Homeಕರ್ನಾಟಕಗದ್ದೆಯಂತಾದ ತುಮಕೂರಿನ ಪೆರುಮನಹಳ್ಳಿ ರಸ್ತೆ; ಜನರ ಗೋಳು ಕೇಳೋರೇ ಇಲ್ಲ

ಗದ್ದೆಯಂತಾದ ತುಮಕೂರಿನ ಪೆರುಮನಹಳ್ಳಿ ರಸ್ತೆ; ಜನರ ಗೋಳು ಕೇಳೋರೇ ಇಲ್ಲ

ಎರಡು ಬಾರಿ ಶಾಸಕರಾಗಿದ್ದ  ಬಿ.ಸುರೇಶ್ ಗೌಡ ಹೆಬ್ಬೂರು ಭಾಗದ ರಸ್ತೆ ಅಬಿವೃದ್ಧಿಗೆ ಹೆಚ್ಚು ಒತ್ತು ನೀಡಿದರೇ ಹೊರತು ಬೆಳ್ಳಾವಿ ಹೋಬಳಿಯ ಅಭಿವೃದ್ಧಿಯನ್ನ ಕಡೆಗಣಿಸುತ್ತಾ ಬಂದರು ಎನ್ನಲಾಗಿದೆ.

- Advertisement -
- Advertisement -

ದೇಶಕ್ಕೆ ಸ್ವಾತಂತ್ರ್ಯ ಬಂದ ಏಳು ದಶಕಗಳು ಉರುಳಿದರೂ ಸರಿಯಾದ ರಸ್ತೆ ಕಾಣದ ಹಲವು ಹಳ್ಳಿಗಳು ನಮ್ಮ ಕಣ್ಣಮುಂದೆ ಇವೆ. ರಸ್ತೆಗಳ ಅಭಿವೃದ್ಧಿಗಾಗಿ ಕೋಟಿಕೋಟಿ ರೂಪಾಯಿ ಬಿಡುಗಡೆಯಾದರೂ ಇಂದಿಗೂ ಹಲವು ರಸ್ತೆಗಳು ಟಾರಿನ ಮುಖ ಕಂಡಿಲ್ಲ. ಹಾಗಾಗಿ ಜನರ ಗೋಳನ್ನು ಕೇಳೋರೇ ಇಲ್ಲವಾಗಿದೆ.

ಹೌದು, ಇಂತಹ ಸಮಸ್ಯೆಗೆ ಸಾಕ್ಷಿಯಾಗಿದೆ ತುಮಕೂರು ತಾಲೂಕು ಪೆರುಮನಹಳ್ಳಿ ರಸ್ತೆ. ತುಮಕೂರು ಮಹಾ ನಗರಪಾಲಿಕೆ ವ್ಯಾಪ್ತಿಗೆ ಒಳಪಟ್ಟಿರುವ ಮಲ್ಲಸಂದ್ರಕ್ಕೆ ಕೂಗಳತೆ ದೂರದಲ್ಲಿ ಪೆರುಮನಹಳ್ಳಿ ಮತ್ತು ದೊಡ್ಡನಾರವಂಗಲ ಇವೆ. ಈ ಎರಡು ಗ್ರಾಮಗಳ ನಡುವೆ ಇರುವ ರಸ್ತೆ ಮಳೆಗಾಲದಲ್ಲಿ ಅಕ್ಷರಶಃ ಗದ್ದೆಯಾಗುತ್ತದೆ.

ತುಮಕೂರು ಗ್ರಾಮಾಂತರ ಕ್ಷೇತ್ರದಲ್ಲಿ ಬರುವ ಬೆಳ್ಳಾವಿ ಹೋಬಳಿಯ ಈ ಭಾಗದ ರಸ್ತೆಗಳು ಅಭಿವೃದ್ಧಿಯನ್ನೇ ಕಂಡಿಲ್ಲ. ಎರಡು ಬಾರಿ ಶಾಸಕರಾಗಿದ್ದ  ಬಿ.ಸುರೇಶ್ ಗೌಡ ಹೆಬ್ಬೂರು ಭಾಗದ ರಸ್ತೆ ಅಬಿವೃದ್ಧಿಗೆ ಹೆಚ್ಚು ಒತ್ತು ನೀಡಿದರೇ ಹೊರತು ಬೆಳ್ಳಾವಿ ಹೋಬಳಿಯ ಅಭಿವೃದ್ಧಿಯನ್ನ ಕಡೆಗಣಿಸುತ್ತಾ ಬಂದರು. ಇದಕ್ಕೆ ಇಲ್ಲಿನ ರಸ್ತೆಗಳೇ ಸಾಕ್ಷಿಯಾಗಿವೆ.

ಶಾಸಕರು ಮತ್ತು ಸಂಸದರ ನಿಧಿಗೆ ಕೋಟ್ಯಂತರ ರೂಪಾಯ ಅನುದಾನ ಬರುತ್ತದೆ. ಈ ಹಣವನ್ನು ರಸ್ತೆಗಳ ಅಭಿವೃದ್ದಿಗೆ ಬಳಸಲು ಅವಕಾಶವಿದೆ. ಜೊತೆಗೆ ರಸ್ತೆಗಳ ಡಾಂಬರೀಕರಣಕ್ಕೆ ಹಣ ಬಿಡುಗಡೆ ಆಗುತ್ತದೆ. ಆದರೂ ರಸ್ತೆಗಳಿಗೆ ಟಾರ್ ಹಾಕಿಲ್ಲ. ಇದು ಸೇಡಿನ ರಾಜಕಾರಣದ ಒಳಸುಳಿ ಎಂದು ವಿಶ್ಲೇಷಿಸಲಾಗುತ್ತಿದೆ.ಈ ಸಂಬಂಧ ಸ್ಥಳೀಯ ನಿವಾಸಿ ಶ್ರೀನಿವಾಸಮೂರ್ತಿ ನಾನುಗೌರಿ.ಕಾಂ ಜೊತೆ ಸಮಸ್ಯೆ ಬಿಡಿಸಿಟ್ಟರು. ಮಳೆ ಬಂದರೆ ಸಮಸ್ಯೆ ಎದುರಾಗುತ್ತದೆ. ದೊಡ್ಡನಾರವಂಗಲ ಮತ್ತು ಬೆಳ್ಳಾವಿಗೆ ಇದೇ ರಸ್ತೆಯಲ್ಲಿ ಹೋಗಬೇಕು. ಇಲ್ಲವೇ ಸುತ್ತುಬಳಸಿ ಬರಬೇಕು. ಬೈಕ್ ಗಳಲ್ಲಿ ಹೋದರೆ ಮಡ್ ಗಾರ್ಡ್ ತೆಗೆದು ಬೈಕಿನ ಜೊತೆ ಮುಖಕ್ಕೆ ಕೆಸರು ಸಿಡಿಸಿಕೊಂಡು ಬೀಳದ ಹಾಗೆ ಸಮತೋಲನವಾಗಿ ಹೋಗುವುದು ಸವಾಲಿನ ಕೆಲಸ.

 

ಹೆಂಗಸರು, ವೃದ್ದರು ಮತ್ತು ಮಕ್ಕಳು ಕೆಸರುಗದ್ದೆ ರಸ್ತೆಯಲ್ಲಿ ಬೀಳದೆ ಇರಲಾರರು. ಬೈಕ್ ಬಿಟ್ಟರೆ ದಪ್ಪಲಿ ಕೈಯಲ್ಲಿಡಿದುಕೊಂಡು ನಡೆಯಬೇಕು. ಬುರುಜೆ ಮತ್ತಿಕೊಂಡು ಕಷ್ಟಪಟ್ಟು ಮನೆ ಸೇರಬೇಕು. ಪೆರುಮನಹಳ್ಳಿ ಗಂಗಣ್ಣ ಮತ್ತು ರುದ್ರೇಶ್ ಪ್ರಯತ್ನದಿಂದ ಒಂದಿಷ್ಟು ದೂರ ಉತ್ತಮ ರಸ್ತೆಯ ಭಾಗ್ಯ ದೊರೆಕಿತ್ತು. ಈಗ ಯಾರಿಗೇಳೋದು ಯಾರೂ ನಮ್ಮ ಸಮಸ್ಯೆಗೆ ಸ್ಪಂದಿಸುತ್ತಿಲ್ಲ ಎಂದು ನೋವು ತೋಡಿಕೊಂಡರು.

ಪ್ರತಿ ಮಳೆಗಾಲದಲ್ಲೂ ಈ ಸಮಸ್ಯೆ ತಪ್ಪಿದ್ದಲ್ಲ. ಪಾದಾಚಾರಿಗಳು ಜೀವ ಕೈಯಲ್ಲಿಡಿದುಕೊಂಡು ಭಯದಲ್ಲೇ ತೆರಳುವಂತಹ ಪರಿಸ್ಥಿತಿ ಎದುರಾಗುತ್ತದೆ. ಎರಡು ಬಾರಿ ಶಾಸಕರಾಗಿದ್ದ ಬಿ.ಸುರೇಶ್ ಗೌಡ ನಮ್ಮ ಗ್ರಾಮಗಳನ್ನು ನಿರ್ಲಕ್ಷಿಸಿದರು. ನಾವು ಸುರೇಶ್ ಗೌಡರಿಗೆ ಓಟು ಹಾಕಿದ್ದೇವೆ. ಆದರು ನಮ್ಮ ಕಡೆ ವಕ್ರ ದೃಷ್ಟಿ ಬೀರಿದ್ದಾರೆ. ಈಗಿನ ಶಾಸಕ ಗೌರಿ ಶಂಕರ್ ಅವರಿಗೆ ರಸ್ತೆಗೆ ಡಾಂಬರೀಕರಣ ಮಾಡಿಸಿ ಎಂದು ಮನವಿ ಮಾಡಿದ್ದೇವೆ. ಮಾಡಿಸಿಕೊಡುವ ಭರವಸೆ ನೀಡಿದ್ದಾರೆ ಎನ್ನುತ್ತಾರೆ ಪೆರುಮನಹಳ್ಳಿ ಗ್ರಾಮಸ್ಥರು.

ಈ ಭಾಗದಲ್ಲಿ ಕೆಲವು ಕೈಗಾರಿಕೆಗಳು ಇದ್ದು, ನಿತ್ಯವೂ ಲಾರಿಗಳು ಓಡಾಡುತ್ತವೆ. ಆದರೆ ರಸ್ತೆ ಹಾಳಾಗಿರುವುದರಿಂದ ಜನ ಸಂಚಾರಕ್ಕೆ ತೊಂದರೆಯಾಗಿದೆ. ಜನರು ರಸ್ತೆಗೆ ಇಳಿಯುವುದೇ ದುಸ್ಥರವಾಗಿದೆ. ದ್ವಿಚಕ್ರ ವಾಹನ ಸವಾರರು ರಸ್ತೆಯಲ್ಲಿ ಬಂದರೆ ಸಾಕು ಕೆಸರು ಸ್ನಾನವಾಗುತ್ತದೆ ಎಂದು ಉಭಯ ಗ್ರಾಮಸ್ಥರು ದೂರಿದ್ದಾರೆ.


ಓದಿ: ಬಾಯ್ಕಟ್‌ ಚೀನಾ ಅಭಿಯಾನ: ಸಂಪೂರ್ಣ ಭಾರತೀಯ ಫೋನು ತಯಾರಿಸೋ ಕಂಪನಿ ಯಾವುದೂ ಗೊತ್ತೆ?


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...