Homeಕರ್ನಾಟಕಗದ್ದೆಯಂತಾದ ತುಮಕೂರಿನ ಪೆರುಮನಹಳ್ಳಿ ರಸ್ತೆ; ಜನರ ಗೋಳು ಕೇಳೋರೇ ಇಲ್ಲ

ಗದ್ದೆಯಂತಾದ ತುಮಕೂರಿನ ಪೆರುಮನಹಳ್ಳಿ ರಸ್ತೆ; ಜನರ ಗೋಳು ಕೇಳೋರೇ ಇಲ್ಲ

ಎರಡು ಬಾರಿ ಶಾಸಕರಾಗಿದ್ದ  ಬಿ.ಸುರೇಶ್ ಗೌಡ ಹೆಬ್ಬೂರು ಭಾಗದ ರಸ್ತೆ ಅಬಿವೃದ್ಧಿಗೆ ಹೆಚ್ಚು ಒತ್ತು ನೀಡಿದರೇ ಹೊರತು ಬೆಳ್ಳಾವಿ ಹೋಬಳಿಯ ಅಭಿವೃದ್ಧಿಯನ್ನ ಕಡೆಗಣಿಸುತ್ತಾ ಬಂದರು ಎನ್ನಲಾಗಿದೆ.

- Advertisement -
- Advertisement -

ದೇಶಕ್ಕೆ ಸ್ವಾತಂತ್ರ್ಯ ಬಂದ ಏಳು ದಶಕಗಳು ಉರುಳಿದರೂ ಸರಿಯಾದ ರಸ್ತೆ ಕಾಣದ ಹಲವು ಹಳ್ಳಿಗಳು ನಮ್ಮ ಕಣ್ಣಮುಂದೆ ಇವೆ. ರಸ್ತೆಗಳ ಅಭಿವೃದ್ಧಿಗಾಗಿ ಕೋಟಿಕೋಟಿ ರೂಪಾಯಿ ಬಿಡುಗಡೆಯಾದರೂ ಇಂದಿಗೂ ಹಲವು ರಸ್ತೆಗಳು ಟಾರಿನ ಮುಖ ಕಂಡಿಲ್ಲ. ಹಾಗಾಗಿ ಜನರ ಗೋಳನ್ನು ಕೇಳೋರೇ ಇಲ್ಲವಾಗಿದೆ.

ಹೌದು, ಇಂತಹ ಸಮಸ್ಯೆಗೆ ಸಾಕ್ಷಿಯಾಗಿದೆ ತುಮಕೂರು ತಾಲೂಕು ಪೆರುಮನಹಳ್ಳಿ ರಸ್ತೆ. ತುಮಕೂರು ಮಹಾ ನಗರಪಾಲಿಕೆ ವ್ಯಾಪ್ತಿಗೆ ಒಳಪಟ್ಟಿರುವ ಮಲ್ಲಸಂದ್ರಕ್ಕೆ ಕೂಗಳತೆ ದೂರದಲ್ಲಿ ಪೆರುಮನಹಳ್ಳಿ ಮತ್ತು ದೊಡ್ಡನಾರವಂಗಲ ಇವೆ. ಈ ಎರಡು ಗ್ರಾಮಗಳ ನಡುವೆ ಇರುವ ರಸ್ತೆ ಮಳೆಗಾಲದಲ್ಲಿ ಅಕ್ಷರಶಃ ಗದ್ದೆಯಾಗುತ್ತದೆ.

ತುಮಕೂರು ಗ್ರಾಮಾಂತರ ಕ್ಷೇತ್ರದಲ್ಲಿ ಬರುವ ಬೆಳ್ಳಾವಿ ಹೋಬಳಿಯ ಈ ಭಾಗದ ರಸ್ತೆಗಳು ಅಭಿವೃದ್ಧಿಯನ್ನೇ ಕಂಡಿಲ್ಲ. ಎರಡು ಬಾರಿ ಶಾಸಕರಾಗಿದ್ದ  ಬಿ.ಸುರೇಶ್ ಗೌಡ ಹೆಬ್ಬೂರು ಭಾಗದ ರಸ್ತೆ ಅಬಿವೃದ್ಧಿಗೆ ಹೆಚ್ಚು ಒತ್ತು ನೀಡಿದರೇ ಹೊರತು ಬೆಳ್ಳಾವಿ ಹೋಬಳಿಯ ಅಭಿವೃದ್ಧಿಯನ್ನ ಕಡೆಗಣಿಸುತ್ತಾ ಬಂದರು. ಇದಕ್ಕೆ ಇಲ್ಲಿನ ರಸ್ತೆಗಳೇ ಸಾಕ್ಷಿಯಾಗಿವೆ.

ಶಾಸಕರು ಮತ್ತು ಸಂಸದರ ನಿಧಿಗೆ ಕೋಟ್ಯಂತರ ರೂಪಾಯ ಅನುದಾನ ಬರುತ್ತದೆ. ಈ ಹಣವನ್ನು ರಸ್ತೆಗಳ ಅಭಿವೃದ್ದಿಗೆ ಬಳಸಲು ಅವಕಾಶವಿದೆ. ಜೊತೆಗೆ ರಸ್ತೆಗಳ ಡಾಂಬರೀಕರಣಕ್ಕೆ ಹಣ ಬಿಡುಗಡೆ ಆಗುತ್ತದೆ. ಆದರೂ ರಸ್ತೆಗಳಿಗೆ ಟಾರ್ ಹಾಕಿಲ್ಲ. ಇದು ಸೇಡಿನ ರಾಜಕಾರಣದ ಒಳಸುಳಿ ಎಂದು ವಿಶ್ಲೇಷಿಸಲಾಗುತ್ತಿದೆ.ಈ ಸಂಬಂಧ ಸ್ಥಳೀಯ ನಿವಾಸಿ ಶ್ರೀನಿವಾಸಮೂರ್ತಿ ನಾನುಗೌರಿ.ಕಾಂ ಜೊತೆ ಸಮಸ್ಯೆ ಬಿಡಿಸಿಟ್ಟರು. ಮಳೆ ಬಂದರೆ ಸಮಸ್ಯೆ ಎದುರಾಗುತ್ತದೆ. ದೊಡ್ಡನಾರವಂಗಲ ಮತ್ತು ಬೆಳ್ಳಾವಿಗೆ ಇದೇ ರಸ್ತೆಯಲ್ಲಿ ಹೋಗಬೇಕು. ಇಲ್ಲವೇ ಸುತ್ತುಬಳಸಿ ಬರಬೇಕು. ಬೈಕ್ ಗಳಲ್ಲಿ ಹೋದರೆ ಮಡ್ ಗಾರ್ಡ್ ತೆಗೆದು ಬೈಕಿನ ಜೊತೆ ಮುಖಕ್ಕೆ ಕೆಸರು ಸಿಡಿಸಿಕೊಂಡು ಬೀಳದ ಹಾಗೆ ಸಮತೋಲನವಾಗಿ ಹೋಗುವುದು ಸವಾಲಿನ ಕೆಲಸ.

 

ಹೆಂಗಸರು, ವೃದ್ದರು ಮತ್ತು ಮಕ್ಕಳು ಕೆಸರುಗದ್ದೆ ರಸ್ತೆಯಲ್ಲಿ ಬೀಳದೆ ಇರಲಾರರು. ಬೈಕ್ ಬಿಟ್ಟರೆ ದಪ್ಪಲಿ ಕೈಯಲ್ಲಿಡಿದುಕೊಂಡು ನಡೆಯಬೇಕು. ಬುರುಜೆ ಮತ್ತಿಕೊಂಡು ಕಷ್ಟಪಟ್ಟು ಮನೆ ಸೇರಬೇಕು. ಪೆರುಮನಹಳ್ಳಿ ಗಂಗಣ್ಣ ಮತ್ತು ರುದ್ರೇಶ್ ಪ್ರಯತ್ನದಿಂದ ಒಂದಿಷ್ಟು ದೂರ ಉತ್ತಮ ರಸ್ತೆಯ ಭಾಗ್ಯ ದೊರೆಕಿತ್ತು. ಈಗ ಯಾರಿಗೇಳೋದು ಯಾರೂ ನಮ್ಮ ಸಮಸ್ಯೆಗೆ ಸ್ಪಂದಿಸುತ್ತಿಲ್ಲ ಎಂದು ನೋವು ತೋಡಿಕೊಂಡರು.

ಪ್ರತಿ ಮಳೆಗಾಲದಲ್ಲೂ ಈ ಸಮಸ್ಯೆ ತಪ್ಪಿದ್ದಲ್ಲ. ಪಾದಾಚಾರಿಗಳು ಜೀವ ಕೈಯಲ್ಲಿಡಿದುಕೊಂಡು ಭಯದಲ್ಲೇ ತೆರಳುವಂತಹ ಪರಿಸ್ಥಿತಿ ಎದುರಾಗುತ್ತದೆ. ಎರಡು ಬಾರಿ ಶಾಸಕರಾಗಿದ್ದ ಬಿ.ಸುರೇಶ್ ಗೌಡ ನಮ್ಮ ಗ್ರಾಮಗಳನ್ನು ನಿರ್ಲಕ್ಷಿಸಿದರು. ನಾವು ಸುರೇಶ್ ಗೌಡರಿಗೆ ಓಟು ಹಾಕಿದ್ದೇವೆ. ಆದರು ನಮ್ಮ ಕಡೆ ವಕ್ರ ದೃಷ್ಟಿ ಬೀರಿದ್ದಾರೆ. ಈಗಿನ ಶಾಸಕ ಗೌರಿ ಶಂಕರ್ ಅವರಿಗೆ ರಸ್ತೆಗೆ ಡಾಂಬರೀಕರಣ ಮಾಡಿಸಿ ಎಂದು ಮನವಿ ಮಾಡಿದ್ದೇವೆ. ಮಾಡಿಸಿಕೊಡುವ ಭರವಸೆ ನೀಡಿದ್ದಾರೆ ಎನ್ನುತ್ತಾರೆ ಪೆರುಮನಹಳ್ಳಿ ಗ್ರಾಮಸ್ಥರು.

ಈ ಭಾಗದಲ್ಲಿ ಕೆಲವು ಕೈಗಾರಿಕೆಗಳು ಇದ್ದು, ನಿತ್ಯವೂ ಲಾರಿಗಳು ಓಡಾಡುತ್ತವೆ. ಆದರೆ ರಸ್ತೆ ಹಾಳಾಗಿರುವುದರಿಂದ ಜನ ಸಂಚಾರಕ್ಕೆ ತೊಂದರೆಯಾಗಿದೆ. ಜನರು ರಸ್ತೆಗೆ ಇಳಿಯುವುದೇ ದುಸ್ಥರವಾಗಿದೆ. ದ್ವಿಚಕ್ರ ವಾಹನ ಸವಾರರು ರಸ್ತೆಯಲ್ಲಿ ಬಂದರೆ ಸಾಕು ಕೆಸರು ಸ್ನಾನವಾಗುತ್ತದೆ ಎಂದು ಉಭಯ ಗ್ರಾಮಸ್ಥರು ದೂರಿದ್ದಾರೆ.


ಓದಿ: ಬಾಯ್ಕಟ್‌ ಚೀನಾ ಅಭಿಯಾನ: ಸಂಪೂರ್ಣ ಭಾರತೀಯ ಫೋನು ತಯಾರಿಸೋ ಕಂಪನಿ ಯಾವುದೂ ಗೊತ್ತೆ?


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...