Homeಮುಖಪುಟವೈಯಕ್ತಿಕ ವಾಟ್ಸಪ್ ಖಾತೆಗಳು ಸಾರ್ವಜನಿಕ ಸ್ಥಳವಲ್ಲ : ಬಾಂಬೆ ಹೈಕೋರ್ಟ್‌

ವೈಯಕ್ತಿಕ ವಾಟ್ಸಪ್ ಖಾತೆಗಳು ಸಾರ್ವಜನಿಕ ಸ್ಥಳವಲ್ಲ : ಬಾಂಬೆ ಹೈಕೋರ್ಟ್‌

- Advertisement -
- Advertisement -

ವೈಯಕ್ತಿಕ ವಾಟ್ಸಪ್ ಖಾತೆಗಳು ಸಾರ್ವಜನಿಕ ಸ್ಥಳವಲ್ಲ. ವೈಯಕ್ತಿಕ ಖಾತೆಗಳಿಗೆ ಅಶ್ಲೀಲ ಮಾಹಿತಿ ಕಳಿಸಿದರೆ ಅದು ಭಾರತ ದಂಡ ಸಂಹಿತೆ ಸೆಕ್ಷನ್ 294ರಡಿ ಅಪರಾಧವಲ್ಲ ಎಂದು ಬಾಂಬೆ ಹೈಕೋರ್ಟ್ ತೀರ್ಪು ನೀಡಿದೆ ಎಂದು ಲೈವ್ ಲಾ.ಕಾಮ್ ವರದಿ ಮಾಡಿದೆ.

ಇಬ್ಬರ ನಡುವಿನ ವಾಟ್ಸಪ್ ವೈಯಕ್ತಿಕ ಖಾತೆಗಳು ಸಾರ್ವಜನಿಕ ಸ್ಥಳವಲ್ಲ. ಇಬ್ಬರ ನಡುವೆ ವೈಯಕ್ತಿಕ ವಾಟ್ಸಪ್ ಖಾತೆಗಳಲ್ಲಿ ಆಶ್ಲೀಲ ಮಾಹಿತಿ ವಿನಿಮಯ ಮಾಡಿಕೊಂಡರೆ ಅದು ಅಪರಾಧವಲ್ಲ. ಆದರೆ ಇದೇ ಅಶ್ಲೀಲ ಮಾಹಿತಿಯನ್ನು ವಾಟ್ಸಪ್ ಗ್ರೂಪ್ ಗೆ ಕಳಿಸಿದರೆ ಅದನ್ನು ಸಾರ್ವಜನಿಕ ಸ್ಥಳವೆಂದು ಕರೆಯಬಹುದು. ಏಕೆಂದರೆ ವಾಟ್ಸಪ್ ಗ್ರೂಪ್ ನಲ್ಲಿ ಹಲವು ಸದಸ್ಯರು ಇರುತ್ತಾರೆ. ಅವರೆಲ್ಲರೂ ಆ ಮಾಹಿತಿಯನ್ನು ಓದುತ್ತಾರೆ ಮತ್ತು ಹೊಂದಿರುತ್ತಾರೆ ಎಂದು ಬಾಂಬೆ ಹೈಕೋರ್ಟ್ ತಿಳಿಸಿದೆ.

ನ್ಯಾಯಮೂರ್ತಿಗಳಾದ ಟಿ.ವಿ ವಲವಾಡೆ ಮತ್ತು ಎಂ.ಜಿ. ಸೆವ್ಲಿಕರ್ ಅವರಿದ್ದ ವಿಭಾಗೀಯ ಪೀಠ ವೈಯಕ್ತಿಕ ಈ ತೀರ್ಪು ನೀಡಿದ್ದು ಚರ್ಚೆಗೆ ಕಾರಣವಾಗಿದೆ.

ಪ್ರಕರಣವೊಂದರಲ್ಲಿ ಆರೋಪಿತನ ವಿರುದ್ಧ ಆತನ ಪತ್ನಿಯು 2018ರಲ್ಲಿ ನಾಂದೇಡ್‌ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸಿದ್ದಳು. ಆತ ಅವಳ ವೈಯಕ್ತಿಕ ವಾಟ್ಸಪ್ ಖಾತೆಗೆ “ನೀನು ವ್ಯಭಿಚಾರಿಣಿ, ದೇಹವನ್ನು ವ್ಯಾಪಾರ ಮಾಡಿಕೊಂಡು ಹಣ ಗಳಿಸುತ್ತಿದ್ದಿಯ” ಎಂಬ ಅಶ್ಲೀಲ ಮಾಹಿತಿ ಕಳಿಸಿದ್ದ.

ಈ ಸಂಬಂಧ ಪತಿಯ ವಿರುದ್ದ ಭಾರತ ದಂಡ ಸಂಹಿತೆ ಸೆಕ್ಷನ್ 294, 500, 506 ಮತ್ತು 507ರಡಿ ಪೊಲೀಸರು ಎಫ್.ಐ.ಆರ್ ದಾಖಲಿಸಿದ್ದರು. ಈ ಪ್ರಕರಣ ನ್ಯಾಯಾಲಯದ ಮೆಟ್ಟಿಲೇರಿತು. ವಿಚಾರಣೆ ನಡೆಸಿದ ಬಾಂಬೆ ಹೈಕೋರ್ಟ್ ದ್ವಿಸದಸ್ಯ ಪೀಠ ಐಪಿಸಿ ಸೆಕ್ಷನ್ 294ನ್ನು ಪರಿಶೀಲಿಸಿದಾಗ ಆರೋಪಿತ ವ್ಯಕ್ತಿ ಆಕೆಯ ವೈಯಕ್ತಿಕ ವಾಟ್ಸಪ್ ಖಾತೆಗೆ ಕಳಿಸಿದ್ದಾನೆ. ಇದು ಸಾರ್ವಜನಿಕ ಸ್ಥಳವಲ್ಲ ಎಂದು ಅಭಿಪ್ರಾಯಪಟ್ಟಿದ್ದು, ಈ ಪ್ರಕರಣದಲ್ಲಿ ಆರೋಪಿತ ವ್ಯಕ್ತಿ ಸಾರ್ವಜನಿಕ ಸ್ಥಳದಲ್ಲಿ ಅಶ್ಲೀಲ ಮಾಹಿತಿ ಪ್ರದರ್ಶಿಸಿಲ್ಲ. ಸಾಮಾಜಿಕ ಜಾಲತಾಣ ವಾಟ್ಸಪ್‌ನ ವೈಯಕ್ತಿಕ ಖಾತೆ ಸಾರ್ವಜನಿಕ ಸ್ಥಳವಲ್ಲ ಎಂಬುದನ್ನು ಪುನರುಚ್ಚರಿಸಿದೆ.

ಸಂದೇಶ ಪ್ರಕಟವಾಗಿರುವುದು ವಾಟ್ಸಪ್‌ನ ಇಬ್ಬರ ವೈಯಕ್ತಿಕ ಖಾತೆಯಲ್ಲಿ. ಅದು ಒಬ್ಬರಿಂದ ಇನ್ನೊಬ್ಬರಿಗೆ ಕಳಿಸಿರುವ ಮಾಹಿತಿ. ಈ ಕೊನೆಯಿಂದ ಆ ಕೊನೆಗೆ ಮಾತ್ರ ಮಾಹಿತಿ ಹೋಗಿದೆ. ಒಬ್ಬರು ಕಳಿಸಿದ್ದರೆ ಮತ್ತೊಬ್ಬರು ಆ ಮಾಹಿತಿಯನ್ನು ಸ್ವೀಕರಿಸಿದ್ದಾರೆ. ಅವರಿಬ್ಬರೇ ಆ ಮಾಹಿತಿ ಹೊಂದಿದ್ದು ಅವರಿಬ್ಬರು ಮಾತ್ರ ಓದಲು ಸಾಧ್ಯವಾಗಿದೆ. ಇವರಿಬ್ಬರ ನಡುವೆ ಬೇರೆ ಯಾರೂ ಇಲ್ಲ. ವಾಟ್ಸಪ್ ಕೂಡ ಈ ಮಾಹಿತಿಯನ್ನು ಓದಿಲ್ಲ. ಈ ಮಾಹಿತಿ ಸುಭದ್ರವಾಗಿದೆ ಮತ್ತು ಬೀಗಮುದ್ರೆ ಹಾಕಲಾಗಿದೆ. ಮಾಹಿತಿ ಕಳಿಸಿದವರು ಮತ್ತು ಸ್ವೀಕರಿಸಿದವರು ಮಾತ್ರ ಬೀಗ ತೆಗೆದು ನೋಡುವ, ಓದುವ ಅವಕಾಶವಿದೆ. ವಾಟ್ಸಪ್ ಕೂಡ ಆ ಮಾಹಿತಿಯನ್ನು ತನ್ನ ಸರ್ವರ್ ನಲ್ಲಿ ಸಂಗ್ರಹಿಸಿಲ್ಲ.

ಈ ಮಾಹಿತಿ ತುಂಬಾ ವೈಯಕ್ತಿಕ. ವಾಟ್ಸಪ್ ಗ್ರೂಪ್ ನಲ್ಲಿ ಕಳಿಸಿದರೆ ಎಲ್ಲರೂ ಹೊಂದುತ್ತಾರೆ ಮತ್ತು ಓದುತ್ತಾರೆ. ಆಗ ಕಾನೂನು ಕ್ರಮ ಕೈಗೊಳ್ಳಬಹುದು. ಆದರೆ ಅರ್ಜಿದಾರರು ಈ ಪ್ರಕರಣದಲ್ಲಿ ಆರೋಪಿಸಿರುವಂತೆ ಆಧುನಿಕ ಸಂದರ್ಭದಲ್ಲಿ ಮಹಿಳೆಯೊಬ್ಬರಿಗೆ ಅವಮಾನ ಮಾಡಿರುವುದು ಸ್ಪಷ್ಟವಾಗಿದೆ. ಹಾಗಾಗಿ ಇದು ಭಾರತ ದಂಡ ಸಂಹಿತೆ 509ರಡಿ ಬರುತ್ತದೆ ಎಂದು ನ್ಯಾಯ ಪೀಠ ಹೇಳಿದೆ ಎಂದು ಲೈವ್ ಲಾ ತಿಳಿಸಿದೆ.

ಮೂಲ: ಲೈವ್ ಲಾ.ಕಾಮ್

ಕನ್ನಡಕ್ಕೆ: ಕೆ.ಈ.ಸಿದ್ದಯ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...