Homeಮುಖಪುಟಮಥುರಾದ ಮತ್ತೊಂದು ಮಸೀದಿ ತೆಗೆದುಹಾಕುವಂತೆ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಕೆ

ಮಥುರಾದ ಮತ್ತೊಂದು ಮಸೀದಿ ತೆಗೆದುಹಾಕುವಂತೆ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಕೆ

- Advertisement -
- Advertisement -

ಉತ್ತರ ಪ್ರದೇಶದ ಮಥುರಾದಲ್ಲಿ ಕೃಷ್ಣ ಜನ್ಮಭೂಮಿ ಬಳಿಯ ಮತ್ತೊಂದು ಮಸೀದಿಯನ್ನು ತೆಗೆದುಹಾಕುವಂತೆ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಲಾಗಿದೆ. ‘ಮಿನಾ ಮಸೀದಿ’ ಎಂದು ಕರೆಯಲಾಗುವ ಈ ಧಾರ್ಮಿಕ ಕೇಂದ್ರ ಮೊಘಲರ ಕಾಲಕ್ಕೆ ಸೇರಿದ್ದು ಎಂದು ವರದಿಯಾಗಿದೆ. ಕೃಷ್ಣ ಜನ್ಮಭೂಮಿ ಸಂಕೀರ್ಣದ ಪೂರ್ವ ಭಾಗದಲ್ಲಿರುವ ಠಾಕೂರ್ ಕೇಶವ್ ದೇವ್ ಜಿ ದೇವಸ್ಥಾನದ ಒಂದು ಭಾಗದಲ್ಲಿ ಮಸೀದಿಯನ್ನು ನಿರ್ಮಿಸಲಾಗಿದೆ ಎಂದು ಅರ್ಜಿದಾರರು ಪ್ರತಿಪಾದಿಸಿದ್ದಾರೆ.

ಅಖಿಲ ಭಾರತ ಹಿಂದೂ ಮಹಾಸಭಾದ (ಎಬಿಎಚ್‌ಎಂ) ರಾಷ್ಟ್ರೀಯ ಖಜಾಂಚಿ ದಿನೇಶ್ ಶರ್ಮಾ ಅವರು ಕೃಷ್ಣನ ಭಕ್ತ ಮತ್ತು ಅವರ ‘ವಾದ್ ಮಿತ್ರ’ ಎಂದು ಮೊಕದ್ದಮೆ ಹೂಡಿದ್ದಾರೆ. ಮಥುರಾ ಹಿರಿಯ ವಿಭಾಗದ ಸಿವಿಲ್ ನ್ಯಾಯಾಧೀಶರಾದ ಜ್ಯೋತಿ ಸಿಂಗ್ ಅವರ ನ್ಯಾಯಾಲಯದಲ್ಲಿ ಈ ಮೊಕದ್ದಮೆ ದಾಖಲಿಸಲಾಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಇದೇ ಪ್ರದೇಶದ ಮತ್ತೊಂದು ಪ್ರಮುಖ ಮಸೀದಿಯಾದ ಶಾಹಿ ಈದ್ಗಾ ಮಸೀದಿಯನ್ನು ಸಂಕೀರ್ಣದಿಂದ ಸ್ಥಳಾಂತರಿಸುವಂತೆ ಕೋರಿ ಈಗಾಗಲೇ ವಿವಿಧ ಮಥುರಾ ನ್ಯಾಯಾಲಯಗಳಲ್ಲಿ ಹಲವಾರು ಅರ್ಜಿಗಳನ್ನು ಸಲ್ಲಿಸಲಾಗಿದೆ. ಈ ಮಸೀದಿಯು ‘ಕೃಷ್ಣನ ಜನ್ಮಸ್ಥಳ’ದ ಪ್ರಮುಖ ಸ್ಥಳವಾದ ದೇವಾಲಯದ ಆವರಣದ 13.37 ಎಕರೆ ಪ್ರದೇಶದಲ್ಲಿ ನಿರ್ಮಿಸಲಾಗಿದೆ ಎಂದು ಅರ್ಜಿದಾರರು ಸಮರ್ಥಿಸಿಕೊಂಡಿದ್ದಾರೆ.

ಇದನ್ನೂ ಓದಿ: ಬಿಜೆಪಿ ಬೆಂಬಲಿತ ಸಂಘಟನೆಯಾದ ಬಜರಂಗದಳದ ದುಷ್ಕರ್ಮಿಗಳ ಬೆದರಿಕೆ: ಮಸೀದಿ ವೀಕ್ಷಣೆ ಪ್ರವಾಸ ರದ್ದು ಮಾಡಿದ ಶಿಶುವಿಹಾರ

ಹೊಸದಾಗಿ ಸಲ್ಲಿಸಲಾಗಿರುವ ಅರ್ಜಿಯಲ್ಲಿ ದಿನೇಶ್ ಶರ್ಮಾ ಅವರು ಪ್ರಕರಣದಲ್ಲಿ ‘ಅರ್ಜಿದಾರರ ಸಂಖ್ಯೆ 1’ ಆಗಿರುವ ಠಾಕೂರ್ ಕೇಶವ್ ದೇವ್ ಜಿ ಮಹಾರಾಜ್ (ಶ್ರೀಕೃಷ್ಣನ ಇನ್ನೊಂದು ಹೆಸರು) ಅವರ ಭಕ್ತ ಅನುಯಾಯಿ ಎಂದು ಹೇಳಿಕೊಂಡಿದ್ದಾರೆ.

ದಿನೇಶ್ ಶರ್ಮಾ ಈ ಹಿಂದೆ ಕೃಷ್ಣ ಜನ್ಮಭೂಮಿ ಪಕ್ಕದಲ್ಲಿರುವ ಶಾಹಿ ಮಸೀದಿ ಈದ್ಗಾವನ್ನು ತೆಗೆಯುವಂತೆ ಕೋರಿ ಪ್ರಕರಣ ದಾಖಲಿಸಿದ್ದರು.

“ಕೃಷ್ಣ ಜನ್ಮಭೂಮಿ ಇರುವ ಮಥುರಾ ನಗರದಲ್ಲಿ 13.37 ಎಕರೆ ಜಮೀನು ಹೊಂದಿರುವ ಠಾಕೂರ್ ಕೇಶವ್ ದೇವ್ ಜಿ ಮಹಾರಾಜ್ ಅವರ ಆಸ್ತಿಯನ್ನು ರಕ್ಷಿಸುವುದು ಮೊಕದ್ದಮೆಯ ಮೂಲ ಉದ್ದೇಶವಾಗಿದೆ. ನಾವು ಈಗ ವೃಂದಾವನ ರೈಲುಮಾರ್ಗದ ಬಳಿ ದೀಗ್ ಗೇಟ್‌ನಲ್ಲಿ ದೇವರ ಒಡೆತನದ ಜಮೀನಿನಲ್ಲಿ ಇರುವ ಮಿನಾ ಮಸೀದಿಯ ಹೆಸರಿನಲ್ಲಿ ನಿರ್ಮಿಸಿರುವ ನಿರ್ಮಾಣವನ್ನು ತೆಗೆದುಹಾಕಲು ಕೋರಿದ್ದೇವೆ.” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಜ್ಞಾನವಾಪಿ ಮಸೀದಿ ಪ್ರಕರಣದ ತೀರ್ಪು: ‘ಹೈಕೋರ್ಟ್‌‌ನಲ್ಲಿ ಪ್ರಶ್ನಿಸುತ್ತೇವೆ’ಎಂದ ಮುಸ್ಲಿಂ ಅರ್ಜಿದಾರರು

ಹೊಸ ಮೊಕದ್ದಮೆಯ ಪ್ರತಿವಾದಿಗಳಾಗಿ ಲಕ್ನೋದ ಉತ್ತರ ಪ್ರದೇಶ ಸುನ್ನಿ ಸೆಂಟ್ರಲ್ ವಕ್ಫ್ ಮಂಡಳಿಯ ಅಧ್ಯಕ್ಷರು ಮತ್ತು ಮಥುರಾದ ಮಿನಾ ಮಸೀದಿ (ಡೀಗ್ ಗೇಟ್)ಯ ಇಂಟೆಝಾಮಿಯಾ ಸಮಿತಿಯ ಕಾರ್ಯದರ್ಶಿಯಾಗಿದ್ದಾರೆ.

ಪ್ರಕರಣದ ವಿಚಾರಣೆಯನ್ನು ಅಕ್ಟೋಬರ್ 26ಕ್ಕೆ ನ್ಯಾಯಾಲಯ ನಿಗದಿಪಡಿಸಿದೆ ಎಂದು ಅರ್ಜಿದಾರರ ಪರ ವಕೀಲ ದೀಪಕ್ ಶರ್ಮಾ ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...