Homeಮುಖಪುಟವ್ಯಕ್ತಿತ್ವ ವಿಕಸನ 2 : ನಿಮ್ಮನ್ನು ನೀವು ಅರಿತುಕೊಳ್ಳಿ

ವ್ಯಕ್ತಿತ್ವ ವಿಕಸನ 2 : ನಿಮ್ಮನ್ನು ನೀವು ಅರಿತುಕೊಳ್ಳಿ

- Advertisement -
- Advertisement -

ಜೀವನ ಕಲೆಗಳು: ಅಂಕಣ-3

| ಜಿ. ಆರ್. ವಿದ್ಯಾರಣ್ಯ |

ತನ್ನ ಸ್ವಂತ ಶಕ್ತಿ/ದೌರ್ಬಲ್ಯವನ್ನು ಅರಿತುಕೊಳ್ಳುವ ಕಲೆಗೆ “ಸ್ವೊಟ್ ಎನಾಲಿಸಿಸ್” (SWOT ANALYSIS) ಎನ್ನುತ್ತಾರೆ. ಇದನ್ನು ವ್ಯಕ್ತಿಗಳು ಮತ್ತು ಸಂಸ್ಥೆಗಳು ಕೂಡ ಬಳಸಬಹುದು. ಇದರಿಂದ ವ್ಯಕ್ತಿಯ/ಸಂಸ್ಥೆಯ ಶಕ್ತಿ (Strength), ದೌರ್ಬಲ್ಯ (Weakness), ಅವಕಾಶ (Opportunity) ಮತ್ತು ಭೀತಿ (Threat) ಗಳನ್ನು ಅರಿತುಕೊಳ್ಳಬಹುದು.ಈ ವಿಶ್ಲೇಷಣೆಯನ್ನು ವ್ಯಕ್ತಿಯ ಪರವಾಗಿ ಬಳಸಿದಲ್ಲಿ ವ್ಯಕ್ತಿಯ ಸಹಜ ಶಕ್ತಿ-ಸಾಮರ್ಥ್ಯಗಳನ್ನು ಅರಿತು ಅದಕ್ಕೆ ತಕ್ಕ ಅವಕಾಶಗಳನ್ನು ಹುಡುಕಲು ನೆರವಾಗುತ್ತದೆ. ಸಂಸ್ಥೆಯ ಪರವಾಗಿ ಉಪಯೋಗಿಸಿದಲ್ಲಿ ಅದರ ಮಾರುಕಟ್ಟೆಯ ಹಿಡಿತ ಬಲಪಡಿಸುವುದಕ್ಕೆ ಅಥವಾ ಹೊಸ ಆವಿಶ್ಕಾರವನ್ನು ಹೊರಬಿಡಲು ಸಹಕಾರಿಯಾಗುತ್ತದೆ.

ಸ್ವೊಟ್ ಎನಾಲಿಸಿಸ್ (SWOT ANALYSIS)ಮಾಡುವುದರಿಂದ ನಮ್ಮ ಶಕ್ತಿ ಏನು ಮತ್ತು ದೌರ್ಬಲ್ಯ ಏನು ಎಂಬುದನ್ನು ತಿಳಿಯಬಹುದು. ಉದಾಹರಣೆಗೆ ನಿಮ್ಮ ಇತ್ತೀಚಿನ ಶಾಲಾ/ಕಾಲೇಜು ತರಗತಿಯ ಅಂಕ ಪಟ್ಟಿ ನೋಡಿದಾಕ್ಷಣ ಯಾವ ವಿಷಯದಲ್ಲಿ ನೀವು ಗಟ್ಟಿಗರು, ಯಾವುದರಲ್ಲಿ ನಿಮಗೆ ಶಕ್ತಿ ಸಾಲದು ಎಂಬುದು ಕೂಡಲೇ ತಿಳಿಯುತ್ತದೆ. ಯಾವ ವಿಷಯದಲ್ಲಿ ನೀವು ಹೆಚ್ಚು ಅಂಕ ಗಳಿಸಿದ್ದೀರೋ, ಅದು ನಿಮ್ಮ ಸಹಜ ಶಕ್ತಿ. ಯಾವ ವಿಷಯ ಎಷ್ಟೇ ಪರಿಶ್ರಮ ಪಟ್ಟರೂ, ನಿಮ್ಮ ತಲೆಗೆ ಹತ್ತುವುದಿಲ್ಲವೋ ಅದು ನಿಮ್ಮ ದೌರ್ಬಲ್ಯ, ಆದರೆ ಎರಡೂ, ಶಕ್ತಿ ಮತ್ತು ದೌರ್ಬಲ್ಯ, ತಾತ್ಕಾಲಿಕ. ಇದಕ್ಕೆ ಕಾರಣ ನೀವು ಕಂಡುಕೊಳ್ಳಬೇಕು. ಬಹುಶಃ ನಿಮ್ಮ ಕಲಿಯುವ ರೀತಿ ಸರಿಯಾಗಿಲ್ಲದಿರಬಹುದು ಅಥವಾ ಶಾಲೆಯಲ್ಲಿ ಕಲಿಸುವ ವಿಧಾನದಲ್ಲಿ ತೊಂದರೆ ಇರಬಹುದು. ಸರಿಯಾದ ಕಾರಣ ತಿಳಿದು ಸಮಸ್ಯೆ ಪರಿಹರಿಸಿದಲ್ಲಿ ದೌರ್ಬಲ್ಯವನ್ನು ಶಕ್ತಿಯಾಗಿ ಬದಲಾಯಿಸಿಕೊಳ್ಳಲು ಸಾಧ್ಯ.

ಅದೇ ರೀತಿಯಲ್ಲಿ ನಿಮ್ಮ ಶಕ್ತಿಯಿಂದ ನಿಮಗೆ ಈಗಿರುವ ಅಥವಾ ಸಿಗಬಹುದಾದ ಅವಕಾಶಗಳನ್ನು ಗುರುತಿಸಿಕೊಳ್ಳಲು ಸಾಧ್ಯವಾಗುತ್ತದೆ. ಯಾವುದೇ ವಿಷಯದಲ್ಲಿ ಅತಿ ಹೆಚ್ಚಿನ ಆಸಕ್ತಿ/ಉತ್ಸಾಹವಿದ್ದಲ್ಲಿ ಅದಕ್ಕೆ ಸಿಗಬಹುದಾದ ಪಾರಿತೋಷಕ, ವಿದ್ಯಾರ್ಥಿವೇತನ, ಪ್ರೋತ್ಸಾಹಧನ ಮುಂತಾದವುಗಳನ್ನು ಪಡೆಯಲು ಅರ್ಜಿ ಸಲ್ಲಿಸಬಹುದು. ಕೆಲವೊಮ್ಮೆ ಅದಕ್ಕೆ ಪೂರಕವಾದ ಲೇಖನ ರಚಿಸಿ ಲಗತ್ತಿಸಬೇಕಾಗಬಹುದು. ಅದೇ ವಿಷಯದಲ್ಲಿ ಉನ್ನತ ಅಭ್ಯಾಸಕ್ಕೆ ಇರುವ ಬೇರೆ ಬೇರೆ ಮಾರ್ಗಗಳನ್ನು ನೀವು ಕಂಡುಕೊಳ್ಳಬಹುದು.

ವಿಜ್ಞಾನ ಸಂಬಂಧಿ ವಿಷಯಗಳಲ್ಲಿ ನಿಮಗೆ ಹೆಚ್ಚು ಅಂಕಗಳು ಬರುತ್ತಿದ್ದು, ಕನ್ನಡ, ಇಂಗ್ಲಿಷ್, ಹಿಂದಿ ಭಾಷೆ ಕಷ್ಟವಾಗಿದ್ದರೆ ನೀವು ಎಸ್.ಎಸ್.ಎಲ್.ಸಿ. ನಂತರ ಪಿ.ಸಿ.ಎಂ.ಬಿ., ಪಿ.ಸಿ.ಎಂ.ಸಿ. ಅಥವಾ ಪಿ.ಸಿ.ಎಂ.ಇ. ಇತ್ಯಾದಿ ವಿಷಯಗಳನ್ನು ಆಯ್ಕೆ ಮಾಡಿಕೊಳ್ಳಬಹುದು. ಅದೇ ರೀತಿ ವಿಜ್ಞಾನ ಸಂಬಂಧಿ ವಿಷಯಗಳುನಿಮಗೆ ಕಷ್ಟಕರ ಎನಿಸುತ್ತಿದ್ದು, ಭಾಷೆ, ಇತಿಹಾಸ, ಭೂಗೋಳ ಮುಂತಾದವು ಸುಲಭವಾಗಿದ್ದರೆ ನೀವು ಹ್ಯುಮಾನಿಟೀಸ್ ಶಾಖೆ ಆಯ್ಕೆ ಮಾಡಿಕೊಳ್ಳಬಹುದು. ಹಾಗೆಯೇ ನೀವು ಲೆಕ್ಕದಲ್ಲಿ ಗಟ್ಟಿಗರು ಮತ್ತು ಭಾಷೆಯೂ ಸುಲಭ ಎನಿಸಿದರೆ ಕಾಮರ್ಸ್ ನಿಮಗೆ ಉತ್ತಮ ಆಯ್ಕೆಯಾಗಿರಬಹುದು. ಎಲ್ಲರೂ ಡಾಕ್ಟರ್ ಅಥವಾ ಇಂಜಿನಿಯರ್ ಆಗಲೇ ಬೇಕೆಂಬ ನಿಯಮವೂ ಇಲ್ಲ, ಅಗತ್ಯವೂ ಇಲ್ಲ. ಯಾವುದೇ ಮಾರ್ಗವನ್ನು ನೀವು ನಿಮ್ಮ ಸಹಜ ಶಕ್ತಿ ಗುಣವನ್ನು ಆಧರಿಸಿ ಆಯ್ಕೆ ಮಾಡಿದ್ದಲ್ಲಿ, ಹೆಚ್ಚು ಪರಿಶ್ರಮವಿಲ್ಲದೇ ಉನ್ನತ ಸಾಧನೆ ಮಾಡಲು ಬಹಳಷ್ಟು ಅವಕಾಶವಿರುತ್ತದೆ.

ಇತ್ತೀಚೆಗೆ ಏಪ್ರಿಲ್/ಮೇ ತಿಂಗಳಲ್ಲಿ ಕಾಲೇಜುಗಳು ಮತ್ತು ಉನ್ನತ ವಿದ್ಯಾಸಂಸ್ಥೆಗಳು ನಗರದಾದ್ಯಂತ ಮಾರಾಟ ಮೇಳಗಳನ್ನು ಆಯೋಜಿಸುತ್ತಾರೆ. ಇದರಲ್ಲಿ, ಶಿಕ್ಷಣ ತಜ್ಞರು ಮಕ್ಕಳನ್ನುದ್ದೇಶಿಸಿ ಮಾತನಾಡಿ, ಅವರಿಗೆ ಇರುವ ಹೊಸ ಹೊಸ ವೃತ್ತಿಪರ ಕೋರ್ಸುಗಳ ಬಗ್ಗೆ ತಿಳಿಸಿಕೊಡುತ್ತಾರೆ. ಇಂತಹ ಮೇಳಗಳಲ್ಲಿ ಮಕ್ಕಳು ಮತ್ತು ಪೋಷಕರು ಭಾಗವಹಿಸಬೇಕು. ಒಳ್ಳೆಯ ವರಮಾನ/ಬಡ್ತಿ ಅವಕಾಶವಿರುವ ಹುದ್ದೆಗಳ ದೃಷ್ಟಿಯಿಂದ ಯಾವ ಯಾವ ಕ್ಷೇತ್ರದಲ್ಲಿ, ಮುಂಬರುವ ಎಷ್ಟು ವರ್ಷದಲ್ಲಿ, ಎಷ್ಟು ಹುದ್ದೆಗಳು ಸೃಷ್ಟಿಯಾಗಲಿವೆ ಎಂಬ ಖಚಿತ ಮಾಹಿತಿ ದುರದೃಷ್ಟವಶಾತ್ ಎಲ್ಲೂ ಸಿಗುವುದಿಲ್ಲ. ಈಗ ಕಂಪ್ಯೂಟರ್ ಕ್ಷೇತ್ರದಲ್ಲಿ ಎ.ಐ. (ಆರ್ಟಿಫಿಷಿಯಲ್ ಇಂಟೆಲಿಜೆನ್ಸ್ – ಕೃತಕ ಬುದ್ಧಿಶಕ್ತಿ) ಕ್ಷೇತ್ರದಲ್ಲಿ ಸಾಕಷ್ಟು ಅವಕಾಶವಿದೆ ಎಂದು ಕೇಳಿಬಂದರೂ ಸಹ ಮುಂಬರುವ ಐದು ವರ್ಷದಲ್ಲಿ ಏನಾಗಬಹುದು ಎಂದು ಯಾರಿಗೂ ಗೊತ್ತಿಲ್ಲ ಆದ್ದರಿಂದ ಈಗ ಆ ಕೋರ್ಸಿಗೆ ಸೇರುವ ಮಕ್ಕಳಿಗೆ ತಮ್ಮ ಭವಿಷ್ಯ ಹೇಗಿರುತ್ತದೆ ಎಂದು ಖಚಿತಗೊಳಿಸಿಕೊಳ್ಳಲು ಸಾಧ್ಯವಿಲ್ಲ.

ದ್ವಿತೀಯ ಪಿಯುಸಿ ಓದುತ್ತಿರುವ ಮಕ್ಕಳು ಆನ್-ಲೈನ್ ಉಚಿತ ಪರೀಕ್ಷೆ ಮಾಡಿಕೊಂಡಲ್ಲಿ ಅವರ ವ್ಯಕ್ತಿತ್ವ ಮಾದರಿ ಯಾವುದು ಎಂಬುದು ತಿಳಿಯುತ್ತದೆ. ಈ ಸ್ವ-ಪರೀಕ್ಷೆಯ ಫಲಿತಾಂಶದ ಆಧಾರದ ಮೇಲೆ, ವ್ಯಕ್ತಿತ್ವದ ಇಂಡಿಕೇಟರ್ ಪ್ರಕಾರ ಯಾವ ಜೀವನೋಪಾಯ/ವೃತ್ತಿ ಅವರಿಗೆ ಸಹಜ ಮತ್ತು ಸರಳ ಎಂಬುದನ್ನು ನಿರ್ಧರಿಸಬಹುದು. ಅದೇ ರೀತಿ ಅವರ ಮುಂದಿನ ಉನ್ನತ ಶೈಕ್ಷಣಿಕ ಆಯ್ಕೆಯನ್ನೂ ಸಹ ಅವರು ಅಥವಾ ಪೋಷಕರು ನಿರ್ಧರಿಸಬಹುದು.

ಅಪಾಯದ ಎಚ್ಚರಿಕೆ: ಎಂಬಿಟಿಐ ಅಥವಾ ಬಿಗ್-ಫೈವ್ ಆಗಲೀ ಸಂಪೂರ್ಣ ವೈಜ್ಞಾನಿಕ ತತ್ವವಾದ ಅಲ್ಲ, ಆದ್ದರಿಂದ ಮಕ್ಕಳ ಭವಿಷ್ಯ ರೂಪಿಸುವ ಮುನ್ನ, ಪರಿಣಿತರ, ವೃತ್ತಿಪರರ ಸಲಹೆ ಪಡೆಯುವುದು ಅತ್ಯಂತ ಅವಶ್ಯಕ. ಕೇವಲ ಅಂತರ್ಜಾಲದ ಮಾಹಿತಿ ನಂಬಿ, ಅಥವಾ ಒಂದು ಲೇಖನ ಓದಿ ನಿಮ್ಮ ಮಕ್ಕಳ ಭವಿಷ್ಯದ ಬಗ್ಗೆ ಬಹು ದೊಡ್ಡ ನಿರ್ಧಾರಕ್ಕೆ ಬರಬೇಡಿ.

ಎಸ್.ಎಸ್.ಎಲ್.ಸಿ. ನಂತರ ದ್ವಿತೀಯ ಪಿಯುಸಿ ಸಾಕು (ಅಥವಾ ಯಾವುದೋ ಒಂದು ಪದವಿ ಗಿಟ್ಟಿಸಿದರೆ ಸಾಕು) ಎಂದು ಓದನ್ನು ಅಲ್ಲಿಗೇ ನಿಲ್ಲಿಸಿ, ಯಾವ ಕೆಲಸಕ್ಕೆ ಸೇರಬೇಕು ಎಂಬುದನ್ನು ನಿರ್ಧರಿಸಲಾಗದೇ ಇರುವ ಯುವಕ/ಯುವತಿಯರಿಗೆ ಇಲ್ಲಿದೆ ಒಂದು ಸರಳ ದಾರಿ. ಮೊದಲು ಮೇಲೆ ತಿಳಿಸಿದಂತೆ, ನಿಮ್ಮ ಸ್ವೊಟ್ ಎನಾಲಿಸಿಸ್ ನೀವೇ ಮಾಡಿಕೊಳ್ಳಿ. ನೀವು ಎಂತಹ ವ್ಯಕ್ತಿ ಎಂದು ನೀವೇ ನಿರ್ಧರಿಸಿಕೊಳ್ಳಿ. ನಂತರ ಶಾಲೆ/ಕಾಲೇಜಿನಲ್ಲಿ ನೀವು ಸುಲಭವಾಗಿ ಕಲಿತ ವಿಷಯ, ನೀವು ಸ್ವ-ಇಚ್ಛೆಯಿಂದ, ಸ್ವಯಂಸೇವಕರಾಗಿ, ಇಷ್ಟ ಪಟ್ಟು ಮಾಡಿದ ಕೆಲಸಗಳು (ಸ್ಕೌಟ್/ಗೈಡ್, ಎನ್.ಎಸ್.ಎಸ್., ಗ್ರಾಹಕ ಕ್ಲಬ್, ವಿಜ್ಞಾನ ಕ್ಲಬ್, ಬರವಣಿಗೆ/ಚಿತ್ರಕಲೆ, ಸಾಮಾಜಿಕ/ಧಾರ್ಮಿಕ ಚಟುವಟಿಕೆ, ಅಥವಾ ಧನಸಂಗ್ರಹ ಇತ್ಯಾದಿ), ಇಷ್ಟವಾದ/ಭಾಗವಹಿಸಿದ ಕ್ರೀಡೆಗಳು ಯಾವುದು ಎಂದು ಒಂದನ್ನೂ ಬಿಡದೆ, ಹಾಳೆಯಲ್ಲಿ ಗುರುತು ಹಾಕಿಕೊಳ್ಳಿ. ಇವನ್ನೆಲ್ಲಾ ಒಂದೊಂದು ಮಣಿಗಳು ಎಂದು ಭಾವಿಸಿ, ಅವನ್ನು ಪೋಣಿಸಿ ಹಾರವನ್ನಾಗಿ ಮಾಡಬಹುದೇ ಯೋಚಿಸಿ. ಹಾರಕ್ಕೆ ಒಂದೆರಡು ಮಣಿಗಳು ಕಡಿಮೆ ಎಂದೆನಿಸಿದರೆ ಅವನ್ನು ಪಡೆಯಲು ನಿಮ್ಮ ಪ್ರಯತ್ನ ಹೇಗಿರಬೇಕು ಎಂದು ಯೋಚಿಸಿ. ನಿಮ್ಮ ಮುಂದಿನ ದಾರಿ ತಾನಾಗಿಯೇ ಗೋಚರಿಸುತ್ತದೆ.

ಇದನ್ನೂ ಒದಿ: ನಮ್ಮ ಬದುಕನ್ನು ಸುಂದರ ಮತ್ತು ಅರ್ಥಪೂರ್ಣಗೊಳಿಸಿಕೊಳ್ಳಲು ಬೇಕಿರುವ ಜೀವನಾವಶ್ಯಕ ಕಲೆಗಳು

ಇದನ್ನೂ ಓದಿ: ನಿಮ್ಮನ್ನು ನೀವೇ ಅರಿತುಕೊಳ್ಳಿ: ವ್ಯಕ್ತಿತ್ವ ವಿಕಸನ 1

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬೀದರ್‌ ನಿಂದ ಶುರವಾದ SIR ವಿರೋಧಿ ಜನಜಾಗೃತಿ ಜಾಥಾ

SIR ವಿರೋಧಿ ಕರ್ನಾಟಕ ಹಾಗೂ ಎದ್ದೇಳು ಕರ್ನಾಟಕವು ಕರ್ನಾಟಕದಲ್ಲಿ SIR ಜಾರಿಯನ್ನು ವಿರೋಧಿಸಿ ರಾಜ್ಯದ 5 ಸ್ಥಳಗಳಿಂದ ಜನಜಾಗೃತಿ ಜಾಥಾ ಆಯೋಜಿಸಿದೆ. ಇಂದು ಬೀದರ್‌ ನ ಅಂಬೇಡ್ಕರ್‌ ಸರ್ಕಲ್‌ ನಿಂದ ಆರಂಭವಾದ ಜಾಥಾವು...

ಒಬ್ಬರೇ ಒಬ್ಬ ಅರ್ಹ ಮತದಾರರ ಹೊರಗಿಡುವುದನ್ನು ಒಪ್ಪುವುದಿಲ್ಲ : ಯೂಸುಫ್ ಕನ್ನಿ

ಮತದಾರರ ಪಟ್ಟಿಯ ಪರಿಷ್ಕರಣೆ ಮಾಡಲಿ, ಆದರೆ, ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಬೇಡವೇ ಬೇಡ. ಎಸ್‌ಐಆರ್‌ ಮೂಲಕ ಒಬ್ಬರೇ ಒಬ್ಬರು ಅರ್ಹ ಮತದಾರರನ್ನೂ ಪಟ್ಟಿಯಿಂದ ಹೊರಗಿಡುವುದನ್ನು ನಾವು ಒಪ್ಪುವುದಿಲ್ಲ ಎಂದು ಜಮಾಅತೆ ಇಸ್ಲಾಮಿ...

ಪ್ರಜಾಪ್ರಭುತ್ವದ ರಕ್ಷಣೆಗೆ ಎಸ್‌ಐಆರ್ (SIR) ವಿರುದ್ಧ ಜನಜಾಗೃತಿ ಜಾಥಾಕ್ಕೆ ಶಿವಮೊಗ್ಗದಲ್ಲಿ ಚಾಲನೆ

ಕೇಂದ್ರ ಸರ್ಕಾರದ ಎಸ್‌ಐಆರ್ (SIR) ನೀತಿಯ ವಿರುದ್ಧ ರಾಜ್ಯಾದ್ಯಂತ ಜನವಿರೋಧಿ ಅಲೆ ಎದ್ದಿದೆ. "ಸಂತ-ಶರಣರ ಈ ನಾಡಿನಲ್ಲಿ ಯಾವುದೇ ರೀತಿಯ ದುಷ್ಟ ಆಟ, ಮೋಸ, ವಂಚನೆಗೆ ಅವಕಾಶವಿಲ್ಲ" ಎಂಬ ದೃಢ ಸಂಕಲ್ಪದೊಂದಿಗೆ 'ಎಸ್‌ಐಆರ್...

ಜೂನ್ 13 ರಿಂದ ಕರ್ನಾಟಕದಲ್ಲಿ ‘SIR ವಿರೋಧಿ’ ಜನಜಾಗೃತಿ ಜಾಥ

ರಾಜ್ಯ ಚುನಾವಣಾ ಆಯೋಗವು ಎಸ್‌ಐಆರ್ (SIR) ಪ್ರಕ್ರಿಯೆಗೆ ಸಂಬಂಧಿಸಿದಂತೆ ನಾಗರಿಕರ ಆಕ್ಷೇಪಣೆಗಳಿಗೆ ಸ್ಪಂದಿಸದಿರುವ ನಿರ್ಲಕ್ಷ್ಯ ಧೋರಣೆಯನ್ನು ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಾಗೂ ‘ಎದ್ದೇಳು ಕರ್ನಾಟಕ’ ಸಂಘಟನೆಯ ವತಿಯಿಂದ ಜೂನ್ 13 ರಿಂದ...

‘ಕಾನೂನು ಪ್ರಕ್ರಿಯೆಯದುರುಪಯೋಗ’: ನ್ಯೂಸ್‌ಕ್ಲಿಕ್ ವಿರುದ್ಧದ ದೆಹಲಿ ಪೊಲೀಸ್, ಇಡಿ ಪ್ರಕರಣಗಳನ್ನು ರದ್ದುಗೊಳಿಸಿದ ಹೈಕೋರ್ಟ್

ವಿದೇಶಿ ನೇರ ಹೂಡಿಕೆ (ಎಫ್‌ಡಿಐ) ನಿಯಮಗಳ ಉಲ್ಲಂಘನೆ ಆರೋಪಕ್ಕೆ ಸಂಬಂಧಿಸಿದಂತೆ ನ್ಯೂಸ್‌ಕ್ಲಿಕ್ ಸುದ್ದಿ ಸಂಸ್ಥೆ ಮತ್ತು ಅದರ ಮುಖ್ಯ ಸಂಪಾದಕ ಪ್ರಬೀರ್ ಪುರಕಾಯಸ್ಥ ವಿರುದ್ಧ ದೆಹಲಿ ಪೊಲೀಸರು ಹಾಗೂ ಜಾರಿ ನಿರ್ದೇಶನಾಲಯ (ಇಡಿ) ದಾಖಲಿಸಿದ್ದ ಪ್ರಕರಣಗಳನ್ನು ದೆಹಲಿ...

ಕಾಂಗ್ರೆಸ್ ಜೊತೆ ವಿಲೀನ? ಅದೆಲ್ಲ ಬರೀ ಸುಳ್ಳು ಎಂದ ಟಿಎಂಸಿ

ಕಾಂಗ್ರೆಸ್ ಪಕ್ಷದೊಂದಿಗೆ ತೃಣಮೂಲ ಕಾಂಗ್ರೆಸ್ (ಟಿಎಂಸಿ) ವಿಲೀನವಾಗಬಹುದು ಎಂಬ ವರದಿಗಳನ್ನು ಟಿಎಂಸಿ ಉನ್ನತ ಮೂಲಗಳು ಬುಧವಾರ (ಇಂದು) ಸಂಪೂರ್ಣವಾಗಿ ತಳ್ಳಿಹಾಕಿವೆ. "ನಮ್ಮ ಪಕ್ಷಕ್ಕೆ ಈ ಬಗ್ಗೆ ಯಾವುದೇ ಮಾಹಿತಿ ಇಲ್ಲ ಮತ್ತು ವಿಲೀನಕ್ಕೆ...

ಮೀನಾಕ್ಷಿ ನಟರಾಜನ್ ನಾಮಪತ್ರ ತಿರಸ್ಕಾರ : ಬಿಜೆಪಿಯ ಸೀಟ್ ಚೋರಿ?

ರಾಜ್ಯಸಭಾ ಚುನಾವಣೆಗೆ ಮಧ್ಯಪ್ರದೇಶದಿಂದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿದ್ದ ಮೀನಾಕ್ಷಿ ನಟರಾಜನ್ ಅವರ ನಾಮಪತ್ರವನ್ನು ಚುನಾವಣಾ ಆಯೋಗ ತಿರಸ್ಕರಿಸಿರುವುದು ದೇಶದಲ್ಲಿ ದೊಡ್ಡ ರಾಜಕೀಯ ಜಟಾಪಟಿಗೆ ಕಾರಣವಾಗಿದೆ. ಕಾಂಗ್ರೆಸ್ ಈ ವಿಚಾರವನ್ನು ಬಹಳ ಗಂಭೀರವಾಗಿ ಪರಿಗಣಿಸಿ ಬುಧವಾರ (ಜೂ. 10)...

ಒಳಮೀಸಲಾತಿ ನಾಡು ಕಂಡ ಸುದೀರ್ಘ ಹೋರಾಟದ ಕಥೆ

ಇದು ಬೆವರು ನಿಟ್ಟುಸಿರುಗಳ ಚಳವಳಿ. ತಮ್ಮ ಅನ್ನದ ಬಟ್ಟಲಿಗಾಗಿ ದಶಕಗಳ ಕಾಲ ಹಸಿವು, ಬಾಯಾರಿಕೆ, ನಿದ್ರೆ ಎಲ್ಲವನ್ನೂ ಬಿಟ್ಟು ನಡೆಸಿದ ಅಭೂತಪೂರ್ವ ಚಳವಳಿ. ರಾಜಕೀಯ ಚಕ್ರವ್ಯೂಹಗಳನ್ನು ಬೇಧಿಸಿ, ಸಾಂವಿಧಾನಿಕ ಹಕ್ಕನ್ನು ತಮ್ಮದಾಗಿಸಿಕೊಂಡ ಚಳವಳಿ....

‘ಗೋಮಾಂಸ’ ತಂದ ನೆಪ: ಅಸ್ಸಾಂನಲ್ಲಿ ಐವರು ಮುಸ್ಲಿಂ ವಿದ್ಯಾರ್ಥಿಗಳ ವಿರುದ್ಧ ಕ್ರಮ; ಸುಳ್ಳು ಪ್ರಕರಣದಡಿ ಒಂಟಿ ತಾಯಿ ಮತ್ತು ಅಪ್ರಾಪ್ತ ಮಗನ ಬಂಧನ

ಧಾರ್ಮಿಕ ಭಾವನೆಗೆ ಧಕ್ಕೆ ಎಂಬ ಹೆಸರಿನಲ್ಲಿ ಶಾಲಾ ಆವರಣಗಳೂ ಸಹ ಕೋಮು ರಾಜಕಾರಣದ ಪ್ರಯೋಗಶಾಲೆಗಳಾಗುತ್ತಿರುವುದಕ್ಕೆ ಅಸ್ಸಾಂನಿಂದ ಮತ್ತೊಂದು ಆಘಾತಕಾರಿ ಘಟನೆ ವರದಿಯಾಗಿದೆ. ಅಸ್ಸಾಂನ ಗೋಲ್‌ಪಾರ ಜಿಲ್ಲೆಯ ಸರ್ಕಾರಿ ಹೈಯರ್ ಸೆಕೆಂಡರಿ ಶಾಲೆಯೊಂದರಲ್ಲಿ ಮುಸ್ಲಿಂ...

ಪ್ರಧಾನಿ ನರೇಂದ್ರ ಮೋದಿಯ 12 ವರ್ಷದ ಸಾಧನೆ ಏನು? ಅವರು ಮುರಿದ ದಾಖಲೆಯಾದರೂ ಯಾವುದು?

ಭಾರತದ ಪ್ರಧಾನಿ ನರೇಂದ್ರ ಮೋದಿ ಅವರು 2014ರಿಂದ ಸತತ 12ವರ್ಷಗಳು (4,399 ದಿನಗಳು) ಪ್ರಧಾನಿ ಹುದ್ದೆ ಅಲಂಕರಿಸುವ ಮೂಲಕ ದಾಖಲೆ ನಿರ್ಮಿಸಿದ್ದಾರೆ. ಮೋದಿ ನೇತೃತ್ವದ ಸರ್ಕಾರಕ್ಕೆ 12 ವರ್ಷ ತುಂಬಿದ ಹಿನ್ನೆಲೆ ಬಿಜೆಪಿ...