Homeಕರ್ನಾಟಕಗದ್ದೆಯಂತಾದ ತುಮಕೂರಿನ ಪೆರುಮನಹಳ್ಳಿ ರಸ್ತೆ; ಜನರ ಗೋಳು ಕೇಳೋರೇ ಇಲ್ಲ

ಗದ್ದೆಯಂತಾದ ತುಮಕೂರಿನ ಪೆರುಮನಹಳ್ಳಿ ರಸ್ತೆ; ಜನರ ಗೋಳು ಕೇಳೋರೇ ಇಲ್ಲ

ಎರಡು ಬಾರಿ ಶಾಸಕರಾಗಿದ್ದ  ಬಿ.ಸುರೇಶ್ ಗೌಡ ಹೆಬ್ಬೂರು ಭಾಗದ ರಸ್ತೆ ಅಬಿವೃದ್ಧಿಗೆ ಹೆಚ್ಚು ಒತ್ತು ನೀಡಿದರೇ ಹೊರತು ಬೆಳ್ಳಾವಿ ಹೋಬಳಿಯ ಅಭಿವೃದ್ಧಿಯನ್ನ ಕಡೆಗಣಿಸುತ್ತಾ ಬಂದರು ಎನ್ನಲಾಗಿದೆ.

- Advertisement -
- Advertisement -

ದೇಶಕ್ಕೆ ಸ್ವಾತಂತ್ರ್ಯ ಬಂದ ಏಳು ದಶಕಗಳು ಉರುಳಿದರೂ ಸರಿಯಾದ ರಸ್ತೆ ಕಾಣದ ಹಲವು ಹಳ್ಳಿಗಳು ನಮ್ಮ ಕಣ್ಣಮುಂದೆ ಇವೆ. ರಸ್ತೆಗಳ ಅಭಿವೃದ್ಧಿಗಾಗಿ ಕೋಟಿಕೋಟಿ ರೂಪಾಯಿ ಬಿಡುಗಡೆಯಾದರೂ ಇಂದಿಗೂ ಹಲವು ರಸ್ತೆಗಳು ಟಾರಿನ ಮುಖ ಕಂಡಿಲ್ಲ. ಹಾಗಾಗಿ ಜನರ ಗೋಳನ್ನು ಕೇಳೋರೇ ಇಲ್ಲವಾಗಿದೆ.

ಹೌದು, ಇಂತಹ ಸಮಸ್ಯೆಗೆ ಸಾಕ್ಷಿಯಾಗಿದೆ ತುಮಕೂರು ತಾಲೂಕು ಪೆರುಮನಹಳ್ಳಿ ರಸ್ತೆ. ತುಮಕೂರು ಮಹಾ ನಗರಪಾಲಿಕೆ ವ್ಯಾಪ್ತಿಗೆ ಒಳಪಟ್ಟಿರುವ ಮಲ್ಲಸಂದ್ರಕ್ಕೆ ಕೂಗಳತೆ ದೂರದಲ್ಲಿ ಪೆರುಮನಹಳ್ಳಿ ಮತ್ತು ದೊಡ್ಡನಾರವಂಗಲ ಇವೆ. ಈ ಎರಡು ಗ್ರಾಮಗಳ ನಡುವೆ ಇರುವ ರಸ್ತೆ ಮಳೆಗಾಲದಲ್ಲಿ ಅಕ್ಷರಶಃ ಗದ್ದೆಯಾಗುತ್ತದೆ.

ತುಮಕೂರು ಗ್ರಾಮಾಂತರ ಕ್ಷೇತ್ರದಲ್ಲಿ ಬರುವ ಬೆಳ್ಳಾವಿ ಹೋಬಳಿಯ ಈ ಭಾಗದ ರಸ್ತೆಗಳು ಅಭಿವೃದ್ಧಿಯನ್ನೇ ಕಂಡಿಲ್ಲ. ಎರಡು ಬಾರಿ ಶಾಸಕರಾಗಿದ್ದ  ಬಿ.ಸುರೇಶ್ ಗೌಡ ಹೆಬ್ಬೂರು ಭಾಗದ ರಸ್ತೆ ಅಬಿವೃದ್ಧಿಗೆ ಹೆಚ್ಚು ಒತ್ತು ನೀಡಿದರೇ ಹೊರತು ಬೆಳ್ಳಾವಿ ಹೋಬಳಿಯ ಅಭಿವೃದ್ಧಿಯನ್ನ ಕಡೆಗಣಿಸುತ್ತಾ ಬಂದರು. ಇದಕ್ಕೆ ಇಲ್ಲಿನ ರಸ್ತೆಗಳೇ ಸಾಕ್ಷಿಯಾಗಿವೆ.

ಶಾಸಕರು ಮತ್ತು ಸಂಸದರ ನಿಧಿಗೆ ಕೋಟ್ಯಂತರ ರೂಪಾಯ ಅನುದಾನ ಬರುತ್ತದೆ. ಈ ಹಣವನ್ನು ರಸ್ತೆಗಳ ಅಭಿವೃದ್ದಿಗೆ ಬಳಸಲು ಅವಕಾಶವಿದೆ. ಜೊತೆಗೆ ರಸ್ತೆಗಳ ಡಾಂಬರೀಕರಣಕ್ಕೆ ಹಣ ಬಿಡುಗಡೆ ಆಗುತ್ತದೆ. ಆದರೂ ರಸ್ತೆಗಳಿಗೆ ಟಾರ್ ಹಾಕಿಲ್ಲ. ಇದು ಸೇಡಿನ ರಾಜಕಾರಣದ ಒಳಸುಳಿ ಎಂದು ವಿಶ್ಲೇಷಿಸಲಾಗುತ್ತಿದೆ.ಈ ಸಂಬಂಧ ಸ್ಥಳೀಯ ನಿವಾಸಿ ಶ್ರೀನಿವಾಸಮೂರ್ತಿ ನಾನುಗೌರಿ.ಕಾಂ ಜೊತೆ ಸಮಸ್ಯೆ ಬಿಡಿಸಿಟ್ಟರು. ಮಳೆ ಬಂದರೆ ಸಮಸ್ಯೆ ಎದುರಾಗುತ್ತದೆ. ದೊಡ್ಡನಾರವಂಗಲ ಮತ್ತು ಬೆಳ್ಳಾವಿಗೆ ಇದೇ ರಸ್ತೆಯಲ್ಲಿ ಹೋಗಬೇಕು. ಇಲ್ಲವೇ ಸುತ್ತುಬಳಸಿ ಬರಬೇಕು. ಬೈಕ್ ಗಳಲ್ಲಿ ಹೋದರೆ ಮಡ್ ಗಾರ್ಡ್ ತೆಗೆದು ಬೈಕಿನ ಜೊತೆ ಮುಖಕ್ಕೆ ಕೆಸರು ಸಿಡಿಸಿಕೊಂಡು ಬೀಳದ ಹಾಗೆ ಸಮತೋಲನವಾಗಿ ಹೋಗುವುದು ಸವಾಲಿನ ಕೆಲಸ.

 

ಹೆಂಗಸರು, ವೃದ್ದರು ಮತ್ತು ಮಕ್ಕಳು ಕೆಸರುಗದ್ದೆ ರಸ್ತೆಯಲ್ಲಿ ಬೀಳದೆ ಇರಲಾರರು. ಬೈಕ್ ಬಿಟ್ಟರೆ ದಪ್ಪಲಿ ಕೈಯಲ್ಲಿಡಿದುಕೊಂಡು ನಡೆಯಬೇಕು. ಬುರುಜೆ ಮತ್ತಿಕೊಂಡು ಕಷ್ಟಪಟ್ಟು ಮನೆ ಸೇರಬೇಕು. ಪೆರುಮನಹಳ್ಳಿ ಗಂಗಣ್ಣ ಮತ್ತು ರುದ್ರೇಶ್ ಪ್ರಯತ್ನದಿಂದ ಒಂದಿಷ್ಟು ದೂರ ಉತ್ತಮ ರಸ್ತೆಯ ಭಾಗ್ಯ ದೊರೆಕಿತ್ತು. ಈಗ ಯಾರಿಗೇಳೋದು ಯಾರೂ ನಮ್ಮ ಸಮಸ್ಯೆಗೆ ಸ್ಪಂದಿಸುತ್ತಿಲ್ಲ ಎಂದು ನೋವು ತೋಡಿಕೊಂಡರು.

ಪ್ರತಿ ಮಳೆಗಾಲದಲ್ಲೂ ಈ ಸಮಸ್ಯೆ ತಪ್ಪಿದ್ದಲ್ಲ. ಪಾದಾಚಾರಿಗಳು ಜೀವ ಕೈಯಲ್ಲಿಡಿದುಕೊಂಡು ಭಯದಲ್ಲೇ ತೆರಳುವಂತಹ ಪರಿಸ್ಥಿತಿ ಎದುರಾಗುತ್ತದೆ. ಎರಡು ಬಾರಿ ಶಾಸಕರಾಗಿದ್ದ ಬಿ.ಸುರೇಶ್ ಗೌಡ ನಮ್ಮ ಗ್ರಾಮಗಳನ್ನು ನಿರ್ಲಕ್ಷಿಸಿದರು. ನಾವು ಸುರೇಶ್ ಗೌಡರಿಗೆ ಓಟು ಹಾಕಿದ್ದೇವೆ. ಆದರು ನಮ್ಮ ಕಡೆ ವಕ್ರ ದೃಷ್ಟಿ ಬೀರಿದ್ದಾರೆ. ಈಗಿನ ಶಾಸಕ ಗೌರಿ ಶಂಕರ್ ಅವರಿಗೆ ರಸ್ತೆಗೆ ಡಾಂಬರೀಕರಣ ಮಾಡಿಸಿ ಎಂದು ಮನವಿ ಮಾಡಿದ್ದೇವೆ. ಮಾಡಿಸಿಕೊಡುವ ಭರವಸೆ ನೀಡಿದ್ದಾರೆ ಎನ್ನುತ್ತಾರೆ ಪೆರುಮನಹಳ್ಳಿ ಗ್ರಾಮಸ್ಥರು.

ಈ ಭಾಗದಲ್ಲಿ ಕೆಲವು ಕೈಗಾರಿಕೆಗಳು ಇದ್ದು, ನಿತ್ಯವೂ ಲಾರಿಗಳು ಓಡಾಡುತ್ತವೆ. ಆದರೆ ರಸ್ತೆ ಹಾಳಾಗಿರುವುದರಿಂದ ಜನ ಸಂಚಾರಕ್ಕೆ ತೊಂದರೆಯಾಗಿದೆ. ಜನರು ರಸ್ತೆಗೆ ಇಳಿಯುವುದೇ ದುಸ್ಥರವಾಗಿದೆ. ದ್ವಿಚಕ್ರ ವಾಹನ ಸವಾರರು ರಸ್ತೆಯಲ್ಲಿ ಬಂದರೆ ಸಾಕು ಕೆಸರು ಸ್ನಾನವಾಗುತ್ತದೆ ಎಂದು ಉಭಯ ಗ್ರಾಮಸ್ಥರು ದೂರಿದ್ದಾರೆ.


ಓದಿ: ಬಾಯ್ಕಟ್‌ ಚೀನಾ ಅಭಿಯಾನ: ಸಂಪೂರ್ಣ ಭಾರತೀಯ ಫೋನು ತಯಾರಿಸೋ ಕಂಪನಿ ಯಾವುದೂ ಗೊತ್ತೆ?


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...