Homeಮುಖಪುಟನೂಪುರ್ ಶರ್ಮಾ ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಧೀಶರ ಮೇಲೆ ವಯಕ್ತಿಕ ದಾಳಿ

ನೂಪುರ್ ಶರ್ಮಾ ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಧೀಶರ ಮೇಲೆ ವಯಕ್ತಿಕ ದಾಳಿ

- Advertisement -
- Advertisement -

ಪ್ರವಾದಿ ಮೊಹಮ್ಮದ್‌ರವರನ್ನು ನಿಂದಿಸಿದ್ದ ಬಿಜೆಪಿಯ ಉಚ್ಛಾಟಿತ ನಾಯಕಿ ನೂಪುರ್ ಶರ್ಮಾ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿ, ಅವರ ವಿರುದ್ಧ ಮೌಖಿಕ ಹೇಳಿಕೆ ನೀಡಿದ್ದ ನ್ಯಾಯಾಧೀಶರಿಗೆ ವಯಕ್ತಿಕ ಬೆದರಿಕೆ ಹಾಕಲಾಗಿದೆ ಎಂದು ವರದಿಯಾಗಿದೆ.

ಜಸ್ಟಿಸ್ ಸೂರ್ಯಕಾಂತ್ ಮತ್ತು ಜಸ್ಟಿಸ್ ಜೆ.ಪಿ ಪರ್ದಿವಾಲ ಅವರಿದ್ದ ಪೀಠವು ಎಲ್ಲಾ ಎಫ್‌ಐಆರ್‌ಗಳನ್ನು ಒಂದೇ ಎಂದು ಪರಿಗಣಿಸಿ ವಿಚಾರಣೆ ನಡೆಸುವಂತೆ ನೂಪುರ್ ಶರ್ಮಾ ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿತ್ತು. “ದೇಶದಲ್ಲಿ ಉಂಟಾದ ಉದ್ವಿಗ್ನ ವಾತಾವರಣಕ್ಕೆ ನೂಪುರ್ ಶರ್ಮಾ ಒಬ್ಬರೆ ಕಾರಣವಾಗಿದ್ದಾರೆ, ಹಿಡಿತವಿಲ್ಲದ ನಾಲಿಗೆಯಿಂದ ರಾಷ್ಟ್ರಕ್ಕೆ ಬೆಂಕಿ ಹಚ್ಚಿದೆ” ಎಂದು ಕಿಡಿಕಾರಿತ್ತು.

ಅದಾದ ನಂತರ ಅವರಿಬ್ಬರಿಗೂ ಸಾಮಾಜಿಕ ಜಾಲತಾಣಗಳಲ್ಲಿ ಬೆದರಿಕೆ ಬಂದಿವೆ ಎಂದು ಎನ್‌ಡಿಟಿವಿ ವರದಿ ಮಾಡಿದೆ. ಈ ಕುರಿತು ಪ್ರತಿಕ್ರಿಯಿಸಿರುವ ನ್ಯಾಯಾಧೀಶ ಪರ್ದಿವಾಲರವರು “ನ್ಯಾಯಾಧೀಶರು ತಮ್ಮ ತೀರ್ಪುಗಳಿಗಾಗಿ ವೈಯಕ್ತಿಕ ದಾಳಿಗೆ ಒಳಗಾಗುವುದು ಅಪಾಯಕಾರಿ ಸನ್ನಿವೇಶಕ್ಕೆ ಕಾರಣವಾಗುತ್ತವೆ. ಆಗ ನ್ಯಾಯಾಧೀಶರು ಕಾನೂನು ಏನು ಯೋಚಿಸುತ್ತದೆ ಎಂಬುದರ ಬದಲಿಗೆ ಮಾಧ್ಯಮಗಳು ಏನು ಯೋಚಿಸುತ್ತವೆ ಎಂಬುದರ ಕುರಿತು ಯೋಚಿಸಬೇಕಾಗುತ್ತದೆ. ಇದು ಕಾನೂನಿನ ನಿಯಮಕ್ಕೆ ಹಾನಿ ಮಾಡುತ್ತದೆ” ಎಂದಿದ್ದಾರೆ.

ನ್ಯಾಯಾಧೀಶರ ವಿರುದ್ಧ ರಚನಾತ್ಮಕ ವಿಮರ್ಶಾತ್ಮಕ ಮೌಲ್ಯಮಾಪನಕ್ಕಿಂತ ಹೆಚ್ಚಾಗಿ ವೈಯಕ್ತೀಕರಿಸಿದ ಅಭಿಪ್ರಾಯಗಳನ್ನು ವ್ಯಕ್ತಪಡಿಸುವುದು ನ್ಯಾಯಾಂಗ ಸಂಸ್ಥೆಗೆ ಹಾನಿ ಮತ್ತು ಅದರ ಘನತೆಯನ್ನು ಕಡಿಮೆ ಮಾಡುತ್ತದೆ. ತೀರ್ಪುಗಳ ಪರಿಹಾರವು ಸಾಮಾಜಿಕ ಮಾಧ್ಯಮದಲ್ಲಿ ಅಲ್ಲ ಆದರೆ ಶ್ರೇಣಿಯ ಉನ್ನತ ನ್ಯಾಯಾಲಯಗಳಲ್ಲಿದೆ ಎಂದಿದ್ದಾರೆ.

ಸಂವಿಧಾನದ ಅಡಿಯಲ್ಲಿ ಕಾನೂನು ಸುವ್ಯವಸ್ಥೆಯನ್ನು ಕಾಪಾಡಲು ದೇಶದಾದ್ಯಂತ ಡಿಜಿಟಲ್ ಮತ್ತು ಸಾಮಾಜಿಕ ಮಾಧ್ಯಮವನ್ನು ನಿಯಂತ್ರಿಸುವ ಅಗತ್ಯವಿದೆ ಎಂದು ಅವರು ಹೇಳಿದ್ದಾರೆ.

ಇನ್ನೊಂದೆಡೆ ಸುಪ್ರೀಂ ವಿರುದ್ಧ ನಾಲಿಗೆ ಹರಿಯಬಿಟ್ಟಿದ್ದಕ್ಕಾಗಿ OPIndia ಮತ್ತು ಅದರ ಸಂಪಾದಕಿ ನೂಪುರ್ ಜೆ ಶರ್ಮಾ ವಿರುದ್ಧ ಟಿಎಂಸಿ ಮುಖಂಡ ಸಾಕೇತ್ ಗೋಖಲೆ ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಸಿದ್ದಾರೆ. ಬಿಜೆಪಿ ಮುಖವಾಣಿ OPIndia ಮತ್ತು ಅದರ ಸಂಪಾದಕಿ ನೂಪುರ್ ಜೆ ಶರ್ಮಾ ವಿರುದ್ಧ ಕ್ರಿಮಿನಲ್ ನ್ಯಾಯಾಂಗ ನಿಂದನೆ ಪ್ರಕ್ರಿಯೆಗಳನ್ನು ಪ್ರಾರಂಭಿಸಲು ಕೋರಿ ಭಾರತದ ಅಟಾರ್ನಿ ಜನರಲ್ ಕೆ.ಕೆ ವೇಣುಗೋಪಾಲ್‌ರವರಿಗೆ ಪತ್ರ ಬರೆಯಲಾಗಿದೆ.

ಇದನ್ನೂ ಓದಿ: ಸುಪ್ರೀಂ ಕೋರ್ಟ್‌ಗೆ ಅವಮಾನ – OPIndia, ನೂಪುರ್ ಜೆ ಶರ್ಮಾ ವಿರುದ್ಧ ನ್ಯಾಯಾಂಗ ನಿಂದನೆ ಅರ್ಜಿ

ಜುಲೈ 1 ರಂದು OPIndia ದ ಅಧಿಕೃತ ಟ್ವಿಟರ್ ಹ್ಯಾಂಡಲ್‌ನಲ್ಲಿ “ಸುಪ್ರೀಂ ಕೋರ್ಟ್ ಇಸ್ಲಾಂ ಧರ್ಮೀಯರಂತೆ ಮಾತನಾಡುತ್ತದೆ, ಇಸ್ಲಾಮಿಕ್ ಮತಾಂಧರಿಂದ ಹಿಂದೂ ವ್ಯಕ್ತಿಯ ಶಿರಚ್ಛೇದಕ್ಕೆ ನೂಪುರ್ ಶರ್ಮಾ ಅವರ ‘ಸಡಿಲ ನಾಲಿಗೆ’ಯನ್ನು ದೂರುವ ಮೂಲಕ ಕೆಟ್ಟ ವಿಚಾರಣೆ ನಡೆಸುತ್ತದೆ. ಸುಪ್ರೀಂ ಕೋರ್ಟ್ ಷರಿಯಾವನ್ನು ಅನುಸರಿಸುತ್ತದೆಯೇ?” ಎಂದು ಟ್ವೀಟ್ ಮಾಡುವ ಮೂಲಕ ಅವಮಾನ ಮಾಡಲಾಗಿದೆ ಎಂದು ಅರ್ಜಿಯಲ್ಲಿ ಉಲ್ಲೇಖಿಸಲಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

5 COMMENTS

  1. ಸತ್ಯ ಹೇಳಿದಾಗ ವೈಯುಕ್ತಿಕವಾಗಿ ದಾಳಿ ಮಾಡೋದು ಈ ಪ್ರಕರಣದಲ್ಲಿ ಹಲವು ಮತಾಂಧರ ಕುಕೃತ್ಯವಾಗಿದೆ,ಮಾನ್ಯ ನ್ಯಾಯಮೂರ್ತಿಗಳೇ,ಇದರ ಬಗ್ಗೆ ತಲೆಕೆಡಿಸಿಕೊಳ್ಳುವ ಅಗತ್ಯವಿಲ್ಲ ತಾವು ಸಂವಿಧಾನಾತ್ಮಕವಾಗಿ ಕಾರ್ಯನಿರ್ವಹಿಸುತ್ತಿದ್ದೀರಿ, ತಾವು ದೇಶದ ಸಂವಿಧಾನಕ್ಕೆ ಉತ್ತರದಾಯಿಗಳೇ ಹೊರತು ಇಂತಹ ಮತಾಂಧ ಕಿಡಗೇಡಿ ಗಳಿಗಲ್ಲ.

  2. ಮೊದಲು ದೇಶಕ್ಕೆ ಬೆಂಕಿ ಹಚ್ಚುವ ಕೆಲಸ ಮಾಡಿದ್ದು ಆಲ್ಟ ನ್ಯೂಸ್ ನ ಜುಬೇರ್ ನನ್ನ ಗೆಲ್ಲಿಗೇರಿಸುವ ಕೆಲಸ ಮಾಡಬೇಕು ,ಅದುಬಿಟ್ಟು ಇಸ್ಲಾಮ್ ನಲ್ಲಿನ ನೈಜ ಅಂಶಗಳ ಬಗ್ಗೆ ಮಾತನಾಡಿದ ನೂಪುರ್ ಶರ್ಮ ಬಗ್ಗೆ ಮೌಖಿಕ ಸೂಚನೆ ನೀಡುವ ಮೊದಲು ಯೋಚಿಸಬೇಕು

  3. ಮೊದಲು ದೇಶಕ್ಕೆ ಬೆಂಕಿ ಹಚ್ಚುವ ಕೆಲಸ ಮಾಡಿದ್ದು ಆಲ್ಟ ನ್ಯೂಸ್ ನ ಜುಬೇರ್ ನನ್ನ ಗೆಲ್ಲಿಗೇರಿಸುವ ಕೆಲಸ ಮಾಡಬೇಕು ,ಅದುಬಿಟ್ಟು ಭಶೀರರ ಧರ್ಮದ ನೈಜ ಅಂಶಗಳ ಬಗ್ಗೆ ಮಾತನಾಡಿದ ನೂಪುರ್ ಶರ್ಮ ಬಗ್ಗೆ ಮೌಖಿಕ ಸೂಚನೆ ನೀಡುವ ಮೊದಲು ಯೋಚಿಸಬೇಕು

  4. ನ್ಯಾಯಧೀಶರೆ ನೀವು ತಲೆ ಕೆಡಿಸಿಕೊಳ್ಳಬೇಡಿ ಅವುಗಳು ಹೇಸಿಗೆ ತಿನ್ನೋ ಜಾತಿಗೆ ಸೇರಿವೆ ಏನೇ ಬೊಗಳಿದರು ನೀವು ಸಂವಿದಾನಾತ್ಮಕ ತೀರ್ಪು ಕೊಡಿ. ಕೆಲವು ಹುಚ್ಚು ನಾಯಿಗಳು ಅಂತೂ ಒಂದು ಧರ್ಮದ ಬಗ್ಗೆ ಹಗುರವಾಗಿ ಮಾತಾಡಿದ್ರೆ ಅವ್ರಿಗೆ ಹೀರೋ ಅಂತ ಸ್ವೀಕಾರ ಮಾಡತವರೇ. ಹೇಸಿಗೆಯಲ್ಲಿನ ಹುಳುಗಳು ಅದರ ಆಚೆ ಬರಲು ಇಷ್ಟ ಪಡೋದಿಲ್ಲ. ಈ ಹಲ್ಕಟ್ ಸೂ.. ಮ ###ನೆಟ್ಟಗೆ ಅವರ ಅವರ ಧರ್ಮ ಗ್ರಂಥಗಳು ಓದಿದರೆ ಸಾಕು ಬೇರೆ ಧರ್ಮ ಗ್ರಂಥ ಓದೋದು ಬೇಡ.

  5. ನಮ್ಮ ದೇಶ ಸಂದಿಗ್ಧ ಪರಿಸ್ಥಿತಿಯಲ್ಲಿದೆ. ದೇಶ ಉಳಿಯಬೇಕೆಂದರೆ ದೇಶದ ಶ್ರೇಷ್ಠ ನ್ಯಾಯಾಲಯ ನಿಷ್ಪಕ್ಷಪಾತವಾಗಿ ನಿರ್ಭಯವಾಗಿ ದಿಟ್ಟತನದಿಂದ ಕಾರ್ಯ ನಿರ್ವಹಿಸಿದರೆ ಮಾತ್ರ ಸಾದ್ಯ. ಬಿ.ಜೆ.ಪಿ. ಆರ್.ಎಸ್ಸ್.ಎಸ್ಸ್. ರವರ ಕುತಂತ್ರಗಳಿಗೆ ನಾಯಾಧೀಶರಗಳು ಹೆದರ ಬೇಕಾಗಿಲ್ಲ. ದೇಶ ಪ್ರಜೆಗಳು ನಿಮ್ಮ ಜೊತೆ ಇರುತ್ತಾರೆ.

LEAVE A REPLY

Please enter your comment!
Please enter your name here

- Advertisment -

‘ಮಹಿಳೆಯರು ಆಭರಣದಂತೆ ಮನೆಯಲ್ಲೇ ಇರಬೇಕು’ ಮುಸ್ಲಿಂ ಧರ್ಮಗುರು ವಿವಾದಾತ್ಮಕ ಹೇಳಿಕೆ

ಮಹಿಳೆಯರು ಮನೆಯಲ್ಲೇ ಇರಬೇಕು ಮತ್ತು ಸಾರ್ವಜನಿಕ ಕ್ಷೇತ್ರಕ್ಕೆ ಪ್ರವೇಶಿಸಬಾರದು ಎಂದು ಕೇರಳದ ಪ್ರಭಾವಿ ಮುಸ್ಲಿಂ ಧರ್ಮಗುರು ಶೇಖ್ ಅಬೂಬಕರ್ ಅಹ್ಮದ್ ನೀಡಿದ ಹೇಳಿಕೆ ಸಾಮಾಜಿಕ ಮಾಧ್ಯಮಗಳಲ್ಲಿ ಹಾಗೂ ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆ...

ಹಲ್ದ್ವಾನಿ ‘ಶುದ್ಧೀಕರಣ’ ವಿವಾದ : ರಾಹುಲ್ ಗಾಂಧಿ ವಿರುದ್ಧ ಎಫ್‌ಐಆರ್

ಉತ್ತರಾಖಂಡದ ಹಲ್ದ್ವಾನಿಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ರ್‍ಯಾಲಿ ನಡೆದ ಸ್ಥಳದಲ್ಲಿ ಬಿಜೆಪಿ ಬೆಂಬಲಿಗರು 'ಶುದ್ಧೀಕರಣ' ನಡೆಸಿದ ವಿವಾದ ಹೊಸ ರಾಜಕೀಯ ಮತ್ತು ಕಾನೂನು ತಿರುವು ಪಡೆದುಕೊಂಡಿದೆ. ಜಾತಿ ನಿಂದನೆಗೆ ಸಂಬಂಧಿಸಿದಂತೆ...

ಜೈಲಿನಲ್ಲಿದ್ದ KPSC ಅಧ್ಯಕ್ಷರ ಭೇಟಿಯಾಗಿದ್ದೇಕೆ HDK? ಪ್ರಿಯಾಂಕ್ ಖರ್ಗೆ ಪ್ರಶ್ನೆ

ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ನೇಮಕಾತಿ ವಿಚಾರವಾಗಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಿರುದ್ಧ ಕೇಳಿಬಂದಿರುವ ಗಂಭೀರ ಆರೋಪಗಳಿಗೆ ಅವರು ತಾರ್ಕಿಕ ಸ್ಪಷ್ಟನೆ ನೀಡುವ ಬದಲು, ಜಾರಿಕೊಳ್ಳುವ ರೀತಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ್ದಾರೆ ಎಂದು...

ನೇಪಾಳ: ಶಿಕ್ಷಕನ ಸಮಯಪ್ರಜ್ಞೆಯಿಂದ ಉಳಿಯಿತು 1643 ಮಕ್ಕಳ ಪ್ರಾಣ

ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಜಲಪ್ರಳಯಕ್ಕೆ ಬಲಿಯಾದವರ ಸಂಖ್ಯೆ 700ರ ಗಡಿ ದಾಟಿದೆ. 2,000ಕ್ಕೂ ಹೆಚ್ಚು ಜನರು ಇಂದಿಗೂ ನಾಪತ್ತೆಯಾಗಿದ್ದು, ರಕ್ಷಣಾ ಪಡೆಗಳು ಅವಿಶ್ರಾಂತವಾಗಿ ಶೋಧ ಕಾರ್ಯ ನಡೆಸುತ್ತಿವೆ. ಪ್ರಕೃತಿ ತನ್ನ...

ಬಾಕಿ ಇರುವ ಕ್ರಿಮಿನಲ್ ಪ್ರಕರಣಗಳ ಹಿಂಪಡೆಯುವಿಕೆ ಪರಿಶೀಲನೆ: ಪ್ರಿಯಾಂಕ್ ಖರ್ಗೆ ನೇತೃತ್ವದಲ್ಲಿ ಸಂಪುಟ ಉಪಸಮಿತಿ ರಚನೆ

ರಾಜ್ಯದ ವಿವಿಧ ನ್ಯಾಯಾಲಯಗಳಲ್ಲಿ ವಿಚಾರಣೆಗೆ ಬಾಕಿ ಇರುವ ಕ್ರಿಮಿನಲ್ ಪ್ರಕರಣಗಳನ್ನು ಪರಿಶೀಲಿಸಿ, ಅವುಗಳನ್ನು ಹಿಂಪಡೆಯುವ ಕುರಿತು ಸರ್ಕಾರಕ್ಕೆ ಶಿಫಾರಸು ಮಾಡಲು ಕರ್ನಾಟಕ ಸರ್ಕಾರವು ಆರು ಮಂದಿ ಸಚಿವರನ್ನೊಳಗೊಂಡ ಸಂಪುಟ ಉಪಸಮಿತಿಯನ್ನು ರಚಿಸಿದೆ. ಸರ್ಕಾರದ ಅಧಿಕೃತ...

ಉದ್ಯಾನವನ ನುಂಗುವ ಕಾಯ್ದೆ ತಿದ್ದುಪಡಿ : ಸರ್ಕಾರದ ವಿರುದ್ಧ ಸಿಡಿದೆದ್ದ ಬೆಂಗಳೂರಿಗರು

ಕರ್ನಾಟಕ ವಿಧಾನಮಂಡಲವು ಸರ್ಕಾರಿ ಉದ್ಯಾನವನಗಳು ಮತ್ತು ತೋಟಗಳ ಕೆಲವು ಭಾಗಗಳನ್ನು ಸಾರ್ವಜನಿಕ ಮೂಲಸೌಕರ್ಯ ಯೋಜನೆಗಳಿಗಾಗಿ ಬಳಸಲು ಅನುಮತಿಸುವ ಕಾಯ್ದೆ ತಿದ್ದುಪಡಿಯನ್ನು ಅಂಗೀಕರಿಸಿದ ನಂತರ, ಬೆಂಗಳೂರಿನ ಉದ್ಯಾನವನಗಳು ಹೊಸ ರಾಜಕೀಯ ಮತ್ತು ಪರಿಸರ ವಿವಾದದ...

ನೇಪಾಳ–ಟಿಬೆಟ್ ಭೀಕರ ಪ್ರವಾಹ: ನೇಪಾಳದಲ್ಲಿ 734 ಸಾವು, 2,498 ಮಂದಿ ನಾಪತ್ತೆ; ಒಟ್ಟು ಸಾವಿನ ಸಂಖ್ಯೆ 750ಕ್ಕೆ ಏರಿಕೆ!

ನೇಪಾಳ–ಚೀನಾ ಗಡಿ ಪ್ರದೇಶದಲ್ಲಿ ಹಿಮನದಿ ಕುಸಿತದಿಂದ ಉಂಟಾದ ಭೀಕರ ಪ್ರವಾಹ ಮತ್ತು ಅವಶೇಷ ಪ್ರವಾಹದಲ್ಲಿ ನೇಪಾಳದಲ್ಲಿ ಇದುವರೆಗೆ 734 ಮಂದಿ ಮೃತಪಟ್ಟಿದ್ದು, 2,498 ಮಂದಿ ನಾಪತ್ತೆಯಾಗಿದ್ದಾರೆ. ಚೀನಾದ ಟಿಬೆಟ್ ಪ್ರದೇಶದಲ್ಲಿ 16 ಮಂದಿ...

“ಇಂತಹ ಸೌಹಾರ್ದತೆಯ ಮಾತುಗಳನ್ನು ಅಮೆರಿಕಾದಲ್ಲಲ್ಲ, ಭಾರತಕ್ಕೆ ಬಂದು ಇಲ್ಲಿನ ಜನರಿಗೆ ಹೇಳಿ!” – ಭಾಗವತ್‌ಗೆ ವಿರೋಧ ಪಕ್ಷಗಳ ಸವಾಲು

ನ್ಯೂಯಾರ್ಕ್/ಮುಂಬೈ: ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ಸರಸಂಘಚಾಲಕ ಮೋಹನ್ ಭಾಗವತ್ ಅವರು ಅಮೆರಿಕಾದ ನ್ಯೂಯಾರ್ಕ್‌ನಲ್ಲಿ ನೀಡಿರುವ ಸೌಹಾರ್ದತೆಯ ಹೇಳಿಕೆ ಈಗ ಭಾರತೀಯ ರಾಜಕಾರಣದಲ್ಲಿ ಭಾರಿ ಸಂಚಲನ ಮೂಡಿಸಿದೆ. ವಿದೇಶಿ ಮಣ್ಣಿನಲ್ಲಿ ಮುಸ್ಲಿಂ ಸಮುದಾಯದ ಪರವಾಗಿ...

ಸ್ವದೇಶದಲ್ಲಿ ಹಿಂದೂ ರಾಷ್ಟ್ರ, ವಿದೇಶದಲ್ಲಿ ಒಳಗೊಳ್ಳುವಿಕೆ ಮಂತ್ರ : ಆರ್‌ಎಸ್‌ಎಸ್‌ ದ್ವಂದ್ವ ನಿಲುವು ಪ್ರಶ್ನಿಸಿದ ಪ್ರಿಯಾಂಕ್ ಖರ್ಗೆ

"ಭಾರತದಲ್ಲಿ ಮುಸ್ಲಿಮರು ಇರಬಾರದು ಎನ್ನುವವನು ಹಿಂದೂ ಅಲ್ಲ" ಎಂದು ಆರ್‌ಎಸ್‌ಎಸ್‌ ಮುಖ್ಯಸ್ಥ ಮೋಹನ್ ಭಾಗವತ್ ಅಮೆರಿದಲ್ಲಿ ನೀಡಿರುವ ಹೇಳಿಕೆಯ ಸುತ್ತ ಭಾರೀ ಚರ್ಚೆಗಳು ನಡೆಯುತ್ತಿವೆ. ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪ್ರತಿಕ್ರಿಯಿಸಿರುವ...

ಮಹಾರಾಷ್ಟ್ರ | ಬುಡಕಟ್ಟು ವಿದ್ಯಾರ್ಥಿಗಳ ಹೋರಾಟಕ್ಕೆ ಜಯ : ಎಲ್ಲಾ ಬೇಡಿಕೆಗಳ ಈಡೇರಿಕೆಗೆ ಒಪ್ಪಿದ ಸರ್ಕಾರ

ಮಹಾರಾಷ್ಟ್ರದಲ್ಲಿ ಸರ್ಕಾರಿ ಉದ್ಯೋಗಗಳಲ್ಲಿ ಪರಿಶಿಷ್ಟ ಪಂಗಡದ (ಎಸ್‌ಟಿ) ಅಭ್ಯರ್ಥಿಗಳಿಗೆ ಆದ್ಯತೆ ಹಾಗೂ ವಸತಿ ಶಾಲೆಗಳ ಮೂಲಸೌಕರ್ಯ ಸುಧಾರಣೆಗೆ ಆಗ್ರಹಿಸಿ ಕಳೆದ 16 ದಿನಗಳಿಂದ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ಬುಡಕಟ್ಟು ವಿದ್ಯಾರ್ಥಿಗಳ ಸುದೀರ್ಘ ಹೋರಾಟಕ್ಕೆ...