Homeಮುಖಪುಟವೈಯಕ್ತಿಕ ವಾಟ್ಸಪ್ ಖಾತೆಗಳು ಸಾರ್ವಜನಿಕ ಸ್ಥಳವಲ್ಲ : ಬಾಂಬೆ ಹೈಕೋರ್ಟ್‌

ವೈಯಕ್ತಿಕ ವಾಟ್ಸಪ್ ಖಾತೆಗಳು ಸಾರ್ವಜನಿಕ ಸ್ಥಳವಲ್ಲ : ಬಾಂಬೆ ಹೈಕೋರ್ಟ್‌

- Advertisement -
- Advertisement -

ವೈಯಕ್ತಿಕ ವಾಟ್ಸಪ್ ಖಾತೆಗಳು ಸಾರ್ವಜನಿಕ ಸ್ಥಳವಲ್ಲ. ವೈಯಕ್ತಿಕ ಖಾತೆಗಳಿಗೆ ಅಶ್ಲೀಲ ಮಾಹಿತಿ ಕಳಿಸಿದರೆ ಅದು ಭಾರತ ದಂಡ ಸಂಹಿತೆ ಸೆಕ್ಷನ್ 294ರಡಿ ಅಪರಾಧವಲ್ಲ ಎಂದು ಬಾಂಬೆ ಹೈಕೋರ್ಟ್ ತೀರ್ಪು ನೀಡಿದೆ ಎಂದು ಲೈವ್ ಲಾ.ಕಾಮ್ ವರದಿ ಮಾಡಿದೆ.

ಇಬ್ಬರ ನಡುವಿನ ವಾಟ್ಸಪ್ ವೈಯಕ್ತಿಕ ಖಾತೆಗಳು ಸಾರ್ವಜನಿಕ ಸ್ಥಳವಲ್ಲ. ಇಬ್ಬರ ನಡುವೆ ವೈಯಕ್ತಿಕ ವಾಟ್ಸಪ್ ಖಾತೆಗಳಲ್ಲಿ ಆಶ್ಲೀಲ ಮಾಹಿತಿ ವಿನಿಮಯ ಮಾಡಿಕೊಂಡರೆ ಅದು ಅಪರಾಧವಲ್ಲ. ಆದರೆ ಇದೇ ಅಶ್ಲೀಲ ಮಾಹಿತಿಯನ್ನು ವಾಟ್ಸಪ್ ಗ್ರೂಪ್ ಗೆ ಕಳಿಸಿದರೆ ಅದನ್ನು ಸಾರ್ವಜನಿಕ ಸ್ಥಳವೆಂದು ಕರೆಯಬಹುದು. ಏಕೆಂದರೆ ವಾಟ್ಸಪ್ ಗ್ರೂಪ್ ನಲ್ಲಿ ಹಲವು ಸದಸ್ಯರು ಇರುತ್ತಾರೆ. ಅವರೆಲ್ಲರೂ ಆ ಮಾಹಿತಿಯನ್ನು ಓದುತ್ತಾರೆ ಮತ್ತು ಹೊಂದಿರುತ್ತಾರೆ ಎಂದು ಬಾಂಬೆ ಹೈಕೋರ್ಟ್ ತಿಳಿಸಿದೆ.

ನ್ಯಾಯಮೂರ್ತಿಗಳಾದ ಟಿ.ವಿ ವಲವಾಡೆ ಮತ್ತು ಎಂ.ಜಿ. ಸೆವ್ಲಿಕರ್ ಅವರಿದ್ದ ವಿಭಾಗೀಯ ಪೀಠ ವೈಯಕ್ತಿಕ ಈ ತೀರ್ಪು ನೀಡಿದ್ದು ಚರ್ಚೆಗೆ ಕಾರಣವಾಗಿದೆ.

ಪ್ರಕರಣವೊಂದರಲ್ಲಿ ಆರೋಪಿತನ ವಿರುದ್ಧ ಆತನ ಪತ್ನಿಯು 2018ರಲ್ಲಿ ನಾಂದೇಡ್‌ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸಿದ್ದಳು. ಆತ ಅವಳ ವೈಯಕ್ತಿಕ ವಾಟ್ಸಪ್ ಖಾತೆಗೆ “ನೀನು ವ್ಯಭಿಚಾರಿಣಿ, ದೇಹವನ್ನು ವ್ಯಾಪಾರ ಮಾಡಿಕೊಂಡು ಹಣ ಗಳಿಸುತ್ತಿದ್ದಿಯ” ಎಂಬ ಅಶ್ಲೀಲ ಮಾಹಿತಿ ಕಳಿಸಿದ್ದ.

ಈ ಸಂಬಂಧ ಪತಿಯ ವಿರುದ್ದ ಭಾರತ ದಂಡ ಸಂಹಿತೆ ಸೆಕ್ಷನ್ 294, 500, 506 ಮತ್ತು 507ರಡಿ ಪೊಲೀಸರು ಎಫ್.ಐ.ಆರ್ ದಾಖಲಿಸಿದ್ದರು. ಈ ಪ್ರಕರಣ ನ್ಯಾಯಾಲಯದ ಮೆಟ್ಟಿಲೇರಿತು. ವಿಚಾರಣೆ ನಡೆಸಿದ ಬಾಂಬೆ ಹೈಕೋರ್ಟ್ ದ್ವಿಸದಸ್ಯ ಪೀಠ ಐಪಿಸಿ ಸೆಕ್ಷನ್ 294ನ್ನು ಪರಿಶೀಲಿಸಿದಾಗ ಆರೋಪಿತ ವ್ಯಕ್ತಿ ಆಕೆಯ ವೈಯಕ್ತಿಕ ವಾಟ್ಸಪ್ ಖಾತೆಗೆ ಕಳಿಸಿದ್ದಾನೆ. ಇದು ಸಾರ್ವಜನಿಕ ಸ್ಥಳವಲ್ಲ ಎಂದು ಅಭಿಪ್ರಾಯಪಟ್ಟಿದ್ದು, ಈ ಪ್ರಕರಣದಲ್ಲಿ ಆರೋಪಿತ ವ್ಯಕ್ತಿ ಸಾರ್ವಜನಿಕ ಸ್ಥಳದಲ್ಲಿ ಅಶ್ಲೀಲ ಮಾಹಿತಿ ಪ್ರದರ್ಶಿಸಿಲ್ಲ. ಸಾಮಾಜಿಕ ಜಾಲತಾಣ ವಾಟ್ಸಪ್‌ನ ವೈಯಕ್ತಿಕ ಖಾತೆ ಸಾರ್ವಜನಿಕ ಸ್ಥಳವಲ್ಲ ಎಂಬುದನ್ನು ಪುನರುಚ್ಚರಿಸಿದೆ.

ಸಂದೇಶ ಪ್ರಕಟವಾಗಿರುವುದು ವಾಟ್ಸಪ್‌ನ ಇಬ್ಬರ ವೈಯಕ್ತಿಕ ಖಾತೆಯಲ್ಲಿ. ಅದು ಒಬ್ಬರಿಂದ ಇನ್ನೊಬ್ಬರಿಗೆ ಕಳಿಸಿರುವ ಮಾಹಿತಿ. ಈ ಕೊನೆಯಿಂದ ಆ ಕೊನೆಗೆ ಮಾತ್ರ ಮಾಹಿತಿ ಹೋಗಿದೆ. ಒಬ್ಬರು ಕಳಿಸಿದ್ದರೆ ಮತ್ತೊಬ್ಬರು ಆ ಮಾಹಿತಿಯನ್ನು ಸ್ವೀಕರಿಸಿದ್ದಾರೆ. ಅವರಿಬ್ಬರೇ ಆ ಮಾಹಿತಿ ಹೊಂದಿದ್ದು ಅವರಿಬ್ಬರು ಮಾತ್ರ ಓದಲು ಸಾಧ್ಯವಾಗಿದೆ. ಇವರಿಬ್ಬರ ನಡುವೆ ಬೇರೆ ಯಾರೂ ಇಲ್ಲ. ವಾಟ್ಸಪ್ ಕೂಡ ಈ ಮಾಹಿತಿಯನ್ನು ಓದಿಲ್ಲ. ಈ ಮಾಹಿತಿ ಸುಭದ್ರವಾಗಿದೆ ಮತ್ತು ಬೀಗಮುದ್ರೆ ಹಾಕಲಾಗಿದೆ. ಮಾಹಿತಿ ಕಳಿಸಿದವರು ಮತ್ತು ಸ್ವೀಕರಿಸಿದವರು ಮಾತ್ರ ಬೀಗ ತೆಗೆದು ನೋಡುವ, ಓದುವ ಅವಕಾಶವಿದೆ. ವಾಟ್ಸಪ್ ಕೂಡ ಆ ಮಾಹಿತಿಯನ್ನು ತನ್ನ ಸರ್ವರ್ ನಲ್ಲಿ ಸಂಗ್ರಹಿಸಿಲ್ಲ.

ಈ ಮಾಹಿತಿ ತುಂಬಾ ವೈಯಕ್ತಿಕ. ವಾಟ್ಸಪ್ ಗ್ರೂಪ್ ನಲ್ಲಿ ಕಳಿಸಿದರೆ ಎಲ್ಲರೂ ಹೊಂದುತ್ತಾರೆ ಮತ್ತು ಓದುತ್ತಾರೆ. ಆಗ ಕಾನೂನು ಕ್ರಮ ಕೈಗೊಳ್ಳಬಹುದು. ಆದರೆ ಅರ್ಜಿದಾರರು ಈ ಪ್ರಕರಣದಲ್ಲಿ ಆರೋಪಿಸಿರುವಂತೆ ಆಧುನಿಕ ಸಂದರ್ಭದಲ್ಲಿ ಮಹಿಳೆಯೊಬ್ಬರಿಗೆ ಅವಮಾನ ಮಾಡಿರುವುದು ಸ್ಪಷ್ಟವಾಗಿದೆ. ಹಾಗಾಗಿ ಇದು ಭಾರತ ದಂಡ ಸಂಹಿತೆ 509ರಡಿ ಬರುತ್ತದೆ ಎಂದು ನ್ಯಾಯ ಪೀಠ ಹೇಳಿದೆ ಎಂದು ಲೈವ್ ಲಾ ತಿಳಿಸಿದೆ.

ಮೂಲ: ಲೈವ್ ಲಾ.ಕಾಮ್

ಕನ್ನಡಕ್ಕೆ: ಕೆ.ಈ.ಸಿದ್ದಯ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

FACT CHECK : ಕಾಕ್ರೋಚ್ ಜನತಾ ಪಾರ್ಟಿಯ ಹೆಚ್ಚಿನ ಫಾಲೋವರ್ಸ್ ಪಾಕಿಸ್ತಾನದವರಾ?

ಇತ್ತೀಚೆಗೆ ಹುಟ್ಟಿಕೊಂಡ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಇನ್‌ಸ್ಟಾಗ್ರಾಮ್ ಪೇಜ್ ಕಾಂಗ್ರೆಸ್‌ನ 13 ಮಿಲಿಯನ್ ಮತ್ತು ಬಿಜೆಪಿಯ 9 ಮಿಲಿಯನ್ ಫಾಲೋವರ್ಸ್‌ಗಳ ಗಡಿಯನ್ನು ದಾಟಿದ್ದು, ಬರೋಬ್ಬರಿ 23 ಮಿಲಿಯನ್ (ಮೇ 24ರಂತೆ) ಫಾಲೋವರ್ಸ್‌...

ಬಾಂಗ್ಲಾ ಗಡಿಯಾಚೆಗೆ ತಳ್ಳಿದವರ ವಾಪಸಾತಿ: ಭಾರತೀಯರನ್ನೇ ಗಡಿಪಾರು ಮಾಡುತ್ತಿರುವ ಕೇಂದ್ರ?

ದಾಖಲೆರಹಿತ ವಲಸಿಗರೆಂದು ಆರೋಪಿಸಿ ಅಧಿಕಾರಿಗಳು ಬಾಂಗ್ಲಾದೇಶದ ಗಡಿಯಾಚೆಗೆ 'ತಳ್ಳಿದ್ದ' ಪಶ್ಚಿಮ ಬಂಗಾಳದ ನಿವಾಸಿಗಳನ್ನು ವಾಪಸ್ ಕರೆ ತರುವುದಾಗಿ ಕೇಂದ್ರ ಸರ್ಕಾರ ಶುಕ್ರವಾರ (ಮೇ 22,2026) ಸುಪ್ರೀಂ ಕೋರ್ಟ್‌ಗೆ ವಾಗ್ದಾನ ಮಾಡಿದೆ ಎಂದು ವರದಿಯಾಗಿದೆ....

SIR ಜಾರಿಯಾದ್ರೆ ಗ್ಯಾರಂಟಿಯನ್ನು ಕಳೆದುಕೊಳ್ತೀರಿ!

"ಬಡವರ ಮತಗಳನ್ನು ಪಟ್ಟಿಯಿಂದ ತೆಗೆಯಲು ಎಸ್‌ಐಆರ್ (SIR) ಮೂಲಕ ದೊಡ್ಡ ಸಂಚು ರೂಪಿಸಲಾಗಿದೆ. ನಾವೆಲ್ಲರೂ ಬಹಳ ಎಚ್ಚರಿಕೆಯಿಂದ ಇರಬೇಕು, ಇಲ್ಲದಿದ್ದರೆ ಮತ ಹಕ್ಕಿನ ಜೊತೆಗೆ ಶಕ್ತಿ, ಗೃಹಲಕ್ಷ್ಮಿಯಂತಹ ಗ್ಯಾರೆಂಟಿ ಯೋಜನೆಯನ್ನು ಕಳೆದುಕೊಳ್ಳಬೇಕಾಗುತ್ತದೆ" ಎಂದು...

ವೈಯಕ್ತಿಕ ಸ್ವಾತಂತ್ರ್ಯ Vs ಕಠಿಣ ಕಾಯ್ದೆ: ಯುಎಪಿಎ ಜಾಮೀನು ಭಿನ್ನಾಭಿಪ್ರಾಯಕ್ಕೆ ಸಿಗುವುದೇ ಸುಪ್ರೀಂ ಪರಿಹಾರ?

ಯುಎಪಿಎ ಅಡಿಯಲ್ಲಿ ದೀರ್ಘಕಾಲದ ಜೈಲುವಾಸದ ಹಿನ್ನೆಲೆ, ಜಾಮೀನು ನೀಡುವ ಕುರಿತು ಸುಪ್ರೀಂ ಕೋರ್ಟ್‌ನ ಎರಡು ನ್ಯಾಯಪೀಠಗಳ ನಡುವೆ ಭಿನ್ನಾಭಿಪ್ರಾಯ ಮೂಡಿದ ಕಾರಣ, ವಿಚಾರವನ್ನು ಸುಪ್ರೀಂ ಕೋರ್ಟ್‌ ವಿಸ್ತೃತ ಪೀಠಕ್ಕೆ ಶಿಫಾರಸು ಮಾಡಲಾಗಿದೆ ಎಂದು...

ತಾಯ್ತನ ಕ್ರೀಡೆಗೆ ಅಡ್ಡಿಯಾಗಬಾರದು: ಕುಸ್ತಿ ಒಕ್ಕೂಟಕ್ಕೆ ದೆಹಲಿ ಹೈಕೋರ್ಟ್ ಚಾಟಿ, ವಿನೇಶ್ ಫೋಗಟ್‌ಗೆ ಬಿಗ್ ರಿಲೀಫ್!

ಖ್ಯಾತ ಮಹಿಳಾ ಕುಸ್ತಿ ಪಟು ವಿನೇಶ್ ಫೋಗಟ್ ಅವರನ್ನು ದೇಶೀಯ ಕ್ರೀಡಾಕೂಟಗಳಲ್ಲಿ ಭಾಗವಹಿಸದಂತೆ "ಅನರ್ಹ" ಎಂದು ಘೋಷಿಸಿದ್ದ ಭಾರತೀಯ ಕುಸ್ತಿ ಒಕ್ಕೂಟದ (WFI) ನಿರ್ಧಾರವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ....

ಗುಜರಾತ್: ಜಾನುವಾರು ಹತ್ಯೆ ಆರೋಪದಲ್ಲಿ ಬಂಧಿಸಿದ 70 ವರ್ಷದ ಮುಸ್ಲಿಂ ವ್ಯಕ್ತಿ ಸಾವು: ‘ತಂದೆಯನ್ನು ಕೊಂದರು’ ಎಂದು ಆರೋಪಿಸಿದ ಮಗ

ಗುಜರಾತ್‌ನ ಅಹಮದಾಬಾದ್ ನಗರದಲ್ಲಿ ಪೊಲೀಸ್ ಕಸ್ಟಡಿಯಲ್ಲಿದ್ದ 70 ವರ್ಷದ ಜಹೀರ್ ಶೇಖ್ ಎಂಬ ಮುಸ್ಲಿಂ ವೃದ್ಧರೊಬ್ಬರು ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾರೆ. ಈ ಘಟನೆಯು ಗುಜರಾತ್‌ನಲ್ಲಿ ತೀವ್ರ ಸಂಚಲನ ಸೃಷ್ಟಿಸಿದ್ದು, ಕಸ್ಟಡಿ ನಿಂದನೆ, ಪೊಲೀಸರ ದೌರ್ಜನ್ಯ...

ಪಶ್ಚಿಮ ಬಂಗಾಳ: ಬಿಜೆಪಿಗೆ ಉಲ್ಟಾ ಹೊಡೆಯುತ್ತಾ ಗೋ-ಹತ್ಯೆ ನಿಷೇಧ ಕಾಯ್ದೆ?

ಬಕ್ರೀದ್ (ಈದ್-ಉಲ್-ಅದ್ಹಾ) ಹಬ್ಬ ಹತ್ತಿರ ಬರುತ್ತಿದ್ದಂತೆ, ಪಶ್ಚಿಮ ಬಂಗಾಳದಲ್ಲಿ ಗೋ ಹತ್ಯೆ ನಿಯಂತ್ರಣ ಕಾಯ್ದೆಯನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುತ್ತಿರುವುದಕ್ಕೆ ವ್ಯಾಪಕ ವಿರೋಧ ವ್ಯಕ್ತವಾಗುತ್ತಿದೆ. ಈ ಆಕ್ರೋಶ ಕೇವಲ ಧಾರ್ಮಿಕ ಕಾರಣಗಳಿಗಷ್ಟೇ ಸೀಮಿತವಾಗಿಲ್ಲ, ಬದಲಿಗೆ ವ್ಯಾಪಾರಿಗಳು,...

ಪ.ಬಂಗಾಳ: ಮಮತಾ ಸರ್ಕಾರ ಜಾರಿ ಮಾಡಿದ್ದ OBC ಮೀಸಲಾತಿಯನ್ನು ಕಿತ್ತೆಸೆದ ಸುವೇಂದು ನೇತೃತ್ವದ ಬಿಜೆಪಿ ಸರ್ಕಾರ

ಪಶ್ಚಿಮ ಬಂಗಾಳದ ಒಬಿಸಿ (ಇತರ ಹಿಂದುಳಿದ ವರ್ಗಗಳು) ಪಟ್ಟಿಯಲ್ಲಿದ್ದ ಮುಸ್ಲಿಂ ಸಮುದಾಯಗಳನ್ನು ಕೈಬಿಡುವ ಮೂಲಕ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದ ನೂತನ ಬಿಜೆಪಿ ಸರ್ಕಾರವು ಭಾರಿ ರಾಜಕೀಯ ಸಂಚಲನ ಸೃಷ್ಟಿಸಿದೆ. ಈ ಹಿಂದೆ...

ಸಾಮಾಜಿಕ ಹೋರಾಟಗಾರ ‘ಫರಿದುಲ್ ಇಸ್ಲಾಂ’ರನ್ನು ಸುಳ್ಳು ಪ್ರಕರಣದಲ್ಲಿ ಬಂಧಿಸಿದ ಕೋಲ್ಕತ್ತಾ ಪೊಲೀಸರು

ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ನೇತೃತ್ವದ ನೂತನ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದು ಇನ್ನು ಹತ್ತು ದಿನಗಳು ಕಳೆಯುವಷ್ಟರಲ್ಲೇ, ಸರ್ಕಾರದ ಆಡಳಿತವನ್ನು ಪ್ರಶ್ನಿಸುವವರ ಹಾಗೂ ಹೋರಾಟಗಾರರ ಧ್ವನಿಯನ್ನು ಹತ್ತಿಕ್ಕುವ ಕೆಲಸ ಆರಂಭವಾಗಿದೆ ಎಂಬ...

ಉಪ್ಪಿನಂಗಡಿ: ಸೂರ್ಯ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯ, ಚಿಕಿತ್ಸೆಗೆಂದು ತೆರಳಿ ಶವವಾಗಿ ಮರಳಿದ ಬೀದಿಬದಿ ವ್ಯಾಪಾರಿ!

ಖಾಸಗಿ ಆಸ್ಪತ್ರೆಗಳ ಹಣದ ದಾಹ ಮತ್ತು ವೈದ್ಯಕೀಯ ಸಿಬ್ಬಂದಿಯ ಘೋರ ನಿರ್ಲಕ್ಷ್ಯಕ್ಕೆ ಮತ್ತೊಂದು ಬಡ ಜೀವ ಬಲಿಯಾಗಿದೆ. ಉಪ್ಪಿನಂಗಡಿಯ ಸೂರ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಾಗಿದ್ದ ಮೊಹಮ್ಮದ್ ಶರೀಫ್ (35) ಎಂಬ ಬೀದಿ ಬದಿ...