Homeಕರ್ನಾಟಕಗದ್ದೆಯಂತಾದ ತುಮಕೂರಿನ ಪೆರುಮನಹಳ್ಳಿ ರಸ್ತೆ; ಜನರ ಗೋಳು ಕೇಳೋರೇ ಇಲ್ಲ

ಗದ್ದೆಯಂತಾದ ತುಮಕೂರಿನ ಪೆರುಮನಹಳ್ಳಿ ರಸ್ತೆ; ಜನರ ಗೋಳು ಕೇಳೋರೇ ಇಲ್ಲ

ಎರಡು ಬಾರಿ ಶಾಸಕರಾಗಿದ್ದ  ಬಿ.ಸುರೇಶ್ ಗೌಡ ಹೆಬ್ಬೂರು ಭಾಗದ ರಸ್ತೆ ಅಬಿವೃದ್ಧಿಗೆ ಹೆಚ್ಚು ಒತ್ತು ನೀಡಿದರೇ ಹೊರತು ಬೆಳ್ಳಾವಿ ಹೋಬಳಿಯ ಅಭಿವೃದ್ಧಿಯನ್ನ ಕಡೆಗಣಿಸುತ್ತಾ ಬಂದರು ಎನ್ನಲಾಗಿದೆ.

- Advertisement -
- Advertisement -

ದೇಶಕ್ಕೆ ಸ್ವಾತಂತ್ರ್ಯ ಬಂದ ಏಳು ದಶಕಗಳು ಉರುಳಿದರೂ ಸರಿಯಾದ ರಸ್ತೆ ಕಾಣದ ಹಲವು ಹಳ್ಳಿಗಳು ನಮ್ಮ ಕಣ್ಣಮುಂದೆ ಇವೆ. ರಸ್ತೆಗಳ ಅಭಿವೃದ್ಧಿಗಾಗಿ ಕೋಟಿಕೋಟಿ ರೂಪಾಯಿ ಬಿಡುಗಡೆಯಾದರೂ ಇಂದಿಗೂ ಹಲವು ರಸ್ತೆಗಳು ಟಾರಿನ ಮುಖ ಕಂಡಿಲ್ಲ. ಹಾಗಾಗಿ ಜನರ ಗೋಳನ್ನು ಕೇಳೋರೇ ಇಲ್ಲವಾಗಿದೆ.

ಹೌದು, ಇಂತಹ ಸಮಸ್ಯೆಗೆ ಸಾಕ್ಷಿಯಾಗಿದೆ ತುಮಕೂರು ತಾಲೂಕು ಪೆರುಮನಹಳ್ಳಿ ರಸ್ತೆ. ತುಮಕೂರು ಮಹಾ ನಗರಪಾಲಿಕೆ ವ್ಯಾಪ್ತಿಗೆ ಒಳಪಟ್ಟಿರುವ ಮಲ್ಲಸಂದ್ರಕ್ಕೆ ಕೂಗಳತೆ ದೂರದಲ್ಲಿ ಪೆರುಮನಹಳ್ಳಿ ಮತ್ತು ದೊಡ್ಡನಾರವಂಗಲ ಇವೆ. ಈ ಎರಡು ಗ್ರಾಮಗಳ ನಡುವೆ ಇರುವ ರಸ್ತೆ ಮಳೆಗಾಲದಲ್ಲಿ ಅಕ್ಷರಶಃ ಗದ್ದೆಯಾಗುತ್ತದೆ.

ತುಮಕೂರು ಗ್ರಾಮಾಂತರ ಕ್ಷೇತ್ರದಲ್ಲಿ ಬರುವ ಬೆಳ್ಳಾವಿ ಹೋಬಳಿಯ ಈ ಭಾಗದ ರಸ್ತೆಗಳು ಅಭಿವೃದ್ಧಿಯನ್ನೇ ಕಂಡಿಲ್ಲ. ಎರಡು ಬಾರಿ ಶಾಸಕರಾಗಿದ್ದ  ಬಿ.ಸುರೇಶ್ ಗೌಡ ಹೆಬ್ಬೂರು ಭಾಗದ ರಸ್ತೆ ಅಬಿವೃದ್ಧಿಗೆ ಹೆಚ್ಚು ಒತ್ತು ನೀಡಿದರೇ ಹೊರತು ಬೆಳ್ಳಾವಿ ಹೋಬಳಿಯ ಅಭಿವೃದ್ಧಿಯನ್ನ ಕಡೆಗಣಿಸುತ್ತಾ ಬಂದರು. ಇದಕ್ಕೆ ಇಲ್ಲಿನ ರಸ್ತೆಗಳೇ ಸಾಕ್ಷಿಯಾಗಿವೆ.

ಶಾಸಕರು ಮತ್ತು ಸಂಸದರ ನಿಧಿಗೆ ಕೋಟ್ಯಂತರ ರೂಪಾಯ ಅನುದಾನ ಬರುತ್ತದೆ. ಈ ಹಣವನ್ನು ರಸ್ತೆಗಳ ಅಭಿವೃದ್ದಿಗೆ ಬಳಸಲು ಅವಕಾಶವಿದೆ. ಜೊತೆಗೆ ರಸ್ತೆಗಳ ಡಾಂಬರೀಕರಣಕ್ಕೆ ಹಣ ಬಿಡುಗಡೆ ಆಗುತ್ತದೆ. ಆದರೂ ರಸ್ತೆಗಳಿಗೆ ಟಾರ್ ಹಾಕಿಲ್ಲ. ಇದು ಸೇಡಿನ ರಾಜಕಾರಣದ ಒಳಸುಳಿ ಎಂದು ವಿಶ್ಲೇಷಿಸಲಾಗುತ್ತಿದೆ.ಈ ಸಂಬಂಧ ಸ್ಥಳೀಯ ನಿವಾಸಿ ಶ್ರೀನಿವಾಸಮೂರ್ತಿ ನಾನುಗೌರಿ.ಕಾಂ ಜೊತೆ ಸಮಸ್ಯೆ ಬಿಡಿಸಿಟ್ಟರು. ಮಳೆ ಬಂದರೆ ಸಮಸ್ಯೆ ಎದುರಾಗುತ್ತದೆ. ದೊಡ್ಡನಾರವಂಗಲ ಮತ್ತು ಬೆಳ್ಳಾವಿಗೆ ಇದೇ ರಸ್ತೆಯಲ್ಲಿ ಹೋಗಬೇಕು. ಇಲ್ಲವೇ ಸುತ್ತುಬಳಸಿ ಬರಬೇಕು. ಬೈಕ್ ಗಳಲ್ಲಿ ಹೋದರೆ ಮಡ್ ಗಾರ್ಡ್ ತೆಗೆದು ಬೈಕಿನ ಜೊತೆ ಮುಖಕ್ಕೆ ಕೆಸರು ಸಿಡಿಸಿಕೊಂಡು ಬೀಳದ ಹಾಗೆ ಸಮತೋಲನವಾಗಿ ಹೋಗುವುದು ಸವಾಲಿನ ಕೆಲಸ.

 

ಹೆಂಗಸರು, ವೃದ್ದರು ಮತ್ತು ಮಕ್ಕಳು ಕೆಸರುಗದ್ದೆ ರಸ್ತೆಯಲ್ಲಿ ಬೀಳದೆ ಇರಲಾರರು. ಬೈಕ್ ಬಿಟ್ಟರೆ ದಪ್ಪಲಿ ಕೈಯಲ್ಲಿಡಿದುಕೊಂಡು ನಡೆಯಬೇಕು. ಬುರುಜೆ ಮತ್ತಿಕೊಂಡು ಕಷ್ಟಪಟ್ಟು ಮನೆ ಸೇರಬೇಕು. ಪೆರುಮನಹಳ್ಳಿ ಗಂಗಣ್ಣ ಮತ್ತು ರುದ್ರೇಶ್ ಪ್ರಯತ್ನದಿಂದ ಒಂದಿಷ್ಟು ದೂರ ಉತ್ತಮ ರಸ್ತೆಯ ಭಾಗ್ಯ ದೊರೆಕಿತ್ತು. ಈಗ ಯಾರಿಗೇಳೋದು ಯಾರೂ ನಮ್ಮ ಸಮಸ್ಯೆಗೆ ಸ್ಪಂದಿಸುತ್ತಿಲ್ಲ ಎಂದು ನೋವು ತೋಡಿಕೊಂಡರು.

ಪ್ರತಿ ಮಳೆಗಾಲದಲ್ಲೂ ಈ ಸಮಸ್ಯೆ ತಪ್ಪಿದ್ದಲ್ಲ. ಪಾದಾಚಾರಿಗಳು ಜೀವ ಕೈಯಲ್ಲಿಡಿದುಕೊಂಡು ಭಯದಲ್ಲೇ ತೆರಳುವಂತಹ ಪರಿಸ್ಥಿತಿ ಎದುರಾಗುತ್ತದೆ. ಎರಡು ಬಾರಿ ಶಾಸಕರಾಗಿದ್ದ ಬಿ.ಸುರೇಶ್ ಗೌಡ ನಮ್ಮ ಗ್ರಾಮಗಳನ್ನು ನಿರ್ಲಕ್ಷಿಸಿದರು. ನಾವು ಸುರೇಶ್ ಗೌಡರಿಗೆ ಓಟು ಹಾಕಿದ್ದೇವೆ. ಆದರು ನಮ್ಮ ಕಡೆ ವಕ್ರ ದೃಷ್ಟಿ ಬೀರಿದ್ದಾರೆ. ಈಗಿನ ಶಾಸಕ ಗೌರಿ ಶಂಕರ್ ಅವರಿಗೆ ರಸ್ತೆಗೆ ಡಾಂಬರೀಕರಣ ಮಾಡಿಸಿ ಎಂದು ಮನವಿ ಮಾಡಿದ್ದೇವೆ. ಮಾಡಿಸಿಕೊಡುವ ಭರವಸೆ ನೀಡಿದ್ದಾರೆ ಎನ್ನುತ್ತಾರೆ ಪೆರುಮನಹಳ್ಳಿ ಗ್ರಾಮಸ್ಥರು.

ಈ ಭಾಗದಲ್ಲಿ ಕೆಲವು ಕೈಗಾರಿಕೆಗಳು ಇದ್ದು, ನಿತ್ಯವೂ ಲಾರಿಗಳು ಓಡಾಡುತ್ತವೆ. ಆದರೆ ರಸ್ತೆ ಹಾಳಾಗಿರುವುದರಿಂದ ಜನ ಸಂಚಾರಕ್ಕೆ ತೊಂದರೆಯಾಗಿದೆ. ಜನರು ರಸ್ತೆಗೆ ಇಳಿಯುವುದೇ ದುಸ್ಥರವಾಗಿದೆ. ದ್ವಿಚಕ್ರ ವಾಹನ ಸವಾರರು ರಸ್ತೆಯಲ್ಲಿ ಬಂದರೆ ಸಾಕು ಕೆಸರು ಸ್ನಾನವಾಗುತ್ತದೆ ಎಂದು ಉಭಯ ಗ್ರಾಮಸ್ಥರು ದೂರಿದ್ದಾರೆ.


ಓದಿ: ಬಾಯ್ಕಟ್‌ ಚೀನಾ ಅಭಿಯಾನ: ಸಂಪೂರ್ಣ ಭಾರತೀಯ ಫೋನು ತಯಾರಿಸೋ ಕಂಪನಿ ಯಾವುದೂ ಗೊತ್ತೆ?


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...