Homeಮುಖಪುಟಮಥುರಾದ ಮತ್ತೊಂದು ಮಸೀದಿ ತೆಗೆದುಹಾಕುವಂತೆ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಕೆ

ಮಥುರಾದ ಮತ್ತೊಂದು ಮಸೀದಿ ತೆಗೆದುಹಾಕುವಂತೆ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಕೆ

- Advertisement -
- Advertisement -

ಉತ್ತರ ಪ್ರದೇಶದ ಮಥುರಾದಲ್ಲಿ ಕೃಷ್ಣ ಜನ್ಮಭೂಮಿ ಬಳಿಯ ಮತ್ತೊಂದು ಮಸೀದಿಯನ್ನು ತೆಗೆದುಹಾಕುವಂತೆ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಲಾಗಿದೆ. ‘ಮಿನಾ ಮಸೀದಿ’ ಎಂದು ಕರೆಯಲಾಗುವ ಈ ಧಾರ್ಮಿಕ ಕೇಂದ್ರ ಮೊಘಲರ ಕಾಲಕ್ಕೆ ಸೇರಿದ್ದು ಎಂದು ವರದಿಯಾಗಿದೆ. ಕೃಷ್ಣ ಜನ್ಮಭೂಮಿ ಸಂಕೀರ್ಣದ ಪೂರ್ವ ಭಾಗದಲ್ಲಿರುವ ಠಾಕೂರ್ ಕೇಶವ್ ದೇವ್ ಜಿ ದೇವಸ್ಥಾನದ ಒಂದು ಭಾಗದಲ್ಲಿ ಮಸೀದಿಯನ್ನು ನಿರ್ಮಿಸಲಾಗಿದೆ ಎಂದು ಅರ್ಜಿದಾರರು ಪ್ರತಿಪಾದಿಸಿದ್ದಾರೆ.

ಅಖಿಲ ಭಾರತ ಹಿಂದೂ ಮಹಾಸಭಾದ (ಎಬಿಎಚ್‌ಎಂ) ರಾಷ್ಟ್ರೀಯ ಖಜಾಂಚಿ ದಿನೇಶ್ ಶರ್ಮಾ ಅವರು ಕೃಷ್ಣನ ಭಕ್ತ ಮತ್ತು ಅವರ ‘ವಾದ್ ಮಿತ್ರ’ ಎಂದು ಮೊಕದ್ದಮೆ ಹೂಡಿದ್ದಾರೆ. ಮಥುರಾ ಹಿರಿಯ ವಿಭಾಗದ ಸಿವಿಲ್ ನ್ಯಾಯಾಧೀಶರಾದ ಜ್ಯೋತಿ ಸಿಂಗ್ ಅವರ ನ್ಯಾಯಾಲಯದಲ್ಲಿ ಈ ಮೊಕದ್ದಮೆ ದಾಖಲಿಸಲಾಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಇದೇ ಪ್ರದೇಶದ ಮತ್ತೊಂದು ಪ್ರಮುಖ ಮಸೀದಿಯಾದ ಶಾಹಿ ಈದ್ಗಾ ಮಸೀದಿಯನ್ನು ಸಂಕೀರ್ಣದಿಂದ ಸ್ಥಳಾಂತರಿಸುವಂತೆ ಕೋರಿ ಈಗಾಗಲೇ ವಿವಿಧ ಮಥುರಾ ನ್ಯಾಯಾಲಯಗಳಲ್ಲಿ ಹಲವಾರು ಅರ್ಜಿಗಳನ್ನು ಸಲ್ಲಿಸಲಾಗಿದೆ. ಈ ಮಸೀದಿಯು ‘ಕೃಷ್ಣನ ಜನ್ಮಸ್ಥಳ’ದ ಪ್ರಮುಖ ಸ್ಥಳವಾದ ದೇವಾಲಯದ ಆವರಣದ 13.37 ಎಕರೆ ಪ್ರದೇಶದಲ್ಲಿ ನಿರ್ಮಿಸಲಾಗಿದೆ ಎಂದು ಅರ್ಜಿದಾರರು ಸಮರ್ಥಿಸಿಕೊಂಡಿದ್ದಾರೆ.

ಇದನ್ನೂ ಓದಿ: ಬಿಜೆಪಿ ಬೆಂಬಲಿತ ಸಂಘಟನೆಯಾದ ಬಜರಂಗದಳದ ದುಷ್ಕರ್ಮಿಗಳ ಬೆದರಿಕೆ: ಮಸೀದಿ ವೀಕ್ಷಣೆ ಪ್ರವಾಸ ರದ್ದು ಮಾಡಿದ ಶಿಶುವಿಹಾರ

ಹೊಸದಾಗಿ ಸಲ್ಲಿಸಲಾಗಿರುವ ಅರ್ಜಿಯಲ್ಲಿ ದಿನೇಶ್ ಶರ್ಮಾ ಅವರು ಪ್ರಕರಣದಲ್ಲಿ ‘ಅರ್ಜಿದಾರರ ಸಂಖ್ಯೆ 1’ ಆಗಿರುವ ಠಾಕೂರ್ ಕೇಶವ್ ದೇವ್ ಜಿ ಮಹಾರಾಜ್ (ಶ್ರೀಕೃಷ್ಣನ ಇನ್ನೊಂದು ಹೆಸರು) ಅವರ ಭಕ್ತ ಅನುಯಾಯಿ ಎಂದು ಹೇಳಿಕೊಂಡಿದ್ದಾರೆ.

ದಿನೇಶ್ ಶರ್ಮಾ ಈ ಹಿಂದೆ ಕೃಷ್ಣ ಜನ್ಮಭೂಮಿ ಪಕ್ಕದಲ್ಲಿರುವ ಶಾಹಿ ಮಸೀದಿ ಈದ್ಗಾವನ್ನು ತೆಗೆಯುವಂತೆ ಕೋರಿ ಪ್ರಕರಣ ದಾಖಲಿಸಿದ್ದರು.

“ಕೃಷ್ಣ ಜನ್ಮಭೂಮಿ ಇರುವ ಮಥುರಾ ನಗರದಲ್ಲಿ 13.37 ಎಕರೆ ಜಮೀನು ಹೊಂದಿರುವ ಠಾಕೂರ್ ಕೇಶವ್ ದೇವ್ ಜಿ ಮಹಾರಾಜ್ ಅವರ ಆಸ್ತಿಯನ್ನು ರಕ್ಷಿಸುವುದು ಮೊಕದ್ದಮೆಯ ಮೂಲ ಉದ್ದೇಶವಾಗಿದೆ. ನಾವು ಈಗ ವೃಂದಾವನ ರೈಲುಮಾರ್ಗದ ಬಳಿ ದೀಗ್ ಗೇಟ್‌ನಲ್ಲಿ ದೇವರ ಒಡೆತನದ ಜಮೀನಿನಲ್ಲಿ ಇರುವ ಮಿನಾ ಮಸೀದಿಯ ಹೆಸರಿನಲ್ಲಿ ನಿರ್ಮಿಸಿರುವ ನಿರ್ಮಾಣವನ್ನು ತೆಗೆದುಹಾಕಲು ಕೋರಿದ್ದೇವೆ.” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಜ್ಞಾನವಾಪಿ ಮಸೀದಿ ಪ್ರಕರಣದ ತೀರ್ಪು: ‘ಹೈಕೋರ್ಟ್‌‌ನಲ್ಲಿ ಪ್ರಶ್ನಿಸುತ್ತೇವೆ’ಎಂದ ಮುಸ್ಲಿಂ ಅರ್ಜಿದಾರರು

ಹೊಸ ಮೊಕದ್ದಮೆಯ ಪ್ರತಿವಾದಿಗಳಾಗಿ ಲಕ್ನೋದ ಉತ್ತರ ಪ್ರದೇಶ ಸುನ್ನಿ ಸೆಂಟ್ರಲ್ ವಕ್ಫ್ ಮಂಡಳಿಯ ಅಧ್ಯಕ್ಷರು ಮತ್ತು ಮಥುರಾದ ಮಿನಾ ಮಸೀದಿ (ಡೀಗ್ ಗೇಟ್)ಯ ಇಂಟೆಝಾಮಿಯಾ ಸಮಿತಿಯ ಕಾರ್ಯದರ್ಶಿಯಾಗಿದ್ದಾರೆ.

ಪ್ರಕರಣದ ವಿಚಾರಣೆಯನ್ನು ಅಕ್ಟೋಬರ್ 26ಕ್ಕೆ ನ್ಯಾಯಾಲಯ ನಿಗದಿಪಡಿಸಿದೆ ಎಂದು ಅರ್ಜಿದಾರರ ಪರ ವಕೀಲ ದೀಪಕ್ ಶರ್ಮಾ ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...

‘ಬೀಬಿ ನೀನು ಅಡಗಿಕೊಳ್ಳಲು ಸಾಧ್ಯವಿಲ್ಲ’: ವಾಷಿಂಗ್ಟನ್‌ ಗೆ ಭೇಟಿ ನೀಡಿದ ನೆತನ್ಯಾಹು ವಿರುದ್ಧ ಜನಾಕ್ರೋಶ: ಐಸಿಸಿ ವಾರಂಟ್ ನಿರ್ಲಕ್ಷಿಸಿ ಟ್ರಂಪ್ ಆತಿಥ್ಯ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗಿನ ಮಾತುಕತೆಗಾಗಿ ವಾಷಿಂಗ್ಟನ್ ಡಿಸಿಗೆ ಭೇಟಿ ನೀಡುತ್ತಿದ್ದಂತೆಯೇ, ರಾಜಧಾನಿಯಾದ್ಯಂತ ಅವರ ವಿರುದ್ಧ ಕಟು ಆಕ್ರೋಶ ಮತ್ತು ಪ್ರತಿಭಟನೆಗಳ ಕಾವು ತೀವ್ರಗೊಂಡಿದೆ. ಅಂತರರಾಷ್ಟ್ರೀಯ...

SIR: ಕರ್ನಾಟಕದಲ್ಲಿ 43 ಲಕ್ಷಕ್ಕೂ ಹೆಚ್ಚು ಜನರಿಂದ ಸಿಗದ ಸಹಿ ಮಾಡಿದ ನಮೂನೆ; ಕರಡು ಪಟ್ಟಿಯಿಂದ ಹೆಸರು ಕೈಬಿಡುವ ಭೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಪ್ರಮುಖ ಮೈಲಿಗಲ್ಲುಗಳನ್ನು ತಲುಪಿದ್ದು, ರಾಜ್ಯಾದ್ಯಂತ ಶೇಕಡಾ 77ರಷ್ಟು ಗಣತಿ ನಮೂನೆಗಳು ಡಿಜಿಟಲೀಕರಣಗೊಂಡಿವೆ. ಆದಾಗ್ಯೂ, ರಾಜ್ಯದ 43.24 ಲಕ್ಷಕ್ಕೂ ಹೆಚ್ಚು ಮತದಾರರು...

ನೀಟ್‌ ಪ್ರತಿಭಟನೆಯಲ್ಲಿ ಉಮರ್ ಖಾಲಿದ್‌ಗೆ ಬೆಂಬಲ; ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ ಗೋವಾ ಪೊಲೀಸರು

ಗೋವಾದ ಪಣಜಿಯಲ್ಲಿ ನಡೆದ ನೀಟ್-ಯುಜಿ ಪ್ರತಿಭಟನೆಯಲ್ಲಿ ಉಮರ್ ಖಾಲಿದ್ ಪರ ಘೋಷಣೆಗಳನ್ನು ಕೂಗಿದ ಕೆಲವು ವಿದ್ಯಾರ್ಥಿಗಳ ಪ್ರತಿಭಟನೆ ಹಿಂದಿನ ಹಣಕಾಸು ಮತ್ತು ಉದ್ದೇಶದ ಬಗ್ಗೆ ಗೋವಾ ಪೊಲೀಸರು ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ್ದಾರೆ ಎಂದು...

ಅಸ್ಸಾಂ ಪ್ರವಾಹದ ಭೀಕರತೆ: 78 ಬಲಿ, 3 ಲಕ್ಷ ಜನರ ಬದುಕು ಸಂಕಷ್ಟಕ್ಕೆ: ವ್ಯವಸ್ಥೆಯ ವೈಫಲ್ಯಕ್ಕೆ ಬೆಲೆ ತೆತ್ತುತ್ತಿರುವ ನಾಗರಿಕರು

ಈಶಾನ್ಯ ಭಾರತದ ಗೇಟ್‌ವೇ ಎಂದೇ ಕರೆಯಲ್ಪಡುವ ಅಸ್ಸಾಂನಲ್ಲಿ ಪ್ರವಾಹದ ಅಟ್ಟಹಾಸ ಮುಂದುವರಿದಿದ್ದು, ಸಾವಿನ ಸಂಖ್ಯೆ 78ಕ್ಕೆ ಏರಿಕೆಯಾಗಿದೆ. ಇತ್ತೀಚಿನ ಅಧಿಕೃತ ವರದಿಗಳ ಪ್ರಕಾರ, ಶಿವಸಾಗರ್ ಜಿಲ್ಲೆಯಲ್ಲಿ ಇಬ್ಬರು ಹಾಗೂ ಗೋಲಾಘಾಟ್‌ನಲ್ಲಿ ಒಬ್ಬರು ನೀರಿನಲ್ಲಿ...

ನೀಟ್ ಪ್ರತಿಭಟನೆಯಲ್ಲಿ ಪೆಲೆಟ್ ಗನ್ ಬಳಕೆ ಆರೋಪ; RAF ಮದ್ದುಗುಂಡುಗಳ ದಾಖಲೆ ಕೇಳಿದ ಸುಪ್ರೀಂ ಕೋರ್ಟ್

ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ವಿರುದ್ಧ ವಿದ್ಯಾರ್ಥಿಗಳು ನಡೆಸಿದ ಪ್ರತಿಭಟನೆಯ ಸಂದರ್ಭದಲ್ಲಿ ಜಂತರ್ ಮಂತರ್‌ನಲ್ಲಿ ನಿಯೋಜಿಸಲಾಗಿದ್ದ ಕ್ಷಿಪ್ರ ಕಾರ್ಯ ಪಡೆ (RAF) ಯ ಮದ್ದುಗುಂಡುಗಳ ದಾಖಲೆಯನ್ನು ಸಂರಕ್ಷಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ (ಜುಲೈ...

ಕ್ರಿಸ್ತನಿಗಿಂತ ಮೊದಲೇ ಇಲ್ಲಿದ್ದೇವೆ..ನಮಗೆ ಯಾವುದೇ ದಾಖಲೆಗಳು ಬೇಡ : ಎಸ್‌ಐಆರ್ ತಿರಸ್ಕರಿಸಿದ ಜಾರ್ಖಂಡ್‌ನ ಆದಿವಾಸಿಗಳು

ಜಾರ್ಖಂಡ್‌ನ ಖುಂತಿ ಜಿಲ್ಲೆಯ ದಟ್ಟ ಅರಣ್ಯ ಭಾಗದಲ್ಲಿ ವಾಸಿಸುವ ಮುಂಡಾ ಬುಡಕಟ್ಟು ಸಮುದಾಯದ ಒಂದು ವರ್ಗವು ಚುನಾವಣಾ ಆಯೋಗದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯನ್ನು ತೀವ್ರವಾಗಿ ವಿರೋಧಿಸಿದ್ದು, ಆಧುನಿಕ...