Homeಕರ್ನಾಟಕಗದ್ದೆಯಂತಾದ ತುಮಕೂರಿನ ಪೆರುಮನಹಳ್ಳಿ ರಸ್ತೆ; ಜನರ ಗೋಳು ಕೇಳೋರೇ ಇಲ್ಲ

ಗದ್ದೆಯಂತಾದ ತುಮಕೂರಿನ ಪೆರುಮನಹಳ್ಳಿ ರಸ್ತೆ; ಜನರ ಗೋಳು ಕೇಳೋರೇ ಇಲ್ಲ

ಎರಡು ಬಾರಿ ಶಾಸಕರಾಗಿದ್ದ  ಬಿ.ಸುರೇಶ್ ಗೌಡ ಹೆಬ್ಬೂರು ಭಾಗದ ರಸ್ತೆ ಅಬಿವೃದ್ಧಿಗೆ ಹೆಚ್ಚು ಒತ್ತು ನೀಡಿದರೇ ಹೊರತು ಬೆಳ್ಳಾವಿ ಹೋಬಳಿಯ ಅಭಿವೃದ್ಧಿಯನ್ನ ಕಡೆಗಣಿಸುತ್ತಾ ಬಂದರು ಎನ್ನಲಾಗಿದೆ.

- Advertisement -
- Advertisement -

ದೇಶಕ್ಕೆ ಸ್ವಾತಂತ್ರ್ಯ ಬಂದ ಏಳು ದಶಕಗಳು ಉರುಳಿದರೂ ಸರಿಯಾದ ರಸ್ತೆ ಕಾಣದ ಹಲವು ಹಳ್ಳಿಗಳು ನಮ್ಮ ಕಣ್ಣಮುಂದೆ ಇವೆ. ರಸ್ತೆಗಳ ಅಭಿವೃದ್ಧಿಗಾಗಿ ಕೋಟಿಕೋಟಿ ರೂಪಾಯಿ ಬಿಡುಗಡೆಯಾದರೂ ಇಂದಿಗೂ ಹಲವು ರಸ್ತೆಗಳು ಟಾರಿನ ಮುಖ ಕಂಡಿಲ್ಲ. ಹಾಗಾಗಿ ಜನರ ಗೋಳನ್ನು ಕೇಳೋರೇ ಇಲ್ಲವಾಗಿದೆ.

ಹೌದು, ಇಂತಹ ಸಮಸ್ಯೆಗೆ ಸಾಕ್ಷಿಯಾಗಿದೆ ತುಮಕೂರು ತಾಲೂಕು ಪೆರುಮನಹಳ್ಳಿ ರಸ್ತೆ. ತುಮಕೂರು ಮಹಾ ನಗರಪಾಲಿಕೆ ವ್ಯಾಪ್ತಿಗೆ ಒಳಪಟ್ಟಿರುವ ಮಲ್ಲಸಂದ್ರಕ್ಕೆ ಕೂಗಳತೆ ದೂರದಲ್ಲಿ ಪೆರುಮನಹಳ್ಳಿ ಮತ್ತು ದೊಡ್ಡನಾರವಂಗಲ ಇವೆ. ಈ ಎರಡು ಗ್ರಾಮಗಳ ನಡುವೆ ಇರುವ ರಸ್ತೆ ಮಳೆಗಾಲದಲ್ಲಿ ಅಕ್ಷರಶಃ ಗದ್ದೆಯಾಗುತ್ತದೆ.

ತುಮಕೂರು ಗ್ರಾಮಾಂತರ ಕ್ಷೇತ್ರದಲ್ಲಿ ಬರುವ ಬೆಳ್ಳಾವಿ ಹೋಬಳಿಯ ಈ ಭಾಗದ ರಸ್ತೆಗಳು ಅಭಿವೃದ್ಧಿಯನ್ನೇ ಕಂಡಿಲ್ಲ. ಎರಡು ಬಾರಿ ಶಾಸಕರಾಗಿದ್ದ  ಬಿ.ಸುರೇಶ್ ಗೌಡ ಹೆಬ್ಬೂರು ಭಾಗದ ರಸ್ತೆ ಅಬಿವೃದ್ಧಿಗೆ ಹೆಚ್ಚು ಒತ್ತು ನೀಡಿದರೇ ಹೊರತು ಬೆಳ್ಳಾವಿ ಹೋಬಳಿಯ ಅಭಿವೃದ್ಧಿಯನ್ನ ಕಡೆಗಣಿಸುತ್ತಾ ಬಂದರು. ಇದಕ್ಕೆ ಇಲ್ಲಿನ ರಸ್ತೆಗಳೇ ಸಾಕ್ಷಿಯಾಗಿವೆ.

ಶಾಸಕರು ಮತ್ತು ಸಂಸದರ ನಿಧಿಗೆ ಕೋಟ್ಯಂತರ ರೂಪಾಯ ಅನುದಾನ ಬರುತ್ತದೆ. ಈ ಹಣವನ್ನು ರಸ್ತೆಗಳ ಅಭಿವೃದ್ದಿಗೆ ಬಳಸಲು ಅವಕಾಶವಿದೆ. ಜೊತೆಗೆ ರಸ್ತೆಗಳ ಡಾಂಬರೀಕರಣಕ್ಕೆ ಹಣ ಬಿಡುಗಡೆ ಆಗುತ್ತದೆ. ಆದರೂ ರಸ್ತೆಗಳಿಗೆ ಟಾರ್ ಹಾಕಿಲ್ಲ. ಇದು ಸೇಡಿನ ರಾಜಕಾರಣದ ಒಳಸುಳಿ ಎಂದು ವಿಶ್ಲೇಷಿಸಲಾಗುತ್ತಿದೆ.ಈ ಸಂಬಂಧ ಸ್ಥಳೀಯ ನಿವಾಸಿ ಶ್ರೀನಿವಾಸಮೂರ್ತಿ ನಾನುಗೌರಿ.ಕಾಂ ಜೊತೆ ಸಮಸ್ಯೆ ಬಿಡಿಸಿಟ್ಟರು. ಮಳೆ ಬಂದರೆ ಸಮಸ್ಯೆ ಎದುರಾಗುತ್ತದೆ. ದೊಡ್ಡನಾರವಂಗಲ ಮತ್ತು ಬೆಳ್ಳಾವಿಗೆ ಇದೇ ರಸ್ತೆಯಲ್ಲಿ ಹೋಗಬೇಕು. ಇಲ್ಲವೇ ಸುತ್ತುಬಳಸಿ ಬರಬೇಕು. ಬೈಕ್ ಗಳಲ್ಲಿ ಹೋದರೆ ಮಡ್ ಗಾರ್ಡ್ ತೆಗೆದು ಬೈಕಿನ ಜೊತೆ ಮುಖಕ್ಕೆ ಕೆಸರು ಸಿಡಿಸಿಕೊಂಡು ಬೀಳದ ಹಾಗೆ ಸಮತೋಲನವಾಗಿ ಹೋಗುವುದು ಸವಾಲಿನ ಕೆಲಸ.

 

ಹೆಂಗಸರು, ವೃದ್ದರು ಮತ್ತು ಮಕ್ಕಳು ಕೆಸರುಗದ್ದೆ ರಸ್ತೆಯಲ್ಲಿ ಬೀಳದೆ ಇರಲಾರರು. ಬೈಕ್ ಬಿಟ್ಟರೆ ದಪ್ಪಲಿ ಕೈಯಲ್ಲಿಡಿದುಕೊಂಡು ನಡೆಯಬೇಕು. ಬುರುಜೆ ಮತ್ತಿಕೊಂಡು ಕಷ್ಟಪಟ್ಟು ಮನೆ ಸೇರಬೇಕು. ಪೆರುಮನಹಳ್ಳಿ ಗಂಗಣ್ಣ ಮತ್ತು ರುದ್ರೇಶ್ ಪ್ರಯತ್ನದಿಂದ ಒಂದಿಷ್ಟು ದೂರ ಉತ್ತಮ ರಸ್ತೆಯ ಭಾಗ್ಯ ದೊರೆಕಿತ್ತು. ಈಗ ಯಾರಿಗೇಳೋದು ಯಾರೂ ನಮ್ಮ ಸಮಸ್ಯೆಗೆ ಸ್ಪಂದಿಸುತ್ತಿಲ್ಲ ಎಂದು ನೋವು ತೋಡಿಕೊಂಡರು.

ಪ್ರತಿ ಮಳೆಗಾಲದಲ್ಲೂ ಈ ಸಮಸ್ಯೆ ತಪ್ಪಿದ್ದಲ್ಲ. ಪಾದಾಚಾರಿಗಳು ಜೀವ ಕೈಯಲ್ಲಿಡಿದುಕೊಂಡು ಭಯದಲ್ಲೇ ತೆರಳುವಂತಹ ಪರಿಸ್ಥಿತಿ ಎದುರಾಗುತ್ತದೆ. ಎರಡು ಬಾರಿ ಶಾಸಕರಾಗಿದ್ದ ಬಿ.ಸುರೇಶ್ ಗೌಡ ನಮ್ಮ ಗ್ರಾಮಗಳನ್ನು ನಿರ್ಲಕ್ಷಿಸಿದರು. ನಾವು ಸುರೇಶ್ ಗೌಡರಿಗೆ ಓಟು ಹಾಕಿದ್ದೇವೆ. ಆದರು ನಮ್ಮ ಕಡೆ ವಕ್ರ ದೃಷ್ಟಿ ಬೀರಿದ್ದಾರೆ. ಈಗಿನ ಶಾಸಕ ಗೌರಿ ಶಂಕರ್ ಅವರಿಗೆ ರಸ್ತೆಗೆ ಡಾಂಬರೀಕರಣ ಮಾಡಿಸಿ ಎಂದು ಮನವಿ ಮಾಡಿದ್ದೇವೆ. ಮಾಡಿಸಿಕೊಡುವ ಭರವಸೆ ನೀಡಿದ್ದಾರೆ ಎನ್ನುತ್ತಾರೆ ಪೆರುಮನಹಳ್ಳಿ ಗ್ರಾಮಸ್ಥರು.

ಈ ಭಾಗದಲ್ಲಿ ಕೆಲವು ಕೈಗಾರಿಕೆಗಳು ಇದ್ದು, ನಿತ್ಯವೂ ಲಾರಿಗಳು ಓಡಾಡುತ್ತವೆ. ಆದರೆ ರಸ್ತೆ ಹಾಳಾಗಿರುವುದರಿಂದ ಜನ ಸಂಚಾರಕ್ಕೆ ತೊಂದರೆಯಾಗಿದೆ. ಜನರು ರಸ್ತೆಗೆ ಇಳಿಯುವುದೇ ದುಸ್ಥರವಾಗಿದೆ. ದ್ವಿಚಕ್ರ ವಾಹನ ಸವಾರರು ರಸ್ತೆಯಲ್ಲಿ ಬಂದರೆ ಸಾಕು ಕೆಸರು ಸ್ನಾನವಾಗುತ್ತದೆ ಎಂದು ಉಭಯ ಗ್ರಾಮಸ್ಥರು ದೂರಿದ್ದಾರೆ.


ಓದಿ: ಬಾಯ್ಕಟ್‌ ಚೀನಾ ಅಭಿಯಾನ: ಸಂಪೂರ್ಣ ಭಾರತೀಯ ಫೋನು ತಯಾರಿಸೋ ಕಂಪನಿ ಯಾವುದೂ ಗೊತ್ತೆ?


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...