Homeಮುಖಪುಟಮಥುರಾದ ಮತ್ತೊಂದು ಮಸೀದಿ ತೆಗೆದುಹಾಕುವಂತೆ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಕೆ

ಮಥುರಾದ ಮತ್ತೊಂದು ಮಸೀದಿ ತೆಗೆದುಹಾಕುವಂತೆ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಕೆ

- Advertisement -
- Advertisement -

ಉತ್ತರ ಪ್ರದೇಶದ ಮಥುರಾದಲ್ಲಿ ಕೃಷ್ಣ ಜನ್ಮಭೂಮಿ ಬಳಿಯ ಮತ್ತೊಂದು ಮಸೀದಿಯನ್ನು ತೆಗೆದುಹಾಕುವಂತೆ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಲಾಗಿದೆ. ‘ಮಿನಾ ಮಸೀದಿ’ ಎಂದು ಕರೆಯಲಾಗುವ ಈ ಧಾರ್ಮಿಕ ಕೇಂದ್ರ ಮೊಘಲರ ಕಾಲಕ್ಕೆ ಸೇರಿದ್ದು ಎಂದು ವರದಿಯಾಗಿದೆ. ಕೃಷ್ಣ ಜನ್ಮಭೂಮಿ ಸಂಕೀರ್ಣದ ಪೂರ್ವ ಭಾಗದಲ್ಲಿರುವ ಠಾಕೂರ್ ಕೇಶವ್ ದೇವ್ ಜಿ ದೇವಸ್ಥಾನದ ಒಂದು ಭಾಗದಲ್ಲಿ ಮಸೀದಿಯನ್ನು ನಿರ್ಮಿಸಲಾಗಿದೆ ಎಂದು ಅರ್ಜಿದಾರರು ಪ್ರತಿಪಾದಿಸಿದ್ದಾರೆ.

ಅಖಿಲ ಭಾರತ ಹಿಂದೂ ಮಹಾಸಭಾದ (ಎಬಿಎಚ್‌ಎಂ) ರಾಷ್ಟ್ರೀಯ ಖಜಾಂಚಿ ದಿನೇಶ್ ಶರ್ಮಾ ಅವರು ಕೃಷ್ಣನ ಭಕ್ತ ಮತ್ತು ಅವರ ‘ವಾದ್ ಮಿತ್ರ’ ಎಂದು ಮೊಕದ್ದಮೆ ಹೂಡಿದ್ದಾರೆ. ಮಥುರಾ ಹಿರಿಯ ವಿಭಾಗದ ಸಿವಿಲ್ ನ್ಯಾಯಾಧೀಶರಾದ ಜ್ಯೋತಿ ಸಿಂಗ್ ಅವರ ನ್ಯಾಯಾಲಯದಲ್ಲಿ ಈ ಮೊಕದ್ದಮೆ ದಾಖಲಿಸಲಾಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಇದೇ ಪ್ರದೇಶದ ಮತ್ತೊಂದು ಪ್ರಮುಖ ಮಸೀದಿಯಾದ ಶಾಹಿ ಈದ್ಗಾ ಮಸೀದಿಯನ್ನು ಸಂಕೀರ್ಣದಿಂದ ಸ್ಥಳಾಂತರಿಸುವಂತೆ ಕೋರಿ ಈಗಾಗಲೇ ವಿವಿಧ ಮಥುರಾ ನ್ಯಾಯಾಲಯಗಳಲ್ಲಿ ಹಲವಾರು ಅರ್ಜಿಗಳನ್ನು ಸಲ್ಲಿಸಲಾಗಿದೆ. ಈ ಮಸೀದಿಯು ‘ಕೃಷ್ಣನ ಜನ್ಮಸ್ಥಳ’ದ ಪ್ರಮುಖ ಸ್ಥಳವಾದ ದೇವಾಲಯದ ಆವರಣದ 13.37 ಎಕರೆ ಪ್ರದೇಶದಲ್ಲಿ ನಿರ್ಮಿಸಲಾಗಿದೆ ಎಂದು ಅರ್ಜಿದಾರರು ಸಮರ್ಥಿಸಿಕೊಂಡಿದ್ದಾರೆ.

ಇದನ್ನೂ ಓದಿ: ಬಿಜೆಪಿ ಬೆಂಬಲಿತ ಸಂಘಟನೆಯಾದ ಬಜರಂಗದಳದ ದುಷ್ಕರ್ಮಿಗಳ ಬೆದರಿಕೆ: ಮಸೀದಿ ವೀಕ್ಷಣೆ ಪ್ರವಾಸ ರದ್ದು ಮಾಡಿದ ಶಿಶುವಿಹಾರ

ಹೊಸದಾಗಿ ಸಲ್ಲಿಸಲಾಗಿರುವ ಅರ್ಜಿಯಲ್ಲಿ ದಿನೇಶ್ ಶರ್ಮಾ ಅವರು ಪ್ರಕರಣದಲ್ಲಿ ‘ಅರ್ಜಿದಾರರ ಸಂಖ್ಯೆ 1’ ಆಗಿರುವ ಠಾಕೂರ್ ಕೇಶವ್ ದೇವ್ ಜಿ ಮಹಾರಾಜ್ (ಶ್ರೀಕೃಷ್ಣನ ಇನ್ನೊಂದು ಹೆಸರು) ಅವರ ಭಕ್ತ ಅನುಯಾಯಿ ಎಂದು ಹೇಳಿಕೊಂಡಿದ್ದಾರೆ.

ದಿನೇಶ್ ಶರ್ಮಾ ಈ ಹಿಂದೆ ಕೃಷ್ಣ ಜನ್ಮಭೂಮಿ ಪಕ್ಕದಲ್ಲಿರುವ ಶಾಹಿ ಮಸೀದಿ ಈದ್ಗಾವನ್ನು ತೆಗೆಯುವಂತೆ ಕೋರಿ ಪ್ರಕರಣ ದಾಖಲಿಸಿದ್ದರು.

“ಕೃಷ್ಣ ಜನ್ಮಭೂಮಿ ಇರುವ ಮಥುರಾ ನಗರದಲ್ಲಿ 13.37 ಎಕರೆ ಜಮೀನು ಹೊಂದಿರುವ ಠಾಕೂರ್ ಕೇಶವ್ ದೇವ್ ಜಿ ಮಹಾರಾಜ್ ಅವರ ಆಸ್ತಿಯನ್ನು ರಕ್ಷಿಸುವುದು ಮೊಕದ್ದಮೆಯ ಮೂಲ ಉದ್ದೇಶವಾಗಿದೆ. ನಾವು ಈಗ ವೃಂದಾವನ ರೈಲುಮಾರ್ಗದ ಬಳಿ ದೀಗ್ ಗೇಟ್‌ನಲ್ಲಿ ದೇವರ ಒಡೆತನದ ಜಮೀನಿನಲ್ಲಿ ಇರುವ ಮಿನಾ ಮಸೀದಿಯ ಹೆಸರಿನಲ್ಲಿ ನಿರ್ಮಿಸಿರುವ ನಿರ್ಮಾಣವನ್ನು ತೆಗೆದುಹಾಕಲು ಕೋರಿದ್ದೇವೆ.” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಜ್ಞಾನವಾಪಿ ಮಸೀದಿ ಪ್ರಕರಣದ ತೀರ್ಪು: ‘ಹೈಕೋರ್ಟ್‌‌ನಲ್ಲಿ ಪ್ರಶ್ನಿಸುತ್ತೇವೆ’ಎಂದ ಮುಸ್ಲಿಂ ಅರ್ಜಿದಾರರು

ಹೊಸ ಮೊಕದ್ದಮೆಯ ಪ್ರತಿವಾದಿಗಳಾಗಿ ಲಕ್ನೋದ ಉತ್ತರ ಪ್ರದೇಶ ಸುನ್ನಿ ಸೆಂಟ್ರಲ್ ವಕ್ಫ್ ಮಂಡಳಿಯ ಅಧ್ಯಕ್ಷರು ಮತ್ತು ಮಥುರಾದ ಮಿನಾ ಮಸೀದಿ (ಡೀಗ್ ಗೇಟ್)ಯ ಇಂಟೆಝಾಮಿಯಾ ಸಮಿತಿಯ ಕಾರ್ಯದರ್ಶಿಯಾಗಿದ್ದಾರೆ.

ಪ್ರಕರಣದ ವಿಚಾರಣೆಯನ್ನು ಅಕ್ಟೋಬರ್ 26ಕ್ಕೆ ನ್ಯಾಯಾಲಯ ನಿಗದಿಪಡಿಸಿದೆ ಎಂದು ಅರ್ಜಿದಾರರ ಪರ ವಕೀಲ ದೀಪಕ್ ಶರ್ಮಾ ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇರಾನ್ ಮೇಲೆ ದಾಳಿ : ಅಮೆರಿಕ ವಿಮಾನಗಳಿಗೆ ತನ್ನ ವಾಯುಪ್ರದೇಶ ಮುಚ್ಚಿದ ಸ್ಪೇನ್

ಇರಾನ್ ಮೇಲಿನ ದಾಳಿಗಳಲ್ಲಿ ಭಾಗಿಯಾಗಿರುವ ಅಮೆರಿಕದ ವಿಮಾನಗಳಿಗೆ ಸ್ಪೇನ್ ತನ್ನ ವಾಯುಪ್ರದೇಶವನ್ನು ನಿರ್ಬಂಧಿಸಿದೆ ಎಂದು ರಕ್ಷಣಾ ಸಚಿವೆ ಮಾರ್ಗರಿಟಾ ರೋಬಲ್ಸ್ (ಮಾ.30) ಸೋಮವಾರ ತಿಳಿಸಿದ್ದಾರೆ. ಜಂಟಿಯಾಗಿ ನಿರ್ವಹಿಸುವ ಸೇನಾ ನೆಲೆಗಳನ್ನು ಬಳಸಲು ಈ...

ಜನಗಣತಿ-2027 : ‘ಸ್ಥಿರ’ ಲಿವ್-ಇನ್ ಜೋಡಿಗೆ ವೈವಾಹಿಕ ಸ್ಥಾನಮಾನ

ತಮ್ಮ ಸಂಬಂಧ 'ಸ್ಥಿರ' ಎಂದು ಹೇಳಿಕೊಳ್ಳುವ ಲಿವ್-ಇನ್ ಜೋಡಿಗಳನ್ನು 2027ರ ಜನಗಣತಿಯಲ್ಲಿ ವಿವಾಹಿತ ದಂಪತಿಯೆಂದು ಪರಿಗಣಿಸಲಾಗುತ್ತದೆ ಎಂದು ವರದಿಯಾಗಿದೆ. ಜನಗಣತಿ ವೆಬ್‌ಸೈಟ್‌ನ FAQ (ಪದೇ ಪದೇ ಕೇಳಲಾಗುವ ಪ್ರಶ್ನೆಗಳು) ವಿಭಾಗದಲ್ಲಿ ಈ ಬಗ್ಗೆ ಸ್ಪಷ್ಟನೆ...

ಉನ್ನತ ಸಾಂಸ್ಥಿಕ ಹುದ್ದೆಗಳಲ್ಲಿ ‘ಬಹುಜನ’ ಪ್ರಾತಿನಿಧ್ಯದ ಕೊರತೆ: ವ್ಯವಸ್ಥಿತ ತಾರತಮ್ಯದ ರೂಪ ಎಂದ ರಾಹುಲ್ ಗಾಂಧಿ 

ಉನ್ನತ ಸಂಸ್ಥೆಗಳ ಹಿರಿಯ ನಾಯಕತ್ವದಲ್ಲಿ "ಬಹುಜನ" ಸಮುದಾಯಗಳಿಗೆ ಪ್ರಾತಿನಿಧ್ಯದ ಕೊರತೆಯಿದೆ ಎಂದು ರಾಹುಲ್ ಗಾಂಧಿ ಸೋಮವಾರ ಆರೋಪಿಸಿದ್ದಾರೆ. ಇದು ವ್ಯವಸ್ಥಿತ ತಾರತಮ್ಯದ ಒಂದು ರೂಪವಾಗಿದ್ದು ಅದನ್ನು ಪರಿಹರಿಸಬೇಕು ಎಂದು ಹೇಳಿದ್ದಾರೆ.  ಲೋಕಸಭೆಯ ವಿರೋಧ ಪಕ್ಷದ...

ಗಾಯಗಳ ತೀವ್ರತೆಯಿಂದಾಗಿ ನೌಕಾಪಡೆಯ ಮುಖ್ಯಸ್ಥ ತಂಗ್ಸಿರಿ ಸಾವನ್ನಪ್ಪಿದ್ದಾರೆ: ದೃಢಪಡಿಸಿದ ಇರಾನ್

ತಾನು ನಡೆಸಿದ ದಾಳಿಯಿಂದ ಇರಾನ್‌ ನೌಕಾಪಡೆಯ ರಿಯರ್ ಅಡ್ಮಿರಲ್ ಅಲಿರೆಜಾ ತಂಗ್ಸಿರಿ ಸಾವನ್ನಪ್ಪಿದ್ದಾರೆ ಎಂದು ಕಳೆದ ಗುರುವಾರ (ಮಾ.26) ಇಸ್ರೇಲ್ ಹೇಳಿಕೊಂಡಿತ್ತು. ಸುದ್ದಿ ಖಷಿತಪಡಿಸಿರುವ ಇರಾನ್, ದಾಳಿಯಿಂದ ಸಂಭವಿಸಿದ ತೀವ್ರ ಗಾಯಗಳಿಂದ ತಂಗ್ಸಿರಿ...

ಬಹುಭಾಷಾ ನಟ ಪ್ರಕಾಶ್ ರಾಜ್‌ ತಾಯಿ ಸ್ವರ್ಣಲತಾ ನಿಧನ

ಬಹುಭಾಷಾ ನಟ ಪ್ರಕಾಶ್ ರಾಜ್ ಅವರ ತಾಯಿ ಸ್ವರ್ಣಲತಾ ಅವರು ತಮ್ಮ 86 ನೇ ವಯಸ್ಸಿನಲ್ಲಿ ನಿಧನರಾಗಿದ್ದಾರೆ. ಅವರು ವಯೋಸಹಜ ಅನಾರೋಗ್ಯದಿಂದ ಸಾವನ್ನಪ್ಪಿದ್ದಾರೆ. ನಟ ಪ್ರಕಾಶ್‌ ರಾಜ್‌ ಅವರು ತಮ್ಮ ತಾಯಿಯೊಂದಿಗೆ ಇದ್ದ...

ಮುಂಬೈ: ಸ್ವ-ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ಆಕ್ರೋಶ: ದಾದರ್‌ನಲ್ಲಿ ಮೂಢನಂಬಿಕೆ ವಿರೋಧಿ ಅಭಿಯಾನ

ಮುಂಬೈ: ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ಅವರ ಚಟುವಟಿಕೆಗಳ ಸುತ್ತ ವ್ಯಾಪಕ ಆಕ್ರೋಶ ವ್ಯಕ್ತವಾಗಿರುವ ಹಿನ್ನೆಲೆಯಲ್ಲಿ, ವಿವೇಕ್ ಜಾಗರ್ ಉಪಕ್ರಮದಡಿಯಲ್ಲಿ ಮಹಾರಾಷ್ಟ್ರ ಅಂಧಾಶ್ರದ್ಧ ನಿರ್ಮೂಲನ ಸಮಿತಿ (MANS) ಮಹಾರಾಷ್ಟ್ರ ಘಟಕವು ಭಾನುವಾರ...

ನೋಟಿಸ್ ನೀಡದೆ ಮಸೀದಿ ಬಂದ್; ಉತ್ತರ ಪ್ರದೇಶ ಸರ್ಕಾರವನ್ನು ಪ್ರಶ್ನಿಸಿದ ಅಲಹಾಬಾದ್ ಹೈಕೋರ್ಟ್

ಪೂರ್ವ ಸೂಚನೆ ನೀಡದೆ ಅಥವಾ ಮಾಲೀಕರಿಗೆ ವಿಚಾರಣೆಗೆ ಅವಕಾಶ ನೀಡದೆ ಪ್ರಾರ್ಥನಾ ಸ್ಥಳಕ್ಕೆ ಬೀಗ ಹಾಕಬಹುದೇ ಎಂಬ ಬಗ್ಗೆ ವಿವರಣೆ ನೀಡಬೇಕು ಎಂದು ಅಲಹಾಬಾದ್ ಹೈಕೋರ್ಟ್ ಉತ್ತರ ಪ್ರದೇಶ ಸರ್ಕಾರವನ್ನು ಕೇಳಿದೆ. ಮುಜಫರ್‌ನಗರದಲ್ಲಿ ಮಸೀದಿಯನ್ನು...

ಬಿಜು ಪಟ್ನಾಯಕ್ ಕುರಿತು ಹೇಳಿಕೆ : ಬಿಜೆಪಿ ಸಂಸದ ನಿಶಿಕಾಂತ್ ದುಬೆ ವಿರುದ್ಧ ತೀವ್ರ ಆಕ್ರೋಶ

ಒಡಿಶಾದ ಮಾಜಿ ಮುಖ್ಯಮಂತ್ರಿ ಬಿಜು ಪಟ್ನಾಯಕ್ ಅವರ ಕುರಿತು ಬಿಜೆಪಿ ಸಂಸದ ನಿಶಿಕಾಂತ್ ದುಬೆ ನೀಡಿರುವ ಹೇಳಿಕೆಗೆ ತೀವ್ರ ಆಕ್ರೋಶ ವ್ಯಕ್ತವಾಗಿದೆ. ದುಬೆ ನೇತೃತ್ವದ ಸಂವಹನ ಮತ್ತು ಐಟಿ ಕುರಿತ ಸಂಸದೀಯ ಸ್ಥಾಯಿ...

ಮುರ್ಷಿದಾಬಾದ್ ರಾಮನವಮಿ ಹಿಂಸಾಚಾರ; ಆರ್‌ಎಸ್‌ಎಸ್ ನಾಯಕ ಸೇರಿದಂತೆ 30 ಜನರ ಬಂಧನ

ಮಾರ್ಚ್ 27 ರಂದು ಮುರ್ಷಿದಾಬಾದ್ ಜಿಲ್ಲೆಯ ಜಂಗಿಪುರ ಉಪವಿಭಾಗದ ರಘುನಾಥಗಂಜ್‌ನಲ್ಲಿ ನಡೆದ ರಾಮನವಮಿ ಮೆರವಣಿಗೆ ಹಿಂಸಾಚಾರಕ್ಕೆ ತಿರುಗಿದ ನಂತರ ಸುಮಾರು 30 ಜನರು ಗಾಯಗೊಂಡರು. ಈ ಘಟನೆಯು ವ್ಯಾಪಕ ಉದ್ವಿಗ್ನತೆಗೆ ಕಾರಣವಾಗಿದ್ದು, ಅಂಗಡಿ...

ದೆಹಲಿ ಗಲಭೆ ಪ್ರಕರಣ: ಮಧ್ಯಂತರ ಜಾಮೀನು ಅವಧಿ ಅಂತ್ಯ; ಇಂದು ತಿಹಾರ್ ಜೈಲಿಗೆ ಮರಳಲಿರುವ ಶಾರ್ಜೀಲ್ ಇಮಾಮ್

2020 ರ ಈಶಾನ್ಯ ದೆಹಲಿ ಗಲಭೆಯ ಹಿಂದಿನ ದೊಡ್ಡ ಪಿತೂರಿ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ನ್ಯಾಯಾಲಯವು ನೀಡಿದ್ದ 10 ದಿನಗಳ ಮಧ್ಯಂತರ ಜಾಮೀನು ಅವಧಿ ಮುಗಿದ ಹಿನ್ನೆಲೆಯಲ್ಲಿ ವಿದ್ಯಾರ್ಥಿ ಕಾರ್ಯಕರ್ತ ಶಾರ್ಜೀಲ್ ಇಮಾಮ್...