Homeಮುಖಪುಟವೈಯಕ್ತಿಕ ವಾಟ್ಸಪ್ ಖಾತೆಗಳು ಸಾರ್ವಜನಿಕ ಸ್ಥಳವಲ್ಲ : ಬಾಂಬೆ ಹೈಕೋರ್ಟ್‌

ವೈಯಕ್ತಿಕ ವಾಟ್ಸಪ್ ಖಾತೆಗಳು ಸಾರ್ವಜನಿಕ ಸ್ಥಳವಲ್ಲ : ಬಾಂಬೆ ಹೈಕೋರ್ಟ್‌

- Advertisement -
- Advertisement -

ವೈಯಕ್ತಿಕ ವಾಟ್ಸಪ್ ಖಾತೆಗಳು ಸಾರ್ವಜನಿಕ ಸ್ಥಳವಲ್ಲ. ವೈಯಕ್ತಿಕ ಖಾತೆಗಳಿಗೆ ಅಶ್ಲೀಲ ಮಾಹಿತಿ ಕಳಿಸಿದರೆ ಅದು ಭಾರತ ದಂಡ ಸಂಹಿತೆ ಸೆಕ್ಷನ್ 294ರಡಿ ಅಪರಾಧವಲ್ಲ ಎಂದು ಬಾಂಬೆ ಹೈಕೋರ್ಟ್ ತೀರ್ಪು ನೀಡಿದೆ ಎಂದು ಲೈವ್ ಲಾ.ಕಾಮ್ ವರದಿ ಮಾಡಿದೆ.

ಇಬ್ಬರ ನಡುವಿನ ವಾಟ್ಸಪ್ ವೈಯಕ್ತಿಕ ಖಾತೆಗಳು ಸಾರ್ವಜನಿಕ ಸ್ಥಳವಲ್ಲ. ಇಬ್ಬರ ನಡುವೆ ವೈಯಕ್ತಿಕ ವಾಟ್ಸಪ್ ಖಾತೆಗಳಲ್ಲಿ ಆಶ್ಲೀಲ ಮಾಹಿತಿ ವಿನಿಮಯ ಮಾಡಿಕೊಂಡರೆ ಅದು ಅಪರಾಧವಲ್ಲ. ಆದರೆ ಇದೇ ಅಶ್ಲೀಲ ಮಾಹಿತಿಯನ್ನು ವಾಟ್ಸಪ್ ಗ್ರೂಪ್ ಗೆ ಕಳಿಸಿದರೆ ಅದನ್ನು ಸಾರ್ವಜನಿಕ ಸ್ಥಳವೆಂದು ಕರೆಯಬಹುದು. ಏಕೆಂದರೆ ವಾಟ್ಸಪ್ ಗ್ರೂಪ್ ನಲ್ಲಿ ಹಲವು ಸದಸ್ಯರು ಇರುತ್ತಾರೆ. ಅವರೆಲ್ಲರೂ ಆ ಮಾಹಿತಿಯನ್ನು ಓದುತ್ತಾರೆ ಮತ್ತು ಹೊಂದಿರುತ್ತಾರೆ ಎಂದು ಬಾಂಬೆ ಹೈಕೋರ್ಟ್ ತಿಳಿಸಿದೆ.

ನ್ಯಾಯಮೂರ್ತಿಗಳಾದ ಟಿ.ವಿ ವಲವಾಡೆ ಮತ್ತು ಎಂ.ಜಿ. ಸೆವ್ಲಿಕರ್ ಅವರಿದ್ದ ವಿಭಾಗೀಯ ಪೀಠ ವೈಯಕ್ತಿಕ ಈ ತೀರ್ಪು ನೀಡಿದ್ದು ಚರ್ಚೆಗೆ ಕಾರಣವಾಗಿದೆ.

ಪ್ರಕರಣವೊಂದರಲ್ಲಿ ಆರೋಪಿತನ ವಿರುದ್ಧ ಆತನ ಪತ್ನಿಯು 2018ರಲ್ಲಿ ನಾಂದೇಡ್‌ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸಿದ್ದಳು. ಆತ ಅವಳ ವೈಯಕ್ತಿಕ ವಾಟ್ಸಪ್ ಖಾತೆಗೆ “ನೀನು ವ್ಯಭಿಚಾರಿಣಿ, ದೇಹವನ್ನು ವ್ಯಾಪಾರ ಮಾಡಿಕೊಂಡು ಹಣ ಗಳಿಸುತ್ತಿದ್ದಿಯ” ಎಂಬ ಅಶ್ಲೀಲ ಮಾಹಿತಿ ಕಳಿಸಿದ್ದ.

ಈ ಸಂಬಂಧ ಪತಿಯ ವಿರುದ್ದ ಭಾರತ ದಂಡ ಸಂಹಿತೆ ಸೆಕ್ಷನ್ 294, 500, 506 ಮತ್ತು 507ರಡಿ ಪೊಲೀಸರು ಎಫ್.ಐ.ಆರ್ ದಾಖಲಿಸಿದ್ದರು. ಈ ಪ್ರಕರಣ ನ್ಯಾಯಾಲಯದ ಮೆಟ್ಟಿಲೇರಿತು. ವಿಚಾರಣೆ ನಡೆಸಿದ ಬಾಂಬೆ ಹೈಕೋರ್ಟ್ ದ್ವಿಸದಸ್ಯ ಪೀಠ ಐಪಿಸಿ ಸೆಕ್ಷನ್ 294ನ್ನು ಪರಿಶೀಲಿಸಿದಾಗ ಆರೋಪಿತ ವ್ಯಕ್ತಿ ಆಕೆಯ ವೈಯಕ್ತಿಕ ವಾಟ್ಸಪ್ ಖಾತೆಗೆ ಕಳಿಸಿದ್ದಾನೆ. ಇದು ಸಾರ್ವಜನಿಕ ಸ್ಥಳವಲ್ಲ ಎಂದು ಅಭಿಪ್ರಾಯಪಟ್ಟಿದ್ದು, ಈ ಪ್ರಕರಣದಲ್ಲಿ ಆರೋಪಿತ ವ್ಯಕ್ತಿ ಸಾರ್ವಜನಿಕ ಸ್ಥಳದಲ್ಲಿ ಅಶ್ಲೀಲ ಮಾಹಿತಿ ಪ್ರದರ್ಶಿಸಿಲ್ಲ. ಸಾಮಾಜಿಕ ಜಾಲತಾಣ ವಾಟ್ಸಪ್‌ನ ವೈಯಕ್ತಿಕ ಖಾತೆ ಸಾರ್ವಜನಿಕ ಸ್ಥಳವಲ್ಲ ಎಂಬುದನ್ನು ಪುನರುಚ್ಚರಿಸಿದೆ.

ಸಂದೇಶ ಪ್ರಕಟವಾಗಿರುವುದು ವಾಟ್ಸಪ್‌ನ ಇಬ್ಬರ ವೈಯಕ್ತಿಕ ಖಾತೆಯಲ್ಲಿ. ಅದು ಒಬ್ಬರಿಂದ ಇನ್ನೊಬ್ಬರಿಗೆ ಕಳಿಸಿರುವ ಮಾಹಿತಿ. ಈ ಕೊನೆಯಿಂದ ಆ ಕೊನೆಗೆ ಮಾತ್ರ ಮಾಹಿತಿ ಹೋಗಿದೆ. ಒಬ್ಬರು ಕಳಿಸಿದ್ದರೆ ಮತ್ತೊಬ್ಬರು ಆ ಮಾಹಿತಿಯನ್ನು ಸ್ವೀಕರಿಸಿದ್ದಾರೆ. ಅವರಿಬ್ಬರೇ ಆ ಮಾಹಿತಿ ಹೊಂದಿದ್ದು ಅವರಿಬ್ಬರು ಮಾತ್ರ ಓದಲು ಸಾಧ್ಯವಾಗಿದೆ. ಇವರಿಬ್ಬರ ನಡುವೆ ಬೇರೆ ಯಾರೂ ಇಲ್ಲ. ವಾಟ್ಸಪ್ ಕೂಡ ಈ ಮಾಹಿತಿಯನ್ನು ಓದಿಲ್ಲ. ಈ ಮಾಹಿತಿ ಸುಭದ್ರವಾಗಿದೆ ಮತ್ತು ಬೀಗಮುದ್ರೆ ಹಾಕಲಾಗಿದೆ. ಮಾಹಿತಿ ಕಳಿಸಿದವರು ಮತ್ತು ಸ್ವೀಕರಿಸಿದವರು ಮಾತ್ರ ಬೀಗ ತೆಗೆದು ನೋಡುವ, ಓದುವ ಅವಕಾಶವಿದೆ. ವಾಟ್ಸಪ್ ಕೂಡ ಆ ಮಾಹಿತಿಯನ್ನು ತನ್ನ ಸರ್ವರ್ ನಲ್ಲಿ ಸಂಗ್ರಹಿಸಿಲ್ಲ.

ಈ ಮಾಹಿತಿ ತುಂಬಾ ವೈಯಕ್ತಿಕ. ವಾಟ್ಸಪ್ ಗ್ರೂಪ್ ನಲ್ಲಿ ಕಳಿಸಿದರೆ ಎಲ್ಲರೂ ಹೊಂದುತ್ತಾರೆ ಮತ್ತು ಓದುತ್ತಾರೆ. ಆಗ ಕಾನೂನು ಕ್ರಮ ಕೈಗೊಳ್ಳಬಹುದು. ಆದರೆ ಅರ್ಜಿದಾರರು ಈ ಪ್ರಕರಣದಲ್ಲಿ ಆರೋಪಿಸಿರುವಂತೆ ಆಧುನಿಕ ಸಂದರ್ಭದಲ್ಲಿ ಮಹಿಳೆಯೊಬ್ಬರಿಗೆ ಅವಮಾನ ಮಾಡಿರುವುದು ಸ್ಪಷ್ಟವಾಗಿದೆ. ಹಾಗಾಗಿ ಇದು ಭಾರತ ದಂಡ ಸಂಹಿತೆ 509ರಡಿ ಬರುತ್ತದೆ ಎಂದು ನ್ಯಾಯ ಪೀಠ ಹೇಳಿದೆ ಎಂದು ಲೈವ್ ಲಾ ತಿಳಿಸಿದೆ.

ಮೂಲ: ಲೈವ್ ಲಾ.ಕಾಮ್

ಕನ್ನಡಕ್ಕೆ: ಕೆ.ಈ.ಸಿದ್ದಯ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...