Homeಕರ್ನಾಟಕಗದ್ದೆಯಂತಾದ ತುಮಕೂರಿನ ಪೆರುಮನಹಳ್ಳಿ ರಸ್ತೆ; ಜನರ ಗೋಳು ಕೇಳೋರೇ ಇಲ್ಲ

ಗದ್ದೆಯಂತಾದ ತುಮಕೂರಿನ ಪೆರುಮನಹಳ್ಳಿ ರಸ್ತೆ; ಜನರ ಗೋಳು ಕೇಳೋರೇ ಇಲ್ಲ

ಎರಡು ಬಾರಿ ಶಾಸಕರಾಗಿದ್ದ  ಬಿ.ಸುರೇಶ್ ಗೌಡ ಹೆಬ್ಬೂರು ಭಾಗದ ರಸ್ತೆ ಅಬಿವೃದ್ಧಿಗೆ ಹೆಚ್ಚು ಒತ್ತು ನೀಡಿದರೇ ಹೊರತು ಬೆಳ್ಳಾವಿ ಹೋಬಳಿಯ ಅಭಿವೃದ್ಧಿಯನ್ನ ಕಡೆಗಣಿಸುತ್ತಾ ಬಂದರು ಎನ್ನಲಾಗಿದೆ.

- Advertisement -
- Advertisement -

ದೇಶಕ್ಕೆ ಸ್ವಾತಂತ್ರ್ಯ ಬಂದ ಏಳು ದಶಕಗಳು ಉರುಳಿದರೂ ಸರಿಯಾದ ರಸ್ತೆ ಕಾಣದ ಹಲವು ಹಳ್ಳಿಗಳು ನಮ್ಮ ಕಣ್ಣಮುಂದೆ ಇವೆ. ರಸ್ತೆಗಳ ಅಭಿವೃದ್ಧಿಗಾಗಿ ಕೋಟಿಕೋಟಿ ರೂಪಾಯಿ ಬಿಡುಗಡೆಯಾದರೂ ಇಂದಿಗೂ ಹಲವು ರಸ್ತೆಗಳು ಟಾರಿನ ಮುಖ ಕಂಡಿಲ್ಲ. ಹಾಗಾಗಿ ಜನರ ಗೋಳನ್ನು ಕೇಳೋರೇ ಇಲ್ಲವಾಗಿದೆ.

ಹೌದು, ಇಂತಹ ಸಮಸ್ಯೆಗೆ ಸಾಕ್ಷಿಯಾಗಿದೆ ತುಮಕೂರು ತಾಲೂಕು ಪೆರುಮನಹಳ್ಳಿ ರಸ್ತೆ. ತುಮಕೂರು ಮಹಾ ನಗರಪಾಲಿಕೆ ವ್ಯಾಪ್ತಿಗೆ ಒಳಪಟ್ಟಿರುವ ಮಲ್ಲಸಂದ್ರಕ್ಕೆ ಕೂಗಳತೆ ದೂರದಲ್ಲಿ ಪೆರುಮನಹಳ್ಳಿ ಮತ್ತು ದೊಡ್ಡನಾರವಂಗಲ ಇವೆ. ಈ ಎರಡು ಗ್ರಾಮಗಳ ನಡುವೆ ಇರುವ ರಸ್ತೆ ಮಳೆಗಾಲದಲ್ಲಿ ಅಕ್ಷರಶಃ ಗದ್ದೆಯಾಗುತ್ತದೆ.

ತುಮಕೂರು ಗ್ರಾಮಾಂತರ ಕ್ಷೇತ್ರದಲ್ಲಿ ಬರುವ ಬೆಳ್ಳಾವಿ ಹೋಬಳಿಯ ಈ ಭಾಗದ ರಸ್ತೆಗಳು ಅಭಿವೃದ್ಧಿಯನ್ನೇ ಕಂಡಿಲ್ಲ. ಎರಡು ಬಾರಿ ಶಾಸಕರಾಗಿದ್ದ  ಬಿ.ಸುರೇಶ್ ಗೌಡ ಹೆಬ್ಬೂರು ಭಾಗದ ರಸ್ತೆ ಅಬಿವೃದ್ಧಿಗೆ ಹೆಚ್ಚು ಒತ್ತು ನೀಡಿದರೇ ಹೊರತು ಬೆಳ್ಳಾವಿ ಹೋಬಳಿಯ ಅಭಿವೃದ್ಧಿಯನ್ನ ಕಡೆಗಣಿಸುತ್ತಾ ಬಂದರು. ಇದಕ್ಕೆ ಇಲ್ಲಿನ ರಸ್ತೆಗಳೇ ಸಾಕ್ಷಿಯಾಗಿವೆ.

ಶಾಸಕರು ಮತ್ತು ಸಂಸದರ ನಿಧಿಗೆ ಕೋಟ್ಯಂತರ ರೂಪಾಯ ಅನುದಾನ ಬರುತ್ತದೆ. ಈ ಹಣವನ್ನು ರಸ್ತೆಗಳ ಅಭಿವೃದ್ದಿಗೆ ಬಳಸಲು ಅವಕಾಶವಿದೆ. ಜೊತೆಗೆ ರಸ್ತೆಗಳ ಡಾಂಬರೀಕರಣಕ್ಕೆ ಹಣ ಬಿಡುಗಡೆ ಆಗುತ್ತದೆ. ಆದರೂ ರಸ್ತೆಗಳಿಗೆ ಟಾರ್ ಹಾಕಿಲ್ಲ. ಇದು ಸೇಡಿನ ರಾಜಕಾರಣದ ಒಳಸುಳಿ ಎಂದು ವಿಶ್ಲೇಷಿಸಲಾಗುತ್ತಿದೆ.ಈ ಸಂಬಂಧ ಸ್ಥಳೀಯ ನಿವಾಸಿ ಶ್ರೀನಿವಾಸಮೂರ್ತಿ ನಾನುಗೌರಿ.ಕಾಂ ಜೊತೆ ಸಮಸ್ಯೆ ಬಿಡಿಸಿಟ್ಟರು. ಮಳೆ ಬಂದರೆ ಸಮಸ್ಯೆ ಎದುರಾಗುತ್ತದೆ. ದೊಡ್ಡನಾರವಂಗಲ ಮತ್ತು ಬೆಳ್ಳಾವಿಗೆ ಇದೇ ರಸ್ತೆಯಲ್ಲಿ ಹೋಗಬೇಕು. ಇಲ್ಲವೇ ಸುತ್ತುಬಳಸಿ ಬರಬೇಕು. ಬೈಕ್ ಗಳಲ್ಲಿ ಹೋದರೆ ಮಡ್ ಗಾರ್ಡ್ ತೆಗೆದು ಬೈಕಿನ ಜೊತೆ ಮುಖಕ್ಕೆ ಕೆಸರು ಸಿಡಿಸಿಕೊಂಡು ಬೀಳದ ಹಾಗೆ ಸಮತೋಲನವಾಗಿ ಹೋಗುವುದು ಸವಾಲಿನ ಕೆಲಸ.

 

ಹೆಂಗಸರು, ವೃದ್ದರು ಮತ್ತು ಮಕ್ಕಳು ಕೆಸರುಗದ್ದೆ ರಸ್ತೆಯಲ್ಲಿ ಬೀಳದೆ ಇರಲಾರರು. ಬೈಕ್ ಬಿಟ್ಟರೆ ದಪ್ಪಲಿ ಕೈಯಲ್ಲಿಡಿದುಕೊಂಡು ನಡೆಯಬೇಕು. ಬುರುಜೆ ಮತ್ತಿಕೊಂಡು ಕಷ್ಟಪಟ್ಟು ಮನೆ ಸೇರಬೇಕು. ಪೆರುಮನಹಳ್ಳಿ ಗಂಗಣ್ಣ ಮತ್ತು ರುದ್ರೇಶ್ ಪ್ರಯತ್ನದಿಂದ ಒಂದಿಷ್ಟು ದೂರ ಉತ್ತಮ ರಸ್ತೆಯ ಭಾಗ್ಯ ದೊರೆಕಿತ್ತು. ಈಗ ಯಾರಿಗೇಳೋದು ಯಾರೂ ನಮ್ಮ ಸಮಸ್ಯೆಗೆ ಸ್ಪಂದಿಸುತ್ತಿಲ್ಲ ಎಂದು ನೋವು ತೋಡಿಕೊಂಡರು.

ಪ್ರತಿ ಮಳೆಗಾಲದಲ್ಲೂ ಈ ಸಮಸ್ಯೆ ತಪ್ಪಿದ್ದಲ್ಲ. ಪಾದಾಚಾರಿಗಳು ಜೀವ ಕೈಯಲ್ಲಿಡಿದುಕೊಂಡು ಭಯದಲ್ಲೇ ತೆರಳುವಂತಹ ಪರಿಸ್ಥಿತಿ ಎದುರಾಗುತ್ತದೆ. ಎರಡು ಬಾರಿ ಶಾಸಕರಾಗಿದ್ದ ಬಿ.ಸುರೇಶ್ ಗೌಡ ನಮ್ಮ ಗ್ರಾಮಗಳನ್ನು ನಿರ್ಲಕ್ಷಿಸಿದರು. ನಾವು ಸುರೇಶ್ ಗೌಡರಿಗೆ ಓಟು ಹಾಕಿದ್ದೇವೆ. ಆದರು ನಮ್ಮ ಕಡೆ ವಕ್ರ ದೃಷ್ಟಿ ಬೀರಿದ್ದಾರೆ. ಈಗಿನ ಶಾಸಕ ಗೌರಿ ಶಂಕರ್ ಅವರಿಗೆ ರಸ್ತೆಗೆ ಡಾಂಬರೀಕರಣ ಮಾಡಿಸಿ ಎಂದು ಮನವಿ ಮಾಡಿದ್ದೇವೆ. ಮಾಡಿಸಿಕೊಡುವ ಭರವಸೆ ನೀಡಿದ್ದಾರೆ ಎನ್ನುತ್ತಾರೆ ಪೆರುಮನಹಳ್ಳಿ ಗ್ರಾಮಸ್ಥರು.

ಈ ಭಾಗದಲ್ಲಿ ಕೆಲವು ಕೈಗಾರಿಕೆಗಳು ಇದ್ದು, ನಿತ್ಯವೂ ಲಾರಿಗಳು ಓಡಾಡುತ್ತವೆ. ಆದರೆ ರಸ್ತೆ ಹಾಳಾಗಿರುವುದರಿಂದ ಜನ ಸಂಚಾರಕ್ಕೆ ತೊಂದರೆಯಾಗಿದೆ. ಜನರು ರಸ್ತೆಗೆ ಇಳಿಯುವುದೇ ದುಸ್ಥರವಾಗಿದೆ. ದ್ವಿಚಕ್ರ ವಾಹನ ಸವಾರರು ರಸ್ತೆಯಲ್ಲಿ ಬಂದರೆ ಸಾಕು ಕೆಸರು ಸ್ನಾನವಾಗುತ್ತದೆ ಎಂದು ಉಭಯ ಗ್ರಾಮಸ್ಥರು ದೂರಿದ್ದಾರೆ.


ಓದಿ: ಬಾಯ್ಕಟ್‌ ಚೀನಾ ಅಭಿಯಾನ: ಸಂಪೂರ್ಣ ಭಾರತೀಯ ಫೋನು ತಯಾರಿಸೋ ಕಂಪನಿ ಯಾವುದೂ ಗೊತ್ತೆ?


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...