Homeಮುಖಪುಟಜಮ್ಮು-ಕಾಶ್ಮೀರದಲ್ಲಿನ ಕ್ಷೇತ್ರ ಮರುವಿಂಗಡಣೆ ಪ್ರಶ್ನಿಸಿ ಸುಪ್ರೀಂಗೆ ಸಲ್ಲಿಸಿದ್ದ ಅರ್ಜಿ ವಜಾ

ಜಮ್ಮು-ಕಾಶ್ಮೀರದಲ್ಲಿನ ಕ್ಷೇತ್ರ ಮರುವಿಂಗಡಣೆ ಪ್ರಶ್ನಿಸಿ ಸುಪ್ರೀಂಗೆ ಸಲ್ಲಿಸಿದ್ದ ಅರ್ಜಿ ವಜಾ

- Advertisement -
- Advertisement -

ಜಮ್ಮು ಮತ್ತು ಕಾಶ್ಮೀರದಲ್ಲಿ ವಿಧಾನಸಭೆ, ಸಂಸದೀಯ ಕ್ಷೇತ್ರಗಳ ಮರು ವಿಂಗಡಣೆಯನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಸೋಮವಾರ ವಜಾಗೊಳಿಸಿದೆ ಎಂದು ‘ಬಾರ್‌ ಅಂಡ್ ಬೆಂಚ್‌’ ವರದಿ ಮಾಡಿದೆ.

ಕಾಶ್ಮೀರ ನಿವಾಸಿಗಳಾದ ಅಬ್ದುಲ್ ಗನಿ ಖಾನ್, ಮುಹಮ್ಮದ್ ಅಯೂಬ್ ಮಟ್ಟೋ ಅವರು ಸಲ್ಲಿಸಿದ ಅರ್ಜಿಯನ್ನು ನ್ಯಾಯಮೂರ್ತಿಗಳಾದ ಸಂಜಯ್ ಕಿಶನ್ ಕೌಲ್ ಮತ್ತು ಎ.ಎಸ್.ಓಕಾ ಅವರನ್ನೊಳಗೊಂಡ ಪೀಠವು ವಜಾ ಮಾಡಿದೆ.

“ಜಮ್ಮು ಮತ್ತು ಕಾಶ್ಮೀರ ಪುನರ್‌ ರಚನೆ (Re-  Re-organisation) ಕಾಯಿದೆ, 2019ರ ಸಿಂಧುತ್ವದ ಬಗ್ಗೆ ಇನ್ನೂ ತೀರ್ಪು ನೀಡಲಾಗಿಲ್ಲ” ಎಂದು ಪೀಠವು ಹೇಳಿದೆ. ಕಾಶ್ಮೀರದ ಸಂವಿಧಾನದ 370ನೇ ವಿಧಿಯನ್ನು ರದ್ದುಗೊಳಿಸಿರುವುದನ್ನು ಪ್ರಶ್ನಿಸಿ ಸಲ್ಲಿಸಲಾಗಿರುವ ಅರ್ಜಿಗಳು ಸುಪ್ರೀಂ ಕೋರ್ಟ್‌ನಲ್ಲಿ ಬಾಕಿ ಉಳಿದಿವೆ.

ಕಾಲಕಾಲಕ್ಕೆ ಆದ ಜನಸಂಖ್ಯೆಯಲ್ಲಿನ ಬದಲಾವಣೆಗಳನ್ನು ಒಳಗೊಂಡು ಅಸೆಂಬ್ಲಿ ಅಥವಾ ಲೋಕಸಭೆ ಕ್ಷೇತ್ರಗಳ ಗಡಿಗಳನ್ನು ಮರು ವಿಂಗಡಣೆ ಮಾಡಲಾಗುತ್ತದೆ. ಕೇಂದ್ರ ಸರ್ಕಾರ ರಚಿಸಿದ ಕ್ಷೇತ್ರ ಮರುವಿಂಗಡಣೆ ಆಯೋಗವು ಜಮ್ಮು ಮತ್ತು ಕಾಶ್ಮೀರದಲ್ಲಿನ ಕ್ಷೇತ್ರಗಳ ಮರು ವಿಂಗಡಣೆಗೆ ಸಂಬಂಧಿಸಿದಂತೆ ತನ್ನ ಅಂತಿಮ ವರದಿಯನ್ನು ಕಳೆದ ವರ್ಷ ಮೇನಲ್ಲಿ ಸಲ್ಲಿಸಿತು. ಇದು ಏಳು ಹೆಚ್ಚುವರಿ ಕ್ಷೇತ್ರಗಳನ್ನು (ಆರು ಜಮ್ಮುವಿನಲ್ಲಿ ಒಂದು ಕಾಶ್ಮೀರದಲ್ಲಿ) ರಚಿಸಲು ವರದಿ ಶಿಫಾರಸು ಮಾಡಿದೆ. ಈ ಕೇಂದ್ರಾಡಳಿತ ಪ್ರದೇಶದಲ್ಲಿ ಈವರೆಗೆ ಇದ್ದ 83 ಕ್ಷೇತ್ರಗಳನ್ನು 90ಕ್ಕೆ ಏರಿಕೆ ಮಾಡಲಾಗಿದೆ.

ಆಯೋಗದ ರಚನೆಯನ್ನು ಪ್ರಶ್ನಿಸುವ ಅರ್ಜಿಯ ಮೇಲಿನ ತೀರ್ಪನ್ನು ಡಿಸೆಂಬರ್‌ನಲ್ಲಿ ಸುಪ್ರೀಂ ಕೋರ್ಟ್ ಕಾಯ್ದಿರಿಸಿತ್ತು. 2019ರ ಕಾಯಿದೆಯಡಿ ಚುನಾವಣಾ ಆಯೋಗಕ್ಕೆ ಮಾತ್ರ ಮರು ವಿಂಗಡಣೆಯ ಕಾರ್ಯವನ್ನು ನಡೆಸಲು ಅಧಿಕಾರವಿದೆ ಎಂದು ಅರ್ಜಿದಾರರು ವಾದಿಸಿದ್ದರು. ಆದರೆ ಜಮ್ಮು ಮತ್ತು ಕಾಶ್ಮೀರದ ಮರು ರಚನಾ ಕಾಯಿದೆಯು ಕ್ಷೇತ್ರಗಳ ಮರುವಿಂಗಡಣೆಗೆ ಆಯೋಗವನ್ನು ಕಡ್ಡಾಯಗೊಳಿಸಿದೆ ಎಂದು ಕೇಂದ್ರ ಸರ್ಕಾರ ವಾದಿಸಿದೆ.

ಸರ್ಕಾರ ನಡೆಸುತ್ತಿರುವ ಮರು ವಿಂಗಡಣೆ ಕಾರ್ಯವನ್ನು ಪ್ರತಿಪಕ್ಷಗಳು ಟೀಕಿಸಿವೆ. ಈ ಕ್ರಮವು ಜಮ್ಮು ಮತ್ತು ಕಾಶ್ಮೀರದ ಜನರನ್ನು ‘ಮತ್ತಷ್ಟು ದೂರವಿಡುತ್ತದೆ’ ಎಂದು ನ್ಯಾಷನಲ್ ಕಾನ್ಫರೆನ್ಸ್ ಅಧ್ಯಕ್ಷ ಫಾರೂಕ್ ಅಬ್ದುಲ್ಲಾ ಹೇಳಿದ್ದಾರೆ.

ಮುಸ್ಲಿಮರ ಪ್ರಾಬಲ್ಯ ಕುಗ್ಗಿಸುವ ತಂತ್ರ

ಉದಾಹರಣೆಗೆ ಕಾಶ್ಮೀರ ಕಣಿವೆಯಲ್ಲಿ ಮುಸ್ಲಿಂ ಜನಸಂಖ್ಯೆ 95 ಶೇಕಡಾ ಇದ್ದು, ಅಲ್ಲಿ ಕ್ಷೇತ್ರಗಳ ಸಂಖ್ಯೆಯನ್ನು ಕಡಿಮೆ ಮಾಡಲಾಗುತ್ತಿದೆ. ತೀರಾ ಸರಳವಾಗಿ ಹೇಳುವುದಾದರೆ, ಹಿಂದೂಗಳು ಹೆಚ್ಚಿರುವಲ್ಲಿ ಕಡಿಮೆ ಮತದಾರರಿರುವ ಹೆಚ್ಚು ಕ್ಷೇತ್ರಗಳನ್ನು ರಚಿಸಿ, ಮುಸ್ಲಿಮರು ಹೆಚ್ಚಿರುವ ಪ್ರದೇಶಗಳಲ್ಲಿ ಹೆಚ್ಚು ಮತದಾರರಿರುವ ಕಡಿಮೆ ಕ್ಷೇತ್ರಗಳನ್ನು ರಚಿಸಲಾಗುತ್ತಿದೆ ಎಂಬ ಆರೋಪಗಳು ಬಂದಿವೆ.

ಕ್ಷೇತ್ರ ಮರುವಿಂಗಡಣೆಯ ಹಿಂದಿರುವ ಮೂಲ ಆಶಯವೇ ಮತದಾರರು ಮತ್ತು ಅವರ ಪ್ರತಿನಿಧಿಗಳ ನಡುವೆ ಸಂಪರ್ಕವನ್ನು ಸುಲಭಗೊಳಿಸುವುದು. ಉದಾಹರಣೆಗೆ ಒಂದು ಕ್ಷೇತ್ರದ ಕೇಂದ್ರದಿಂದ ಬಹಳ ದೂರದಲ್ಲಿ ಅಥವಾ ಕ್ರಮಿಸಲು ಕಷ್ಟವಾಗುವ ಪ್ರದೇಶದ ಮತದಾರರನ್ನು ಸಂಪರ್ಕ ಸುಲಭವಾಗುವ ಹತ್ತಿರದ ಇನ್ನೊಂದು ಕ್ಷೇತ್ರಕ್ಕೆ ಸೇರಿಸುವುದು. ಪರ್ವತ, ನದಿ, ರಸ್ತೆ ಸಂಪರ್ಕ ಇತ್ಯಾದಿ ಭೌಗೋಳಿಕ ನೆಲೆಗಳು ಮತ್ತು ಆಡಳಿತ ಕೇಂದ್ರಕ್ಕೆ ಹೆಚ್ಚು ಹತ್ತಿರವಾಗಿರುವ ನೆಲೆಯಲ್ಲಿ ಇದನ್ನು ಮಾಡಲಾಗುತ್ತದೆ. ಇನ್ನೊಂದು ಮಹತ್ವದ ನೆಲೆಯೆಂದರೆ, ಜನಸಂಖ್ಯೆಗೆ ಅನುಗುಣವಾಗಿ ಸೂಕ್ತ ಪ್ರಾತಿನಿಧ್ಯ ಒದಗಿಸುವುದು. ಮತದಾರರ ಸಂಖ್ಯೆ ಹೆಚ್ಚಿರುವ ಕ್ಷೇತ್ರಗಳಿಂದ ಮತದಾರರನ್ನು ಮೇಲಿನ ನೆಲೆಗಳನ್ನು ಪರಿಗಣಿಸಿ, ಮತದಾರರು ಕಡಿಮೆ ಇರುವ ಕ್ಷೇತ್ರಗಳಿಗೆ ಸೇರಿಸುವುದು. ಅಥವಾ ಇದೇ ನೆಲೆಯಲ್ಲಿ ಬೇರೆಬೇರೆ ಕ್ಷೇತ್ರಗಳ ಹೆಚ್ಚುವರಿ ಮತದಾರರನ್ನು ಸೇರಿಸಿ ಹೊಸ ಕ್ಷೇತ್ರವನ್ನು ರಚಿಸುವುದು.

ಆದರೆ, ಇದನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ ಎಂಬುದು ಪ್ರಸ್ತುತ ಮರುವಿಂಗಡನೆ ಪ್ರಸ್ತಾಪದಲ್ಲಿ ಮೇಲ್ನೋಟಕ್ಕೇ ಕಂಡುಬರುತ್ತದೆ ಎಂದು ದೂರಲಾಗಿದೆ. ಸದ್ಯಕ್ಕೆ ಜಮ್ಮು ಮತ್ತು ಕಾಶ್ಮೀರದಲ್ಲಿ ಆರು ಲೋಕಸಭಾ ಸ್ಥಾನಗಳಿದ್ದು, ಹಿಂದೂಗಳು ಹೆಚ್ಚಿರುವ ಮೂರು ಕ್ಷೇತ್ರಗಳಲ್ಲಿ ಬಿಜೆಪಿ ಗೆದ್ದಿದೆ. ಮುಸ್ಲಿಮರು ಹೆಚ್ಚಾಗಿರುವ ಮೂರರಲ್ಲಿ ನ್ಯಾಷನಲ್ ಕಾನ್ಫರೆನ್ಸ್ ಗೆದ್ದಿದೆ. ಲೋಕಸಭಾ ಸ್ಥಾನಗಳಲ್ಲಿ ಕೂಡಾ ಯದ್ವಾತದ್ವಾ ಕೈಯಾಡಿಸಿ, ಮುಸ್ಲಿಮರ ಪ್ರಾಬಲ್ಯವನ್ನು ಕಡಿಮೆ ಮಾಡುವ ಪ್ರಯತ್ನ ನಡೆದಿದೆ. ಒಟ್ಟು ವಿಧಾನಸಭಾ ಸ್ಥಾನಗಳ ಸಂಖ್ಯೆಯನ್ನು ಏಳರಷ್ಟು ಹೆಚ್ಚಿಸಿ, ಹಿಂದೂಗಳು ಹೆಚ್ಚಾಗಿರುವ ಜಮ್ಮು ಪ್ರಾಂತ್ಯಕ್ಕೆ ಆರು ಹೆಚ್ಚುವರಿ ಮತ್ತು ಮುಸ್ಲಿಮರು ಹೆಚ್ಚಾಗಿರುವ ಕಾಶ್ಮೀರಕ್ಕೆ ಕೇವಲ ಒಂದು ಹೆಚ್ಚುವರಿ ವಿಧಾನಸಭಾ ಸ್ಥಾನ ನೀಡುವ ಪ್ರಸ್ತಾಪ ಇದೆ. ಇಲ್ಲಿ ಜನಸಂಖ್ಯೆಗೆ ಅನುಗುಣವಾಗಿ ಪ್ರಾತಿನಿಧ್ಯದ ನಿಯಮವನ್ನೇ ಕಸದ ಬುಟ್ಟಿಗೆ ಎಸೆದಂತಾಗುತ್ತದೆ. ಇದು ಜಮ್ಮು ಮತ್ತು ಕಾಶ್ಮೀರದ ರಾಜಕೀಯ ಚಿತ್ರಣವನ್ನೇ ಸಂಪೂರ್ಣವಾಗಿ ಮತ್ತು  ಕೃತಕವಾಗಿ ಬದಲಿಸಲಿದೆ ಎಂಬುದು ಮರುವಿಂಗಡಣೆಯನ್ನು ಪ್ರಶ್ನಿಸುತ್ತಿರುವವರ ವಾದವಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...