Homeಮುಖಪುಟವ್ಯಕ್ತಿತ್ವ ವಿಕಸನ 2 : ನಿಮ್ಮನ್ನು ನೀವು ಅರಿತುಕೊಳ್ಳಿ

ವ್ಯಕ್ತಿತ್ವ ವಿಕಸನ 2 : ನಿಮ್ಮನ್ನು ನೀವು ಅರಿತುಕೊಳ್ಳಿ

- Advertisement -
- Advertisement -

ಜೀವನ ಕಲೆಗಳು: ಅಂಕಣ-3

| ಜಿ. ಆರ್. ವಿದ್ಯಾರಣ್ಯ |

ತನ್ನ ಸ್ವಂತ ಶಕ್ತಿ/ದೌರ್ಬಲ್ಯವನ್ನು ಅರಿತುಕೊಳ್ಳುವ ಕಲೆಗೆ “ಸ್ವೊಟ್ ಎನಾಲಿಸಿಸ್” (SWOT ANALYSIS) ಎನ್ನುತ್ತಾರೆ. ಇದನ್ನು ವ್ಯಕ್ತಿಗಳು ಮತ್ತು ಸಂಸ್ಥೆಗಳು ಕೂಡ ಬಳಸಬಹುದು. ಇದರಿಂದ ವ್ಯಕ್ತಿಯ/ಸಂಸ್ಥೆಯ ಶಕ್ತಿ (Strength), ದೌರ್ಬಲ್ಯ (Weakness), ಅವಕಾಶ (Opportunity) ಮತ್ತು ಭೀತಿ (Threat) ಗಳನ್ನು ಅರಿತುಕೊಳ್ಳಬಹುದು.ಈ ವಿಶ್ಲೇಷಣೆಯನ್ನು ವ್ಯಕ್ತಿಯ ಪರವಾಗಿ ಬಳಸಿದಲ್ಲಿ ವ್ಯಕ್ತಿಯ ಸಹಜ ಶಕ್ತಿ-ಸಾಮರ್ಥ್ಯಗಳನ್ನು ಅರಿತು ಅದಕ್ಕೆ ತಕ್ಕ ಅವಕಾಶಗಳನ್ನು ಹುಡುಕಲು ನೆರವಾಗುತ್ತದೆ. ಸಂಸ್ಥೆಯ ಪರವಾಗಿ ಉಪಯೋಗಿಸಿದಲ್ಲಿ ಅದರ ಮಾರುಕಟ್ಟೆಯ ಹಿಡಿತ ಬಲಪಡಿಸುವುದಕ್ಕೆ ಅಥವಾ ಹೊಸ ಆವಿಶ್ಕಾರವನ್ನು ಹೊರಬಿಡಲು ಸಹಕಾರಿಯಾಗುತ್ತದೆ.

ಸ್ವೊಟ್ ಎನಾಲಿಸಿಸ್ (SWOT ANALYSIS)ಮಾಡುವುದರಿಂದ ನಮ್ಮ ಶಕ್ತಿ ಏನು ಮತ್ತು ದೌರ್ಬಲ್ಯ ಏನು ಎಂಬುದನ್ನು ತಿಳಿಯಬಹುದು. ಉದಾಹರಣೆಗೆ ನಿಮ್ಮ ಇತ್ತೀಚಿನ ಶಾಲಾ/ಕಾಲೇಜು ತರಗತಿಯ ಅಂಕ ಪಟ್ಟಿ ನೋಡಿದಾಕ್ಷಣ ಯಾವ ವಿಷಯದಲ್ಲಿ ನೀವು ಗಟ್ಟಿಗರು, ಯಾವುದರಲ್ಲಿ ನಿಮಗೆ ಶಕ್ತಿ ಸಾಲದು ಎಂಬುದು ಕೂಡಲೇ ತಿಳಿಯುತ್ತದೆ. ಯಾವ ವಿಷಯದಲ್ಲಿ ನೀವು ಹೆಚ್ಚು ಅಂಕ ಗಳಿಸಿದ್ದೀರೋ, ಅದು ನಿಮ್ಮ ಸಹಜ ಶಕ್ತಿ. ಯಾವ ವಿಷಯ ಎಷ್ಟೇ ಪರಿಶ್ರಮ ಪಟ್ಟರೂ, ನಿಮ್ಮ ತಲೆಗೆ ಹತ್ತುವುದಿಲ್ಲವೋ ಅದು ನಿಮ್ಮ ದೌರ್ಬಲ್ಯ, ಆದರೆ ಎರಡೂ, ಶಕ್ತಿ ಮತ್ತು ದೌರ್ಬಲ್ಯ, ತಾತ್ಕಾಲಿಕ. ಇದಕ್ಕೆ ಕಾರಣ ನೀವು ಕಂಡುಕೊಳ್ಳಬೇಕು. ಬಹುಶಃ ನಿಮ್ಮ ಕಲಿಯುವ ರೀತಿ ಸರಿಯಾಗಿಲ್ಲದಿರಬಹುದು ಅಥವಾ ಶಾಲೆಯಲ್ಲಿ ಕಲಿಸುವ ವಿಧಾನದಲ್ಲಿ ತೊಂದರೆ ಇರಬಹುದು. ಸರಿಯಾದ ಕಾರಣ ತಿಳಿದು ಸಮಸ್ಯೆ ಪರಿಹರಿಸಿದಲ್ಲಿ ದೌರ್ಬಲ್ಯವನ್ನು ಶಕ್ತಿಯಾಗಿ ಬದಲಾಯಿಸಿಕೊಳ್ಳಲು ಸಾಧ್ಯ.

ಅದೇ ರೀತಿಯಲ್ಲಿ ನಿಮ್ಮ ಶಕ್ತಿಯಿಂದ ನಿಮಗೆ ಈಗಿರುವ ಅಥವಾ ಸಿಗಬಹುದಾದ ಅವಕಾಶಗಳನ್ನು ಗುರುತಿಸಿಕೊಳ್ಳಲು ಸಾಧ್ಯವಾಗುತ್ತದೆ. ಯಾವುದೇ ವಿಷಯದಲ್ಲಿ ಅತಿ ಹೆಚ್ಚಿನ ಆಸಕ್ತಿ/ಉತ್ಸಾಹವಿದ್ದಲ್ಲಿ ಅದಕ್ಕೆ ಸಿಗಬಹುದಾದ ಪಾರಿತೋಷಕ, ವಿದ್ಯಾರ್ಥಿವೇತನ, ಪ್ರೋತ್ಸಾಹಧನ ಮುಂತಾದವುಗಳನ್ನು ಪಡೆಯಲು ಅರ್ಜಿ ಸಲ್ಲಿಸಬಹುದು. ಕೆಲವೊಮ್ಮೆ ಅದಕ್ಕೆ ಪೂರಕವಾದ ಲೇಖನ ರಚಿಸಿ ಲಗತ್ತಿಸಬೇಕಾಗಬಹುದು. ಅದೇ ವಿಷಯದಲ್ಲಿ ಉನ್ನತ ಅಭ್ಯಾಸಕ್ಕೆ ಇರುವ ಬೇರೆ ಬೇರೆ ಮಾರ್ಗಗಳನ್ನು ನೀವು ಕಂಡುಕೊಳ್ಳಬಹುದು.

ವಿಜ್ಞಾನ ಸಂಬಂಧಿ ವಿಷಯಗಳಲ್ಲಿ ನಿಮಗೆ ಹೆಚ್ಚು ಅಂಕಗಳು ಬರುತ್ತಿದ್ದು, ಕನ್ನಡ, ಇಂಗ್ಲಿಷ್, ಹಿಂದಿ ಭಾಷೆ ಕಷ್ಟವಾಗಿದ್ದರೆ ನೀವು ಎಸ್.ಎಸ್.ಎಲ್.ಸಿ. ನಂತರ ಪಿ.ಸಿ.ಎಂ.ಬಿ., ಪಿ.ಸಿ.ಎಂ.ಸಿ. ಅಥವಾ ಪಿ.ಸಿ.ಎಂ.ಇ. ಇತ್ಯಾದಿ ವಿಷಯಗಳನ್ನು ಆಯ್ಕೆ ಮಾಡಿಕೊಳ್ಳಬಹುದು. ಅದೇ ರೀತಿ ವಿಜ್ಞಾನ ಸಂಬಂಧಿ ವಿಷಯಗಳುನಿಮಗೆ ಕಷ್ಟಕರ ಎನಿಸುತ್ತಿದ್ದು, ಭಾಷೆ, ಇತಿಹಾಸ, ಭೂಗೋಳ ಮುಂತಾದವು ಸುಲಭವಾಗಿದ್ದರೆ ನೀವು ಹ್ಯುಮಾನಿಟೀಸ್ ಶಾಖೆ ಆಯ್ಕೆ ಮಾಡಿಕೊಳ್ಳಬಹುದು. ಹಾಗೆಯೇ ನೀವು ಲೆಕ್ಕದಲ್ಲಿ ಗಟ್ಟಿಗರು ಮತ್ತು ಭಾಷೆಯೂ ಸುಲಭ ಎನಿಸಿದರೆ ಕಾಮರ್ಸ್ ನಿಮಗೆ ಉತ್ತಮ ಆಯ್ಕೆಯಾಗಿರಬಹುದು. ಎಲ್ಲರೂ ಡಾಕ್ಟರ್ ಅಥವಾ ಇಂಜಿನಿಯರ್ ಆಗಲೇ ಬೇಕೆಂಬ ನಿಯಮವೂ ಇಲ್ಲ, ಅಗತ್ಯವೂ ಇಲ್ಲ. ಯಾವುದೇ ಮಾರ್ಗವನ್ನು ನೀವು ನಿಮ್ಮ ಸಹಜ ಶಕ್ತಿ ಗುಣವನ್ನು ಆಧರಿಸಿ ಆಯ್ಕೆ ಮಾಡಿದ್ದಲ್ಲಿ, ಹೆಚ್ಚು ಪರಿಶ್ರಮವಿಲ್ಲದೇ ಉನ್ನತ ಸಾಧನೆ ಮಾಡಲು ಬಹಳಷ್ಟು ಅವಕಾಶವಿರುತ್ತದೆ.

ಇತ್ತೀಚೆಗೆ ಏಪ್ರಿಲ್/ಮೇ ತಿಂಗಳಲ್ಲಿ ಕಾಲೇಜುಗಳು ಮತ್ತು ಉನ್ನತ ವಿದ್ಯಾಸಂಸ್ಥೆಗಳು ನಗರದಾದ್ಯಂತ ಮಾರಾಟ ಮೇಳಗಳನ್ನು ಆಯೋಜಿಸುತ್ತಾರೆ. ಇದರಲ್ಲಿ, ಶಿಕ್ಷಣ ತಜ್ಞರು ಮಕ್ಕಳನ್ನುದ್ದೇಶಿಸಿ ಮಾತನಾಡಿ, ಅವರಿಗೆ ಇರುವ ಹೊಸ ಹೊಸ ವೃತ್ತಿಪರ ಕೋರ್ಸುಗಳ ಬಗ್ಗೆ ತಿಳಿಸಿಕೊಡುತ್ತಾರೆ. ಇಂತಹ ಮೇಳಗಳಲ್ಲಿ ಮಕ್ಕಳು ಮತ್ತು ಪೋಷಕರು ಭಾಗವಹಿಸಬೇಕು. ಒಳ್ಳೆಯ ವರಮಾನ/ಬಡ್ತಿ ಅವಕಾಶವಿರುವ ಹುದ್ದೆಗಳ ದೃಷ್ಟಿಯಿಂದ ಯಾವ ಯಾವ ಕ್ಷೇತ್ರದಲ್ಲಿ, ಮುಂಬರುವ ಎಷ್ಟು ವರ್ಷದಲ್ಲಿ, ಎಷ್ಟು ಹುದ್ದೆಗಳು ಸೃಷ್ಟಿಯಾಗಲಿವೆ ಎಂಬ ಖಚಿತ ಮಾಹಿತಿ ದುರದೃಷ್ಟವಶಾತ್ ಎಲ್ಲೂ ಸಿಗುವುದಿಲ್ಲ. ಈಗ ಕಂಪ್ಯೂಟರ್ ಕ್ಷೇತ್ರದಲ್ಲಿ ಎ.ಐ. (ಆರ್ಟಿಫಿಷಿಯಲ್ ಇಂಟೆಲಿಜೆನ್ಸ್ – ಕೃತಕ ಬುದ್ಧಿಶಕ್ತಿ) ಕ್ಷೇತ್ರದಲ್ಲಿ ಸಾಕಷ್ಟು ಅವಕಾಶವಿದೆ ಎಂದು ಕೇಳಿಬಂದರೂ ಸಹ ಮುಂಬರುವ ಐದು ವರ್ಷದಲ್ಲಿ ಏನಾಗಬಹುದು ಎಂದು ಯಾರಿಗೂ ಗೊತ್ತಿಲ್ಲ ಆದ್ದರಿಂದ ಈಗ ಆ ಕೋರ್ಸಿಗೆ ಸೇರುವ ಮಕ್ಕಳಿಗೆ ತಮ್ಮ ಭವಿಷ್ಯ ಹೇಗಿರುತ್ತದೆ ಎಂದು ಖಚಿತಗೊಳಿಸಿಕೊಳ್ಳಲು ಸಾಧ್ಯವಿಲ್ಲ.

ದ್ವಿತೀಯ ಪಿಯುಸಿ ಓದುತ್ತಿರುವ ಮಕ್ಕಳು ಆನ್-ಲೈನ್ ಉಚಿತ ಪರೀಕ್ಷೆ ಮಾಡಿಕೊಂಡಲ್ಲಿ ಅವರ ವ್ಯಕ್ತಿತ್ವ ಮಾದರಿ ಯಾವುದು ಎಂಬುದು ತಿಳಿಯುತ್ತದೆ. ಈ ಸ್ವ-ಪರೀಕ್ಷೆಯ ಫಲಿತಾಂಶದ ಆಧಾರದ ಮೇಲೆ, ವ್ಯಕ್ತಿತ್ವದ ಇಂಡಿಕೇಟರ್ ಪ್ರಕಾರ ಯಾವ ಜೀವನೋಪಾಯ/ವೃತ್ತಿ ಅವರಿಗೆ ಸಹಜ ಮತ್ತು ಸರಳ ಎಂಬುದನ್ನು ನಿರ್ಧರಿಸಬಹುದು. ಅದೇ ರೀತಿ ಅವರ ಮುಂದಿನ ಉನ್ನತ ಶೈಕ್ಷಣಿಕ ಆಯ್ಕೆಯನ್ನೂ ಸಹ ಅವರು ಅಥವಾ ಪೋಷಕರು ನಿರ್ಧರಿಸಬಹುದು.

ಅಪಾಯದ ಎಚ್ಚರಿಕೆ: ಎಂಬಿಟಿಐ ಅಥವಾ ಬಿಗ್-ಫೈವ್ ಆಗಲೀ ಸಂಪೂರ್ಣ ವೈಜ್ಞಾನಿಕ ತತ್ವವಾದ ಅಲ್ಲ, ಆದ್ದರಿಂದ ಮಕ್ಕಳ ಭವಿಷ್ಯ ರೂಪಿಸುವ ಮುನ್ನ, ಪರಿಣಿತರ, ವೃತ್ತಿಪರರ ಸಲಹೆ ಪಡೆಯುವುದು ಅತ್ಯಂತ ಅವಶ್ಯಕ. ಕೇವಲ ಅಂತರ್ಜಾಲದ ಮಾಹಿತಿ ನಂಬಿ, ಅಥವಾ ಒಂದು ಲೇಖನ ಓದಿ ನಿಮ್ಮ ಮಕ್ಕಳ ಭವಿಷ್ಯದ ಬಗ್ಗೆ ಬಹು ದೊಡ್ಡ ನಿರ್ಧಾರಕ್ಕೆ ಬರಬೇಡಿ.

ಎಸ್.ಎಸ್.ಎಲ್.ಸಿ. ನಂತರ ದ್ವಿತೀಯ ಪಿಯುಸಿ ಸಾಕು (ಅಥವಾ ಯಾವುದೋ ಒಂದು ಪದವಿ ಗಿಟ್ಟಿಸಿದರೆ ಸಾಕು) ಎಂದು ಓದನ್ನು ಅಲ್ಲಿಗೇ ನಿಲ್ಲಿಸಿ, ಯಾವ ಕೆಲಸಕ್ಕೆ ಸೇರಬೇಕು ಎಂಬುದನ್ನು ನಿರ್ಧರಿಸಲಾಗದೇ ಇರುವ ಯುವಕ/ಯುವತಿಯರಿಗೆ ಇಲ್ಲಿದೆ ಒಂದು ಸರಳ ದಾರಿ. ಮೊದಲು ಮೇಲೆ ತಿಳಿಸಿದಂತೆ, ನಿಮ್ಮ ಸ್ವೊಟ್ ಎನಾಲಿಸಿಸ್ ನೀವೇ ಮಾಡಿಕೊಳ್ಳಿ. ನೀವು ಎಂತಹ ವ್ಯಕ್ತಿ ಎಂದು ನೀವೇ ನಿರ್ಧರಿಸಿಕೊಳ್ಳಿ. ನಂತರ ಶಾಲೆ/ಕಾಲೇಜಿನಲ್ಲಿ ನೀವು ಸುಲಭವಾಗಿ ಕಲಿತ ವಿಷಯ, ನೀವು ಸ್ವ-ಇಚ್ಛೆಯಿಂದ, ಸ್ವಯಂಸೇವಕರಾಗಿ, ಇಷ್ಟ ಪಟ್ಟು ಮಾಡಿದ ಕೆಲಸಗಳು (ಸ್ಕೌಟ್/ಗೈಡ್, ಎನ್.ಎಸ್.ಎಸ್., ಗ್ರಾಹಕ ಕ್ಲಬ್, ವಿಜ್ಞಾನ ಕ್ಲಬ್, ಬರವಣಿಗೆ/ಚಿತ್ರಕಲೆ, ಸಾಮಾಜಿಕ/ಧಾರ್ಮಿಕ ಚಟುವಟಿಕೆ, ಅಥವಾ ಧನಸಂಗ್ರಹ ಇತ್ಯಾದಿ), ಇಷ್ಟವಾದ/ಭಾಗವಹಿಸಿದ ಕ್ರೀಡೆಗಳು ಯಾವುದು ಎಂದು ಒಂದನ್ನೂ ಬಿಡದೆ, ಹಾಳೆಯಲ್ಲಿ ಗುರುತು ಹಾಕಿಕೊಳ್ಳಿ. ಇವನ್ನೆಲ್ಲಾ ಒಂದೊಂದು ಮಣಿಗಳು ಎಂದು ಭಾವಿಸಿ, ಅವನ್ನು ಪೋಣಿಸಿ ಹಾರವನ್ನಾಗಿ ಮಾಡಬಹುದೇ ಯೋಚಿಸಿ. ಹಾರಕ್ಕೆ ಒಂದೆರಡು ಮಣಿಗಳು ಕಡಿಮೆ ಎಂದೆನಿಸಿದರೆ ಅವನ್ನು ಪಡೆಯಲು ನಿಮ್ಮ ಪ್ರಯತ್ನ ಹೇಗಿರಬೇಕು ಎಂದು ಯೋಚಿಸಿ. ನಿಮ್ಮ ಮುಂದಿನ ದಾರಿ ತಾನಾಗಿಯೇ ಗೋಚರಿಸುತ್ತದೆ.

ಇದನ್ನೂ ಒದಿ: ನಮ್ಮ ಬದುಕನ್ನು ಸುಂದರ ಮತ್ತು ಅರ್ಥಪೂರ್ಣಗೊಳಿಸಿಕೊಳ್ಳಲು ಬೇಕಿರುವ ಜೀವನಾವಶ್ಯಕ ಕಲೆಗಳು

ಇದನ್ನೂ ಓದಿ: ನಿಮ್ಮನ್ನು ನೀವೇ ಅರಿತುಕೊಳ್ಳಿ: ವ್ಯಕ್ತಿತ್ವ ವಿಕಸನ 1

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR ಕರ್ತವ್ಯದ ವೇಳೆ ಶಿಕ್ಷಕಿಗೆ ಹಾರ್ಟ್ ಅಟ್ಯಾಕ್: ಚಿಕಿತ್ಸೆ ಫಲಿಸದೇ ಸಾವು

ಕೇಂದ್ರ ಚುನಾವಣಾ ಆಯೋಗವು ರಾಜ್ಯದಲ್ಲಿ ನಡೆಸುತ್ತಿರುವ ಮತದಾರರ ಪಟ್ಟಿಯ 'ವಿಶೇಷ ಸಮಗ್ರ ಪರಿಷ್ಕರಣೆ' (SIR) ಕೆಲಸದ ಹೆಸರಿನಲ್ಲಿ ಶಿಕ್ಷಕರ ಮೇಲೆ ಹೇರುತ್ತಿರುವ ಅತಿಯಾದ ಮಾನಸಿಕ ಹಾಗೂ ದೈಹಿಕ ಒತ್ತಡಕ್ಕೆ ಮತ್ತೊಬ್ಬ ಶಿಕ್ಷಕಿ ಬಲಿಯಾಗಿದ್ದಾರೆ. ಬೆಂಗಳೂರಿನ...

ಎದೆ ಸೀಳಿದರೆ ಮೂರು ಅಕ್ಷರ ಬರಲ್ಲ, ಮುಲ್ಲಾನಿಗೂ ನೀಟ್‌ಗೂ ಏನು ಸಂಬಂಧ: ಸಿ.ಟಿ ರವಿ ವಿವಾದಾತ್ಮಕ ಹೇಳಿಕೆ

ದೇಶಾದ್ಯಂತ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ವಿದ್ಯಾರ್ಥಿ ಮತ್ತು ಯುವಜನ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸುತ್ತಿವೆ. ಈ ನಡುವೆ ವಿದ್ಯಾರ್ಥಿಗಳ ಹೋರಾಟವನ್ನು ಕುಹಕವಾಡಿರುವ ವಿಧಾನ ಪರಿಷತ್ ಬಿಜೆಪಿ...

ಪ್ರತಿಭಟನೆಯನ್ನು ಹತ್ತಿಕ್ಕಲು ಅಕ್ಕಾಡಕ್ಕಿಳಿದಿವೆ ಹಿಂದುತ್ವವಾದಿ ಸೋಷಿಯಲ್ ಮೀಡಿಯಾ ಇನ್ಫ್ಲುಯೆನ್ಸರ್ಸ್‌ ಮತ್ತು ಉಗ್ರ ಗೂಂಡಾ ಪಡೆ

ದೆಹಲಿಯ ಜಂತರ್ ಮಂತರ್‌ನಲ್ಲಿ ಜೂನ್ 20ರಂದು ಶುರುವಾಗಿದ್ದ ಈ ಆಂದೋಲನ ಇದೀಗ ದೇಶಾದ್ಯಂತ ತೀವ್ರ ಸ್ವರೂಪ ಪಡೆದುಕೊಂಡಿದೆ. ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಸಿಜೆಪಿ ಪಟ್ಟು ಹಿಡಿದಿದ್ದು, ಇಂದು...

ಜಿರಳೆಗಳನ್ನು ಸಾಯಿಸಿ ಎಂದು ವಿವಾದಾತ್ಮಕ ಪೋಸ್ಟ್‌ ಹಾಕಿದ ಪ್ರಜ್ಞಾ ಸಿಂಗ್ ಠಾಕೂರ್

ಮಾಜಿ ಬಿಜೆಪಿ ಸಂಸದೆ ಪ್ರಜ್ಞಾ ಸಿಂಗ್ ಠಾಕೂರ್ ಅವರು ದೇಶದಿಂದ ಜಿರಳೆಗಳನ್ನು ಶಾಶ್ವತವಾಗಿ ನಿರ್ಮೂಲನೆ ಮಾಡಲು ವ್ಯವಸ್ಥೆ ಮಾಡುವಂತೆ ದೇಶದ ನಾಯಕರಿಗೆ ಮನವಿ ಮಾಡಿದ್ದಾರೆ. X (ಟ್ವಿಟರ್) ನಲ್ಲಿ ಮಾಡಿದ ಪೋಸ್ಟ್‌ನಲ್ಲಿ, 2008 ರ...

ಸೋನಮ್ ವಾಂಗ್ಚುಕ್ ಮತ್ತು ಸರ್ಕಾರದ ಡೀಲ್‌ನಲ್ಲಿ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಅಂಶವೇ ಇಲ್ಲ

ಕೇಂದ್ರದ ಮೋದಿ ಸರ್ಕಾರ ತನ್ನ ಮೂರು ಪ್ರಮುಖ ಬೇಡಿಕೆಗಳನ್ನು ಈಡೇರಿಸಲು ಒಪ್ಪಿಕೊಂಡ ನಂತರ, ಪರಿಸರ ಹೋರಾಟಗಾರ ಸೋನಮ್ ವಾಂಗ್ಚುಕ್ ಜುಲೈ 23ರ ಗುರುವಾರ ತಮ್ಮ 26 ದಿನಗಳ ಸುದೀರ್ಘ ಉಪವಾಸ ಸತ್ಯಾಗ್ರಹವನ್ನು ಕೊನೆಗೊಳಿಸಿದ್ದಾರೆ....

“50 ಗ್ರಾಂ ಡ್ರಗ್ಸ್ ಇಟ್ಟು ಕೇಸ್ ಹಾಕ್ತೀನಿ!”: ಪ್ರತಿಭಟನಾ ನಿರತ ವಿದ್ಯಾರ್ಥಿಗಳಿಗೆ ಮಾದಕದ್ರವ್ಯ ಪ್ರಕರಣದ ಬೆದರಿಕೆಯೊಡ್ಡಿದ ಮುಂಬೈ ಪೊಲೀಸ್!

ಮುಂಬೈ: ದೇಶಾದ್ಯಂತ ವಿದ್ಯಾರ್ಥಿ ಸಮುದಾಯದ ಆಕ್ರೋಶ ತೀವ್ರಗೊಳ್ಳುತ್ತಿರುವ ಬೆನ್ನಲ್ಲೇ, ತಮ್ಮ ಹಕ್ಕುಗಳಿಗಾಗಿ ಧ್ವನಿ ಎತ್ತುತ್ತಿರುವ ಯುವಜನರನ್ನು ಹತೋಟಿಗೆ ತರಲು ಪೊಲೀಸರು ಯಾವ ಮಟ್ಟದ ದಮನಕಾರಿ ಮಾರ್ಗಗಳನ್ನು ತುಳಿಯುತ್ತಿದ್ದಾರೆ ಎಂಬುದಕ್ಕೆ ಮುಂಬೈನಲ್ಲಿ ನಡೆದ ಘಟನೆಯೊಂದು...

ಬಿಡದಿ ಟೌನ್‌ಶಿಪ್: 80% ರೈತರ ಒಪ್ಪಿಗೆ ಇದೆ ಎಂಬ ವಾದ ಸಾಬೀತುಪಡಿಸಿ – ಸರ್ಕಾರಕ್ಕೆ ಸಂಯುಕ್ತ ಹೋರಾಟ ಸವಾಲು

ಬಿಡದಿ ಟೌನ್‌ಶಿಪ್ ಯೋಜನೆಗೆ ಭೂಮಿ ನೀಡಲು ಉದ್ದೇಶಿತ ಪ್ರದೇಶದ ಶೇಕಡಾ 80 ರಷ್ಟು ರೈತರು ಒಪ್ಪಿದ್ದಾರೆ ಎಂಬ ಸರ್ಕಾರದ ವಾದಕ್ಕೆ ಯಾವುದೇ ವಾಸ್ತವಿಕ ಆಧಾರವಿಲ್ಲ. ಸರ್ಕಾರಕ್ಕೆ ಧೈರ್ಯವಿದ್ದರೆ ತನ್ನ ಈ ಹೇಳಿಕೆಯನ್ನು ಜನರ...

ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯ: ವಿಚಾರಣೆ ತಿರಸ್ಕರಿಸಿದ ಸುಪ್ರೀಂ; “ವಿಡಿಯೋ ನೋಡಲು ನಮಗೆ ಆಸಕ್ತಿಯೂ ಇಲ್ಲ, ಸಮಯವೂ ಇಲ್ಲ” ಎಂದ ನ್ಯಾಯಮೂರ್ತಿ ಸೂರ್ಯಕಾಂತ್

ನವದೆಹಲಿ: ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಶಾಂತಿಯುತವಾಗಿ ಹೋರಾಡುತ್ತಿದ್ದ ಯುವ ಸಮೂಹದ ಮೇಲೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯದ ವಿರುದ್ಧ ನ್ಯಾಯದ ನಿರೀಕ್ಷೆಯಲ್ಲಿದ್ದ ವಿದ್ಯಾರ್ಥಿಗಳಿಗೆ ದೇಶದ ಅತ್ಯುನ್ನತ ನ್ಯಾಯಾಲಯದಿಂದ...

ರಾಹುಲ್ ಗಾಂಧಿ ವಿದ್ಯಾರ್ಥಿಗಳನ್ನು ‘ರಾಜಕೀಯ ದಾಳ’ವಾಗಿ ಬಳಸುತ್ತಿದ್ದಾರೆ ಎಂದ ಧರ್ಮೇಂದ್ರ ಪ್ರಧಾನ್ ವಿರುದ್ಧ ವ್ಯಾಪಕ ಆಕ್ರೋಶ

ನವದೆಹಲಿ: ದೇಶಾದ್ಯಂತ ನೀಟ್ (NEET) ಪರೀಕ್ಷೆಯ ಅಕ್ರಮಗಳು, ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಶಿಕ್ಷಣ ಇಲಾಖೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ವಿದ್ಯಾರ್ಥಿಗಳು ಮತ್ತು ವಿರೋಧ ಪಕ್ಷಗಳು ತೀವ್ರ ಪ್ರತಿಭಟನೆ ನಡೆಸುತ್ತಿದ್ದು, ಶಿಕ್ಷಣ ಸಚಿವ ಧರ್ಮೇಂದ್ರ...

ಸಿಜೆಪಿ ಪ್ರತಿಭಟನಾಕಾರರ ಮೇಲೆ ಪೆಲೆಟ್ ಗನ್ ಬಳಕೆ, ವಿದ್ಯುತ್ ಲಾಠಿ ಪ್ರಹಾರ: ಆರೋಪ ನಿರಾಕರಿಸಿದ ಪೊಲೀಸರು

ಸೋಮವಾರ (ಜುಲೈ 20) ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಕರೆ ನೀಡಿದ್ದ ಸಂಸತ್ ಚಲೋ ಮೆರವಣಿ ಸಂದರ್ಭದಲ್ಲಿ ನಡೆದ ಪೊಲೀಸರ ದೌರ್ಜನ್ಯದಲ್ಲಿ ಗಾಯಗೊಂಡ 80 ಪ್ರತಿಭಟನಾಕಾರರಲ್ಲಿ ಕನಿಷ್ಠ ಒಬ್ಬರಿಗೆ ಪೆಲೆಟ್ ಗನ್ ಗಾಯಗಳಾಗಿವೆ...