Homeಮುಖಪುಟಜಮ್ಮು-ಕಾಶ್ಮೀರದಲ್ಲಿನ ಕ್ಷೇತ್ರ ಮರುವಿಂಗಡಣೆ ಪ್ರಶ್ನಿಸಿ ಸುಪ್ರೀಂಗೆ ಸಲ್ಲಿಸಿದ್ದ ಅರ್ಜಿ ವಜಾ

ಜಮ್ಮು-ಕಾಶ್ಮೀರದಲ್ಲಿನ ಕ್ಷೇತ್ರ ಮರುವಿಂಗಡಣೆ ಪ್ರಶ್ನಿಸಿ ಸುಪ್ರೀಂಗೆ ಸಲ್ಲಿಸಿದ್ದ ಅರ್ಜಿ ವಜಾ

- Advertisement -
- Advertisement -

ಜಮ್ಮು ಮತ್ತು ಕಾಶ್ಮೀರದಲ್ಲಿ ವಿಧಾನಸಭೆ, ಸಂಸದೀಯ ಕ್ಷೇತ್ರಗಳ ಮರು ವಿಂಗಡಣೆಯನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಸೋಮವಾರ ವಜಾಗೊಳಿಸಿದೆ ಎಂದು ‘ಬಾರ್‌ ಅಂಡ್ ಬೆಂಚ್‌’ ವರದಿ ಮಾಡಿದೆ.

ಕಾಶ್ಮೀರ ನಿವಾಸಿಗಳಾದ ಅಬ್ದುಲ್ ಗನಿ ಖಾನ್, ಮುಹಮ್ಮದ್ ಅಯೂಬ್ ಮಟ್ಟೋ ಅವರು ಸಲ್ಲಿಸಿದ ಅರ್ಜಿಯನ್ನು ನ್ಯಾಯಮೂರ್ತಿಗಳಾದ ಸಂಜಯ್ ಕಿಶನ್ ಕೌಲ್ ಮತ್ತು ಎ.ಎಸ್.ಓಕಾ ಅವರನ್ನೊಳಗೊಂಡ ಪೀಠವು ವಜಾ ಮಾಡಿದೆ.

“ಜಮ್ಮು ಮತ್ತು ಕಾಶ್ಮೀರ ಪುನರ್‌ ರಚನೆ (Re-  Re-organisation) ಕಾಯಿದೆ, 2019ರ ಸಿಂಧುತ್ವದ ಬಗ್ಗೆ ಇನ್ನೂ ತೀರ್ಪು ನೀಡಲಾಗಿಲ್ಲ” ಎಂದು ಪೀಠವು ಹೇಳಿದೆ. ಕಾಶ್ಮೀರದ ಸಂವಿಧಾನದ 370ನೇ ವಿಧಿಯನ್ನು ರದ್ದುಗೊಳಿಸಿರುವುದನ್ನು ಪ್ರಶ್ನಿಸಿ ಸಲ್ಲಿಸಲಾಗಿರುವ ಅರ್ಜಿಗಳು ಸುಪ್ರೀಂ ಕೋರ್ಟ್‌ನಲ್ಲಿ ಬಾಕಿ ಉಳಿದಿವೆ.

ಕಾಲಕಾಲಕ್ಕೆ ಆದ ಜನಸಂಖ್ಯೆಯಲ್ಲಿನ ಬದಲಾವಣೆಗಳನ್ನು ಒಳಗೊಂಡು ಅಸೆಂಬ್ಲಿ ಅಥವಾ ಲೋಕಸಭೆ ಕ್ಷೇತ್ರಗಳ ಗಡಿಗಳನ್ನು ಮರು ವಿಂಗಡಣೆ ಮಾಡಲಾಗುತ್ತದೆ. ಕೇಂದ್ರ ಸರ್ಕಾರ ರಚಿಸಿದ ಕ್ಷೇತ್ರ ಮರುವಿಂಗಡಣೆ ಆಯೋಗವು ಜಮ್ಮು ಮತ್ತು ಕಾಶ್ಮೀರದಲ್ಲಿನ ಕ್ಷೇತ್ರಗಳ ಮರು ವಿಂಗಡಣೆಗೆ ಸಂಬಂಧಿಸಿದಂತೆ ತನ್ನ ಅಂತಿಮ ವರದಿಯನ್ನು ಕಳೆದ ವರ್ಷ ಮೇನಲ್ಲಿ ಸಲ್ಲಿಸಿತು. ಇದು ಏಳು ಹೆಚ್ಚುವರಿ ಕ್ಷೇತ್ರಗಳನ್ನು (ಆರು ಜಮ್ಮುವಿನಲ್ಲಿ ಒಂದು ಕಾಶ್ಮೀರದಲ್ಲಿ) ರಚಿಸಲು ವರದಿ ಶಿಫಾರಸು ಮಾಡಿದೆ. ಈ ಕೇಂದ್ರಾಡಳಿತ ಪ್ರದೇಶದಲ್ಲಿ ಈವರೆಗೆ ಇದ್ದ 83 ಕ್ಷೇತ್ರಗಳನ್ನು 90ಕ್ಕೆ ಏರಿಕೆ ಮಾಡಲಾಗಿದೆ.

ಆಯೋಗದ ರಚನೆಯನ್ನು ಪ್ರಶ್ನಿಸುವ ಅರ್ಜಿಯ ಮೇಲಿನ ತೀರ್ಪನ್ನು ಡಿಸೆಂಬರ್‌ನಲ್ಲಿ ಸುಪ್ರೀಂ ಕೋರ್ಟ್ ಕಾಯ್ದಿರಿಸಿತ್ತು. 2019ರ ಕಾಯಿದೆಯಡಿ ಚುನಾವಣಾ ಆಯೋಗಕ್ಕೆ ಮಾತ್ರ ಮರು ವಿಂಗಡಣೆಯ ಕಾರ್ಯವನ್ನು ನಡೆಸಲು ಅಧಿಕಾರವಿದೆ ಎಂದು ಅರ್ಜಿದಾರರು ವಾದಿಸಿದ್ದರು. ಆದರೆ ಜಮ್ಮು ಮತ್ತು ಕಾಶ್ಮೀರದ ಮರು ರಚನಾ ಕಾಯಿದೆಯು ಕ್ಷೇತ್ರಗಳ ಮರುವಿಂಗಡಣೆಗೆ ಆಯೋಗವನ್ನು ಕಡ್ಡಾಯಗೊಳಿಸಿದೆ ಎಂದು ಕೇಂದ್ರ ಸರ್ಕಾರ ವಾದಿಸಿದೆ.

ಸರ್ಕಾರ ನಡೆಸುತ್ತಿರುವ ಮರು ವಿಂಗಡಣೆ ಕಾರ್ಯವನ್ನು ಪ್ರತಿಪಕ್ಷಗಳು ಟೀಕಿಸಿವೆ. ಈ ಕ್ರಮವು ಜಮ್ಮು ಮತ್ತು ಕಾಶ್ಮೀರದ ಜನರನ್ನು ‘ಮತ್ತಷ್ಟು ದೂರವಿಡುತ್ತದೆ’ ಎಂದು ನ್ಯಾಷನಲ್ ಕಾನ್ಫರೆನ್ಸ್ ಅಧ್ಯಕ್ಷ ಫಾರೂಕ್ ಅಬ್ದುಲ್ಲಾ ಹೇಳಿದ್ದಾರೆ.

ಮುಸ್ಲಿಮರ ಪ್ರಾಬಲ್ಯ ಕುಗ್ಗಿಸುವ ತಂತ್ರ

ಉದಾಹರಣೆಗೆ ಕಾಶ್ಮೀರ ಕಣಿವೆಯಲ್ಲಿ ಮುಸ್ಲಿಂ ಜನಸಂಖ್ಯೆ 95 ಶೇಕಡಾ ಇದ್ದು, ಅಲ್ಲಿ ಕ್ಷೇತ್ರಗಳ ಸಂಖ್ಯೆಯನ್ನು ಕಡಿಮೆ ಮಾಡಲಾಗುತ್ತಿದೆ. ತೀರಾ ಸರಳವಾಗಿ ಹೇಳುವುದಾದರೆ, ಹಿಂದೂಗಳು ಹೆಚ್ಚಿರುವಲ್ಲಿ ಕಡಿಮೆ ಮತದಾರರಿರುವ ಹೆಚ್ಚು ಕ್ಷೇತ್ರಗಳನ್ನು ರಚಿಸಿ, ಮುಸ್ಲಿಮರು ಹೆಚ್ಚಿರುವ ಪ್ರದೇಶಗಳಲ್ಲಿ ಹೆಚ್ಚು ಮತದಾರರಿರುವ ಕಡಿಮೆ ಕ್ಷೇತ್ರಗಳನ್ನು ರಚಿಸಲಾಗುತ್ತಿದೆ ಎಂಬ ಆರೋಪಗಳು ಬಂದಿವೆ.

ಕ್ಷೇತ್ರ ಮರುವಿಂಗಡಣೆಯ ಹಿಂದಿರುವ ಮೂಲ ಆಶಯವೇ ಮತದಾರರು ಮತ್ತು ಅವರ ಪ್ರತಿನಿಧಿಗಳ ನಡುವೆ ಸಂಪರ್ಕವನ್ನು ಸುಲಭಗೊಳಿಸುವುದು. ಉದಾಹರಣೆಗೆ ಒಂದು ಕ್ಷೇತ್ರದ ಕೇಂದ್ರದಿಂದ ಬಹಳ ದೂರದಲ್ಲಿ ಅಥವಾ ಕ್ರಮಿಸಲು ಕಷ್ಟವಾಗುವ ಪ್ರದೇಶದ ಮತದಾರರನ್ನು ಸಂಪರ್ಕ ಸುಲಭವಾಗುವ ಹತ್ತಿರದ ಇನ್ನೊಂದು ಕ್ಷೇತ್ರಕ್ಕೆ ಸೇರಿಸುವುದು. ಪರ್ವತ, ನದಿ, ರಸ್ತೆ ಸಂಪರ್ಕ ಇತ್ಯಾದಿ ಭೌಗೋಳಿಕ ನೆಲೆಗಳು ಮತ್ತು ಆಡಳಿತ ಕೇಂದ್ರಕ್ಕೆ ಹೆಚ್ಚು ಹತ್ತಿರವಾಗಿರುವ ನೆಲೆಯಲ್ಲಿ ಇದನ್ನು ಮಾಡಲಾಗುತ್ತದೆ. ಇನ್ನೊಂದು ಮಹತ್ವದ ನೆಲೆಯೆಂದರೆ, ಜನಸಂಖ್ಯೆಗೆ ಅನುಗುಣವಾಗಿ ಸೂಕ್ತ ಪ್ರಾತಿನಿಧ್ಯ ಒದಗಿಸುವುದು. ಮತದಾರರ ಸಂಖ್ಯೆ ಹೆಚ್ಚಿರುವ ಕ್ಷೇತ್ರಗಳಿಂದ ಮತದಾರರನ್ನು ಮೇಲಿನ ನೆಲೆಗಳನ್ನು ಪರಿಗಣಿಸಿ, ಮತದಾರರು ಕಡಿಮೆ ಇರುವ ಕ್ಷೇತ್ರಗಳಿಗೆ ಸೇರಿಸುವುದು. ಅಥವಾ ಇದೇ ನೆಲೆಯಲ್ಲಿ ಬೇರೆಬೇರೆ ಕ್ಷೇತ್ರಗಳ ಹೆಚ್ಚುವರಿ ಮತದಾರರನ್ನು ಸೇರಿಸಿ ಹೊಸ ಕ್ಷೇತ್ರವನ್ನು ರಚಿಸುವುದು.

ಆದರೆ, ಇದನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ ಎಂಬುದು ಪ್ರಸ್ತುತ ಮರುವಿಂಗಡನೆ ಪ್ರಸ್ತಾಪದಲ್ಲಿ ಮೇಲ್ನೋಟಕ್ಕೇ ಕಂಡುಬರುತ್ತದೆ ಎಂದು ದೂರಲಾಗಿದೆ. ಸದ್ಯಕ್ಕೆ ಜಮ್ಮು ಮತ್ತು ಕಾಶ್ಮೀರದಲ್ಲಿ ಆರು ಲೋಕಸಭಾ ಸ್ಥಾನಗಳಿದ್ದು, ಹಿಂದೂಗಳು ಹೆಚ್ಚಿರುವ ಮೂರು ಕ್ಷೇತ್ರಗಳಲ್ಲಿ ಬಿಜೆಪಿ ಗೆದ್ದಿದೆ. ಮುಸ್ಲಿಮರು ಹೆಚ್ಚಾಗಿರುವ ಮೂರರಲ್ಲಿ ನ್ಯಾಷನಲ್ ಕಾನ್ಫರೆನ್ಸ್ ಗೆದ್ದಿದೆ. ಲೋಕಸಭಾ ಸ್ಥಾನಗಳಲ್ಲಿ ಕೂಡಾ ಯದ್ವಾತದ್ವಾ ಕೈಯಾಡಿಸಿ, ಮುಸ್ಲಿಮರ ಪ್ರಾಬಲ್ಯವನ್ನು ಕಡಿಮೆ ಮಾಡುವ ಪ್ರಯತ್ನ ನಡೆದಿದೆ. ಒಟ್ಟು ವಿಧಾನಸಭಾ ಸ್ಥಾನಗಳ ಸಂಖ್ಯೆಯನ್ನು ಏಳರಷ್ಟು ಹೆಚ್ಚಿಸಿ, ಹಿಂದೂಗಳು ಹೆಚ್ಚಾಗಿರುವ ಜಮ್ಮು ಪ್ರಾಂತ್ಯಕ್ಕೆ ಆರು ಹೆಚ್ಚುವರಿ ಮತ್ತು ಮುಸ್ಲಿಮರು ಹೆಚ್ಚಾಗಿರುವ ಕಾಶ್ಮೀರಕ್ಕೆ ಕೇವಲ ಒಂದು ಹೆಚ್ಚುವರಿ ವಿಧಾನಸಭಾ ಸ್ಥಾನ ನೀಡುವ ಪ್ರಸ್ತಾಪ ಇದೆ. ಇಲ್ಲಿ ಜನಸಂಖ್ಯೆಗೆ ಅನುಗುಣವಾಗಿ ಪ್ರಾತಿನಿಧ್ಯದ ನಿಯಮವನ್ನೇ ಕಸದ ಬುಟ್ಟಿಗೆ ಎಸೆದಂತಾಗುತ್ತದೆ. ಇದು ಜಮ್ಮು ಮತ್ತು ಕಾಶ್ಮೀರದ ರಾಜಕೀಯ ಚಿತ್ರಣವನ್ನೇ ಸಂಪೂರ್ಣವಾಗಿ ಮತ್ತು  ಕೃತಕವಾಗಿ ಬದಲಿಸಲಿದೆ ಎಂಬುದು ಮರುವಿಂಗಡಣೆಯನ್ನು ಪ್ರಶ್ನಿಸುತ್ತಿರುವವರ ವಾದವಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕಾಕ್ರೋಚ್ ಪಾರ್ಟಿ ಧರಣಿ : ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಆರಂಭಿಸಿದ ಸೋನಮ್ ವಾಂಗ್‌ಚುಕ್

ನೀಟ್ ಸೇರಿದಂತೆ ವಿವಿಧ ಪರೀಕ್ಷೆಗಳ ಪ್ರಶ್ನೆ ಪತ್ರಿಕೆ ಸೋರಿಕೆ, ಹಲವು ಅಕ್ರಮ, ಶೈಕ್ಷಣಿಕ ಅವ್ಯವಸ್ಥೆಗಳ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿ ಕಾಕ್ರೋಚ್ ಜನತಾ...

SIR ವೇಳೆ ಮತಪಟ್ಟಿಯಿಂದ ಹೆಸರು ಡಿಲೀಟ್: ‘ದಿ ಟೆಲಿಗ್ರಾಫ್’ ಮಾಜಿ ಸಂಪಾದಕ ರಾಜಗೋಪಾಲ್ ಪಾಸ್‌ಪೋರ್ಟ್ ನವೀಕರಣಕ್ಕೆ ತಡೆ

ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ವೇಳೆ ಮತದಾರರ ಪಟ್ಟಿಯಿಂದ ಹೆಸರು ತೆಗೆದುಹಾಕಿದ ಕಾರಣ ಪಾಸ್‌ಪೋರ್ಟ್ ನವೀಕರಿಸಲು ಆಗುತ್ತಿಲ್ಲ ಎಂದು ದೇಶದ ಖ್ಯಾತ ಇಂಗ್ಲಿಷ್ ದಿನಪತ್ರಿಕೆ ‘ದಿ ಟೆಲಿಗ್ರಾಫ್’ನ ಮಾಜಿ ಸಂಪಾದಕ ಆರ್. ರಾಜಗೋಪಾಲ್...

‘ಈಗಲೂ ಮಮತಾ ಬ್ಯಾನರ್ಜಿಯೇ ನಮ್ಮ ನಾಯಕಿ’ : ಟಿಎಂಸಿ ಬಂಡಾಯ ಬಣದ ಅಧ್ಯಕ್ಷ ಅರೂಪ್ ರಾಯ್ ಹೇಳಿಕೆ

"ಮಮತಾ ಬ್ಯಾನರ್ಜಿ ಅವರೇ ಇಂದಿಗೂ ನಮ್ಮ ನಾಯಕಿ. ಅವರೇ ಈ ಪಕ್ಷವನ್ನು ಸ್ಥಾಪಿಸಿದವರು. ಅವರೇ ನಮ್ಮ ಪಕ್ಷದ ಕಾಂದಾರಿ (ಮಾರ್ಗದರ್ಶಕರು ಅಥವಾ ಪಕ್ಷವನ್ನು ಮುನ್ನಡೆಸುವವರು). ಮಮತಾ ಬ್ಯಾನರ್ಜಿ ಅವರಿಂದಾಗಿಯೇ ನಾವು ಈ ಪಕ್ಷವನ್ನು...

ಪಶ್ಚಿಮ ಬಂಗಾಳದ ಆಹಾರ ಸಂಸ್ಕೃತಿಯನ್ನು ಗೌರವಿಸುತ್ತೇವೆ ಎಂಬ ಬಿಜೆಪಿಯ ಚುನಾವಣಾ ಭರವಸೆಗೆ ಈಗ ‘ಮೊಟ್ಟೆ’ ಮೊದಲ ಬಲಿ

ಚುನಾವಣಾ ಸಮಯದಲ್ಲಿ, ಬಿಜೆಪಿ ಪರಿಸ್ಥಿತಿಯನ್ನು ಮತ್ತು ಮೀನಿನ ಮಾರುಕಟ್ಟೆಯ ನಾಡಿಮಿಡಿತವನ್ನು ಸರಿಯಾಗಿಯೇ ಅರ್ಥಮಾಡಿಕೊಂಡಿತ್ತು. ಅವರ ನಾಯಕರು ಟಿವಿ ಕ್ಯಾಮೆರಾಗಳ ಮುಂದೆ ಮೀನುಗಳನ್ನು ಪ್ರದರ್ಶಿಸಿದರು ಮತ್ತು ಕುರಿ ಮಾಂಸದೂಟವನ್ನು ಸವಿದಿದ್ದರು. ಬಂಗಾಳಿಗಳ ತಟ್ಟೆಗೆ (ಆಹಾರಕ್ಕೆ)...

24 ಗಂಟೆಗೂ ಮೊದಲೇ ಮಹಾರಾಷ್ಟ್ರದಲ್ಲಿ TET ಪ್ರಶ್ನೆ ಪತ್ರಿಕೆ ಸೋರಿಕೆ: ರದ್ದಾದ ಪರೀಕ್ಷೆ

ಮಹಾರಾಷ್ಟ್ರದಲ್ಲಿ ಮತ್ತೊಂದು ಪರೀಕ್ಷಾ ಅಕ್ರಮದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಜೂನ್ 28ರ ಭಾನುವಾರ ನಡೆಯಬೇಕಿದ್ದ ‘ಶಿಕ್ಷಕರ ಅರ್ಹತಾ ಪರೀಕ್ಷೆ’ (TET) ಆರಂಭಕ್ಕೆ ಕೇವಲ 24 ಗಂಟೆಗಳ ಮುನ್ನವೇ ಪ್ರಶ್ನೆ ಪತ್ರಿಕೆ ಸೋರಿಕೆಯಾದ...

ಸೌತೆಕಾಯಿ ಕೃಷಿಗೆ ತನ್ನ ಸಚಿವಾಲಯದಿಂದಲೇ ₹99 ಲಕ್ಷ ಸಬ್ಸಿಡಿ ಪಡೆದ ಕೇಂದ್ರ BJP ಸಚಿವ ಭಾಗೀರಥ್ ಚೌಧರಿ

ಕೇಂದ್ರ ಕೃಷಿ ಖಾತೆ ರಾಜ್ಯ ಸಚಿವ ಭಾಗೀರಥ್ ಚೌಧರಿ ಅವರು ತಮ್ಮದೇ ಸಚಿವಾಲಯದ ವ್ಯಾಪ್ತಿಗೆ ಒರುವ ಯೋಜನೆಯಡಿ, ವಾಣಿಜ್ಯ ಸೌತೆಕಾಯಿ ಕೃಷಿ ಯೋಜನೆಗಾಗಿ 99.03 ಲಕ್ಷ ರೂ. ಸಬ್ಸಿಡಿ (ಸಹಾಯಧನ) ಪಡೆದಿರುವುದು ತನಿಖಾ...

‘ಆರ್‌ಎಸ್‌ಎಸ್‌ ನೋಂದಣಿಯಾದರೆ ಒಳ್ಳೆಯದು’: ರಾಮಮಂದಿರ ಹಗರಣ ವಿಚಾರದಲ್ಲಿ ‘ಸತ್ಯ ಹೊರಬರಬೇಕು’: ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ

‘ರಾಷ್ಟ್ರೀಯ ಸ್ವಯಂಸೇವಕ ಸಂಘವನ್ನು (ಆರ್‌ಎಸ್‌ಎಸ್‌) ನೋಂದಣಿ ಮಾಡಿಸಿದರೆ ಯಾರಿಗೂ ಆರೋಪ ಮಾಡಲು ಅವಕಾಶ ಇರುವುದಿಲ್ಲ’ ಎಂದು ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಶುಕ್ರವಾರ ಹೇಳಿದ್ದಾರೆ. ಆರ್‌ಎಸ್‌ಎಸ್ ನೋಂದಣಿ ಕುರಿತು ಕರ್ನಾಟಕದ ಗೃಹ ಸಚಿವ...

ತುಮಕೂರಿನಲ್ಲಿ ಮಲಹೊರುವ ಪದ್ದತಿ ಜೀವಂತ; ದಲಿತ ಕಾರ್ಮಿಕರನ್ನು ಶೌಚಗುಂಡಿ ಸ್ವಚ್ಛತೆಗೆ ನಿಯೋಜಿಸಿದ ಕೆಇಬಿ ಇಂಜಿನಿಯರ್ಸ್ ಸಂಘ

ದಶಕಗಳ ಹಿಂದೆಯೇ ತಲೆ ಮೇಲೆ ಮಲಹೊರುವ ಅನಿಷ್ಠ ಪದ್ಧತಿಯನ್ನು ದೇಶದಲ್ಲಿ ನಿಷೇಧಿಸಲಾಗಿದೆ. ಕಾನೂನಿನ ಪ್ರಕಾರ ಈ ಅಮಾನವೀಯ ಪದ್ಧತಿ ನಿಷೇದಗೊಂಡಿದ್ದರು ರಾಜ್ಯದಲ್ಲಿ ಮಾತ್ರ ಇನ್ನೂ ಜೀವಂತವಾಗಿರುವುದು ತುಮಕೂರಿನಲ್ಲಿ ಮತ್ತೊಮ್ಮೆ ಬಹಿರಂಗವಾಗಿದೆ. ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್...

ವರ್ಷ ಪೂರೈಸಿದ ಎಸ್‌ಐಆರ್‌ ಪ್ರಕ್ರಿಯೆ; ಸುಮಾರು 6 ಕೋಟಿ ಹೆಸರುಗಳು ಡಿಲೀಟ್

ಸುಮಾರು ಆರು ಕೋಟಿ ಮತದಾರರನ್ನು ಅಳಿಸಲು ಕಾರಣವಾದ, ವಿರೋಧ ಪಕ್ಷಗಳು ಮತ್ತು ಚುನಾವಣಾ ಆಯೋಗದ ನಡುವೆ ಘರ್ಷಣೆಗೆ ಕಾರಣವಾದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು 19 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ...

ರಾಮ ಮಂದಿರ ಹಗರಣ | ಶಿವಸೇನೆ ಕೊಟ್ಟ 1 ಕೋಟಿ ರೂ.ಗೆ ರಸೀದಿ ಸಿಕ್ಕಿಲ್ಲ : ಸಂಜಯ್ ರಾವತ್

ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರಕ್ಕೆ ನೀಡಿದ 1 ಕೋಟಿ ರೂಪಾಯಿ ದೇಣಿಗೆಗೆ ತಮ್ಮ ಪಕ್ಷ ಶಿವಸೇನೆ (ಯುಬಿಟಿ) ರಸೀದಿಯನ್ನು ಸ್ವೀಕರಿಸಿಲ್ಲ ಎಂದು ಸಂಜಯ್ ರಾವತ್ ಶುಕ್ರವಾರ (ಜೂ.26) ಹೇಳಿದ್ದಾರೆ. ರಾಮ ಮಂದಿರದ ದೇಣಿಗೆ...