Homeಮುಖಪುಟವೈಯಕ್ತಿಕ ವಾಟ್ಸಪ್ ಖಾತೆಗಳು ಸಾರ್ವಜನಿಕ ಸ್ಥಳವಲ್ಲ : ಬಾಂಬೆ ಹೈಕೋರ್ಟ್‌

ವೈಯಕ್ತಿಕ ವಾಟ್ಸಪ್ ಖಾತೆಗಳು ಸಾರ್ವಜನಿಕ ಸ್ಥಳವಲ್ಲ : ಬಾಂಬೆ ಹೈಕೋರ್ಟ್‌

- Advertisement -
- Advertisement -

ವೈಯಕ್ತಿಕ ವಾಟ್ಸಪ್ ಖಾತೆಗಳು ಸಾರ್ವಜನಿಕ ಸ್ಥಳವಲ್ಲ. ವೈಯಕ್ತಿಕ ಖಾತೆಗಳಿಗೆ ಅಶ್ಲೀಲ ಮಾಹಿತಿ ಕಳಿಸಿದರೆ ಅದು ಭಾರತ ದಂಡ ಸಂಹಿತೆ ಸೆಕ್ಷನ್ 294ರಡಿ ಅಪರಾಧವಲ್ಲ ಎಂದು ಬಾಂಬೆ ಹೈಕೋರ್ಟ್ ತೀರ್ಪು ನೀಡಿದೆ ಎಂದು ಲೈವ್ ಲಾ.ಕಾಮ್ ವರದಿ ಮಾಡಿದೆ.

ಇಬ್ಬರ ನಡುವಿನ ವಾಟ್ಸಪ್ ವೈಯಕ್ತಿಕ ಖಾತೆಗಳು ಸಾರ್ವಜನಿಕ ಸ್ಥಳವಲ್ಲ. ಇಬ್ಬರ ನಡುವೆ ವೈಯಕ್ತಿಕ ವಾಟ್ಸಪ್ ಖಾತೆಗಳಲ್ಲಿ ಆಶ್ಲೀಲ ಮಾಹಿತಿ ವಿನಿಮಯ ಮಾಡಿಕೊಂಡರೆ ಅದು ಅಪರಾಧವಲ್ಲ. ಆದರೆ ಇದೇ ಅಶ್ಲೀಲ ಮಾಹಿತಿಯನ್ನು ವಾಟ್ಸಪ್ ಗ್ರೂಪ್ ಗೆ ಕಳಿಸಿದರೆ ಅದನ್ನು ಸಾರ್ವಜನಿಕ ಸ್ಥಳವೆಂದು ಕರೆಯಬಹುದು. ಏಕೆಂದರೆ ವಾಟ್ಸಪ್ ಗ್ರೂಪ್ ನಲ್ಲಿ ಹಲವು ಸದಸ್ಯರು ಇರುತ್ತಾರೆ. ಅವರೆಲ್ಲರೂ ಆ ಮಾಹಿತಿಯನ್ನು ಓದುತ್ತಾರೆ ಮತ್ತು ಹೊಂದಿರುತ್ತಾರೆ ಎಂದು ಬಾಂಬೆ ಹೈಕೋರ್ಟ್ ತಿಳಿಸಿದೆ.

ನ್ಯಾಯಮೂರ್ತಿಗಳಾದ ಟಿ.ವಿ ವಲವಾಡೆ ಮತ್ತು ಎಂ.ಜಿ. ಸೆವ್ಲಿಕರ್ ಅವರಿದ್ದ ವಿಭಾಗೀಯ ಪೀಠ ವೈಯಕ್ತಿಕ ಈ ತೀರ್ಪು ನೀಡಿದ್ದು ಚರ್ಚೆಗೆ ಕಾರಣವಾಗಿದೆ.

ಪ್ರಕರಣವೊಂದರಲ್ಲಿ ಆರೋಪಿತನ ವಿರುದ್ಧ ಆತನ ಪತ್ನಿಯು 2018ರಲ್ಲಿ ನಾಂದೇಡ್‌ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸಿದ್ದಳು. ಆತ ಅವಳ ವೈಯಕ್ತಿಕ ವಾಟ್ಸಪ್ ಖಾತೆಗೆ “ನೀನು ವ್ಯಭಿಚಾರಿಣಿ, ದೇಹವನ್ನು ವ್ಯಾಪಾರ ಮಾಡಿಕೊಂಡು ಹಣ ಗಳಿಸುತ್ತಿದ್ದಿಯ” ಎಂಬ ಅಶ್ಲೀಲ ಮಾಹಿತಿ ಕಳಿಸಿದ್ದ.

ಈ ಸಂಬಂಧ ಪತಿಯ ವಿರುದ್ದ ಭಾರತ ದಂಡ ಸಂಹಿತೆ ಸೆಕ್ಷನ್ 294, 500, 506 ಮತ್ತು 507ರಡಿ ಪೊಲೀಸರು ಎಫ್.ಐ.ಆರ್ ದಾಖಲಿಸಿದ್ದರು. ಈ ಪ್ರಕರಣ ನ್ಯಾಯಾಲಯದ ಮೆಟ್ಟಿಲೇರಿತು. ವಿಚಾರಣೆ ನಡೆಸಿದ ಬಾಂಬೆ ಹೈಕೋರ್ಟ್ ದ್ವಿಸದಸ್ಯ ಪೀಠ ಐಪಿಸಿ ಸೆಕ್ಷನ್ 294ನ್ನು ಪರಿಶೀಲಿಸಿದಾಗ ಆರೋಪಿತ ವ್ಯಕ್ತಿ ಆಕೆಯ ವೈಯಕ್ತಿಕ ವಾಟ್ಸಪ್ ಖಾತೆಗೆ ಕಳಿಸಿದ್ದಾನೆ. ಇದು ಸಾರ್ವಜನಿಕ ಸ್ಥಳವಲ್ಲ ಎಂದು ಅಭಿಪ್ರಾಯಪಟ್ಟಿದ್ದು, ಈ ಪ್ರಕರಣದಲ್ಲಿ ಆರೋಪಿತ ವ್ಯಕ್ತಿ ಸಾರ್ವಜನಿಕ ಸ್ಥಳದಲ್ಲಿ ಅಶ್ಲೀಲ ಮಾಹಿತಿ ಪ್ರದರ್ಶಿಸಿಲ್ಲ. ಸಾಮಾಜಿಕ ಜಾಲತಾಣ ವಾಟ್ಸಪ್‌ನ ವೈಯಕ್ತಿಕ ಖಾತೆ ಸಾರ್ವಜನಿಕ ಸ್ಥಳವಲ್ಲ ಎಂಬುದನ್ನು ಪುನರುಚ್ಚರಿಸಿದೆ.

ಸಂದೇಶ ಪ್ರಕಟವಾಗಿರುವುದು ವಾಟ್ಸಪ್‌ನ ಇಬ್ಬರ ವೈಯಕ್ತಿಕ ಖಾತೆಯಲ್ಲಿ. ಅದು ಒಬ್ಬರಿಂದ ಇನ್ನೊಬ್ಬರಿಗೆ ಕಳಿಸಿರುವ ಮಾಹಿತಿ. ಈ ಕೊನೆಯಿಂದ ಆ ಕೊನೆಗೆ ಮಾತ್ರ ಮಾಹಿತಿ ಹೋಗಿದೆ. ಒಬ್ಬರು ಕಳಿಸಿದ್ದರೆ ಮತ್ತೊಬ್ಬರು ಆ ಮಾಹಿತಿಯನ್ನು ಸ್ವೀಕರಿಸಿದ್ದಾರೆ. ಅವರಿಬ್ಬರೇ ಆ ಮಾಹಿತಿ ಹೊಂದಿದ್ದು ಅವರಿಬ್ಬರು ಮಾತ್ರ ಓದಲು ಸಾಧ್ಯವಾಗಿದೆ. ಇವರಿಬ್ಬರ ನಡುವೆ ಬೇರೆ ಯಾರೂ ಇಲ್ಲ. ವಾಟ್ಸಪ್ ಕೂಡ ಈ ಮಾಹಿತಿಯನ್ನು ಓದಿಲ್ಲ. ಈ ಮಾಹಿತಿ ಸುಭದ್ರವಾಗಿದೆ ಮತ್ತು ಬೀಗಮುದ್ರೆ ಹಾಕಲಾಗಿದೆ. ಮಾಹಿತಿ ಕಳಿಸಿದವರು ಮತ್ತು ಸ್ವೀಕರಿಸಿದವರು ಮಾತ್ರ ಬೀಗ ತೆಗೆದು ನೋಡುವ, ಓದುವ ಅವಕಾಶವಿದೆ. ವಾಟ್ಸಪ್ ಕೂಡ ಆ ಮಾಹಿತಿಯನ್ನು ತನ್ನ ಸರ್ವರ್ ನಲ್ಲಿ ಸಂಗ್ರಹಿಸಿಲ್ಲ.

ಈ ಮಾಹಿತಿ ತುಂಬಾ ವೈಯಕ್ತಿಕ. ವಾಟ್ಸಪ್ ಗ್ರೂಪ್ ನಲ್ಲಿ ಕಳಿಸಿದರೆ ಎಲ್ಲರೂ ಹೊಂದುತ್ತಾರೆ ಮತ್ತು ಓದುತ್ತಾರೆ. ಆಗ ಕಾನೂನು ಕ್ರಮ ಕೈಗೊಳ್ಳಬಹುದು. ಆದರೆ ಅರ್ಜಿದಾರರು ಈ ಪ್ರಕರಣದಲ್ಲಿ ಆರೋಪಿಸಿರುವಂತೆ ಆಧುನಿಕ ಸಂದರ್ಭದಲ್ಲಿ ಮಹಿಳೆಯೊಬ್ಬರಿಗೆ ಅವಮಾನ ಮಾಡಿರುವುದು ಸ್ಪಷ್ಟವಾಗಿದೆ. ಹಾಗಾಗಿ ಇದು ಭಾರತ ದಂಡ ಸಂಹಿತೆ 509ರಡಿ ಬರುತ್ತದೆ ಎಂದು ನ್ಯಾಯ ಪೀಠ ಹೇಳಿದೆ ಎಂದು ಲೈವ್ ಲಾ ತಿಳಿಸಿದೆ.

ಮೂಲ: ಲೈವ್ ಲಾ.ಕಾಮ್

ಕನ್ನಡಕ್ಕೆ: ಕೆ.ಈ.ಸಿದ್ದಯ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂಪೂರ್ಣ ಒಳಮೀಸಲಾತಿ ಜಾರಿಗೆ ಆಗ್ರಹಿಸಿ ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಬೃಹತ್ ಪ್ರತಿಭಟನೆ

ಈ ವರ್ಷದ ಬಜೆಟ್ ಅಧಿವೇಶನದಲ್ಲಿ ಬಹುಕಾಲದ ಸಂಪೂರ್ಣ ಒಳಮೀಸಲಾತಿ ಜಾರಿಗೆ ಆಗ್ರಹಿಸಿ ಪರಿಶಿಷ್ಟ ಜಾತಿ (ಎಸ್‌ಸಿ) ಎಡಗೈ ಸಂಬಂಧಿತ ಜಾತಿ ಮುಖಂಡರು ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಮೆರವಣಿಗೆ ನಡೆಸಿ, ಜಿಲ್ಲಾಧಿಕಾರಿಗಳು ಮತ್ತು...

“ಇಲ್ಲಿ 60 ವರ್ಷ ವಾಸಿಸಿದ್ದೆವು, ಒಂದೇ ದಿನದಲ್ಲಿ ನಿರಾಶ್ರಿತರಾದೆವು”: ಅಜಿ ನದಿ ದಡದ ಅಕ್ರಮ ಅತಿಕ್ರಮಣ ತೆರವಿನಲ್ಲಿ ಮನೆ ಕಳೆದುಕೊಂಡವರ ಮಾತು

ಗುಜರಾತ್‌ನ ರಾಜ್‌ಕೋಟ್ ಮುನ್ಸಿಪಲ್ ಕಾರ್ಪೊರೇಷನ್ (ಆರ್‌ಎಂಸಿ) ಜಂಗಲೇಶ್ವರದಲ್ಲಿ ನೂರಾರು ವಸತಿ ರಚನೆಗಳನ್ನು ನೆಲಸಮಗೊಳಿಸಿ ಹಲವಾರು ಕುಟುಂಬಗಳನ್ನು ನಿರಾಶ್ರಿತರನ್ನಾಗಿ ಮಾಡಿರುವ ಅಜಿ ನದಿಯ ದಡದಲ್ಲಿ ಅಕ್ರಮ ಅತಿಕ್ರಮಣಗಳನ್ನು ತೆಗೆದುಹಾಕಲು ದೊಡ್ಡ ಪ್ರಮಾಣದ ನೆಲಸಮ ಕಾರ್ಯಾಚರಣೆಯ...

ಇಂಡಿಯಾ ಬಣದ ಸಂಚಾಲಕರಾಗಲು ಸ್ಟಾಲಿನ್ ಸೂಕ್ತ: ಮಣಿಶಂಕರ್ ಅಯ್ಯರ್

"ಡಿಎಂಕೆ ಮುಖ್ಯಸ್ಥ ಎಂಕೆ ಸ್ಟಾಲಿನ್ ಅವರು ಇಂಡಿಯಾ ಬಣದ ಸಂಚಾಲಕರಾಗಲು ಸೂಕ್ತ" ಎಂದು ಹಿರಿಯ ಕಾಂಗ್ರೆಸ್ ನಾಯಕ ಮಣಿಶಂಕರ್ ಅಯ್ಯರ್ ಪ್ರತಿಪಾದಿಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅಯ್ಯರ್, ತಮಿಳುನಾಡು ಮುಖ್ಯಮಂತ್ರಿ ಇಂಡಿಯಾ ಬಣದ ಸಂಚಾಲಕರಾಗಲು ಉತ್ತಮ...

ಬೆಂಗಳೂರು: ಮತ್ತು ಬೆರೆಸಿದ ಪಾನೀಯ ನೀಡಿ ಗೆಳೆಯ ಮತ್ತು ಆತನ ಸ್ನೇಹಿತನಿಂದ ಅತ್ಯಾಚಾರ, ಬೆದರಿಕೆ: ಕಾಲೇಜು ವಿದ್ಯಾರ್ಥಿನಿಯಿಂದ ದೂರು

19 ವರ್ಷದ ಖಾಸಗಿ ಕಾಲೇಜು ವಿದ್ಯಾರ್ಥಿನಿಯೊಬ್ಬಳು ತನ್ನ ಗೆಳೆಯ ಮತ್ತು ಅವನ ಸ್ನೇಹಿತನ ವಿರುದ್ಧ ಮಾದಕ ದ್ರವ್ಯ ಸೇವಿಸಿ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ದೂರು ದಾಖಲಿಸಿದ್ದಾಳೆ. ಜಕ್ಕೂರಿನಲ್ಲಿ ಈ ಘಟನೆ ನಡೆದಿದ್ದು, ವಿದ್ಯಾರ್ಥಿನಿಗೆ...

ಮಕ್ಕಳಲ್ಲಿ ಹಿಂಸಾತ್ಮಕ ಪ್ರವೃತ್ತಿ ತಡೆಯಲು ಮೀನು-ಮಾಂಸ ಮಾರಾಟ ನಿಷೇಧ: ಬಿಹಾರ ಉಪಮುಖ್ಯಮಂತ್ರಿ

ಮಕ್ಕಳಲ್ಲಿ 'ಹಿಂಸಾತ್ಮಕ ಪ್ರವೃತ್ತಿ'ಗಳನ್ನು ನಿಲ್ಲಿಸುವ ಪ್ರಯತ್ನದಲ್ಲಿ ಧಾರ್ಮಿಕ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಅಥವಾ ಜನದಟ್ಟಣೆಯ ಸ್ಥಳಗಳ ಬಳಿ ಮಾಂಸ ಮತ್ತು ಮೀನು ಮಾರಾಟವನ್ನು ನಿಷೇಧಿಸುವ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ ಎಂದು ಬಿಹಾರ ಉಪಮುಖ್ಯಮಂತ್ರಿ ವಿಜಯ್...

ದೆಹಲಿಯಲ್ಲಿ ಅರುಣಾಚಲದ ಮಹಿಳೆಯರಿಗೆ ಜನಾಂಗೀಯ ನಿಂದನೆ : ಪ್ರಕರಣ ದಾಖಲು

ದೆಹಲಿಯ ಮಾಳವೀಯ ನಗರದಲ್ಲಿ ಅರುಣಾಚಲ ಪ್ರದೇಶದ ಮೂವರು ಮಹಿಳೆಯರಿಗೆ ಜನಾಂಗೀಯ ನಿಂದನೆ ಮಾಡಿ, ಕಿರುಕುಳ ನೀಡಿದ ಆರೋಪ ಕೇಳಿ ಬಂದಿದೆ. ಫೆಬ್ರವರಿ 20 ಎಸಿ ದುರಸ್ತಿ ಸಂದರ್ಭದಲ್ಲಿ ಉಂಟಾದ ಸಣ್ಣ ಜಗಳವೊಂದು ಜನಾಂಗೀಯ ನಿಂದನೆಗೆ...

ಹಿಂದುತ್ವ ಗುಂಪಿನಿಂದ ಮುಸ್ಲಿಂ ವ್ಯಕ್ತಿಯನ್ನು ರಕ್ಷಿಸಿದ್ದ ಜಿಮ್ ಟ್ರೈನರ್ ‘ಮೊಹಮ್ಮದ್ ದೀಪಕ್’ ಅವರನ್ನು ಭೇಟಿಯಾದ ರಾಹುಲ್ ಗಾಂಧಿ 

ನವದೆಹಲಿ: ಕಳೆದ ತಿಂಗಳು ಕೋಟ್ದ್ವಾರದಲ್ಲಿರುವ ಅಹ್ಮದ್ ಅವರ ಬಾಬಾ ಸ್ಕೂಲ್ ಡ್ರೆಸ್ & ಮ್ಯಾಚಿಂಗ್ ಸೆಂಟರ್‌ನ ರಕ್ಷಣೆಗೆ ಬಂದು ಸುದ್ದಿಯಲ್ಲಿದ್ದ ಜಿಮ್ ತರಬೇತುದಾರ ದೀಪಕ್ ಅವರನ್ನು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್...

‘ಸಂಘದವರ ಚಡ್ಡಿಗಳನ್ನು ತಲೆ ಮೇಲೆ ಹೊರುವುದು ದಲಿತತ್ವವಲ್ಲ..’; ಛಲವಾದಿಗೆ ಸಚಿವ ಪ್ರಿಯಾಂಕ್‌ ತಿರುಗೇಟು

"ಸಂವಿಧಾನ ವಿರೋಧಿಸಿ ಕರಡು ಪ್ರತಿಯನ್ನು ಸುಟ್ಟಿದ್ದ ಸಂಘದವರ ಚಡ್ಡಿಗಳನ್ನು ತಲೆ ಮೇಲೆ ಹೊರುವುದು ದಲಿತತ್ವವಲ್ಲ" ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರಿಗೆ ಸಚಿವ ಪ್ರಿಯಾಂಕ್‌ ಖರ್ಗೆ ತಿರುಗೇಟು ನೀಡಿದ್ದಾರೆ. ಈ ಬಗ್ಗೆ...

ಅಮೆರಿಕದಿಂದ ದಾಳಿ ಬೆದರಿಕೆ : ಇರಾನ್ ತೊರೆಯುವಂತೆ ಭಾರತೀಯ ಪ್ರಜೆಗಳಿಗೆ ಸೂಚನೆ

ಅಮೆರಿಕದ ದಾಳಿ ಬೆದರಿಕೆ ಹಾಗೂ ಮತ್ತೆ ಪ್ರತಿಭಟನೆಗಳು ಭುಗಿಲೆದ್ದಿರುವ ಕಾರಣ, ಇರಾನ್‌ನಲ್ಲಿರುವ ಎಲ್ಲಾ ಭಾರತೀಯರು ವಾಣಿಜ್ಯ ವಿಮಾನಗಳು ಸೇರಿದಂತೆ ಲಭ್ಯವಿರುವ ಸಾರಿಗೆ ವ್ಯವಸ್ಥೆಯ ಮೂಲಕ ತಕ್ಷಣ ದೇಶ ತೊರೆಯುವಂತೆ ತೆಹ್ರಾನ್‌ನಲ್ಲಿರುವ ಭಾರತೀಯ ರಾಯಭಾರ...

ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ವಿರುದ್ಧ ಮತ್ತೊಂದು ಎಫ್‌ಐಆರ್

ಕೇಂದ್ರ ಅಪರಾಧ ಶಾಖೆ (ಸಿಸಿಬಿ) ವಶಕ್ಕೆ ಪಡೆದು ವಿಚಾರಣೆ ನಡೆಸಿದ ಕೆಲವು ದಿನಗಳ ನಂತರ, ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ವಿರುದ್ಧ ಮತ್ತೊಂದು ಎಫ್‌ಐಆರ್ ದಾಖಲಾಗಿದೆ.  ಪವಿತ್ರಾ ಬಿ.ಎನ್ ಸಲ್ಲಿಸಿದ ದೂರಿನ ಆಧಾರದ ಮೇಲೆ...