Homeಮುಖಪುಟಅಂಬಾನಿಯ Z+ ಭದ್ರತೆ ವಿರುದ್ಧ ಅರ್ಜಿ | ತರಾಟೆಗೆ ತೆಗೆದುಕೊಂಡ ಸುಪ್ರೀಂಕೋರ್ಟ್

ಅಂಬಾನಿಯ Z+ ಭದ್ರತೆ ವಿರುದ್ಧ ಅರ್ಜಿ | ತರಾಟೆಗೆ ತೆಗೆದುಕೊಂಡ ಸುಪ್ರೀಂಕೋರ್ಟ್

- Advertisement -
- Advertisement -

ಪ್ರಧಾನಿ ಮೋದಿ ಅವರ ಆಪ್ತ ಉದ್ಯಮಿ, ರಿಲಯನ್ಸ್ ಇಂಡಸ್ಟ್ರೀಸ್ ಅಧ್ಯಕ್ಷ ಮುಖೇಶ್ ಅಂಬಾನಿ ಮತ್ತು ಅವರ ಕುಟುಂಬಕ್ಕೆ ನೀಡಲಾದ Z+ ಭದ್ರತೆಯನ್ನು ಪದೇ ಪದೇ ಪ್ರಶ್ನಿಸಿದ್ದ ಅರ್ಜಿದಾರರನ್ನು ಸುಪ್ರೀಂಕೋರ್ಟ್ ಶುಕ್ರವಾರ ಟೀಕಿಸಿದೆ. ಬಿಕಾಶ್ ಸಹಾ ಎಂಬವರು ಸಲ್ಲಿಸಿದ ಅರ್ಜಿಯಲ್ಲಿ, ಅಂಬಾನಿ ಮತ್ತು ಅವರ ಕುಟುಂಬ ಸದಸ್ಯರಿಗೆ ನೀಡಲಾದ Z+ ಭದ್ರತಾ ರಕ್ಷಣೆಯನ್ನು ರದ್ದುಗೊಳಿಸಲು ನಿರ್ದೇಶನ ನೀಡುವಂತೆ ಕೋರಲಾಗಿತ್ತು. ಅಂಬಾನಿಯ Z+ ಭದ್ರತೆ

ಬಿಕಾಶ್‌ ಅವರ ಅರ್ಜಿಯನ್ನು ಸುಪ್ರೀಂಕೋರ್ಟ್‌ ವಜಾಗೊಳಿಸಿದ್ದಲ್ಲದೆ, ಈ ವಿಷಯವನ್ನು ಮುಂದುವರಿಸಿದರೆ ಅಥವಾ ಭವಿಷ್ಯದಲ್ಲಿ ಇದೇ ರೀತಿಯ ಅರ್ಜಿಗಳನ್ನು ಸಲ್ಲಿಸಿದರೆ ಭಾರಿ ದಂಡಗಳನ್ನು ವಿಧಿಸುವುದಾಗಿ ಎಚ್ಚರಿಸಿದೆ.

“ಬೆದರಿಕೆ ಮಾಹಿತಿಗಳನ್ನು ಸರಿಯಾಗಿ ಮೌಲ್ಯಮಾಪನ ಮಾಡಿದ ನಂತರ ಸರ್ಕಾರವು ಒದಗಿಸಿದ ಭದ್ರತೆಯನ್ನು ಪ್ರಶ್ನಿಸಲು ಅರ್ಜಿದಾರರಿಗೆ (ಬಿಕಾಶ್ ಶಾ) ಯಾವುದೇ ಅರ್ಹತೆ ಇಲ್ಲ. ಈ ಬಗ್ಗೆ ಯಾವುದೇ ಮುಂದಿನ ಪ್ರಕ್ರಿಯೆಗಳು ನಡೆದರೆ ನ್ಯಾಯಾಲಯವು ಅವರ ಮೇಲೆ ಭಾರಿ ದಂಡವನ್ನು ವಿಧಿಸುತ್ತೇವೆ ಎಂದು ನಾವು ಎಚ್ಚರಿಸಿದ್ದೇವೆ” ಎಂದು ನ್ಯಾಯಮೂರ್ತಿ ಪ್ರಶಾಂತ್ ಕುಮಾರ್ ಮಿಶ್ರಾ ಮತ್ತು ನ್ಯಾಯಮೂರ್ತಿ ಮನಮೋಹನ್ ನೇತೃತ್ವದ ದ್ವಿ ಸದಸ್ಯ ನ್ಯಾಯಾಧೀಶರ ರಜಾ ಪೀಠ ಹೇಳಿದೆ.

ಶುಕ್ರವಾರ ಆದೇಶವನ್ನು ಅಂಗೀಕರಿಸುವಾಗ, ಮುಖೇಶ್ ಅಂಬಾನಿ, ಅವರ ಪತ್ನಿ ನೀತಾ ಅಂಬಾನಿ ಮತ್ತು ಮಕ್ಕಳಾದ ಅನಂತ್, ಆಕಾಶ್ ಮತ್ತು ಇಶಾ ಅವರಿಗೆ ಒದಗಿಸಲಾದ Z+ ಭದ್ರತಾ ರಕ್ಷಣೆಯನ್ನು ಮುಂದುವರಿಸಬೇಕು ಎಂದು ಸುಪ್ರೀಂಕೋರ್ಟ್ ಪೀಠ ಪುನರುಚ್ಚರಿಸಿದೆ.

ಬಿಕಾಶ್‌ ಅವರ ಅರ್ಜಿಯನ್ನು ತಿರಸ್ಕರಿಸಿದ ಸುಪ್ರೀಂಕೋರ್ಟ್, “ಯಾರಿಗೆ ಯಾವ ಭದ್ರತೆ ನೀಡಬೇಕೆಂದು ನಿರ್ಧರಿಸುವುದು ಸುಪ್ರೀಂಕೋರ್ಟ್ ಆಗಿದೆಯೇ? ಇದು ಹೊಸದಾಗಿ ಕಾಣಿಸಿಕೊಂಡಿರುವ ವಿಷಯ. ನ್ಯಾಯಶಾಸ್ತ್ರದ ಹೊಸ ಪ್ರಕಾರವಾಗಿದೆ. ಇದು ನಮ್ಮ ಕ್ಷೇತ್ರವೇ?” ಎಂದು ಹೇಳಿದೆ.

ಬಿಕಾಶ್ ಅವರನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡ ನ್ಯಾಯಾಲಯ, “ಬೆದರಿಕೆಯ ಗ್ರಹಿಕೆಯನ್ನು ನಿರ್ಧರಿಸಲು ನೀವು ಯಾರು? ಭಾರತ ಸರ್ಕಾರ ಅದನ್ನು ನಿರ್ಧರಿಸುತ್ತದೆ, ಅಲ್ಲವೇ? ನಾಳೆ, ಏನಾದರೂ ಅಪಘಾತ ಸಂಭವಿಸಿದಲ್ಲಿ, ನೀವು ಜವಾಬ್ದಾರಿಯನ್ನು ತೆಗೆದುಕೊಳ್ಳುತ್ತೀರಾ? ಅಥವಾ ನ್ಯಾಯಾಲಯವು ಅದರ ಜವಾಬ್ದಾರಿಯನ್ನು ತೆಗೆದುಕೊಳ್ಳುತ್ತದೆಯೇ?” ಎಂದು ಪ್ರಶ್ನಿಸಿದೆ.

“ಈ ರೀತಿ ಮಾಡಬೇಡಿ, ಇದು ತುಂಬಾ ಗಂಭೀರ ವಿಚಾರವಾಗಿದ್ದು, ಈ ಬಗ್ಗೆ ನಾವು ನಿಮಗೆ ಎಚ್ಚರಿಕೆ ನೀಡುತ್ತಿದ್ದೇವೆ. ಇಲ್ಲಿ ಕಸಿದುಕೊಳ್ಳಲು ಚಿನ್ನದ ಗಣಿ ಇದೆ ಎಂದು ಭಾವಿಸಬೇಡಿ ಮತ್ತು ನಿಮ್ಮ ಪ್ರಕ್ರಿಯೆಯನ್ನು ಸುಗಮಗೊಳಿಸಲು ನಾವು ಇಲ್ಲಿ ಕೂತಿಲ್ಲ” ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿದೆ.

ವಿಚಾರಣೆಯ ಸಮಯದಲ್ಲಿ, ಮುಖೇಶ್ ಅಂಬಾನಿ ಮತ್ತು ಅವರ ಕುಟುಂಬದ ಹಿರಿಯ ವಕೀಲ ಮತ್ತು ಭಾರತದ ಮಾಜಿ ಅಟಾರ್ನಿ ಜನರಲ್ (ಎಜಿ) ಮುಕುಲ್ ರೋಹಟ್ಗಿ ಅವರು ಅರ್ಜಿಯನ್ನು ಆಕ್ಷೇಪಿಸಿದರು. “ಬೆದರಿಕೆಯ ಗ್ರಹಿಕೆಯನ್ನು ಪರಿಗಣಿಸಿ ಸರ್ಕಾರವು ಅವರಿಗೆ ಭದ್ರತೆ ನೀಡಿದೆ. ಈ ಸಂಭಾವಿತ ವ್ಯಕ್ತಿ (ಬಿಕಾಶ್)ಗೂ ಇದಕ್ಕೂ ಯಾವುದೇ ಸಂಬಂಧವಿಲ್ಲ” ಎಂದು ಅವರು ಹೇಳಿದ್ದಾರೆ. ಅಂಬಾನಿಯ Z+ ಭದ್ರತೆ

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಕುಸಿದ ಮಾವು ದರ; ರೈತರ ನೆರವಿಗೆ ನಿಲ್ಲುವಂತೆ ಕೇಂದ್ರ ಕೃಷಿ ಸಚಿವರಿಗೆ ಪತ್ರ ಬರೆದ ಸಿಎಂ

ಕುಸಿದ ಮಾವು ದರ; ರೈತರ ನೆರವಿಗೆ ನಿಲ್ಲುವಂತೆ ಕೇಂದ್ರ ಕೃಷಿ ಸಚಿವರಿಗೆ ಪತ್ರ ಬರೆದ ಸಿಎಂ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನೀಟ್‌ ಪ್ರತಿಭಟನೆಯಲ್ಲಿ ಉಮರ್ ಖಾಲಿದ್‌ಗೆ ಬೆಂಬಲ; ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ ಗೋವಾ ಪೊಲೀಸರು

ಗೋವಾದ ಪಣಜಿಯಲ್ಲಿ ನಡೆದ ನೀಟ್-ಯುಜಿ ಪ್ರತಿಭಟನೆಯಲ್ಲಿ ಉಮರ್ ಖಾಲಿದ್ ಪರ ಘೋಷಣೆಗಳನ್ನು ಕೂಗಿದ ಕೆಲವು ವಿದ್ಯಾರ್ಥಿಗಳ ಪ್ರತಿಭಟನೆ ಹಿಂದಿನ ಹಣಕಾಸು ಮತ್ತು ಉದ್ದೇಶದ ಬಗ್ಗೆ ಗೋವಾ ಪೊಲೀಸರು ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ್ದಾರೆ ಎಂದು...

ಅಸ್ಸಾಂ ಪ್ರವಾಹದ ಭೀಕರತೆ: 78 ಬಲಿ, 3 ಲಕ್ಷ ಜನರ ಬದುಕು ಸಂಕಷ್ಟಕ್ಕೆ: ವ್ಯವಸ್ಥೆಯ ವೈಫಲ್ಯಕ್ಕೆ ಬೆಲೆ ತೆತ್ತುತ್ತಿರುವ ನಾಗರಿಕರು

ಈಶಾನ್ಯ ಭಾರತದ ಗೇಟ್‌ವೇ ಎಂದೇ ಕರೆಯಲ್ಪಡುವ ಅಸ್ಸಾಂನಲ್ಲಿ ಪ್ರವಾಹದ ಅಟ್ಟಹಾಸ ಮುಂದುವರಿದಿದ್ದು, ಸಾವಿನ ಸಂಖ್ಯೆ 78ಕ್ಕೆ ಏರಿಕೆಯಾಗಿದೆ. ಇತ್ತೀಚಿನ ಅಧಿಕೃತ ವರದಿಗಳ ಪ್ರಕಾರ, ಶಿವಸಾಗರ್ ಜಿಲ್ಲೆಯಲ್ಲಿ ಇಬ್ಬರು ಹಾಗೂ ಗೋಲಾಘಾಟ್‌ನಲ್ಲಿ ಒಬ್ಬರು ನೀರಿನಲ್ಲಿ...

ನೀಟ್ ಪ್ರತಿಭಟನೆಯಲ್ಲಿ ಪೆಲೆಟ್ ಗನ್ ಬಳಕೆ ಆರೋಪ; RAF ಮದ್ದುಗುಂಡುಗಳ ದಾಖಲೆ ಕೇಳಿದ ಸುಪ್ರೀಂ ಕೋರ್ಟ್

ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ವಿರುದ್ಧ ವಿದ್ಯಾರ್ಥಿಗಳು ನಡೆಸಿದ ಪ್ರತಿಭಟನೆಯ ಸಂದರ್ಭದಲ್ಲಿ ಜಂತರ್ ಮಂತರ್‌ನಲ್ಲಿ ನಿಯೋಜಿಸಲಾಗಿದ್ದ ಕ್ಷಿಪ್ರ ಕಾರ್ಯ ಪಡೆ (RAF) ಯ ಮದ್ದುಗುಂಡುಗಳ ದಾಖಲೆಯನ್ನು ಸಂರಕ್ಷಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ (ಜುಲೈ...

ಕ್ರಿಸ್ತನಿಗಿಂತ ಮೊದಲೇ ಇಲ್ಲಿದ್ದೇವೆ..ನಮಗೆ ಯಾವುದೇ ದಾಖಲೆಗಳು ಬೇಡ : ಎಸ್‌ಐಆರ್ ತಿರಸ್ಕರಿಸಿದ ಜಾರ್ಖಂಡ್‌ನ ಆದಿವಾಸಿಗಳು

ಜಾರ್ಖಂಡ್‌ನ ಖುಂತಿ ಜಿಲ್ಲೆಯ ದಟ್ಟ ಅರಣ್ಯ ಭಾಗದಲ್ಲಿ ವಾಸಿಸುವ ಮುಂಡಾ ಬುಡಕಟ್ಟು ಸಮುದಾಯದ ಒಂದು ವರ್ಗವು ಚುನಾವಣಾ ಆಯೋಗದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯನ್ನು ತೀವ್ರವಾಗಿ ವಿರೋಧಿಸಿದ್ದು, ಆಧುನಿಕ...

NICE ನಲ್ಲಿ ಯೋಜನೆಯಲ್ಲಿ ‘ನೈಸ್’ ಎನ್ನುವಂತಹದ್ದು ಏನೂ ಇಲ್ಲ: ರಾಜ್ಯದ ಅತಿದೊಡ್ಡ ಹಗರಣ ಎಂದ ಹೈಕೋರ್ಟ್

ಬೆಂಗಳೂರು-ಮೈಸೂರು ಇನ್‌ಫ್ರಾಸ್ಟ್ರಕ್ಚರ್ ಕಾರಿಡಾರ್ ಯೋಜನೆ (ಬಿಎಂಐಸಿಪಿ) ಅಥವಾ 'ನೈಸ್' ಯೋಜನೆ ಕರ್ನಾಟಕದ ಇತಿಹಾಸದಲ್ಲೇ ಅತ್ಯಂತ ದೊಡ್ಡ ಹಗರಣಗಳಲ್ಲಿ ಒಂದಾಗಿ ಕಾಣಿಸುತ್ತಿದೆ ಎಂದು ಕರ್ನಾಟಕ ಹೈಕೋರ್ಟ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ. ನಂದಿ ಇನ್‌ಫ್ರಾಸ್ಟ್ರಕ್ಚರ್ ಕಾರಿಡಾರ್...

ಪ್ರತಿಭಟನೆಗೆ ಹೋಗುವ ಮಹಿಳೆಯರು ಗ್ಯಾಂಗ್‌ರೇಪ್‌ ಆನಂದಿಸುತ್ತಾರೆ ಎಂದಿದ್ದ ಟಿ.ಜಿ. ಮೋಹನ್‌ದಾಸ್‌ ವಿರುದ್ಧ ಎಫ್‌ಐಆರ್‌ ದಾಖಲು

ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವವರ ಮೇಲೆ, ನನ್ನ ಕೈಯಲ್ಲಿ ಅಧಿಕಾರವಿದ್ದರೆ ಗುಂಡು ಹಾರಿಸುತ್ತಿದ್ದೆ ಎಂದು ಇತ್ತೀಚಿನ ಯೂಟ್ಯೂಬ್ ವೀಡಿಯೊದಲ್ಲಿ ಹೇಳಿಕೆ ನೀಡಿದ್ದ ಹಿಂದುತ್ವವಾದಿ ಚಿಂತಕ ಟಿ.ಜಿ. ಮೋಹನ್‌ದಾಸ್ ವಿರುದ್ಧ ತಿರುವನಂತಪುರಂ ಸಿಟಿ...

ಫ್ರಾನ್ಸ್‌ನಲ್ಲಿ ಕೆಲಸದ ಸಮಯ ಟ್ರ್ಯಾಕಿಂಗ್ ಲೋಪ: ಇನ್ಫೋಸಿಸ್‌ಗೆ ₹1.9 ಕೋಟಿ ದಂಡ: ನಾರಾಯಣಮೂರ್ತಿಯವರ ‘70 ಗಂಟೆ ಶ್ರಮ’ದ ಮಾದರಿ ಟ್ರೋಲ್

ಭಾರತೀಯ ಐಟಿ ರಫ್ತು ಸೇವಾ ರಂಗದ ಬೃಹತ್ ಸಂಸ್ಥೆಯಾದ ಇನ್ಫೋಸಿಸ್‌ಗೆ ಫ್ರಾನ್ಸ್‌ನಲ್ಲಿ ಹಿನ್ನಡೆಯಾಗಿದೆ. ಉದ್ಯೋಗಿಗಳ ಕೆಲಸದ ಸಮಯವನ್ನು ದಾಖಲಿಸುವ ವ್ಯವಸ್ಥೆಯಲ್ಲಿನ ನ್ಯೂನತೆಗಳು ಹಾಗೂ ಸ್ಥಳೀಯ ಕಾರ್ಮಿಕ ನಿಯಮಾವಳಿಗಳ ಪಾಲನೆಯಲ್ಲಿ ಕಂಡುಬಂದ ಲೋಪಗಳ ಹಿನ್ನೆಲೆಯಲ್ಲಿ...

ವೋಟರ್ ಐಡಿ, ಬ್ಯಾಂಕ್ ಪಾಸ್‌ಬುಕ್, ಆಧಾರ್, ಜಮೀನಿನ ಹಕ್ಕು ಪತ್ರ ಇದ್ದ ಮಾತ್ರಕ್ಕೆ ಭಾರತೀಯ ಪ್ರಜೆಯಾಗಲ್ಲ: ಕಲ್ಕತ್ತಾ ಹೈಕೋರ್ಟ್

ಆಧಾರ್ ಕಾರ್ಡ್, ಪಾನ್ ಕಾರ್ಡ್, ಮತದಾರರ ಗುರುತಿನ ಚೀಟಿ, ಬ್ಯಾಂಕ್ ಪಾಸ್‌ಬುಕ್ ಮತ್ತು ಪಿತ್ರಾರ್ಜಿತ ಜಮೀನಿನ ದಾಖಲೆಗಳು ಭಾರತೀಯ ಪೌರತ್ವವನ್ನು ನಿರೂಪಿಸಲು ಅಂತಿಮ ಅಥವಾ ನಿರ್ಣಾಯಕ ಪುರಾವೆಗಳಲ್ಲ ಎಂದು ಕಲ್ಕತ್ತಾ ಹೈಕೋರ್ಟ್ ಮಹತ್ವದ...

‘ನಿಮ್ಮ ಸಮಯ ಬಂದಿದೆ’: ಟೌನ್‌ಶಿಪ್ ಯೋಜನೆ ವಿರುದ್ಧದ ಪ್ರತಿಭಟನೆಗೆ 500 ದಿನ: ‘Gen-Z’ ಯುವಕರ ಬೆಂಬಲ ಕೋರಿದ ಬಿಡದಿ ರೈತರು

ಬೆಂಗಳೂರು: ಪ್ರಸ್ತಾವಿತ ಬಿಡದಿ ಟೌನ್‌ಶಿಪ್ ಯೋಜನೆ ವಿರುದ್ಧ ಕೃಷಿ ಭೂಮಿ ಉಳಿವಿಗಾಗಿ ನಡೆಯುತ್ತಿರುವ ರೈತರ ಸುದೀರ್ಘ ಹೋರಾಟವು ಇದೀಗ ಒಂದು ಪ್ರಮುಖ ಘಟ್ಟಕ್ಕೆ ಬಂದು ತಲುಪಿದೆ. ಭೂಸ್ವಾಧೀನದ ವಿರುದ್ಧ ಸತತವಾಗಿ ನಡೆಯುತ್ತಿರುವ ಈ...

ಕೊಡಗಿನ ಆದಿವಾಸಿ ಹಾಡಿಗಳಲ್ಲಿ ಎಸ್‌ಐಆರ್ ಅವ್ಯವಸ್ಥೆ : ಬಿಎಲ್‌ಒಗಳಿಗೆ ತರಬೇತಿಯ ಕೊರತೆ, ಇನ್ನೂ ತಲುಪದ ಗಣತಿ ಫಾರಂ

ಕರ್ನಾಟಕದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಬಹಳ ಯಶಸ್ವಿಯಾಗಿ ನಡೆಯುತ್ತಿದೆ, ಮತದಾರರಿಗೆ ಎಲ್ಲಾ ರೀತಿಯ ಸಹಾಯಗಳನ್ನು ಒದಗಿಸಲಾಗುತ್ತಿದೆ ಎಂದು ರಾಜ್ಯ ಮುಖ್ಯ ಚುನಾವಣಾ ಆಯುಕ್ತ ಅನ್ಬುಕುಮಾರ್ ಅವರು ಪದೇ...