Homeಮುಖಪುಟಜಮ್ಮು-ಕಾಶ್ಮೀರದಲ್ಲಿನ ಕ್ಷೇತ್ರ ಮರುವಿಂಗಡಣೆ ಪ್ರಶ್ನಿಸಿ ಸುಪ್ರೀಂಗೆ ಸಲ್ಲಿಸಿದ್ದ ಅರ್ಜಿ ವಜಾ

ಜಮ್ಮು-ಕಾಶ್ಮೀರದಲ್ಲಿನ ಕ್ಷೇತ್ರ ಮರುವಿಂಗಡಣೆ ಪ್ರಶ್ನಿಸಿ ಸುಪ್ರೀಂಗೆ ಸಲ್ಲಿಸಿದ್ದ ಅರ್ಜಿ ವಜಾ

- Advertisement -
- Advertisement -

ಜಮ್ಮು ಮತ್ತು ಕಾಶ್ಮೀರದಲ್ಲಿ ವಿಧಾನಸಭೆ, ಸಂಸದೀಯ ಕ್ಷೇತ್ರಗಳ ಮರು ವಿಂಗಡಣೆಯನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಸೋಮವಾರ ವಜಾಗೊಳಿಸಿದೆ ಎಂದು ‘ಬಾರ್‌ ಅಂಡ್ ಬೆಂಚ್‌’ ವರದಿ ಮಾಡಿದೆ.

ಕಾಶ್ಮೀರ ನಿವಾಸಿಗಳಾದ ಅಬ್ದುಲ್ ಗನಿ ಖಾನ್, ಮುಹಮ್ಮದ್ ಅಯೂಬ್ ಮಟ್ಟೋ ಅವರು ಸಲ್ಲಿಸಿದ ಅರ್ಜಿಯನ್ನು ನ್ಯಾಯಮೂರ್ತಿಗಳಾದ ಸಂಜಯ್ ಕಿಶನ್ ಕೌಲ್ ಮತ್ತು ಎ.ಎಸ್.ಓಕಾ ಅವರನ್ನೊಳಗೊಂಡ ಪೀಠವು ವಜಾ ಮಾಡಿದೆ.

“ಜಮ್ಮು ಮತ್ತು ಕಾಶ್ಮೀರ ಪುನರ್‌ ರಚನೆ (Re-  Re-organisation) ಕಾಯಿದೆ, 2019ರ ಸಿಂಧುತ್ವದ ಬಗ್ಗೆ ಇನ್ನೂ ತೀರ್ಪು ನೀಡಲಾಗಿಲ್ಲ” ಎಂದು ಪೀಠವು ಹೇಳಿದೆ. ಕಾಶ್ಮೀರದ ಸಂವಿಧಾನದ 370ನೇ ವಿಧಿಯನ್ನು ರದ್ದುಗೊಳಿಸಿರುವುದನ್ನು ಪ್ರಶ್ನಿಸಿ ಸಲ್ಲಿಸಲಾಗಿರುವ ಅರ್ಜಿಗಳು ಸುಪ್ರೀಂ ಕೋರ್ಟ್‌ನಲ್ಲಿ ಬಾಕಿ ಉಳಿದಿವೆ.

ಕಾಲಕಾಲಕ್ಕೆ ಆದ ಜನಸಂಖ್ಯೆಯಲ್ಲಿನ ಬದಲಾವಣೆಗಳನ್ನು ಒಳಗೊಂಡು ಅಸೆಂಬ್ಲಿ ಅಥವಾ ಲೋಕಸಭೆ ಕ್ಷೇತ್ರಗಳ ಗಡಿಗಳನ್ನು ಮರು ವಿಂಗಡಣೆ ಮಾಡಲಾಗುತ್ತದೆ. ಕೇಂದ್ರ ಸರ್ಕಾರ ರಚಿಸಿದ ಕ್ಷೇತ್ರ ಮರುವಿಂಗಡಣೆ ಆಯೋಗವು ಜಮ್ಮು ಮತ್ತು ಕಾಶ್ಮೀರದಲ್ಲಿನ ಕ್ಷೇತ್ರಗಳ ಮರು ವಿಂಗಡಣೆಗೆ ಸಂಬಂಧಿಸಿದಂತೆ ತನ್ನ ಅಂತಿಮ ವರದಿಯನ್ನು ಕಳೆದ ವರ್ಷ ಮೇನಲ್ಲಿ ಸಲ್ಲಿಸಿತು. ಇದು ಏಳು ಹೆಚ್ಚುವರಿ ಕ್ಷೇತ್ರಗಳನ್ನು (ಆರು ಜಮ್ಮುವಿನಲ್ಲಿ ಒಂದು ಕಾಶ್ಮೀರದಲ್ಲಿ) ರಚಿಸಲು ವರದಿ ಶಿಫಾರಸು ಮಾಡಿದೆ. ಈ ಕೇಂದ್ರಾಡಳಿತ ಪ್ರದೇಶದಲ್ಲಿ ಈವರೆಗೆ ಇದ್ದ 83 ಕ್ಷೇತ್ರಗಳನ್ನು 90ಕ್ಕೆ ಏರಿಕೆ ಮಾಡಲಾಗಿದೆ.

ಆಯೋಗದ ರಚನೆಯನ್ನು ಪ್ರಶ್ನಿಸುವ ಅರ್ಜಿಯ ಮೇಲಿನ ತೀರ್ಪನ್ನು ಡಿಸೆಂಬರ್‌ನಲ್ಲಿ ಸುಪ್ರೀಂ ಕೋರ್ಟ್ ಕಾಯ್ದಿರಿಸಿತ್ತು. 2019ರ ಕಾಯಿದೆಯಡಿ ಚುನಾವಣಾ ಆಯೋಗಕ್ಕೆ ಮಾತ್ರ ಮರು ವಿಂಗಡಣೆಯ ಕಾರ್ಯವನ್ನು ನಡೆಸಲು ಅಧಿಕಾರವಿದೆ ಎಂದು ಅರ್ಜಿದಾರರು ವಾದಿಸಿದ್ದರು. ಆದರೆ ಜಮ್ಮು ಮತ್ತು ಕಾಶ್ಮೀರದ ಮರು ರಚನಾ ಕಾಯಿದೆಯು ಕ್ಷೇತ್ರಗಳ ಮರುವಿಂಗಡಣೆಗೆ ಆಯೋಗವನ್ನು ಕಡ್ಡಾಯಗೊಳಿಸಿದೆ ಎಂದು ಕೇಂದ್ರ ಸರ್ಕಾರ ವಾದಿಸಿದೆ.

ಸರ್ಕಾರ ನಡೆಸುತ್ತಿರುವ ಮರು ವಿಂಗಡಣೆ ಕಾರ್ಯವನ್ನು ಪ್ರತಿಪಕ್ಷಗಳು ಟೀಕಿಸಿವೆ. ಈ ಕ್ರಮವು ಜಮ್ಮು ಮತ್ತು ಕಾಶ್ಮೀರದ ಜನರನ್ನು ‘ಮತ್ತಷ್ಟು ದೂರವಿಡುತ್ತದೆ’ ಎಂದು ನ್ಯಾಷನಲ್ ಕಾನ್ಫರೆನ್ಸ್ ಅಧ್ಯಕ್ಷ ಫಾರೂಕ್ ಅಬ್ದುಲ್ಲಾ ಹೇಳಿದ್ದಾರೆ.

ಮುಸ್ಲಿಮರ ಪ್ರಾಬಲ್ಯ ಕುಗ್ಗಿಸುವ ತಂತ್ರ

ಉದಾಹರಣೆಗೆ ಕಾಶ್ಮೀರ ಕಣಿವೆಯಲ್ಲಿ ಮುಸ್ಲಿಂ ಜನಸಂಖ್ಯೆ 95 ಶೇಕಡಾ ಇದ್ದು, ಅಲ್ಲಿ ಕ್ಷೇತ್ರಗಳ ಸಂಖ್ಯೆಯನ್ನು ಕಡಿಮೆ ಮಾಡಲಾಗುತ್ತಿದೆ. ತೀರಾ ಸರಳವಾಗಿ ಹೇಳುವುದಾದರೆ, ಹಿಂದೂಗಳು ಹೆಚ್ಚಿರುವಲ್ಲಿ ಕಡಿಮೆ ಮತದಾರರಿರುವ ಹೆಚ್ಚು ಕ್ಷೇತ್ರಗಳನ್ನು ರಚಿಸಿ, ಮುಸ್ಲಿಮರು ಹೆಚ್ಚಿರುವ ಪ್ರದೇಶಗಳಲ್ಲಿ ಹೆಚ್ಚು ಮತದಾರರಿರುವ ಕಡಿಮೆ ಕ್ಷೇತ್ರಗಳನ್ನು ರಚಿಸಲಾಗುತ್ತಿದೆ ಎಂಬ ಆರೋಪಗಳು ಬಂದಿವೆ.

ಕ್ಷೇತ್ರ ಮರುವಿಂಗಡಣೆಯ ಹಿಂದಿರುವ ಮೂಲ ಆಶಯವೇ ಮತದಾರರು ಮತ್ತು ಅವರ ಪ್ರತಿನಿಧಿಗಳ ನಡುವೆ ಸಂಪರ್ಕವನ್ನು ಸುಲಭಗೊಳಿಸುವುದು. ಉದಾಹರಣೆಗೆ ಒಂದು ಕ್ಷೇತ್ರದ ಕೇಂದ್ರದಿಂದ ಬಹಳ ದೂರದಲ್ಲಿ ಅಥವಾ ಕ್ರಮಿಸಲು ಕಷ್ಟವಾಗುವ ಪ್ರದೇಶದ ಮತದಾರರನ್ನು ಸಂಪರ್ಕ ಸುಲಭವಾಗುವ ಹತ್ತಿರದ ಇನ್ನೊಂದು ಕ್ಷೇತ್ರಕ್ಕೆ ಸೇರಿಸುವುದು. ಪರ್ವತ, ನದಿ, ರಸ್ತೆ ಸಂಪರ್ಕ ಇತ್ಯಾದಿ ಭೌಗೋಳಿಕ ನೆಲೆಗಳು ಮತ್ತು ಆಡಳಿತ ಕೇಂದ್ರಕ್ಕೆ ಹೆಚ್ಚು ಹತ್ತಿರವಾಗಿರುವ ನೆಲೆಯಲ್ಲಿ ಇದನ್ನು ಮಾಡಲಾಗುತ್ತದೆ. ಇನ್ನೊಂದು ಮಹತ್ವದ ನೆಲೆಯೆಂದರೆ, ಜನಸಂಖ್ಯೆಗೆ ಅನುಗುಣವಾಗಿ ಸೂಕ್ತ ಪ್ರಾತಿನಿಧ್ಯ ಒದಗಿಸುವುದು. ಮತದಾರರ ಸಂಖ್ಯೆ ಹೆಚ್ಚಿರುವ ಕ್ಷೇತ್ರಗಳಿಂದ ಮತದಾರರನ್ನು ಮೇಲಿನ ನೆಲೆಗಳನ್ನು ಪರಿಗಣಿಸಿ, ಮತದಾರರು ಕಡಿಮೆ ಇರುವ ಕ್ಷೇತ್ರಗಳಿಗೆ ಸೇರಿಸುವುದು. ಅಥವಾ ಇದೇ ನೆಲೆಯಲ್ಲಿ ಬೇರೆಬೇರೆ ಕ್ಷೇತ್ರಗಳ ಹೆಚ್ಚುವರಿ ಮತದಾರರನ್ನು ಸೇರಿಸಿ ಹೊಸ ಕ್ಷೇತ್ರವನ್ನು ರಚಿಸುವುದು.

ಆದರೆ, ಇದನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ ಎಂಬುದು ಪ್ರಸ್ತುತ ಮರುವಿಂಗಡನೆ ಪ್ರಸ್ತಾಪದಲ್ಲಿ ಮೇಲ್ನೋಟಕ್ಕೇ ಕಂಡುಬರುತ್ತದೆ ಎಂದು ದೂರಲಾಗಿದೆ. ಸದ್ಯಕ್ಕೆ ಜಮ್ಮು ಮತ್ತು ಕಾಶ್ಮೀರದಲ್ಲಿ ಆರು ಲೋಕಸಭಾ ಸ್ಥಾನಗಳಿದ್ದು, ಹಿಂದೂಗಳು ಹೆಚ್ಚಿರುವ ಮೂರು ಕ್ಷೇತ್ರಗಳಲ್ಲಿ ಬಿಜೆಪಿ ಗೆದ್ದಿದೆ. ಮುಸ್ಲಿಮರು ಹೆಚ್ಚಾಗಿರುವ ಮೂರರಲ್ಲಿ ನ್ಯಾಷನಲ್ ಕಾನ್ಫರೆನ್ಸ್ ಗೆದ್ದಿದೆ. ಲೋಕಸಭಾ ಸ್ಥಾನಗಳಲ್ಲಿ ಕೂಡಾ ಯದ್ವಾತದ್ವಾ ಕೈಯಾಡಿಸಿ, ಮುಸ್ಲಿಮರ ಪ್ರಾಬಲ್ಯವನ್ನು ಕಡಿಮೆ ಮಾಡುವ ಪ್ರಯತ್ನ ನಡೆದಿದೆ. ಒಟ್ಟು ವಿಧಾನಸಭಾ ಸ್ಥಾನಗಳ ಸಂಖ್ಯೆಯನ್ನು ಏಳರಷ್ಟು ಹೆಚ್ಚಿಸಿ, ಹಿಂದೂಗಳು ಹೆಚ್ಚಾಗಿರುವ ಜಮ್ಮು ಪ್ರಾಂತ್ಯಕ್ಕೆ ಆರು ಹೆಚ್ಚುವರಿ ಮತ್ತು ಮುಸ್ಲಿಮರು ಹೆಚ್ಚಾಗಿರುವ ಕಾಶ್ಮೀರಕ್ಕೆ ಕೇವಲ ಒಂದು ಹೆಚ್ಚುವರಿ ವಿಧಾನಸಭಾ ಸ್ಥಾನ ನೀಡುವ ಪ್ರಸ್ತಾಪ ಇದೆ. ಇಲ್ಲಿ ಜನಸಂಖ್ಯೆಗೆ ಅನುಗುಣವಾಗಿ ಪ್ರಾತಿನಿಧ್ಯದ ನಿಯಮವನ್ನೇ ಕಸದ ಬುಟ್ಟಿಗೆ ಎಸೆದಂತಾಗುತ್ತದೆ. ಇದು ಜಮ್ಮು ಮತ್ತು ಕಾಶ್ಮೀರದ ರಾಜಕೀಯ ಚಿತ್ರಣವನ್ನೇ ಸಂಪೂರ್ಣವಾಗಿ ಮತ್ತು  ಕೃತಕವಾಗಿ ಬದಲಿಸಲಿದೆ ಎಂಬುದು ಮರುವಿಂಗಡಣೆಯನ್ನು ಪ್ರಶ್ನಿಸುತ್ತಿರುವವರ ವಾದವಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಅಕ್ರಮ ನೇಮಕಾತಿ; ರೋಸ್ಟರ್ ಮೀಸಲು ಕ್ರಮ ಉಲ್ಲಂಘನೆ ಆರೋಪ: ನ್ಯಾಯಾಂಗ ತನಿಖೆಗೆ ಆಗ್ರಹ

ಕಲಬುರಗಿ: ಕಲಬುರಗಿ ಜಿಲ್ಲೆಯಲ್ಲಿರುವ Central University of Karnataka ದಲ್ಲಿ ಬೋಧಕ ಹುದ್ದೆಗಳ ನೇಮಕಾತಿಯಲ್ಲಿ ಮೀಸಲು ಕ್ರಮ ಉಲ್ಲಂಘನೆ ಹಾಗೂ ಅಕ್ರಮ ನೇಮಕಾತಿಗಳು ನಡೆದಿವೆ ಎಂಬ ಆರೋಪಗಳ ಹಿನ್ನೆಲೆಯಲ್ಲಿ ಹಾಲಿ ನ್ಯಾಯಾಧೀಶರ ನೇತೃತ್ವದಲ್ಲಿ...

ಸಂಭಾಲ್ | ಮಸೀದಿಯಲ್ಲಿ ನಮಾಝ್ ಮಾಡುವವರ ಸಂಖ್ಯೆ ಮಿತಿಗೊಳಿಸಲು ಸಾಧ್ಯವಿಲ್ಲ; ಕಾನೂನು ಸುವ್ಯವಸ್ಥೆ ಕಾಪಾಡಲು ಆಗದಿದ್ದರೆ ರಾಜೀನಾಮೆ ನೀಡಿ: ಅಧಿಕಾರಿಗಳಿಗೆ ಅಲಹಾಬಾದ್ ಹೈಕೋರ್ಟ್ ತರಾಟೆ

ಸಂಭಾಲ್ ಜಿಲ್ಲೆಯ ಮಸೀದಿಯೊಂದರಲ್ಲಿ ರಂಝಾನ್ ಸಮಯದಲ್ಲಿ ನಮಾಝ್ ಮಾಡುವವರ ಸಂಖ್ಯೆಯನ್ನು ಮಿತಿಗೊಳಿಸುವ ಉತ್ತರ ಪ್ರದೇಶ ಸರ್ಕಾರದ ನಿರ್ಧಾರವನ್ನು ಅಲಹಾಬಾದ್ ಹೈಕೋರ್ಟ್ ತಿರಸ್ಕರಿಸಿದೆ. ಕಾನೂನು ಸುವ್ಯವಸ್ಥೆ ಕಾಪಾಡುವುದು ಸರ್ಕಾರದ ಜವಾಬ್ದಾರಿ ಎಂದಿದೆ. ಫೆಬ್ರವರಿ 27ರಂದು...

ಇರಾನ್ ‘ಭಯೋತ್ಪಾದಕ ಆಡಳಿತ’ ಎಂದು ಕರೆದ NDTV ಹಿರಿಯ ಸಂಪಾದಕ: ವ್ಯಾಪಕ ಟೀಕೆಯ ನಂತರ ಪೋಸ್ಟ್ ಡಿಲಿಟ್ 

ಹೊಸದಿಲ್ಲಿ: ಅಮೆರಿಕ-ಇಸ್ರೇಲ್ ಮತ್ತು ಇರಾನ್ ನಡುವೆ ನಡೆಯುತ್ತಿರುವ ಯುದ್ಧದಿಂದಾಗಿ ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ಹೆಚ್ಚುತ್ತಿರುವ ಸಂದರ್ಭದಲ್ಲಿ ಭಾರತದ ಮುಖ್ಯ ಮಾಧ್ಯಮ ಸಂಸ್ಥೆ NDTV ಹಿರಿಯ ಸಂಪಾದಕ ಆದಿತ್ಯ ರಾಜ್ ಕೌಲ್ ಅವರು ಇರಾನ್ “ಭಯೋತ್ಪಾದಕ...

ಎಲ್‌ಪಿಜಿ ಬಿಕ್ಕಟ್ಟು: ಹೋಟೆಲ್ ಮಾಲೀಕರಿಗೆ ವಿದ್ಯುತ್ ಒಲೆಗಳನ್ನು ಬಳಸಲು ಸೂಚಿಸಿದ ಸಚಿವ ಕೆ.ಎಚ್. ​​ಮುನಿಯಪ್ಪ

ಬೆಂಗಳೂರು: ಪಶ್ಚಿಮ ಏಷ್ಯಾ ಸಂಘರ್ಷದ ಪ್ರಭಾವ ಭಾರತೀಯರ ಅಡುಗೆ ಮನೆಯನ್ನು ಪ್ರವೇಶಿಸಿದ್ದು, ಎಲ್‌ಪಿಜಿ  ಬಿಕ್ಕಟ್ಟಿನಿಂದ ನಾಗರೀಕರು, ಸೇರಿದಂತೆ ಹೋಟೆಲ್ ಉಧ್ಯಮ ತೀವ್ರ ಸಂಕಷ್ಟಕ್ಕೆ ಸಿಲುಕಿವೆ. ಈ ನಡುವೆ ಯುದ್ಧದ ಪರಿಣಾಮ ಭಾರತದ ಮೇಲೆ...

ಹೋರಾಟಗಾರ ಸೋನಮ್ ವಾಂಗ್ಚುಕ್ ಬಂಧನ ರದ್ದುಗೊಳಿಸಿದ ಕೇಂದ್ರ

ಲಡಾಖ್‌ನಲ್ಲಿ ಶಾಂತಿಯನ್ನು ಮರುಸ್ಥಾಪಿಸಲು ಮತ್ತು ಮಾತುಕತೆಗೆ ಪೂರಕವಾದ ವಾತಾವರಣವನ್ನು ನಿರ್ಮಿಸುವ ಉದ್ದೇಶದಿಂದ, ರಾಷ್ಟ್ರೀಯ ಭದ್ರತಾ ಕಾಯ್ದೆಯಡಿ (ಎನ್‌ಎಸ್‌ಎ) ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಬಂಧನವನ್ನು ಕೇಂದ್ರ ಸರ್ಕಾರ ಹಿಂಪಡೆದಿದೆ ಎಂದು ವರದಿಯಾಗಿದೆ. ಸರ್ಕಾರ...

‘ಭಾರತವನ್ನು ಬೆದರಿಸುವಲ್ಲಿ ತಿಂಗಳುಗಟ್ಟಲೆ ಕಳೆದ ಅಮೆರಿಕ ಈಗ ಜಗತ್ತನ್ನ ಬೇಡಿಕೊಳ್ಳುತ್ತಿದೆ’: ರಷ್ಯಾದ ತೈಲ ವಿಚಾರದ ಕುರಿತು ಇರಾನ್ ಟೀಕೆ

ಟೆಹ್ರಾನ್: ರಷ್ಯಾದ ತೈಲದ ವಿಷಯದಲ್ಲಿ ಅಮೆರಿಕವು ದ್ವಿಮುಖ ನೀತಿಯನ್ನು ಅನುಸರಿಸುತ್ತಿದೆ ಎಂದು ಇರಾನ್ ಶನಿವಾರ ಆರೋಪಿಸಿದೆ. ವಾಷಿಂಗ್ಟನ್ ಈಗ ಒತ್ತಡ ಮತ್ತು ನಿರ್ಬಂಧಗಳ ಮೂಲಕ ನಿರ್ಬಂಧಿಸಲು ಪ್ರಯತ್ನಿಸಿದ ಅದೇ ಕಚ್ಚಾ ತೈಲವನ್ನು ಖರೀದಿಸಲು...

ಗಾಝಾ ನರಮೇಧ : ಅಂತಾರಾಷ್ಟ್ರೀಯ ನ್ಯಾಯಾಲಯದಲ್ಲಿ ಇಸ್ರೇಲ್‌ ಪರ ಅಮೆರಿಕ ವಕಾಲತ್ತು

ಗಾಝಾ ನರಮೇಧಕ್ಕೆ ಸಂಬಂಧಿಸಿದಂತೆ ಇಸ್ರೇಲ್ ವಿರುದ್ದ ಅಂತಾರಾಷ್ಟ್ರೀಯ ನ್ಯಾಯಾಲಯದಲ್ಲಿ ದಕ್ಷಿಣ ಆಫ್ರಿಕಾ ಹೂಡಿರುವ ಪ್ರಕರಣದಲ್ಲಿ ಅಮೆರಿಕ ಸೇರಿದಂತೆ ಕೆಲ ರಾಷ್ಟ್ರಗಳು ಮಧ್ಯ ಪ್ರವೇಶಿಸಿದ್ದು, ಇಸ್ರೇಲ್ ಪರ ವಕಾಲತ್ತು ವಹಿಸಲು ಮುಂದಾಗಿವೆ ಎಂದು ವರದಿಯಾಗಿದೆ. ದಿ...

ಇರಾನ್‌ನ ಕಿರೀಟ ರತ್ನ ಖಾರ್ಗ್ ದ್ವೀಪದ ಮೇಲೆ ಅಮೆರಿಕದಿಂದ ಬಾಂಬ್ ದಾಳಿ : ಟ್ರಂಪ್ ಹೇಳಿಕೆ

ಇರಾನ್‌ನ ಖಾರ್ಗ್ ದ್ವೀಪದ ಮೇಲೆ ಅಮೆರಿಕ 'ಅತ್ಯಂತ ಶಕ್ತಿಶಾಲಿ ಬಾಂಬ್ ದಾಳಿ' ನಡೆಸಿದೆ ಎಂದು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ತಿಳಿಸಿದ್ದಾರೆ. ದ್ವೀಪದಲ್ಲಿರುವ ತೈಲ ಮೂಲಸೌಕರ್ಯಗಳನ್ನು ನಾಶಪಡಿಸದೆ ಇರಲು ನಿರ್ಧರಿಸಿದ ಅಮೆರಿಕ ಪಡೆಗಳು, ಅಲ್ಲಿನ ಮಿಲಿಟರಿ ಕೇಂದ್ರಗಳನ್ನು...

ಪಂಜಾಬ್‌| ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ನಿಂತಿದ್ದಾಗಲೇ ಕುಸಿದು ಬಿದ್ದು ಸಾವನ್ನಪ್ಪಿದ ವೃದ್ಧ

ಪಂಜಾಬ್‌ನ ಬರ್ನಾಲಾ ಜಿಲ್ಲೆಯಲ್ಲಿ, ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ಕಾಯುತ್ತಿದ್ದಾಗ 66 ವರ್ಷದ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಶುಕ್ರವಾರ ನಡೆದಿದೆ. ದೇಶದಲ್ಲಿ ಪ್ರಸ್ತುತ ನಡೆಯುತ್ತಿರುವ ಅನಿಲ ಕೊರತೆಯಿಂದ ಉಂಟಾಗುತ್ತಿರುವ...

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಪದಚ್ಯುತಿಗೆ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿದ ವಿಪಕ್ಷಗಳು

ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರನ್ನು ಪದಚ್ಯುತಗೊಳಿಸುವಂತೆ ಕೋರಿ ವಿರೋಧ ಪಕ್ಷದ ಸಂಸದರು ಸಂಸತ್ತಿನ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿರುವುದಾಗಿ ಶುಕ್ರವಾರ ವರದಿಯಾಗಿದೆ.  ಈ ನೋಟಿಸ್‌ಗೆ 130 ಲೋಕಸಭಾ ಸದಸ್ಯರು...