Homeಮುಖಪುಟಯಾವ ರೀತಿಯ ಉದ್ಯೋಗ ಮಾಡಬೇಕೆಂಬ ಗೊಂದಲದಲ್ಲಿದ್ದೀರಾ? ಇಲ್ಲಿ ಓದಿ

ಯಾವ ರೀತಿಯ ಉದ್ಯೋಗ ಮಾಡಬೇಕೆಂಬ ಗೊಂದಲದಲ್ಲಿದ್ದೀರಾ? ಇಲ್ಲಿ ಓದಿ

- Advertisement -
- Advertisement -

ಜೀವನ ಕಲೆಗಳು ಲೇಖನ: 5

ವ್ಯಕ್ತಿತ್ವ ವಿಕಸನ 4  ನಿಮ್ಮನ್ನು ನೀವು ಅರಿಯಿರಿ

ಮೈಯರ್ಸ್ ಬ್ರಿಗ್ಸ್ ಟೈಪ್ ಇಂಡಿಕೇಟರ್ (ಎಂಬಿಟಿಐ)ಬಗ್ಗೆ ಹಿಂದಿನ ಲೇಖನದಲ್ಲಿ ಉಲ್ಲೇಖಿಸಿದ್ದೆ. ಇದು ವ್ಯಕ್ತಿತ್ವಗಳ ಬಗೆಗಿನ ಅಧ್ಯಯನ ಮತ್ತು ಅದಕ್ಕೆ ಸರಿಹೊಂದುವಂತಹ ವೃತ್ತಿ ಅಥವಾ ಉನ್ನತ ಶಿಕ್ಷಣದ ಆಯ್ಕೆಯ ಒಂದು ವಿಧಾನ. ಎಂಬಿಟಿಐ ಸೂಚ್ಯಾಂಕ ತಿಳಿದುಕೊಳ್ಳುವ ಆಸಕ್ತಿ ಉಳ್ಳವರು ಈ ಲಿಂಕ್ ಕ್ಲಿಕ್ಕಿಸಿ:

ಎಂಬಿಟಿಐ ಸೂಚ್ಯಾಂಕದಲ್ಲಿ, ಕಾರ್ಲ್ ಜಂಗ್ ಪ್ರಕಾರ, ವ್ಯಕ್ತಿಯ ಪ್ರಮುಖವಾದ ನಾಲ್ಕು ಗುಣಲಕ್ಷಣಗಳಾದ ಸೂಕ್ಷ್ಮತೆ, ಸಹಜ ಜ್ಞಾನ, ಸಂವೇದನೆ ಮತ್ತು ಯೋಚನಾಶಕ್ತಿ ಎಂಬವನ್ನು ವಿಂಗಡಿಸಿ, ಅದರ ತದ್ವಿರುದ್ದಗಳೊಂದಿಗೆ ಸಂಯೋಗಪೂರ್ವಕವಾಗಿ ಜೋಡಿಸಿ, ಹದಿನಾರು ಸಂಯೋಗ ಸೂಚಕ ಅಕ್ಷರದ ಗುಂಪುಗಳನ್ನಾಗಿ ಮಾಡಲಾಗಿದೆ. ಅದರಂತೆ ಬಂದ ಹದಿನಾರು ಸಂಯೋಗಗಳು ಹೀಗಿವೆ:

ESTJ, ISTJ, ENTJ, INTJ, ESTP, ISTP, ENTP, INTP, ESFJ, ISFJ, ENFJ, INFJ, ESFP, ISFP, ENFP & INFP.

ನಿಮ್ಮ ಟೈಪ್ ಇಂಡಿಕೇಟರ್ ಮೇಲಿನ ಹದಿನಾರ ಪೈಕಿ ಯಾವುದೇ ಆಗಿದ್ದಲ್ಲಿ ಅದಕ್ಕೆ ಜನ್ಮ ಕುಂಡಲಿ (ಜಾತಕ) ರೀತಿಯ ಸಂಪೂರ್ಣ ವಿಶ್ಲೇಷಣೆ, ಮೇಲೆ ನೀಡಿರುವ ಅಂತರ್ಜಾಲತಾಣದಲ್ಲಿ ಲಭ್ಯವಿದೆ. ಹೆಚ್ಚಿನ ಆಸಕ್ತಿ ಇರುವವರು ಅದನ್ನು ಆಳವಾಗಿ ಅಧ್ಯಯನ ಮಾಡಬಹುದು. ಸಂಕ್ಷಿಪ್ತವಾಗಿ ತಿಳಿಸುವುದಾದರೆ:

ಇ.ಎಸ್.ಟಿ.ಜೆ. (ESTJ): ವ್ಯಕ್ತಿಗಳು ಬಹಿರ್ಮುಖಿ, ಸೂಕ್ಷ್ಮತೆ, ಚಿಂತನಾಶೀಲ ಮತ್ತು ತೀರ್ಪುಗಾರಿಕೆ ಸ್ವಭಾವದ ನೈಸರ್ಗಿಕ ನಾಯಕತ್ವದ ವ್ಯಕ್ತಿಗಳು, ತಮಗೆ ಯಾವುದು ಸರಿಯೋ ಅದನ್ನು ಶಕ್ತಿಯುತವಾಗಿ ಪ್ರತಿಪಾದಿಸುವವರು, ಪರಿಣಾಮವನ್ನು ಎದುರಿಸುವವರು. ಇವರಿಗೆ ಸೂಕ್ತವಾದ ಕೆಲವು ವೃತ್ತಿಗಳು: ಶಿಕ್ಷಣ, ತರಬೇತಿ, ಬ್ಯಾಂಕಿಂಗ್, ರಾಜಕೀಯ, ಮತ್ತು ಎಲ್ಲಾ ಸ್ತರದ ವ್ಯವಸ್ಥಾಪಕ ಹುದ್ದೆ.

ಐ.ಎಸ್.ಟಿ.ಜೆ. (ISTJ):ವ್ಯಕ್ತಿಗಳು ಅಂತರ್ಮುಖಿ, ಸೂಕ್ಷ್ಮತೆ, ಚಿಂತನಾಶೀಲ, ತೀರ್ಪುಗಾರಿಕೆ ಮತ್ತು ಸ್ವತಂತ್ರ ಸ್ವಭಾವದ ನಿರೀಕ್ಷಕ ವ್ಯಕ್ತಿಗಳು, ಸಮಯ ಪರಿಪಾಲಕರು, ತಪ್ಪು-ಸರಿ ತಿಳಿದವರು. ಇವರಿಗೆ ಸೂಕ್ತವಾದ ಕೆಲವು ವೃತ್ತಿಗಳು: ಮಿಲಿಟರಿ, ಪೋಲಿಸ್ ಅಧಿಕಾರಿ, ವೈದ್ಯರು, ಸನದು ಲೆಕ್ಕಿಗರು, ವಕೀಲರು, ಅಭಿಯಂತರು, ಮಧ್ಯಮ ಸ್ತರದ ವ್ಯವಸ್ಥಾಪಕ ಹುದ್ದೆ.

ಇ.ಎನ್.ಟಿ.ಜೆ. (ENTJ):ವ್ಯಕ್ತಿಗಳು ಬಹಿರ್ಮುಖಿ, ಸಹಜ ಜ್ಞಾನಿ, ಚಿಂತನಾಶೀಲ, ತೀರ್ಪುಗಾರಿಕೆ ಸ್ವಭಾವದ ಸಂಸ್ಥೆ ಕಟ್ಟುವ ನಾಯಕರು. ಸಮಸ್ಯೆಗೆ ಪರಿಹಾರ ಕಂಡುಕೊಳ್ಳಬಲ್ಲವರು. ಇವರಿಗೆ ಸೂಕ್ತ ವೃತ್ತಿಗಳು: ಕಂಪನಿಯ ಮುಖ್ಯಸ್ಥರು, ಉದ್ಯೋಗಶೀಲರು, ಕಂಪ್ಯೂಟರ್ ಸಲಹೆಗಾರರು, ವಿಶ್ವವಿದ್ಯಾಲಯದ ಆಡಳಿತಗಾರರು, ಇತ್ಯಾದಿ

ಐ.ಎನ್.ಟಿ.ಜೆ. (INTJ):ವ್ಯಕ್ತಿಗಳುಅಂತರ್ಮುಖಿ, ಸಹಜ ಜ್ಞಾನಿ, ಚಿಂತನಾಶೀಲ, ತೀರ್ಪುಗಾರಿಕೆ ಸ್ವಭಾವದ “ಮಾಸ್ಟರ್ ಮೈಂಡ್”. ಯಾವುದೇ ಸಂಕೀರ್ನ ಸಮಸ್ಯೆ ಅರ್ಥ ಮಾಡಿಕೊಳ್ಳಬಲ್ಲರು. ಇವರಿಗೆ ಸೂಕ್ತ ವೃತ್ತಿಗಳು: ಅಭಿಯಂತರು, ವೈದ್ಯರು, ರಣನೀತಿ ತಯಾರಕರು ಇತ್ಯಾದಿ.

ಇ.ಎಸ್.ಟಿ.ಪಿ. (ESTP):ವ್ಯಕ್ತಿಗಳು ಬಹಿರ್ಮುಖಿ, ಸೂಕ್ಷ್ಮತೆ, ಚಿಂತನಾಶೀಲ ಮತ್ತು ಗ್ರಹಿಕಾ ಶಕ್ತಿಯ ಕ್ರಿಯಾಶೀಲರು. ಇನ್ನೊಬ್ಬರ ಅವಶ್ಯಕತೆಗಳನ್ನು ಅರ್ಥ ಮಾಡಿಕೊಂಡು ಸಲಹೆ ನೀಡಬಲ್ಲರು. ಇವರಿಗೆ ಸೂಕ್ತ ವೃತ್ತಿಗಳು: ಮಾರ್ಕೆಟಿಂಗ್, ಕಂಪ್ಯೂಟರ್/ವೈದ್ಯಕೀಯ ಸಪೋರ್ಟ್ ತಂಡ, ಇತ್ಯಾದಿ.

ಐ.ಎಸ್.ಟಿ.ಪಿ. (ISTP):ವ್ಯಕ್ತಿಗಳು ಅಂತರ್ಮುಖಿ, ಸೂಕ್ಷ್ಮತೆ, ಚಿಂತನಾಶೀಲ ಮತ್ತು ಗ್ರಹಿಕಾ ಶಕ್ತಿಯ ಇವರಿಗೆ ಸೂಕ್ತ ವೃತ್ತಿಗಳು: ಪೋಲಿಸ್ ತನಿಖಾ ದಳ, ಅಭಿಯಂತರು, ಮೆಕ್ಯಾನಿಕ್, ಪೈಲಟ್ ಇತ್ಯಾದಿ. ಆದರೆ ಎಲ್ಲ ಕೆಲಸಕ್ಕೆ ಸುಲಭವಾಗಿ ಹೊಂದಿಕೊಳ್ಳುವರು.

ಇ.ಎನ್.ಟಿ.ಪಿ. (ENTP):ವ್ಯಕ್ತಿಗಳು ಬಹಿರ್ಮುಖಿ, ಸಹಜ ಜ್ಞಾನಿ, ಚಿಂತನಾಶೀಲ ಮತ್ತು ಗ್ರಹಿಕಾ ಶಕ್ತಿಯ ಸ್ವಭಾವದ ಇವರಿಗೆ ಸೂಕ್ತ ವೃತ್ತಿಗಳು: ವಕೀಲಿ, ಮನೋವಿಜ್ಞಾನಿ, ಸಿನಿಮಾ/ನಾಟಕ ನಟನೆ, ಇತ್ಯಾದಿ.

ಐ.ಎನ್.ಟಿ.ಪಿ. (INTP):ವ್ಯಕ್ತಿಗಳು ಅಂತರ್ಮುಖಿ, ಸಹಜ ಜ್ಞಾನಿ, ಚಿಂತನಾಶೀಲ ಮತ್ತು ಗ್ರಹಿಕಾ ಶಕ್ತಿಯ ಸ್ವಭಾವದ ಇವರಿಗೆ ಸೂಕ್ತ ವೃತ್ತಿಗಳು: ಫೋಟೋಗ್ರಾಫಿ, ಗಣಿತ ತಜ್ಞರು, ನ್ಯಾಯಾಧೀಶರು, ಇತ್ಯಾದಿ.

ಇ.ಎಸ್.ಎಫ್.ಜೆ. (ESFJ):ವ್ಯಕ್ತಿಗಳು ಬಹಿರ್ಮುಖಿ, ಸೂಕ್ಷ್ಮತೆ, ಸಂವೇದನಾಶೀಲ, ತೀರ್ಪುಗಾರಿಕೆ ಸ್ವಭಾವದ ಇವರಿಗೆ ಸೂಕ್ತ ವೃತ್ತಿಗಳು: ನರ್ಸಿಂಗ್, ಶಿಕ್ಷಣ, ಧಾರ್ಮಿಕ ಕೆಲಸ, ಇತ್ಯಾದಿ.

ಐ.ಎಸ್.ಎಫ್.ಜೆ. (ISFJ):ವ್ಯಕ್ತಿಗಳು ಅಂತರ್ಮುಖಿ, ಸೂಕ್ಷ್ಮತೆ, ಸಂವೇದನಾಶೀಲ, ತೀರ್ಪುಗಾರಿಕೆ ಸ್ವಭಾವದ ಇವರಿಗೆ ಸೂಕ್ತ ವೃತ್ತಿಗಳು:ಅಂಗಡಿ/ಮಳಿಗೆ ಮಾಲೀಕರು, ವಾಚನಾಲಯ ನಡೆಸುವುದು, ಧಾರ್ಮಿಕ ಕೆಲಸ ಇತ್ಯಾದಿ.

ಇ.ಎನ್.ಎಫ್.ಜೆ. (ENFJ):ವ್ಯಕ್ತಿಗಳು ಬಹಿರ್ಮುಖಿ, ಸಹಜ ಜ್ಞಾನಿ, ಸಂವೇದನಾಶೀಲ, ತೀರ್ಪುಗಾರಿಕೆ ಸ್ವಭಾವದ ಇವರಿಗೆ ಸೂಕ್ತ ವೃತ್ತಿಗಳು:ಸಲಹೆಗಾರರು, ಮನೋರೋಗ ತಜ್ಞರು, ಸಮಾಜ ಸೇವಕರು ಇತ್ಯಾದಿ.

ಐ.ಎನ್.ಎಫ್.ಜೆ. (INFJ):ವ್ಯಕ್ತಿಗಳು ಅಂತರ್ಮುಖಿ, ಸಹಜ ಜ್ಞಾನಿ, ಸಂವೇದನಾಶೀಲ, ತೀರ್ಪುಗಾರಿಕೆ ಸ್ವಭಾವದ ಇವರಿಗೆ ಸೂಕ್ತ ವೃತ್ತಿಗಳು: ವೈದ್ಯರು, ಸಂಗೀತಗಾರರು, ಧಾರ್ಮಿಕ ಕೆಲಸ ಇತ್ಯಾದಿ.

ಇ.ಎಸ್.ಎಫ್.ಪಿ. (ESFP):ವ್ಯಕ್ತಿಗಳು ಬಹಿರ್ಮುಖಿ, ಸೂಕ್ಷ್ಮತೆ, ಸಂವೇದನಾಶೀಲ ಮತ್ತು ಗ್ರಹಿಕಾ ಶಕ್ತಿಯ ಸ್ವಭಾವದ ಇವರಿಗೆ ಸೂಕ್ತ ವೃತ್ತಿಗಳು:ಸಂಗೀತ/ನೃತ್ಯ ಕಲಾವಿದರು,ಸಿನಿಮಾ/ನಾಟಕ ನಟನೆ,ಇತ್ಯಾದಿ.

ಐ.ಎಸ್.ಎಫ್.ಪಿ. (ISFP):ವ್ಯಕ್ತಿಗಳು ಅಂತರ್ಮುಖಿ, ಸೂಕ್ಷ್ಮತೆ,  ಸಂವೇದನಾಶೀಲ ಮತ್ತು ಗ್ರಹಿಕಾ ಶಕ್ತಿಯ ಸ್ವಭಾವದ ಇವರಿಗೆ ಸೂಕ್ತ ವೃತ್ತಿಗಳು: ಶಿಕ್ಷಕರು, ಸಲಹೆಗಾರರು, ಅರಣ್ಯಾಧಿಕಾರಿ, ಇತ್ಯಾದಿ.

ಇ.ಎನ್.ಎಫ್.ಪಿ. (ENFP):ವ್ಯಕ್ತಿಗಳು ಬಹಿರ್ಮುಖಿ, ಸಹಜ ಜ್ಞಾನಿ,  ಸಂವೇದನಾಶೀಲ ಮತ್ತು ಗ್ರಹಿಕಾ ಶಕ್ತಿಯ ಸ್ವಭಾವದ ಇವರಿಗೆ ಸೂಕ್ತ ವೃತ್ತಿಗಳು: ಲೇಖಕರು, ಪತ್ರಿಕೋದ್ಯಮ, ರಾಯಭಾರಿ ಇತ್ಯಾದಿ.

ಐ.ಎನ್.ಎಫ್.ಪಿ. (INFP):ವ್ಯಕ್ತಿಗಳು ಅಂತರ್ಮುಖಿ, ಸಹಜ ಜ್ಞಾನಿ, ಸಂವೇದನಾಶೀಲ ಮತ್ತು ಗ್ರಹಿಕಾ ಶಕ್ತಿಯ ಸ್ವಭಾವದ ಇವರಿಗೆ ಸೂಕ್ತ ವೃತ್ತಿಗಳು:ಲೇಖಕರು, ಶಿಕ್ಷಕರು, ಮನೋತಜ್ಞರು, ಇತ್ಯಾದಿ.

ಇಲ್ಲಿ ಬಹಳ ಮುಖ್ಯವಾಗಿ ಗಮನಿಸಬೇಕಾದ ಅಂಶಗಳೆಂದರೆ:

1. ಎಂಬಿಟಿಐ ಸೂಚ್ಯಾಂಕ ನಿಮ್ಮ ಜನ್ಮಕ್ಕೆ ಅಂಟಿದ ಹಣೆಪಟ್ಟಿ ಅಲ್ಲ. ಇದು ನಿಮ್ಮ ಇಂದಿನ ವ್ಯಕ್ತಿತ್ವವನ್ನು ಸೂಚಿಸುತ್ತದೆ. ಇದರಲ್ಲಿ ಕಂಡು ಬಂದ ಗುಣಲಕ್ಷಣಗಳು ಕಾಲಕಾಲಕ್ಕೆ ಬದಲಾಗುತ್ತವೆ ಮತ್ತು ಸ್ವಲ್ಪ ಪ್ರಯತ್ನದಿಂದ ನೀವು ಯಾವಾಗ ಬೇಕಾದರೂ ಬದಲಾಯಿಸಿಕೊಳ್ಳಬಹುದು. ಹಾಗಾಗಿ ಅಂತರ್ಮುಖಿಗಳು ಬಹಿರ್ಮುಖಿಯಾಗಬಹುದು; ಚಿಂತನಾಶೀಲರು ಕ್ರಿಯಾಶೀಲರಾಗಬಹುದು. ಅಂತಹ ಸಂದರ್ಭದಲ್ಲಿ ನಿಮ್ಮ ಸೂಚ್ಯಾಂಕ, ಅದರ ವಿಶ್ಲೇಷಣೆ ಮತ್ತು ವೃತ್ತಿ ಸಹ ಬದಲಾಗಬಹುದು.

2. ಎಂಬಿಟಿಐ ಸೂಚ್ಯಾಂಕವನ್ನು ಬಹಳಷ್ಟು ಕಂಪನಿಗಳು, ಜಾಲತಾಣಗಳು, ಸಲಹೆಗಾರರು ವಿಧವಿಧವಾಗಿ ಅರ್ಥೈಸುತ್ತಾರೆ. ನಮ್ಮ ದೇಶದಲ್ಲಿ ಜ್ಯೋತಿಷಿಗಳು ಜಾತಕ ನೋಡಿ ಭವಿಷ್ಯ ಹೇಳುವಂತೆ, ಎಲ್ಲರೂ ತಮ್ಮದೇ ಆದ ವಿಶ್ಲೇಷಣೆ ಮತ್ತು ವೃತ್ತಿಗಳನ್ನು ಸೂಚಿಸುತ್ತಾರೆ. ಆದ್ದರಿಂದ ಇದು ವಿಜ್ಞಾನಿ ಎನಿಸಿಕೊಳ್ಳದೆ ಅರೆ-ವಿಜ್ಞಾನದ ಗುಂಪಿಗೆ ಸೇರಿದೆ. ಇದನ್ನು ಮನಸ್ಸಿನಲ್ಲಿಟ್ಟುಕೊಂಡು ಭವಿಷ್ಯದ ನಿರ್ಧಾರ ತೆಗೆದುಕೊಳ್ಳಿ ಎಂದು ನನ್ನ ಸವಿನಯ ಸಲಹೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...

ಮಹಿಳಾ ಮೀಸಲು ಮಸೂದೆ 2023ರಲ್ಲೇ ಗೆದ್ದಿದೆ, ಈಗ ಸೋತಿರುವುದು ಮೋದಿ ಸರ್ಕಾರ

ಮೋದಿ ಸರ್ಕಾರ ಮಂಡಿಸಿದ್ದ ಮಹಿಳಾ ಮೀಸಲಾತಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾಗಿದೆ ಎಂಬುವುದು ದೇಶದಲ್ಲಿ ಪ್ರಸ್ತುತ ದೊಡ್ಡ ಚರ್ಚೆಯ ವಿಷಯವಾಗಿದೆ. ಕಾಂಗ್ರೆಸ್‌ ನೇತೃತ್ವದಲ್ಲಿ ವಿಪಕ್ಷಗಳು ಮಸೂದೆಯನ್ನು ಸೋಲಿಸುವ ಮೂಲಕ ದೇಶದ ಮಹಿಳೆಯರ ಸಬಲೀಕರಣಕ್ಕೆ...

ಕ್ಯಾಂಪಸ್ ಜಾತಿ ತಾರತಮ್ಯ ವಿರುದ್ಧದ ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ರಾಜ್ಯ ಸಚಿವ ಸಂಪುಟ ಗುರುವಾರ (ಏ.16) ರಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ'ಗೆ ಅನುಮೋದನೆ ನೀಡಿತು. ಜೊತೆಗೆ, ಪ್ರಮುಖ ಮೂಲಸೌಕರ್ಯ ಮತ್ತು...