Homeಮುಖಪುಟವ್ಯಕ್ತಿತ್ವ ವಿಕಸನ 2 : ನಿಮ್ಮನ್ನು ನೀವು ಅರಿತುಕೊಳ್ಳಿ

ವ್ಯಕ್ತಿತ್ವ ವಿಕಸನ 2 : ನಿಮ್ಮನ್ನು ನೀವು ಅರಿತುಕೊಳ್ಳಿ

- Advertisement -
- Advertisement -

ಜೀವನ ಕಲೆಗಳು: ಅಂಕಣ-3

| ಜಿ. ಆರ್. ವಿದ್ಯಾರಣ್ಯ |

ತನ್ನ ಸ್ವಂತ ಶಕ್ತಿ/ದೌರ್ಬಲ್ಯವನ್ನು ಅರಿತುಕೊಳ್ಳುವ ಕಲೆಗೆ “ಸ್ವೊಟ್ ಎನಾಲಿಸಿಸ್” (SWOT ANALYSIS) ಎನ್ನುತ್ತಾರೆ. ಇದನ್ನು ವ್ಯಕ್ತಿಗಳು ಮತ್ತು ಸಂಸ್ಥೆಗಳು ಕೂಡ ಬಳಸಬಹುದು. ಇದರಿಂದ ವ್ಯಕ್ತಿಯ/ಸಂಸ್ಥೆಯ ಶಕ್ತಿ (Strength), ದೌರ್ಬಲ್ಯ (Weakness), ಅವಕಾಶ (Opportunity) ಮತ್ತು ಭೀತಿ (Threat) ಗಳನ್ನು ಅರಿತುಕೊಳ್ಳಬಹುದು.ಈ ವಿಶ್ಲೇಷಣೆಯನ್ನು ವ್ಯಕ್ತಿಯ ಪರವಾಗಿ ಬಳಸಿದಲ್ಲಿ ವ್ಯಕ್ತಿಯ ಸಹಜ ಶಕ್ತಿ-ಸಾಮರ್ಥ್ಯಗಳನ್ನು ಅರಿತು ಅದಕ್ಕೆ ತಕ್ಕ ಅವಕಾಶಗಳನ್ನು ಹುಡುಕಲು ನೆರವಾಗುತ್ತದೆ. ಸಂಸ್ಥೆಯ ಪರವಾಗಿ ಉಪಯೋಗಿಸಿದಲ್ಲಿ ಅದರ ಮಾರುಕಟ್ಟೆಯ ಹಿಡಿತ ಬಲಪಡಿಸುವುದಕ್ಕೆ ಅಥವಾ ಹೊಸ ಆವಿಶ್ಕಾರವನ್ನು ಹೊರಬಿಡಲು ಸಹಕಾರಿಯಾಗುತ್ತದೆ.

ಸ್ವೊಟ್ ಎನಾಲಿಸಿಸ್ (SWOT ANALYSIS)ಮಾಡುವುದರಿಂದ ನಮ್ಮ ಶಕ್ತಿ ಏನು ಮತ್ತು ದೌರ್ಬಲ್ಯ ಏನು ಎಂಬುದನ್ನು ತಿಳಿಯಬಹುದು. ಉದಾಹರಣೆಗೆ ನಿಮ್ಮ ಇತ್ತೀಚಿನ ಶಾಲಾ/ಕಾಲೇಜು ತರಗತಿಯ ಅಂಕ ಪಟ್ಟಿ ನೋಡಿದಾಕ್ಷಣ ಯಾವ ವಿಷಯದಲ್ಲಿ ನೀವು ಗಟ್ಟಿಗರು, ಯಾವುದರಲ್ಲಿ ನಿಮಗೆ ಶಕ್ತಿ ಸಾಲದು ಎಂಬುದು ಕೂಡಲೇ ತಿಳಿಯುತ್ತದೆ. ಯಾವ ವಿಷಯದಲ್ಲಿ ನೀವು ಹೆಚ್ಚು ಅಂಕ ಗಳಿಸಿದ್ದೀರೋ, ಅದು ನಿಮ್ಮ ಸಹಜ ಶಕ್ತಿ. ಯಾವ ವಿಷಯ ಎಷ್ಟೇ ಪರಿಶ್ರಮ ಪಟ್ಟರೂ, ನಿಮ್ಮ ತಲೆಗೆ ಹತ್ತುವುದಿಲ್ಲವೋ ಅದು ನಿಮ್ಮ ದೌರ್ಬಲ್ಯ, ಆದರೆ ಎರಡೂ, ಶಕ್ತಿ ಮತ್ತು ದೌರ್ಬಲ್ಯ, ತಾತ್ಕಾಲಿಕ. ಇದಕ್ಕೆ ಕಾರಣ ನೀವು ಕಂಡುಕೊಳ್ಳಬೇಕು. ಬಹುಶಃ ನಿಮ್ಮ ಕಲಿಯುವ ರೀತಿ ಸರಿಯಾಗಿಲ್ಲದಿರಬಹುದು ಅಥವಾ ಶಾಲೆಯಲ್ಲಿ ಕಲಿಸುವ ವಿಧಾನದಲ್ಲಿ ತೊಂದರೆ ಇರಬಹುದು. ಸರಿಯಾದ ಕಾರಣ ತಿಳಿದು ಸಮಸ್ಯೆ ಪರಿಹರಿಸಿದಲ್ಲಿ ದೌರ್ಬಲ್ಯವನ್ನು ಶಕ್ತಿಯಾಗಿ ಬದಲಾಯಿಸಿಕೊಳ್ಳಲು ಸಾಧ್ಯ.

ಅದೇ ರೀತಿಯಲ್ಲಿ ನಿಮ್ಮ ಶಕ್ತಿಯಿಂದ ನಿಮಗೆ ಈಗಿರುವ ಅಥವಾ ಸಿಗಬಹುದಾದ ಅವಕಾಶಗಳನ್ನು ಗುರುತಿಸಿಕೊಳ್ಳಲು ಸಾಧ್ಯವಾಗುತ್ತದೆ. ಯಾವುದೇ ವಿಷಯದಲ್ಲಿ ಅತಿ ಹೆಚ್ಚಿನ ಆಸಕ್ತಿ/ಉತ್ಸಾಹವಿದ್ದಲ್ಲಿ ಅದಕ್ಕೆ ಸಿಗಬಹುದಾದ ಪಾರಿತೋಷಕ, ವಿದ್ಯಾರ್ಥಿವೇತನ, ಪ್ರೋತ್ಸಾಹಧನ ಮುಂತಾದವುಗಳನ್ನು ಪಡೆಯಲು ಅರ್ಜಿ ಸಲ್ಲಿಸಬಹುದು. ಕೆಲವೊಮ್ಮೆ ಅದಕ್ಕೆ ಪೂರಕವಾದ ಲೇಖನ ರಚಿಸಿ ಲಗತ್ತಿಸಬೇಕಾಗಬಹುದು. ಅದೇ ವಿಷಯದಲ್ಲಿ ಉನ್ನತ ಅಭ್ಯಾಸಕ್ಕೆ ಇರುವ ಬೇರೆ ಬೇರೆ ಮಾರ್ಗಗಳನ್ನು ನೀವು ಕಂಡುಕೊಳ್ಳಬಹುದು.

ವಿಜ್ಞಾನ ಸಂಬಂಧಿ ವಿಷಯಗಳಲ್ಲಿ ನಿಮಗೆ ಹೆಚ್ಚು ಅಂಕಗಳು ಬರುತ್ತಿದ್ದು, ಕನ್ನಡ, ಇಂಗ್ಲಿಷ್, ಹಿಂದಿ ಭಾಷೆ ಕಷ್ಟವಾಗಿದ್ದರೆ ನೀವು ಎಸ್.ಎಸ್.ಎಲ್.ಸಿ. ನಂತರ ಪಿ.ಸಿ.ಎಂ.ಬಿ., ಪಿ.ಸಿ.ಎಂ.ಸಿ. ಅಥವಾ ಪಿ.ಸಿ.ಎಂ.ಇ. ಇತ್ಯಾದಿ ವಿಷಯಗಳನ್ನು ಆಯ್ಕೆ ಮಾಡಿಕೊಳ್ಳಬಹುದು. ಅದೇ ರೀತಿ ವಿಜ್ಞಾನ ಸಂಬಂಧಿ ವಿಷಯಗಳುನಿಮಗೆ ಕಷ್ಟಕರ ಎನಿಸುತ್ತಿದ್ದು, ಭಾಷೆ, ಇತಿಹಾಸ, ಭೂಗೋಳ ಮುಂತಾದವು ಸುಲಭವಾಗಿದ್ದರೆ ನೀವು ಹ್ಯುಮಾನಿಟೀಸ್ ಶಾಖೆ ಆಯ್ಕೆ ಮಾಡಿಕೊಳ್ಳಬಹುದು. ಹಾಗೆಯೇ ನೀವು ಲೆಕ್ಕದಲ್ಲಿ ಗಟ್ಟಿಗರು ಮತ್ತು ಭಾಷೆಯೂ ಸುಲಭ ಎನಿಸಿದರೆ ಕಾಮರ್ಸ್ ನಿಮಗೆ ಉತ್ತಮ ಆಯ್ಕೆಯಾಗಿರಬಹುದು. ಎಲ್ಲರೂ ಡಾಕ್ಟರ್ ಅಥವಾ ಇಂಜಿನಿಯರ್ ಆಗಲೇ ಬೇಕೆಂಬ ನಿಯಮವೂ ಇಲ್ಲ, ಅಗತ್ಯವೂ ಇಲ್ಲ. ಯಾವುದೇ ಮಾರ್ಗವನ್ನು ನೀವು ನಿಮ್ಮ ಸಹಜ ಶಕ್ತಿ ಗುಣವನ್ನು ಆಧರಿಸಿ ಆಯ್ಕೆ ಮಾಡಿದ್ದಲ್ಲಿ, ಹೆಚ್ಚು ಪರಿಶ್ರಮವಿಲ್ಲದೇ ಉನ್ನತ ಸಾಧನೆ ಮಾಡಲು ಬಹಳಷ್ಟು ಅವಕಾಶವಿರುತ್ತದೆ.

ಇತ್ತೀಚೆಗೆ ಏಪ್ರಿಲ್/ಮೇ ತಿಂಗಳಲ್ಲಿ ಕಾಲೇಜುಗಳು ಮತ್ತು ಉನ್ನತ ವಿದ್ಯಾಸಂಸ್ಥೆಗಳು ನಗರದಾದ್ಯಂತ ಮಾರಾಟ ಮೇಳಗಳನ್ನು ಆಯೋಜಿಸುತ್ತಾರೆ. ಇದರಲ್ಲಿ, ಶಿಕ್ಷಣ ತಜ್ಞರು ಮಕ್ಕಳನ್ನುದ್ದೇಶಿಸಿ ಮಾತನಾಡಿ, ಅವರಿಗೆ ಇರುವ ಹೊಸ ಹೊಸ ವೃತ್ತಿಪರ ಕೋರ್ಸುಗಳ ಬಗ್ಗೆ ತಿಳಿಸಿಕೊಡುತ್ತಾರೆ. ಇಂತಹ ಮೇಳಗಳಲ್ಲಿ ಮಕ್ಕಳು ಮತ್ತು ಪೋಷಕರು ಭಾಗವಹಿಸಬೇಕು. ಒಳ್ಳೆಯ ವರಮಾನ/ಬಡ್ತಿ ಅವಕಾಶವಿರುವ ಹುದ್ದೆಗಳ ದೃಷ್ಟಿಯಿಂದ ಯಾವ ಯಾವ ಕ್ಷೇತ್ರದಲ್ಲಿ, ಮುಂಬರುವ ಎಷ್ಟು ವರ್ಷದಲ್ಲಿ, ಎಷ್ಟು ಹುದ್ದೆಗಳು ಸೃಷ್ಟಿಯಾಗಲಿವೆ ಎಂಬ ಖಚಿತ ಮಾಹಿತಿ ದುರದೃಷ್ಟವಶಾತ್ ಎಲ್ಲೂ ಸಿಗುವುದಿಲ್ಲ. ಈಗ ಕಂಪ್ಯೂಟರ್ ಕ್ಷೇತ್ರದಲ್ಲಿ ಎ.ಐ. (ಆರ್ಟಿಫಿಷಿಯಲ್ ಇಂಟೆಲಿಜೆನ್ಸ್ – ಕೃತಕ ಬುದ್ಧಿಶಕ್ತಿ) ಕ್ಷೇತ್ರದಲ್ಲಿ ಸಾಕಷ್ಟು ಅವಕಾಶವಿದೆ ಎಂದು ಕೇಳಿಬಂದರೂ ಸಹ ಮುಂಬರುವ ಐದು ವರ್ಷದಲ್ಲಿ ಏನಾಗಬಹುದು ಎಂದು ಯಾರಿಗೂ ಗೊತ್ತಿಲ್ಲ ಆದ್ದರಿಂದ ಈಗ ಆ ಕೋರ್ಸಿಗೆ ಸೇರುವ ಮಕ್ಕಳಿಗೆ ತಮ್ಮ ಭವಿಷ್ಯ ಹೇಗಿರುತ್ತದೆ ಎಂದು ಖಚಿತಗೊಳಿಸಿಕೊಳ್ಳಲು ಸಾಧ್ಯವಿಲ್ಲ.

ದ್ವಿತೀಯ ಪಿಯುಸಿ ಓದುತ್ತಿರುವ ಮಕ್ಕಳು ಆನ್-ಲೈನ್ ಉಚಿತ ಪರೀಕ್ಷೆ ಮಾಡಿಕೊಂಡಲ್ಲಿ ಅವರ ವ್ಯಕ್ತಿತ್ವ ಮಾದರಿ ಯಾವುದು ಎಂಬುದು ತಿಳಿಯುತ್ತದೆ. ಈ ಸ್ವ-ಪರೀಕ್ಷೆಯ ಫಲಿತಾಂಶದ ಆಧಾರದ ಮೇಲೆ, ವ್ಯಕ್ತಿತ್ವದ ಇಂಡಿಕೇಟರ್ ಪ್ರಕಾರ ಯಾವ ಜೀವನೋಪಾಯ/ವೃತ್ತಿ ಅವರಿಗೆ ಸಹಜ ಮತ್ತು ಸರಳ ಎಂಬುದನ್ನು ನಿರ್ಧರಿಸಬಹುದು. ಅದೇ ರೀತಿ ಅವರ ಮುಂದಿನ ಉನ್ನತ ಶೈಕ್ಷಣಿಕ ಆಯ್ಕೆಯನ್ನೂ ಸಹ ಅವರು ಅಥವಾ ಪೋಷಕರು ನಿರ್ಧರಿಸಬಹುದು.

ಅಪಾಯದ ಎಚ್ಚರಿಕೆ: ಎಂಬಿಟಿಐ ಅಥವಾ ಬಿಗ್-ಫೈವ್ ಆಗಲೀ ಸಂಪೂರ್ಣ ವೈಜ್ಞಾನಿಕ ತತ್ವವಾದ ಅಲ್ಲ, ಆದ್ದರಿಂದ ಮಕ್ಕಳ ಭವಿಷ್ಯ ರೂಪಿಸುವ ಮುನ್ನ, ಪರಿಣಿತರ, ವೃತ್ತಿಪರರ ಸಲಹೆ ಪಡೆಯುವುದು ಅತ್ಯಂತ ಅವಶ್ಯಕ. ಕೇವಲ ಅಂತರ್ಜಾಲದ ಮಾಹಿತಿ ನಂಬಿ, ಅಥವಾ ಒಂದು ಲೇಖನ ಓದಿ ನಿಮ್ಮ ಮಕ್ಕಳ ಭವಿಷ್ಯದ ಬಗ್ಗೆ ಬಹು ದೊಡ್ಡ ನಿರ್ಧಾರಕ್ಕೆ ಬರಬೇಡಿ.

ಎಸ್.ಎಸ್.ಎಲ್.ಸಿ. ನಂತರ ದ್ವಿತೀಯ ಪಿಯುಸಿ ಸಾಕು (ಅಥವಾ ಯಾವುದೋ ಒಂದು ಪದವಿ ಗಿಟ್ಟಿಸಿದರೆ ಸಾಕು) ಎಂದು ಓದನ್ನು ಅಲ್ಲಿಗೇ ನಿಲ್ಲಿಸಿ, ಯಾವ ಕೆಲಸಕ್ಕೆ ಸೇರಬೇಕು ಎಂಬುದನ್ನು ನಿರ್ಧರಿಸಲಾಗದೇ ಇರುವ ಯುವಕ/ಯುವತಿಯರಿಗೆ ಇಲ್ಲಿದೆ ಒಂದು ಸರಳ ದಾರಿ. ಮೊದಲು ಮೇಲೆ ತಿಳಿಸಿದಂತೆ, ನಿಮ್ಮ ಸ್ವೊಟ್ ಎನಾಲಿಸಿಸ್ ನೀವೇ ಮಾಡಿಕೊಳ್ಳಿ. ನೀವು ಎಂತಹ ವ್ಯಕ್ತಿ ಎಂದು ನೀವೇ ನಿರ್ಧರಿಸಿಕೊಳ್ಳಿ. ನಂತರ ಶಾಲೆ/ಕಾಲೇಜಿನಲ್ಲಿ ನೀವು ಸುಲಭವಾಗಿ ಕಲಿತ ವಿಷಯ, ನೀವು ಸ್ವ-ಇಚ್ಛೆಯಿಂದ, ಸ್ವಯಂಸೇವಕರಾಗಿ, ಇಷ್ಟ ಪಟ್ಟು ಮಾಡಿದ ಕೆಲಸಗಳು (ಸ್ಕೌಟ್/ಗೈಡ್, ಎನ್.ಎಸ್.ಎಸ್., ಗ್ರಾಹಕ ಕ್ಲಬ್, ವಿಜ್ಞಾನ ಕ್ಲಬ್, ಬರವಣಿಗೆ/ಚಿತ್ರಕಲೆ, ಸಾಮಾಜಿಕ/ಧಾರ್ಮಿಕ ಚಟುವಟಿಕೆ, ಅಥವಾ ಧನಸಂಗ್ರಹ ಇತ್ಯಾದಿ), ಇಷ್ಟವಾದ/ಭಾಗವಹಿಸಿದ ಕ್ರೀಡೆಗಳು ಯಾವುದು ಎಂದು ಒಂದನ್ನೂ ಬಿಡದೆ, ಹಾಳೆಯಲ್ಲಿ ಗುರುತು ಹಾಕಿಕೊಳ್ಳಿ. ಇವನ್ನೆಲ್ಲಾ ಒಂದೊಂದು ಮಣಿಗಳು ಎಂದು ಭಾವಿಸಿ, ಅವನ್ನು ಪೋಣಿಸಿ ಹಾರವನ್ನಾಗಿ ಮಾಡಬಹುದೇ ಯೋಚಿಸಿ. ಹಾರಕ್ಕೆ ಒಂದೆರಡು ಮಣಿಗಳು ಕಡಿಮೆ ಎಂದೆನಿಸಿದರೆ ಅವನ್ನು ಪಡೆಯಲು ನಿಮ್ಮ ಪ್ರಯತ್ನ ಹೇಗಿರಬೇಕು ಎಂದು ಯೋಚಿಸಿ. ನಿಮ್ಮ ಮುಂದಿನ ದಾರಿ ತಾನಾಗಿಯೇ ಗೋಚರಿಸುತ್ತದೆ.

ಇದನ್ನೂ ಒದಿ: ನಮ್ಮ ಬದುಕನ್ನು ಸುಂದರ ಮತ್ತು ಅರ್ಥಪೂರ್ಣಗೊಳಿಸಿಕೊಳ್ಳಲು ಬೇಕಿರುವ ಜೀವನಾವಶ್ಯಕ ಕಲೆಗಳು

ಇದನ್ನೂ ಓದಿ: ನಿಮ್ಮನ್ನು ನೀವೇ ಅರಿತುಕೊಳ್ಳಿ: ವ್ಯಕ್ತಿತ್ವ ವಿಕಸನ 1

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇರಳದ 13ನೇ ಮುಖ್ಯಮಂತ್ರಿ ವಿ.ಡಿ. ಸತೀಶನ್: ವಿದ್ಯಾರ್ಥಿ ನಾಯಕನಿಂದ ಸಿಎಂ ಸ್ಥಾನದವರೆಗೆ ಸತೀಶನ್ ಪಯಣ

ತಿರುವನಂತಪುರಂ: ಕೇರಳಂನ ನೂತನ ಮುಖ್ಯಮಂತ್ರಿಯಾಗಿ ವಿ.ಡಿ. ಸತೀಶನ್ ಅವರನ್ನು ಕಾಂಗ್ರೆಸ್ ಹೈಕಮಾಂಡ್ ಆಯ್ಕೆ ಮಾಡಿದೆ. ಆ ಮೂಲಕ ಹಲವು ದಿನಗಳಿಂದ ಈ ಬಗ್ಗೆ ನಡೆಯುತ್ತಿದ್ದ ಕುತೂಹಲ ಮತ್ತು ಚರ್ಚೆಗಳಿಗೆ ತೆರೆ ಬಿದ್ದಿದೆ.  ಅಖಿಲ ಭಾರತ...

ದಲಿತರ ನ್ಯಾಯಕ್ಕೆ ಹೊಸ ಅಡ್ಡಿಯಾಗಲಿದೆಯೇ ‘ಸಾರ್ವಜನಿಕ ವೀಕ್ಷಣೆ’ ನಿಯಮ? ಪರಿಶಿಷ್ಟರನ್ನು ಆತಂಕಕ್ಕೆ ತಳ್ಳಿದ ಸುಪ್ರೀಂ ತೀರ್ಪು

ಸಾರ್ವಜನಿಕರು ನೋಡದ ಜಾಗದಲ್ಲಿ, ಅಂದರೆ ಯಾರೂ ನೋಡದ ಜಾಗದಲ್ಲಿ ಜಾತಿ ನಿಂದನೆ ಅಥವಾ ಅವಮಾನ ನಡೆದರೆ, ಅದು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆ 1989ರ ಅಡಿಯಲ್ಲಿ ಅಪರಾಧ...

ಪಶ್ಚಿಮ ಬಂಗಾಳ: “ಇದು ಬುಲ್ಡೋಜರ್ ರಾಜ್ಯವಲ್ಲ”: ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮತ್ತು ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಗುರುವಾರ ವಕೀಲರ ನಿಲುವಂಗಿಯನ್ನು ಧರಿಸಿ ಕಲ್ಕತ್ತಾ ಹೈಕೋರ್ಟ್‌ಗೆ ಬಂದ ಅವರು ವಿಧಾನಸಭಾ...

ದಾವಣಗೆರೆ ಉಪ ಚುನಾವಣೆ ಅಡ್ಡ ಪರಿಣಾಮ: ಮುಸ್ಲಿಮ್ ಮುಖಂಡರ ಮೇಲೆ ಖರ್ಗೆ-ಡಿಕೆಶಿ ಶಿಸ್ತು ಪ್ರಹಾರ ಕಾಂಗ್ರೆಸ್‌ನ ಆತ್ಮಹತ್ಯಾತ್ಮಕ ರಾಜಕಾರಣ!!

ದಾವಣಗೆರೆ ದಕ್ಷಿಣ ಉಪ ಚುನಾವಣೆ ರಾಜ್ಯದ ಆಡಳಿತಾರೂಢ ಕಾಂಗ್ರೆಸ್‌ನ ಗದ್ದುಗೆ ಗುದ್ದಾಟಕ್ಕೆ ರೋಚಕ ಆಯಾಮ ನೀಡಿಬಿಟ್ಟಿದೆ. ಅಹಿಂದ ಸಮುದಾಯವೇ ಬಹುಜನರಾಗಿರುವ ದಾವಣಗೆರೆ ದಕ್ಷಿಣ ಅಸೆಂಬ್ಲಿ ಕ್ಷೇತ್ರದಲ್ಲಿ ಕಾಂಗ್ರೆಸ್ ನ್ಯಾಯವಾಗಿ ಆ ವರ್ಗದ ಅರ್ಹರೊಬ್ಬರಿಗೆ...

ನೀಟ್ ವಿವಾದ: ಪ್ರಶ್ನೆ ಪತ್ರಿಕೆ ಸೋರಿಕೆ ಜೊತೆಗೆ ಹೆಚ್ಚುತ್ತಿರುವ ವಿದ್ಯಾರ್ಥಿಗಳ ಆತ್ಮಹತ್ಯೆ

ರಾಜಸ್ಥಾನದಲ್ಲಿ ನಡೆದ ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ (ಸಿಬಿಐ) ತನಿಖೆ ವೇಗ ಪಡೆದುಕೊಂಡಿದೆ. ದೇಶದಾದ್ಯಂತ ಹಲವು ವಿದ್ಯಾರ್ಥಿ ಸಂಘಟನೆಗಳು ಪ್ರತಿಭಟನೆ ನಡೆಸುತ್ತಿವೆ. ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ...

ಎಸ್‌ಐಆರ್‌ನಲ್ಲಿ ಮತದಾನದ ಹಕ್ಕು ಹೋಯ್ತು..ಈಗ ಸರ್ಕಾರಿ ಸೌಲಭ್ಯದ ಸರದಿ..ಮುಂದೆ ನಾಗರಿಕತ್ವ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುವುದು ಚುನಾವಣಾ ಆಯೋಗ ಭಾರತದ ಕೋಟ್ಯಾಂತರ ನಾಗರಿಕ ಅಮೂಲ್ಯವಾದ ಮತದಾನದ ಹಕ್ಕನ್ನು ಕಿತ್ತುಕೊಂಡ ಒಂದು ವ್ಯವಸ್ಥಿತ ಸಂಚು ಎನ್ನಬಹುದು. ಬಿಹಾರ, ಪಶ್ಚಿಮ ಬಂಗಾಳ, ತಮಿಳುನಾಡು,...

ಜೋಸೆಫ್ ವಿಜಯ್‌ ಅವರ ಐತಿಹಾಸಿಕ ಗೆಲುವು: ರಾಜ್ಯಪಾಲರ ಸೋಲು ಮತ್ತು ದ್ರಾವಿಡ ನೆಲದ ರಾಜಕೀಯ: ಒಂದು ವಿಶ್ಲೇಷಣೆ

ತಮಿಳಗ ವೆಟ್ರಿ ಕಝಗಂ (TVK) ಪಕ್ಷವು ತಮಿಳುನಾಡು ವಿಧಾನಸಭೆಯಲ್ಲಿ ಬಹುಮತ ಸಾಬೀತುಪಡಿಸಿ ಸರ್ಕಾರ ರಚಿಸುವ ಜವಾಬ್ದಾರಿ ತೆಗೆದುಕೊಂಡಿದೆ. ಮೇ 13, 2026ರ ಬುಧವಾರ ನಡೆದ ನಾಟಕೀಯ ವಿಶ್ವಾಸ ಮತಯಾಚನೆಯಲ್ಲಿ 144 ಮತಗಳ ಬೆಂಬಲ...

FACT CHECK: ಟಿವಿಕೆ ಪಕ್ಷ ಅಧಿಕಾರಕ್ಕೆ ಬರುತ್ತಿದಂತೆ ಹಿಂದಿ ಹೇರಿಕೆ ವಿರುದ್ದ ಪ್ರತಿಭಟನೆ ಎಂದು ಹಳೆಯ ವಿಡಿಯೋ ಹಂಚಿಕೆ

ಹಿಂದಿ ಹೇರಿಕೆ ವಿರುದ್ದದ ಹೋರಾಟವು ತಮಿಳುನಾಡಿಗೆ ಹೊಸದೇನು ಅಲ್ಲ. ಆದರೆ ಚೆನ್ನೈನ ಜವಾಹರಲಾಲ್ ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷ ಅಧಿಕಾರ ವಹಿಸಿಕೊಂಡ ನಂತರ ...

ನೀಟ್: ಪ್ರಶ್ನೆಪತ್ರಿಕೆ ಸೋರಿಕೆಯ ಆತಂಕ ಮತ್ತು ಪ್ರಾದೇಶಿಕ ಹಿತಾಸಕ್ತಿಗಳ ಬಲಿ

ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ...

ಕೇಂದ್ರ ಸಚಿವ ಬಂಡಿ ಸಂಜಯ್ ಮಗನ ವಿರುದ್ಧ ಪೋಕ್ಸೋ ಕೇಸ್ : ಕ್ರಮ ಕೈಗೊಳ್ಳದೆ ಕಥೆ ಹೇಳುತ್ತಿರುವ ಪೊಲೀಸರು, ಅಂತರ ಕಾಯ್ದುಕೊಂಡ ಬಿಜೆಪಿ

ಕೇಂದ್ರ ಗೃಹ ವ್ಯವಹಾರಗಳ ರಾಜ್ಯ ಸಚಿವ, ತೆಲಂಗಾಣದ ಪ್ರಮುಖ ಬಿಜೆಪಿ ನಾಯಕ ಬಂಡಿ ಸಂಜಯ್ ಕುಮಾರ್ ಅವರ ಮಗ ಬಂಡಿ ಸಾಯಿ ಭಗೀರತ್ ವಿರುದ್ಧ 17 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಪೋಕ್ಸೋ...