Homeಮುಖಪುಟಜಮ್ಮು-ಕಾಶ್ಮೀರದಲ್ಲಿನ ಕ್ಷೇತ್ರ ಮರುವಿಂಗಡಣೆ ಪ್ರಶ್ನಿಸಿ ಸುಪ್ರೀಂಗೆ ಸಲ್ಲಿಸಿದ್ದ ಅರ್ಜಿ ವಜಾ

ಜಮ್ಮು-ಕಾಶ್ಮೀರದಲ್ಲಿನ ಕ್ಷೇತ್ರ ಮರುವಿಂಗಡಣೆ ಪ್ರಶ್ನಿಸಿ ಸುಪ್ರೀಂಗೆ ಸಲ್ಲಿಸಿದ್ದ ಅರ್ಜಿ ವಜಾ

- Advertisement -
- Advertisement -

ಜಮ್ಮು ಮತ್ತು ಕಾಶ್ಮೀರದಲ್ಲಿ ವಿಧಾನಸಭೆ, ಸಂಸದೀಯ ಕ್ಷೇತ್ರಗಳ ಮರು ವಿಂಗಡಣೆಯನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಸೋಮವಾರ ವಜಾಗೊಳಿಸಿದೆ ಎಂದು ‘ಬಾರ್‌ ಅಂಡ್ ಬೆಂಚ್‌’ ವರದಿ ಮಾಡಿದೆ.

ಕಾಶ್ಮೀರ ನಿವಾಸಿಗಳಾದ ಅಬ್ದುಲ್ ಗನಿ ಖಾನ್, ಮುಹಮ್ಮದ್ ಅಯೂಬ್ ಮಟ್ಟೋ ಅವರು ಸಲ್ಲಿಸಿದ ಅರ್ಜಿಯನ್ನು ನ್ಯಾಯಮೂರ್ತಿಗಳಾದ ಸಂಜಯ್ ಕಿಶನ್ ಕೌಲ್ ಮತ್ತು ಎ.ಎಸ್.ಓಕಾ ಅವರನ್ನೊಳಗೊಂಡ ಪೀಠವು ವಜಾ ಮಾಡಿದೆ.

“ಜಮ್ಮು ಮತ್ತು ಕಾಶ್ಮೀರ ಪುನರ್‌ ರಚನೆ (Re-  Re-organisation) ಕಾಯಿದೆ, 2019ರ ಸಿಂಧುತ್ವದ ಬಗ್ಗೆ ಇನ್ನೂ ತೀರ್ಪು ನೀಡಲಾಗಿಲ್ಲ” ಎಂದು ಪೀಠವು ಹೇಳಿದೆ. ಕಾಶ್ಮೀರದ ಸಂವಿಧಾನದ 370ನೇ ವಿಧಿಯನ್ನು ರದ್ದುಗೊಳಿಸಿರುವುದನ್ನು ಪ್ರಶ್ನಿಸಿ ಸಲ್ಲಿಸಲಾಗಿರುವ ಅರ್ಜಿಗಳು ಸುಪ್ರೀಂ ಕೋರ್ಟ್‌ನಲ್ಲಿ ಬಾಕಿ ಉಳಿದಿವೆ.

ಕಾಲಕಾಲಕ್ಕೆ ಆದ ಜನಸಂಖ್ಯೆಯಲ್ಲಿನ ಬದಲಾವಣೆಗಳನ್ನು ಒಳಗೊಂಡು ಅಸೆಂಬ್ಲಿ ಅಥವಾ ಲೋಕಸಭೆ ಕ್ಷೇತ್ರಗಳ ಗಡಿಗಳನ್ನು ಮರು ವಿಂಗಡಣೆ ಮಾಡಲಾಗುತ್ತದೆ. ಕೇಂದ್ರ ಸರ್ಕಾರ ರಚಿಸಿದ ಕ್ಷೇತ್ರ ಮರುವಿಂಗಡಣೆ ಆಯೋಗವು ಜಮ್ಮು ಮತ್ತು ಕಾಶ್ಮೀರದಲ್ಲಿನ ಕ್ಷೇತ್ರಗಳ ಮರು ವಿಂಗಡಣೆಗೆ ಸಂಬಂಧಿಸಿದಂತೆ ತನ್ನ ಅಂತಿಮ ವರದಿಯನ್ನು ಕಳೆದ ವರ್ಷ ಮೇನಲ್ಲಿ ಸಲ್ಲಿಸಿತು. ಇದು ಏಳು ಹೆಚ್ಚುವರಿ ಕ್ಷೇತ್ರಗಳನ್ನು (ಆರು ಜಮ್ಮುವಿನಲ್ಲಿ ಒಂದು ಕಾಶ್ಮೀರದಲ್ಲಿ) ರಚಿಸಲು ವರದಿ ಶಿಫಾರಸು ಮಾಡಿದೆ. ಈ ಕೇಂದ್ರಾಡಳಿತ ಪ್ರದೇಶದಲ್ಲಿ ಈವರೆಗೆ ಇದ್ದ 83 ಕ್ಷೇತ್ರಗಳನ್ನು 90ಕ್ಕೆ ಏರಿಕೆ ಮಾಡಲಾಗಿದೆ.

ಆಯೋಗದ ರಚನೆಯನ್ನು ಪ್ರಶ್ನಿಸುವ ಅರ್ಜಿಯ ಮೇಲಿನ ತೀರ್ಪನ್ನು ಡಿಸೆಂಬರ್‌ನಲ್ಲಿ ಸುಪ್ರೀಂ ಕೋರ್ಟ್ ಕಾಯ್ದಿರಿಸಿತ್ತು. 2019ರ ಕಾಯಿದೆಯಡಿ ಚುನಾವಣಾ ಆಯೋಗಕ್ಕೆ ಮಾತ್ರ ಮರು ವಿಂಗಡಣೆಯ ಕಾರ್ಯವನ್ನು ನಡೆಸಲು ಅಧಿಕಾರವಿದೆ ಎಂದು ಅರ್ಜಿದಾರರು ವಾದಿಸಿದ್ದರು. ಆದರೆ ಜಮ್ಮು ಮತ್ತು ಕಾಶ್ಮೀರದ ಮರು ರಚನಾ ಕಾಯಿದೆಯು ಕ್ಷೇತ್ರಗಳ ಮರುವಿಂಗಡಣೆಗೆ ಆಯೋಗವನ್ನು ಕಡ್ಡಾಯಗೊಳಿಸಿದೆ ಎಂದು ಕೇಂದ್ರ ಸರ್ಕಾರ ವಾದಿಸಿದೆ.

ಸರ್ಕಾರ ನಡೆಸುತ್ತಿರುವ ಮರು ವಿಂಗಡಣೆ ಕಾರ್ಯವನ್ನು ಪ್ರತಿಪಕ್ಷಗಳು ಟೀಕಿಸಿವೆ. ಈ ಕ್ರಮವು ಜಮ್ಮು ಮತ್ತು ಕಾಶ್ಮೀರದ ಜನರನ್ನು ‘ಮತ್ತಷ್ಟು ದೂರವಿಡುತ್ತದೆ’ ಎಂದು ನ್ಯಾಷನಲ್ ಕಾನ್ಫರೆನ್ಸ್ ಅಧ್ಯಕ್ಷ ಫಾರೂಕ್ ಅಬ್ದುಲ್ಲಾ ಹೇಳಿದ್ದಾರೆ.

ಮುಸ್ಲಿಮರ ಪ್ರಾಬಲ್ಯ ಕುಗ್ಗಿಸುವ ತಂತ್ರ

ಉದಾಹರಣೆಗೆ ಕಾಶ್ಮೀರ ಕಣಿವೆಯಲ್ಲಿ ಮುಸ್ಲಿಂ ಜನಸಂಖ್ಯೆ 95 ಶೇಕಡಾ ಇದ್ದು, ಅಲ್ಲಿ ಕ್ಷೇತ್ರಗಳ ಸಂಖ್ಯೆಯನ್ನು ಕಡಿಮೆ ಮಾಡಲಾಗುತ್ತಿದೆ. ತೀರಾ ಸರಳವಾಗಿ ಹೇಳುವುದಾದರೆ, ಹಿಂದೂಗಳು ಹೆಚ್ಚಿರುವಲ್ಲಿ ಕಡಿಮೆ ಮತದಾರರಿರುವ ಹೆಚ್ಚು ಕ್ಷೇತ್ರಗಳನ್ನು ರಚಿಸಿ, ಮುಸ್ಲಿಮರು ಹೆಚ್ಚಿರುವ ಪ್ರದೇಶಗಳಲ್ಲಿ ಹೆಚ್ಚು ಮತದಾರರಿರುವ ಕಡಿಮೆ ಕ್ಷೇತ್ರಗಳನ್ನು ರಚಿಸಲಾಗುತ್ತಿದೆ ಎಂಬ ಆರೋಪಗಳು ಬಂದಿವೆ.

ಕ್ಷೇತ್ರ ಮರುವಿಂಗಡಣೆಯ ಹಿಂದಿರುವ ಮೂಲ ಆಶಯವೇ ಮತದಾರರು ಮತ್ತು ಅವರ ಪ್ರತಿನಿಧಿಗಳ ನಡುವೆ ಸಂಪರ್ಕವನ್ನು ಸುಲಭಗೊಳಿಸುವುದು. ಉದಾಹರಣೆಗೆ ಒಂದು ಕ್ಷೇತ್ರದ ಕೇಂದ್ರದಿಂದ ಬಹಳ ದೂರದಲ್ಲಿ ಅಥವಾ ಕ್ರಮಿಸಲು ಕಷ್ಟವಾಗುವ ಪ್ರದೇಶದ ಮತದಾರರನ್ನು ಸಂಪರ್ಕ ಸುಲಭವಾಗುವ ಹತ್ತಿರದ ಇನ್ನೊಂದು ಕ್ಷೇತ್ರಕ್ಕೆ ಸೇರಿಸುವುದು. ಪರ್ವತ, ನದಿ, ರಸ್ತೆ ಸಂಪರ್ಕ ಇತ್ಯಾದಿ ಭೌಗೋಳಿಕ ನೆಲೆಗಳು ಮತ್ತು ಆಡಳಿತ ಕೇಂದ್ರಕ್ಕೆ ಹೆಚ್ಚು ಹತ್ತಿರವಾಗಿರುವ ನೆಲೆಯಲ್ಲಿ ಇದನ್ನು ಮಾಡಲಾಗುತ್ತದೆ. ಇನ್ನೊಂದು ಮಹತ್ವದ ನೆಲೆಯೆಂದರೆ, ಜನಸಂಖ್ಯೆಗೆ ಅನುಗುಣವಾಗಿ ಸೂಕ್ತ ಪ್ರಾತಿನಿಧ್ಯ ಒದಗಿಸುವುದು. ಮತದಾರರ ಸಂಖ್ಯೆ ಹೆಚ್ಚಿರುವ ಕ್ಷೇತ್ರಗಳಿಂದ ಮತದಾರರನ್ನು ಮೇಲಿನ ನೆಲೆಗಳನ್ನು ಪರಿಗಣಿಸಿ, ಮತದಾರರು ಕಡಿಮೆ ಇರುವ ಕ್ಷೇತ್ರಗಳಿಗೆ ಸೇರಿಸುವುದು. ಅಥವಾ ಇದೇ ನೆಲೆಯಲ್ಲಿ ಬೇರೆಬೇರೆ ಕ್ಷೇತ್ರಗಳ ಹೆಚ್ಚುವರಿ ಮತದಾರರನ್ನು ಸೇರಿಸಿ ಹೊಸ ಕ್ಷೇತ್ರವನ್ನು ರಚಿಸುವುದು.

ಆದರೆ, ಇದನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ ಎಂಬುದು ಪ್ರಸ್ತುತ ಮರುವಿಂಗಡನೆ ಪ್ರಸ್ತಾಪದಲ್ಲಿ ಮೇಲ್ನೋಟಕ್ಕೇ ಕಂಡುಬರುತ್ತದೆ ಎಂದು ದೂರಲಾಗಿದೆ. ಸದ್ಯಕ್ಕೆ ಜಮ್ಮು ಮತ್ತು ಕಾಶ್ಮೀರದಲ್ಲಿ ಆರು ಲೋಕಸಭಾ ಸ್ಥಾನಗಳಿದ್ದು, ಹಿಂದೂಗಳು ಹೆಚ್ಚಿರುವ ಮೂರು ಕ್ಷೇತ್ರಗಳಲ್ಲಿ ಬಿಜೆಪಿ ಗೆದ್ದಿದೆ. ಮುಸ್ಲಿಮರು ಹೆಚ್ಚಾಗಿರುವ ಮೂರರಲ್ಲಿ ನ್ಯಾಷನಲ್ ಕಾನ್ಫರೆನ್ಸ್ ಗೆದ್ದಿದೆ. ಲೋಕಸಭಾ ಸ್ಥಾನಗಳಲ್ಲಿ ಕೂಡಾ ಯದ್ವಾತದ್ವಾ ಕೈಯಾಡಿಸಿ, ಮುಸ್ಲಿಮರ ಪ್ರಾಬಲ್ಯವನ್ನು ಕಡಿಮೆ ಮಾಡುವ ಪ್ರಯತ್ನ ನಡೆದಿದೆ. ಒಟ್ಟು ವಿಧಾನಸಭಾ ಸ್ಥಾನಗಳ ಸಂಖ್ಯೆಯನ್ನು ಏಳರಷ್ಟು ಹೆಚ್ಚಿಸಿ, ಹಿಂದೂಗಳು ಹೆಚ್ಚಾಗಿರುವ ಜಮ್ಮು ಪ್ರಾಂತ್ಯಕ್ಕೆ ಆರು ಹೆಚ್ಚುವರಿ ಮತ್ತು ಮುಸ್ಲಿಮರು ಹೆಚ್ಚಾಗಿರುವ ಕಾಶ್ಮೀರಕ್ಕೆ ಕೇವಲ ಒಂದು ಹೆಚ್ಚುವರಿ ವಿಧಾನಸಭಾ ಸ್ಥಾನ ನೀಡುವ ಪ್ರಸ್ತಾಪ ಇದೆ. ಇಲ್ಲಿ ಜನಸಂಖ್ಯೆಗೆ ಅನುಗುಣವಾಗಿ ಪ್ರಾತಿನಿಧ್ಯದ ನಿಯಮವನ್ನೇ ಕಸದ ಬುಟ್ಟಿಗೆ ಎಸೆದಂತಾಗುತ್ತದೆ. ಇದು ಜಮ್ಮು ಮತ್ತು ಕಾಶ್ಮೀರದ ರಾಜಕೀಯ ಚಿತ್ರಣವನ್ನೇ ಸಂಪೂರ್ಣವಾಗಿ ಮತ್ತು  ಕೃತಕವಾಗಿ ಬದಲಿಸಲಿದೆ ಎಂಬುದು ಮರುವಿಂಗಡಣೆಯನ್ನು ಪ್ರಶ್ನಿಸುತ್ತಿರುವವರ ವಾದವಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...