Homeಮುಖಪುಟವ್ಯಕ್ತಿತ್ವ ವಿಕಸನ 2 : ನಿಮ್ಮನ್ನು ನೀವು ಅರಿತುಕೊಳ್ಳಿ

ವ್ಯಕ್ತಿತ್ವ ವಿಕಸನ 2 : ನಿಮ್ಮನ್ನು ನೀವು ಅರಿತುಕೊಳ್ಳಿ

- Advertisement -
- Advertisement -

ಜೀವನ ಕಲೆಗಳು: ಅಂಕಣ-3

| ಜಿ. ಆರ್. ವಿದ್ಯಾರಣ್ಯ |

ತನ್ನ ಸ್ವಂತ ಶಕ್ತಿ/ದೌರ್ಬಲ್ಯವನ್ನು ಅರಿತುಕೊಳ್ಳುವ ಕಲೆಗೆ “ಸ್ವೊಟ್ ಎನಾಲಿಸಿಸ್” (SWOT ANALYSIS) ಎನ್ನುತ್ತಾರೆ. ಇದನ್ನು ವ್ಯಕ್ತಿಗಳು ಮತ್ತು ಸಂಸ್ಥೆಗಳು ಕೂಡ ಬಳಸಬಹುದು. ಇದರಿಂದ ವ್ಯಕ್ತಿಯ/ಸಂಸ್ಥೆಯ ಶಕ್ತಿ (Strength), ದೌರ್ಬಲ್ಯ (Weakness), ಅವಕಾಶ (Opportunity) ಮತ್ತು ಭೀತಿ (Threat) ಗಳನ್ನು ಅರಿತುಕೊಳ್ಳಬಹುದು.ಈ ವಿಶ್ಲೇಷಣೆಯನ್ನು ವ್ಯಕ್ತಿಯ ಪರವಾಗಿ ಬಳಸಿದಲ್ಲಿ ವ್ಯಕ್ತಿಯ ಸಹಜ ಶಕ್ತಿ-ಸಾಮರ್ಥ್ಯಗಳನ್ನು ಅರಿತು ಅದಕ್ಕೆ ತಕ್ಕ ಅವಕಾಶಗಳನ್ನು ಹುಡುಕಲು ನೆರವಾಗುತ್ತದೆ. ಸಂಸ್ಥೆಯ ಪರವಾಗಿ ಉಪಯೋಗಿಸಿದಲ್ಲಿ ಅದರ ಮಾರುಕಟ್ಟೆಯ ಹಿಡಿತ ಬಲಪಡಿಸುವುದಕ್ಕೆ ಅಥವಾ ಹೊಸ ಆವಿಶ್ಕಾರವನ್ನು ಹೊರಬಿಡಲು ಸಹಕಾರಿಯಾಗುತ್ತದೆ.

ಸ್ವೊಟ್ ಎನಾಲಿಸಿಸ್ (SWOT ANALYSIS)ಮಾಡುವುದರಿಂದ ನಮ್ಮ ಶಕ್ತಿ ಏನು ಮತ್ತು ದೌರ್ಬಲ್ಯ ಏನು ಎಂಬುದನ್ನು ತಿಳಿಯಬಹುದು. ಉದಾಹರಣೆಗೆ ನಿಮ್ಮ ಇತ್ತೀಚಿನ ಶಾಲಾ/ಕಾಲೇಜು ತರಗತಿಯ ಅಂಕ ಪಟ್ಟಿ ನೋಡಿದಾಕ್ಷಣ ಯಾವ ವಿಷಯದಲ್ಲಿ ನೀವು ಗಟ್ಟಿಗರು, ಯಾವುದರಲ್ಲಿ ನಿಮಗೆ ಶಕ್ತಿ ಸಾಲದು ಎಂಬುದು ಕೂಡಲೇ ತಿಳಿಯುತ್ತದೆ. ಯಾವ ವಿಷಯದಲ್ಲಿ ನೀವು ಹೆಚ್ಚು ಅಂಕ ಗಳಿಸಿದ್ದೀರೋ, ಅದು ನಿಮ್ಮ ಸಹಜ ಶಕ್ತಿ. ಯಾವ ವಿಷಯ ಎಷ್ಟೇ ಪರಿಶ್ರಮ ಪಟ್ಟರೂ, ನಿಮ್ಮ ತಲೆಗೆ ಹತ್ತುವುದಿಲ್ಲವೋ ಅದು ನಿಮ್ಮ ದೌರ್ಬಲ್ಯ, ಆದರೆ ಎರಡೂ, ಶಕ್ತಿ ಮತ್ತು ದೌರ್ಬಲ್ಯ, ತಾತ್ಕಾಲಿಕ. ಇದಕ್ಕೆ ಕಾರಣ ನೀವು ಕಂಡುಕೊಳ್ಳಬೇಕು. ಬಹುಶಃ ನಿಮ್ಮ ಕಲಿಯುವ ರೀತಿ ಸರಿಯಾಗಿಲ್ಲದಿರಬಹುದು ಅಥವಾ ಶಾಲೆಯಲ್ಲಿ ಕಲಿಸುವ ವಿಧಾನದಲ್ಲಿ ತೊಂದರೆ ಇರಬಹುದು. ಸರಿಯಾದ ಕಾರಣ ತಿಳಿದು ಸಮಸ್ಯೆ ಪರಿಹರಿಸಿದಲ್ಲಿ ದೌರ್ಬಲ್ಯವನ್ನು ಶಕ್ತಿಯಾಗಿ ಬದಲಾಯಿಸಿಕೊಳ್ಳಲು ಸಾಧ್ಯ.

ಅದೇ ರೀತಿಯಲ್ಲಿ ನಿಮ್ಮ ಶಕ್ತಿಯಿಂದ ನಿಮಗೆ ಈಗಿರುವ ಅಥವಾ ಸಿಗಬಹುದಾದ ಅವಕಾಶಗಳನ್ನು ಗುರುತಿಸಿಕೊಳ್ಳಲು ಸಾಧ್ಯವಾಗುತ್ತದೆ. ಯಾವುದೇ ವಿಷಯದಲ್ಲಿ ಅತಿ ಹೆಚ್ಚಿನ ಆಸಕ್ತಿ/ಉತ್ಸಾಹವಿದ್ದಲ್ಲಿ ಅದಕ್ಕೆ ಸಿಗಬಹುದಾದ ಪಾರಿತೋಷಕ, ವಿದ್ಯಾರ್ಥಿವೇತನ, ಪ್ರೋತ್ಸಾಹಧನ ಮುಂತಾದವುಗಳನ್ನು ಪಡೆಯಲು ಅರ್ಜಿ ಸಲ್ಲಿಸಬಹುದು. ಕೆಲವೊಮ್ಮೆ ಅದಕ್ಕೆ ಪೂರಕವಾದ ಲೇಖನ ರಚಿಸಿ ಲಗತ್ತಿಸಬೇಕಾಗಬಹುದು. ಅದೇ ವಿಷಯದಲ್ಲಿ ಉನ್ನತ ಅಭ್ಯಾಸಕ್ಕೆ ಇರುವ ಬೇರೆ ಬೇರೆ ಮಾರ್ಗಗಳನ್ನು ನೀವು ಕಂಡುಕೊಳ್ಳಬಹುದು.

ವಿಜ್ಞಾನ ಸಂಬಂಧಿ ವಿಷಯಗಳಲ್ಲಿ ನಿಮಗೆ ಹೆಚ್ಚು ಅಂಕಗಳು ಬರುತ್ತಿದ್ದು, ಕನ್ನಡ, ಇಂಗ್ಲಿಷ್, ಹಿಂದಿ ಭಾಷೆ ಕಷ್ಟವಾಗಿದ್ದರೆ ನೀವು ಎಸ್.ಎಸ್.ಎಲ್.ಸಿ. ನಂತರ ಪಿ.ಸಿ.ಎಂ.ಬಿ., ಪಿ.ಸಿ.ಎಂ.ಸಿ. ಅಥವಾ ಪಿ.ಸಿ.ಎಂ.ಇ. ಇತ್ಯಾದಿ ವಿಷಯಗಳನ್ನು ಆಯ್ಕೆ ಮಾಡಿಕೊಳ್ಳಬಹುದು. ಅದೇ ರೀತಿ ವಿಜ್ಞಾನ ಸಂಬಂಧಿ ವಿಷಯಗಳುನಿಮಗೆ ಕಷ್ಟಕರ ಎನಿಸುತ್ತಿದ್ದು, ಭಾಷೆ, ಇತಿಹಾಸ, ಭೂಗೋಳ ಮುಂತಾದವು ಸುಲಭವಾಗಿದ್ದರೆ ನೀವು ಹ್ಯುಮಾನಿಟೀಸ್ ಶಾಖೆ ಆಯ್ಕೆ ಮಾಡಿಕೊಳ್ಳಬಹುದು. ಹಾಗೆಯೇ ನೀವು ಲೆಕ್ಕದಲ್ಲಿ ಗಟ್ಟಿಗರು ಮತ್ತು ಭಾಷೆಯೂ ಸುಲಭ ಎನಿಸಿದರೆ ಕಾಮರ್ಸ್ ನಿಮಗೆ ಉತ್ತಮ ಆಯ್ಕೆಯಾಗಿರಬಹುದು. ಎಲ್ಲರೂ ಡಾಕ್ಟರ್ ಅಥವಾ ಇಂಜಿನಿಯರ್ ಆಗಲೇ ಬೇಕೆಂಬ ನಿಯಮವೂ ಇಲ್ಲ, ಅಗತ್ಯವೂ ಇಲ್ಲ. ಯಾವುದೇ ಮಾರ್ಗವನ್ನು ನೀವು ನಿಮ್ಮ ಸಹಜ ಶಕ್ತಿ ಗುಣವನ್ನು ಆಧರಿಸಿ ಆಯ್ಕೆ ಮಾಡಿದ್ದಲ್ಲಿ, ಹೆಚ್ಚು ಪರಿಶ್ರಮವಿಲ್ಲದೇ ಉನ್ನತ ಸಾಧನೆ ಮಾಡಲು ಬಹಳಷ್ಟು ಅವಕಾಶವಿರುತ್ತದೆ.

ಇತ್ತೀಚೆಗೆ ಏಪ್ರಿಲ್/ಮೇ ತಿಂಗಳಲ್ಲಿ ಕಾಲೇಜುಗಳು ಮತ್ತು ಉನ್ನತ ವಿದ್ಯಾಸಂಸ್ಥೆಗಳು ನಗರದಾದ್ಯಂತ ಮಾರಾಟ ಮೇಳಗಳನ್ನು ಆಯೋಜಿಸುತ್ತಾರೆ. ಇದರಲ್ಲಿ, ಶಿಕ್ಷಣ ತಜ್ಞರು ಮಕ್ಕಳನ್ನುದ್ದೇಶಿಸಿ ಮಾತನಾಡಿ, ಅವರಿಗೆ ಇರುವ ಹೊಸ ಹೊಸ ವೃತ್ತಿಪರ ಕೋರ್ಸುಗಳ ಬಗ್ಗೆ ತಿಳಿಸಿಕೊಡುತ್ತಾರೆ. ಇಂತಹ ಮೇಳಗಳಲ್ಲಿ ಮಕ್ಕಳು ಮತ್ತು ಪೋಷಕರು ಭಾಗವಹಿಸಬೇಕು. ಒಳ್ಳೆಯ ವರಮಾನ/ಬಡ್ತಿ ಅವಕಾಶವಿರುವ ಹುದ್ದೆಗಳ ದೃಷ್ಟಿಯಿಂದ ಯಾವ ಯಾವ ಕ್ಷೇತ್ರದಲ್ಲಿ, ಮುಂಬರುವ ಎಷ್ಟು ವರ್ಷದಲ್ಲಿ, ಎಷ್ಟು ಹುದ್ದೆಗಳು ಸೃಷ್ಟಿಯಾಗಲಿವೆ ಎಂಬ ಖಚಿತ ಮಾಹಿತಿ ದುರದೃಷ್ಟವಶಾತ್ ಎಲ್ಲೂ ಸಿಗುವುದಿಲ್ಲ. ಈಗ ಕಂಪ್ಯೂಟರ್ ಕ್ಷೇತ್ರದಲ್ಲಿ ಎ.ಐ. (ಆರ್ಟಿಫಿಷಿಯಲ್ ಇಂಟೆಲಿಜೆನ್ಸ್ – ಕೃತಕ ಬುದ್ಧಿಶಕ್ತಿ) ಕ್ಷೇತ್ರದಲ್ಲಿ ಸಾಕಷ್ಟು ಅವಕಾಶವಿದೆ ಎಂದು ಕೇಳಿಬಂದರೂ ಸಹ ಮುಂಬರುವ ಐದು ವರ್ಷದಲ್ಲಿ ಏನಾಗಬಹುದು ಎಂದು ಯಾರಿಗೂ ಗೊತ್ತಿಲ್ಲ ಆದ್ದರಿಂದ ಈಗ ಆ ಕೋರ್ಸಿಗೆ ಸೇರುವ ಮಕ್ಕಳಿಗೆ ತಮ್ಮ ಭವಿಷ್ಯ ಹೇಗಿರುತ್ತದೆ ಎಂದು ಖಚಿತಗೊಳಿಸಿಕೊಳ್ಳಲು ಸಾಧ್ಯವಿಲ್ಲ.

ದ್ವಿತೀಯ ಪಿಯುಸಿ ಓದುತ್ತಿರುವ ಮಕ್ಕಳು ಆನ್-ಲೈನ್ ಉಚಿತ ಪರೀಕ್ಷೆ ಮಾಡಿಕೊಂಡಲ್ಲಿ ಅವರ ವ್ಯಕ್ತಿತ್ವ ಮಾದರಿ ಯಾವುದು ಎಂಬುದು ತಿಳಿಯುತ್ತದೆ. ಈ ಸ್ವ-ಪರೀಕ್ಷೆಯ ಫಲಿತಾಂಶದ ಆಧಾರದ ಮೇಲೆ, ವ್ಯಕ್ತಿತ್ವದ ಇಂಡಿಕೇಟರ್ ಪ್ರಕಾರ ಯಾವ ಜೀವನೋಪಾಯ/ವೃತ್ತಿ ಅವರಿಗೆ ಸಹಜ ಮತ್ತು ಸರಳ ಎಂಬುದನ್ನು ನಿರ್ಧರಿಸಬಹುದು. ಅದೇ ರೀತಿ ಅವರ ಮುಂದಿನ ಉನ್ನತ ಶೈಕ್ಷಣಿಕ ಆಯ್ಕೆಯನ್ನೂ ಸಹ ಅವರು ಅಥವಾ ಪೋಷಕರು ನಿರ್ಧರಿಸಬಹುದು.

ಅಪಾಯದ ಎಚ್ಚರಿಕೆ: ಎಂಬಿಟಿಐ ಅಥವಾ ಬಿಗ್-ಫೈವ್ ಆಗಲೀ ಸಂಪೂರ್ಣ ವೈಜ್ಞಾನಿಕ ತತ್ವವಾದ ಅಲ್ಲ, ಆದ್ದರಿಂದ ಮಕ್ಕಳ ಭವಿಷ್ಯ ರೂಪಿಸುವ ಮುನ್ನ, ಪರಿಣಿತರ, ವೃತ್ತಿಪರರ ಸಲಹೆ ಪಡೆಯುವುದು ಅತ್ಯಂತ ಅವಶ್ಯಕ. ಕೇವಲ ಅಂತರ್ಜಾಲದ ಮಾಹಿತಿ ನಂಬಿ, ಅಥವಾ ಒಂದು ಲೇಖನ ಓದಿ ನಿಮ್ಮ ಮಕ್ಕಳ ಭವಿಷ್ಯದ ಬಗ್ಗೆ ಬಹು ದೊಡ್ಡ ನಿರ್ಧಾರಕ್ಕೆ ಬರಬೇಡಿ.

ಎಸ್.ಎಸ್.ಎಲ್.ಸಿ. ನಂತರ ದ್ವಿತೀಯ ಪಿಯುಸಿ ಸಾಕು (ಅಥವಾ ಯಾವುದೋ ಒಂದು ಪದವಿ ಗಿಟ್ಟಿಸಿದರೆ ಸಾಕು) ಎಂದು ಓದನ್ನು ಅಲ್ಲಿಗೇ ನಿಲ್ಲಿಸಿ, ಯಾವ ಕೆಲಸಕ್ಕೆ ಸೇರಬೇಕು ಎಂಬುದನ್ನು ನಿರ್ಧರಿಸಲಾಗದೇ ಇರುವ ಯುವಕ/ಯುವತಿಯರಿಗೆ ಇಲ್ಲಿದೆ ಒಂದು ಸರಳ ದಾರಿ. ಮೊದಲು ಮೇಲೆ ತಿಳಿಸಿದಂತೆ, ನಿಮ್ಮ ಸ್ವೊಟ್ ಎನಾಲಿಸಿಸ್ ನೀವೇ ಮಾಡಿಕೊಳ್ಳಿ. ನೀವು ಎಂತಹ ವ್ಯಕ್ತಿ ಎಂದು ನೀವೇ ನಿರ್ಧರಿಸಿಕೊಳ್ಳಿ. ನಂತರ ಶಾಲೆ/ಕಾಲೇಜಿನಲ್ಲಿ ನೀವು ಸುಲಭವಾಗಿ ಕಲಿತ ವಿಷಯ, ನೀವು ಸ್ವ-ಇಚ್ಛೆಯಿಂದ, ಸ್ವಯಂಸೇವಕರಾಗಿ, ಇಷ್ಟ ಪಟ್ಟು ಮಾಡಿದ ಕೆಲಸಗಳು (ಸ್ಕೌಟ್/ಗೈಡ್, ಎನ್.ಎಸ್.ಎಸ್., ಗ್ರಾಹಕ ಕ್ಲಬ್, ವಿಜ್ಞಾನ ಕ್ಲಬ್, ಬರವಣಿಗೆ/ಚಿತ್ರಕಲೆ, ಸಾಮಾಜಿಕ/ಧಾರ್ಮಿಕ ಚಟುವಟಿಕೆ, ಅಥವಾ ಧನಸಂಗ್ರಹ ಇತ್ಯಾದಿ), ಇಷ್ಟವಾದ/ಭಾಗವಹಿಸಿದ ಕ್ರೀಡೆಗಳು ಯಾವುದು ಎಂದು ಒಂದನ್ನೂ ಬಿಡದೆ, ಹಾಳೆಯಲ್ಲಿ ಗುರುತು ಹಾಕಿಕೊಳ್ಳಿ. ಇವನ್ನೆಲ್ಲಾ ಒಂದೊಂದು ಮಣಿಗಳು ಎಂದು ಭಾವಿಸಿ, ಅವನ್ನು ಪೋಣಿಸಿ ಹಾರವನ್ನಾಗಿ ಮಾಡಬಹುದೇ ಯೋಚಿಸಿ. ಹಾರಕ್ಕೆ ಒಂದೆರಡು ಮಣಿಗಳು ಕಡಿಮೆ ಎಂದೆನಿಸಿದರೆ ಅವನ್ನು ಪಡೆಯಲು ನಿಮ್ಮ ಪ್ರಯತ್ನ ಹೇಗಿರಬೇಕು ಎಂದು ಯೋಚಿಸಿ. ನಿಮ್ಮ ಮುಂದಿನ ದಾರಿ ತಾನಾಗಿಯೇ ಗೋಚರಿಸುತ್ತದೆ.

ಇದನ್ನೂ ಒದಿ: ನಮ್ಮ ಬದುಕನ್ನು ಸುಂದರ ಮತ್ತು ಅರ್ಥಪೂರ್ಣಗೊಳಿಸಿಕೊಳ್ಳಲು ಬೇಕಿರುವ ಜೀವನಾವಶ್ಯಕ ಕಲೆಗಳು

ಇದನ್ನೂ ಓದಿ: ನಿಮ್ಮನ್ನು ನೀವೇ ಅರಿತುಕೊಳ್ಳಿ: ವ್ಯಕ್ತಿತ್ವ ವಿಕಸನ 1

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಡೊನಾಲ್ಡ್ ಟ್ರಂಪ್, ಎಲಾನ್ ಮಸ್ಕ್‌ನಿಂದ ಬಿಲ್ ಗೇಟ್ಸ್‌ವರೆಗೆ : ಅಂತಿಮ ಎಪ್‌ಸ್ಟೀನ್‌ ಫೈಲ್‌ಗಳಲ್ಲಿ ಹಲವು ಪ್ರಮುಖರ ಹೆಸರು

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ (ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಅಂತಿಮ...

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...