Homeಮುಖಪುಟವೈಯಕ್ತಿಕ ವಾಟ್ಸಪ್ ಖಾತೆಗಳು ಸಾರ್ವಜನಿಕ ಸ್ಥಳವಲ್ಲ : ಬಾಂಬೆ ಹೈಕೋರ್ಟ್‌

ವೈಯಕ್ತಿಕ ವಾಟ್ಸಪ್ ಖಾತೆಗಳು ಸಾರ್ವಜನಿಕ ಸ್ಥಳವಲ್ಲ : ಬಾಂಬೆ ಹೈಕೋರ್ಟ್‌

- Advertisement -
- Advertisement -

ವೈಯಕ್ತಿಕ ವಾಟ್ಸಪ್ ಖಾತೆಗಳು ಸಾರ್ವಜನಿಕ ಸ್ಥಳವಲ್ಲ. ವೈಯಕ್ತಿಕ ಖಾತೆಗಳಿಗೆ ಅಶ್ಲೀಲ ಮಾಹಿತಿ ಕಳಿಸಿದರೆ ಅದು ಭಾರತ ದಂಡ ಸಂಹಿತೆ ಸೆಕ್ಷನ್ 294ರಡಿ ಅಪರಾಧವಲ್ಲ ಎಂದು ಬಾಂಬೆ ಹೈಕೋರ್ಟ್ ತೀರ್ಪು ನೀಡಿದೆ ಎಂದು ಲೈವ್ ಲಾ.ಕಾಮ್ ವರದಿ ಮಾಡಿದೆ.

ಇಬ್ಬರ ನಡುವಿನ ವಾಟ್ಸಪ್ ವೈಯಕ್ತಿಕ ಖಾತೆಗಳು ಸಾರ್ವಜನಿಕ ಸ್ಥಳವಲ್ಲ. ಇಬ್ಬರ ನಡುವೆ ವೈಯಕ್ತಿಕ ವಾಟ್ಸಪ್ ಖಾತೆಗಳಲ್ಲಿ ಆಶ್ಲೀಲ ಮಾಹಿತಿ ವಿನಿಮಯ ಮಾಡಿಕೊಂಡರೆ ಅದು ಅಪರಾಧವಲ್ಲ. ಆದರೆ ಇದೇ ಅಶ್ಲೀಲ ಮಾಹಿತಿಯನ್ನು ವಾಟ್ಸಪ್ ಗ್ರೂಪ್ ಗೆ ಕಳಿಸಿದರೆ ಅದನ್ನು ಸಾರ್ವಜನಿಕ ಸ್ಥಳವೆಂದು ಕರೆಯಬಹುದು. ಏಕೆಂದರೆ ವಾಟ್ಸಪ್ ಗ್ರೂಪ್ ನಲ್ಲಿ ಹಲವು ಸದಸ್ಯರು ಇರುತ್ತಾರೆ. ಅವರೆಲ್ಲರೂ ಆ ಮಾಹಿತಿಯನ್ನು ಓದುತ್ತಾರೆ ಮತ್ತು ಹೊಂದಿರುತ್ತಾರೆ ಎಂದು ಬಾಂಬೆ ಹೈಕೋರ್ಟ್ ತಿಳಿಸಿದೆ.

ನ್ಯಾಯಮೂರ್ತಿಗಳಾದ ಟಿ.ವಿ ವಲವಾಡೆ ಮತ್ತು ಎಂ.ಜಿ. ಸೆವ್ಲಿಕರ್ ಅವರಿದ್ದ ವಿಭಾಗೀಯ ಪೀಠ ವೈಯಕ್ತಿಕ ಈ ತೀರ್ಪು ನೀಡಿದ್ದು ಚರ್ಚೆಗೆ ಕಾರಣವಾಗಿದೆ.

ಪ್ರಕರಣವೊಂದರಲ್ಲಿ ಆರೋಪಿತನ ವಿರುದ್ಧ ಆತನ ಪತ್ನಿಯು 2018ರಲ್ಲಿ ನಾಂದೇಡ್‌ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸಿದ್ದಳು. ಆತ ಅವಳ ವೈಯಕ್ತಿಕ ವಾಟ್ಸಪ್ ಖಾತೆಗೆ “ನೀನು ವ್ಯಭಿಚಾರಿಣಿ, ದೇಹವನ್ನು ವ್ಯಾಪಾರ ಮಾಡಿಕೊಂಡು ಹಣ ಗಳಿಸುತ್ತಿದ್ದಿಯ” ಎಂಬ ಅಶ್ಲೀಲ ಮಾಹಿತಿ ಕಳಿಸಿದ್ದ.

ಈ ಸಂಬಂಧ ಪತಿಯ ವಿರುದ್ದ ಭಾರತ ದಂಡ ಸಂಹಿತೆ ಸೆಕ್ಷನ್ 294, 500, 506 ಮತ್ತು 507ರಡಿ ಪೊಲೀಸರು ಎಫ್.ಐ.ಆರ್ ದಾಖಲಿಸಿದ್ದರು. ಈ ಪ್ರಕರಣ ನ್ಯಾಯಾಲಯದ ಮೆಟ್ಟಿಲೇರಿತು. ವಿಚಾರಣೆ ನಡೆಸಿದ ಬಾಂಬೆ ಹೈಕೋರ್ಟ್ ದ್ವಿಸದಸ್ಯ ಪೀಠ ಐಪಿಸಿ ಸೆಕ್ಷನ್ 294ನ್ನು ಪರಿಶೀಲಿಸಿದಾಗ ಆರೋಪಿತ ವ್ಯಕ್ತಿ ಆಕೆಯ ವೈಯಕ್ತಿಕ ವಾಟ್ಸಪ್ ಖಾತೆಗೆ ಕಳಿಸಿದ್ದಾನೆ. ಇದು ಸಾರ್ವಜನಿಕ ಸ್ಥಳವಲ್ಲ ಎಂದು ಅಭಿಪ್ರಾಯಪಟ್ಟಿದ್ದು, ಈ ಪ್ರಕರಣದಲ್ಲಿ ಆರೋಪಿತ ವ್ಯಕ್ತಿ ಸಾರ್ವಜನಿಕ ಸ್ಥಳದಲ್ಲಿ ಅಶ್ಲೀಲ ಮಾಹಿತಿ ಪ್ರದರ್ಶಿಸಿಲ್ಲ. ಸಾಮಾಜಿಕ ಜಾಲತಾಣ ವಾಟ್ಸಪ್‌ನ ವೈಯಕ್ತಿಕ ಖಾತೆ ಸಾರ್ವಜನಿಕ ಸ್ಥಳವಲ್ಲ ಎಂಬುದನ್ನು ಪುನರುಚ್ಚರಿಸಿದೆ.

ಸಂದೇಶ ಪ್ರಕಟವಾಗಿರುವುದು ವಾಟ್ಸಪ್‌ನ ಇಬ್ಬರ ವೈಯಕ್ತಿಕ ಖಾತೆಯಲ್ಲಿ. ಅದು ಒಬ್ಬರಿಂದ ಇನ್ನೊಬ್ಬರಿಗೆ ಕಳಿಸಿರುವ ಮಾಹಿತಿ. ಈ ಕೊನೆಯಿಂದ ಆ ಕೊನೆಗೆ ಮಾತ್ರ ಮಾಹಿತಿ ಹೋಗಿದೆ. ಒಬ್ಬರು ಕಳಿಸಿದ್ದರೆ ಮತ್ತೊಬ್ಬರು ಆ ಮಾಹಿತಿಯನ್ನು ಸ್ವೀಕರಿಸಿದ್ದಾರೆ. ಅವರಿಬ್ಬರೇ ಆ ಮಾಹಿತಿ ಹೊಂದಿದ್ದು ಅವರಿಬ್ಬರು ಮಾತ್ರ ಓದಲು ಸಾಧ್ಯವಾಗಿದೆ. ಇವರಿಬ್ಬರ ನಡುವೆ ಬೇರೆ ಯಾರೂ ಇಲ್ಲ. ವಾಟ್ಸಪ್ ಕೂಡ ಈ ಮಾಹಿತಿಯನ್ನು ಓದಿಲ್ಲ. ಈ ಮಾಹಿತಿ ಸುಭದ್ರವಾಗಿದೆ ಮತ್ತು ಬೀಗಮುದ್ರೆ ಹಾಕಲಾಗಿದೆ. ಮಾಹಿತಿ ಕಳಿಸಿದವರು ಮತ್ತು ಸ್ವೀಕರಿಸಿದವರು ಮಾತ್ರ ಬೀಗ ತೆಗೆದು ನೋಡುವ, ಓದುವ ಅವಕಾಶವಿದೆ. ವಾಟ್ಸಪ್ ಕೂಡ ಆ ಮಾಹಿತಿಯನ್ನು ತನ್ನ ಸರ್ವರ್ ನಲ್ಲಿ ಸಂಗ್ರಹಿಸಿಲ್ಲ.

ಈ ಮಾಹಿತಿ ತುಂಬಾ ವೈಯಕ್ತಿಕ. ವಾಟ್ಸಪ್ ಗ್ರೂಪ್ ನಲ್ಲಿ ಕಳಿಸಿದರೆ ಎಲ್ಲರೂ ಹೊಂದುತ್ತಾರೆ ಮತ್ತು ಓದುತ್ತಾರೆ. ಆಗ ಕಾನೂನು ಕ್ರಮ ಕೈಗೊಳ್ಳಬಹುದು. ಆದರೆ ಅರ್ಜಿದಾರರು ಈ ಪ್ರಕರಣದಲ್ಲಿ ಆರೋಪಿಸಿರುವಂತೆ ಆಧುನಿಕ ಸಂದರ್ಭದಲ್ಲಿ ಮಹಿಳೆಯೊಬ್ಬರಿಗೆ ಅವಮಾನ ಮಾಡಿರುವುದು ಸ್ಪಷ್ಟವಾಗಿದೆ. ಹಾಗಾಗಿ ಇದು ಭಾರತ ದಂಡ ಸಂಹಿತೆ 509ರಡಿ ಬರುತ್ತದೆ ಎಂದು ನ್ಯಾಯ ಪೀಠ ಹೇಳಿದೆ ಎಂದು ಲೈವ್ ಲಾ ತಿಳಿಸಿದೆ.

ಮೂಲ: ಲೈವ್ ಲಾ.ಕಾಮ್

ಕನ್ನಡಕ್ಕೆ: ಕೆ.ಈ.ಸಿದ್ದಯ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗೋಮಾಂಸ ಸಾಗಣೆ ಆರೋಪದ ಮೇಲೆ ವಾಹನ ಮುಟ್ಟುಗೋಲು: ಉತ್ತರ ಪ್ರದೇಶ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಹೈಕೋರ್ಟ್

ಗೋಮಾಂಸ ಸಾಗಣೆ ಮಾಡುತ್ತಿದ್ದಾರೆ ಎಂದು ಕೇವಲ ಅನುಮಾನದ ಮೇಲೆ ವ್ಯಕ್ತಿಯ ವಿರುದ್ಧ ಕ್ರಮ ಕೈಗೊಳ್ಳುವುದು ಕಾನೂನುಬಾಹಿರ ಎಂದು ಅಲಹಾಬಾದ್ ಹೈಕೋರ್ಟ್ ಅಭಿಪ್ರಾಯಪಟ್ಟಿದ್ದು, ಅಂತಹ ಯಾವುದೇ ಕ್ರಮ ತೆಗೆದುಕೊಳ್ಳುವ ಮೊದಲು ವೈಜ್ಞಾನಿಕ ದೃಢೀಕರಣ ಅಗತ್ಯ...

ಎಕ್ಸಿಟ್‌ ಪೋಲ್ಸ್‌ಗಳು ‘ಹಣ-ಒತ್ತಡ’ದಿಂದ ಕೂಡಿವೆ; ಟಿಎಂಸಿ 226 ಸ್ಥಾನಗಳನ್ನು ಮೀರಲಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದಲ್ಲಿ ಎರಡನೇ ಹಂತದ ಮತದಾನದ ನಂತರ ಇತ್ತೀಚಿನ ಚುನಾವಣೋತ್ತರ ಸಮೀಕ್ಷೆಗಳ ವಿಶ್ವಾಸಾರ್ಹತೆಯನ್ನು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬಲವಾಗಿ ತಳ್ಳಿಹಾಕಿದ್ದಾರೆ. ಅವರ ಪಕ್ಷವಾದ ತೃಣಮೂಲ ಕಾಂಗ್ರೆಸ್ (ಟಿಎಂಸಿ) 294 ಸದಸ್ಯರ ವಿಧಾನಸಭೆಯಲ್ಲಿ 226...

ಗುಜರಾತ್‌| ರಾಮ ಮಂದಿರ ಕಾರ್ಯಕ್ರಮದಲ್ಲಿ ದಲಿತರಿಗೆ ಪ್ರತ್ಯೇಕ ಊಟದ ವ್ಯವಸ್ಥೆ; ಅಸ್ಪೃಶ್ಯತೆ ಆಚರಣೆ ಆರೋಪ

ಗುಜರಾತ್‌ನ ಜುನಾಗಢ್ ಜಿಲ್ಲೆಯಲ್ಲಿ ಜಾತಿ ತಾರತಮ್ಯದ ಆರೋಪ ಹೊರಿಸಲಾಗಿದ್ದು, ಧಾರ್ಮಿಕ ಕಾರ್ಯಕ್ರಮದ ಸಂದರ್ಭದಲ್ಲಿ ದೇವಾಲಯದ ಆಯೋಜಕರು ಅಸ್ಪೃಶ್ಯತೆ ಆಚರಿಸುತ್ತಿದ್ದಾರೆ ಎಂದು ದಲಿತ ಸಮುದಾಯದ ಸದಸ್ಯರು ಆರೋಪಿಸಿದ್ದಾರೆ. ಭುಟ್ಡಿ ಗ್ರಾಮದ ನಿವಾಸಿ 25 ವರ್ಷದ ಅಜಯ್...

ಕೋಗಿಲು ಬಡಾವಣೆ ಮನೆಗಳ ನೆಲಸಮ: ಹದಿನೈದು ದಿನಗಳೊಳಗೆ ಪುನರ್ವಸತಿ ಕಲ್ಪಿಸದಿದ್ದರೆ ತೀವ್ರ ಹೋರಾಟದ ಎಚ್ಚರಿಕೆ

ಬೆಂಗಳೂರು ಉತ್ತರ ತಾಲ್ಲೂಕಿನ ಯಲಹಂಕ ಪ್ರದೇಶದ ಕೋಗಿಲು ಲೇಔಟ್‌ನ ಫಕೀರ್ ಕಾಲೋನಿ ಮತ್ತು ಮಹಾನಾಯಕ ಅಂಬೇಡ್ಕರ್ ನಗರ (ವಾಸಿಂ ಲೇಔಟ್‌) ಪ್ರದೇಶದ ಬಡ ನಿವಾಸಿಗಳ ಮನೆಗಳನ್ನು 2025 ಡಿಸೆಂಬರ್ 20ರಂದು ಬೆಳಿಗ್ಗೆ ಸುಮಾರು...

ಡಾಲರ್ ಎದುರು ಸಾರ್ವಕಾಲಿಕ ಕನಿಷ್ಠ ಮಟ್ಟ 95.20 ರೂ.ಗೆ ಕುಸಿತ ಕಂಡ ಭಾರತೀಯ ರೂಪಾಯಿ ಮೌಲ್ಯ 

ನವದೆಹಲಿ: ಏಪ್ರಿಲ್ 30ರಂದು ಆರಂಭಿಕ ವಹಿವಾಟಿನಲ್ಲಿ ಭಾರತೀಯ ರೂಪಾಯಿ ಮೌಲ್ಯವು ಅಮೆರಿಕನ್ ಡಾಲರ್ ಎದುರು ಸಾರ್ವಕಾಲಿಕ ಕನಿಷ್ಠ ಮಟ್ಟವಾದ 95.07 ಕ್ಕೆ ಕುಸಿದಿದೆ. ಕರೆನ್ಸಿ 0.4% ಕುಸಿತದೊಂದಿಗೆ 95.2325 ಕ್ಕೆ ಇಳಿದಿದೆ. ಇದು ಮಾರ್ಚ್...

ತಮಿಳುನಾಡು| ದಲಿತ ಯುವಕನ ಶವ ಪತ್ತೆ; ‘ಜಾತಿ ಕಾರಣಕ್ಕೆ ಹತ್ಯೆಯಾಗಿದೆ’ ಎಂದು ಕುಟುಂಬದ ಆರೋಪ

ತಮಿಳುನಾಡಿನ ಪುದುಕ್ಕೊಟ್ಟೈ ಜಿಲ್ಲೆಯ ಕ್ವಾರಿ ಕೆರೆಯ ಬಳಿ 20 ವರ್ಷದ ದಲಿತ ಯುವಕನ ಶವ ಪತ್ತೆಯಾಗಿದ್ದು, ಹಿಂದುಳಿದ ವರ್ಗದ ಯುವತಿಯೊಂದಿಗಿನ ಸಂಬಂಧದಿಂದಾಗಿ ಆತನನ್ನು ಕೊಲ್ಲಲಾಗಿದೆ ಎಂದು ಆತನ ಕುಟುಂಬ ಆರೋಪಿಸಿದೆ. ಆದರೆ, ಈ...

‘ಬಾಲ ಕಾರ್ಮಿಕ’ ಶಂಕೆಯ ಮೇಲೆ 155 ಮುಸ್ಲಿಂ ವಿದ್ಯಾರ್ಥಿಗಳ ಬಂಧನ: ಧಾರ್ಮಿಕ ಗುರುತಿನ ಕಾರಣಕ್ಕೆ ಬಂಧಿಸಿರುವುದಾಗಿ ಪೋಷಕರ ಆರೋಪ

ಮಧ್ಯಪ್ರದೇಶದ ಕಟ್ನಿಯಲ್ಲಿ ಸರ್ಕಾರಿ ರೈಲ್ವೆ ಪೊಲೀಸರು (GRP) 155 ಮುಸ್ಲಿಂ ವಿದ್ಯಾರ್ಥಿಗಳು ಮತ್ತು ಎಂಟು ಶಿಕ್ಷಕರನ್ನು "ಬಾಲ ಕಾರ್ಮಿಕ" ಶಂಕೆಯ ಮೇಲೆ ಬಂಧಿಸಿದ ನಂತರ, ಪೋಷಕರು ಮುಸ್ಲಿಂ ವಿರೋಧಿ ಪಕ್ಷಪಾತವನ್ನು ಹೊಂದಿದ್ದಾರೆಂದು ಆರೋಪಿಸಿದ್ದಾರೆ....

ಜನಿವಾರದ ಹಿಂದೆ ಬಿದ್ದಿರುವ ವಿರೋಧ ಪಕ್ಷ ಮತ್ತು ಮಾಧ್ಯಮಗಳು

ಏಪ್ರಿಲ್ 23, 2026 ರಂದು ನಡೆದ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ (KCET) ವೇಳೆ ಬೆಂಗಳೂರಿನ ಕೋರಮಂಗಲದಲ್ಲಿರುವ ಕೃಪಾನಿಧಿ ಪಿಯು ಕಾಲೇಜಿನಲ್ಲಿ ಐವರು ಬ್ರಾಹ್ಮಣ ವಿದ್ಯಾರ್ಥಿಗಳ ಜನಿವಾರವನ್ನು ಬಲವಂತವಾಗಿ ತೆಗೆಸಿದ ಘಟನೆ ರಾಜಕೀಯ...

ಒಡಿಶಾ| ಸಾವಿನ ದಾಖಲೆ ಕೇಳಿದ ಬ್ಯಾಂಕ್‌ ಸಿಬ್ಬಂದಿ; ಸಮಾದಿ ಅಗೆದು ಸಹೋದರಿಯ ಅಸ್ಥಿಪಂಜರ ತಂದ ಬುಡಕಟ್ಟು ವ್ಯಕ್ತಿ

ಒಡಿಶಾದ ಕಿಯೋಂಜಾರ್ ಜಿಲ್ಲೆಯಲ್ಲಿ, ಬುಡಕಟ್ಟು ವ್ಯಕ್ತಿಯೊಬ್ಬ ತನ್ನ ಮೃತ ಸಹೋದರಿಯ ಅಸ್ಥಿಪಂಜರವನ್ನು ಅಗೆದು ಗ್ರಾಮೀಣ ಬ್ಯಾಂಕ್‌ಗೆ ತೆಗೆದುಕೊಂಡು ಹೋಗಿದ್ದಾನೆ. ಆಕೆಯ ಸಾವನ್ನು ಸಾಬೀತುಪಡಿಸುವ ಮೂಲಕ ಆಕೆಯ ಖಾತೆಯಲ್ಲಿ ಜಮಾ ಮಾಡಿದ ಹಣವನ್ನು ಪಡೆಯಲು...

ಜಾತಿ ಕಿರುಕುಳಕ್ಕೆ ದಲಿತ ವಿದ್ಯಾರ್ಥಿ ಸಾವು ಪ್ರಕರಣ: ಇಂದು ಸಂಜೆ 6 ರವರೆಗೆ ಕೇರಳ ಬಂದ್

ಜಾತಿ ಆಧಾರಿತ ಕಿರುಕುಳದಿಂದ ಮನನೊಂದಿದ್ದ ಕೇರಳದ ಅಂಚರಕಂಡಿಯ ಕಣ್ಣೂರು ದಂತ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿಡಿಎಸ್ ವಿದ್ಯಾರ್ಥಿ ಆರ್.ಎಲ್. ನಿತಿನ್ ರಾಜ್ ಆತ್ಮಹತ್ಯೆಗೆ ರಾಜ್ಯದಾದ್ಯಂತ ಆಕ್ರೋಶ ವ್ಯಕ್ತವಾಗಿದೆ. ಕಾಲೇಜು ಕಟ್ಟಡದಿಂದ ಹಾರಿ ಆತ್ಮಹತ್ಯೆ...