Homeಮುಖಪುಟಯಾವ ರೀತಿಯ ಉದ್ಯೋಗ ಮಾಡಬೇಕೆಂಬ ಗೊಂದಲದಲ್ಲಿದ್ದೀರಾ? ಇಲ್ಲಿ ಓದಿ

ಯಾವ ರೀತಿಯ ಉದ್ಯೋಗ ಮಾಡಬೇಕೆಂಬ ಗೊಂದಲದಲ್ಲಿದ್ದೀರಾ? ಇಲ್ಲಿ ಓದಿ

- Advertisement -
- Advertisement -

ಜೀವನ ಕಲೆಗಳು ಲೇಖನ: 5

ವ್ಯಕ್ತಿತ್ವ ವಿಕಸನ 4  ನಿಮ್ಮನ್ನು ನೀವು ಅರಿಯಿರಿ

ಮೈಯರ್ಸ್ ಬ್ರಿಗ್ಸ್ ಟೈಪ್ ಇಂಡಿಕೇಟರ್ (ಎಂಬಿಟಿಐ)ಬಗ್ಗೆ ಹಿಂದಿನ ಲೇಖನದಲ್ಲಿ ಉಲ್ಲೇಖಿಸಿದ್ದೆ. ಇದು ವ್ಯಕ್ತಿತ್ವಗಳ ಬಗೆಗಿನ ಅಧ್ಯಯನ ಮತ್ತು ಅದಕ್ಕೆ ಸರಿಹೊಂದುವಂತಹ ವೃತ್ತಿ ಅಥವಾ ಉನ್ನತ ಶಿಕ್ಷಣದ ಆಯ್ಕೆಯ ಒಂದು ವಿಧಾನ. ಎಂಬಿಟಿಐ ಸೂಚ್ಯಾಂಕ ತಿಳಿದುಕೊಳ್ಳುವ ಆಸಕ್ತಿ ಉಳ್ಳವರು ಈ ಲಿಂಕ್ ಕ್ಲಿಕ್ಕಿಸಿ:

ಎಂಬಿಟಿಐ ಸೂಚ್ಯಾಂಕದಲ್ಲಿ, ಕಾರ್ಲ್ ಜಂಗ್ ಪ್ರಕಾರ, ವ್ಯಕ್ತಿಯ ಪ್ರಮುಖವಾದ ನಾಲ್ಕು ಗುಣಲಕ್ಷಣಗಳಾದ ಸೂಕ್ಷ್ಮತೆ, ಸಹಜ ಜ್ಞಾನ, ಸಂವೇದನೆ ಮತ್ತು ಯೋಚನಾಶಕ್ತಿ ಎಂಬವನ್ನು ವಿಂಗಡಿಸಿ, ಅದರ ತದ್ವಿರುದ್ದಗಳೊಂದಿಗೆ ಸಂಯೋಗಪೂರ್ವಕವಾಗಿ ಜೋಡಿಸಿ, ಹದಿನಾರು ಸಂಯೋಗ ಸೂಚಕ ಅಕ್ಷರದ ಗುಂಪುಗಳನ್ನಾಗಿ ಮಾಡಲಾಗಿದೆ. ಅದರಂತೆ ಬಂದ ಹದಿನಾರು ಸಂಯೋಗಗಳು ಹೀಗಿವೆ:

ESTJ, ISTJ, ENTJ, INTJ, ESTP, ISTP, ENTP, INTP, ESFJ, ISFJ, ENFJ, INFJ, ESFP, ISFP, ENFP & INFP.

ನಿಮ್ಮ ಟೈಪ್ ಇಂಡಿಕೇಟರ್ ಮೇಲಿನ ಹದಿನಾರ ಪೈಕಿ ಯಾವುದೇ ಆಗಿದ್ದಲ್ಲಿ ಅದಕ್ಕೆ ಜನ್ಮ ಕುಂಡಲಿ (ಜಾತಕ) ರೀತಿಯ ಸಂಪೂರ್ಣ ವಿಶ್ಲೇಷಣೆ, ಮೇಲೆ ನೀಡಿರುವ ಅಂತರ್ಜಾಲತಾಣದಲ್ಲಿ ಲಭ್ಯವಿದೆ. ಹೆಚ್ಚಿನ ಆಸಕ್ತಿ ಇರುವವರು ಅದನ್ನು ಆಳವಾಗಿ ಅಧ್ಯಯನ ಮಾಡಬಹುದು. ಸಂಕ್ಷಿಪ್ತವಾಗಿ ತಿಳಿಸುವುದಾದರೆ:

ಇ.ಎಸ್.ಟಿ.ಜೆ. (ESTJ): ವ್ಯಕ್ತಿಗಳು ಬಹಿರ್ಮುಖಿ, ಸೂಕ್ಷ್ಮತೆ, ಚಿಂತನಾಶೀಲ ಮತ್ತು ತೀರ್ಪುಗಾರಿಕೆ ಸ್ವಭಾವದ ನೈಸರ್ಗಿಕ ನಾಯಕತ್ವದ ವ್ಯಕ್ತಿಗಳು, ತಮಗೆ ಯಾವುದು ಸರಿಯೋ ಅದನ್ನು ಶಕ್ತಿಯುತವಾಗಿ ಪ್ರತಿಪಾದಿಸುವವರು, ಪರಿಣಾಮವನ್ನು ಎದುರಿಸುವವರು. ಇವರಿಗೆ ಸೂಕ್ತವಾದ ಕೆಲವು ವೃತ್ತಿಗಳು: ಶಿಕ್ಷಣ, ತರಬೇತಿ, ಬ್ಯಾಂಕಿಂಗ್, ರಾಜಕೀಯ, ಮತ್ತು ಎಲ್ಲಾ ಸ್ತರದ ವ್ಯವಸ್ಥಾಪಕ ಹುದ್ದೆ.

ಐ.ಎಸ್.ಟಿ.ಜೆ. (ISTJ):ವ್ಯಕ್ತಿಗಳು ಅಂತರ್ಮುಖಿ, ಸೂಕ್ಷ್ಮತೆ, ಚಿಂತನಾಶೀಲ, ತೀರ್ಪುಗಾರಿಕೆ ಮತ್ತು ಸ್ವತಂತ್ರ ಸ್ವಭಾವದ ನಿರೀಕ್ಷಕ ವ್ಯಕ್ತಿಗಳು, ಸಮಯ ಪರಿಪಾಲಕರು, ತಪ್ಪು-ಸರಿ ತಿಳಿದವರು. ಇವರಿಗೆ ಸೂಕ್ತವಾದ ಕೆಲವು ವೃತ್ತಿಗಳು: ಮಿಲಿಟರಿ, ಪೋಲಿಸ್ ಅಧಿಕಾರಿ, ವೈದ್ಯರು, ಸನದು ಲೆಕ್ಕಿಗರು, ವಕೀಲರು, ಅಭಿಯಂತರು, ಮಧ್ಯಮ ಸ್ತರದ ವ್ಯವಸ್ಥಾಪಕ ಹುದ್ದೆ.

ಇ.ಎನ್.ಟಿ.ಜೆ. (ENTJ):ವ್ಯಕ್ತಿಗಳು ಬಹಿರ್ಮುಖಿ, ಸಹಜ ಜ್ಞಾನಿ, ಚಿಂತನಾಶೀಲ, ತೀರ್ಪುಗಾರಿಕೆ ಸ್ವಭಾವದ ಸಂಸ್ಥೆ ಕಟ್ಟುವ ನಾಯಕರು. ಸಮಸ್ಯೆಗೆ ಪರಿಹಾರ ಕಂಡುಕೊಳ್ಳಬಲ್ಲವರು. ಇವರಿಗೆ ಸೂಕ್ತ ವೃತ್ತಿಗಳು: ಕಂಪನಿಯ ಮುಖ್ಯಸ್ಥರು, ಉದ್ಯೋಗಶೀಲರು, ಕಂಪ್ಯೂಟರ್ ಸಲಹೆಗಾರರು, ವಿಶ್ವವಿದ್ಯಾಲಯದ ಆಡಳಿತಗಾರರು, ಇತ್ಯಾದಿ

ಐ.ಎನ್.ಟಿ.ಜೆ. (INTJ):ವ್ಯಕ್ತಿಗಳುಅಂತರ್ಮುಖಿ, ಸಹಜ ಜ್ಞಾನಿ, ಚಿಂತನಾಶೀಲ, ತೀರ್ಪುಗಾರಿಕೆ ಸ್ವಭಾವದ “ಮಾಸ್ಟರ್ ಮೈಂಡ್”. ಯಾವುದೇ ಸಂಕೀರ್ನ ಸಮಸ್ಯೆ ಅರ್ಥ ಮಾಡಿಕೊಳ್ಳಬಲ್ಲರು. ಇವರಿಗೆ ಸೂಕ್ತ ವೃತ್ತಿಗಳು: ಅಭಿಯಂತರು, ವೈದ್ಯರು, ರಣನೀತಿ ತಯಾರಕರು ಇತ್ಯಾದಿ.

ಇ.ಎಸ್.ಟಿ.ಪಿ. (ESTP):ವ್ಯಕ್ತಿಗಳು ಬಹಿರ್ಮುಖಿ, ಸೂಕ್ಷ್ಮತೆ, ಚಿಂತನಾಶೀಲ ಮತ್ತು ಗ್ರಹಿಕಾ ಶಕ್ತಿಯ ಕ್ರಿಯಾಶೀಲರು. ಇನ್ನೊಬ್ಬರ ಅವಶ್ಯಕತೆಗಳನ್ನು ಅರ್ಥ ಮಾಡಿಕೊಂಡು ಸಲಹೆ ನೀಡಬಲ್ಲರು. ಇವರಿಗೆ ಸೂಕ್ತ ವೃತ್ತಿಗಳು: ಮಾರ್ಕೆಟಿಂಗ್, ಕಂಪ್ಯೂಟರ್/ವೈದ್ಯಕೀಯ ಸಪೋರ್ಟ್ ತಂಡ, ಇತ್ಯಾದಿ.

ಐ.ಎಸ್.ಟಿ.ಪಿ. (ISTP):ವ್ಯಕ್ತಿಗಳು ಅಂತರ್ಮುಖಿ, ಸೂಕ್ಷ್ಮತೆ, ಚಿಂತನಾಶೀಲ ಮತ್ತು ಗ್ರಹಿಕಾ ಶಕ್ತಿಯ ಇವರಿಗೆ ಸೂಕ್ತ ವೃತ್ತಿಗಳು: ಪೋಲಿಸ್ ತನಿಖಾ ದಳ, ಅಭಿಯಂತರು, ಮೆಕ್ಯಾನಿಕ್, ಪೈಲಟ್ ಇತ್ಯಾದಿ. ಆದರೆ ಎಲ್ಲ ಕೆಲಸಕ್ಕೆ ಸುಲಭವಾಗಿ ಹೊಂದಿಕೊಳ್ಳುವರು.

ಇ.ಎನ್.ಟಿ.ಪಿ. (ENTP):ವ್ಯಕ್ತಿಗಳು ಬಹಿರ್ಮುಖಿ, ಸಹಜ ಜ್ಞಾನಿ, ಚಿಂತನಾಶೀಲ ಮತ್ತು ಗ್ರಹಿಕಾ ಶಕ್ತಿಯ ಸ್ವಭಾವದ ಇವರಿಗೆ ಸೂಕ್ತ ವೃತ್ತಿಗಳು: ವಕೀಲಿ, ಮನೋವಿಜ್ಞಾನಿ, ಸಿನಿಮಾ/ನಾಟಕ ನಟನೆ, ಇತ್ಯಾದಿ.

ಐ.ಎನ್.ಟಿ.ಪಿ. (INTP):ವ್ಯಕ್ತಿಗಳು ಅಂತರ್ಮುಖಿ, ಸಹಜ ಜ್ಞಾನಿ, ಚಿಂತನಾಶೀಲ ಮತ್ತು ಗ್ರಹಿಕಾ ಶಕ್ತಿಯ ಸ್ವಭಾವದ ಇವರಿಗೆ ಸೂಕ್ತ ವೃತ್ತಿಗಳು: ಫೋಟೋಗ್ರಾಫಿ, ಗಣಿತ ತಜ್ಞರು, ನ್ಯಾಯಾಧೀಶರು, ಇತ್ಯಾದಿ.

ಇ.ಎಸ್.ಎಫ್.ಜೆ. (ESFJ):ವ್ಯಕ್ತಿಗಳು ಬಹಿರ್ಮುಖಿ, ಸೂಕ್ಷ್ಮತೆ, ಸಂವೇದನಾಶೀಲ, ತೀರ್ಪುಗಾರಿಕೆ ಸ್ವಭಾವದ ಇವರಿಗೆ ಸೂಕ್ತ ವೃತ್ತಿಗಳು: ನರ್ಸಿಂಗ್, ಶಿಕ್ಷಣ, ಧಾರ್ಮಿಕ ಕೆಲಸ, ಇತ್ಯಾದಿ.

ಐ.ಎಸ್.ಎಫ್.ಜೆ. (ISFJ):ವ್ಯಕ್ತಿಗಳು ಅಂತರ್ಮುಖಿ, ಸೂಕ್ಷ್ಮತೆ, ಸಂವೇದನಾಶೀಲ, ತೀರ್ಪುಗಾರಿಕೆ ಸ್ವಭಾವದ ಇವರಿಗೆ ಸೂಕ್ತ ವೃತ್ತಿಗಳು:ಅಂಗಡಿ/ಮಳಿಗೆ ಮಾಲೀಕರು, ವಾಚನಾಲಯ ನಡೆಸುವುದು, ಧಾರ್ಮಿಕ ಕೆಲಸ ಇತ್ಯಾದಿ.

ಇ.ಎನ್.ಎಫ್.ಜೆ. (ENFJ):ವ್ಯಕ್ತಿಗಳು ಬಹಿರ್ಮುಖಿ, ಸಹಜ ಜ್ಞಾನಿ, ಸಂವೇದನಾಶೀಲ, ತೀರ್ಪುಗಾರಿಕೆ ಸ್ವಭಾವದ ಇವರಿಗೆ ಸೂಕ್ತ ವೃತ್ತಿಗಳು:ಸಲಹೆಗಾರರು, ಮನೋರೋಗ ತಜ್ಞರು, ಸಮಾಜ ಸೇವಕರು ಇತ್ಯಾದಿ.

ಐ.ಎನ್.ಎಫ್.ಜೆ. (INFJ):ವ್ಯಕ್ತಿಗಳು ಅಂತರ್ಮುಖಿ, ಸಹಜ ಜ್ಞಾನಿ, ಸಂವೇದನಾಶೀಲ, ತೀರ್ಪುಗಾರಿಕೆ ಸ್ವಭಾವದ ಇವರಿಗೆ ಸೂಕ್ತ ವೃತ್ತಿಗಳು: ವೈದ್ಯರು, ಸಂಗೀತಗಾರರು, ಧಾರ್ಮಿಕ ಕೆಲಸ ಇತ್ಯಾದಿ.

ಇ.ಎಸ್.ಎಫ್.ಪಿ. (ESFP):ವ್ಯಕ್ತಿಗಳು ಬಹಿರ್ಮುಖಿ, ಸೂಕ್ಷ್ಮತೆ, ಸಂವೇದನಾಶೀಲ ಮತ್ತು ಗ್ರಹಿಕಾ ಶಕ್ತಿಯ ಸ್ವಭಾವದ ಇವರಿಗೆ ಸೂಕ್ತ ವೃತ್ತಿಗಳು:ಸಂಗೀತ/ನೃತ್ಯ ಕಲಾವಿದರು,ಸಿನಿಮಾ/ನಾಟಕ ನಟನೆ,ಇತ್ಯಾದಿ.

ಐ.ಎಸ್.ಎಫ್.ಪಿ. (ISFP):ವ್ಯಕ್ತಿಗಳು ಅಂತರ್ಮುಖಿ, ಸೂಕ್ಷ್ಮತೆ,  ಸಂವೇದನಾಶೀಲ ಮತ್ತು ಗ್ರಹಿಕಾ ಶಕ್ತಿಯ ಸ್ವಭಾವದ ಇವರಿಗೆ ಸೂಕ್ತ ವೃತ್ತಿಗಳು: ಶಿಕ್ಷಕರು, ಸಲಹೆಗಾರರು, ಅರಣ್ಯಾಧಿಕಾರಿ, ಇತ್ಯಾದಿ.

ಇ.ಎನ್.ಎಫ್.ಪಿ. (ENFP):ವ್ಯಕ್ತಿಗಳು ಬಹಿರ್ಮುಖಿ, ಸಹಜ ಜ್ಞಾನಿ,  ಸಂವೇದನಾಶೀಲ ಮತ್ತು ಗ್ರಹಿಕಾ ಶಕ್ತಿಯ ಸ್ವಭಾವದ ಇವರಿಗೆ ಸೂಕ್ತ ವೃತ್ತಿಗಳು: ಲೇಖಕರು, ಪತ್ರಿಕೋದ್ಯಮ, ರಾಯಭಾರಿ ಇತ್ಯಾದಿ.

ಐ.ಎನ್.ಎಫ್.ಪಿ. (INFP):ವ್ಯಕ್ತಿಗಳು ಅಂತರ್ಮುಖಿ, ಸಹಜ ಜ್ಞಾನಿ, ಸಂವೇದನಾಶೀಲ ಮತ್ತು ಗ್ರಹಿಕಾ ಶಕ್ತಿಯ ಸ್ವಭಾವದ ಇವರಿಗೆ ಸೂಕ್ತ ವೃತ್ತಿಗಳು:ಲೇಖಕರು, ಶಿಕ್ಷಕರು, ಮನೋತಜ್ಞರು, ಇತ್ಯಾದಿ.

ಇಲ್ಲಿ ಬಹಳ ಮುಖ್ಯವಾಗಿ ಗಮನಿಸಬೇಕಾದ ಅಂಶಗಳೆಂದರೆ:

1. ಎಂಬಿಟಿಐ ಸೂಚ್ಯಾಂಕ ನಿಮ್ಮ ಜನ್ಮಕ್ಕೆ ಅಂಟಿದ ಹಣೆಪಟ್ಟಿ ಅಲ್ಲ. ಇದು ನಿಮ್ಮ ಇಂದಿನ ವ್ಯಕ್ತಿತ್ವವನ್ನು ಸೂಚಿಸುತ್ತದೆ. ಇದರಲ್ಲಿ ಕಂಡು ಬಂದ ಗುಣಲಕ್ಷಣಗಳು ಕಾಲಕಾಲಕ್ಕೆ ಬದಲಾಗುತ್ತವೆ ಮತ್ತು ಸ್ವಲ್ಪ ಪ್ರಯತ್ನದಿಂದ ನೀವು ಯಾವಾಗ ಬೇಕಾದರೂ ಬದಲಾಯಿಸಿಕೊಳ್ಳಬಹುದು. ಹಾಗಾಗಿ ಅಂತರ್ಮುಖಿಗಳು ಬಹಿರ್ಮುಖಿಯಾಗಬಹುದು; ಚಿಂತನಾಶೀಲರು ಕ್ರಿಯಾಶೀಲರಾಗಬಹುದು. ಅಂತಹ ಸಂದರ್ಭದಲ್ಲಿ ನಿಮ್ಮ ಸೂಚ್ಯಾಂಕ, ಅದರ ವಿಶ್ಲೇಷಣೆ ಮತ್ತು ವೃತ್ತಿ ಸಹ ಬದಲಾಗಬಹುದು.

2. ಎಂಬಿಟಿಐ ಸೂಚ್ಯಾಂಕವನ್ನು ಬಹಳಷ್ಟು ಕಂಪನಿಗಳು, ಜಾಲತಾಣಗಳು, ಸಲಹೆಗಾರರು ವಿಧವಿಧವಾಗಿ ಅರ್ಥೈಸುತ್ತಾರೆ. ನಮ್ಮ ದೇಶದಲ್ಲಿ ಜ್ಯೋತಿಷಿಗಳು ಜಾತಕ ನೋಡಿ ಭವಿಷ್ಯ ಹೇಳುವಂತೆ, ಎಲ್ಲರೂ ತಮ್ಮದೇ ಆದ ವಿಶ್ಲೇಷಣೆ ಮತ್ತು ವೃತ್ತಿಗಳನ್ನು ಸೂಚಿಸುತ್ತಾರೆ. ಆದ್ದರಿಂದ ಇದು ವಿಜ್ಞಾನಿ ಎನಿಸಿಕೊಳ್ಳದೆ ಅರೆ-ವಿಜ್ಞಾನದ ಗುಂಪಿಗೆ ಸೇರಿದೆ. ಇದನ್ನು ಮನಸ್ಸಿನಲ್ಲಿಟ್ಟುಕೊಂಡು ಭವಿಷ್ಯದ ನಿರ್ಧಾರ ತೆಗೆದುಕೊಳ್ಳಿ ಎಂದು ನನ್ನ ಸವಿನಯ ಸಲಹೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...

ರಾಜಸ್ಥಾನ| ಸಾರ್ವಜನಿಕ ಕಾರ್ಯಕ್ರಮದಲ್ಲಿ ವೃದ್ಧ ಮಹಿಳೆಯನ್ನು ಕಾಲಿನಿಂದ ಒದ್ದ ವ್ಯಕ್ತಿ

ರಾಜಸ್ಥಾನದ ಬಾರ್ಮರ್ ಜಿಲ್ಲೆಯಲ್ಲಿ ನಡೆಯುತ್ತಿದ್ದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ವೃದ್ಧ ಮಹಿಳೆಯನ್ನು ಒದೆಯುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ವ್ಯಕ್ತಿಯನ್ನು ಬಂಧಿಸಲಾಗಿದೆ. ಆತನ ಕೃತ್ಯದ ವಿರುದ್ಧ ವ್ಯಾಪಕ ಆಕ್ರೋಶಕ್ಕೆ ವ್ಯಕ್ತವಾಗಿದೆ. ಜತೋನ್ ಕಾ...

ಅಜಿತ್ ಪವಾರ್ ವಿಮಾನ ದುರಂತ: ಅಪಘಾತ ಸ್ಥಳದಲ್ಲಿ ಬ್ಲಾಕ್ ಬಾಕ್ಸ್ ಪತ್ತೆ..!

ನವದೆಹಲಿ: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ಇತರ ನಾಲ್ವರು ಸಾವನ್ನಪ್ಪಿದ ಬಾರಾಮತಿ ವಿಮಾನ ನಿಲ್ದಾಣದಲ್ಲಿ ಬುಧವಾರ ಸಂಭವಿಸಿದ ವಿಮಾನ ಅಪಘಾತದ ತನಿಖೆಯ ಕುರಿತು ನಾಗರಿಕ ವಿಮಾನಯಾನ ಸಚಿವಾಲಯ (MoCA) ಗುರುವಾರ ಹೇಳಿಕೆ...

ಮೀಸಲಾತಿಗಾಗಿ ಪ್ರಬಲ ಜಾತಿಯ ವ್ಯಕ್ತಿ ಬೌದ್ಧ ಧರ್ಮಕ್ಕೆ ಮತಾಂತರ : ಹೊಸ ಬಗೆಯ ವಂಚನೆ ಎಂದ ಸುಪ್ರೀಂ ಕೋರ್ಟ್

ಇಬ್ಬರು ಪ್ರಬಲ ಜಾತಿ ಅಭ್ಯರ್ಥಿಗಳು ಬೌದ್ಧ ಧರ್ಮಕ್ಕೆ ಮತಾಂತರಗೊಂಡಿರುವ ಬಗ್ಗೆ ಮಂಗಳವಾರ (ಜ.27) ಸುಪ್ರೀಂ ಕೋರ್ಟ್ ಗಂಭೀರ ಅನುಮಾನ ವ್ಯಕ್ತಪಡಿಸಿದ್ದು, ಈ ನಡೆಯು ಸ್ನಾತಕೋತ್ತರ ವೈದ್ಯಕೀಯ ಕೋರ್ಸ್‌ಗಳಿಗೆ ಅಲ್ಪಸಂಖ್ಯಾತ ಕೋಟಾದ ಅಡಿಯಲ್ಲಿ ಪ್ರವೇಶ...

ವಿಮಾನ ಪತನ : ಸಂಸದ ಸೇರಿ 15 ಜನರು ಸಾವು

ಬುಧವಾರ (ಜ.28) ಸರ್ಕಾರಿ ಸ್ವಾಮ್ಯದ ವಿಮಾನಯಾನ ಸಂಸ್ಥೆ ಸಟೇನಾ ನಿರ್ವಹಿಸುತ್ತಿದ್ದ ಸಣ್ಣ ಪ್ರಯಾಣಿಕ ವಿಮಾನವು ಈಶಾನ್ಯ ಕೊಲಂಬಿಯಾದ ಪರ್ವತ ಪ್ರದೇಶದಲ್ಲಿ ಪತನಗೊಂಡು ಎಲ್ಲಾ 15 ಪ್ರಯಾಣಿಕರು ಜನರು ಸಾವಿಗೀಡಾಗಿದ್ದಾರೆ. ದುರಂತದ ಕಾರಣ ಇನ್ನೂ ಸ್ಪಷ್ಟವಾಗಿಲ್ಲ....

‘ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆ..’; ಕೇಂದ್ರದ ಯುಜಿಸಿ ನಿಯಮಗಳನ್ನು ಪ್ರಶಂಸಿದ ಸಿಎಂ ಸ್ಟಾಲಿನ್

ಯುಜಿಸಿ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಈಕ್ವಿಟಿ ಪ್ರಚಾರ) ನಿಯಮಗಳು, 2026 "ಆಳವಾಗಿ ಬೇರೂರಿರುವ ತಾರತಮ್ಯ ಮತ್ತು ಸಾಂಸ್ಥಿಕ ನಿರಾಸಕ್ತಿಯಿಂದ ಬಳಲುತ್ತಿರುವ ಉನ್ನತ ಶಿಕ್ಷಣ ವ್ಯವಸ್ಥೆಯನ್ನು ಸುಧಾರಿಸುವಲ್ಲಿ ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆಯಾಗಿದೆ" ಎಂದು ತಮಿಳುನಾಡು...