Homeಕರ್ನಾಟಕಗದ್ದೆಯಂತಾದ ತುಮಕೂರಿನ ಪೆರುಮನಹಳ್ಳಿ ರಸ್ತೆ; ಜನರ ಗೋಳು ಕೇಳೋರೇ ಇಲ್ಲ

ಗದ್ದೆಯಂತಾದ ತುಮಕೂರಿನ ಪೆರುಮನಹಳ್ಳಿ ರಸ್ತೆ; ಜನರ ಗೋಳು ಕೇಳೋರೇ ಇಲ್ಲ

ಎರಡು ಬಾರಿ ಶಾಸಕರಾಗಿದ್ದ  ಬಿ.ಸುರೇಶ್ ಗೌಡ ಹೆಬ್ಬೂರು ಭಾಗದ ರಸ್ತೆ ಅಬಿವೃದ್ಧಿಗೆ ಹೆಚ್ಚು ಒತ್ತು ನೀಡಿದರೇ ಹೊರತು ಬೆಳ್ಳಾವಿ ಹೋಬಳಿಯ ಅಭಿವೃದ್ಧಿಯನ್ನ ಕಡೆಗಣಿಸುತ್ತಾ ಬಂದರು ಎನ್ನಲಾಗಿದೆ.

- Advertisement -
- Advertisement -

ದೇಶಕ್ಕೆ ಸ್ವಾತಂತ್ರ್ಯ ಬಂದ ಏಳು ದಶಕಗಳು ಉರುಳಿದರೂ ಸರಿಯಾದ ರಸ್ತೆ ಕಾಣದ ಹಲವು ಹಳ್ಳಿಗಳು ನಮ್ಮ ಕಣ್ಣಮುಂದೆ ಇವೆ. ರಸ್ತೆಗಳ ಅಭಿವೃದ್ಧಿಗಾಗಿ ಕೋಟಿಕೋಟಿ ರೂಪಾಯಿ ಬಿಡುಗಡೆಯಾದರೂ ಇಂದಿಗೂ ಹಲವು ರಸ್ತೆಗಳು ಟಾರಿನ ಮುಖ ಕಂಡಿಲ್ಲ. ಹಾಗಾಗಿ ಜನರ ಗೋಳನ್ನು ಕೇಳೋರೇ ಇಲ್ಲವಾಗಿದೆ.

ಹೌದು, ಇಂತಹ ಸಮಸ್ಯೆಗೆ ಸಾಕ್ಷಿಯಾಗಿದೆ ತುಮಕೂರು ತಾಲೂಕು ಪೆರುಮನಹಳ್ಳಿ ರಸ್ತೆ. ತುಮಕೂರು ಮಹಾ ನಗರಪಾಲಿಕೆ ವ್ಯಾಪ್ತಿಗೆ ಒಳಪಟ್ಟಿರುವ ಮಲ್ಲಸಂದ್ರಕ್ಕೆ ಕೂಗಳತೆ ದೂರದಲ್ಲಿ ಪೆರುಮನಹಳ್ಳಿ ಮತ್ತು ದೊಡ್ಡನಾರವಂಗಲ ಇವೆ. ಈ ಎರಡು ಗ್ರಾಮಗಳ ನಡುವೆ ಇರುವ ರಸ್ತೆ ಮಳೆಗಾಲದಲ್ಲಿ ಅಕ್ಷರಶಃ ಗದ್ದೆಯಾಗುತ್ತದೆ.

ತುಮಕೂರು ಗ್ರಾಮಾಂತರ ಕ್ಷೇತ್ರದಲ್ಲಿ ಬರುವ ಬೆಳ್ಳಾವಿ ಹೋಬಳಿಯ ಈ ಭಾಗದ ರಸ್ತೆಗಳು ಅಭಿವೃದ್ಧಿಯನ್ನೇ ಕಂಡಿಲ್ಲ. ಎರಡು ಬಾರಿ ಶಾಸಕರಾಗಿದ್ದ  ಬಿ.ಸುರೇಶ್ ಗೌಡ ಹೆಬ್ಬೂರು ಭಾಗದ ರಸ್ತೆ ಅಬಿವೃದ್ಧಿಗೆ ಹೆಚ್ಚು ಒತ್ತು ನೀಡಿದರೇ ಹೊರತು ಬೆಳ್ಳಾವಿ ಹೋಬಳಿಯ ಅಭಿವೃದ್ಧಿಯನ್ನ ಕಡೆಗಣಿಸುತ್ತಾ ಬಂದರು. ಇದಕ್ಕೆ ಇಲ್ಲಿನ ರಸ್ತೆಗಳೇ ಸಾಕ್ಷಿಯಾಗಿವೆ.

ಶಾಸಕರು ಮತ್ತು ಸಂಸದರ ನಿಧಿಗೆ ಕೋಟ್ಯಂತರ ರೂಪಾಯ ಅನುದಾನ ಬರುತ್ತದೆ. ಈ ಹಣವನ್ನು ರಸ್ತೆಗಳ ಅಭಿವೃದ್ದಿಗೆ ಬಳಸಲು ಅವಕಾಶವಿದೆ. ಜೊತೆಗೆ ರಸ್ತೆಗಳ ಡಾಂಬರೀಕರಣಕ್ಕೆ ಹಣ ಬಿಡುಗಡೆ ಆಗುತ್ತದೆ. ಆದರೂ ರಸ್ತೆಗಳಿಗೆ ಟಾರ್ ಹಾಕಿಲ್ಲ. ಇದು ಸೇಡಿನ ರಾಜಕಾರಣದ ಒಳಸುಳಿ ಎಂದು ವಿಶ್ಲೇಷಿಸಲಾಗುತ್ತಿದೆ.ಈ ಸಂಬಂಧ ಸ್ಥಳೀಯ ನಿವಾಸಿ ಶ್ರೀನಿವಾಸಮೂರ್ತಿ ನಾನುಗೌರಿ.ಕಾಂ ಜೊತೆ ಸಮಸ್ಯೆ ಬಿಡಿಸಿಟ್ಟರು. ಮಳೆ ಬಂದರೆ ಸಮಸ್ಯೆ ಎದುರಾಗುತ್ತದೆ. ದೊಡ್ಡನಾರವಂಗಲ ಮತ್ತು ಬೆಳ್ಳಾವಿಗೆ ಇದೇ ರಸ್ತೆಯಲ್ಲಿ ಹೋಗಬೇಕು. ಇಲ್ಲವೇ ಸುತ್ತುಬಳಸಿ ಬರಬೇಕು. ಬೈಕ್ ಗಳಲ್ಲಿ ಹೋದರೆ ಮಡ್ ಗಾರ್ಡ್ ತೆಗೆದು ಬೈಕಿನ ಜೊತೆ ಮುಖಕ್ಕೆ ಕೆಸರು ಸಿಡಿಸಿಕೊಂಡು ಬೀಳದ ಹಾಗೆ ಸಮತೋಲನವಾಗಿ ಹೋಗುವುದು ಸವಾಲಿನ ಕೆಲಸ.

 

ಹೆಂಗಸರು, ವೃದ್ದರು ಮತ್ತು ಮಕ್ಕಳು ಕೆಸರುಗದ್ದೆ ರಸ್ತೆಯಲ್ಲಿ ಬೀಳದೆ ಇರಲಾರರು. ಬೈಕ್ ಬಿಟ್ಟರೆ ದಪ್ಪಲಿ ಕೈಯಲ್ಲಿಡಿದುಕೊಂಡು ನಡೆಯಬೇಕು. ಬುರುಜೆ ಮತ್ತಿಕೊಂಡು ಕಷ್ಟಪಟ್ಟು ಮನೆ ಸೇರಬೇಕು. ಪೆರುಮನಹಳ್ಳಿ ಗಂಗಣ್ಣ ಮತ್ತು ರುದ್ರೇಶ್ ಪ್ರಯತ್ನದಿಂದ ಒಂದಿಷ್ಟು ದೂರ ಉತ್ತಮ ರಸ್ತೆಯ ಭಾಗ್ಯ ದೊರೆಕಿತ್ತು. ಈಗ ಯಾರಿಗೇಳೋದು ಯಾರೂ ನಮ್ಮ ಸಮಸ್ಯೆಗೆ ಸ್ಪಂದಿಸುತ್ತಿಲ್ಲ ಎಂದು ನೋವು ತೋಡಿಕೊಂಡರು.

ಪ್ರತಿ ಮಳೆಗಾಲದಲ್ಲೂ ಈ ಸಮಸ್ಯೆ ತಪ್ಪಿದ್ದಲ್ಲ. ಪಾದಾಚಾರಿಗಳು ಜೀವ ಕೈಯಲ್ಲಿಡಿದುಕೊಂಡು ಭಯದಲ್ಲೇ ತೆರಳುವಂತಹ ಪರಿಸ್ಥಿತಿ ಎದುರಾಗುತ್ತದೆ. ಎರಡು ಬಾರಿ ಶಾಸಕರಾಗಿದ್ದ ಬಿ.ಸುರೇಶ್ ಗೌಡ ನಮ್ಮ ಗ್ರಾಮಗಳನ್ನು ನಿರ್ಲಕ್ಷಿಸಿದರು. ನಾವು ಸುರೇಶ್ ಗೌಡರಿಗೆ ಓಟು ಹಾಕಿದ್ದೇವೆ. ಆದರು ನಮ್ಮ ಕಡೆ ವಕ್ರ ದೃಷ್ಟಿ ಬೀರಿದ್ದಾರೆ. ಈಗಿನ ಶಾಸಕ ಗೌರಿ ಶಂಕರ್ ಅವರಿಗೆ ರಸ್ತೆಗೆ ಡಾಂಬರೀಕರಣ ಮಾಡಿಸಿ ಎಂದು ಮನವಿ ಮಾಡಿದ್ದೇವೆ. ಮಾಡಿಸಿಕೊಡುವ ಭರವಸೆ ನೀಡಿದ್ದಾರೆ ಎನ್ನುತ್ತಾರೆ ಪೆರುಮನಹಳ್ಳಿ ಗ್ರಾಮಸ್ಥರು.

ಈ ಭಾಗದಲ್ಲಿ ಕೆಲವು ಕೈಗಾರಿಕೆಗಳು ಇದ್ದು, ನಿತ್ಯವೂ ಲಾರಿಗಳು ಓಡಾಡುತ್ತವೆ. ಆದರೆ ರಸ್ತೆ ಹಾಳಾಗಿರುವುದರಿಂದ ಜನ ಸಂಚಾರಕ್ಕೆ ತೊಂದರೆಯಾಗಿದೆ. ಜನರು ರಸ್ತೆಗೆ ಇಳಿಯುವುದೇ ದುಸ್ಥರವಾಗಿದೆ. ದ್ವಿಚಕ್ರ ವಾಹನ ಸವಾರರು ರಸ್ತೆಯಲ್ಲಿ ಬಂದರೆ ಸಾಕು ಕೆಸರು ಸ್ನಾನವಾಗುತ್ತದೆ ಎಂದು ಉಭಯ ಗ್ರಾಮಸ್ಥರು ದೂರಿದ್ದಾರೆ.


ಓದಿ: ಬಾಯ್ಕಟ್‌ ಚೀನಾ ಅಭಿಯಾನ: ಸಂಪೂರ್ಣ ಭಾರತೀಯ ಫೋನು ತಯಾರಿಸೋ ಕಂಪನಿ ಯಾವುದೂ ಗೊತ್ತೆ?


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...