕದಲ್ಲಿ ಮಾತ್ರ ರಾಷ್ಟ್ರೀಯ ಪಕ್ಷಗಳದ್ದೇ ಕಾರುಬಾರು ಎಂದು ಅರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ರಾಷ್ಟ್ರದ್ಯಂತ ಬಿಜೆಪಿ ಕುಸಿಯುತ್ತಿದೆ. ಪ್ರಾದೇಶಿಕ ಪಕ್ಷಗಳನ್ನು ಊರುಗೋಲಾಗಿ ಇಟ್ಟುಕೊಂಡು ಕಾಂಗ್ರೆಸ್‌ ನಡೆಯುತ್ತಿದೆ. ಆದರೆ ರಾಜ್ಯದಲ್ಲಿ ಮಾತ್ರ ಅದಕ್ಕೆ ತದ್ವಿರುದ್ದವಾಗಿದೆ ಎಂದರು. ಪಕ್ಷಕ್ಕೆ ಚೈತನ್ಯ ತುಂಬಬೇಕಾಗಿದೆ.

ರಾಷ್ಟ್ರೀಯ ಪಕ್ಷಗಳಿಂದ ಸತತ ಅನ್ಯಾಯವಾಗುತ್ತಿದೆ:

ಕಾವೇರಿ ಸಮಸ್ಯೆ, ಮಹಾದಾಯಿ ಯೋಜನೆ, ಬೆಳಗಾವಿ ವಿವಾದ ಈ ರೀತಿಯ ಹಲವಾರು ಸಮಸ್ಯೆಗಳು ಕರ್ನಾಟಕ ರಾಜ್ಯವನ್ನು ಕಾಡುತ್ತಿದ್ದರೂ ಪ್ರಾದೇಶಿಕ ಪಕ್ಷಗಳ ಬಗ್ಗೆ ಕರ್ನಾಟಕದ ಜನರಿಗೆ ಅರಿವಾಗಿಲ್ಲ, ರಾಷ್ಟ್ರೀಯ ಪಕ್ಷಗಳಿಂದ ಸತತವಾಗಿ ಅನ್ಯಾಯವಾಗುತ್ತಿದೆ ಎಂದು ಜೆಡಿಎಸ್‌ನ ವೈ.ಎಸ್‌.ವಿ ದತ್ತ ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಒಬ್ಬರಿಗೆ ಒಂದು ಹುದ್ದೆ ಎಂಬಂತೆ ,ಕುಟುಂಬಕ್ಕೆ ಒಂದೇ ಹುದ್ದೆ ಎಂದರೆ ತುಸು ಸರಿಹೋಗಬಹುದು.

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...