Homeಚಳವಳಿನಟಿ ಸ್ವರ ಭಾಸ್ಕರ್ ವಿರುದ್ದ ನ್ಯಾಯಾಂಗ ನಿಂದನೆ ವಿಚಾರಣೆ ಆರಂಭಿಸಲು ಕೋರಿ ಅರ್ಜಿ

ನಟಿ ಸ್ವರ ಭಾಸ್ಕರ್ ವಿರುದ್ದ ನ್ಯಾಯಾಂಗ ನಿಂದನೆ ವಿಚಾರಣೆ ಆರಂಭಿಸಲು ಕೋರಿ ಅರ್ಜಿ

ಸ್ವರ ಭಾಸ್ಕರ್ ಸಿಎಎ ಮತ್ತು ಎನ್‌ಆರ್‌ಸಿ ವಿರೋಧಿ ಹೋರಾಟದಲ್ಲಿ ಮುಂಚೂಣಿಯಲ್ಲಿದ್ದು ಮುಂಬೈನಲ್ಲಿ ನಡೆದ ಹಲವು ಪ್ರತಿಭಟನೆಗಳಲ್ಲಿ ಸಕ್ರಿವಾಗಲಿ ಭಾಗವಹಿಸಿದ್ದರು. ಬಾಲಿವುಡ್ ನಟಿಯಾಗಿ ತಮ್ಮ ಸಹ ಕಲಾವಿದರು ಸಹ ಪ್ರತಿಭಟನೆಯಲ್ಲಿ ಭಾಗವಹಿಸುವಂತೆ ಪ್ರೇರಿಪಿಸಿದ್ದರು.

- Advertisement -
- Advertisement -

ನಟಿ ಸ್ವರ ಭಾಸ್ಕರ್ ವಿರುದ್ಧ ನ್ಯಾಯಾಂಗ ನಿಂದನೆ ವಿಚಾರಣೆಯನ್ನು ಪ್ರಾರಂಭಿಸಲು ಕೋರಿ ಭಾರತದ ಅಟಾರ್ನಿ ಜನರಲ್ ಮುಂದೆ ಅರ್ಜಿ ಸಲ್ಲಿಸಲಾಗಿದೆ. ನ್ಯಾಯಾಂಗ ನಿಂದನೆ ಕಾಯ್ದೆ 1975ರ ಸೆಕ್ಷನ್ 15ರ ರೂಲ್ 3ರ ಅಡಿಯಲ್ಲಿ ಕ್ರಿಮಿನಲ್ ನ್ಯಾಯಾಂಗ ನಿಂದನೆ ಪ್ರಕರಣ ದಾಖಲಿಸಲು ಅರ್ಜಿಯಲ್ಲಿ ಮನವಿ ಮಾಡಲಾಗಿದೆ.

2020 ರ ಫೆಬ್ರವರಿಯಲ್ಲಿ ಮುಂಬೈನಲ್ಲಿ ನಡೆದ “ಕೋಮುವಾದದ ವಿರುದ್ಧ ಕಲಾವಿದರು” ಎಂಬ ಸಮಾವೇಶವನ್ನು ಉದ್ದೇಶಿಸಿ ಮಾತನಾಡಿದ ಅವರು “ನ್ಯಾಯಾಲಯಗಳು ಸಂವಿಧಾನವನ್ನು ನಂಬುತ್ತವೆಯೇ ಎಂದು ಖಚಿತವಾಗಿಲ್ಲ” ಎಂದು ಹೇಳುವ ಮೂಲಕ ನ್ಯಾಯಾಂಗ ನಿಂದನೆ ಮಾಡಿದ್ದಾರೆ ಎಂದು ಅರ್ಜಿಯಲ್ಲಿ ಆರೋಪಿಸಲಾಗಿದೆ.

ಅರ್ಜಿಯ ಪ್ರಕಾರ, ಸ್ವರ ಭಾಸ್ಕರ್, “ಬಾಬರಿ ಮಸೀದಿ ನೆಲಸಮ ಮಾಡುವುದು ಕಾನೂನುಬಾಹಿರ ಎಂದು ಸುಪ್ರೀಂ ಕೋರ್ಟಿನ ತೀರ್ಪಿನಲ್ಲಿ ಹೇಳುವ ದೇಶದಲ್ಲಿ ನಾವು ವಾಸಿಸುತ್ತಿದ್ದೇವೆ ಮತ್ತು ಅದೇ ತೀರ್ಪಿನಲ್ಲಿ ಮಸೀದಿಯನ್ನು ಉರುಳಿಸಿದ ಜನರಿಗೆ ಬಹುಮಾನ ನೀಡಲಾಗುತ್ತದೆ” ಎಂದು ಹೇಳಿದ್ದಾಗಿ ಉಲ್ಲೇಖಿಸಲಾಗಿದೆ.

ಅವರ ಹೇಳಿಕೆಗಳು “ಅಗ್ಗದ ಪ್ರಚಾರಕ್ಕಾಗಿ ಮಾಡುವ ಸಾಹಸವಾಗಿದ್ದು” ಮಾತ್ರವಲ್ಲ, ಸುಪ್ರೀಂ ಕೋರ್ಟ್ ವಿರುದ್ಧ ದಂಗೆ ಎಬ್ಬಿಸುವ ಉದ್ದೇಶಪೂರ್ವಕ ಪ್ರಯತ್ನವೂ ಆಗಿದೆ ಎಂದು ಅರ್ಜಿಯಲ್ಲಿ ಆರೋಪಿಸಲಾಗಿದೆ.

“ಆಪಾದಿತ ಸಮಕಾಲೀನ ಹೇಳಿಕೆಗಳು ಗೌರವಾನ್ವಿತ ನ್ಯಾಯಾಲಯದ ವಿಚಾರಣೆಗೆ ಸಂಬಂಧಿಸಿದಂತೆ ಸಾರ್ವಜನಿಕರಲ್ಲಿ ಅಪನಂಬಿಕೆಯ ಭಾವನೆ ಮತ್ತು ಭಾರತದ ಸುಪ್ರೀಂ ಕೋರ್ಟಿನ ಗೌರವಾನ್ವಿತ ನ್ಯಾಯಾಧೀಶರ ಸಮಗ್ರತೆಗೆ ಪ್ರಚೋದನೆ ನೀಡಲು ಉದ್ದೇಶಿಸಿದೆ” ಎಂದು ಸಲ್ಲಿಸಿದ ಅರ್ಜಿಯಲ್ಲಿ ಹೇಳಲಾಗಿದೆ.

ಉಷಾ ಶೆಟ್ಟಿ ಪರವಾಗಿ ವಕೀಲರಾದ ಅನುಜ್ ಸಕ್ಸೇನಾ, ಪ್ರಕಾಶ್ ಶರ್ಮಾ ಮತ್ತು ಮಹೇಕ್ ಮಹೇಶ್ವರಿ ಈ ಅರ್ಜಿಯನ್ನು ಸಲ್ಲಿಸಿದ್ದಾರೆ.

ಸ್ವರ ಭಾಸ್ಕರ್ ಸಿಎಎ ಮತ್ತು ಎನ್‌ಆರ್‌ಸಿ ವಿರೋಧಿ ಹೋರಾಟದಲ್ಲಿ ಮುಂಚೂಣಿಯಲ್ಲಿದ್ದು ಮುಂಬೈನಲ್ಲಿ ನಡೆದ ಹಲವು ಪ್ರತಿಭಟನೆಗಳಲ್ಲಿ ಸಕ್ರಿವಾಗಲಿ ಭಾಗವಹಿಸಿದ್ದರು. ಬಾಲಿವುಡ್ ನಟಿಯಾಗಿ ತಮ್ಮ ಸಹ ಕಲಾವಿದರು ಸಹ ಪ್ರತಿಭಟನೆಯಲ್ಲಿ ಭಾಗವಹಿಸುವಂತೆ ಪ್ರೇರಿಪಿಸಿದ್ದರು.


ಓದಿ: ಶಿಕ್ಷಣವು ಸಾಂವಿಧಾನಿಕ ಹಕ್ಕು: JNU ಹೋರಾಟಕ್ಕೆ ಬೆಂಬಲ ಸೂಚಿಸಿದ ಬಾಲಿವುಡ್‌ ನಟಿ ಸ್ವರ ಭಾಸ್ಕರ್ 


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....