Homeಮುಖಪುಟಮಥುರಾದ ಮತ್ತೊಂದು ಮಸೀದಿ ತೆಗೆದುಹಾಕುವಂತೆ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಕೆ

ಮಥುರಾದ ಮತ್ತೊಂದು ಮಸೀದಿ ತೆಗೆದುಹಾಕುವಂತೆ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಕೆ

- Advertisement -
- Advertisement -

ಉತ್ತರ ಪ್ರದೇಶದ ಮಥುರಾದಲ್ಲಿ ಕೃಷ್ಣ ಜನ್ಮಭೂಮಿ ಬಳಿಯ ಮತ್ತೊಂದು ಮಸೀದಿಯನ್ನು ತೆಗೆದುಹಾಕುವಂತೆ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಲಾಗಿದೆ. ‘ಮಿನಾ ಮಸೀದಿ’ ಎಂದು ಕರೆಯಲಾಗುವ ಈ ಧಾರ್ಮಿಕ ಕೇಂದ್ರ ಮೊಘಲರ ಕಾಲಕ್ಕೆ ಸೇರಿದ್ದು ಎಂದು ವರದಿಯಾಗಿದೆ. ಕೃಷ್ಣ ಜನ್ಮಭೂಮಿ ಸಂಕೀರ್ಣದ ಪೂರ್ವ ಭಾಗದಲ್ಲಿರುವ ಠಾಕೂರ್ ಕೇಶವ್ ದೇವ್ ಜಿ ದೇವಸ್ಥಾನದ ಒಂದು ಭಾಗದಲ್ಲಿ ಮಸೀದಿಯನ್ನು ನಿರ್ಮಿಸಲಾಗಿದೆ ಎಂದು ಅರ್ಜಿದಾರರು ಪ್ರತಿಪಾದಿಸಿದ್ದಾರೆ.

ಅಖಿಲ ಭಾರತ ಹಿಂದೂ ಮಹಾಸಭಾದ (ಎಬಿಎಚ್‌ಎಂ) ರಾಷ್ಟ್ರೀಯ ಖಜಾಂಚಿ ದಿನೇಶ್ ಶರ್ಮಾ ಅವರು ಕೃಷ್ಣನ ಭಕ್ತ ಮತ್ತು ಅವರ ‘ವಾದ್ ಮಿತ್ರ’ ಎಂದು ಮೊಕದ್ದಮೆ ಹೂಡಿದ್ದಾರೆ. ಮಥುರಾ ಹಿರಿಯ ವಿಭಾಗದ ಸಿವಿಲ್ ನ್ಯಾಯಾಧೀಶರಾದ ಜ್ಯೋತಿ ಸಿಂಗ್ ಅವರ ನ್ಯಾಯಾಲಯದಲ್ಲಿ ಈ ಮೊಕದ್ದಮೆ ದಾಖಲಿಸಲಾಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಇದೇ ಪ್ರದೇಶದ ಮತ್ತೊಂದು ಪ್ರಮುಖ ಮಸೀದಿಯಾದ ಶಾಹಿ ಈದ್ಗಾ ಮಸೀದಿಯನ್ನು ಸಂಕೀರ್ಣದಿಂದ ಸ್ಥಳಾಂತರಿಸುವಂತೆ ಕೋರಿ ಈಗಾಗಲೇ ವಿವಿಧ ಮಥುರಾ ನ್ಯಾಯಾಲಯಗಳಲ್ಲಿ ಹಲವಾರು ಅರ್ಜಿಗಳನ್ನು ಸಲ್ಲಿಸಲಾಗಿದೆ. ಈ ಮಸೀದಿಯು ‘ಕೃಷ್ಣನ ಜನ್ಮಸ್ಥಳ’ದ ಪ್ರಮುಖ ಸ್ಥಳವಾದ ದೇವಾಲಯದ ಆವರಣದ 13.37 ಎಕರೆ ಪ್ರದೇಶದಲ್ಲಿ ನಿರ್ಮಿಸಲಾಗಿದೆ ಎಂದು ಅರ್ಜಿದಾರರು ಸಮರ್ಥಿಸಿಕೊಂಡಿದ್ದಾರೆ.

ಇದನ್ನೂ ಓದಿ: ಬಿಜೆಪಿ ಬೆಂಬಲಿತ ಸಂಘಟನೆಯಾದ ಬಜರಂಗದಳದ ದುಷ್ಕರ್ಮಿಗಳ ಬೆದರಿಕೆ: ಮಸೀದಿ ವೀಕ್ಷಣೆ ಪ್ರವಾಸ ರದ್ದು ಮಾಡಿದ ಶಿಶುವಿಹಾರ

ಹೊಸದಾಗಿ ಸಲ್ಲಿಸಲಾಗಿರುವ ಅರ್ಜಿಯಲ್ಲಿ ದಿನೇಶ್ ಶರ್ಮಾ ಅವರು ಪ್ರಕರಣದಲ್ಲಿ ‘ಅರ್ಜಿದಾರರ ಸಂಖ್ಯೆ 1’ ಆಗಿರುವ ಠಾಕೂರ್ ಕೇಶವ್ ದೇವ್ ಜಿ ಮಹಾರಾಜ್ (ಶ್ರೀಕೃಷ್ಣನ ಇನ್ನೊಂದು ಹೆಸರು) ಅವರ ಭಕ್ತ ಅನುಯಾಯಿ ಎಂದು ಹೇಳಿಕೊಂಡಿದ್ದಾರೆ.

ದಿನೇಶ್ ಶರ್ಮಾ ಈ ಹಿಂದೆ ಕೃಷ್ಣ ಜನ್ಮಭೂಮಿ ಪಕ್ಕದಲ್ಲಿರುವ ಶಾಹಿ ಮಸೀದಿ ಈದ್ಗಾವನ್ನು ತೆಗೆಯುವಂತೆ ಕೋರಿ ಪ್ರಕರಣ ದಾಖಲಿಸಿದ್ದರು.

“ಕೃಷ್ಣ ಜನ್ಮಭೂಮಿ ಇರುವ ಮಥುರಾ ನಗರದಲ್ಲಿ 13.37 ಎಕರೆ ಜಮೀನು ಹೊಂದಿರುವ ಠಾಕೂರ್ ಕೇಶವ್ ದೇವ್ ಜಿ ಮಹಾರಾಜ್ ಅವರ ಆಸ್ತಿಯನ್ನು ರಕ್ಷಿಸುವುದು ಮೊಕದ್ದಮೆಯ ಮೂಲ ಉದ್ದೇಶವಾಗಿದೆ. ನಾವು ಈಗ ವೃಂದಾವನ ರೈಲುಮಾರ್ಗದ ಬಳಿ ದೀಗ್ ಗೇಟ್‌ನಲ್ಲಿ ದೇವರ ಒಡೆತನದ ಜಮೀನಿನಲ್ಲಿ ಇರುವ ಮಿನಾ ಮಸೀದಿಯ ಹೆಸರಿನಲ್ಲಿ ನಿರ್ಮಿಸಿರುವ ನಿರ್ಮಾಣವನ್ನು ತೆಗೆದುಹಾಕಲು ಕೋರಿದ್ದೇವೆ.” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಜ್ಞಾನವಾಪಿ ಮಸೀದಿ ಪ್ರಕರಣದ ತೀರ್ಪು: ‘ಹೈಕೋರ್ಟ್‌‌ನಲ್ಲಿ ಪ್ರಶ್ನಿಸುತ್ತೇವೆ’ಎಂದ ಮುಸ್ಲಿಂ ಅರ್ಜಿದಾರರು

ಹೊಸ ಮೊಕದ್ದಮೆಯ ಪ್ರತಿವಾದಿಗಳಾಗಿ ಲಕ್ನೋದ ಉತ್ತರ ಪ್ರದೇಶ ಸುನ್ನಿ ಸೆಂಟ್ರಲ್ ವಕ್ಫ್ ಮಂಡಳಿಯ ಅಧ್ಯಕ್ಷರು ಮತ್ತು ಮಥುರಾದ ಮಿನಾ ಮಸೀದಿ (ಡೀಗ್ ಗೇಟ್)ಯ ಇಂಟೆಝಾಮಿಯಾ ಸಮಿತಿಯ ಕಾರ್ಯದರ್ಶಿಯಾಗಿದ್ದಾರೆ.

ಪ್ರಕರಣದ ವಿಚಾರಣೆಯನ್ನು ಅಕ್ಟೋಬರ್ 26ಕ್ಕೆ ನ್ಯಾಯಾಲಯ ನಿಗದಿಪಡಿಸಿದೆ ಎಂದು ಅರ್ಜಿದಾರರ ಪರ ವಕೀಲ ದೀಪಕ್ ಶರ್ಮಾ ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2029ರ ವೇಳೆಗೆ 21 NDA ಆಡಳಿತದ ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ: ಮುಂಬೈನಲ್ಲಿ ಗೃಹ ಸಚಿವ ಅಮಿತ್ ಶಾ ಘೋಷಣೆ

ವಿವಾಹ, ವಿಚ್ಛೇದನ, ಪಿತ್ರಾರ್ಜಿತ ಆಸ್ತಿ ಮತ್ತು ದತ್ತು ಸ್ವೀಕಾರದಂತಹ ವೈಯಕ್ತಿಕ ಕಾನೂನುಗಳಲ್ಲಿ ಧರ್ಮಾತೀತವಾಗಿ ಏಕರೂಪತೆ ತರುವ 'ಏಕರೂಪ ನಾಗರಿಕ ಸಂಹಿತೆ'ಯನ್ನು (UCC) 2029ರ ವೇಳೆಗೆ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21...

KPSC ಯನ್ನು ರದ್ದು ಮಾಡುತ್ತಾ ಸರ್ಕಾರ? ಹೊಸ ಚರ್ಚೆ ಹುಟ್ಟುಹಾಕಿದ ಸಚಿವ ಈಶ್ವರ್ ಖಂಡ್ರೆ ಹೇಳಿಕೆ

ಕರ್ನಾಟಕ ಲೋಕಸೇವಾ ಆಯೋಗವನ್ನು (KPSC) ಮುಚ್ಚುವ ಅಥವಾ ಸಂಪೂರ್ಣವಾಗಿ ರದ್ದುಗೊಳಿಸುವ ಕುರಿತು ಅರಣ್ಯ ಹಾಗೂ ಜೀವಿಶಾಸ್ತ್ರ ಸಚಿವ ಈಶ್ವರ್ ಖಂಡ್ರೆ ನೀಡಿರುವ ಹೇಳಿಕೆಯು ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದ್ದು, ಲಕ್ಷಾಂತರ ಸ್ಪರ್ಧಾತ್ಮಕ...

ಹುಬ್ಬಳ್ಳಿಯಲ್ಲಿ ಗಣೇಶ ಮೆರವಣಿಗೆ ವೇಳೆ ಮಹಿಳೆಯರೊಂದಿಗೆ ಅಸಭ್ಯ ವರ್ತನೆ

ಹುಬ್ಬಳ್ಳಿಯಲ್ಲಿ ಗಣೇಶೋತ್ಸವದ ಮೂರ್ತಿ ತರುವ ಸಂಭ್ರಮದ ಮೆರವಣಿಗೆಯನ್ನೇ ನೆಪವಾಗಿಸಿಕೊಂಡು ಅಪರಿಚಿತ ಕಿಡಿಗೇಡಿಗಳು ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಹಬ್ಬದ ನೆಪದಲ್ಲಿ ಸಾರ್ವಜನಿಕ ಸೌಹಾರ್ದತೆ ಮತ್ತು ಮಹಿಳೆಯರ ಸುರಕ್ಷತೆಗೆ...

ಗಣಪತಿ ಹಬ್ಬದ ನೆಪದಲ್ಲಿ ಮೈಸೂರಿನಲ್ಲಿ ಸೌಹಾರ್ದತೆ ಕೆಡಿಸಲು ಯತ್ನ? ಭದ್ರತಾ ನಿಯಮಗಳನ್ನೇ ಧಿಕ್ಕರಿಸಿದ BJP ನಾಯಕರು

ಗಣೇಶೋತ್ಸವದ ಮೆರವಣಿಗೆಗಳನ್ನು ನೆಪವಾಗಿಸಿಕೊಂಡು ಕೋಮು ಸೌಹಾರ್ದತೆಗೆ ಧಕ್ಕೆ ತರುವ, ಸೂಕ್ಷ್ಮ ಪ್ರದೇಶಗಳಲ್ಲಿ ಪ್ರಚೋದನಾಕಾರಿ ಘೋಷಣೆಗಳನ್ನು ಕೂಗಿ ಗಲಭೆಗೆ ಪ್ರೇರೇಪಿಸುವ ರಕ್ತದಾಹಿ ಕೃತ್ಯಗಳಿಗೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ....

SIR: ವಿಶೇಷ ತೀವ್ರ ಪರಿಷ್ಕರಣೆ’ ಎಂಬ ಪ್ರಹಸನ, ಆಯೋಗದ ತಪ್ಪುಗಳಿಗೆ ಮತದಾರರು ಪ್ರಾಯಶ್ಚಿತ್ತ ಪಡಬೇಕೇ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹೆಸರಿನಲ್ಲಿ ರಾಜ್ಯಾದ್ಯಂತ ಮತದಾರರನ್ನು 2002ರ ಮತದಾರರ ಪಟ್ಟಿಯೊಂದಿಗೆ ‘ಮ್ಯಾಪಿಂಗ್’ ಮಾಡುವ ಬೃಹತ್ ಪ್ರಕ್ರಿಯೆಯನ್ನು ಚುನಾವಣಾ ಆಯೋಗವು ಕೈಗೆತ್ತಿಕೊಂಡಿದೆ. 2002ರಲ್ಲಿದ್ದ ದತ್ತಾಂಶವನ್ನು ಇಂದಿನ ಪಟ್ಟಿಯೊಂದಿಗೆ ಹೋಲಿಸಿ,...

ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ್ದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ್‌ಗೆ ಬೆದರಿಕೆ

ಶನಿವಾರ (ಸೆ. 12) ನಡೆದಿದ್ದ ಸುದ್ದಿಗೋಷ್ಠಿಯೊಂದರಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ ಅವರ ವೀಡಿಯೊ ವೈರಲ್ ಆದ ಬಳಿಕ, ಅವರು ಆನ್‌ಲೈನ್ ಬೆದರಿಕೆಗಳು ಮತ್ತು...

ಅಲಿಗಢ ಮುಸ್ಲಿಂ ವಿವಿ ಪ್ರತಿಭಟನೆಯ ‘ಪಕ್ಷಪಾತಿ’ ನಿರೂಪಣೆ : ಝೀ ನ್ಯೂಸ್‌ಗೆ ₹2 ಲಕ್ಷ ದಂಡ ವಿಧಿಸಿದ ಎನ್‌ಬಿಡಿಎಸ್‌ಎ

ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ (AMU) ನಡೆದ ವಿದ್ಯಾರ್ಥಿ ಪ್ರತಿಭಟನೆಯ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆಗಳನ್ನು ಕೂಗಿದ ಘಟನೆಯನ್ನು ವರದಿ ಮಾಡುವಾಗ ಪ್ರಸಾರ ನೀತಿ ಸಂಹಿತೆಯನ್ನು ಉಲ್ಲಂಘಿಸಿದೆ ಎಂದು ಪರಿಗಣಿಸಿ, 'ಝೀ ನ್ಯೂಸ್' (Zee...

‘ಕೆಲವರು ಮುಸ್ಲಿಮರನ್ನು ಬೈದ್ರೆ ಮಾತ್ರ ಲೀಡರ್‌ ಆಗೋದು ಅನ್ಕೊಂಡಿದಾರೆ!’: ಆರ್‌. ಅಶೋಕ್‌ ಹಳೆಯ ಹೇಳಿಕೆ ಮುಂದಿಟ್ಟು ಪ್ರಿಯಾಂಕ್ ಖರ್ಗೆ ಟೀಕೆ!

ಮೈಸೂರಿನ ಟಿ. ನರಸೀಪುರದಲ್ಲಿ ಗಣಪತಿ ಮೆರವಣಿಗೆ ಸಾಗುವ ಮಾರ್ಗದ ವಿಚಾರವಾಗಿ ಬಿಜೆಪಿ ಪ್ರತಿಭಟನೆಗೆ ಮುಂದಾಗಿರುವ ಬೆನ್ನಲ್ಲೇ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌ ವಿರುದ್ಧ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ...

ಠಾಣೆಗೆ ನುಸುಳುತ್ತೇನೆ ಎಂದ ಪ್ರತಾಪ್ ಸಿಂಹನಿಗೆ ಪರಪ್ಪನ ಜೈಲಿಗೂ ರೆಡಿಯಾಗಿ ಎಂದ ಸಚಿವ ಪ್ರಿಯಾಂಕ್ ಖರ್ಗೆ

ಮಾಜಿ ಸಂಸದ ಪ್ರತಾಪ್ ಸಿಂಹ ಅವರನ್ನು ನೇರವಾಗಿ ಗುರಿಯಾಗಿಸಿಕೊಂಡು ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸುವ ಅಥವಾ ಅವರಿಗೆ ಬೆದರಿಕೆ ಹಾಕುವ ರೀತಿಯಲ್ಲಿ ಮಾತನಾಡುವವರ ವಿರುದ್ಧ ಸರ್ಕಾರ...

ಆಹಾರ ಪದ್ಧತಿ- ಧಾರ್ಮಿಕ ಆಚರಣೆಗಳನ್ನು ಆರಿಸಿಕೊಳ್ಳಲು ಜನರಿಗೆ ಸ್ವಾತಂತ್ರ್ಯವಿದೆ: ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ

ದುರ್ಗಾ ಪೂಜೆಯ ಸಂದರ್ಭದಲ್ಲಿ ಬಂಗಾಳಿಗಳು ಮಾಂಸಾಹಾರ ಸೇವಿಸುವುದರ ಕುರಿತು ಬಾಗೇಶ್ವರ ಬಾಬಾ ಎಂದೇ ಜನಪ್ರಿಯರಾಗಿರುವ ಧೀರೇಂದ್ರ ಶಾಸ್ತ್ರಿ ಅವರ ಹೇಳಿಕೆಗೆ ಪರೋಕ್ಷವಾಗಿ ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ, "ತಮ್ಮ ಆಹಾರ...