Homeಕರ್ನಾಟಕಗದ್ದೆಯಂತಾದ ತುಮಕೂರಿನ ಪೆರುಮನಹಳ್ಳಿ ರಸ್ತೆ; ಜನರ ಗೋಳು ಕೇಳೋರೇ ಇಲ್ಲ

ಗದ್ದೆಯಂತಾದ ತುಮಕೂರಿನ ಪೆರುಮನಹಳ್ಳಿ ರಸ್ತೆ; ಜನರ ಗೋಳು ಕೇಳೋರೇ ಇಲ್ಲ

ಎರಡು ಬಾರಿ ಶಾಸಕರಾಗಿದ್ದ  ಬಿ.ಸುರೇಶ್ ಗೌಡ ಹೆಬ್ಬೂರು ಭಾಗದ ರಸ್ತೆ ಅಬಿವೃದ್ಧಿಗೆ ಹೆಚ್ಚು ಒತ್ತು ನೀಡಿದರೇ ಹೊರತು ಬೆಳ್ಳಾವಿ ಹೋಬಳಿಯ ಅಭಿವೃದ್ಧಿಯನ್ನ ಕಡೆಗಣಿಸುತ್ತಾ ಬಂದರು ಎನ್ನಲಾಗಿದೆ.

- Advertisement -
- Advertisement -

ದೇಶಕ್ಕೆ ಸ್ವಾತಂತ್ರ್ಯ ಬಂದ ಏಳು ದಶಕಗಳು ಉರುಳಿದರೂ ಸರಿಯಾದ ರಸ್ತೆ ಕಾಣದ ಹಲವು ಹಳ್ಳಿಗಳು ನಮ್ಮ ಕಣ್ಣಮುಂದೆ ಇವೆ. ರಸ್ತೆಗಳ ಅಭಿವೃದ್ಧಿಗಾಗಿ ಕೋಟಿಕೋಟಿ ರೂಪಾಯಿ ಬಿಡುಗಡೆಯಾದರೂ ಇಂದಿಗೂ ಹಲವು ರಸ್ತೆಗಳು ಟಾರಿನ ಮುಖ ಕಂಡಿಲ್ಲ. ಹಾಗಾಗಿ ಜನರ ಗೋಳನ್ನು ಕೇಳೋರೇ ಇಲ್ಲವಾಗಿದೆ.

ಹೌದು, ಇಂತಹ ಸಮಸ್ಯೆಗೆ ಸಾಕ್ಷಿಯಾಗಿದೆ ತುಮಕೂರು ತಾಲೂಕು ಪೆರುಮನಹಳ್ಳಿ ರಸ್ತೆ. ತುಮಕೂರು ಮಹಾ ನಗರಪಾಲಿಕೆ ವ್ಯಾಪ್ತಿಗೆ ಒಳಪಟ್ಟಿರುವ ಮಲ್ಲಸಂದ್ರಕ್ಕೆ ಕೂಗಳತೆ ದೂರದಲ್ಲಿ ಪೆರುಮನಹಳ್ಳಿ ಮತ್ತು ದೊಡ್ಡನಾರವಂಗಲ ಇವೆ. ಈ ಎರಡು ಗ್ರಾಮಗಳ ನಡುವೆ ಇರುವ ರಸ್ತೆ ಮಳೆಗಾಲದಲ್ಲಿ ಅಕ್ಷರಶಃ ಗದ್ದೆಯಾಗುತ್ತದೆ.

ತುಮಕೂರು ಗ್ರಾಮಾಂತರ ಕ್ಷೇತ್ರದಲ್ಲಿ ಬರುವ ಬೆಳ್ಳಾವಿ ಹೋಬಳಿಯ ಈ ಭಾಗದ ರಸ್ತೆಗಳು ಅಭಿವೃದ್ಧಿಯನ್ನೇ ಕಂಡಿಲ್ಲ. ಎರಡು ಬಾರಿ ಶಾಸಕರಾಗಿದ್ದ  ಬಿ.ಸುರೇಶ್ ಗೌಡ ಹೆಬ್ಬೂರು ಭಾಗದ ರಸ್ತೆ ಅಬಿವೃದ್ಧಿಗೆ ಹೆಚ್ಚು ಒತ್ತು ನೀಡಿದರೇ ಹೊರತು ಬೆಳ್ಳಾವಿ ಹೋಬಳಿಯ ಅಭಿವೃದ್ಧಿಯನ್ನ ಕಡೆಗಣಿಸುತ್ತಾ ಬಂದರು. ಇದಕ್ಕೆ ಇಲ್ಲಿನ ರಸ್ತೆಗಳೇ ಸಾಕ್ಷಿಯಾಗಿವೆ.

ಶಾಸಕರು ಮತ್ತು ಸಂಸದರ ನಿಧಿಗೆ ಕೋಟ್ಯಂತರ ರೂಪಾಯ ಅನುದಾನ ಬರುತ್ತದೆ. ಈ ಹಣವನ್ನು ರಸ್ತೆಗಳ ಅಭಿವೃದ್ದಿಗೆ ಬಳಸಲು ಅವಕಾಶವಿದೆ. ಜೊತೆಗೆ ರಸ್ತೆಗಳ ಡಾಂಬರೀಕರಣಕ್ಕೆ ಹಣ ಬಿಡುಗಡೆ ಆಗುತ್ತದೆ. ಆದರೂ ರಸ್ತೆಗಳಿಗೆ ಟಾರ್ ಹಾಕಿಲ್ಲ. ಇದು ಸೇಡಿನ ರಾಜಕಾರಣದ ಒಳಸುಳಿ ಎಂದು ವಿಶ್ಲೇಷಿಸಲಾಗುತ್ತಿದೆ.ಈ ಸಂಬಂಧ ಸ್ಥಳೀಯ ನಿವಾಸಿ ಶ್ರೀನಿವಾಸಮೂರ್ತಿ ನಾನುಗೌರಿ.ಕಾಂ ಜೊತೆ ಸಮಸ್ಯೆ ಬಿಡಿಸಿಟ್ಟರು. ಮಳೆ ಬಂದರೆ ಸಮಸ್ಯೆ ಎದುರಾಗುತ್ತದೆ. ದೊಡ್ಡನಾರವಂಗಲ ಮತ್ತು ಬೆಳ್ಳಾವಿಗೆ ಇದೇ ರಸ್ತೆಯಲ್ಲಿ ಹೋಗಬೇಕು. ಇಲ್ಲವೇ ಸುತ್ತುಬಳಸಿ ಬರಬೇಕು. ಬೈಕ್ ಗಳಲ್ಲಿ ಹೋದರೆ ಮಡ್ ಗಾರ್ಡ್ ತೆಗೆದು ಬೈಕಿನ ಜೊತೆ ಮುಖಕ್ಕೆ ಕೆಸರು ಸಿಡಿಸಿಕೊಂಡು ಬೀಳದ ಹಾಗೆ ಸಮತೋಲನವಾಗಿ ಹೋಗುವುದು ಸವಾಲಿನ ಕೆಲಸ.

 

ಹೆಂಗಸರು, ವೃದ್ದರು ಮತ್ತು ಮಕ್ಕಳು ಕೆಸರುಗದ್ದೆ ರಸ್ತೆಯಲ್ಲಿ ಬೀಳದೆ ಇರಲಾರರು. ಬೈಕ್ ಬಿಟ್ಟರೆ ದಪ್ಪಲಿ ಕೈಯಲ್ಲಿಡಿದುಕೊಂಡು ನಡೆಯಬೇಕು. ಬುರುಜೆ ಮತ್ತಿಕೊಂಡು ಕಷ್ಟಪಟ್ಟು ಮನೆ ಸೇರಬೇಕು. ಪೆರುಮನಹಳ್ಳಿ ಗಂಗಣ್ಣ ಮತ್ತು ರುದ್ರೇಶ್ ಪ್ರಯತ್ನದಿಂದ ಒಂದಿಷ್ಟು ದೂರ ಉತ್ತಮ ರಸ್ತೆಯ ಭಾಗ್ಯ ದೊರೆಕಿತ್ತು. ಈಗ ಯಾರಿಗೇಳೋದು ಯಾರೂ ನಮ್ಮ ಸಮಸ್ಯೆಗೆ ಸ್ಪಂದಿಸುತ್ತಿಲ್ಲ ಎಂದು ನೋವು ತೋಡಿಕೊಂಡರು.

ಪ್ರತಿ ಮಳೆಗಾಲದಲ್ಲೂ ಈ ಸಮಸ್ಯೆ ತಪ್ಪಿದ್ದಲ್ಲ. ಪಾದಾಚಾರಿಗಳು ಜೀವ ಕೈಯಲ್ಲಿಡಿದುಕೊಂಡು ಭಯದಲ್ಲೇ ತೆರಳುವಂತಹ ಪರಿಸ್ಥಿತಿ ಎದುರಾಗುತ್ತದೆ. ಎರಡು ಬಾರಿ ಶಾಸಕರಾಗಿದ್ದ ಬಿ.ಸುರೇಶ್ ಗೌಡ ನಮ್ಮ ಗ್ರಾಮಗಳನ್ನು ನಿರ್ಲಕ್ಷಿಸಿದರು. ನಾವು ಸುರೇಶ್ ಗೌಡರಿಗೆ ಓಟು ಹಾಕಿದ್ದೇವೆ. ಆದರು ನಮ್ಮ ಕಡೆ ವಕ್ರ ದೃಷ್ಟಿ ಬೀರಿದ್ದಾರೆ. ಈಗಿನ ಶಾಸಕ ಗೌರಿ ಶಂಕರ್ ಅವರಿಗೆ ರಸ್ತೆಗೆ ಡಾಂಬರೀಕರಣ ಮಾಡಿಸಿ ಎಂದು ಮನವಿ ಮಾಡಿದ್ದೇವೆ. ಮಾಡಿಸಿಕೊಡುವ ಭರವಸೆ ನೀಡಿದ್ದಾರೆ ಎನ್ನುತ್ತಾರೆ ಪೆರುಮನಹಳ್ಳಿ ಗ್ರಾಮಸ್ಥರು.

ಈ ಭಾಗದಲ್ಲಿ ಕೆಲವು ಕೈಗಾರಿಕೆಗಳು ಇದ್ದು, ನಿತ್ಯವೂ ಲಾರಿಗಳು ಓಡಾಡುತ್ತವೆ. ಆದರೆ ರಸ್ತೆ ಹಾಳಾಗಿರುವುದರಿಂದ ಜನ ಸಂಚಾರಕ್ಕೆ ತೊಂದರೆಯಾಗಿದೆ. ಜನರು ರಸ್ತೆಗೆ ಇಳಿಯುವುದೇ ದುಸ್ಥರವಾಗಿದೆ. ದ್ವಿಚಕ್ರ ವಾಹನ ಸವಾರರು ರಸ್ತೆಯಲ್ಲಿ ಬಂದರೆ ಸಾಕು ಕೆಸರು ಸ್ನಾನವಾಗುತ್ತದೆ ಎಂದು ಉಭಯ ಗ್ರಾಮಸ್ಥರು ದೂರಿದ್ದಾರೆ.


ಓದಿ: ಬಾಯ್ಕಟ್‌ ಚೀನಾ ಅಭಿಯಾನ: ಸಂಪೂರ್ಣ ಭಾರತೀಯ ಫೋನು ತಯಾರಿಸೋ ಕಂಪನಿ ಯಾವುದೂ ಗೊತ್ತೆ?


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...