Homeಮುಖಪುಟನೂಪುರ್ ಶರ್ಮಾ ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಧೀಶರ ಮೇಲೆ ವಯಕ್ತಿಕ ದಾಳಿ

ನೂಪುರ್ ಶರ್ಮಾ ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಧೀಶರ ಮೇಲೆ ವಯಕ್ತಿಕ ದಾಳಿ

- Advertisement -
- Advertisement -

ಪ್ರವಾದಿ ಮೊಹಮ್ಮದ್‌ರವರನ್ನು ನಿಂದಿಸಿದ್ದ ಬಿಜೆಪಿಯ ಉಚ್ಛಾಟಿತ ನಾಯಕಿ ನೂಪುರ್ ಶರ್ಮಾ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿ, ಅವರ ವಿರುದ್ಧ ಮೌಖಿಕ ಹೇಳಿಕೆ ನೀಡಿದ್ದ ನ್ಯಾಯಾಧೀಶರಿಗೆ ವಯಕ್ತಿಕ ಬೆದರಿಕೆ ಹಾಕಲಾಗಿದೆ ಎಂದು ವರದಿಯಾಗಿದೆ.

ಜಸ್ಟಿಸ್ ಸೂರ್ಯಕಾಂತ್ ಮತ್ತು ಜಸ್ಟಿಸ್ ಜೆ.ಪಿ ಪರ್ದಿವಾಲ ಅವರಿದ್ದ ಪೀಠವು ಎಲ್ಲಾ ಎಫ್‌ಐಆರ್‌ಗಳನ್ನು ಒಂದೇ ಎಂದು ಪರಿಗಣಿಸಿ ವಿಚಾರಣೆ ನಡೆಸುವಂತೆ ನೂಪುರ್ ಶರ್ಮಾ ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿತ್ತು. “ದೇಶದಲ್ಲಿ ಉಂಟಾದ ಉದ್ವಿಗ್ನ ವಾತಾವರಣಕ್ಕೆ ನೂಪುರ್ ಶರ್ಮಾ ಒಬ್ಬರೆ ಕಾರಣವಾಗಿದ್ದಾರೆ, ಹಿಡಿತವಿಲ್ಲದ ನಾಲಿಗೆಯಿಂದ ರಾಷ್ಟ್ರಕ್ಕೆ ಬೆಂಕಿ ಹಚ್ಚಿದೆ” ಎಂದು ಕಿಡಿಕಾರಿತ್ತು.

ಅದಾದ ನಂತರ ಅವರಿಬ್ಬರಿಗೂ ಸಾಮಾಜಿಕ ಜಾಲತಾಣಗಳಲ್ಲಿ ಬೆದರಿಕೆ ಬಂದಿವೆ ಎಂದು ಎನ್‌ಡಿಟಿವಿ ವರದಿ ಮಾಡಿದೆ. ಈ ಕುರಿತು ಪ್ರತಿಕ್ರಿಯಿಸಿರುವ ನ್ಯಾಯಾಧೀಶ ಪರ್ದಿವಾಲರವರು “ನ್ಯಾಯಾಧೀಶರು ತಮ್ಮ ತೀರ್ಪುಗಳಿಗಾಗಿ ವೈಯಕ್ತಿಕ ದಾಳಿಗೆ ಒಳಗಾಗುವುದು ಅಪಾಯಕಾರಿ ಸನ್ನಿವೇಶಕ್ಕೆ ಕಾರಣವಾಗುತ್ತವೆ. ಆಗ ನ್ಯಾಯಾಧೀಶರು ಕಾನೂನು ಏನು ಯೋಚಿಸುತ್ತದೆ ಎಂಬುದರ ಬದಲಿಗೆ ಮಾಧ್ಯಮಗಳು ಏನು ಯೋಚಿಸುತ್ತವೆ ಎಂಬುದರ ಕುರಿತು ಯೋಚಿಸಬೇಕಾಗುತ್ತದೆ. ಇದು ಕಾನೂನಿನ ನಿಯಮಕ್ಕೆ ಹಾನಿ ಮಾಡುತ್ತದೆ” ಎಂದಿದ್ದಾರೆ.

ನ್ಯಾಯಾಧೀಶರ ವಿರುದ್ಧ ರಚನಾತ್ಮಕ ವಿಮರ್ಶಾತ್ಮಕ ಮೌಲ್ಯಮಾಪನಕ್ಕಿಂತ ಹೆಚ್ಚಾಗಿ ವೈಯಕ್ತೀಕರಿಸಿದ ಅಭಿಪ್ರಾಯಗಳನ್ನು ವ್ಯಕ್ತಪಡಿಸುವುದು ನ್ಯಾಯಾಂಗ ಸಂಸ್ಥೆಗೆ ಹಾನಿ ಮತ್ತು ಅದರ ಘನತೆಯನ್ನು ಕಡಿಮೆ ಮಾಡುತ್ತದೆ. ತೀರ್ಪುಗಳ ಪರಿಹಾರವು ಸಾಮಾಜಿಕ ಮಾಧ್ಯಮದಲ್ಲಿ ಅಲ್ಲ ಆದರೆ ಶ್ರೇಣಿಯ ಉನ್ನತ ನ್ಯಾಯಾಲಯಗಳಲ್ಲಿದೆ ಎಂದಿದ್ದಾರೆ.

ಸಂವಿಧಾನದ ಅಡಿಯಲ್ಲಿ ಕಾನೂನು ಸುವ್ಯವಸ್ಥೆಯನ್ನು ಕಾಪಾಡಲು ದೇಶದಾದ್ಯಂತ ಡಿಜಿಟಲ್ ಮತ್ತು ಸಾಮಾಜಿಕ ಮಾಧ್ಯಮವನ್ನು ನಿಯಂತ್ರಿಸುವ ಅಗತ್ಯವಿದೆ ಎಂದು ಅವರು ಹೇಳಿದ್ದಾರೆ.

ಇನ್ನೊಂದೆಡೆ ಸುಪ್ರೀಂ ವಿರುದ್ಧ ನಾಲಿಗೆ ಹರಿಯಬಿಟ್ಟಿದ್ದಕ್ಕಾಗಿ OPIndia ಮತ್ತು ಅದರ ಸಂಪಾದಕಿ ನೂಪುರ್ ಜೆ ಶರ್ಮಾ ವಿರುದ್ಧ ಟಿಎಂಸಿ ಮುಖಂಡ ಸಾಕೇತ್ ಗೋಖಲೆ ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಸಿದ್ದಾರೆ. ಬಿಜೆಪಿ ಮುಖವಾಣಿ OPIndia ಮತ್ತು ಅದರ ಸಂಪಾದಕಿ ನೂಪುರ್ ಜೆ ಶರ್ಮಾ ವಿರುದ್ಧ ಕ್ರಿಮಿನಲ್ ನ್ಯಾಯಾಂಗ ನಿಂದನೆ ಪ್ರಕ್ರಿಯೆಗಳನ್ನು ಪ್ರಾರಂಭಿಸಲು ಕೋರಿ ಭಾರತದ ಅಟಾರ್ನಿ ಜನರಲ್ ಕೆ.ಕೆ ವೇಣುಗೋಪಾಲ್‌ರವರಿಗೆ ಪತ್ರ ಬರೆಯಲಾಗಿದೆ.

ಇದನ್ನೂ ಓದಿ: ಸುಪ್ರೀಂ ಕೋರ್ಟ್‌ಗೆ ಅವಮಾನ – OPIndia, ನೂಪುರ್ ಜೆ ಶರ್ಮಾ ವಿರುದ್ಧ ನ್ಯಾಯಾಂಗ ನಿಂದನೆ ಅರ್ಜಿ

ಜುಲೈ 1 ರಂದು OPIndia ದ ಅಧಿಕೃತ ಟ್ವಿಟರ್ ಹ್ಯಾಂಡಲ್‌ನಲ್ಲಿ “ಸುಪ್ರೀಂ ಕೋರ್ಟ್ ಇಸ್ಲಾಂ ಧರ್ಮೀಯರಂತೆ ಮಾತನಾಡುತ್ತದೆ, ಇಸ್ಲಾಮಿಕ್ ಮತಾಂಧರಿಂದ ಹಿಂದೂ ವ್ಯಕ್ತಿಯ ಶಿರಚ್ಛೇದಕ್ಕೆ ನೂಪುರ್ ಶರ್ಮಾ ಅವರ ‘ಸಡಿಲ ನಾಲಿಗೆ’ಯನ್ನು ದೂರುವ ಮೂಲಕ ಕೆಟ್ಟ ವಿಚಾರಣೆ ನಡೆಸುತ್ತದೆ. ಸುಪ್ರೀಂ ಕೋರ್ಟ್ ಷರಿಯಾವನ್ನು ಅನುಸರಿಸುತ್ತದೆಯೇ?” ಎಂದು ಟ್ವೀಟ್ ಮಾಡುವ ಮೂಲಕ ಅವಮಾನ ಮಾಡಲಾಗಿದೆ ಎಂದು ಅರ್ಜಿಯಲ್ಲಿ ಉಲ್ಲೇಖಿಸಲಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

5 COMMENTS

  1. ಸತ್ಯ ಹೇಳಿದಾಗ ವೈಯುಕ್ತಿಕವಾಗಿ ದಾಳಿ ಮಾಡೋದು ಈ ಪ್ರಕರಣದಲ್ಲಿ ಹಲವು ಮತಾಂಧರ ಕುಕೃತ್ಯವಾಗಿದೆ,ಮಾನ್ಯ ನ್ಯಾಯಮೂರ್ತಿಗಳೇ,ಇದರ ಬಗ್ಗೆ ತಲೆಕೆಡಿಸಿಕೊಳ್ಳುವ ಅಗತ್ಯವಿಲ್ಲ ತಾವು ಸಂವಿಧಾನಾತ್ಮಕವಾಗಿ ಕಾರ್ಯನಿರ್ವಹಿಸುತ್ತಿದ್ದೀರಿ, ತಾವು ದೇಶದ ಸಂವಿಧಾನಕ್ಕೆ ಉತ್ತರದಾಯಿಗಳೇ ಹೊರತು ಇಂತಹ ಮತಾಂಧ ಕಿಡಗೇಡಿ ಗಳಿಗಲ್ಲ.

  2. ಮೊದಲು ದೇಶಕ್ಕೆ ಬೆಂಕಿ ಹಚ್ಚುವ ಕೆಲಸ ಮಾಡಿದ್ದು ಆಲ್ಟ ನ್ಯೂಸ್ ನ ಜುಬೇರ್ ನನ್ನ ಗೆಲ್ಲಿಗೇರಿಸುವ ಕೆಲಸ ಮಾಡಬೇಕು ,ಅದುಬಿಟ್ಟು ಇಸ್ಲಾಮ್ ನಲ್ಲಿನ ನೈಜ ಅಂಶಗಳ ಬಗ್ಗೆ ಮಾತನಾಡಿದ ನೂಪುರ್ ಶರ್ಮ ಬಗ್ಗೆ ಮೌಖಿಕ ಸೂಚನೆ ನೀಡುವ ಮೊದಲು ಯೋಚಿಸಬೇಕು

  3. ಮೊದಲು ದೇಶಕ್ಕೆ ಬೆಂಕಿ ಹಚ್ಚುವ ಕೆಲಸ ಮಾಡಿದ್ದು ಆಲ್ಟ ನ್ಯೂಸ್ ನ ಜುಬೇರ್ ನನ್ನ ಗೆಲ್ಲಿಗೇರಿಸುವ ಕೆಲಸ ಮಾಡಬೇಕು ,ಅದುಬಿಟ್ಟು ಭಶೀರರ ಧರ್ಮದ ನೈಜ ಅಂಶಗಳ ಬಗ್ಗೆ ಮಾತನಾಡಿದ ನೂಪುರ್ ಶರ್ಮ ಬಗ್ಗೆ ಮೌಖಿಕ ಸೂಚನೆ ನೀಡುವ ಮೊದಲು ಯೋಚಿಸಬೇಕು

  4. ನ್ಯಾಯಧೀಶರೆ ನೀವು ತಲೆ ಕೆಡಿಸಿಕೊಳ್ಳಬೇಡಿ ಅವುಗಳು ಹೇಸಿಗೆ ತಿನ್ನೋ ಜಾತಿಗೆ ಸೇರಿವೆ ಏನೇ ಬೊಗಳಿದರು ನೀವು ಸಂವಿದಾನಾತ್ಮಕ ತೀರ್ಪು ಕೊಡಿ. ಕೆಲವು ಹುಚ್ಚು ನಾಯಿಗಳು ಅಂತೂ ಒಂದು ಧರ್ಮದ ಬಗ್ಗೆ ಹಗುರವಾಗಿ ಮಾತಾಡಿದ್ರೆ ಅವ್ರಿಗೆ ಹೀರೋ ಅಂತ ಸ್ವೀಕಾರ ಮಾಡತವರೇ. ಹೇಸಿಗೆಯಲ್ಲಿನ ಹುಳುಗಳು ಅದರ ಆಚೆ ಬರಲು ಇಷ್ಟ ಪಡೋದಿಲ್ಲ. ಈ ಹಲ್ಕಟ್ ಸೂ.. ಮ ###ನೆಟ್ಟಗೆ ಅವರ ಅವರ ಧರ್ಮ ಗ್ರಂಥಗಳು ಓದಿದರೆ ಸಾಕು ಬೇರೆ ಧರ್ಮ ಗ್ರಂಥ ಓದೋದು ಬೇಡ.

  5. ನಮ್ಮ ದೇಶ ಸಂದಿಗ್ಧ ಪರಿಸ್ಥಿತಿಯಲ್ಲಿದೆ. ದೇಶ ಉಳಿಯಬೇಕೆಂದರೆ ದೇಶದ ಶ್ರೇಷ್ಠ ನ್ಯಾಯಾಲಯ ನಿಷ್ಪಕ್ಷಪಾತವಾಗಿ ನಿರ್ಭಯವಾಗಿ ದಿಟ್ಟತನದಿಂದ ಕಾರ್ಯ ನಿರ್ವಹಿಸಿದರೆ ಮಾತ್ರ ಸಾದ್ಯ. ಬಿ.ಜೆ.ಪಿ. ಆರ್.ಎಸ್ಸ್.ಎಸ್ಸ್. ರವರ ಕುತಂತ್ರಗಳಿಗೆ ನಾಯಾಧೀಶರಗಳು ಹೆದರ ಬೇಕಾಗಿಲ್ಲ. ದೇಶ ಪ್ರಜೆಗಳು ನಿಮ್ಮ ಜೊತೆ ಇರುತ್ತಾರೆ.

LEAVE A REPLY

Please enter your comment!
Please enter your name here

- Advertisment -

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...

ಗಾಜಾದಲ್ಲಿ ಇಸ್ರೇಲ್ ನಡೆಸಿದ ಹೊಸ ಕದನ ವಿರಾಮ ಉಲ್ಲಂಘನೆಯಲ್ಲಿ ಮಕ್ಕಳು ಸೇರಿದಂತೆ 31 ಮಂದಿ ಸಾವು

ಮೇ 2024ರ ನಂತರ ಇಸ್ರೇಲ್ ಮೊದಲ ಬಾರಿಗೆ ಈಜಿಪ್ಟ್‌ನೊಂದಿಗೆ ರಫಾ ಕ್ರಾಸಿಂಗ್ ಅನ್ನು ಮತ್ತೆ ತೆರೆಯಲು ಸಜ್ಜಾಗುತ್ತಿರುವ ಒಂದು ದಿನ ಮೊದಲು, ಅಲ್ ಜಜೀರಾ ಜೊತೆ ಮಾತನಾಡಿದ ವೈದ್ಯಕೀಯ ಮೂಲಗಳು, ಬೆಳಗಿನ ಜಾವದಿಂದ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...

ಆಕಸ್ಮಿಕವಾಗಿ ಗಡಿ ದಾಟಿದ್ದ 7 ಭಾರತೀಯರನ್ನು ಹಸ್ತಾಂತರಿಸಿದ ಪಾಕಿಸ್ತಾನ

2023 ರ ಪ್ರವಾಹದ ಸಮಯದಲ್ಲಿ ಅಜಾಗರೂಕತೆಯಿಂದ ಗಡಿ ದಾಟಿದ ನಂತರ ಬಂಧಿಸಲ್ಪಟ್ಟ ಏಳು ಭಾರತೀಯ ನಾಗರಿಕರನ್ನು ಪಾಕಿಸ್ತಾನ ಶನಿವಾರ ಸ್ವದೇಶಕ್ಕೆ ವಾಪಸ್ ಕಳುಹಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪಂಜಾಬ್‌ನ ಅಟ್ಟಾರಿ ಇಂಟಿಗ್ರೇಟೆಡ್ ಚೆಕ್ ಪೋಸ್ಟ್‌ನಲ್ಲಿ...

ಮೀರತ್| ಅಪಹರಣ ಪ್ರಕರಣ ಹಿಂಪಡೆಯುವಂತೆ ಪೊಲೀಸರ ಒತ್ತಡ; ‘ಗೃಹಬಂಧನ’ದಲ್ಲಿ ದಲಿತ ಕುಟುಂಬ

ಜನವರಿ ತಿಂಗಳ ಆರಂಭದಲ್ಲಿ ಉತ್ತರ ಪ್ರದೇಶದ ಮೀರತ್ ಜಿಲ್ಲೆಯ ಕಪ್ಸಾದ್ ಗ್ರಾಮದಲ್ಲಿ ತಾಯಿಯ ಕೊಲೆಯ ನಂತರ ಅಪಹರಿಸಲ್ಪಟ್ಟ ದಲಿತ ಹುಡುಗಿಯ ಕುಟುಂಬ ಸದಸ್ಯರು ತಾವು ಗೃಹಬಂಧನದಲ್ಲಿದ್ದು, ಆರೋಪಿಗಳ ವಿರುದ್ಧ ಪ್ರಕರಣವನ್ನು ಮುಂದುವರಿಸದಂತೆ ಪೊಲೀಸರು...

ಉದ್ಯಮಿ ಸಿಜೆ ರಾಯ್ ಮರಣೋತ್ತರ ಪರೀಕ್ಷೆ; ಹೃದಯ-ಶ್ವಾಸಕೋಶದಲ್ಲಿ 6.35 ಎಂಎಂ ಗುಂಡಿನ ಗಾಯ

ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ಸಿಜೆ ರಾಯ್ ಅವರ ಆತ್ಮಹತ್ಯೆಯ ಮರಣೋತ್ತರ ಪರೀಕ್ಷೆಯ ವರದಿಗಯನ್ನು ಬೆಂಗಳೂರಿನ ಬೌರಿಂಗ್ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ. ಅರವಿಂದ್ ಎಂಎನ್ ವಿವರಿಸಿದ್ದಾರೆ. 6.35 ಎಂಎಂ ಗುಂಡಿನ ದಾಳಿಯು ತಕ್ಷಣದ...

ಮುಂಬೈ| ನಿರ್ದೇಶಕ ರೋಹಿತ್ ಶೆಟ್ಟಿ ಮನೆಯ ಹೊರಗೆ 4 ಸುತ್ತು ಗುಂಡು ಹಾರಿಸಿದ ಅಪರಿಚಿತರು

ಶನಿವಾರ ತಡರಾತ್ರಿ, ಬಾಲಿವುಡ್ ನಿರ್ದೇಶಕ ರೋಹಿತ್ ಶೆಟ್ಟಿ ಅವರ ಮುಂಬೈನ ಜುಹು ನಿವಾಸದ ಹೊರಗೆ ನಾಲ್ಕು ಸುತ್ತು ಗುಂಡು ಹಾರಿಸಲಾಗಿದ್ದು, ಘಟನೆಯಲ್ಲಿ ಯಾವುದೇ ಗಾಯಗಳಾಗಿಲ್ಲ ಎಂದು ವರದಿಯಾಗಿದೆ. ಚಿತ್ರ ನಿರ್ಮಾಪಕ-ನಿರ್ದೇಶಕರ ಕಟ್ಟಡದ ಬಳಿ ಅಪರಿಚಿತ...

ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಪ್ರಮಾಣ ವಚನ ಸ್ವೀಕಾರ

ಜನವರಿ 28ರಂದು ವಿಮಾನ ಅಪಘಾತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರು ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಶನಿವಾರ (ಜ.31) ಪ್ರಮಾಣವಚನ ಸ್ವೀಕರಿಸಿದರು. ಮುಂಬೈನ ಲೋಕಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ...