Homeಮುಖಪುಟಯೂನಿಯನ್ ಕಾರ್ಬೈಡ್ ತ್ಯಾಜ್ಯ ವಿಲೇವಾರಿಯಿಂದ ದುಷ್ಪರಿಣಾಮವಿಲ್ಲವೆಂಬ ಪ್ರಮಾಣ ಮಾಡುವಂತೆ ಕೋರಿ ಅರ್ಜಿ

ಯೂನಿಯನ್ ಕಾರ್ಬೈಡ್ ತ್ಯಾಜ್ಯ ವಿಲೇವಾರಿಯಿಂದ ದುಷ್ಪರಿಣಾಮವಿಲ್ಲವೆಂಬ ಪ್ರಮಾಣ ಮಾಡುವಂತೆ ಕೋರಿ ಅರ್ಜಿ

- Advertisement -
- Advertisement -

ಭೋಪಾಲ್: ಪಿತಾಮ್‌ಪುರದಲ್ಲಿ ಯೂನಿಯನ್ ಕಾರ್ಬೈಡ್ ತ್ಯಾಜ್ಯ ವಿಲೇವಾರಿ ಮಾಡುವುದರಿಂದ ಹತ್ತಿರದ ಪ್ರದೇಶಗಳ ಜನರಿಗೆ ತೊಂದರೆಯಾಗುವುದಿಲ್ಲ ಎಂದು ಮಧ್ಯಪ್ರದೇಶ ಸರ್ಕಾರದಿಂದ ಭರವಸೆ ನೀಡುವಂತೆ ಕೋರಿ ರಾಷ್ಟ್ರೀಯ ಹಸಿರು ನ್ಯಾಯಾಧೀಕರಣ(ಎನ್ ಜಿಟಿ)ದ ಭೋಪಾಲ್ ಪೀಠದಲ್ಲಿ ಅರ್ಜಿ ಸಲ್ಲಿಸಲಾಗಿದೆ ಎಂದು ಪಿಟಿಐ ವರದಿ ಮಾಡಿದೆ.

ಜಬಲ್‌ಪುರ ಮೂಲದ ಸಾಮಾಜಿಕ ಸಂಘಟನೆಯೊಂದು ಸಲ್ಲಿಸಿರುವ ಅರ್ಜಿಯಲ್ಲಿ, ತ್ಯಾಜ್ಯವನ್ನು ವಿಲೇವಾರಿ ಮಾಡಲು ಸಾಗಿಸಲಾಗಿರುವ ಧಾರ್ ಜಿಲ್ಲೆಯ ಪಿತಾಂಪುರ್‌ನಲ್ಲಿನ ಜನರ ಸುರಕ್ಷತೆಯ ಪ್ರಮಾಣ ಮಾಡುವಂತೆ ರಾಜ್ಯದ ಮುಖ್ಯ ಕಾರ್ಯದರ್ಶಿಗೆ ಆದೇಶ ನೀಡುವಂತೆ ಎನ್‌ಜಿಟಿಯನ್ನು ಒತ್ತಾಯಿಸಲಾಗಿದೆ.

ಡಿಸೆಂಬರ್ 2-3, 1984ರ ಮಧ್ಯಪ್ರದೇಶದ ರಾಜಧಾನಿ ಭೋಪಾಲ್‌ನಲ್ಲಿರುವ ಯೂನಿಯನ್ ಕಾರ್ಬೈಡ್ ಕೀಟನಾಶಕ ಕಾರ್ಖಾನೆಯಿಂದ ಮೀಥೈಲ್ ಐಸೊಸೈನೇಟ್ (MIC) ಅನಿಲ ಸೋರಿಕೆಯಾಗಿತ್ತು. ಆಗ ಕನಿಷ್ಠ 5,479 ಜನರು ಸಾವನ್ನಪ್ಪಿದ್ದರು ಮತ್ತು ಸಾವಿರಾರು ಜನರು ಗಂಭೀರವಾದ ಗಾಯಗಳು ಮತ್ತು ದೀರ್ಘಕಾಲದ ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿದ್ದಾರೆ.

ಮಧ್ಯಪ್ರದೇಶ ಹೈಕೋರ್ಟ್‌ನ ಆದೇಶದ ಮೇರೆಗೆ ಸುಮಾರು 337 ಟನ್‌ಗಳಷ್ಟು ಯೂನಿಯನ್ ಕಾರ್ಬೈಡ್ ತ್ಯಾಜ್ಯವು ಗುರುವಾರದಂದು ಭೋಪಾಲ್‌ನಿಂದ ಪಿತಾಂಪುರ್‌ಗೆ ವಿಲೇವಾರಿಯಾಗಿದೆ.

ಈ ತ್ಯಾಜ್ಯವನ್ನು ವಿಲೇವಾರಿ ಮಾಡುವುದರಿಂದ ಆ ಪ್ರದೇಶದ ನಿವಾಸಿಗಳಿಗೆ ಯಾವುದೇ ತೊಂದರೆಯಾಗುವುದಿಲ್ಲ ಎಂದು ಪ್ರಮಾಣ ಮಾಡುವಂತೆ ಧಾರ್‌ನಲ್ಲಿರುವ ಅಧಿಕಾರಿಗಳಿಗೆ ನಿರ್ದೇಶಿಸುವಂತೆ ಎನ್‌ಜಿಟಿಯ ಮುಂದೆ ಸಲ್ಲಿಸಿದ ಅರ್ಜಿಯಲ್ಲಿ ಕೋರಲಾಗಿದೆ.

ಇದಲ್ಲದೆ, ಸಾರ್ವಜನಿಕ ಕಳವಳವನ್ನು ನಿವಾರಿಸಲು ಈ ತ್ಯಾಜ್ಯವನ್ನು ವಿಲೇವಾರಿ ಮಾಡುವ ಬಗ್ಗೆ ನಿರ್ದಿಷ್ಟ ವರದಿಯನ್ನು ಹಿಂದಿ ಮತ್ತು ಇಂಗ್ಲಿಷ್ ಪತ್ರಿಕೆಗಳಲ್ಲಿ ಪ್ರಕಟಿಸಲು ಮಧ್ಯಪ್ರದೇಶ ಸರ್ಕಾರಕ್ಕೆ ನಿರ್ದೇಶಿಸುವಂತೆ ಮನವಿಯಲ್ಲಿ ಕೋರಲಾಗಿದೆ ಎಂದು ನಾಗರೀಕ ಉಪಭೋಕ್ತ ಮಾರ್ಗದರ್ಶಕ ಮಂಚ್‌ನ ಪಿ.ಜಿ.ನಾಜಪಾಂಡೆ ಮತ್ತು ಸಾಮಾಜಿಕ ಕಾರ್ಯಕರ್ತ ಸುನೀಲ್ ಭಾರ್ಗವ್ ಹೇಳಿದ್ದಾರೆ.

ಸಾಮಾಜಿಕ ಸಂಘಟನೆಯು ಶುಕ್ರವಾರ ಎನ್‌ಜಿಟಿಗೆ ಅರ್ಜಿ ಸಲ್ಲಿಸಿದೆ ಎಂದು ನಜಪಾಂಡೆ ಪಿಟಿಐಗೆ ತಿಳಿಸಿದ್ದಾರೆ.

ಡಿಸೆಂಬರ್ 1984 ರಲ್ಲಿ ಯೂನಿಯನ್ ಕಾರ್ಬೈಡ್ ಕಾರ್ಖಾನೆಯಿಂದ ವಿಷಕಾರಿ ಮೀಥೈಲ್ ಐಸೊಸೈನೇಟ್ ಅನಿಲ ಸೋರಿಕೆಯಿಂದ ಸಾವಿರಾರು ಜನರು ಸಾವನ್ನಪ್ಪಿದ ಕಾರಣ ನಿವಾಸಿಗಳಲ್ಲಿ ಆತಂಕವುಂಟಾಗಿದೆ ಎಂದು ಅವರು ಹೇಳಿದ್ದಾರೆ.

ಆದ್ದರಿಂದ, ಅವರ ಕಳವಳಗಳನ್ನು ನಿವಾರಿಸಲು ಈ ಅರ್ಜಿಯನ್ನು ನಾವು ಎನ್‌ಜಿಟಿಗೆ ವರ್ಗಾಯಿಸಿದ್ದೇವೆ  ಎಂದು ನಜಪಾಂಡೆ ತಿಳಿಸಿದರು.

ನಮ್ಮ ಪ್ರದೇಶದಲ್ಲಿ ಈ ವಿಷಕಾರಿ ತ್ಯಾಜ್ಯವನ್ನು ವಿಲೇವಾರಿ ಮಾಡುವುದು ಬೇಡ ಎಂದು ಪಿತಾಂಪುರದ ತ್ಯಾಜ್ಯ ದಹನ ಘಟಕದ ಪಕ್ಕದ ತಾರ್ಪುರದ ಹಳ್ಳಿಯ ಸ್ಥಳೀಯರ ಒತ್ತಾಯವಾಗಿದೆ. ಅಲ್ಲಿಗೆ ದೊಡ್ಡ ಪ್ರಮಾಣದ ತ್ಯಾಜ್ಯವನ್ನು ವಿಲೇವಾರಿ ಮಾಡಲು ತರಲಾಗಿದೆ. ವಿಶ್ವದ ಅತ್ಯಂತ ಭೀಕರ ಕೈಗಾರಿಕಾ ದುರಂತಗಳಲ್ಲಿ ಒಂದಾದ 1984ರ ಭೋಪಾಲ್ ಅನಿಲ ದುರಂತಕ್ಕೆ ಸಂಬಂಧಿಸಿದ ತ್ಯಾಜ್ಯವನ್ನು ವಿಲೇವಾರಿ ಮಾಡುವ ಯೋಜನೆಯು ಈ ಪ್ರದೇಶದಲ್ಲಿ ಪ್ರತಿಭಟನೆಯನ್ನು ಹುಟ್ಟುಹಾಕಿದೆ.

ಅಪಾರ ಪ್ರಮಾಣದ ವಿಷಕಾರಿ ತ್ಯಾಜ್ಯವನ್ನು ಸುಡುವುದರಿಂದ ಮನುಷ್ಯರಿಗೆ ಹಾಗೂ ಪರಿಸರಕ್ಕೆ ಅಪಾಯಕಾರಿಯಾಗಲಿದೆ. ಯಾವುದೇ ಹಾನಿಕಾರಕ ಪರಿಣಾಮಗಳಿಲ್ಲ ಎಂದು ಮಧ್ಯಪ್ರದೇಶ ಸರ್ಕಾರ ಭರವಸೆ ನೀಡಲು ಪ್ರಯತ್ನಿಸಿದರೂ ಈಗ ಗ್ರಾಮಸ್ಥರು ಭಯಪಡುತ್ತಿದ್ದಾರೆ. ಸ್ಥಳೀಯ ಆಡಳಿತವು ಪಿತಾಂಪುರದ ತ್ಯಾಜ್ಯ ವಿಲೇವಾರಿ ಘಟಕದ ಸುತ್ತಲಿನ 100 ಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿದೆ ಮತ್ತು ಹೆಚ್ಚಿನ ಪೊಲೀಸ್ ಪಡೆಯನ್ನು ನಿಯೋಜಿಸಿದೆ.

ತಾರ್ಪುರದ ಅನೇಕ ನಿವಾಸಿಗಳು ಪಿತಾಂಪುರದ ಕೈಗಾರಿಕಾ ಘಟಕಗಳಲ್ಲಿ ಕೆಲಸ ಮಾಡುತ್ತಿದ್ದಾರೆ.

ಲಕ್ಷಾಂತರ ರೈತರ ಜೀವಕ್ಕಿಂತ ನನ್ನ ಜೀವ ಮುಖ್ಯವಲ್ಲ – ರೈತ ನಾಯಕ ದಲ್ಲೆವಾಲ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR ಜಾರಿಯಾದ್ರೆ ಗ್ಯಾರಂಟಿಯನ್ನು ಕಳೆದುಕೊಳ್ತೀರಿ!

"ಬಡವರ ಮತಗಳನ್ನು ಪಟ್ಟಿಯಿಂದ ತೆಗೆಯಲು ಎಸ್‌ಐಆರ್ (SIR) ಮೂಲಕ ದೊಡ್ಡ ಸಂಚು ರೂಪಿಸಲಾಗಿದೆ. ನಾವೆಲ್ಲರೂ ಬಹಳ ಎಚ್ಚರಿಕೆಯಿಂದ ಇರಬೇಕು, ಇಲ್ಲದಿದ್ದರೆ ಮತ ಹಕ್ಕಿನ ಜೊತೆಗೆ ಶಕ್ತಿ, ಗೃಹಲಕ್ಷ್ಮಿಯಂತಹ ಗ್ಯಾರೆಂಟಿ ಯೋಜನೆಯನ್ನು ಕಳೆದುಕೊಳ್ಳಬೇಕಾಗುತ್ತದೆ" ಎಂದು...

ವೈಯಕ್ತಿಕ ಸ್ವಾತಂತ್ರ್ಯ Vs ಕಠಿಣ ಕಾಯ್ದೆ: ಯುಎಪಿಎ ಜಾಮೀನು ಭಿನ್ನಾಭಿಪ್ರಾಯಕ್ಕೆ ಸಿಗುವುದೇ ಸುಪ್ರೀಂ ಪರಿಹಾರ?

ಯುಎಪಿಎ ಅಡಿಯಲ್ಲಿ ದೀರ್ಘಕಾಲದ ಜೈಲುವಾಸದ ಹಿನ್ನೆಲೆ, ಜಾಮೀನು ನೀಡುವ ಕುರಿತು ಸುಪ್ರೀಂ ಕೋರ್ಟ್‌ನ ಎರಡು ನ್ಯಾಯಪೀಠಗಳ ನಡುವೆ ಭಿನ್ನಾಭಿಪ್ರಾಯ ಮೂಡಿದ ಕಾರಣ, ವಿಚಾರವನ್ನು ಸುಪ್ರೀಂ ಕೋರ್ಟ್‌ ವಿಸ್ತೃತ ಪೀಠಕ್ಕೆ ಶಿಫಾರಸು ಮಾಡಲಾಗಿದೆ ಎಂದು...

ತಾಯ್ತನ ಕ್ರೀಡೆಗೆ ಅಡ್ಡಿಯಾಗಬಾರದು: ಕುಸ್ತಿ ಒಕ್ಕೂಟಕ್ಕೆ ದೆಹಲಿ ಹೈಕೋರ್ಟ್ ಚಾಟಿ, ವಿನೇಶ್ ಫೋಗಟ್‌ಗೆ ಬಿಗ್ ರಿಲೀಫ್!

ಖ್ಯಾತ ಮಹಿಳಾ ಕುಸ್ತಿ ಪಟು ವಿನೇಶ್ ಫೋಗಟ್ ಅವರನ್ನು ದೇಶೀಯ ಕ್ರೀಡಾಕೂಟಗಳಲ್ಲಿ ಭಾಗವಹಿಸದಂತೆ "ಅನರ್ಹ" ಎಂದು ಘೋಷಿಸಿದ್ದ ಭಾರತೀಯ ಕುಸ್ತಿ ಒಕ್ಕೂಟದ (WFI) ನಿರ್ಧಾರವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ....

ಗುಜರಾತ್: ಜಾನುವಾರು ಹತ್ಯೆ ಆರೋಪದಲ್ಲಿ ಬಂಧಿಸಿದ 70 ವರ್ಷದ ಮುಸ್ಲಿಂ ವ್ಯಕ್ತಿ ಸಾವು: ‘ತಂದೆಯನ್ನು ಕೊಂದರು’ ಎಂದು ಆರೋಪಿಸಿದ ಮಗ

ಗುಜರಾತ್‌ನ ಅಹಮದಾಬಾದ್ ನಗರದಲ್ಲಿ ಪೊಲೀಸ್ ಕಸ್ಟಡಿಯಲ್ಲಿದ್ದ 70 ವರ್ಷದ ಜಹೀರ್ ಶೇಖ್ ಎಂಬ ಮುಸ್ಲಿಂ ವೃದ್ಧರೊಬ್ಬರು ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾರೆ. ಈ ಘಟನೆಯು ಗುಜರಾತ್‌ನಲ್ಲಿ ತೀವ್ರ ಸಂಚಲನ ಸೃಷ್ಟಿಸಿದ್ದು, ಕಸ್ಟಡಿ ನಿಂದನೆ, ಪೊಲೀಸರ ದೌರ್ಜನ್ಯ...

ಪಶ್ಚಿಮ ಬಂಗಾಳ: ಬಿಜೆಪಿಗೆ ಉಲ್ಟಾ ಹೊಡೆಯುತ್ತಾ ಗೋ-ಹತ್ಯೆ ನಿಷೇಧ ಕಾಯ್ದೆ?

ಬಕ್ರೀದ್ (ಈದ್-ಉಲ್-ಅದ್ಹಾ) ಹಬ್ಬ ಹತ್ತಿರ ಬರುತ್ತಿದ್ದಂತೆ, ಪಶ್ಚಿಮ ಬಂಗಾಳದಲ್ಲಿ ಗೋ ಹತ್ಯೆ ನಿಯಂತ್ರಣ ಕಾಯ್ದೆಯನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುತ್ತಿರುವುದಕ್ಕೆ ವ್ಯಾಪಕ ವಿರೋಧ ವ್ಯಕ್ತವಾಗುತ್ತಿದೆ. ಈ ಆಕ್ರೋಶ ಕೇವಲ ಧಾರ್ಮಿಕ ಕಾರಣಗಳಿಗಷ್ಟೇ ಸೀಮಿತವಾಗಿಲ್ಲ, ಬದಲಿಗೆ ವ್ಯಾಪಾರಿಗಳು,...

ಪ.ಬಂಗಾಳ: ಮಮತಾ ಸರ್ಕಾರ ಜಾರಿ ಮಾಡಿದ್ದ OBC ಮೀಸಲಾತಿಯನ್ನು ಕಿತ್ತೆಸೆದ ಸುವೇಂದು ನೇತೃತ್ವದ ಬಿಜೆಪಿ ಸರ್ಕಾರ

ಪಶ್ಚಿಮ ಬಂಗಾಳದ ಒಬಿಸಿ (ಇತರ ಹಿಂದುಳಿದ ವರ್ಗಗಳು) ಪಟ್ಟಿಯಲ್ಲಿದ್ದ ಮುಸ್ಲಿಂ ಸಮುದಾಯಗಳನ್ನು ಕೈಬಿಡುವ ಮೂಲಕ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದ ನೂತನ ಬಿಜೆಪಿ ಸರ್ಕಾರವು ಭಾರಿ ರಾಜಕೀಯ ಸಂಚಲನ ಸೃಷ್ಟಿಸಿದೆ. ಈ ಹಿಂದೆ...

ಸಾಮಾಜಿಕ ಹೋರಾಟಗಾರ ‘ಫರಿದುಲ್ ಇಸ್ಲಾಂ’ರನ್ನು ಸುಳ್ಳು ಪ್ರಕರಣದಲ್ಲಿ ಬಂಧಿಸಿದ ಕೋಲ್ಕತ್ತಾ ಪೊಲೀಸರು

ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ನೇತೃತ್ವದ ನೂತನ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದು ಇನ್ನು ಹತ್ತು ದಿನಗಳು ಕಳೆಯುವಷ್ಟರಲ್ಲೇ, ಸರ್ಕಾರದ ಆಡಳಿತವನ್ನು ಪ್ರಶ್ನಿಸುವವರ ಹಾಗೂ ಹೋರಾಟಗಾರರ ಧ್ವನಿಯನ್ನು ಹತ್ತಿಕ್ಕುವ ಕೆಲಸ ಆರಂಭವಾಗಿದೆ ಎಂಬ...

ಉಪ್ಪಿನಂಗಡಿ: ಸೂರ್ಯ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯ, ಚಿಕಿತ್ಸೆಗೆಂದು ತೆರಳಿ ಶವವಾಗಿ ಮರಳಿದ ಬೀದಿಬದಿ ವ್ಯಾಪಾರಿ!

ಖಾಸಗಿ ಆಸ್ಪತ್ರೆಗಳ ಹಣದ ದಾಹ ಮತ್ತು ವೈದ್ಯಕೀಯ ಸಿಬ್ಬಂದಿಯ ಘೋರ ನಿರ್ಲಕ್ಷ್ಯಕ್ಕೆ ಮತ್ತೊಂದು ಬಡ ಜೀವ ಬಲಿಯಾಗಿದೆ. ಉಪ್ಪಿನಂಗಡಿಯ ಸೂರ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಾಗಿದ್ದ ಮೊಹಮ್ಮದ್ ಶರೀಫ್ (35) ಎಂಬ ಬೀದಿ ಬದಿ...

ಬಿಸಿಲಿನ ಬೆಂಕಿಗೆ ‘ಎಲ್ ನಿನೊ’ ತುಪ್ಪ: 2026ರ ಮುಂಗಾರು ಕಥೆ ಏನು?

ದೇಶಾದ್ಯಂತ ತಾಪಮಾನ ದಿನೇ ದಿನೇ ಏರುತ್ತಿದ್ದು, ಭೀಕರ ಶಾಖದ ಅಲೆಗಳಿಗೆ (Heatwaves) ಜನ ತತ್ತರಿಸಿ ಹೋಗಿದ್ದಾರೆ. ಈ ಹೊತ್ತಿನಲ್ಲಿ ಎಲ್ಲರ ಕಣ್ಣುಗಳು ಸಾವಿರಾರು ಕಿಲೋಮೀಟರ್ ದೂರದ ಪೆಸಿಫಿಕ್ ಮಹಾಸಾಗರದಲ್ಲಿ ಸಂಭವಿಸುತ್ತಿರುವ ಹವಾಮಾನ ಬದಲಾವಣೆಯ...

ಸುಮಾರು 1 ಲಕ್ಷ ಶಾಲೆಗಳಲ್ಲಿ ಬಾಲಕಿಯರಿಗೆ ಶೌಚಾಲಯವಿಲ್ಲ, 61,000 ಶಾಲೆಗಳಲ್ಲಿ ಕ್ರಿಯಾತ್ಮಕ ಶೌಚಾಲಯಗಳಿಲ್ಲ: ನೀತಿ ಆಯೋಗ

ಶಿಕ್ಷಣವು ಒಂದು ದೇಶದ ಅಭಿವೃದ್ಧಿಯ ಬೆನ್ನೆಲುಬು ಅಂತಲೇ ಹೇಳಲಾಗುತ್ತದೆ. ಆದರೆ, ಭಾರತದ ಶಾಲಾ ಶಿಕ್ಷಣದ ಮೂಲಭೂತ ಸೌಕರ್ಯಗಳು ಮತ್ತು ವ್ಯವಸ್ಥೆಯ ಕುರಿತಾಗಿ ನೀತಿ ಆಯೋಗ ಹಾಗೂ ಯುಡಿಐಎಸ್ಇ+ (UDISE+ 2024–25) ಇತ್ತೀಚೆಗೆ ಬಿಡುಗಡೆ...