Homeಮುಖಪುಟವೈಯಕ್ತಿಕ ವಾಟ್ಸಪ್ ಖಾತೆಗಳು ಸಾರ್ವಜನಿಕ ಸ್ಥಳವಲ್ಲ : ಬಾಂಬೆ ಹೈಕೋರ್ಟ್‌

ವೈಯಕ್ತಿಕ ವಾಟ್ಸಪ್ ಖಾತೆಗಳು ಸಾರ್ವಜನಿಕ ಸ್ಥಳವಲ್ಲ : ಬಾಂಬೆ ಹೈಕೋರ್ಟ್‌

- Advertisement -
- Advertisement -

ವೈಯಕ್ತಿಕ ವಾಟ್ಸಪ್ ಖಾತೆಗಳು ಸಾರ್ವಜನಿಕ ಸ್ಥಳವಲ್ಲ. ವೈಯಕ್ತಿಕ ಖಾತೆಗಳಿಗೆ ಅಶ್ಲೀಲ ಮಾಹಿತಿ ಕಳಿಸಿದರೆ ಅದು ಭಾರತ ದಂಡ ಸಂಹಿತೆ ಸೆಕ್ಷನ್ 294ರಡಿ ಅಪರಾಧವಲ್ಲ ಎಂದು ಬಾಂಬೆ ಹೈಕೋರ್ಟ್ ತೀರ್ಪು ನೀಡಿದೆ ಎಂದು ಲೈವ್ ಲಾ.ಕಾಮ್ ವರದಿ ಮಾಡಿದೆ.

ಇಬ್ಬರ ನಡುವಿನ ವಾಟ್ಸಪ್ ವೈಯಕ್ತಿಕ ಖಾತೆಗಳು ಸಾರ್ವಜನಿಕ ಸ್ಥಳವಲ್ಲ. ಇಬ್ಬರ ನಡುವೆ ವೈಯಕ್ತಿಕ ವಾಟ್ಸಪ್ ಖಾತೆಗಳಲ್ಲಿ ಆಶ್ಲೀಲ ಮಾಹಿತಿ ವಿನಿಮಯ ಮಾಡಿಕೊಂಡರೆ ಅದು ಅಪರಾಧವಲ್ಲ. ಆದರೆ ಇದೇ ಅಶ್ಲೀಲ ಮಾಹಿತಿಯನ್ನು ವಾಟ್ಸಪ್ ಗ್ರೂಪ್ ಗೆ ಕಳಿಸಿದರೆ ಅದನ್ನು ಸಾರ್ವಜನಿಕ ಸ್ಥಳವೆಂದು ಕರೆಯಬಹುದು. ಏಕೆಂದರೆ ವಾಟ್ಸಪ್ ಗ್ರೂಪ್ ನಲ್ಲಿ ಹಲವು ಸದಸ್ಯರು ಇರುತ್ತಾರೆ. ಅವರೆಲ್ಲರೂ ಆ ಮಾಹಿತಿಯನ್ನು ಓದುತ್ತಾರೆ ಮತ್ತು ಹೊಂದಿರುತ್ತಾರೆ ಎಂದು ಬಾಂಬೆ ಹೈಕೋರ್ಟ್ ತಿಳಿಸಿದೆ.

ನ್ಯಾಯಮೂರ್ತಿಗಳಾದ ಟಿ.ವಿ ವಲವಾಡೆ ಮತ್ತು ಎಂ.ಜಿ. ಸೆವ್ಲಿಕರ್ ಅವರಿದ್ದ ವಿಭಾಗೀಯ ಪೀಠ ವೈಯಕ್ತಿಕ ಈ ತೀರ್ಪು ನೀಡಿದ್ದು ಚರ್ಚೆಗೆ ಕಾರಣವಾಗಿದೆ.

ಪ್ರಕರಣವೊಂದರಲ್ಲಿ ಆರೋಪಿತನ ವಿರುದ್ಧ ಆತನ ಪತ್ನಿಯು 2018ರಲ್ಲಿ ನಾಂದೇಡ್‌ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸಿದ್ದಳು. ಆತ ಅವಳ ವೈಯಕ್ತಿಕ ವಾಟ್ಸಪ್ ಖಾತೆಗೆ “ನೀನು ವ್ಯಭಿಚಾರಿಣಿ, ದೇಹವನ್ನು ವ್ಯಾಪಾರ ಮಾಡಿಕೊಂಡು ಹಣ ಗಳಿಸುತ್ತಿದ್ದಿಯ” ಎಂಬ ಅಶ್ಲೀಲ ಮಾಹಿತಿ ಕಳಿಸಿದ್ದ.

ಈ ಸಂಬಂಧ ಪತಿಯ ವಿರುದ್ದ ಭಾರತ ದಂಡ ಸಂಹಿತೆ ಸೆಕ್ಷನ್ 294, 500, 506 ಮತ್ತು 507ರಡಿ ಪೊಲೀಸರು ಎಫ್.ಐ.ಆರ್ ದಾಖಲಿಸಿದ್ದರು. ಈ ಪ್ರಕರಣ ನ್ಯಾಯಾಲಯದ ಮೆಟ್ಟಿಲೇರಿತು. ವಿಚಾರಣೆ ನಡೆಸಿದ ಬಾಂಬೆ ಹೈಕೋರ್ಟ್ ದ್ವಿಸದಸ್ಯ ಪೀಠ ಐಪಿಸಿ ಸೆಕ್ಷನ್ 294ನ್ನು ಪರಿಶೀಲಿಸಿದಾಗ ಆರೋಪಿತ ವ್ಯಕ್ತಿ ಆಕೆಯ ವೈಯಕ್ತಿಕ ವಾಟ್ಸಪ್ ಖಾತೆಗೆ ಕಳಿಸಿದ್ದಾನೆ. ಇದು ಸಾರ್ವಜನಿಕ ಸ್ಥಳವಲ್ಲ ಎಂದು ಅಭಿಪ್ರಾಯಪಟ್ಟಿದ್ದು, ಈ ಪ್ರಕರಣದಲ್ಲಿ ಆರೋಪಿತ ವ್ಯಕ್ತಿ ಸಾರ್ವಜನಿಕ ಸ್ಥಳದಲ್ಲಿ ಅಶ್ಲೀಲ ಮಾಹಿತಿ ಪ್ರದರ್ಶಿಸಿಲ್ಲ. ಸಾಮಾಜಿಕ ಜಾಲತಾಣ ವಾಟ್ಸಪ್‌ನ ವೈಯಕ್ತಿಕ ಖಾತೆ ಸಾರ್ವಜನಿಕ ಸ್ಥಳವಲ್ಲ ಎಂಬುದನ್ನು ಪುನರುಚ್ಚರಿಸಿದೆ.

ಸಂದೇಶ ಪ್ರಕಟವಾಗಿರುವುದು ವಾಟ್ಸಪ್‌ನ ಇಬ್ಬರ ವೈಯಕ್ತಿಕ ಖಾತೆಯಲ್ಲಿ. ಅದು ಒಬ್ಬರಿಂದ ಇನ್ನೊಬ್ಬರಿಗೆ ಕಳಿಸಿರುವ ಮಾಹಿತಿ. ಈ ಕೊನೆಯಿಂದ ಆ ಕೊನೆಗೆ ಮಾತ್ರ ಮಾಹಿತಿ ಹೋಗಿದೆ. ಒಬ್ಬರು ಕಳಿಸಿದ್ದರೆ ಮತ್ತೊಬ್ಬರು ಆ ಮಾಹಿತಿಯನ್ನು ಸ್ವೀಕರಿಸಿದ್ದಾರೆ. ಅವರಿಬ್ಬರೇ ಆ ಮಾಹಿತಿ ಹೊಂದಿದ್ದು ಅವರಿಬ್ಬರು ಮಾತ್ರ ಓದಲು ಸಾಧ್ಯವಾಗಿದೆ. ಇವರಿಬ್ಬರ ನಡುವೆ ಬೇರೆ ಯಾರೂ ಇಲ್ಲ. ವಾಟ್ಸಪ್ ಕೂಡ ಈ ಮಾಹಿತಿಯನ್ನು ಓದಿಲ್ಲ. ಈ ಮಾಹಿತಿ ಸುಭದ್ರವಾಗಿದೆ ಮತ್ತು ಬೀಗಮುದ್ರೆ ಹಾಕಲಾಗಿದೆ. ಮಾಹಿತಿ ಕಳಿಸಿದವರು ಮತ್ತು ಸ್ವೀಕರಿಸಿದವರು ಮಾತ್ರ ಬೀಗ ತೆಗೆದು ನೋಡುವ, ಓದುವ ಅವಕಾಶವಿದೆ. ವಾಟ್ಸಪ್ ಕೂಡ ಆ ಮಾಹಿತಿಯನ್ನು ತನ್ನ ಸರ್ವರ್ ನಲ್ಲಿ ಸಂಗ್ರಹಿಸಿಲ್ಲ.

ಈ ಮಾಹಿತಿ ತುಂಬಾ ವೈಯಕ್ತಿಕ. ವಾಟ್ಸಪ್ ಗ್ರೂಪ್ ನಲ್ಲಿ ಕಳಿಸಿದರೆ ಎಲ್ಲರೂ ಹೊಂದುತ್ತಾರೆ ಮತ್ತು ಓದುತ್ತಾರೆ. ಆಗ ಕಾನೂನು ಕ್ರಮ ಕೈಗೊಳ್ಳಬಹುದು. ಆದರೆ ಅರ್ಜಿದಾರರು ಈ ಪ್ರಕರಣದಲ್ಲಿ ಆರೋಪಿಸಿರುವಂತೆ ಆಧುನಿಕ ಸಂದರ್ಭದಲ್ಲಿ ಮಹಿಳೆಯೊಬ್ಬರಿಗೆ ಅವಮಾನ ಮಾಡಿರುವುದು ಸ್ಪಷ್ಟವಾಗಿದೆ. ಹಾಗಾಗಿ ಇದು ಭಾರತ ದಂಡ ಸಂಹಿತೆ 509ರಡಿ ಬರುತ್ತದೆ ಎಂದು ನ್ಯಾಯ ಪೀಠ ಹೇಳಿದೆ ಎಂದು ಲೈವ್ ಲಾ ತಿಳಿಸಿದೆ.

ಮೂಲ: ಲೈವ್ ಲಾ.ಕಾಮ್

ಕನ್ನಡಕ್ಕೆ: ಕೆ.ಈ.ಸಿದ್ದಯ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆಸ್ಕರ್‌ 2026 : ಮೈಕೆಲ್ ಬಿ. ಜೋರ್ಡಾನ್ ಅತ್ಯುತ್ತಮ ನಟ, ಜೆಸ್ಸಿ ಬಕ್ಲಿ ಅತ್ಯುತ್ತಮ ನಟಿ, ಒನ್ ಬ್ಯಾಟಲ್ ಆಫ್ಟರ್ ಅನದರ್‌ಗೆ ಅತ್ಯುತ್ತಮ ಚಿತ್ರ ಪ್ರಶಸ್ತಿ

ಪ್ರತಿಷ್ಠಿತ 98ನೇ ಅಕಾಡೆಮಿ ಪ್ರಶಸ್ತಿ (ಆಸ್ಕರ್ 2026) ಸಮಾರಂಭ ಲಾಸ್ ಏಂಜಲೀಸ್‌ನ ಡಾಲ್ಬಿ ಥಿಯೇಟರ್‌ನಲ್ಲಿ ಮಾರ್ಚ್ 15ರಂದು (ಭಾರತೀಯ ಕಾಲಮಾನ ಮಾರ್ಚ್ 16) ನಡೆಯಿತು. ಖ್ಯಾತ ಹಾಸ್ಯನಟ ಕೋನನ್ ಒಬ್ರೇನ್ ಅವರು ಈ ಕಾರ್ಯಕ್ರಮವನ್ನು ನಡೆಸಿಕೊಟ್ಟರು....

ಐದು ರಾಜ್ಯಗಳ ವಿಧಾನಸಭೆ ಚುನಾವಣೆ ದಿನಾಂಕ ಪ್ರಕಟ; ಬಂಗಾಳದಲ್ಲಿ ಮಾತ್ರ ಎರಡು ಹಂತದ ಮತದಾನ

ಅಸ್ಸಾಂ, ಪಶ್ಚಿಮ ಬಂಗಾಳ, ತಮಿಳುನಾಡು, ಕೇರಳ ಮತ್ತು ಪುದುಚೇರಿ ವಿಧಾನಸಭಾ ಚುನಾವಣೆಗಳ ವೇಳಾಪಟ್ಟಿಯನ್ನು ಭಾರತೀಯ ಚುನಾವಣಾ ಆಯೋಗದ (ಇಸಿಐ) ಮುಖ್ಯಸ್ಥರಾದ ಜ್ಞಾನೇಶ್ ಕುಮಾರ್ ಪ್ರಕಟಿಸಿದರು. ದೆಹಲಿಯಲ್ಲಿ ಇಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮುಖ್ಯ...

ಫ್ಲಿಪ್‌ಕಾರ್ಟ್‌ನಿಂದ 1 ರೂ.ಗೆ ಹಾಲು ಮಾರಾಟ; ಪ್ರಧಾನಿ ಮೋದಿ ಮಧ್ಯಸ್ಥಿಕೆಗೆ ಬಮುಲ್‌ ಆಗ್ರಹ

ಫ್ಲಿಪ್‌ಕಾರ್ಟ್‌ ಸಂಸ್ಥೆಯು ಆನ್‌ಲೈನ್‌ ಮೂಲಕ 1 ರೂ.ಗೆ ಲೀಟರ್‌ ಹಾಲನ್ನು ಮಾರಾಟ ಮಾಡಿರುವುದು ಭಾರಿ ಜನಾಕ್ರೋಶಕ್ಕೆ ಕಾರಣವಾಗಿದೆ. ಈ ಬಗ್ಗೆ, ಬೆಂಗಳೂರು ನಗರ, ಗ್ರಾಮೀಣ ಮತ್ತು ರಾಮನಗರ ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ...

“ಮಕ್ಕಳ ಹಂತಕನನ್ನು ಹುಡುಕಿ ಹತ್ಯೆ ಮಾಡುತ್ತೇವೆ” : ನೆತನ್ಯಾಹು ಸುರಕ್ಷಿತವಾಗಿದ್ದಾರೆ ಎಂಬ ಇಸ್ರೇಲ್ ಸ್ಪಷ್ಟನೆ ಬೆನ್ನಲ್ಲೆ ಐಆರ್‌ಜಿಸಿ ಹೇಳಿಕೆ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರನ್ನು ಹುಡುಕಿ ಹತ್ಯೆ ಮಾಡುತ್ತೇವೆ ಎಂದು ಇರಾನ್‌ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (ಐಆರ್‌ಜಿಸಿ) ಹೇಳಿರುವುದಾಗಿ ವರದಿಯಾಗಿದೆ. ನೆತನ್ಯಾಹು ಅವರ ಹತ್ಯೆಯ ವದಂತಿಗಳನ್ನು ಇಸ್ರೇಲ್ ನಿರಾಕರಿಸಿದ ಬೆನ್ನಲ್ಲೇ, ಐಆರ್‌ಜಿಸಿ ಈ...

ಮಹಾರಾಷ್ಟ್ರ| ಇಫ್ತಾರ್ ಕೂಟಕ್ಕೆ ಸೇರಿದ್ದ ಮುಸ್ಲಿಮರ ಮೇಲೆ ಹಿಂದುತ್ವವಾದಿ ಗುಂಪಿನಿಂದ ದಾಳಿ

ರಂಜಾನ್‌ ಮಾಸದ ಉಪವಾಸ ಮುರಿಯಲು ನೆರೆದಿದ್ದ ಜನರ ಮೇಲೆ ಅಪರಿಚಿತ ವ್ಯಕ್ತಿಗಳ ಗುಂಪೊಂದು ದಾಳಿ ನಡೆಸಿರುವ ಘಟನೆ ಮಹಾರಾಷ್ಟ್ರದ ಪುಣೆಯಲ್ಲಿ ನಡೆದಿದೆ. ಇಫ್ತಾರ್ ಕೂಟಕ್ಕೆ ಸಿದ್ಧತೆ ನಡೆಸುತ್ತಿದ್ದಾಗ, ಸುಮಾರು 100 ಕ್ಕೂ ಹೆಚ್ಚು...

ಆಸ್ಕರ್‌ ಅಂತಿಮ ಪಟ್ಟಿಗೆ ಆಯ್ಕೆಯಾದ ‘ದಿ ವಾಯ್ಸ್ ಆಫ್ ಹಿಂದ್ ರಜಬ್’

ಗಾಝಾದ ಆರು ವರ್ಷದ ಬಾಲಕಿ ಹಿಂದ್ ರಜಬ್‌ ಮತ್ತು ಆಕೆಯ ಸಂಬಂಧಿಕರನ್ನು ಇಸ್ರೇಲಿ ಸೈನಿಕರು ಭೀಕರವಾಗಿ ಹತ್ಯೆ ಮಾಡಿದ ಕಥೆಯನ್ನು ಹೇಳುವ 'ದಿ ವಾಯ್ಸ್ ಆಫ್ ಹಿಂದ್ ರಜಬ್' ಚಲನಚಿತ್ರವು 2026ರ ಆಸ್ಕರ್...

ಉತ್ತರ ಪ್ರದೇಶ| ದಲಿತ ಕುಟುಂಬದ ಮದುವೆ ಮನೆಯಲ್ಲಿ ಸವರ್ಣಿಯರಿಂದ ಹಲ್ಲೆ; ಬಂದೂಕಿನಿಂದ ಬೆದರಿಕೆ

ಮಾರ್ಚ್ 10 ರಂದು ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಟಿಕುನಿಯಾ ಪೊಲೀಸ್ ಠಾಣೆ ಪ್ರದೇಶದಲ್ಲಿ ಜಾತಿ ಆಧಾರಿತ ಹಿಂಸಾಚಾರದ ತೀವ್ರ ಆತಂಕಕಾರಿ ಘಟನೆ ಬೆಳಕಿಗೆ ಬಂದಿದೆ. 24 ಗಂಟೆಗಳ ಒಳಗೆ ಎಫ್‌ಐಆರ್...

’70 ಲಕ್ಷ ಬಂಗಾಳಿ ಮುಸ್ಲಿಮರನ್ನು ಹೊರದಬ್ಬಲು ಸಾಧ್ಯವಿಲ್ಲ..ಅವರೇ ದೇಶ ಬಿಡುವಂತಹ ಪರಿಸ್ಥಿತಿ ಸೃಷ್ಟಿಸುತ್ತೇವೆ’: ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಶರ್ಮಾ

ಸುಮಾರು 70 ಲಕ್ಷ 'ಬಂಗಾಳಿ ಮುಸ್ಲಿಮರ'ನ್ನು ಭಾರತದಿಂದ ಹೊರಹಾಕುವುದು 'ಮಾನವೀಯವಾಗಿ ಸಾಧ್ಯವಿಲ್ಲ'. ಹಾಗಾಗಿ, ಅವರಾಗಿಯೇ ದೇಶ ತೊರೆಯುವಂತಹ ಪರಿಸ್ಥಿತಿಯನ್ನು ನಾವು ಸೃಷ್ಟಿಸುತ್ತೇವೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಹೇಳಿದ್ದಾರೆ. ಈ...

ಮೋದಿಯವರ ವಿದೇಶಾಂಗ ನೀತಿ ಸಂಪೂರ್ಣವಾಗಿ ದಿಕ್ಕು ತಪ್ಪಿದೆ, ನಗೆಪಾಟಲಿಗೆ ಈಡಾಗಿದೆ, ಅನೈತಿಕತೆಯಿಂದ ಕೂಡಿದೆ. ಇದು ಜಗಜ್ಜಾಹೀರಾಗಿದೆ – ಶ್ರೀಪಾದ್‌ ಭಟ್

ತಮ್ಮ ಸ್ಥಳೀಯ ಮತಬ್ಯಾಂಕ್ ರಾಜಕಾರಣದ ಜೊತೆಗೆ ವಿದೇಶಿ ನೀತಿಯನ್ನು ತಳುಕು ಹಾಕುವುದು. ಉದಾಹರಣೆಗೆ ಅಮೆರಿಕ-ಇಸ್ರೇಲ್ ಜಂಟಿಯಾಗಿ ನಡೆಸುತ್ತಿರುವ ಇರಾನ್ ಮೇಲಿನ ಯುದ್ಧದ ಸಮಯದಲ್ಲಿ ಮೋದಿ ನೇತೃತ್ವದ ಸರ್ಕಾರವು ತಾನು ಇರಾನ್ ಪರ ನಿಲುವು ತಾಳಿದರೆ...

ದೆಹಲಿ ಪೊಲೀಸರಿಂದ 10 ಮಂದಿ ಹೋರಾಟಗಾರರ ಅಪಹರಣ ಆರೋಪ : ಹೈಕೋರ್ಟ್‌ಗೆ ಹೇಬಿಯಸ್ ಕಾರ್ಪಸ್ ಅರ್ಜಿ

ಸಿವಿಲ್ ಸೊಸೈಟಿಯ ಹತ್ತು ಮಂದಿ ಹೋರಾಟಗಾರರನ್ನು ದೆಹಲಿ ಪೊಲೀಸರು ಅಪಹರಿಸಿದ್ದಾರೆ ಅಥವಾ ಅಕ್ರಮವಾಗಿ ಬಂಧಿಸಿದ್ದಾರೆ ಎಂದು ಮಾನವ ಹಕ್ಕುಗಳ ಗುಂಪುಗಳು ಆರೋಪಿಸಿವೆ. ಹತ್ತು ಮಂದಿಯನ್ನು ದೆಹಲಿ ಪೊಲೀಸರು ಮತ್ತು ಇತರ ರಾಜ್ಯಗಳ ಏಜೆನ್ಸಿಗಳು ಅಪಹರಿಸಿವೆ...