Homeಮುಖಪುಟಮಹಾರಾಷ್ಟ್ರ ವಿಧಾನಸಭೆ ಚುನಾವಣೆಯಲ್ಲಿ ಅಕ್ರಮ ಆರೋಪಿಸಿ ಅರ್ಜಿ : ಚು. ಆಯೋಗಕ್ಕೆ ಹೈಕೋರ್ಟ್ ನೋಟಿಸ್

ಮಹಾರಾಷ್ಟ್ರ ವಿಧಾನಸಭೆ ಚುನಾವಣೆಯಲ್ಲಿ ಅಕ್ರಮ ಆರೋಪಿಸಿ ಅರ್ಜಿ : ಚು. ಆಯೋಗಕ್ಕೆ ಹೈಕೋರ್ಟ್ ನೋಟಿಸ್

- Advertisement -
- Advertisement -

ಮಹಾರಾಷ್ಟ್ರ ವಿಧಾನಸಭೆ ಚುನಾವಣೆಯಲ್ಲಿ ಅಕ್ರಮ ನಡೆದಿದೆ ಎಂದು ಆರೋಪಿಸಿ ಮುಂಬೈನ ವಿಖ್ರೋಲಿಯ ನಿವಾಸಿ ಚೇತನ್ ಅಹಿರೆ ಎಂಬವರು ಬಾಂಬೆ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ. ಅರ್ಜಿದಾರನ ಪರ ಡಾ.ಬಿಆರ್ ಅಂಬೇಡ್ಕರ್ ಅವರ ಮೊಮ್ಮಗ, ವಕೀಲ ಪ್ರಕಾಶ್ ಅಂಬೇಡ್ಕರ್ ವಾದ ಮಂಡಿಸಿದ್ದಾರೆ.

ಸೋಮವಾರ (ಫೆ.3) ಸ್ವಲ್ಪ ಹೊತ್ತು ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಎ.ಎಸ್. ಗಡ್ಕರಿ ಮತ್ತು ಕಮಲ್ ಖಾಟಾ ಅವರ ಹೈಕೋರ್ಟ್ ಪೀಠ ಭಾರತೀಯ ಚುನಾವಣಾ ಆಯೋಗ (ಇಸಿಐ) ಮತ್ತು ಮಹಾರಾಷ್ಟ್ರದ ಮುಖ್ಯ ಚುನಾವಣಾ ಅಧಿಕಾರಿಗೆ ನೋಟಿಸ್ ಜಾರಿ ಮಾಡಿದೆ.

ನವೆಂಬರ್ 20, 2024ರಂದು ನಡೆದ ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯ ಮತದಾನದ ಸಂದರ್ಭದಲ್ಲಿ, ಸಂಜೆ 6 ಗಂಟೆಯ ನಂತರ ಭಾರೀ ಪ್ರಮಾಣದಲ್ಲಿ ಮತದಾನ ನಡೆದಿದೆ. ಹಾಗಾಗಿ, ಪ್ರತಿ ಮತಗಟ್ಟೆಯಲ್ಲಿ ಪ್ರತಿ ಮತದಾರರಿಗೆ ವಿತರಿಸಲಾದ ಟೋಕನ್‌ಗಳ ಸಂಖ್ಯೆ ಮತ್ತು ಎಲ್ಲಾ ವಿಧಾನಸಭಾ ಕ್ಷೇತ್ರಗಳ ವಿಭಾಗಗಳಲ್ಲಿ ವಿತರಿಸಲಾದ ಒಟ್ಟು ಟೋಕನ್‌ಗಳನ್ನು ಬಹಿರಂಗಪಡಿಸಲು ರಾಜ್ಯ ಮತ್ತು ಚುನಾವಣಾ ಆಯೋಗಕ್ಕೆ ಸೂಚಿಸಬೇಕು. ಒಂದು ವೇಳೆ ಟೋಕನ್‌ಗಳ ಮಾಹಿತಿ ನೀಡಲು ಆಯೋಗ ವಿಫಲವಾದರೆ ಸಂಪೂರ್ಣ ಚುನಾವಣಾ ಪ್ರಕ್ರಿಯೆಯನ್ನು ಅನೂರ್ಜಿತ ಮತ್ತು ಕಾನೂನುಬಾಹಿರವೆಂದು ಘೋಷಿಸಬೇಕು ಎಂದು ಅರ್ಜಿದಾರನ ಪರ ವಕೀಲ ಪ್ರಕಾಶ್ ಅಂಬೇಡ್ಕರ್ ನ್ಯಾಯಾಲಯವನ್ನು ಕೋರಿದ್ದಾರೆ.

https://twitter.com/INCKarnataka/status/1886633779684352373

ಮತದಾನದ ಅವಧಿಯ ಕೊನೆಯಲ್ಲಿ ಮತ್ತು ನಂತರ ಸರಿ ಸುಮಾರು 75 ಲಕ್ಷಕ್ಕೂ ಹೆಚ್ಚು ಮತಗಳು ಚಲಾವಣೆಯಾಗಿವೆ. ಆದರೆ, ಈ ಮತಗಳ ದೃಢೀಕರಣವನ್ನು ದಾಖಲಿಸುವ ಅಥವಾ ಪರಿಶೀಲಿಸುವ ಯಾವುದೇ ಪಾರದರ್ಶಕ ವ್ಯವಸ್ಥೆಯನ್ನು ಒದಗಿಸಲಾಗಿಲ್ಲ ಎಂದು ಅರ್ಜಿಯಲ್ಲಿ ದೂರಲಾಗಿದೆ.

ಮತದಾನದ ಅವಧಿಯ ಅಂತಿಮ ನಿಮಿಷಗಳಲ್ಲಿ ಮತ್ತು ಮತದಾನದ ಅಧಿಕೃತ ಸಮಯ ಮುಕ್ತಾಯದ ನಂತರವೂ ಹೆಚ್ಚಿನ ಶೇಕಡಾವಾರು ಮತಗಳು ಚಲಾವಣೆಯಾಗಿರುವುದು ಈ ಚುನಾವಣೆಯ ಬಗ್ಗೆ ಗಂಭೀರ ಕಳವಳವನ್ನು ಉಂಟು ಮಾಡಿದೆ ಎಂದು ಹೇಳಲಾಗಿದೆ.

ಅಧಿಕೃತ ಮತದಾನ ಅವಧಿ ಮುಕ್ತಾಯದ ನಂತರ ಹಾಜರಿದ್ದ ಮತದಾರರಿಗೆ ವಿತರಿಸಲಾದ ಪೂರ್ವ-ಸಂಖ್ಯೆಯ ಟೋಕನ್‌ಗಳನ್ನು ಬಹಿರಂಗಪಡಿಸಿಲ್ಲ. ಚುನಾವಣಾ ಆಯೋಗವು ತನ್ನ ಅಧಿಕೃತ ವೆಬ್‌ಸೈಟ್‌ನಲ್ಲಿ ಈ ಕುರಿತು ವಿವರವಾದ ಡೇಟಾ ಬಿಡುಗಡೆ ಮಾಡುವಲ್ಲಿ ವಿಫಲವಾಗಿದೆ. ಈ ಕುರಿತ ಡೇಟಾ ನಮ್ಮಲ್ಲಿ ಇಲ್ಲ ಎಂಬ ಚುನಾವಣಾ ಆಯೋಗದ ಲಿಖಿತ ಉತ್ತರವು ಎಲೆಕ್ಟ್ರಾನಿಕ್ ಮತ ಯಂತ್ರಗಳನ್ನು (ಇವಿಎಂ) ಬಳಸಿಕೊಂಡು ನಡೆಸುವ ಚುನಾವಣಾ ಪ್ರಕ್ರಿಯೆಯ ಸುರಕ್ಷತೆ, ನಿಖರತೆ, ವಿಶ್ವಾಸಾರ್ಹತೆ ಮತ್ತು ಪರಿಶೀಲನೆಯ ಬಗ್ಗೆ ಗಮನಾರ್ಹ ಅನುಮಾನಗಳನ್ನು ಹುಟ್ಟು ಹಾಕುತ್ತದೆ ಎಂದು ಅರ್ಜಿಯಲ್ಲಿ ತಿಳಿಸಲಾಗಿದೆ.

288 ಕ್ಷೇತ್ರಗಳ ಪೈಕಿ ಸುಮಾರು 19 ಕ್ಷೇತ್ರಗಳಲ್ಲಿ ಇವಿಎಂಗಳಲ್ಲಿ ಎಣಿಕೆಯಾದ ಮತಗಳು ದಾಖಲಾದ ಮತಗಳ ಸಂಖ್ಯೆಯನ್ನು ಮೀರಿದೆ. ಇನ್ನು 76 ಕ್ಷೇತ್ರಗಳಲ್ಲಿ ಇವಿಎಂಗಳಲ್ಲಿ ಎಣಿಕೆಯಾದ ಮತಗಳು ಪೋಲಾದ ಮತಗಳಿಗಿಂತ ಕಡಿಮೆ ಇರುವುದು ಕಂಡು ಬಂದಿದೆ ಎಂದು ಅರ್ಜಿಯಲ್ಲಿ ಆರೋಪಿಸಲಾಗಿದೆ.

ಪ್ರತಿ ಮತಗಟ್ಟೆಯಲ್ಲಿ ಅಧಿಕೃತ ಮತದಾನದ ಅವಧಿ ಮುಕ್ತಾಯ ನಂತರ (ಅಂದರೆ, ಸಂಜೆ 6 ಗಂಟೆಯ ನಂತರ) ಮತದಾರರಿಗೆ ವಿತರಿಸಲಾದ ನಿಖರವಾದ ಸಂಖ್ಯೆಯ ಟೋಕನ್‌ಗಳ ಬಗ್ಗೆ ಮತ್ತು ರಾಜ್ಯದ ಎಲ್ಲಾ ವಿಧಾನಸಭಾ ಕ್ಷೇತ್ರಗಳ ವಿಭಾಗಗಳಲ್ಲಿ ವಿತರಿಸಲಾದ ಒಟ್ಟು ಟೋಕನ್‌ಗಳ ಬಗ್ಗೆ ವಿವರವಾದ ಬಹಿರಂಗಪಡಿಸಬೇಕು ಎಂದು ಅರ್ಜಿಯಲ್ಲಿ ಕೋರಲಾಗಿದೆ.

ನವೆಂಬರ್ 20, 2024ರಂದು ಸಂಜೆ 5 ರಿಂದ 6 ಗಂಟೆಯವರೆಗೆ ಮಹಾರಾಷ್ಟ್ರದ ಪ್ರತಿ ಕ್ಷೇತ್ರದಲ್ಲಿ ಚಲಾಯಿಸಲಾದ ಮತ್ತು ಮತದಾನವಾದ ಒಟ್ಟು ಮತಗಳ ಸಂಖ್ಯೆ. ಸಂಜೆ 6 ಗಂಟೆಯ ನಂತರ ಮತದಾನದ ಅಂತಿಮ ಮುಕ್ತಾಯದ ಸಮಯದವರೆಗೆ ಪ್ರತಿ ಕ್ಷೇತ್ರದಲ್ಲಿ ಚಲಾಯಿಸಲಾದ ಮತ್ತು ಮತದಾನವಾದ ಒಟ್ಟು ಮತಗಳ ಸಂಖ್ಯೆಯನ್ನು ಬಹಿರಂಗಪಡಿಸುವಂತೆಯೂ ಅರ್ಜಿಯಲ್ಲಿ ಮನವಿ ಮಾಡಲಾಗಿದೆ.

ಈ ಎಲ್ಲಾ ಮಾಹಿತಿಗಳನ್ನು ನೀಡುವಂತೆ ಆರ್‌ಟಿಐ ಮೂಲಕ ಚುನಾವಣಾ ಆಯೋಗವನ್ನು ಕೋರಿದ್ದೆವು. ಆದರೆ, ಆಯೋಗ ತಮ್ಮಲ್ಲಿ ಆ ಬಗ್ಗೆ ಯಾವುದೇ ಮಾಹಿತಿ ಇಲ್ಲ ಎಂದಿದೆ. ಚುನಾವಣಾ ಅಧಿಕಾರಿಗಳು ಈ ಮಾಹಿತಿಯನ್ನು ಬಹಿರಂಗಪಡಿಸಲು ವಿಫಲವಾದರೆ ಅದು ಜನತಾ ಪ್ರಾತಿನಿಧ್ಯ ಕಾಯ್ದೆಯ ನಿಬಂಧನೆಗಳನ್ನು ಸಂಪೂರ್ಣವಾಗಿ ಉಲ್ಲಂಘಿಸಿದಂತೆ ಆಗುತ್ತದೆ ಮತ್ತು ಇದರಿಂದಾಗಿ ಚುನಾವಣಾ ಪ್ರಕ್ರಿಯೆಯ ಪಾವಿತ್ರ್ಯತೆ ಹಾಳಾಗುತ್ತದೆ ಎಂದು ಅರ್ಜಿದಾರ ಚೇತನ್ ಅಹಿರೆ ಪರ ವಕೀಲ ಅಂಬೇಡ್ಕರ್ ಹೇಳಿದ್ದಾರೆ.

ಚುನಾವಣೆಯಲ್ಲಿ ಬಳಸಲಾದ ಇವಿಎಂಗಳು ಮತ್ತು ವೋಟರ್ ವೆರಿಫೈಯಬಲ್ ಪೇಪರ್ ಆಡಿಟ್ ಟ್ರೇಲ್ಸ್ (ವಿವಿಪ್ಯಾಟ್‌) ಗಳ ಸಮಗ್ರ ಮತ್ತು ಸ್ವತಂತ್ರ ಲೆಕ್ಕಪರಿಶೋಧನೆಯನ್ನು ಸಹ ಅರ್ಜಿಯಲ್ಲಿ ಕೋರಲಾಗಿದೆ. ಎರಡು ವಾರಗಳ ನಂತರ ಪೀಠವು ಈ ವಿಷಯವನ್ನು ಮತ್ತೆ ವಿಚಾರಣೆ ನಡೆಸಲಿದೆ.

ಸೋನಿಯಾ ಗಾಂಧಿ ವಿರುದ್ಧ ಹಕ್ಕುಚ್ಯುತಿ ನಿರ್ಣಯ ಮಂಡಿಸಿದ ಬಿಜೆಪಿ ಸಂಸದರು

electo

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹೈದರಾಬಾದ್| ಎಕ್ಸ್‌ಪ್ರೆಸ್‌ವೇನಲ್ಲಿ ನೇಮಕಾತಿ ಪರೀಕ್ಷೆ ಓಎಂಆರ್ ಹಾಳೆಗಳು ಪತ್ತೆ: ತನಿಖೆಗೆ ಆದೇಶ

ನೇಮಕಾತಿ ಪರೀಕ್ಷೆಯ ಮೂಲ ಆಪ್ಟಿಕಲ್ ಮಾರ್ಕ್ ರೆಕಗ್ನಿಷನ್ (ಒಎಂಆರ್) ಹಾಳೆಗಳು ಹೈದರಾಬಾದ್‌ನ ರಸ್ತೆಬದಿಯಲ್ಲಿ ರಾಶಿ ರಾಶಿಯಾಗಿ ಬಿದ್ದಿರುವುದು ಕಂಡುಬಂದ ನಂತರ ತೆಲಂಗಾಣ ಸಾರ್ವಜನಿಕ ಸೇವಾ ಆಯೋಗ (ಟಿಜಿಪಿಎಸ್‌ಸಿ) ತನಿಖೆಗೆ ಆದೇಶಿಸಿದೆ. 2018 ರ ಹಾಸ್ಟೆಲ್...

ಕರೂರ್ ಕಾಲ್ತುಳಿತ ಮೃತರ ಕುಟುಂಬಸ್ಥರಿಗೆ ನೀಡಿದ್ದ ಸರ್ಕಾರಿ ಉದ್ಯೋಗವನ್ನು ರದ್ದುಗೊಳಿಸಿದ ಮದ್ರಾಸ್ ಹೈಕೋರ್ಟ್

ಕರೂರ್ ಕಾಲ್ತುಳಿತ ದುರಂತದಲ್ಲಿ ಮೃತಪಟ್ಟವರ ಕುಟುಂಬಸ್ಥರಿಗೆ ಸರ್ಕಾರಿ ಉದ್ಯೋಗ ನೀಡಿದ್ದ ತಮಿಳುನಾಡು ಸರ್ಕಾರದ ಆದೇಶವನ್ನು ಮದ್ರಾಸ್ ಹೈಕೋರ್ಟ್ ಸೋಮವಾರ ರದ್ದುಗೊಳಿಸಿದೆ. ಈ ನೇಮಕಾತಿಗಳನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ (PIL) ವಿಚಾರಣೆ...

ವಿದ್ಯಾರ್ಥಿಗಳ ಬಂಧನ: ಮತ್ತೆ ಪ್ರತಿಭಟನೆಯ ಎಚ್ಚರಿಕೆ ನೀಡಿದ ‘ಕಾಕ್ರೋಚ್ ಜನತಾ ಪಾರ್ಟಿ’

ಪ್ರತಿಭಟನಾಕಾರರ ವಿರುದ್ಧ ಯಾವುದೇ ಪೋಲೀಸ್ ಕ್ರಮ ಕೈಗೊಳ್ಳುವುದಿಲ್ಲ ಎಂಬ ಒಪ್ಪಂದವನ್ನು ಸಂಪೂರ್ಣವಾಗಿ ಉಲ್ಲಂಘಿಸಲಾಗಿದೆ ಎಂದು 'ಕಾಕ್ರೋಚ್ ಜನತಾ ಪಾರ್ಟಿ' (CJP) ರಾಷ್ಟ್ರೀಯ ವಕ್ತಾರ ಅಶುತೋಷ್ ರಂಕಾ ಎಕ್ಸ್ (X) ಸಾಮಾಜಿಕ ಜಾಲತಾಣದ ಪೋಸ್ಟ್‌ನಲ್ಲಿ...

ಜೆನ್ ಝೀ ಪೀಳಿಗೆಯ ಹೋರಾಟ ಮತ್ತು ಮುಂದಿನ ನಡೆ.!

NEET ಪರೀಕ್ಷೆಯ ಅಕ್ರಮ ಹಾಗೂ ಪೇಪರ್ ಸೋರಿಕೆ ವಿರುದ್ಧ 'ಜೆನ್ ಝೀ' (Gen Z) ಯುವ ಸಮೂಹ ನಡೆಸಿದ ಹೋರಾಟವು ಕೇವಲ ಒಂದು ತಾತ್ಕಾಲಿಕ ವಿದ್ಯಾರ್ಥಿ ಹೋರಾಟವಾಗಿ ಉಳಿದಿಲ್ಲ. ಇದು ಪ್ರಭುತ್ವದ ಅಹಂಕಾರವನ್ನು...

ಬಿಹಾರ| ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ಬಳಸಿದ ಪೊಲೀಸ್‌ ಕಾನ್‌ಸ್ಟೆಬಲ್ ಅಮಾನತು

ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಜುಲೈ 25 ರಂದು ನಡೆದ ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ರೈಫಲ್ ಬಳಸಿರುವ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ನಂತರ ಪೊಲೀಸ್ ಕಾನ್‌ಸ್ಟೆಬಲ್ ಒಬ್ಬರನ್ನು ಅಮಾನತುಗೊಳಿಸಲಾಗಿದೆ ಎಂದು...

ನಾಳೆ ನನ್ನ ಮಗನೂ ಮೋದಿ ವಿರುದ್ಧ ಮಾತನಾಡಬಹುದು: ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ

ಅಸ್ಸಾಂ ಸಚಿವರೊಬ್ಬರ ಮಗಳು ಗುವಾಹಟಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು, ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿರುವುದು ರಾಜ್ಯಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ಘಟನೆಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ...

ವಿದ್ಯಾರ್ಥಿಗಳನ್ನು ಗುಂಡಿಕ್ಕಿ ಕೊಲ್ಲಬೇಕಿತ್ತು: ಆರ್‌ಎಸ್‌ಎಸ್ ಸಿದ್ಧಾಂತವಾದಿ ಟಿ.ಜಿ. ಮೋಹನ್‌ದಾಸ್ ವಿಕೃತ ಹೇಳಿಕೆ

ನವದೆಹಲಿ: ಕೇಂದ್ರ ಸರ್ಕಾರದ ಶಿಕ್ಷಣ ನೀತಿಗಳು ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ದೆಹಲಿಯ ಜಂತರ್ ಮಂತರ್‌ನಲ್ಲಿ ಬೃಹತ್ ಪ್ರತಿಭಟನೆ ನಡೆಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿದ್ದ ಯುವಜನರ ವಿರುದ್ಧ...

ಸಿಜೆಪಿ ಪ್ರತಿಭಟನೆ: ವಿದ್ಯಾರ್ಥಿಗಳ ಮೇಲೆ ‘ಪೆಲೆಟ್‌ ಗನ್’ ದಾಳಿ ದೃಢ; ನಿಯಮಾವಳಿಗಳನ್ನು ಉಲ್ಲಂಘಿಸಿ ಬಲಪ್ರಯೋಗ ನಡೆಸಿರುವ RAF

ನವದೆಹಲಿ: ತಮ್ಮ ಹಕ್ಕುಗಳಿಗಾಗಿ ಪ್ರಜಾಸತ್ತಾತ್ಮಕವಾಗಿ ಧ್ವನಿ ಎತ್ತುತ್ತಿದ್ದ ವಿದ್ಯಾರ್ಥಿ ಸಮುದಾಯದ ಮೇಲೆ ಕೇಂದ್ರದ ಸಶಸ್ತ್ರ ಪಡೆಗಳು ಎಸಗಿದ ದೌರ್ಜನ್ಯದ ಕರಾಳ ಮುಖ ಕೊನೆಗೂ ಅನಾವರಣಗೊಂಡಿದೆ. ಜುಲೈ 20ರಂದು ದೆಹಲಿಯ ಕನ್ಹಾಟ್ ಪ್ಲೇಸ್ ಪ್ರದೇಶದಲ್ಲಿ...

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...